Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಒಂಬತ್ತು ಎಸ್ಎಸ್ಎಲ್ಸಿ ಟಾಪರ್ ವಿದ್ಯಾರ್ಥಿಗಳಿಗೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ನವದೆಹಲಿಗೆ ಐದು ದಿನಗಳ ಶೈಕ್ಷಣಿಕ ಪ್ರವಾಸವನ್ನು ಆಯೋಜಿಸಿದ್ದಾರೆ. ತಮ್ಮ ಗೃಹಕಚೇರಿಯಲ್ಲಿ ವಿದ್ಯಾರ್ಥಿಗಳನ್ನು ಭೇಟಿಮಾಡಿ ಅವರ ಅನಿಸಿಕೆಗಳನ್ನು ಆಲಿಸಿ ಎಲ್ಲರಿಗೂ ಪ್ರಯಾಣ ಸುಖಕರವಾಗಿರಲಿ ಎಂದು ಶುಭಹಾರೈಸಿದ್ದಾರೆ. ವಿದ್ಯಾರ್ಥಿಗಳು ಇಂಡಿಯಾ ಗೇಟ್, ಕಮಲ ಮಂದಿರ, ಕುತುಬ್ ಮಿನಾರ್, ಕೆಂಪುಕೋಟೆ, ಕರ್ತವ್ಯ ಪಥ ಮತ್ತು ಸ್ವಾಮಿನಾರಾಯಣ ಮಂದಿರ ಮುಂತಾದ ರಾಷ್ಟ್ರದ ಪ್ರಮುಖ ಸ್ಮಾರಕಗಳು ಹಾಗೂ ಸಾಂಸ್ಕೃತಿಕ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಒಬ್ಬ ಪುರುಷ ಮತ್ತು ಒಬ್ಬ ಮಹಿಳಾ ಶಿಕ್ಷಕರೂ ಕೂಡ ಜೊತೆಯಾಗಿ ತೆರಳಲಿದ್ದಾರೆ. ಈ ತಂಡವು ಸೋಮವಾರ ಸಂಜೆ 5-30 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಪ್ರಯಾಣ ಆರಂಭಿಸಲಿದೆ. ಈ ಸಂದರ್ಭದಲ್ಲಿ ಮಾತನಾಡಿದ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಈ ಶೈಕ್ಷಣಿಕ ಪ್ರವಾಸದ ಉದ್ದೇಶ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಮಹತ್ವಾಕಾಂಕ್ಷೆ ಬೆಳೆಸುವುದಾಗಿದೆ. ಎಸ್ಎಸ್ಎಲ್ಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಅವರನ್ನು ಪ್ರೇರೇಪಿಸಲು…
ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸಿಗೆ ಮತ್ತೊಬ್ಬ ಮಹಿಳೆ ಬಲಿಯಾಗಿದ್ದಾರೆ. ಹಂಪಿನಗರ ಬಸ್ ನಿಲ್ದಾಣದಲ್ಲಿ ಸಂಭವಿಸಿದಂತ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹಂಪಿನಗರ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಪಾದಚಾರಿ ಮಹಿಳೆಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಪಾದಚಾರಿ ಮಹಿಳೆಯಾಗಿದ್ದಂತ ಮಾಲಾ(58) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ನಡೆದುಕೊಂಡು