Subscribe to Updates
Get the latest creative news from FooBar about art, design and business.
Author: kannadanewsnow09
ಹುಬ್ಬಳ್ಳಿ: ನಗರದಲ್ಲಿ ನಡೆದಿದ್ದಂತ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಅಲ್ಲದೇ ಪ್ರಕರಣದ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪನೆಗೂ ಆದೇಶಿಸಿದೆ. ಈ ಬೆನ್ನಲ್ಲೇ ಸಿಎಂ ಸಿದ್ಧರಾಮಯ್ಯ ನೇಹಾ ತಂದೆ ನಿರಂಜನ ಜೊತೆಗೆ ಇಂದು ಮಾತನಾಡಿ, ಕ್ಷಮೆ ಯಾಚಿಸಿದ್ದಾರೆ. ಇಂದು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಸಂಬಂಧ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು ನೇಹಾ ಮನೆಗೆ ಭೇಟಿ ನೀಡಿದರು. ನೇಹಾ ಅವರ ತಂದೆ ನಿರಂಜನಗೆ ಸಾಂತ್ವಾನ ಹೇಳಿದರು. ಇದೇ ಸಂದರ್ಭದಲ್ಲಿ ನಿರಂಜನ ಜೊತೆಗೆ ದೂರವಾಣಿ ಕರೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಡಿದರು. ನಿರಂಜನ ಅವರಿಗೆ ನಿಮ್ಮ ಜೊತೆಗೆ ನಾವು ಇದ್ದೇವೆ. ಯಾವುದೇ ಆತಂಕ ಬೇಡ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರು ವೆರಿ ಸಾರಿ ಎಂಬುದಾಗಿಯೂ ತಿಳಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/congress-made-deve-gowda-pm-but-i-dont-know-why-he-is-shedding-tears-dk-shivakumar/ https://kannadanewsnow.com/kannada/minor-girl-commits-suicide-by-hanging-herself-after-boyfriend-makes-obscene-video-viral/
ಬೆಂಗಳೂರು : “ದೇವೇಗೌಡರು ಕಣ್ಣೀರು ಹಾಕುವಂತೆ ಯಾರು ಏನು ಮಾಡಿದ್ದಾರೆ? ಅವರನ್ನು ಕಾಂಗ್ರೆಸ್ ಪಕ್ಷ ಪ್ರಧಾನಿ ಮಾಡಿದೆ. ಆದರೂ ಕಣ್ಣೀರು ಯಾಕೆ ಹಾಕುತ್ತಿದ್ದಾರೆ ಗೊತ್ತಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಸಿಕೆ ಪಕ್ಷದ ಅಧ್ಯಕ್ಷರು ಹಾಗೂ ಸಂಸದರಾದ ತೋಳ್ಕಪ್ಪಿಯನ್ ತಿರುಮವಳವನ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದರು. ಈ ವಯಸ್ಸಿನಲ್ಲಿ ನನಗೆ ಈ ರೀತಿ ಮಾಡಿದ್ದಾರೆ ಎಂದು ದೇವೇಗೌಡರು ಹಾಸನದಲ್ಲಿ ಕಣ್ಣೀರು ಹಾಕಿರುವ ಬಗ್ಗೆ ಮಾಧ್ಯಮಗಳು ಕೇಳಿದಾಗ, “ಅವರನ್ನು ಮುಖ್ಯಮಂತ್ರಿ ಮಾಡಿದ್ದು ಹಾಸನ ಜಿಲ್ಲೆಯಲ್ಲ, ನಮ್ಮ ರಾಮನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ. ಹೀಗಾಗಿ ಅವರು ಕಣ್ಣೀರು ಹಾಕುವ ಪರಿಸ್ಥಿತಿ ಇಲ್ಲ. ಅವರಿಗೆ ತಮ್ಮ ಕೊಡುಗೆ ಬಗ್ಗೆ ಹೇಳಲು ಆಗುವುದಿಲ್ಲ. ಅವರು ಏನೇ ಪ್ರಯತ್ನ ಮಾಡಲಿ, ಅವರು ಹೇಳಿರುವಂತೆ ನಾಲ್ಕು ಸೀಟು ಬರುವುದಿಲ್ಲ. ಮೂರು…
ಬೆಂಗಳೂರು: ರಾಜ್ಯದ ಸಿಎಂ, ಗೃಹ ಸಚಿವರ ಕೃಪಾಕಟಾಕ್ಷದಿಂದ ಇವತ್ತು ಕರ್ನಾಟಕವು ಕರಾಳ ದಿನಗಳನ್ನು ಎದುರಿಸಬೇಕಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆಕ್ಷೇಪ ವ್ಯಕ್ತಪಡಿಸಿದರು. ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್ನ ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾನೂನು- ಸುವ್ಯವಸ್ಥೆ ಜೀವಂತ ಇದೆಯಾ ಎಂಬ ಸಂಶಯ ಎಲ್ಲರಲ್ಲಿ ಮನೆಮಾಡುತ್ತಿದೆ. ಕರ್ನಾಟಕದಲ್ಲಿ ಹೆಣ್ಮಕ್ಕಳು, ವಿದ್ಯಾರ್ಥಿಗಳ ಜೀವಕ್ಕೆ ಸುರಕ್ಷತೆ ಇಲ್ಲವಾಗಿದೆ. ದಲಿತರ ಮನೆಗೆ ನುಗ್ಗಿ ಪೋಷಕರ ಸಮ್ಮುಖದಲ್ಲೇ ಒಬ್ಬ ದಲಿತ ಯುವಕನನ್ನು ಮರ್ಮಾಂಗಕ್ಕೆ ಒದ್ದು, ಕತ್ತು ಹಿಸುಕಿ ಸಾಯಿಸುವ ಘಟನೆ ಈ ಕರ್ನಾಟಕದಲ್ಲಿ ನಡೆದಿದೆ ಎಂದರು. ಯಾದಗಿರಿಯಲ್ಲಿ ಮೊನ್ನೆ ರಾತ್ರಿ 10.30ರ ಸುಮಾರಿಗೆ ಈ ಘಟನೆ ನಡೆದಿದೆ. ರಾಕೇಶ್ ಅವರ ಹತ್ಯೆಯಾಗಿದೆ; ಆದರೆ, ನಿನ್ನೆ ಮಧ್ಯಾಹ್ನ 1 ಗಂಟೆಗೆ ಎಫ್ಐಆರ್ ದಾಖಲಾಗಿದೆ. ಕಾನೂನು- ಸುವ್ಯವಸ್ಥೆ ಈ ರಾಜ್ಯದಲ್ಲಿ ಜೀವಂತ ಇದೆಯೇ ಎಂದು ಪ್ರಶ್ನಿಸಿದರು. ಒಬ್ಬ ದಲಿತ ಯುವಕನ ಕೊಲೆಯನ್ನು ಮುಚ್ಚಿ ಹಾಕುವ ಕೆಲಸ ಈ ರಾಜ್ಯದಲ್ಲಿ…
ಬೆಂಗಳೂರು: ಭಾರತ ಹವಾಮಾನ ಇಲಾಖೆ (IMD) ಯು ಈ ವರ್ಷದಲ್ಲಿ ಅತೀ ಹೆಚ್ಚು ತಾಪಮಾನ (Heat Wave) ಕುರಿತು ಹೊರಡಿಸಿದ ಮುನ್ಸೂಚನೆ ಅನ್ವಯ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಗರಿಷ್ಠ ತಾಪಮಾನವನ್ನು ಸೂಚಿಸುತ್ತದೆ. ಹೀಗಾಗಿ ಕೆಲ ಸಲಹೆಗಳನ್ನು ತಪ್ಪದೇ ಸಾರ್ವಜನಿಕರು ಪಾಲಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ. ಪ್ರಸ್ತುತ, ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2-3 