Subscribe to Updates
Get the latest creative news from FooBar about art, design and business.
Author: kannadanewsnow09
ಕಲಬುರಗಿ: ರಾಜ್ಯದ ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ಕಲಬುರ್ಗಿಯ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿದ್ದು, ಪೋಷಕರು, ವಿದ್ಯಾರ್ಥಿಗಳು ಕೆಲ ಕಾಲ ಆತಂಕಕ್ಕೆ ದೂಡುವಂತೆ ಮಾಡಿತ್ತು. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು, ನಗರದ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ- ಮೇಲ್ ಬಂದಿರುವ ಹಿನ್ನೆಲೆಯಲ್ಲಿ ನಗರದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶಾಲೆಯ ಸಂಪೂರ್ಣ ತಪಾಸಣೆ ನಡೆಸಲಾಗಿದ್ದು ಯಾವುದೇ ಬಾಂಬ್ ಅಥವಾ ಸ್ಪೋಟಕ ವಸ್ತು ಕಂಡು ಬಂದಿಲ್ಲ. ಹಾಗಾಗಿ, ಪೋಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಹೊಸ ಜೇವರ್ಗಿ ರಸ್ತೆಯ ಮಾರ್ಗದಲ್ಲಿರುವ ಖಾಸಗಿ ಶಾಲೆಯ ಮೇಲ್ ಐಡಿಗೆ ಇಂದು ಮೇಲ್ ಬಂದಿದ್ದು, ಶಾಲೆಗೆ ಬಾಂಬ್ ಬೆದರಿಕೆ ಹಾಕಲಾಗಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ನಗರದ ಪೊಲೀಸರು, ಶಾಲೆಗೆ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ದೊಂದಿಗೆ ದೌಡಾಯಿಸಿ ತಕ್ಷಣ ಶಾಲೆಯಿಂದ ಮಕ್ಕಳನ್ನು ಹೊರಗಡೆ ಕಳಿಸಿದರು. ಶಾಲೆಯ…
ಹಾಸನ: ಕಾಂಗ್ರೆಸ್ ಸರ್ಕಾರದಿಂದಾಗಿ ಕರ್ನಾಟಕ ಸೂತಕದ ಮನೆಯಾಗಿದೆ. ಆರ್ಥಿಕ ವ್ಯವಸ್ಥೆ ಹದಗೆಟ್ಟಿರುವುದರಿಂದ ಜನರು ದಾರಿ ಕಾಣದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕರ್ನಾಟಕ ಸೂತಕದ ಮನೆಯಾಗಿದೆ. ಮೈಕ್ರೋ ಫೈನಾನ್ಸ್ಗಳಿಂದ ಆತ್ಮಹತ್ಯೆ ನಡೆಯುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಸಾಯುತ್ತಿದ್ದಾರೆ. ಗುತ್ತಿಗೆದಾರರು ಹಣವಿಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಶೇ.60 ರ ಕಮಿಶನ್ ದಂಧೆಯಿಂದಾಗಿ ಅಧಿಕಾರಿಗಳು ಸಾಯುತ್ತಿದ್ದಾರೆ. ಇದರ ಜೊತೆಗೆ ಬಾಲಕಿಯರ ಮೇಲೆ ಅತ್ಯಾಚಾರ, ಕೊಲೆ, ಬ್ಯಾಂಕ್ ದರೋಡೆ ನಡೆಯುತ್ತಿದೆ ಎಂದು ದೂರಿದರು. ರಾಜ್ಯದಲ್ಲಿ ಸುಮಾರು 24-25 ಜನರು ಮೈಕ್ರೋ ಫೈನಾನ್ಸ್ಗಳ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೂ ಸರ್ಕಾರ ಸುಗ್ರೀವಾಜ್ಞೆ ಎನ್ನುತ್ತಿದೆಯೇ ಹೊರತು, ಒಂದೇ ಒಂದು ಮೈಕ್ರೋ ಫೈನಾನ್ಸ್ನ ವಿರುದ್ಧ ಕ್ರಮ ಕೈಗೊಂಡಿಲ್ಲ. ಸಿಎಂ ಸಿದ್ದರಾಮಯ್ಯ ಎಷ್ಟು ಗುಡುಗಿದರೂ ಮೈಕ್ರೋ ಫೈನಾನ್ಸ್ಗಳು ಕ್ಯಾರೇ ಎಂದಿಲ್ಲ. ಕುಂಭಮೇಳದಲ್ಲಿ ಜನರು ಸತ್ತಿದ್ದಕ್ಕೆ ಕಾಂಗ್ರೆಸ್ ನಾಯಕರು ಬಾಯಿ ಬಡಿದುಕೊಂಡರು. ಆದರೆ ಸಾಲ ವಸೂಲಿಗಾರರ ಕಿರುಕುಳದಿಂದ ಸತ್ತವರ…