ತೆರಳುತ್ತಿದ್ದಂತ ಮಾಲಾ ಅವರಿಗೆ ಡಿಕ್ಕಿಯಾಗಿತ್ತು. ಈ ಡಿಕ್ಕಿಯಿಂದಾಗಿ ಮಾಲಾ ಅವರ ತಲೆಗೆ ಗಂಭೀರವಾಗಿ ಪೆಟ್ಟುಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಿಎಂಟಿಸಿ ಡಿಪೋ 16ಕ್ಕೆ ಸೇರಿದಂತ ಕೆಎ 51 ಎಕೆ 7057 ಸಂಖ್ಯೆ ಬಸ್ ಇದಾಗಿದೆ. ಯಲಹಂಕ ಟು ಹಂಪಿನಗರ ಮಾರ್ಗದಲ್ಲಿ ಈ ಬಿಎಂಟಿಸಿ ಬಸ್ ಸಂಚರಿಸುತ್ತಿತ್ತು. https://kannadanewsnow.com/kannada/useful-information-for-the-public-all-these-services-are-available-in-the-states-gram-panchayats/ https://kannadanewsnow.com/kannada/whatsapp-new-feature-introduces-message-sending-limit-for-users-who-dont-reply/
ಶಿವಮೊಗ್ಗ: ದೀಪಾವಳಿ ಹೋರಿ ಬೆದರಿಸುವಂತ ಸ್ಪರ್ಧೆ ನೋಡಲು ತೆರಳಿದ್ದಾಗ, ಮಾಜಿ ಶಾಸಕರಿಗೆ ಹೋರಿಯೊಂದು ತಿವಿದ ಪರಿಣಾಮ ಗಾಯಗೊಂಡಿರುವಂತ ಘಟನೆ ಶಿವಮೊಗ್ಗ ಶಿಕಾರಿಪುರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಬೆಳ್ಳಿಗಾವಿಯಲ್ಲಿ 2 ದಿನಗಳ ಕಾಲ ದೀಪಾವಳಿ ಪ್ರಯುಕ್ತ ಹೋರಿ ಬೆದರಿಸುವಂತ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯನ್ನು ನೋಡೋದಕ್ಕೆ ಶಿಕಾರಿಪುರ ಮಾಜಿ ಶಾಸಕ ಮಹಾಲಿಂಗಪ್ಪ ತೆರಳಿದ್ದರು. ಬೆಳ್ಳಿಗಾವಿಯಲ್ಲಿ ಹೋರಿ ಬೆದರಿಸುವಂತ ಸ್ಪರ್ಧೆಯ ವೇಳೆಯಲ್ಲಿ ಮನೆಯೊಂದರ ಬಳಿಯಲ್ಲಿ ನೋಡುತ್ತಾ ನಿಂತಿದ್ದಾಗ ಹೋರಿಯೊಂದು ತಿವಿದಿದೆ. ಒಂದೆರಡು ಬಾರಿ ತಿವಿದಿದ್ದರಿಂದ ಸಣ್ಣಪುಟ್ಟ ಗಾಯವಾಗಿತ್ತು. ಅವರು ಚಿಕಿತ್ಸೆ ಪಡೆದ ಬಳಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಅವರು ನನಗೆ ಹೋರಿ ತಿವಿದು ಸಣ್ಣಪುಟ್ಟ ಗಾಯವಾಗಿತ್ತು. ದೇವರ ದಯೆಯಿಂದ ಆರಾಮಾಗಿದ್ದೇನೆ. ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಇದೆಲ್ಲ ಸಹಜ. ನಾನು ಆರೋಗ್ಯವಾಗಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ. https://kannadanewsnow.com/kannada/useful-information-for-the-public-all-these-services-are-available-in-the-states-gram-panchayats/ https://kannadanewsnow.com/kannada/whatsapp-new-feature-introduces-message-sending-limit-for-users-who-dont-reply/
ಮೈಸೂರು: ಪ್ರಯಾಣಿಕರ ಅನುಕೂಲಕ್ಕಾಗಿ, ಯಶವಂತಪುರ ಮತ್ತು ವಾಸ್ಕೋ ಡ ಗಾಮಾ ನಡುವೆ ಪ್ರತಿನಿತ್ಯ ಸಂಚರಿಸುವ ರೈಲು ಸಂಖ್ಯೆ 17309/17310 ರೈಲುಗಳಿಗೆ ಬೀರೂರು ಮತ್ತು ಚಿಕ್ಕಜಾಜೂರು ನಿಲ್ದಾಣಗಳ ನಡುವೆ ಬರುವ ಶಿವನಿ ನಿಲ್ದಾಣದಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಒದಗಿಸಲಾಗಿದೆ. ಈ ತಾತ್ಕಾಲಿಕ ನಿಲುಗಡೆಯ ವೇಳಾಪಟ್ಟಿ ಈ ಕೆಳಗಿನಂತಿದೆ: ಯಶವಂತಪುರದಿಂದ ವಾಸ್ಕೋ ಡ ಗಾಮಾ ಕಡೆಗೆ ಸಾಗುವ ರೈಲು ಸಂಖ್ಯೆ 17309 (ಯಶವಂತಪುರ-ವಾಸ್ಕೋ ಡ ಗಾಮಾ ಎಕ್ಸಪ್ರೆಸ್) ಶಿವನಿ ನಿಲ್ದಾಣಕ್ಕೆ ಪ್ರತಿದಿನ ಸಾಯಂಕಾಲ 06:11ಕ್ಕೆ ಆಗಮಿಸಿ, 06:12ಕ್ಕೆ ನಿರ್ಗಮಿಸಲಿದೆ. ಅದೇ ರೀತಿ, ವಾಸ್ಕೋ ಡ ಗಾಮಾದಿಂದ ಯಶವಂತಪುರಕ್ಕೆ ಹಿಂದಿರುಗುವ ರೈಲು ಸಂಖ್ಯೆ 17310 (ವಾಸ್ಕೋ ಡ ಗಾಮಾ – ಯಶವಂತಪುರ ಎಕ್ಸಪ್ರೆಸ್) ಶಿವನಿ ನಿಲ್ದಾಣಕ್ಕೆ ಪ್ರತಿದಿನ ಬೆಳಗ್ಗೆ 08:31ಕ್ಕೆ ಆಗಮಿಸಿ, 08:32 ನಿಮಿಷಕ್ಕೆ ಹೊರಡಲಿದೆ. https://kannadanewsnow.com/kannada/useful-information-for-the-public-all-these-services-are-available-in-the-states-gram-panchayats/ https://kannadanewsnow.com/kannada/breaking-regarding-the-construction-of-the-tunnel-route-in-bengaluru-high-court-notice-to-the-state-government-gba/
ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಹಿರಿಯ ಪತ್ರಕರ್ತ ಟಿ.ಜೆ.ಎಸ್. ಜಾರ್ಜ್ ಅವರ ಹೆಸರಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಾಧ್ಯಮ ಸಂಸ್ಥೆಗಳ ಸಂಪಾದಕರಿಗೆ ದತ್ತಿ ಪ್ರಶಸ್ತಿ ಸ್ಥಾಪಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್ ಅವರು ಘೋಷಿಸಿದರು. ಅವರು ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ತಾವು ಈಗಾಗಲೇ ಸಾಮಾಜಿಕ ನ್ಯಾಯದ ಕುರಿತು ಬರೆಯುವ ಅಂಕಣಕಾರರಿಗೆ “ಮೂಕನಾಯಕ ಡಾ. ಬಿ.ಆರ್. ಅಂಬೇಡ್ಕರ್ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸಿದ್ದು, ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ ಟಿ.ಜೆ.ಎಸ್. ಜಾರ್ಜ್ ಅವರು ನಿಷ್ಪಕ್ಷಪಾತಿ ಪತ್ರಕರ್ತರಾಗಿದ್ದರು. ಅವರು ಸ್ವತಃ ಪತ್ರಕರ್ತರ ವರದಿಗಳನ್ನು ತಿದ್ದಿ , ಮಾರ್ಗದರ್ಶನ ನೀಡುತ್ತಿದ್ದರು ಎಂದು ಸ್ಮರಿಸಿದರು. ಅವರ ಹೆಸರಿನಲ್ಲಿ ರಾಷ್ಟ್ರಮಟ್ಟದಲ್ಲಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವ ಪತ್ರಕರ್ತರನ್ನು ಗುರುತಿಸುವ ಸಲುವಾಗಿ 1.5 ಲಕ್ಷ ರೂ.ಗಳ ದತ್ತಿನಿಧಿ ಸ್ಥಾಪಿಸುವುದಾಗಿ ತಿಳಿಸಿದರು. ತಾವು ಇನ್ನೂ ಪತ್ರಿಕೋದ್ಯಮದಿಂದ ಹೊರ ಬಂದಿಲ್ಲ. ಸದನದಲ್ಲಿಯೂ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಕುರಿತು ದನಿ ಎತ್ತುವುದಾಗಿ ಅವರು ತಿಳಿಸಿದರು. ತಮ್ಮ ಪತ್ರಕರ್ತ…
ಬೆಂಗಳೂರು: ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಣ ಪಡೆಯುವುದು ಅಗತ್ಯವಾಗಿದ್ದು, ಸಮಾಜದ ಅಸಮಾನತೆಯನ್ನು ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಜಾಮಿಯಾ ಮಸೀದಿ ಮತ್ತು ಮುಸ್ಲಿಂ ಚಾರಿಟೇಬಲ್ ಥಂಡ್ ಟ್ರಸ್ಟ್ ನಿರ್ವಹಣೆಯ JU ಸಮೂಹ ಸಂಸ್ಥೆಗಳ ವತಿಯಿಂದ JU ಗ್ರೂಪ್ ಆಫ್ ಇನ್ಸ್ಟಿಯೂಟ್ಯೂಟ್ ನಲ್ಲಿ ಆಯೋಜಿಸಲಾಗಿದ್ದ Darul Quran Campas ಅನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ಜಾತಿ ಧರ್ಮಕ್ಕೆ ಸೇರಿದ್ದರೂ, ಪ್ರತಿಯೊಬ್ಬರಿಗೂ ವಿದ್ಯೆ ಮುಖ್ಯ. ಸ್ವಾಭಿಮಾನಿ ಬದುಕಿಗೆ ಶಿಕ್ಷಣ ಅತ್ಯಂತ ಮುಖ್ಯ. ಸಾಮಾಜಿಕ ಸಂಕೋಲೆಗಳಿಂದ ಮುಕ್ತರಾಗಲು ಶಿಕ್ಷಣ ಅಗತ್ಯವೆಂದು ಡಾ.