Subscribe to Updates
Get the latest creative news from FooBar about art, design and business.
Author: kannadanewsnow09
ಮದ್ದೂರು: ಮುಖ್ಯಮಂತ್ರಿಗಳ ಹೇಳಿಕೆ, ಭದ್ರಾವತಿ ಶಾಸಕರ ಹೇಳಿಕೆ- ಇವೆಲ್ಲವುಗಳ ಮೂಲಕ ರಾಜ್ಯ ಸರಕಾರದ ಕಡೆಯಿಂದ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಆಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪೊಲೀಸ್ ವೈಫಲ್ಯ ಮೊದಲಾದವು ಬಹಿರಂಗವಾಗಲಿ; ಇದಕ್ಕಾಗಿ ಮದ್ದೂರು ಘಟನೆ ಬಗ್ಗೆ ನ್ಯಾಯಾಂಗ ತನಿಖೆ ಆಗಲೇಬೇಕು ಎಂದು ಆಗ್ರಹಿಸಿದರು. ವಿಪಕ್ಷ ನಾಯಕರು, ಪ್ರಮುಖರು ಎಲ್ಲರೂ ಚರ್ಚೆ ಮಾಡಿದ್ದೇವೆ. ಮೆರವಣಿಗೆಯಲ್ಲಿ ನಾವೂ ಪಾಲ್ಗೊಳ್ಳುತ್ತೇವೆ ಎಂದು ತಿಳಿಸಿದರು. ಹಿಂದೂ ಸಂಘಟನೆಗಳು, ಕಾರ್ಯಕರ್ತರಿಗೆ ಧೈರ್ಯ ತುಂಬುತ್ತೇವೆ ಎಂದು ಹೇಳಿದರು. ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಬಿಜೆಪಿಯವರು ಕೋಮು ಸೌಹಾರ್ದ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳ ಹೇಳಿಕೆ ನೀಡಿದ್ದಾರೆ. ಯಾವಾಗ ಮಸೀದಿ ಒಳಗೆ ತೆರಳಿ ಕಲ್ಲನ್ನು ಹಿಡಿದಿದ್ದರೋ ಆ ಷಡ್ಯಂತ್ರ ರೂಪಿಸಿದಾಗಲೇ ಇವರು ಎಚ್ಚೆತ್ತುಕೊಳ್ಳಬೇಕಿತ್ತು. ಈಗ ನಮ್ಮ ಮೇಲೆ, ಹಿಂದೂಗಳ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಇದನ್ನು ಮುಖ್ಯಮಂತ್ರಿಗಳು…
ಬೆಂಗಳೂರು ಗ್ರಾಮಾಂತರ: ಇಲ್ಲಿನ ಸಿದ್ಧಾರ್ಥ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಟಿ.ಬೇಗೂರಿನಲ್ಲಿರುವಂತ ಸಿದ್ಧಾರ್ಥ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಎಲೆಕ್ಟ್ರಿಕ್ ಕೆಲಸ ಮಾಡುತ್ತಿದ್ದ ಕಾರ್ಮಿಕ ತಿಮ್ಮೇಗೌಡ(38) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 8 ವರ್ಷದಿಂದ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಎಲೆಕ್ಟ್ರಿಕ್ ಕೆಲಸವನ್ನು ತಿಮ್ಮೇಗೌಡ ಮಾಡುತ್ತಿದ್ದರು. ಇಂತಹ ಅವರು ಇಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಗೃಹ ಸಚಿವ ಡಾ.