Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು : “ಕರ್ನೂಲ್ ಬಸ್ ದುರಂತ, ಉನ್ನತ ಮಟ್ಟದ ತನಿಖೆ ನಡೆಸುವಂತೆ ಆ ರಾಜ್ಯ ಸರ್ಕಾರಕ್ಕೆ ಹೇಳಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಕರ್ನೂಲ್ ನಲ್ಲಿ ಸಂಭವಿಸಿರುವ ಬಸ್ ದುರಂತದ ಬಗ್ಗೆ ಕೇಳಿದಾಗ, “ಕರ್ನೂಲ್ ನಲ್ಲಿ ಸಂಭವಿಸಿರುವ ಬಸ್ ಅಪಘಾತ ದುರಾದೃಷ್ಟಕರ. ಇತ್ತೀಚೆಗೆ ಬೆಂಗಳೂರಿನಿಂದ ಹೈದರಾಬಾದ್ ಗೆ ತೆರಳುತ್ತಿದ್ದ ಗ್ರೀನ್ ಲೈನ್ ಬಸ್ ಕೂಡ ಇದೇ ರೀತಿ ದುರಂತಕ್ಕೆ ಒಳಗಾಗಿತ್ತು. ಆಗ ನಮ್ಮ ಪಕ್ಷದ ರಾಯಚೂರು ಅಧ್ಯಕ್ಷೆ ಚಾಲಕನನ್ನು ಎಚ್ಚರಿಸಿದ ಪರಿಣಾಮ, ಬಸ್ ನಲ್ಲಿದ್ದ 20 ಮೆಡಿಕಲ್ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದರು. ಕೆಲವು ಸಣ್ಣಪುಟ್ಟ ಗಾಯಗಳಾಗಿದ್ದವು. ಆದರೆ ಆ ರಾಜ್ಯದ ಪೊಲೀಸರು ಅಗತ್ಯ ಕ್ರಮ ಕೈಗೊಂಡಿರಲಿಲ್ಲ. ನಾನು ರಾಯಚೂರಿಗೆ ಹೋದಾಗ ಅಲ್ಲಿ ಕೆಲವರು ನನಗೆ ಅದರ ವಿಡಿಯೋ ತೋರಿಸಿದರು. ಈ ದುರಂತ ಬೇರೆ ರಾಜ್ಯದಲ್ಲಿ ಆಗಿದ್ದರೂ ಈ ಬಗ್ಗೆ ಗಮನಹರಿಸುವಂತೆ ಸಾರಿಗೆ ಸಚಿವರು ಹಾಗೂ ಗೃಹ ಸಚಿವರಿಗೆ ಸೂಚಿಸುತ್ತೇವೆ.…

Read More

ಶಿವಮೊಗ್ಗ : ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಹೆಲ್ಮೆಟ್ ಧರಿಸುವುದರಿಂದ ನಿಮ್ಮ ಅಮೂಲ್ಯ ಜೀವ ಉಳಿಯುತ್ತದೆ ಎಂದು ನಗರ ಠಾಣೆ ವೃತ್ತ ನಿರೀಕ್ಷಕ ಪುಲ್ಲಯ್ಯ ರಾಥೋಡ್ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಸಾಗರ ಹೋಟೆಲ್ ವೃತ್ತದಲ್ಲಿ ಶುಕ್ರವಾರ ಪೊಲೀಸ್ ಇಲಾಖೆಯಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವಂತೆ ಗುಲಾಬಿ ಹೂ ನೀಡಿ ಮಾತನಾಡಿದಂತ ಅವರು, ಪೊಲೀಸ್ ಇಲಾಖೆಯಿಂದ ಹೆಲ್ಮೆಟ್ ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ಇರುವುದರಿಂದ ಸಾಕಷ್ಟು ಅವಘಡಗಳು ಸಂಭವಿಸುತ್ತಿದೆ. ನಿಮ್ಮನ್ನು ನಂಬಿ ನಿಮ್ಮ ಕುಟುಂಬ ಇರುತ್ತದೆ. ಅಪಘಾತವಾದರೆ ಮೊದಲು ತಲೆಗೆ ಏಟು ಬೀಳುತ್ತದೆ. ತಲೆಯನ್ನು ರಕ್ಷಣೆ ಮಾಡಿಕೊಳ್ಳಲು ಗುಣಮಟ್ಟದ ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂದರು. ಸಾಗರ ನಗರದ ಪ್ರಮುಖ ವೃತ್ತಗಳಲ್ಲಿ ಇಂದಿನಿಂದ ಹೆಲ್ಮೆಟ್ ಧರಿಸುವಂತೆ ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಲಾಗುತ್ತಿದೆ. ಹೆಲ್ಮೆಟ್ ಧರಿಸದೆ ಬಂದರೆ ಅವರಿಗೆ ನಿಯಮಾವಳಿ ಪ್ರಕಾರ ದಂಡ ವಿಧಿಸಲಾಗುತ್ತಿದೆ. ವಾಹನ ಸವಾರರು ಇಲಾಖೆ ಕಾನೂನು…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯಲ್ಲಿ ಒಟ್ಟು 27,607.26 ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಒಪ್ಪಿಗೆ ಕೊಡಲಾಗಿದೆ. ಇದರಲ್ಲಿ 11 ಹೊಸ ಕೈಗಾರಿಕಾ ಯೋಜನೆಗಳು ಮತ್ತು 2 ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು ಸೇರಿವೆ ಎಂದು ಸಭೆ ಬಳಿಕ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸುದ್ದಿಗಾರರಿಗೆ ತಿಳಿಸಿದರು. ಒಟ್ಟು ಈ 13 ಯೋಜನೆಗಳಿಂದ 8,704 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದಿದ್ದಾರೆ. 11 ಹೊಸ ಹೂಡಿಕೆ ಯೋಜನೆಗಳ ಪೈಕಿ ತೇಜಸ್ ನೆಟ್ವರ್ಕ್ಸ್ 542.19 ಕೋಟಿ ರೂ, ವಾಯು ಅಸೆಟ್ಸ್ 1,251 ಕೋಟಿ ರೂ, ಜಿಂದಾಲ್ ಸ್ಟೀಲ್ಸ್ 1,300.57 ಕೋಟಿ ರೂ, ಜಿಂದಾಲ್ ಎಲೆಕ್ಟ್ರಿಕಲ್ ಸ್ಟೀಲ್ 7,102 ಕೋಟಿ ರೂ, ಗ್ರಾಸಿಂ ಇಂಡಸ್ಟ್ರೀಸ್1,386 ಕೋಟಿ ರೂ, ಎಸ್ಎಫ್ಎಕ್ಸ್ ಇಂಡಿಯಾ 9,298 ಕೋಟಿ ರೂ, ಸ್ನೀಡರ್ ಎಲೆಕ್ಟ್ರಿಕ್ ಐಟಿ ಬಿಝಿನೆಸ್, ಎಚ್ಎಸ್ಎಸ್ ಟೆಕ್ಸ್ಟೈಲ್ಸ್ 740 ಕೋಟಿ…

Read More

ಮಂಡ್ಯ : ಮಂಡ್ಯದಲ್ಲಿ ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಒಬ್ಬ ಮೃತಪಟ್ಟಿದ್ದು, 15 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮದ್ದೂರು ತಾಲೂಕಿನ ಕೆಸ್ತೂರು ಪೋಲೀಸ್ ಠಾಣಾ ವ್ಯಾಪ್ತಿಯ ಮಾಚಹಳ್ಳಿ ಸಮೀಪ ಈ ಒಂದು ದುರ್ಘಟನೆ ಸಂಭವಿಸಿದೆ. ಚನ್ನಪಟ್ಟಣ ತಾಲೂಕಿನ ಪ್ರಸಿದ್ದ ಯಾತ್ರಾ ಸ್ಥಳ ಶ್ರೀ ಚಾಮುಂಡೇಶ್ವರಿ ದೇವಾಲಯದಿಂದ ನೂರಕ್ಕೂ ಹೆಚ್ಚು ಭಕ್ತಾದಿಗಳನ್ನು ಮದ್ದೂರು ನಗರಕ್ಕೆ ಕರೆ ತರುತ್ತಿದ್ದ ಸರ್ಕಾರಿ ಬಸ್ ಮಾಚಹಳ್ಳಿ ಸಮೀಪಕ್ಕೆ ಬರುತ್ತಿದ್ದಂತೆ ಮದ್ದೂರಿನಿಂದ ತುಮಕೂರು ಕಡೆಗೆ ಹೋಗುತ್ತಿದ್ದ ಕಾರಿಗೆ ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಮಹಿಳೆಗೆ ಗಂಭೀರ ಗಾಯಗೊಂಡು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ. ಸರ್ಕಾರಿ ಬಸ್ ನಲ್ಲಿದ್ದ 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಮದ್ದೂರು ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಅಪಘಾತ ಸಂಭವಿಸಿ ಅರ್ಧ ಗಂಟೆಯಾದರೂ ಒಂದು ಆಂಬುಲೆನ್ಸ್ ಕೂಡ…

Read More

ಆಂಧ್ರಪ್ರದೇಶ: ಇಲ್ಲಿ ತಡರಾತ್ರಿ ಬಸ್ ಬೈಕಿಗೆ ಡಿಕ್ಕಿಯಾಗಿ ಸಂಭವಿಸಿದಂತ ಅಗ್ನಿ ದುರಂತದಲ್ಲಿ 20 ಮಂದಿ ಸಾವನ್ನಪ್ಪಿದ್ದರೇ, 27 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಆಂಧ್ರಪ್ರದೇಶ ಗೃಹ ಸಚಿವೆ ವಂಗಲಪುಡಿ ಅನಿತಾ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಆಂಧ್ರಪ್ರದೇಶದ ಕರ್ನೂಲ್ ಬಳಿಯಲ್ಲಿ ಬಸ್ ಅಗ್ನಿ ದುರಂತದ ಬಸ್ಸು ಹೈದರಾಬಾದಿನಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ವಿಚಾರ ತಿಳಿದು ತುಂಬಾ ನೋವಾಗಿದೆ ಎಂದರು. ಬೈಕ್ ಗೆ ಬಸ್ಸು ಡಿಕ್ಕಿ ಹೊಡೆದು ಈ ಅಗ್ನಿ ದುರಂತ ಸಂಭವಿಸಿದೆ. ಇಬ್ಬರು ಮಕ್ಕಳು ಸೇರಿದಂತೆ 20 ಪ್ರಯಾಣಿಕರು ಮೃತಪಟ್ಟಿದ್ದಾರೆ. ಬೈಕ್ ಸವಾರ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕೆಲವರ ಶವಗಳು ಗುರುತು ಸಿಗದಷ್ಟು ಸುಟ್ಟು ಹೋಗಿವೆ. ಹೀಗಾಗಿ ಡಿಎನ್ಎ ಪರೀಕ್ಷೆ ನಡೆಸಿ ಮೃತದೇಹ ಹಸ್ತಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು. ಈ ಖಾಸಗಿ ಬಸ್ ಅಗ್ನಿ ದುರಂತದಲ್ಲಿ 20 ಪ್ರಯಾಣಿಕರು ಸಾವನ್ನಪ್ಪಿದ್ದರೇ, 27 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲದ 16 ತಂಡದಿಂದ ಮಾದರಿ ಸಂಗ್ರಹಿಸಲಾಗುತ್ತಿದೆ.…

Read More

ಬೆಂಗಳೂರು: ಕರ್ನಾಟಕದ ಜ್ವಲಂತ ಸಮಸ್ಯೆಗಳನ್ನು ಮೊದಲು ಪರಿಹರಿಸಿ; ಆಮೇಲೆ ಸಿಎಂ ಉತ್ತರಾಧಿಕಾರಿಯ ಕುರಿತು ಚರ್ಚಿಸಿ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ಯಾರು ಬೇಕಾದರೂ ಮುಂದಿನ ಮುಖ್ಯಮಂತ್ರಿ, ಉತ್ತರಾಧಿಕಾರಿ ಆಗಲಿ; ನಮಗೆ ಆ ಪ್ರಶ್ನೆ ಇಲ್ಲ ಎಂದು ತಿಳಿಸಿದರು. ಉತ್ತರಾಧಿಕಾರಿ ಎಂಬುದು ಬಹಳ ಗಂಭೀರ ಸಮಸ್ಯೆಯೇ ಎಂದು ಕೇಳಿದರು. ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನ ಫಾರ್ಮ್ ಹೌಸ್‍ನಲ್ಲಿ ಹೆಣ್ಣು ಭ್ರೂಣಗಳ ಹತ್ಯೆ ದಂಧೆ ನಡೆಯುತ್ತಿದೆ. ಇದರ ಬಗ್ಗೆ ಮುಖ್ಯಮಂತ್ರಿಗಳ ಪ್ರತಿಕ್ರಿಯೆ ಏನು? ಇದನ್ನು ನಿಲ್ಲಿಸುವ ಕುರಿತು ಸರಕಾರದ ಕಾರ್ಯತಂತ್ರ ಏನು ಎಂದು ಪ್ರಶ್ನಿಸಿದರು. ನೂರಾರು ಹೆಣ್ಣು ಭ್ರೂಣಗಳ ಹತ್ಯೆ ಕುರಿತು ಸಚಿವ ದಿನೇಶ್ ಗುಂಡೂರಾವ್ ಅವರು ಏನು ಹೇಳುತ್ತಾರೆ ಎಂದರು. ಸಿದ್ದರಾಮಯ್ಯನವರ ತವರು ಜಿಲ್ಲೆಯಲ್ಲೇ ಅರಮನೆ ಮೈದಾನದ ಬಳಿ ಅಲೆಮಾರಿ ಹಕ್ಕಿಪಿಕ್ಕಿ ಸಮುದಾಯದ ಮಗುವಿನ ಮೇಲೆ…