ಬಿ.ಆರ್. ಅಂಬೇಡ್ಕರ್ ರವರು ತಿಳಿಸಿದ್ದಾರೆ. ಪ್ರತಿಯೊಬ್ಬ ಮುಸಲ್ಮಾನನೂ ಶಿಕ್ಷಣವಂತನಾಗಬೇಕು. ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಣ ಪಡೆಯುವುದು ಅಗತ್ಯವಾಗಿದ್ದು, ಸಮಾಜದ ಅಸಮಾನತೆಯನ್ನು ತೊಲಗಿಸಲು ಶಿಕ್ಷಿತರಾಗಲೇಬೇಕು. ಸಂವಿಧಾನ ಅಸ್ತಿತ್ವಕ್ಕೆ ಬಂದ ನಂತರವಷ್ಟೇ ಎಲ್ಲರಿಗೂ ಶಿಕ್ಷಣ ಪಡೆಯುವ ಸಮಾನ ಅವಕಾಶ ಸಾಧ್ಯವಾಯಿತು. ಶಿಕ್ಷಣಕ್ಕೆ ಸರ್ಕಾರ ಹೆಚ್ಚು ಒತ್ತು ನೀಡಿದ್ದು, ಇದಕ್ಕಾಗಿ ಅನುದಾನವನ್ನೂ ನೀಡಲಾಗುವುದು. ಅಲ್ಲದೇ ವಸತಿ ಶಾಲೆಗಳನ್ನು ಸ್ಥಾಪಿಸಿ ಮುಸಲ್ಮಾನ ಬಂಧುಗಳಿಗೆ ಪ್ರಾಥಮಿಕ, ಹಿರಿಯ…
ಕೋಲಾರ: ಜಿಲ್ಲೆಯಲ್ಲಿ ಶಾಲೆಗೆಂದು ಹೋದಂತ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವಂತ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ನರಸಾಪುರ ಗ್ರಾಮದ ಶರಣ್ಯ ಹಾಗೂ ದೇವಿ ಎಂಬ ವಿದ್ಯಾರ್ಥಿನಿಯರೇ ನಾಪತ್ತೆಯಾಗಿರುವಂತವರಾಗಿದ್ದಾರೆ. ಈ ಇಬ್ಬರು ವಿದ್ಯಾರ್ಥಿನಿಯರು ನಿನ್ನೆಯ ಶುಕ್ರವಾರದಂದು ಬೆಳಗ್ಗೆ ಶಾಲೆಗೆಂದು ತೆರಳಿದ್ದರು. ಆದರೇ ಇದುವರೆಗೆ ಮನೆಗೆ ವಾಪಾಸ್ಸಾಗಿಲ್ಲ. ಹೀಗಾಗಿ ಇಡೀ ದಿನ ಅವರನ್ನು ಪೋಷಕರು ಹುಡುಕಾಡಿದ್ದಾರೆ. ಆದರೇ ದೊರೆತಿಲ್ಲ. ಹೀಗಾಗಿ ಪೋಷಕರಲ್ಲಿ ಆತಂಕ ಮನೆ ಮಾಡಿದೆ. ರಾತ್ರಿಯಾದರೂ ಇಬ್ಬರು ಮಕ್ಕಳು ವಾಪಾಸ್ ಆಗದ ಕಾರಣ ಕೋಲಾರ ಮಹಿಳಾ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ನಾಪತ್ತೆಯಾಗಿರುವಂತ ಇಬ್ಬರು ವಿದ್ಯಾರ್ಥಿನಿಯರು 10ನೇ ತರಗತಿ ಓದುತ್ತಿದ್ದರು ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/ban-halal-certificate-in-karnataka-yatnals-letter-to-union-home-minister-amit-shah/ https://kannadanewsnow.com/kannada/breaking-regarding-the-construction-of-the-tunnel-route-in-bengaluru-high-court-notice-to-the-state-government-gba/
