Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಯುವ ಪೀಳಿಗೆ ಇಂದು ಮೊಬೈಲ್ ಗೀಳಿಗೆ ಬಿದ್ದಿದ್ದು, ಇವರಿಗೆ ಓದಿನ ರುಚಿ ಹತ್ತಿಸುವ ಮೂಲಕ ನಾಡಿನ ಇತಿಹಾಸ ಪುರುಷರ ಬಗ್ಗೆ ತಿಳಿಸುವ ಅಗತ್ಯತೆ ಇದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಅಭಿಪ್ರಾಯಪಟ್ಟರು. ಕಿತ್ತೂರು ರಾಣಿಚೆನ್ನಮ್ಮ ಜಯಂತಿ ಅಂಗವಾಗಿ ಕನ್ನಡ ಭವನದ ಆವರಣದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯುವ ಜನತೆಗೆ ಮೊಬೈಲ್ ಒಂದೇ ದುನಿಯಾ ಜೀವನ ಆಗಿ ಬಿಟ್ಟಿದೆ.‌ ನಿಜಕ್ಕೂ ಇದು ದುರದೃಷ್ಟಕರ. ಒಂದು ಕುಟುಂಬದಲ್ಲಿ ಪೋಷಕರು ಮತ್ತು ಮಕ್ಕಳು ಒಟ್ಟಿಗೆ ಕುಳಿತಿದ್ದರೆ, ಒಬ್ಬರನ್ನೊಬ್ಬರು ಮಾತನಾಡದ ಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಹಾಗೂ ಯುವ ಪೀಳಿಗೆಗೆ ಇತಿಹಾಸದ ವಾಸ್ತವ ಸ್ಥಿತಿಯನ್ನು ತಿಳಿಸುವ ಮೂಲಕ‌ ಓದಿನ ರುಚಿ ಹತ್ತಿಸುವ ಕೆಲಸ ಆಗಬೇಕಿದೆ. ಮಹನೀಯರ ಜಯಂತಿಗಳನ್ನ ಆಚರಣೆ ಮಾಡುವ ಮೂಲಕ ಅವರ ಇತಿಹಾಸವನ್ನು ಯುವ ಪೀಳಿಗೆಗೆ ತಿಳಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಹೇಳಿದರು. ಚೆನ್ನಮ್ಮ…

Read More

ಬೆಂಗಳೂರು: ಡೇಟಿಂಗ್ ಆಪ್‌ಗಳಲ್ಲಿ ನಕಲಿ ಪ್ರೋಫೈಲ್‌ಗಳ ಹಾವಳಿ ತಪ್ಪಿಸಲು “ಟಿಂಡರ್” ಆಪ್‌ ಮೊದಲ ಬಾರಿಗೆ “ಫೇಸ್ ಚೆಕ್” ಲಾಗಿನ್ ಪರಿಚಯಿಸಿದ್ದು, ಇದು ನಕಲಿ ಪ್ರೊಫೈಲ್ ಗಳನ್ನು ತೆಗೆದುಹಾಕುವಲ್ಲಿ ಉತ್ತಮವಾಗಿ ಕೆಲಸ ಮಾಡಲಿದೆ. ಈ ಮೂಲಕ ಡೇಟಿಂಗ್ ಆಪ್ ಬಳಕೆ ದಾರರಲ್ಲಿ ವಿಶ್ವಾಸ ಬೆಳೆಸುವ ಜೊತೆಗೆ, ತಮ್ಮ ಜೊತೆಗಾರರನ್ನು ಹುಡುಕಲು ಸಹಕಾರಿಯಾಗಲಿದೆ. ಇಂತಹ ವಿಶೇಷ ಆಪ್ಷನ್ ಪರಿಚಯಿಸಿದ ಡೇಟಿಂಗ್ ಆಪ್ನಲ್ಲಿ ಟಿಂಡರ್ ಮೊದಲನೆಯದು. ಇಂದು ನಕಲಿ ಪ್ರೋಫೈಲ್ ಹಾವಳಿ ಹೆಚ್ಚಾಗುತ್ತಿದ್ದು, ಬೇರೊಬ್ಬರ ಹೆಸರಿನಲ್ಲಿ ವಂಚನೆಗಳು ನಡೆಯುತ್ತಿವೆ. ಹೀಗಾಗಿ ಫೇಸ್‌ಚೆಕ್‌ ಲಾಗಿನ್‌ ಮೂಲಕ ಬಳಕೆದಾರರಷ್ಟೇ ತಮ್ಮ ಪ್ರೋಪೈಲ್‌ ನಿರ್ಮಿಸಿ, ಅದನ್ನು ನಿರ್ವಹಣೆ ಮಾಡಲುಸಾಧ್ಯವಾಗುತ್ತದೆ. ಅತಿ ಹೆಚ್ಚು ಯುವಕರೇಇರುವ ಭಾರತದಲ್ಲಿ ಇಂತಹ ಆಪ್ಷನ್‌ ಹೆಚ್ಚು ಅವಶ್ಯಕವಾಗಿತ್ತು ಎಂದು ಮ್ಯಾಚ್ ಗ್ರೂಪ್‌ನ ಟ್ರಸ್ಟ್ & ಸೇಫ್ಟಿಯ ಹಿರಿಯ ಉಪಾಧ್ಯಕ್ಷ ಯೋಯೆಲ್ ರೋತ್ ಅಭಿಪ್ರಾಯಪಟ್ಟರು. “ಫೇಸ್ ಚೆಕ್‌ ನಂತಹ ಸುರಕ್ಷತಾ ವೈಶಿಷ್ಟ್ಯಗಳು ನಕಲಿ ಪ್ರೊಫೈಲ್‌ ಮತ್ತು ವಂಚನೆಯ ವಿರುದ್ಧದ ನಮ್ಮ ಹೋರಾಟದಲ್ಲಿ ನಿರ್ಣಾಯಕ ಸಾಧನವನ್ನು ಒದಗಿಸುತ್ತವೆ, ಇದು ಜನರು…

