Subscribe to Updates
Get the latest creative news from FooBar about art, design and business.
Author: ವಸಂತ್ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಅವರು ಪ್ರಮುಖವಾಗಿ Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಪ್ರಧಾನ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಸಾಹಿತ್ಯ, ಸಾಮಾಜಿಕ ವರದಿಗಾರಿಕೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.2024-25ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸುವುದರಲ್ಲಿ ಪ್ರಮುಖ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ತಾಜಾ ಸುದ್ದಿಗಳು, ಶಿಕ್ಷಕರ ಪ್ರಶಸ್ತಿಗಳ ಪಟ್ಟಿ, ಮತ್ತು ನ್ಯಾಯಾಂಗ ಸಂಬಂಧಿತ ವರದಿಗಳನ್ನು ನೀಡುತ್ತಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಮಂಡ್ಯ : ಪೌತಿ ಖಾತೆ ಮಾಡಲು ಲಂಚಕ್ಕೆ ಬೇಡಿಕೆಯನ್ನು ಪಿಡಿಒ ಇಟ್ಟಿದ್ದರು. ಈ ಸಂಬಂಧ ಲೋಕಾಯುಕ್ತಕ್ಕೆ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಇಂದು 5,000 ಲಂಚದ ಹಣವನ್ನು ಸ್ವೀಕರಿಸುತ್ತಿದ್ದಾಗಲೇ ಪಿಡಿಓ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವಂತ ಘಟನೆ ಮಂಡ್ಯದ ಮದ್ದೂರಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ ಬೆಕ್ಕಳಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮದ್ದೂರಿನ ತಗಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಸಚಿನ್ ಎಂಬುವರು ಪೌತಿ ಖಾತೆ ಮಾಡಿಕೊಡಲು ಚಿಕ್ಕೋನಹಳ್ಳಿ ಗ್ರಾಮದ ಶಿವಲಿಂಗಯ್ಯ ಬಳಿ ಲಂಚಕ್ಕೆ ಬೇಡಿ ಇಟ್ಟಿದ್ದರು. ಈ ಸಂಬಂಧ ಶಿವಲಿಂಗಯ್ಯ ಎಂಬುವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಮಂಡ್ಯದ ಮದ್ದೂರಿನ ಬೆಕ್ಕಳಲೆ ಗ್ರಾಮದಲ್ಲಿ 5,000 ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಪಿಡಿಓ ಸಚಿನ್ ವಶಕ್ಕೆ ಪಡೆದಿದ್ದಾರೆ. ಮಂಡ್ಯ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು, ಕುಮಾರ್ ಹಾಗೂ ಬ್ಯಾಟರಾಯನಗೌಡರಿಂದ ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಮೂಲಕ ಲಂಚ ಪಡೆಯುತ್ತಿದ್ದಾಗಲೇ ಮದ್ದೂರಿನ ತಗಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಸಚಿನ್ ರೆಡ್…
ಶಿವಮೊಗ್ಗ : ಜಿಲ್ಲೆಯಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಅಕ್ಟೋಬರ್.14ರ ನಾಳೆ, ಅಕ್ಟೋಬರ್.15ರ ನಾಡಿದ್ದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತಂತೆ ಮಾಹಿತಿ ನೀಡಿದ್ದು, 66/11 ಕೆವಿ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ನಿರ್ವಾಹಣಾ ಕೆಲಸವಿರುವುದರಿಂದ ನಗರದಲ್ಲಿ ಅ.14 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದಿದೆ. ಅಕ್ಟೋಬರ್.14ರಂದು ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ ಕುವೆಂಪು ನಗರ, ಮ್ಯಾಕ್ಸ್ ಪೂರ್ಣೋದಯ, ಎನ್ಇಎಸ್ ಬಡಾವಣೆ, ಡಿವಿಎಸ್ ಕಾಲೋನಿ, ಜ್ಯೋತಿ ನಗರ, ನವುಲೆ ಕೆರೆ ಹೊಸುರು, ಇಂದಿರಾಗಾAಧಿ ಬಡಾವಣೆ, ಶಿವಬಸವ ನಗರ, ವೀರಭದ್ರೇಶ್ವರ ಲೇಔಟ್, ಪಿಡಬ್ಲ್ಯೂಡಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ನವುಲೆ, ಎಲ್ಬಿಎಸ್ ನಗರ, ಆಶ್ವಥ್ ನಗರ, ಕೀರ್ತಿ ನಗರ, ಸವಳಂಗ ರಸ್ತೆ, ಬಸವೇಶ್ವರ ನಗರ, ಕೃಷಿ ನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪವನಶ್ರೀ ಬಡಾವಣೆ, ಅಮೀರ್ ಅಹಮದ್ ಕಾಲೋನಿ, ವೆಂಕಟಾಪುರ,…
ಬೆಂಗಳೂರು: ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ತಮ್ಮ ಸಂಪುಟ ಸದಸ್ಯರಿಗಾಗಿ ಇಂದು ಆಯೋಜಿಸಿರುವ ಭೋಜನಕೂಟದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಅಂದಹಾಗೇ ಇಂದು ಸಿಎಂ ಸಿದ್ಧರಾಮಯ್ಯ ಅವರು ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಔತಣ ಕೂಟ ಏರ್ಪಡಿಸಿದ್ದಾರೆ. ಇದರ ಹಿಂದೆ ಬಿಹಾರ ವಿಧಾನಸಭಾ ಚುನಾವಣೆ ಬಳಿಕ ಕರ್ನಾಟಕ ಕ್ಯಾಬಿನೇಟ್ ಪುನಾರಚನೆ ಆಗೋದು ಎನ್ನಲಾಗಿತ್ತು.