ಬೆಂಗಳೂರು: ಕರ್ನಾಟಕದಲ್ಲಿ ಹಲಾಲ್ ಸರ್ಟಿಫಿಕೇಟ್ ನಿಷೇಧ ಮಾಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದು ಒತ್ತಾಯಿಸಿದ್ದಾರೆ. ಈ ಸಂಬಂಧ ಕೇಂದ್ರ ಸಚಿವ ಅಮಿತ್ ಶಾಗೆ ಪತ್ರ ಬರೆದಿರುವಂತ ಅವರು, ಕರ್ನಾಟಕದಲ್ಲಿ ಹಲಾಲ್ ಸರ್ಟಿಫಿಕೇಟ್ ನಿಷೇಧಿಸಿ. ಹಲಾಲ್ ಸರ್ಟಿಫಿಕೇಷನ್ ಏಜೆನ್ಸಿಗಳನ್ನು ನಿಷೇಧಿಸಿ. ಹಲಾಲ್ ಸರ್ಟಿಫಿಕೇಟ್ ಹಣ ದುರ್ಬಳಕೆ ಆಗುತ್ತಿದೆ. ದೇಶದ ಭದ್ರತೆ ದೃಷ್ಟಿಯಿಂದ ಹಲಾಲ್ ನಿಷೇಧಿಸುವಂತೆ ಒತ್ತಾಯಿಸಿದ್ದಾರೆ. ಕರ್ನಾಟಕದಲ್ಲಿ ಹಲಾಲ್ ಸರ್ಟಿಫಿಕೇಟ್ ನಿಂದ ಕೆಲ ಸಂಘಟನೆಗಳು ಹಣ ದುರ್ಬಳಕೆ ಮಾಡ್ತಿವೆ. ಹೀಗಾಗಿ ಹಲಾಲ್ ಸರ್ಟಿಫಿಕೇಟ್ ನಿಷೇಧ ಮಾಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ ಬರೆದು ಆಗ್ರಹಿಸಿದ್ದಾರೆ. ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಉತ್ತರ ಪ್ರದೇಶ ಸರ್ಕಾರವು ಅಂತಹ ಎಲ್ಲಾ ಸಂಸ್ಥೆಗಳನ್ನು ನಿಷೇಧಿಸುವ ನಿರ್ಧಾರಕ್ಕೆ ಅನುಗುಣವಾಗಿ, ಹಲಾಲ್ ಪ್ರಮಾಣೀಕರಣ ಸಂಸ್ಥೆಗಳಿಂದ ಹಲಾಲ್ ನಿಧಿಗಳ ದುರುಪಯೋಗ ಮತ್ತು ಅವುಗಳ ಕಾರ್ಯಾಚರಣೆಗಳನ್ನು ನಿಷೇಧಿಸುವ ತುರ್ತು ಅಗತ್ಯದ ಬಗ್ಗೆ ನಾನು ನಿಮ್ಮ…
ವಾಸ್ತು ಪ್ರಕಾರ, ಮನೆಯ ಸಕಾರಾತ್ಮಕತೆಯನ್ನು ಹೆಚ್ಚಿಸಲು ಸ್ವಚ್ಛತೆಗೆ ವಿಶೇಷ ಗಮನ ನೀಡಬೇಕು. ಆದಾಗ್ಯೂ, ಸಂಪೂರ್ಣ ಶುಚಿಗೊಳಿಸುವಿಕೆಯ ಹೊರತಾಗಿಯೂ, ಸಾಮಾನ್ಯವಾಗಿ ಮನೆಯ ಸೀಲಿಂಗ್ ಮತ್ತು ಮೂಲೆಗಳಲ್ಲಿ ಪದೇ ಪದೇ ಜೇಡ ಬಲೆ ಕಟ್ಟಿರುತ್ತದೆ. ಇದರಿಂದಾಗಿ ಮನೆಯಲ್ಲಿ ವಾಸ್ತು ದೋಷಗಳು ಉಂಟಾಗಬಹುದು. ಮನೆಯಲ್ಲಿ ಅತಿಯಾದ ಜೇಡರ ಬಲೆಗಳು ಕಂಡುಬರುವುದು ಕುಟುಂಬ ಸದಸ್ಯರಿಗೆ ಜೀವನದಲ್ಲಿ ಅನೇಕ ತೊಂದರೆಗಳನ್ನು ಉಂಟುಮಾಡಬಹುದು ಎಂದು ವಾಸ್ತು ತಜ್ಞರು ಹೇಳುತ್ತಾರೆ. ಮನೆಯಲ್ಲಿ ನಿರಂತರ ಹಣದ ಕೊರತೆ, ಕೆಲಸದಲ್ಲಿ ಅಡೆತಡೆಗಳು ಮತ್ತು