Read More

ಬೆಂಗಳೂರು: ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ತುರ್ತು ನಿರ್ವಹಣೆ ಕಾರ್ಯ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್‌ ಲೈನ್‌ ಸೇವೆಗಳಾದ ವಿದ್ಯುತ್‌ ಬಿಲ್‌ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್‌ ಲೈನ್‌ ಆಧರಿತ ಸೇವೆಗಳು ಅಕ್ಟೋಬರ್ 24ರ ನಾಳೆ ರಾತ್ರಿ 8 ಗಂಟೆಯಿಂದ ಅಕ್ಟೋಬರ್ 25ರ ಮಧ್ಯಾಹ್ನ1 ಗಂಟೆಯವರೆಗೆ ನಗರ ಪ್ರದೇಶಗಳಲ್ಲಿ ಲಭ್ಯವಿರುವುದಿಲ್ಲ. ಎಲ್ಲಾ ಐದು ವಿದ್ಯುತ್‌ ಸರಬರಾಜು ಕಂಪನಿಗಳ ಈ ಕೆಳಕಂಡ ನಗರ ಉಪ ವಿಭಾಗದ ಗ್ರಾಹಕರಿಗೆ https://www.bescom.co.in, www.hescom.co.in, www.gescomglb.org, www.mescom.org.in ಮತ್ತು .cescmysore.in ಪೋರ್ಟಲ್ ಗಳ ಮೂಲಕ ಮಾಡುವ ಆನ್‌ ಲೈನ್‌ ಸೇವೆಗಳಾದ ಬಿಲ್ ಪಾವತಿ, ಹೊಸ ಸಂಪರ್ಕ ಲಭ್ಯವಿರುವುದಿಲ್ಲ . ಹಾಗೆಯೇ ವಿದ್ಯುತ್ ಬಿಲ್ ಪಾವತಿಗಾಗಿ ಬಳಸುವ ಬೆಸ್ಕಾಂ ಮಿತ್ರ ಆಪ್, ಬೆಂಗಳೂರು ಒನ್, ಕರ್ನಾಟಕ ಒನ್ ಸೇರಿದಂತೆ ಮೊದಲಾದ ಥರ್ಡ್ ಪಾರ್ಟಿ ಪಾವತಿ ವಿಧಾನಗಳಲ್ಲಿ ಆನ್ ಲೈನ್ ಸೇವೆ ಅಲಭ್ಯ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಬೆಸ್ಕಾಂ ಬೆಂಗಳೂರು…