ಡಿಗ್ರಿಗಳಷ್ಟು ಅಧಿಕ ತಾಪಮಾನ ದಾಖಲಾಗುತ್ತಿದ್ದು, ಇದು ಮಾನವ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಭಾರತೀಯ ಹವಾಮಾನ ಇಲಾಖೆಯು ಏಪ್ರಿಲ್ 2024ರ ಸಂಭವನೀಯತೆಯ ಮುನ್ನೋಟವನ್ನು ಆಧರಿಸಿ, ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ ಮಾಹೆಯಿಂದ ಮೇ- 2024 ರ ಅವಧಿಯಲ್ಲಿ ಬಿಸಿ ವಾತಾವರಣವು ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಾಗಿ ಇರುತ್ತದೆ ಎಂದು ಸೂಚಿಸಿರುತ್ತದೆ. ತಾಪಮಾನದ ಮುನ್ಸೂಚನೆಯ ಹೆಚ್ಚಳವು ರಾಜ್ಯದಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳನ್ನು 2-14 ದಿನಗಳು ಮೀರುವ ಸಾಧ್ಯತೆಯಿದೆ. ಅಲ್ಲದೇ, ಈಗಾಗಲೇ ರಾಜ್ಯದಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ…
ಶಿವಮೊಗ್ಗ : ಶಿವಮೊಗ್ಗ ನಗರದ ಮೀನು ಮಾರುಕಟ್ಟೆ ಬಳಿ ಹೊಸ ಕಂಬಗಳನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಏ. 24 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ನಗರದ ಗಾಂಧಿಬಜಾರ್, ಲಷ್ಕರ್ ಮೊಹಲ್ಲಾ, ಸಾವರ್ಕರ್ ನಗರ, ಬಿ.ಹೆಚ್.ರಸ್ತೆ, ತಿರುಪಳಯ್ಯನಕೇರಿ, ಸೊಪ್ಪಿನ ಮಾರುಕಟ್ಟೆ, ಕೆ.ಆರ್.ಪುರಂ. ಭರಮಪ್ಪನಗರ, ಎಂಕೆಕೆ ರಸ್ತೆ, ನಾಗಪ್ಪಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಏ.29: ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ಶಿವಮೊಗ್ಗ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಏ.29 ರಂದು ಆಯೋಜಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಾಯಿ ಎಕ್ಸ್ಪೋರ್ಟ್, ಮಾಚೇನಹಳ್ಳಿ, ಶಿವಮೊಗ್ಗ ಇಲ್ಲಿ ಹಾಗೂ ದಾವಣಗೆರೆ ಜಿಲ್ಲೆಯ ಕನ್ನಿಕಾ ಪರಮೇಶ್ವರಿ ಸಹಕಾರಿ ಬ್ಯಾಂಕ್, ದಾವಣಗೆರೆ ಇಲ್ಲಿ ಕಾರ್ಯಕ್ರಮ ನಡೆಯಲಿದೆ. ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ…
ಬೆಂಗಳೂರು: ಇಬ್ಬರು ಮಹಿಳೆಯರಿಗೆ ಎಲ್ ಎಸ್ ಸಿಎಸ್ ಶಸ್ತ್ರ ಚಿಕಿತ್ಸೆಯ ನಂತ್ರ ತೀವ್ರ ರಕ್ತಸ್ತ್ರಾವದಿಂದಾಗಿ ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ ಬಳ್ಳಾರಿಯ ಮೋಕಾ ಸಮುದಾಯ ಆರೋಗ್ಯ ಕೇಂದ್ರದ ಸ್ತ್ರೀರೋಗ ತಜ್ಞೆ ಡಾ.ಪರಿಮಳಾ ಅವರನ್ನು ಸೇವೆಯಿಂದ ಅಮಾನತುಗೊಳಿಸಿ, ಆರೋಗ್ಯ ಇಲಾಖೆ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಾದಂತ ಡಿ.ರಂದೀಪ್ ಅವರು ಆದೇಶ ಹೊರಡಿಸಿದ್ದಾರೆ. ದಿನಾಂಕ 07-03-2024ರಂದು ಭಾಗ್ಯಮ್ಮ(23) ಎಂಬುವರು ಮೋಕಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಎಲ್ ಎಸ್ ಸಿಎಸ್ ಶಸ್ತ್ರ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರಿಗೆ ಸ್ತ್ರೀರೋಗ ತಜ್ಞೆ ಡಾ.ಪರಿಮಳ ದೇಸಾಯಿ ಶಸ್ತ್ರಚಿಕಿತ್ಸೆ ನಡೆಸಿದ್ದರು ಎಂದಿದ್ದಾರೆ. ಶಸ್ತ್ರಚಿಕಿತ್ಸೆಯ ನಂತ್ರ ಭಾಗ್ಯಮ್ಮ ಅವರಿಗೆ ತೀವ್ರರಕ್ತ ಸ್ತ್ರಾವ ಉಂಟಾಗಿತ್ತು. ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆದೊಯ್ಯೋ ಮಾರ್ಗಮಧ್ಯೆದಲ್ಲಿ ಮೃತಪಟ್ಟಿದ್ದರು ಎಂಬುದಾಗಿ ವರದಿಯಿಂದ ತಿಳಿದು ಬಂದಿದೆ ಎಂದು ಹೇಳಿದ್ದಾರೆ. ದಿನಾಂಕ 06-03-2024ರಂದು ಸಿಂಧುವಾಳ ನಗರದ ರಾಜಮ್ಮ(23) ಎಂಬುವರಿಗೆ ಎಲ್ ಎಸ್ ಸಿಎಸ್ ಶಸ್ತ್ರ ಚಿಕಿತ್ಸೆಯನ್ನು ಡಾ.ಪರಿಮಳ ದೇಸಾಯಿ ನೆರವೇರಿಸಿದ್ದರು. ಅವರು ಕೂಡ ತೀವ್ರ…
ಬೆಂಗಳೂರು: ಏಪ್ರಿಲ್.26ರಂದು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗಾಗಿ ಮೊದಲ ಹಂತದ ಮತದಾನ ನಡೆಯಲಿದೆ. ಈ ಕಾರಣಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಲ್ಲಿ ನಾಳೆ ಸಂಜೆ 6 ಗಂಟೆಯಿಂದ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೇ ಮದ್ಯ ಮಾರಾಟಕ್ಕೂ ನಿಷೇಧ ಹೇರಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ನಾಳೆ ಸಂಜೆ 6 ಗಂಟೆಯಿಂದ ಬೆಂಗಳೂರು ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಐದು ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚುವರಿ ಭದ್ರತೆಯನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ. ನಾಳೆ ಸಂಜೆ 6 ಗಂಟೆಯಿಂದ ಏಪ್ರಿಲ್.26ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ವೇಳೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಬೆಂಗಳೂರಿನ ಐದು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. 