ಜಿ ಪರಮೇಶ್ವರ್ ಒಡೆತನದ ಸಿದ್ಧಾರ್ಥ ಮೆಡಿಕಲ್ ಕಾಲೇಜು ಇದಾಗಿದೆ. ತಿಮ್ಮೇಗೌಡ ಆಸ್ಪತ್ರೆಯ ಕೊಠಡಿಯಲ್ಲಿ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾದಂತ ತಿಮ್ಮೇಗೌಡ ತುಮಕೂರು ಜಿಲ್ಲೆಯ ಗುಬ್ಬಿ ಮೂಲದವರು. ತಿಮ್ಮೇಗೌಡ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. https://kannadanewsnow.com/kannada/young-people-collapsed-due-to-illness-during-the-reservation-protest-in-bangalore/ https://kannadanewsnow.com/kannada/dr-dinesh-has-been-appointed-as-the-new-director-of-jayadeva-heart-hospital-in-bengaluru/
ಬೆಂಗಳೂರು: ನಗರದ ಫ್ರೀಡಂ ಪಾರ್ಕ್ ನಲ್ಲಿ ಒಳಮೀಸಲಾತಿ ವಿರೋಧಿಸಿ ಪ್ರತಿಭಟನೆ ತೀವ್ರಗೊಂಡಿದೆ. ಇದೀಗ ಪ್ರತಿಭಟನಾ ಸ್ಥಳದಲ್ಲಿ ಯುವಕರು ಅಸ್ವಸ್ಥರಾಗಿ ಕುಸಿದು ಬಿದ್ದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಂಜಾರ, ಭೋವಿ, ಕೊರಚ ಸಮುದಾಯದವರಿಂದ ಒಳ ಮೀಸಲಾತಿ ಜಾರಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನಾ ನಿರತ ಹೋರಾಟಗಾರರು ವಿಧಾನಸೌಧ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬ್ಯಾರಿಕೇಡ್ ಹಾಕಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದರೂ, ಬ್ಯಾರಿಕೇಟ್ ಮುರಿದು ರೋಷಾವೇಶವನ್ನು ಹೊರ ಹಾಕಿದ್ದಾರೆ. ಈ ಸಂದರ್ಭದಲ್ಲಿಯೇ ನೂಕು ನುಗ್ಗಲು ಉಂಟಾದ ಪರಿಣಾಮ, ಕೆಲ ಯುವಕರು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ ಎನ್ನಲಾಗುತ್ತಿದೆ. https://kannadanewsnow.com/kannada/official-stamp-on-the-law-to-confiscate-illegal-mining-assets-in-the-state-minister-h-k-patil/ https://kannadanewsnow.com/kannada/dr-dinesh-has-been-appointed-as-the-new-director-of-jayadeva-heart-hospital-in-bengaluru/
ಬೆಂಗಳೂರು: ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ಅಧಿನಿಯಮ, 2025 ಕ್ಕೆ ಮಾನ್ಯ ಘನತೆವೆತ್ತ ರಾಜ್ಯಪಾಲರು ಒಪ್ಪಿಗೆ ನೀಡಿದ್ದು, ಈ ಅಧಿನಿಯಮ ದಿನಾಂಕ:09.09.2025 ರಿಂದ ಅಧಿಕೃತವಾಗಿ ಜಾರಿಗೆ ಬಂದಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ರವರು ಇಂದು ಗದಗನಲ್ಲಿ ಮಾಧ್ಯಮಗೊಷ್ಠಿಯಲ್ಲಿ ತಿಳಿಸಿದರು. ಕರ್ನಾಟಕ ರಾಜ್ಯದಲ್ಲಿ ಲೆಕ್ಕವಿಲ್ಲದಷ್ಟು ಸಂಖ್ಯೆಯ ಗುತ್ತಿಗೆದಾರರು, ಸಾಗಾಣಿಕೆದಾರರು, ರಫ್ತುದಾರರು, ದಾಸ್ತಾನುಧಾರಕರು, ಖರೀದಿದಾರರು ಮತ್ತು ಇತರ ಮಧ್ಯವರ್ತಿಗಳು ಸೇರಿದಂತೆ ಬಹುವಹಿವಾಟುಗಳನ್ನು ಒಳಗೊಂಡ ಅಕ್ರಮ ಗಣಿಗಾರಿಕೆ ಚಟುವಟಿಕೆಗಳಿಂದ ಸಂಘಟಿತ ಅಪರಾಧ, ವ್ಯವಸ್ಥಿತ ಒಳಸಂಚು ಮತ್ತು ಅಪರಾಧ ಉತ್ಪತ್ತಿಗಳಿಂದಾದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲು, ಜಪ್ತಿಮಾಡಲು, ಮುಟ್ಟುಗೋಲು ಹಾಕಿಕೊಳ್ಳುವುದಕ್ಕೆ ವಸೂಲಿ ಆಯುಕ್ತರೊಬ್ಬರ ನೇಮಕಾತಿಯ ಅವಶ್ಯಕತೆಯನ್ನು ಸರ್ಕಾರ ಮನಗಂಡು ಈ ಅಧಿನಿಯಮವನ್ನು ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಿ, ಒಪ್ಪಿಗೆ ಪಡೆದು ಇಂದು ಅಧಿಸೂಚಿಸಿದೆ. ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ ಮುಟ್ಟುಗೋಲು ಹಾಕಿಕೊಳ್ಳಬಹುದಾದ ಆಸ್ತಿಯನ್ನು ಗುರುತಿಸಿ, ಅಂತಹ ಆಸ್ತಿಯನ್ನು ಜಪ್ತಿಮಾಡಲು ಸರ್ಕಾರಕ್ಕೆ ಅಧಿಕಾರ ದೊರಕಿದೆ. ಅಕ್ರಮ ಗಣಿಗಾರಿಕೆ…
ಬೆಂಗಳೂರು: ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು 2025-26ನೇ ಸಾಲಿನ ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕೈಗಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಕಿರು ನೇರ ಸಾಲ ಯೋಜನೆ, ಚರ್ಮಕಾರರ ವಸತಿ ಯೋಜನೆ ಮತ್ತು ಚರ್ಮ ಕುಶಲಕರ್ಮಿಗಳ ಕುಟುಂಬಗಳ ಯುವಜನರಿಗೆ ಹೊಸ ತಂತ್ರಜ್ಞಾನ ವಿನ್ಯಾಸಗಳು ಹಾಗೂ ಮಾರುಕಟ್ಟೆ ಬೇಡಿಕೆಗಳ ಬಗ್ಗೆ ದೆಹಲಿ, ತಮಿಳುನಾಡು, ಮಹಾರಾಷ್ಟ್ರ, ಉತ್ತರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತರಬೇತಿ ಪಡೆಯಲು ಅಧ್ಯಯನ ಪ್ರವಾಸ ಯೋಜನೆಗೆ ಅರ್ಹರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು https://sevasindhu.karnataka.gov.in, https://sevasindhuservices.karnataka.gov.in ಪೋರ್ಟಲ್ ಮೂಲಕ ಅ. 08 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ವ್ಯವಸ್ಥಾಪಕರು/ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು, ಲಿಡ್ಕರ್, ನೆಹರು ರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊ.ಸಂ.: 8904510699 ನ್ನು ಸಂಪರ್ಕಿಸುವುದು. https://kannadanewsnow.com/kannada/strong-protest-in-bangalore-activists-throw-barricades-and-express-their-anger-in-the-demonstration/ https://kannadanewsnow.com/kannada/dr-dinesh-has-been-appointed-as-the-new-director-of-jayadeva-heart-hospital-in-bengaluru/