Read More

ಬೆಂಗಳೂರು ಗ್ರಾಮಾಂತರ: ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನ. 13 ರಿಂದ 31 ದಿನಗಳ ನಿರುದ್ಯೋಗಿ ಪುರುಷರಿಗೆ ಉಚಿತವಾಗಿ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರವನ್ನು ಆಯೋಜಿಸಿದ್ದು, 18 ರಿಂದ 45 ವರ್ಷ ವಯೋಮಿತಿಯ ಆರ್ಹರಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳಿಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ಅ. 30 ಬೆಳಗ್ಗೆ 10.00ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗುವುದು.…

Read More

ಬೆಂಗಳೂರು: UGNEET-25ಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ 3ನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಲಾಗಿದೆ. ಈ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಆಕ್ಷೇಪಣೆಗಳು ಇದ್ದಲ್ಲಿ ಅ.25ರಂದು ಬೆಳಿಗ್ಗೆ 10ರೊಳಗೆ ಇ-ಮೇಲ್ (keauthority-ka@nic.in) ಮೂಲಕ ತಿಳಿಸಬೇಕು ಎಂದಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ಸೀಟು ಹಂಚಿಕೆಯಾದವರಿಗೆ ಕೆಇಎ ಯಿಂದಲೂ ಸೀಟು ಸಿಕ್ಕಿದ್ದಲ್ಲಿ ಅಂತಹವರು ಕೆಇಎ ಸೀಟು ಉಳಿಸಿಕೊಳ್ಳಬೇಕಿದ್ದರೆ ಅ.25ರಂದು ಮಧ್ಯಾಹ್ನ 12.30ರೊಳಗೆ ಕೆಇಎ ಗೆ ಖುದ್ದು ಬಂದು ತಿಳಿಸಬೇಕು. ಖುದ್ದು ಬರಲು ಆಗದಿದ್ದಲ್ಲಿ ಇ-ಮೇಲ್ (keauthority-ka@nic.in) ಮೂಲಕ ತಿಳಿಸಬೇಕು ಎಂದು ಹೇಳಿದ್ದಾರೆ. ಒಂದು ವೇಳೆ ಎಂಸಿಸಿ ಯಲ್ಲಿ ಸೀಟು ಸಿಕ್ಕಿ, ಕೆಇಎ ಗೆ ಪತ್ರ ನೀಡದಿದ್ದರೆ ಅಂತಹವರ ಸೀಟು ಹಂಚಿಕೆಯನ್ನು ಕೆಇಎ ರದ್ದುಪಡಿಸಲಿದೆ. ವಿವರಗಳಿಗೆ ಕೆಇಎ ವೆಬ್ ಸೈಟ್ ನೋಡಲು ಮನವಿ ಮಾಡಿದ್ದಾರೆ. https://twitter.com/KEA_karnataka/status/1981641695512175053

Read More

ಬೆಂಗಳೂರು: ನಗರದ ಐತಿಹಾಸಿಕ ಬಸವನಗುಡಿಯ ಬಸವಣ್ಣ ದೇವಾಲಯದಲ್ಲಿ ಐತಿಹಾಸಿಕ ಪ್ರಸಿದ್ಧ ಕಡಲೆಕಾಯಿ ಪರಿಸೆಗೆ ಮುಹೂರ್ತ ಫಿಕ್ಸ್ ಆಗಿದೆ. ಅಲ್ಲದೇ ಪ್ರತಿ ವರ್ಷ 2 ದಿನಗಳ ಕಾಲ ನಡೆಸಲಾಗುತ್ತಿದ್ದಂತ ಪರಿಸೆಯನ್ನು 5 ದಿನಗಳಿಗೆ ವಿಸ್ತರಣೆ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇಂದು ಈ ಸಂಬಂಧ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಕಡಲೆ‌ಕಾಯಿ ಪರಿಷೆ – 2025 ರ ಪೂರ್ವಾಭಾವಿ ಸಿದ್ದತಾ ಸಭೆ – ಮೊದಲ ಬಾರಿಗೆ 2 ದಿನಗಳ ಪರಿಷೆ 5 ದಿನಗಳಿಗೆ ವಿಸ್ತರಣೆ ವಿಜೃಂಭಣೆಯಿಂದ ನೆರವೇರಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಕಡಲೆ ಕಾಯಿ ಪರಿಷೆ -2024 ರಲ್ಲಿ ಸುಮಾರು 5 ಲಕ್ಷ ಭಕ್ತಾದಿಗಳು ಭಾಗವಹಿಸಿದ್ದು, ಯಶಸ್ವಿಯಾಗಿ ನಡೆದಿರುತ್ತದೆ. ಪ್ಲಾಸ್ಟಿಕ್ ಮುಕ್ತ ಕಡಲೆ‌ಕಾಯಿ ಪರಿಷೆ ಎಂಬ ಹೆಗ್ಗಳಿಕೆಗೂ‌ ಪಾತ್ರವಾಗಿತ್ತು. ಪ್ರಸಕ್ತ ವರ್ಷ ದಿನಾಂಕ:17.11.2025 ರಿಂದ ಪ್ರಾರಂಭವಾಗುವ ಐತಿಹಾಸಿಕ ಪ್ರಸಿದ್ಧ ಕಡಲೆ‌ಕಾಯಿ ಪರಿಷೆಯನ್ನು 5 ದಿನಗಳಿಗೆ ವಿಸ್ತರಿಸಿ, ವಿಜೃಂಭಣೆಯಿಂದ ನಡೆಸಲು ಸಭೆಯಲ್ಲಿ‌‌ ತೀರ್ಮಾನಿಸಲಾಯಿತು. ✅ಪ್ರತಿ ವರ್ಷದಂತೆ ಕಡೇ ಕಾರ್ತಿಕ…