Read More

ಮಂಡ್ಯ: ಜಿಲ್ಲೆಯಲ್ಲಿ ಎಐ ಚಿತ್ರಕ್ಕೆ ಜನರು ಹೈರಾಣಾಗಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಎಐ ಮೂಲಕ ಪೋಟೋ ಎಡಿಟ್ ಮಾಡಿ ಪ್ರವಾಸಿ ತಾಣಗಳಲ್ಲಿ ಹುಲಿ, ಚಿರತೆ ಓಡಾಟವೆಂದು ಹರಿಬಿಟ್ಟ ಕಾರಣ ಭಯಭೀತರಾಗಿದ್ದಾರೆ.  ಹೌದು.. ಮಂಡ್ಯದಲ್ಲಿ ಕಿಡಿಗೇಡಿಗಳ AI ಚಿತ್ರದ ಹುಡುಗಾಟಕ್ಕೆ ಜನರು ಹೈರಾಣಾಗಿದ್ದಾರೆ. AI ಬಳಸಿ ಪ್ರವಾಸಿ ತಾಣದ ಬಳಿ ಹುಲಿ ಮತ್ತು ಚಿರತೆಗಳ ಓಡಾಟದ ಫೋಟೋ ಎಡಿಟ್ ಮಾಡಿದ್ದಾರೆ. ಎಡಿಟ್ ಮಾಡಿದ ಇಂತಹ ಚಿತ್ರಗಳನ್ನು ವೈರಲ್ ಮಾಡಿ ಜನರಲ್ಲಿ ಆತಂಕ‌ವನ್ನು ಕಿಡಿಗೇಡಿಗಳು ಮೂಡಿಸಿದ್ದಾರೆ. ಮಂಡ್ಯದ ಶ್ರೀರಂಗಪಟ್ಟಣದ ಗಂಜಾಮ್ ಬಳಿಯ ಪ್ರವಾಸಿ ತಾಣ ಗುಂಬಸ್ ಬಳಿ ಹುಲಿ ಚಿರತೆ ಕಾಣಿಸಿಕೊಂಡ ವದಂತಿ ಹರಡಲಾಗಿದೆ. ಇದಕ್ಕೆ ಪೂರಕ ಎಂಬಂತೆ AI ಮೂಲಕ ಚಿರತೆ ಹಾಗು ಹುಲಿಗಳ ಫೋಟೋ ಎಡಿಟ್ ಮಾಡಿ ವೈರಲ್ ಆಗಿದೆ.ಇದರ ಜೊತೆಗೆ ಗ್ರಾಮಕ್ಕೆ ಚಿರತೆ ಬಂದ AI ಚಿತ್ರ ಎಡಿಟ್ ಮಾಡಿ ಆತಂಕವನ್ನು ಕಿಡಿಗೇಡುಗಳು ಮಾಡಿದ್ದಾರೆ. ಈ AI ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಜನರಲ್ಲಿ ಆತಂಕ ಉಂಟಾಗಿದೆ. ಇದರ ಅಸಲಿ ಸತ್ಯ ತಿಳಿಯದೆ ಸ್ಥಳೀಯ ಜನರಲ್ಲಿ ಮನೆ ಮಾಡಿದ…

Read More

ಬೆಂಗಳೂರು: ವಿಧ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಬೇಕು ಶಿಕ್ಷಣದೊಂದಿಗೆ ಕ್ರೀಡೆಯೂ ಸಹ ವಿಧ್ಯಾರ್ಥಿಗಳಿಗೆ ಅತ್ಯಂತ ಪ್ರಮುಖವಾಗಿದೆ. ಹಾಗಾಗಿ ಕ್ರೀಡೆಗೆ ಹೆಚ್ಚಿನ ಒತ್ತು ನೀಡಿ ಎಂದು ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಕೆ. ಗೋಪಾಲಯ್ಯ ವಿಧ್ಯಾರ್ಥಿಗಳಿಗೆ ಸಲಹೆ ನೀಡಿದರು. ಮಹಾಲಕ್ಷ್ಮೀಪುರಂ ಬಿಜಿಎಸ್ ಕಾಲೇಜು ಆಟದ ಮೈದಾನದಲ್ಲಿ ಇಂದು ಆಯೋಜಿಸಿದ್ದ ಬಿಜಿಎಸ್ ಪಿಯು ಕಾಲೇಜು ವಿಧ್ಯಾರ್ಥಿಗಳಿಂದ ಕ್ರೀಡೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ಬಿಜಿಎಸ್ ಸಂಸ್ಥೆಯಿಂದ ಕ್ರೀಡಾಪಟುಗಳು ಉತ್ತಮ ರೀತಿ ತರಬೇತಿ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಗಬೇಕು ಎಂದು ತಿಳಿಸಿದರು. ಬಿಜಿಎಸ್ ಸಂಸ್ಥೆಯು ಸಂಸ್ಕಾರ, ಸಂಸ್ಕೃತಿ, ಶಿಕ್ಷಣ, ಅನ್ನದಾಸೋಹ ಇಲ್ಲಿನ ಸಾವಿರಾರು ಜನರಿಗೆ ಉದ್ಯೋಗವನ್ನು ಸೃಷ್ಟಿಸಿದೆ ಹಾಗೂ ರಾಜ್ಯದಲ್ಲಿ 1.6 ಲಕ್ಷಕ್ಕೂ ಹೆಚ್ಚಿನ ವಿಧ್ಯಾರ್ಥಿಗಳಿಗೆ ಶಿಕ್ಷಣವನ್ನು ಕೊಡುತ್ತಿರುವ ಶಿಕ್ಷಣ ಸಂಸ್ಥೆಯನ್ನು ನಿರ್ಮಿಸಿರುವ ಪರಮಪೂಜ್ಯ ಬಾಲಗಂಗಾಧರನಾಥ ಸ್ವಾಮೀಜಿ ಅವರನ್ನು ಕ್ಷಣ ಕ್ಷಣಕ್ಕೂ ಪೂಜಿಸಬೇಕು. ಈ ಸಂಸ್ಥೆಯಲ್ಲಿ ವಿಧ್ಯಾಭ್ಯಾಸ ಪಡೆಯುತ್ತಿರುವ ವಿಧ್ಯಾರ್ಥಿಗಳು ಯುಪಿಎಸ್ಸಿ ವರೆಗೂ ಇಲ್ಲಿ ಶಿಕ್ಷಣ ಪಡೆಯುವ ವ್ಯವಸ್ಥೆಯನ್ನು…

Read More

ಬೆಂಗಳೂರು: ಬಿಗ್ ಬಾಸ್ ಮನೆಗೆ ಪರಿಸರ ನಿಯಮ ಉಲ್ಲಂಘನೆಯಿಂದ ಬೀಗ ಜಡಿದ ಕೇಸ್ ಮಾಸೋ ಮುನ್ನವೇ, ಇದೀಗ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದೆ. ಈ ಸಂಬಂಧ ಹೈಕೋರ್ಟ್ ವಕೀಲ ಪ್ರಶಾಂತ್ ಮೆತಾಲ್ ಎಂಬುವರು ಬಿಗ್ ಬಾಸ್ ಮನೆಯಲ್ಲಿ ಎಸ್ ಪದ ಬಳಕೆ ಮಾಡಿದಕ್ಕೆ ಅಶ್ವಿನಿಗೌಡ ವಿರುದ್ಧ ಬಿಡದಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಸಹ ಸ್ಪರ್ಧಿ ರಕ್ಷಿತಾ ಕುರಿತು ಈ ಮಾತನ್ನು ಆಡಿದ್ದಾರೆ. ಇದೊಂದು ವೈಕ್ತಿತ್ವ ನಿಂದನೆಯಾಗಿ ಅಶ್ವಿನಿಗೌಡ ಆರೋಪಿಸಿದ್ದಾರೆ. ಹೀಗಾಗಿ ಅವರು ಹಾಗೂ ಕಲರ್ಸ್ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್, ಕ್ಲಸ್ಟರ್ ಹೆಡ್ ಸುಷ್ಮಾ ಮತ್ತು ಡೈರೆಕ್ಟರ್ ಪ್ರಕಾಶ್ ವಿರುದ್ಧವೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹೀಗಾಗಿ ಬಿಡದಿ ಪೊಲೀಸ್ ಠಾಣೆಯಲ್ಲಿ ಗಂಭೀರವಲ್ಲದ ಪ್ರಕರಣ ಎಂಬುದಾಗಿ ಎನ್ ಸಿ ಆರ್ ದಾಖಲಿಸಿದ್ದಾರೆ.