ಬೆಂಗಳೂರು: ನಗರದ ಫ್ರೀಡಂ ಪಾರ್ಕ್ ನಲ್ಲಿ ಎಸ್ಸಿ ಒಳ ಮೀಸಲಾತಿ ಹೋರಾಟದ ಕಿಚ್ಚು ಹೆಚ್ಚಾಗಿದೆ. ಫ್ರೀಡಂ ಪಾರ್ಕ್ ನಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಂತ ಪ್ರತಿಭಟನಾಕಾರರು ಬ್ಯಾರಿಕೇಡ್ ಕಿತ್ತೆಸೆದು ರೋಷಾವೇಶವನ್ನು ಹೊರ ಹಾಕಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಂಜಾರ, ಭೋವಿ, ಕೊರಚ ಸಮುದಾಯಗಳಿಂದ ಎಸ್ಸಿ ಒಳಮೀಸಲಾತಿ ಜಾರಿ ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆ ತೀರ್ವಗೊಂಡು ಬ್ಯಾರಿಕೇಡ್ ಕಿತ್ತೆಸೆದು ಧರಣಿ ನಿರತರು ರೋಷಾವೇಶ ವ್ಯಕ್ತ ಪಡಿಸಿದ್ದಾರೆ. ವಿಧಾನಸೌಧ ಮುತ್ತಿಗೆ ಹಾಕಲು ಪ್ರತಿಭಟನಾ ನಿರತರು ಪ್ರಯತ್ನಿಸಿದ್ದಾರೆ. ಅವರನ್ನು ಪೊಲೀಸರು ತಡೆಯಲು ಹರಸಾಹಸ ಪಡುತ್ತಿದ್ದಾರೆ. ಹೋರಾಟಗಾರರನ್ನು ತಡೆದು ನಿಲ್ಲಿಸೋದಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. https://kannadanewsnow.com/kannada/teachers-must-adapt-to-modern-technologies-deputy-chief-minister-d-k-shivakumar/ https://kannadanewsnow.com/kannada/women-should-be-careful-now-if-they-sleep-wearing-a-bra-at-night/
ಬೆಂಗಳೂರು: “ಶಿಕ್ಷಕರು ಆಧುನಿಕ ತಂತ್ರಜ್ಞಾನಗಳಿಗೆ ಹೊಂದಿಕೊಳ್ಳಬೇಕು. ಇಲ್ಲದಿದ್ದರೆ ಉತ್ತಮ ಶಿಕ್ಷಣ ನೀಡುವಲ್ಲಿ ಮಕ್ಕಳಿಗೆ ಸರಿಯಾಗಿ ನ್ಯಾಯ ಒದಗಿಸಲು ಆಗುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕನಕಪುರದಲ್ಲಿ ನಡೆದ ತಾಲ್ಲೂಕು ಮಟ್ಟದ ಶಿಕ್ಷಕರ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ನಾವೆಲ್ಲರೂ ಇಂದು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನ ಆಚರಿಸಲು ಸೇರಿದ್ದೇವೆ. ನಾನು ಪ್ರತಿ ವರ್ಷ ಎಷ್ಟೇ ಒತ್ತಡ, ಕೆಲಸಗಳಿದ್ದರೂ ಈ ಕಾರ್ಯಕ್ರಮವನ್ನು ತಪ್ಪಿಸದೇ ಭಾಗವಹಿಸುತ್ತೇನೆ. ರಾಧಾಕೃಷ್ಣನ್ ಅವರ ಇತಿಹಾಸ ಶಿಕ್ಷಣಕ್ಕೆ ದೊಡ್ಡ ಮಾರ್ಗದರ್ಶನ. ಅಂದಿನ ಕಾಂಗ್ರೆಸ್ ಸರ್ಕಾರ ಅವರಿಗೆ ದೊಡ್ಡ ಹುದ್ದೆ ನೀಡಿತ್ತು. ಶಿಕ್ಷಕರಿಗೆ ಗೌರವ ನೀಡುವ ಕೆಲಸವನ್ನು ಮಾಡಲಾಗಿದೆ. ಮೈಸೂರು ವಿವಿಯಲ್ಲಿ ಪ್ರೊಫೆಸರ್ ಆಗಿ ಕೆಲಸ ಮಾಡುತ್ತಿದ್ದ ರಾಧಾಕೃಷ್ಣನ್ ಅವರು ಮಹಾರಾಜ ಕಾಲೇಜಿಗೆ ವರ್ಗಾವಣೆಯಾಗುತ್ತಾರೆ. ಆಗ ವಿದ್ಯಾರ್ಥಿಗಳೇ ಅವರನ್ನು ಕಾಲೇಜಿಗೆ ಕರೆದೊಯ್ದು ಅವರಿಗೆ ಬೀಳ್ಕೊಡುಗೆ ನೀಡುತ್ತಾರಂತೆ. ಇದು ರಾಧಾಕೃಷ್ಣನ್ ಹಾಗೂ ವಿದ್ಯಾರ್ಥಿಗಳ ನಡುವಣ ಸಂಬಂಧ ತಿಳಿಸುತ್ತದೆ” ಎಂದರು. “ಹೆಚ್ಚಾಗಿ ಹೆಣ್ಣು ಮಕ್ಕಳು ಶಿಕ್ಷಕ ವೃತ್ತಿಯನ್ನು ಆಯ್ಕೆ…
ಬೆಂಗಳೂರು: ʼಪಾಲುದಾರಿಕೆಯಡಿ ಹುಬ್ಬಳ್ಳಿಯಲ್ಲಿರುವ ಪ್ರತಿಷ್ಠಿತ ಎನ್ಜಿಇಎಫ್ ಕಾರ್ಖಾನೆ ಪುನ:ಶ್ಚೇತನದ ಸಾಧ್ಯತೆಗಳ ಕುರಿತು ಜಪಾನಿನ ಜೆಎಫ್ಇ ಷೋಜಿ ಕಂಪನಿ ಜೊತೆ ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ಮಾತುಕತೆ ನಡೆಸಿದ್ದು ಕಾರ್ಖಾನೆಗೆ ಆಹ್ವಾನ ನೀಡಿದ್ದಾರೆ. ಬಂಡವಾಳ ಹೂಡಿಕೆ ಆಕರ್ಷಿಸಲು ಜಪಾನ್ಗೆ ಭೇಟಿ ನೀಡಿರುವ ರಾಜ್ಯದ ಉನ್ನತ ಮಟ್ಟದ ನಿಯೋಗದ ನೇತೃತ್ವ ವಹಿಸಿರುವ ಸಚಿವರು, ಕಂಪನಿಯ ಉನ್ನತಾಧಿಕಾರಿಗಳ ಜೊತೆ ಬುಧವಾರ ನಡೆದ ಸಭೆಯಲ್ಲಿ ಹುಬ್ಬಳ್ಳಿ ಎನ್ಜಿಇಎಫ್ ಪುನಶ್ಚೇತನದ ಪ್ರಸ್ತಾವ ಮುಂದಿಟ್ಟಿದ್ದಾರೆ. ʼವಿದ್ಯುತ್ ಪರಿವರ್ತಕಗಳ ತಯಾರಿಕೆಯಲ್ಲಿ ಜೆಎಫ್ಇ ಮುಂಚೂಣಿಯಲ್ಲಿ ಇದೆ. ಹುಬ್ಬಳ್ಳಿಯಲ್ಲಿ ಇರುವ ರಾಜ್ಯ ಸರ್ಕಾರಿ ಸ್ವಾಮ್ಯದ ಉದ್ಯಮವಾಗಿರುವ ನ್ಯೂ ಗವರ್ನಮೆಂಟ್ ಎಲೆಕ್ಟ್ರಿಕಲ್ ಫ್ಯಾಕ್ಟರಿಯನ್ನು (ಎನ್ಜಿಇಎಫ್) ರಾಜ್ಯ ಸರ್ಕಾರದ ಪಾಲುದಾರಿಕೆಯಡಿ ಪುನಶ್ಚೇತನಗೊಳಿಸುವ ಸಂಬಂಧ ಪೂರ್ವಭಾವಿ ಮಾತುಕತೆ ನಡೆಸಲು ಕಂಪನಿಯ ಉನ್ನತಾಧಿಕಾರಿಗಳು ಹುಬ್ಬಳ್ಳಿಯ ಘಟಕಕ್ಕೆ ಭೇಟಿ ನೀಡಲು ಆಹ್ವಾನಿಸಲಾಗಿದೆʼ ಎಂದು ಸಚಿವರು ತಿಳಿಸಿದ್ದಾರೆ. ಸಚಿವರ ಜೊತೆಗಿನ ಸಭೆಯಲ್ಲಿ ಕಂಪನಿಯ ಜೆಎಫ್ಇ ಷೋಜಿ ಕಂಪನಿಯ ಯಂತ್ರೋಪಕರಣಗಳ ವಿಭಾಗದ ಜನರಲ್ ಮ್ಯಾನೇಜರ್ ಹಿರೋಶಿ ಲಿಜಿಮಾ , ಎಲೆಕ್ಟ್ರಿಕಲ್…
ಚಿಕ್ಕೋಡಿ: 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಂತ ಅಪರಾಧಿಗೆ ಕೋರ್ಟ್ 30 ವರ್ಷ ಜೈಲು ಶಿಕ್ಷ, 10,000 ದಂಡವನ್ನು ವಿಧಿಸಿ ಮಹತ್ವದ ತೀರ್ಪು ನೀಡಿದೆ. ಚಿಕ್ಕೋಡಿಯ ನಿಪ್ಪಾಣಿ ತಾಲ್ಲೂಕಿನಲ್ಲಿ ಆಕಾಶ್ ಆಲಿಯಾಸ್ ಅಕ್ಷಯ್ ಮಹಾದೇವ್ ಸಾಳುಂಕೆ ಎಂಬಾತ 14 ವರ್ಷದ ಬಾಲಕಿಯ ಮೇಲೆ ಆಗಸ್ಟ್.18, 2019ರಂದು ಅತ್ಯಾಚಾರ ಎಸಗಿದ್ದನು. ಈ ಸಂಬಂಧ ನಿಪ್ಪಾಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಕುರಿತಂತೆ ನ್ಯಾಯಾಲಯಕ್ಕೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರಾದಂತ ಸಿಎಂ ಪುಷ್ಪಲತಾ ಅವರು, ಸೆಪ್ಟೆಂಬರ್.4, 2025ರಂದು ಆಕಾಶ್ ಅಪರಾಧಿ ಎಂಬುದಾಗಿ ತೀರ್ಪು ನೀಡಿದ್ದರು. ಇದೀಗ ಅಪರಾಧಿ ವಿರುದ್ಧ ಐಪಿಸಿ ಸೆಕ್ಷನ್ 376ರಡಿ ಪೋಕ್ಸೋ ಕೇಸ್ ಅಡಿಯಲ್ಲಿ 30 ವರ್ಷ ಕಠಿಣ ಜೈಲು ಶಿಕ್ಷೆ, 10,000 ದಂಡ ವಿಧಿಸಿ ಆದೇಶಿಸಿದ್ದಾರೆ. ಅಲ್ಲದೇ ಸಂತ್ರಸ್ತೆಗೆ 4 ಲಕ್ಷ ರೂಪಾಯಿ ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ. https://kannadanewsnow.com/kannada/dr-dinesh-has-been-appointed-as-the-new-director-of-jayadeva-heart-hospital-in-bengaluru/ https://kannadanewsnow.com/kannada/women-should-be-careful-now-if-they-sleep-wearing-a-bra-at-night/
ಬೆಂಗಳೂರು: ನಗರದ ಶ್ರೀ ಜಯದೇವ ಹೃದ್ರೋಗ ಸಂಸ್ಥೆಯ ನೂತನ ನಿರ್ದೇಶಕರಾಗಿ ಡಾ.ದಿನೇಶ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಡಾ.ದಿನೇಶ್ ಅವರನ್ನು, ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯ ನೂತನ ನಿರ್ದೇಶಕರನ್ನಾಗಿ ನೇಮಿಸಿದೆ. ಡಾ.ಬಿ ದಿನೇಶ್ ಅವರು ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ Interventional Cardiologist ಮತ್ತು Professor in the Department of Cardiology ಸೇವೆ ಸಲ್ಲಿಸುತ್ತಿದ್ದಾರೆ. ಮೈಸೂರಿನ ತಿ.ನರಸೀಪುರ ತಾಲ್ಲೂಕಿನ ದೊಡ್ಡೆಬಾಗಿಲು ಗ್ರಾಮದ ಕೃಷಿಕ ಕುಟುಂಬದಲ್ಲಿ ಡಾ.ದಿನೇಶ್ ಜನಿಸಿದ್ದರು. ಮೈಸೂರಲ್ಲಿ ಎಂಬಿಬಿಎಸ್ ಮುಗಿಸಿ ಆರೋಗ್ಯ ಇಲಾಖೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು. ಕೆ ಆರ್ ಆಸ್ಪತ್ರೆಯಲ್ಲಿ ಎಂಡಿ ವ್ಯಾಸಂಗ ಮಾಡಿದ ಬಳಿಕ ಮೈಸೂರು ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿಭಾಗದ ಉಪನ್ಯಾಸಕರಾಗಿ, ಸಹಾಯಕ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದಾರೆ. https://kannadanewsnow.com/kannada/food-civil-supplies-department-meeting-held-by-chief-minister-siddaramaiah-here-are-the-highlights/