BREAKING: ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿ ಅಯೋಧ್ಯೆಗೆ ತೆರಳುತ್ತಿದ್ದ ಕರ್ನಾಟಕದ ಯುವಕ ವಿದ್ಯುತ್ ಪ್ರವಹಿಸಿ ಸಾವು
ಕೊಪ್ಪಳ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವಂತ ಕುಂಭಮೇಳಕ್ಕೆ ತೆರಳಿ, ಪವಿತ್ರ ಸ್ನಾನ ಮಾಡಿದಂತ ಕೊಪ್ಪಳದ ಯುವಕನೊಬ್ಬ, ಅಲ್ಲಿಂದ ಅಯೋಧ್ಯೆಗೆ ರಾಮನ ದರ್ಶನ ಪಡೆಯಲು ತೆರಳುತ್ತಿದ್ದರು. ಈ ವೇಳೆಯಲ್ಲಿ ಗೋರಖ್ ಪುರದಲ್ಲಿ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಸಿದ್ಧಾಪುರ ನಿವಾಸಿ ಪ್ರವೀಣ್ ಹೊಸಮನಿ(27) ಎಂಬುವರು ಕುಂಭಮೇಳಕ್ಕೆ ತೆರಳಿದ್ದರು. ಅಲ್ಲಿ ಪವಿತ್ರ ಸ್ನಾನ ಮುಗಿಸಿ ಅಯೋದ್ಯೆಗೆ ಶ್ರೀರಾಮನ ದರ್ಶನಕ್ಕೆ ತೆರಳುತ್ತಿದ್ದರು. ಈ ವೇಳೆಯಲ್ಲಿ ಗೋರಖ್ ಪುರದ ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾನೆ. https://kannadanewsnow.com/kannada/here-are-the-key-highlights-of-pm-modis-speech-on-the-motion-of-thanks-in-the-lok-sabha/ https://kannadanewsnow.com/kannada/big-news-brother-has-no-right-over-married-sisters-property-supreme-court-landmark-verdict/
ನವದೆಹಲಿ: ‘ಹಮ್ ಜೆಹರ್ ಕಿ ರಾಜನೀತಿ ನಿ ಕಾರ್ತೆ’ ಎಂಬುದಾಗಿ ಪ್ರಧಾನಿ ಮೋದಿ ಹೇಳುವ ಮೂಲಕ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಸಂವಿಧಾನವನ್ನು ಜೇಬಿನಲ್ಲಿ ಇಟ್ಟುಕೊಳ್ಳುವ ಜನರಿಗೆ ಅದರ ನಿಜವಾದ ಅರ್ಥ ಅರ್ಥವಾಗುವುದಿಲ್ಲ ಎಂಬುದಾಗಿ ಹೇಳುವ ಮೂಲಕ ಹೆಸರೇಳದೇ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ್ದಾರೆ. ಇಂದಿನ ಪ್ರಧಾನಿ ಮೋದಿ ಲೋಕಸಭೆಯಲ್ಲಿನ ವಂದನಾ ನಿರ್ಣಯದ ಮೇಲಿನ ಭಾಷಣದ ಪ್ರಮುಖ ಹೈಲೈಟ್ಸ್ ಮುಂದೆ ಓದಿ. ಇಂದು ಬಜೆಟ್ ಅಧಿವೇಶನದಲ್ಲಿ ಪ್ರತಿಪಕ್ಷಗಳು ಮತ್ತು ಎನ್ಡಿಎ ಸರ್ಕಾರದ ನಡುವೆ ತೀವ್ರ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಲೋಕಸಭೆಯಲ್ಲಿ ವಂದನಾ ನಿರ್ಣಯದ ಮೇಲೆ ಭಾಷಣ ಮಾಡಿದಂತ ಅವರು, ಇಂದು ನಾನು ದೇಶದ ಜನರಿಗೆ ನನ್ನ ಧನ್ಯವಾದಗಳನ್ನು ಅರ್ಪಿಸಲು ಬಯಸುತ್ತೇನೆ. ಸಂಸತ್ತಿನಲ್ಲಿ ತಮ್ಮ ಅಭಿಪ್ರಾಯಗಳನ್ನು ನೀಡಿದವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದರು. ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಪರೋಕ್ಷವಾಗಿ ಉಲ್ಲೇಖಿಸಿದ ಅವರು, ಇತ್ತೀಚಿನ ದಿನಗಳಲ್ಲಿ, ಕೆಲವು ರಾಜಕಾರಣಿಗಳು ಜಕುಜಿಗಳಲ್ಲಿ…
ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು ಶುಕ್ರ ವಾರ ಗಳ ಕಾಲ ಈ ಪರಿಹಾರವನ್ನು ನೀವು ಪಾಲಿಸಿಕೊಂಡು ಬಂದಿದೆ ಅದರೆ ನಿಮ್ಮ ಜೀವನದಲ್ಲಿ ಎದುರಾಗುತ್ತ ಇರುವಂತಹ ಹಣಕಾಸಿಗೆ ಸಂಬಂಧಪಟ್ಟ ವಿಚಾರಗಳು ಬೇಗ ಪರಿಹರವಾಗುತ್ತದೆ. ಪಂಡಿತ್ ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಅದು ಹೇಗೆ ಅಂತೀರಾ ಈ ಲವಂಗಕ್ಕೆ ಬಹಳ ವಿಶೇಷವಾದ ಶಕ್ತಿ ಇದೆ ಹಾಗೂ ದುಷ್ಟಶಕ್ತಿಯನ್ನು ದೂರ ಮಾಡುವಂತಹ…
ಬೆಂಗಳೂರು: ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು, ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಉತ್ತರ ಪ್ರದೇಶದ ವಾರಣಾಸಿ ನಿಲ್ದಾಣಗಳ ನಡುವೆ 3 ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ವಿವರಗಳು ಈ ಕೆಳಗಿನಂತಿವೆ: ಹುಬ್ಬಳ್ಳಿ- ವಾರಣಾಸಿ ನಿಲ್ದಾಣಗಳ ನಡುವೆ ಮೂರು ಟ್ರಿಪ್ ವಿಶೇಷ ರೈಲು (07383/84) ಸಂಚಾರ ರೈಲು ಸಂಖ್ಯೆ 07383 ಎಸ್ಎಸ್ಎಸ್ ಹುಬ್ಬಳ್ಳಿ – ವಾರಣಾಸಿ ವಿಶೇಷ ಎಕ್ಸ್ಪ್ರೆಸ್ ರೈಲು ಫೆಬ್ರವರಿ 14, 21 ಮತ್ತು 28, 2025 (ಶುಕ್ರವಾರ) ರಂದು ಹುಬ್ಬಳ್ಳಿಯಿಂದ ಬೆಳಿಗ್ಗೆ 8:00 ಗಂಟೆಗೆ ಹೊರಟು, ಭಾನುವಾರದಂದು ಬೆಳಿಗ್ಗೆ 05:30 ಗಂಟೆಗೆ ಉತ್ತರ ಪ್ರದೇಶದ ವಾರಣಾಸಿ ನಿಲ್ದಾಣ ತಲುಪಲಿದೆ. ಪುನಃ ಇದೆ ರೈಲು (07384) ಫೆಬ್ರವರಿ 17, 24 ಮತ್ತು ಮಾರ್ಚ್ 3, 2025 (ಸೋಮವಾರ) ರಂದು ವಾರಣಾಸಿಯಿಂದ ಬೆಳಿಗ್ಗೆ 5:00 ಗಂಟೆಗೆ ಹೊರಟು, ಬುಧವಾರ 12:45 AM ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ. ಈ ರೈಲು…