ಕುಟುಂಬ ಸದಸ್ಯರಲ್ಲಿ ಸೋಮಾರಿತನ, ಕಿರಿಕಿರಿ ಮತ್ತು ನಕಾರಾತ್ಮಕತೆ ಕಾರಣವಾಗಬಹುದು. ಮಲಗುವ ಕೋಣೆ: ವಾಸ್ತು ಪ್ರಕಾರ, ಮಲಗುವ ಕೋಣೆಯಲ್ಲಿ ಜೇಡ ಬಲೆ ಕಟ್ಟುವುದು ಮಾನಸಿಕ ಒತ್ತಡವನ್ನು ಹೆಚ್ಚಿಸುತ್ತವೆ. ಗಂಡ ಮತ್ತು ಹೆಂಡತಿಯ ನಡುವೆ ನಿರಂತರ ಭಿನ್ನಾಭಿಪ್ರಾಯಗಳು ಉಂಟಾಗಬಹುದು ಮತ್ತು ವೈವಾಹಿಕ ಸಮಸ್ಯೆಗಳು ಉದ್ಭವಿಸಲು ಕಾರಣವಾಗಬಹುದು. ಮನೆಯ ಮೂಲೆ: ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಮೂಲೆಗಳಲ್ಲಿ ದೀರ್ಘಕಾಲೀನ ಜೇಡರ ಬಲೆಗಳು ಇರುವುದು ಕುಟುಂಬ ಸದಸ್ಯರಿಗೆ ಆರ್ಥಿಕ ಸಮಸ್ಯೆಗಳನ್ನು ಉಂಟುಮಾಡಬಹುದು ಮತ್ತು ಕ್ರಮೇಣ ಆರ್ಥಿಕ…
ಬೆಂಗಳೂರು: ಯಾವುದೇ ಒಂದು ಕೃತಿ ಮಾನವೀಯತೆಯ ನೆಲೆ , ಜನಪರತೆ ಮತ್ತು ವೃಚಾರಿಕ ನೆಲೆಘಟ್ಟಿನ ಮೇಲೆ ರಚನೆಯಾದರೆ ಅವು ಸಹಜವಾಗಿಯೇ ಜನಪ್ರಿಯಗೊಳ್ಳುತ್ತವೆ ಎಂದು ಹಿರಿಯ ಸಾಹಿತಿ ಶೂದ್ರ ಶ್ರೀನಿವಾಸ್ ಅಭಿಪ್ರಾಯ ಪಟ್ಟರು. ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಶನಿವಾರ ಏರ್ಪಡಿಸಿದ್ದ ತುರುವನೂರು ಮಂಜುನಾಥ ಅವರ ಅಂತರ್ಮಿಡಿತ ಕೃತಿ ಬಿಡುಗಡೆ ಮಾಡಿ ಮಾತನಾಡಿದರು. ಲಂಕೇಶ್ ಅವರ ಬರಹಗಳು ಸಾಮಾನ್ಯವಾಗಿ ಬಹುಮುಖ ವಿಚಾರಗಳ ಮತ್ತು ಜನರ ಅಶೋತ್ತರಗಳ ನಾಡಿಮಿಡಿತದ ಬರಹಗಳಾಗಿದ್ದವು ಹಾಗಾಗಿಯೇ ಅವರ ಕೃತಿಗಳು ಜನಪ್ರಿಯಗೊಂಡಿದ್ದವು.ಆ ನಿಟ್ಟಿನಲ್ಲಿ ತುರುವನೂರು ಮಂಜುನಾಥ ಅವರ ಲೇಖನಗಳು ವೈಚಾರಿಕ ನೆಲಘಟ್ಟಿನ ಮೇಲೆ ರಚಿತವಾಗಿವೆ ಎಂದು ಅಭಿಪ್ರಾಯ ಪಟ್ಟರು. ಪತ್ರಿಕೆಯ ಸಂಪಾದಕರಾದವರಿಗೆ ಸಂಪಾದಕೀಯ ಬರಹಗಳು ಜನಮಿಡಿತದ ಮಿಡಿತವಾಗಿರಬೇಕು ,ಅಗಾದಾಗ ಮಾತ್ರ ಯಶಸ್ವಿಯಾಗುತ್ತವೆ ಮಂಜುನಾಥ ಅವರ ಅಂತರ್ಮಿಡಿತ ತ ಬರಹಗಳಲ್ಲಿ ಬಹುತೇಕ ಓದುಗರ ಅಗತ್ಯತೆಗನುಗುಣವಾಗಿವೆ ಆದರೆ ಈಗ ಓದುಗರ ಸಂಖ್ಯೆ ಕ್ಷೀಣಿಸುತ್ತಿದೆ ಎಂದರು. ಸಂಪಾದಕರಾದವರಿಗೆ. ಖ್ಯಾತ ಬರಹಗಾರರ, ಬರಹಗಳ ಓದಿನ ಹಸಿವಿರಬೇಕು ಆ ಬರಹಗಳ ಓದಿನಿಂದಲೇ ತಮ್ಮ ಬರಹಗಳು ಮತ್ತಷ್ಟು ಗಟ್ಟಿಯಾಗುತ್ತವೆ…