13 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 11 ಸಿಆರ್ ಪಿಎಫ್, 14 ಕೆ ಎಸ್ ಆರ್ ಪಿ ಹಾಗೂ 40 ಸಿಎಆರ್ ತುಕಡಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ನಗರ ಪೊಲೀಸ್…
ನವದೆಹಲಿ. 20 ಅಥವಾ ಅದಕ್ಕಿಂತ ಹೆಚ್ಚು ಉದ್ಯೋಗಿಗಳು ಕೆಲಸ ಮಾಡುವ ಕಂಪನಿ, ನೌಕರರ ಭವಿಷ್ಯ ನಿಧಿ ಸಂಸ್ಥೆಯಲ್ಲಿ (ಇಪಿಎಫ್ಒ) ನೋಂದಾಯಿಸಿಕೊಳ್ಳುವುದು ಅವಶ್ಯಕ. ಸಂಘಟಿತ ವಲಯದಲ್ಲಿ ಕೆಲಸ ಮಾಡುವ ಹೆಚ್ಚಿನ ಜನರ ಪಿಎಫ್ ಖಾತೆಯನ್ನು ಕಡಿತಗೊಳಿಸಲು ಇದು ಕಾರಣವಾಗಿದೆ. ಒಬ್ಬ ವ್ಯಕ್ತಿಯು ಉದ್ಯೋಗವನ್ನು ಪ್ರಾರಂಭಿಸಿದಾಗ, ಇಪಿಎಫ್ಒನಿಂದ ಯುನಿವರ್ಸಲ್ ಅಕೌಂಟ್ ನಂಬರ್ (ಯುಎಎನ್) ಅನ್ನು ಪಡೆಯಲಾಗುತ್ತದೆ. ನಿಮ್ಮ ಉದ್ಯೋಗದಾತರು ಈ ಯುಎಎನ್ ಅಡಿಯಲ್ಲಿ ಪಿಎಫ್ ಖಾತೆಯನ್ನು ತೆರೆಯುತ್ತಾರೆ. ನೀವು ಮತ್ತು ನಿಮ್ಮ ಕಂಪನಿ ಇಬ್ಬರೂ ಪ್ರತಿ ತಿಂಗಳು ಅದಕ್ಕೆ ಕೊಡುಗೆ ನೀಡುತ್ತೀರಿ. ಇಪಿಎಫ್ ಖಾತೆಯಿಂದ ಹಣವನ್ನು ಹಿಂಪಡೆಯಲು ತೆರಿಗೆ ಪಾವತಿಸಬೇಕಾಗಿಲ್ಲ ಎಂದು ಅನೇಕ ಉದ್ಯೋಗಿಗಳು ನಂಬುತ್ತಾರೆ. ಆದರೆ, ಇದು ಸಂಪೂರ್ಣವಾಗಿ ನಿಜವಲ್ಲ. ಕೆಲವು ಸಂದರ್ಭಗಳಲ್ಲಿ, ಹಿಂಪಡೆಯುವಿಕೆಗೆ ನೀವು ತೆರಿಗೆ ಪಾವತಿಸಬೇಕಾಗಬಹುದು. ಐದು ವರ್ಷಗಳ ಕಾಲ ಇಪಿಎಫ್ಗೆ ಕೊಡುಗೆ ನೀಡಿದ ನಂತರ ನೀವು ಮೊತ್ತವನ್ನು ಹಿಂತೆಗೆದುಕೊಂಡರೆ, ಇಪಿಎಫ್ ಖಾತೆದಾರರು ಯಾವುದೇ ತೆರಿಗೆ ಪಾವತಿಸಬೇಕಾಗಿಲ್ಲ. ಈಗ ಈ 5 ವರ್ಷಗಳಲ್ಲಿ ನೀವು ಒಂದು ಕಂಪನಿಯಲ್ಲಿ ಅಥವಾ ಒಂದಕ್ಕಿಂತ…
ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಸಿಡಿದೆದ್ದಿದ್ದಾರೆ. ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಬರ ಪರಿಹಾರ ಬಿಡುಗಡೆ ಮಾಡದಂತ ಆಸ್ತ್ರವನ್ನ ಕಾಂಗ್ರೆಸ್ ನಾಯಕರು ಬಳಿಸಿಕೊಂಡು ಧರಣಿ, ಪ್ರತಿಭಟನೆ ಇಳಿದಿದ್ದಾರೆ. ಇಂದು ವಿಧಾನಸೌಧದ ಬಳಿ ಇರುವಂತ ಗಾಂಧಿ ಪ್ರತಿಮೆಯ ಬಳಿಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಸಿಎಂ ಸಿದ್ಧರಾಮಯ್ಯ, ಸಚಿವರು, ಶಾಸಕರು, ಎಂಎಲ್ಸಿಗಳು ಸೇರಿ ಪ್ರತಿಭಟನೆ ಕೈಗೊಂಡಿದ್ದಾರೆ. ಬರ ಪರಿಹಾರ ವಿತರಣೆಯಲ್ಲಿ ಕೇಂದ್ರ ಸರ್ಕಾರದ ಅನ್ಯಾಯ ಖಂಡಿಸಿ ಧರಣೆಯನ್ನು ಕಾಂಗ್ರೆಸ್ ನಾಯಕರಿಂದ ನಡೆಸಲಾಗುತ್ತಿದೆ. ಗೋ ಬ್ಯಾಕ್ ಅಮಿತ್ ಶಾ ಎಂಬುದಾಗಿಯೂ ಘೋಷಣೆ ಕೂಗಿ ಆಕ್ರೋಶವನ್ನು ಹೊರ ಹಾಕಲಾಗುತ್ತಿದೆ. ಇಂದು ಬೆಂಗಳೂರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚುನಾವಣಾ ಪ್ರಚಾರದಲ್ಲಿ ತೊಡಗೋದಕ್ಕೆ ರಾತ್ರಿ ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಗೋ ಬ್ಯಾಕ್ ಘೋಷಣೆ ಕೂಗಿ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಭಿತ್ತಿ ಪತ್ರ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಕೂಡಲೇ ಬರ ಪರಿಹಾರವನ್ನು ಬಿಡುಗಡೆ ಮಾಡುವಂತೆ ಕಾಂಗ್ರೆಸ್ ನಾಯಕರು ಆಗ್ರಹಿಸುತ್ತಿದ್ದಾರೆ.…
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಬೆಂಗಳೂರಲ್ಲಿ ಲೋಕಸಭಾ ಚನಾವಣೆ ಹಿನ್ನಲೆಯಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಮತಬೇಟೆಯಲ್ಲಿ ತೊಡಗಲಿದ್ದಾರೆ. ಬೆಂಗಳೂರಿಗೆ ರಾತ್ರಿ 7.35ಕ್ಕೆ ಹೆಚ್ಎಎಲ್ ಏರ್ ಪೋರ್ಟ್ ಗೆ ಆಗಮಿಸಲಿರುವಂತ ಅವರು, ರಸ್ತೆ ಮಾರ್ಗದ ಮೂಲಕ ರೋಡ್ ಶೋಗೆ ತೆರಳಲಿದ್ದಾರೆ. ರಾತ್ರಿ 7.50ಕ್ಕೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬೊಮ್ಮನಹಳ್ಳಿ ಸರ್ಕಲ್ ಬಳಿ ವಿವೇಕಾನಂದ ವೃತ್ತದಿಂದ ಆರಂಭವಾಗಲಿರುವ ರೋಡ್ ಶೋ ರಾತ್ರಿ 8.45ಕ್ಕೆ ಸೆಂಟ್ ಫ್ರಾನ್ಸಿಸ್ ಸ್ಕೂಲ್ ಬಳಿಯಲ್ಲಿ ಅಂತ್ಯವಾಗಲಿದೆ. ಇಂದು ಬೆಂಗಳೂರಿನಲ್ಲಿನ ಲೋಕಸಭಾ ಚುನಾವಣಾ ಪ್ರಚಾರದ ರೋಡ್ ಶೋ ಮುಗಿದ ಬಳಿಕ, ಅಮಿತ್ ಶಾ ಅವರು ಕೇರಳದ ಕೊಚ್ಚಿನ್ ಗೆ ಪ್ರಯಾಣ ಬೆಳೆಸಲಿದ್ದಾರೆ. https://kannadanewsnow.com/kannada/bengaluru-karaga-mahotsava-today-traffic-restrictions-on-these-roads-heres-the-alternative-route/ https://kannadanewsnow.com/kannada/minor-girl-commits-suicide-by-hanging-herself-after-boyfriend-makes-obscene-video-viral/