Read More

ಬೆಂಗಳೂರು: ಕರ್ನಾಟಕದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾರ್ಥಿಗಳು ಈಗ ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಸರ್ಕಾರ ನಿಗದಿಪಡಿಸಿದ ನಮೂನೆಯಲ್ಲಿ ಬಾಂಡ್ ಸಲ್ಲಿಸಬೇಕು, ಶೈಕ್ಷಣಿಕ ವರ್ಷದ ಅಂತಿಮ ಪ್ರವೇಶ ದಿನಾಂಕದ ನಂತರ ಕೋರ್ಸ್ ಮುಗಿಯುವ ಮೊದಲು ಕೋರ್ಸ್ ಅನ್ನು ತೊರೆದರೆ ದಂಡವಾಗಿ 10 ಲಕ್ಷ ರೂ. ಪಾವತಿಸಬೇಕಾಗುತ್ತದೆ. ಕರ್ನಾಟಕದಲ್ಲಿ ಸ್ನಾತಕೋತ್ತರ ವೈದ್ಯಕೀಯ ಅಥವಾ ದಂತ ಡಿಪ್ಲೊಮಾ ಅಧ್ಯಯನಕ್ಕೆ ದಾಖಲಾದ ವಿದ್ಯಾರ್ಥಿಗಳಿಗೆ ಸೀಟ್ ಲೀವಿಂಗ್ ಬಾಂಡ್ ದಂಡವು 4 ಲಕ್ಷ ರೂ ಆಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2025 ರ ಸ್ನಾತಕೋತ್ತರ ವೈದ್ಯಕೀಯ / ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಇ-ಮಾಹಿತಿ ಬುಲೆಟಿನ್ ಅನ್ನು ಪ್ರಕಟಿಸಿದೆ, ಇದರಲ್ಲಿ ಈ ಕಾರ್ಯಕ್ರಮಗಳಿಗೆ ಸೀಟ್ ಲೀವಿಂಗ್ ಬಾಂಡ್ ಅವಶ್ಯಕತೆಗಳು ಸೇರಿವೆ. ಸೀಟ್ ಖಾಲಿ ಮಾಡುವ ಬಾಂಡ್ ದಂಡದ ಮೊತ್ತದ ಜೊತೆಗೆ, ಕೌನ್ಸೆಲಿಂಗ್ ಸಮಯದಲ್ಲಿ ಆಯ್ಕೆ ಮಾಡಿದ ಸೀಟುಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಷರತ್ತುಗಳನ್ನು ಈ ನಿಯಮಗಳು ವಿವರಿಸುತ್ತವೆ. ಈ ಪ್ರಮುಖ ಷರತ್ತುಗಳು ಸೇರಿವೆ ಮೊದಲ ಸುತ್ತಿನ ಹಂಚಿಕೆಯ…

Read More

ಹಾಸನ: ಜಿಲ್ಲೆಯ ಪ್ರಸಿದ್ಧ ಹಾಸನಾಂಬೆ ದೇವಿ ದರ್ಶನಕ್ಕೆ ಅಧಿಕೃತ ತೆರೆ ಇಂದು ಬಿದ್ದಿದೆ. ದಿನಾಂಕ 10-10-2025ರಿಂದ ಭಕ್ತರ ದರ್ಶನಕ್ಕಾಗಿ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಾಗಿತ್ತು. 13 ದಿನಗಳಲ್ಲಿ ಬರೋಬ್ಬರಿ 26.07 ಲಕ್ಷ ಮಂದಿ ದರ್ಶನವನ್ನು ಪಡೆದಿದ್ದಾರೆ. ಈ ಬಗ್ಗೆ ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದು, ದಿನಾಂಕ 10-10-2025ರಂದು 58 ಸಾವಿರ ಮಂದಿ ದರ್ಶನವನ್ನು ಪಡೆದಿದ್ದಾರೆ. ದಿನಾಂಕ 11-10-2025ರಂದು 2.08 ಲಕ್ಷ ಭಕ್ತರು ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ್ದಾರೆ ಎಂದಿದ್ದಾರೆ. ಹೀಗಿದೆ 13 ದಿನಗಳಲ್ಲಿ ಭಕ್ತರ ದರ್ಶನದ ಅಂಕಿ-ಸಂಖ್ಯೆ ದಿನಾಂಕ 10-10-2025 – 0.58 ಲಕ್ಷ ದಿನಾಂಕ 11-10-2025 – 2.08 ಲಕ್ಷ ದಿನಾಂಕ 12-10-2025 – 1.45 ಲಕ್ಷ ದಿನಾಂಕ 13-10-2025 – 2.29 ಲಕ್ಷ ದಿನಾಂಕ 14-10-2025 – 2.44 ಲಕ್ಷ ದಿನಾಂಕ 15-10-2025 – 2.47 ಲಕ್ಷ ದಿನಾಂಕ 16-10-2025 – 2.58 ಲಕ್ಷ ದಿನಾಂಕ 17-10-2025 – 3.62 ಲಕ್ಷ…

Read More

ರಾಯಚೂರು: “ಬಿಜೆಪಿ ನಾಯಕರಿಗೆ ಕರ್ನಾಟಕ ರಾಜ್ಯದ ಬಗ್ಗೆ ಕಾಳಜಿ ಹಾಗೂ ಬದ್ಧತೆ ಇದ್ದರೆ, ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದರು. ಪಂಚಮುಖಿಯಲ್ಲಿ ಬ್ಲಾಕ್ ಕಾಂಗ್ರೆಸ್ ಮತ್ತು ಕಾರ್ಯಕರ್ತರ ಸಭೆ ಉದ್ದೇಶಿಸಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಬುಧವಾರ ಮಾತನಾಡಿದರು. “ಬಿಜೆಪಿ ನಾಯಕರೇ, ನೀವು ನಿಗದಿ ಮಾಡುವ ಸಮಯಕ್ಕೆ ನಾನು ಬರುತ್ತೇನೆ. ನಾನು ಈಗಾಗಲೇ ಸುಮಾರು 10 ಬಾರಿ ಕೇಂದ್ರ ಸಚಿವರು ಹಾಗೂ ಪ್ರಧಾನಿಗಳ ಮುಂದೆ ಗೋಗರೆದಿದ್ದೇನೆ. ಆದರೂ ಅವರು ಸಹಾಯ ಮಾಡಿಲ್ಲ. ಕೇಂದ್ರ ಬಜೆಟ್ ನಲ್ಲಿ ಘೋಷಿಸಿದ 5300 ಕೋಟಿ ಇದುವರೆಗೂ ಕೊಟ್ಟಿಲ್ಲ. ಹೀಗಾಗಿ ಬಿಜೆಪಿ ಹಾಗೂ ಕೇಂದ್ರ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ” ಎಂದು ಕಿಡಿಕಾರಿದರು. ಕೆಲಸ ಮಾಡುವವರನ್ನು ಪಕ್ಷ ಗುರುತಿಸುತ್ತದೆ “ನಮ್ಮ ದೇಶದಲ್ಲಿ ರಾಮನ ತಂದೆ ದಶರಥ ಮಹಾರಾಜನಿಗಿಂತ ರಾಮನ ಭಂಟ ಹನುಮಂತನ…

Read More

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಎಡಬಿಡದೆ ಮಳೆಯಾಗುತ್ತಿದೆ. ತೀವ್ರ ಮಳೆಯಿಂದಾಗಿ ಸಾಗರ ತಾಲ್ಲೂಕಿನ ಗಂಟಿನಕೊಪ್ಪದಲ್ಲಿ ಮನೆಯೊಂದು ಕುಸಿತಗೊಂಡಿತ್ತು. ವಿಷಯ ತಿಳಿದಂತ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಸಾಂತ್ವಾನ ಹೇಳುವಂತೆ ಕಾಂಗ್ರೆಸ್ ಮುಖಂಡರಿಗೆ ಸೂಚಿಸಿದ್ದರು. ಅದರಂತೆ ಭೇಟಿ ನೀಡಿದಂತ ಕಾಂಗ್ರೆಸ್ ಮುಖಂಡರು, ಸಂತೈಸಿ, ಪರಿಹಾರದ ಭರವಸೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಿಂದ ಗಂಟಿನಕೊಪ್ಪದ ವಾಸಿಗಳಾದ ಪಾರ್ವತಮ್ಮ ಕೋಂ ಬಾಬು ರವರ ಮನೆ ಹಾನಿಯಾಗಿತ್ತು. ಈ ಹಿನ್ನಲೆಯಲ್ಲಿ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರ ನಿರ್ದೇಶನದ ಮೇರೆಗೆ ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ನಗರಸಭೆ ವಿಪಕ್ಷ ನಾಯಕ ಗಣಪತಿ ಮಂಡಗಳಲೆ, ಶಾಸಕರ ಆಪ್ತ ಸಹಾಯಕ ಶ್ರೀನಿವಾಸ ಮೂರ್ತಿ ಹಾಗೂ ಮುಖಂಡರುಗಳು ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವಾನ ಹೇಳಿದರು. ಅಲ್ಲದೇ ಅಗತ್ಯ ಪರಿಹಾರಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಅಂದಹಾಗೇ ಸಾಗರ ತಾಲ್ಲೂಕಿನಲ್ಲಿ ಮಳೆಹಾನಿ ಪ್ರದೇಶಗಳಿಗೆ ಈ…

Read More