ನವದೆಹಲಿ: ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅತಿಶಿ ವಿರುದ್ಧ ದೆಹಲಿ ಪೊಲೀಸರು ಮಂಗಳವಾರ ಎಫ್ಐಆರ್ ದಾಖಲಿಸಿದ್ದಾರೆ. ಕಲ್ಕಾಜಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಅತಿಶಿ ಅವರು ಪ್ರಚಾರ ಮುಗಿದ ನಂತರ ಗೋವಿಂದಪುರಿ ಪ್ರದೇಶದಲ್ಲಿ 50 ಕ್ಕೂ ಹೆಚ್ಚು ಬೆಂಬಲಿಗರು ಮತ್ತು 10 ವಾಹನಗಳೊಂದಿಗೆ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ನಿಷೇಧಾಜ್ಞೆಯ ಪ್ರಕಾರ ವಾಹನಗಳನ್ನು ತೆಗೆದುಹಾಕುವಂತೆ ಪೊಲೀಸರು ಕೇಳಿಕೊಂಡರು. ಫ್ಲೈಯಿಂಗ್ ಸ್ಕ್ವಾಡ್ ಅನ್ನು ಕರೆಸಲಾಯಿತು. ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. “4/2/25 ರಂದು ಮುಂಜಾನೆ 12:30 ಕ್ಕೆ, ಕಲ್ಕಾಜಿಯ ಎಎಪಿ ಅಭ್ಯರ್ಥಿ ಶ್ರೀಮತಿ ಅತಿಶಿ (ಎಸಿ -51) 50-70 ಜನರು ಮತ್ತು 10 ವಾಹನಗಳೊಂದಿಗೆ ಗೋವಿಂದಪುರಿಯ ಫತೇಹ್ ಸಿಂಗ್ ಮಾರ್ಗದಲ್ಲಿ ಪತ್ತೆಯಾಗಿದ್ದಾರೆ. ಎಂಸಿಸಿ ಮತ್ತು ನಿಷೇಧಾಜ್ಞೆಯಿಂದಾಗಿ ಪೊಲೀಸರು ಅವರನ್ನು ಖಾಲಿ ಮಾಡುವಂತೆ ಸೂಚನೆ ನೀಡಿದರು. ಡಿಸಿಪಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಎಫ್ಎಸ್ಟಿ ಮತ್ತು ಎಸ್ಎಸ್ಟಿಯನ್ನು ಕರೆಯಲಾಯಿತು. ಎಫ್ಎಸ್ಟಿ ದೂರಿನ ಮೇರೆಗೆ,…
ನವದೆಹಲಿ: ದೇಶದಲ್ಲಿ ಎನ್ ಡಿ ಎ ಅಧಿಕಾರಕ್ಕೆ ಬಂದ ಬಳಿಕ 25 ಕೋಟಿ ಜನರು ಬಡತನ ಮುಕ್ತರಾಗಿದ್ದಾರೆ. ನಾವು ಸುಳ್ಳು ಘೋಷಣೆ ಮಾಡಿಲ್ಲ. ಬಡತನ ನಿವಾರಿಸುವ ಕೆಲಸ ಮಾಡಿದ್ದೇವೆ. ಈವರೆಗೆ ಹೊಸದಾಗಿ 4 ಕೋಟಿ ಮನೆ ನಿರ್ಮಿಸಿಕೊಟ್ಟಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಈ ಉತ್ತರ ನೀಡಿದ್ದಾರೆ. ‘ಶೀಶ್ ಮಹಲ್’ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಕೆಲವು ನಾಯಕರು ತಮ್ಮ ಮನೆಗಳಲ್ಲಿ ಮಸಾಲೆ ಮತ್ತು ಸೊಗಸಾದ ಮಳೆಯತ್ತ ಗಮನ ಹರಿಸಿದ್ದಾರೆ. ಆದರೆ ನಾವು ಪ್ರತಿ ಮನೆಗೆ ನೀರನ್ನು ತರುವತ್ತ ಗಮನ ಹರಿಸಿದ್ದೇವೆ” ಎಂದು ಅವರು ಹೇಳಿದರು. ಇಲ್ಲಿಯವರೆಗೆ ಬಡವರಿಗೆ 4 ಕೋಟಿ ಮನೆಗಳನ್ನು ನೀಡಲಾಗಿದೆ. ಕಷ್ಟಕರ ಜೀವನವನ್ನು ನಡೆಸಿದವರಿಗೆ ಮನೆ ಪಡೆಯುವುದರ ಮೌಲ್ಯವೇನು ಎಂದು ಮಾತ್ರ ಅರ್ಥವಾಗುತ್ತದೆ. ಶೌಚಾಲಯ ವ್ಯವಸ್ಥೆಯ ಕೊರತೆಯಿಂದಾಗಿ…
ಬೆಂಗಳೂರು: ಇಂದು, ವಿಶ್ವ ಕಾನ್ಸರ್ ದಿನದ ಅಂಗವಾಗಿ HCG Cancer Care ರವರಿಂದ ಕ್ಯಾನ್ಸರ್ ಸ್ಕ್ರೀನಿಂಗ್ ತಪಾಸಣಾ ಕಾರ್ಯಕ್ರಮವನ್ನು ಕೆ.ಎಸ್.ಆರ್.ಟಿ.