Read More

ಮೈಸೂರು: ತ್ವರಿತ ಹಾಗೂ ಸಂಘಟಿತ ಕಾರ್ಯಾಚರಣೆಯ ಮೂಲಕ, ನೈಋತ್ಯ ರೈಲ್ವೆ ವ್ಯಾಪ್ತಿಯ ರೈಲ್ವೆ ಸಂರಕ್ಷಣಾ ಪಡೆಯು (ಆರ್.ಪಿ.ಎಫ್), ಮೈಸೂರು, ಆರು ತಿಂಗಳ ಗಂಡು ಮಗುವನ್ನು ಅಪಹರಣಕಾರಳಿಂದ ಕೇವಲ 30 ನಿಮಿಷಗಳಲ್ಲಿ ರಕ್ಷಿಸಿ, ಪೋಷಕರಿಗೆ ಒಪ್ಪಿಸಿದೆ. ಅಕ್ಟೋಬರ್ 22, 2025 ರಂದು ಬೆಳಗಿನ ಜಾವ 5:20ರ ಸುಮಾರಿಗೆ, ಆರ್.ಪಿ.ಎಫ್/ಮೈಸೂರು ಕಾನ್ಸ್ಟೇಬಲ್ ಸಿ.ಎಂ. ನಾಗರಾಜು ಅವರು ಮೈಸೂರು ರೈಲು ನಿಲ್ದಾಣದ ಪ್ರವೇಶ ದ್ವಾರದ ಬಳಿ ಮಗು ನಾಪತ್ತೆಯಾದ ಬಗ್ಗೆ ತಿಳಿಸಿ ಅಳುತ್ತಿದ್ದ ಮಹಿಳೆಯನ್ನು ಗಮನಿಸಿದರು. ತಕ್ಷಣ ಕಾರ್ಯಪ್ರವೃತ್ತರಾದ ಅವರು, ಈ ವಿಷಯವನ್ನು ಎಎಸ್ಐ ಶ್ರೀ ಪ್ರಾಸಿ ಮತ್ತು ಇನ್ಸ್ಪೆಕ್ಟರ್ ದಿನೇಶ್ ಕುಮಾರ್ ಅವರಿಗೆ ತಿಳಿಸಿದರು. ಕೂಡಲೇ ಅಧಿಕಾರಿಗಳು ಸಿಸಿಟಿವಿ (CCTV) ಹುಡುಕಾಟ ಆರಂಭಿಸಿದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಸುಮಾರು 50 ವರ್ಷ ವಯಸ್ಸಿನ ಮಹಿಳೆಯೊಬ್ಬಳು ಮಗುವನ್ನು ಎತ್ತಿಕೊಂಡು ಪ್ಲಾಟ್’ಫಾರ್ಮ್ ನಂ. 6 ರ ಮೂಲಕ ರೈಲು ಸಂಖ್ಯೆ 16206 ಅನ್ನು ಹತ್ತಲು ಹೋಗುವುದು ಕಂಡುಬಂದಿತು. ಆರ್.ಪಿ.ಎಫ್ ತಂಡವು 5:50 ರೊಳಗೆ ಆ ಮಹಿಳೆಯನ್ನು ತಡೆದು,…

Read More