ಸಿಯ, ಬೆಂಗಳೂರು ಕೇಂದ್ರೀಯ ವಿಭಾಗ, ಘಟಕ-2 ರಲ್ಲಿ 1,000 ಕ್ಕೂ ಹೆಚ್ಚು ನೌಕರರಿಗೆ ಉಚಿತವಾಗಿ ORAL and BREAST ಕ್ಯಾನ್ಸರ್ ತಪಾಸಣೆ ಮತ್ತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ವಿ. ಅನ್ಬುಕುಮಾರ್, ಭಾಆಸೇ., ವ್ಯವಸ್ಥಾಪಕ ನಿರ್ದೇಶಕರು, ಕರಾರಸಾ ನಿಗಮ ರವರು ಕ್ಯಾನ್ಸರ್ ತಡೆಗಟ್ಟುವಿಕೆ, ಆರಂಭಿಕ ಪತ್ತೆ ಮತ್ತು ನಿಯಮಿತ ತಪಾಸಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಅವಶ್ಯಕವಾಗಿರುತ್ತದೆ. ನಿಗಮದ ಸಿಬ್ಬಂದಿಗಳು ಹಗಲಿರಳು ಎನ್ನದೆ, ಧೂಳು, ಮಾಲಿನ್ಯ ಮತ್ತು ಎಲ್ಲಾ ಸಂದರ್ಭಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಸಿಬ್ಬಂದಿಗಳು ಆರೋಗ್ಯವಾಗಿದಲ್ಲಿ ನಿಗಮವು ಆರೋಗ್ಯವಾಗಿರುತ್ತದೆ ಎಂಬ ಉದ್ದೇಶದಿಂದ ಆರೋಗ್ಯ ತಪಾಸಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಆದುದರಿಂದ, ಈ ವರ್ಷವನ್ನು “Healthy Employees, Healthy KSRTC” ಎಂದು ಘೋಷಿಸಲಾಗಿದೆ. ಕ್ಯಾನ್ಸರ್ ಜಾಗೃತಿಯ ಮಹತ್ವವನ್ನು ತಿಳಿಸಿ ಮತ್ತು ಜೀವಗಳನ್ನು ಉಳಿಸುವಲ್ಲಿ ಆರಂಭಿಕ ಹಸ್ತಕ್ಷೇಪವು ಪ್ರಮುಖ ಪಾತ್ರ ವಹಿಸುತ್ತದೆ ಎಂದು…
ಬೆಂಗಳೂರು: ಈ ಬಾರಿಯ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ದೇಶ- ವಿದೇಶಗಳ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಹೆಸರಾಂತ ಉದ್ಯಮಗಳ ಪ್ರತಿಷ್ಠಾನಗಳೊಂದಿಗೆ ಉದ್ದೇಶಿತ `ಕ್ವಿನ್ ಸಿಟಿ’ಯಲ್ಲಿ ಅತ್ಯುತ್ಕೃಷ್ಟ ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆಗಳ ಕ್ಷೇತ್ರದಲ್ಲಿ ಸಹಭಾಗಿತ್ವದ ಮೂಲಕ ದಕ್ಷ ಕಾರ್ಯ ಪರಿಸರ ಸೃಷ್ಟಿಸುವ ಕುರಿತು ಪ್ರತ್ಯೇಕ ರೌಂಡ್ ಟೇಬಲ್ ಗೋಷ್ಠಿಯನ್ನು ಏರ್ಪಡಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ. ಮಂಗಳವಾರ ಈ ಬಗ್ಗೆ ಮಾಹಿತಿ ನೀಡಿರುವ ಅವರು, `ಸಮಾವೇಶದ ಎರಡನೆಯ ದಿನವಾದ ಫೆ,13ರಂದು ಈ ಗೋಷ್ಠಿ ನಡೆಯಲಿದೆ. ಈ ಸಂದರ್ಭದಲ್ಲಿ ವಿದೇಶಗಳ 5-6 ಮತ್ತು ಭಾರತದ 7-8 ವಿಶ್ವವಿದ್ಯಾಲಯಗಳೊಂದಿಗೆ ಒಡಂಬಡಿಕೆಗೆ ಸಹಿ ಹಾಕುವ ಸಾಧ್ಯತೆ ಕೂಡ ಇದೆ. ಈ ಸಂಬಂಧ ಮಾತುಕತೆ ಪ್ರಗತಿಯಲ್ಲಿದ್ದು, ಯಾವ ವಿ.ವಿ.ಗಳೊಂದಿಗೆ ಒಡಂಬಡಿಕೆ ಆಗಲಿದೆ ಎನ್ನುವುದನ್ನು ನಂತರದ ದಿನಗಳಲ್ಲಿ ಅಂತಿಮವಾಗಲಿದೆ. ಯುಜಿಸಿ ನಿಯಮಗಳ ಪ್ರಕಾರ, ಜಗತ್ತಿನ ಮೊದಲ 500 ಸ್ಥಾನಗಳಲ್ಲಿರುವ ವಿ.ವಿ.ಗಳು ಭಾರತದಲ್ಲಿ ತಮ್ಮ ಕ್ಯಾಂಪಸ್ಸನ್ನು ತೆರೆಯಲು ಅವಕಾಶವಿದ್ದು, ಇದನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು’…