ಉತ್ತರ ಕನ್ನಡ: ರಾಜ್ಯದಲ್ಲಿ ಹೊರ ರಾಜ್ಯಗಳಿಗೆ ತೆರಳಿದಾಗ ಬಹಳನೇ ಎಚ್ಚರಿಕೆ ವಹಿಸಬೇಕಾಗುತ್ತದೆ. ಕಾರಣ ಸ್ಥಳ, ಭಾಷೆ ಬೇರೆ ಬೇರೆಯಾಗಿದ್ದರೇ, ಮತ್ತೊಂದೆಡೆ ಆ ಪ್ರದೇಶಗಳಲ್ಲಿ ಯಾವೆಲ್ಲ ಕೃತ್ಯಗಳು ನಡೆಯುತ್ತದೆ ಎಂದು ಪ್ರವಾಸಿಗರಾದಂತ ನಿಮಗೆ ತಿಳಿದಿರೋದಿಲ್ಲ. ಹೀಗಾಗಿ ನೀವು ಹೊರ ರಾಜ್ಯಕ್ಕೆ ಪ್ರವಾಸಕ್ಕೆ ಹೋಗ್ತಾ ಇದ್ದೀರಿ ಅಂದರೆ ಅದಕ್ಕಿಂತ ಮೊದಲು ಮುಂದೆ ಸುದ್ದಿ ಓದಿ. ತೀರ್ಥಯಾತ್ರೆಗೆ ತೆರಳಿ, ದೇವರ ದರ್ಶನ ಮುಗಿಸಿ ಹಿಂತಿರುಗುತ್ತಿದ್ದ ಕುಮಟಾ ಕತಗಾಲ ಮಾಸ್ತಿಹಳ್ಳ ಮೂಲದ ಕುಟುಂಬವೊಂದು ಭಯಾನಕ ಅನುಭವದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಮಹಾರಾಷ್ಟ್ರದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ದರೋಡೆಕೋರರು ಲೂಟಿಗೆ ಯತ್ನಿಸಿದ್ದು, ಚಾಲಕನ ಸಮಯಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕುಟುಂಬವೊಂದು, ಸ್ಥಳೀಯ ಗಜಾನನ ಟ್ರಾವೆಲ್ಸ್ನ ಟಿಟಿ ವಾಹನದಲ್ಲಿ ಶಿರಡಿ ಹಾಗೂ ಅಯೋಧ್ಯೆ ಪ್ರವಾಸಕ್ಕೆ ತೆರಳಿತ್ತು. ಪ್ರವಾಸ ಮುಗಿಸಿ ಊರಿಗೆ ಮರಳುತ್ತಿದ್ದಾಗ, ಶುಕ್ರವಾರ ರಾತ್ರಿ ಸೊಲ್ಲಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಈ ಘಟನೆ ನಡೆದಿದೆ. ಆ ಬೆಚ್ಚಿ ಬೀಳಿಸೋ ವೀಡಿಯೋ ಈ…
ಅಜ್ಮೀರ್: ಶುಕ್ರವಾರ ಬೆಳಿಗ್ಗೆ ಅಜ್ಮೀರ್ನ ಜೆಎಲ್ಎನ್ ಆಸ್ಪತ್ರೆಯಲ್ಲಿ ಮಹಿಳಾ ಇಂಟರ್ನ್ ವೈದ್ಯರೊಬ್ಬರು ವೃದ್ಧ ರೋಗಿಯನ್ನು ಪದೇ ಪದೇ ಕಪಾಳಮೋಕ್ಷ ಮಾಡಿ ಒದ್ದ ಘಟನೆ ನಡೆದಿದ್ದು, ಆತಂಕಕಾರಿ ಘಟನೆ ನಡೆದಿದೆ. ಬೆಳಿಗ್ಗೆ 11:09 ಕ್ಕೆ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾದ ಈ ಹಲ್ಲೆ ಘಟನೆ ಶನಿವಾರ ಬೆಳಕಿಗೆ ಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವೀಡಿಯೋ ನೋಡಿದಂತ ಬಳಕೆದಾರರಲ್ಲಿ ಇಂಟರ್ನ್ ವೈದ್ಯೆಯ ನಡೆಗೆ ಭಾರೀ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. https://twitter.com/royalswaroop13/status/1976927971312386365?ref_src=twsrc%5Etfw%7Ctwcamp%5Etweetembed%7Ctwterm%5E1976927971312386365%7Ctwgr%5E832b1a6508acdfa9e2d23fbaaa03bcc812ffb4ac%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fthefreepressjournal-epaper-dhecf5ddffe11b4f36b496f4bee6e60122%2Foncamerainterndoctorslapselderlypatientrepeatedlyfor10minutesatajmerhospitaloverallegedmisbehaviour-newsid-n684768795 ಕಣ್ಣಿನ OPDಯಿಂದ ಹೊರಬರುವಾಗ ವೃದ್ಧ ವ್ಯಕ್ತಿಯ ಭುಜ ಆಕಸ್ಮಿಕವಾಗಿ ಇಂಟರ್ನ್ ವೈದ್ಯರ ಮೇಲೆ ತಗುಲಿ ಘರ್ಷಣೆ ಆರಂಭವಾಯಿತು. ಕಾರಿಡಾರ್ನಲ್ಲಿ ತ್ವರಿತ ಚಲನೆಯಿಂದಾಗಿ ಸಂಪರ್ಕ ಆಕಸ್ಮಿಕವಾಗಿ ಸಂಭವಿಸಿದೆ ಎಂದು ಸಿಸಿಟಿವಿ ದೃಶ್ಯಾವಳಿಗಳು ಸೂಚಿಸುತ್ತವೆ. ಘಟನೆಯ ಸಣ್ಣ ಸ್ವರೂಪದ ಹೊರತಾಗಿಯೂ, ಇಂಟರ್ನ್ ವೈದ್ಯರು OPD ಗೇಟ್ ಬಳಿ ವೃದ್ಧ ವ್ಯಕ್ತಿಯ ಮೇಲೆ ಹಲ್ಲೆ ಮಾಡಲು ಪ್ರಾರಂಭಿಸಿದರು. ನಂತರ ಹಲ್ಲೆ ಮುಂದುವರಿಸುವಾಗ ಅವರ ಶರ್ಟ್ ಹಿಡಿದು ಸಭಾಂಗಣಕ್ಕೆ ಎಳೆದೊಯ್ದರು. ಭದ್ರತಾ ಸಿಬ್ಬಂದಿ ಮತ್ತು ಆಸ್ಪತ್ರೆ ಸಿಬ್ಬಂದಿ…
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ದೂಗೂರಲ್ಲಿ ಅರಣ್ಯ ಪ್ರದೇಶದಲ್ಲಿ ಬೆಳೆದಿದ್ದಂತ ನೀಲಗಿರಿ ಮರಗಳನ್ನು ಕಡಿತಲೆ ಮಾಡಿದಂತ ಇಬ್ಬರ ವಿರುದ್ಧ ಅರಣ್ಯಾಧಿಕಾರಿಗಳು ಕೇಸ್ ದಾಖಲಿಸಿದ್ದಾರೆ. ಅಲ್ಲದೇ ಕಡಿತಲೆ ಮಾಡಿದಂತ ಮರಗಳನ್ನು ಜಪ್ತಿ ಮಾಡಿದ್ದಾರೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ವಲಯ ಅರಣ್ಯಾಧಿಕಾರಿ ಶ್ರೀಪಾದ್ ನಾಯ್ಕ್ ಅವರು ಮಾಹಿತಿ ನೀಡಿದ್ದು, ಸೊರಬದ ದೂಗೂರು ಬಳಿಯ ಸರ್ವೆ ನಂಬರ್ 100ರಲ್ಲಿ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿದ್ದಂತ ನೀಲಗಿರಿ ಮರಗಳನ್ನು ಕಡಿತಲೆ ಮಾಡಿದ್ದಂತ ಖಚಿತ ಮಾಹಿತಿ ದೊರೆತಿತ್ತು. ಈ ಮಾಹಿತಿ ಆಧರಿಸಿ ಉಳವಿಯ ಉಪ ವಲಯ ಅರಣ್ಯಾಧಿಕಾರಿ ಯೋಗರಾಜ.ಕೆ.ಈ, ಗಸ್ತು ಅರಣ್ಯ ಪಾಲಕಿ ಸುಮಿತಾ.ಆರ್, ಮೈಸಾವಿ ಗಸ್ತು ಅರಣ್ಯ ಪಾಲಕ ಪ್ರವೀಣ್ ಕುಮಾರ್ ಹಾಗೂ ವಾಚರ್ ಶ್ರೀಕಾಂತ್ ದಾಳಿ ನಡೆಸಿದ್ದರು ಎಂದು ತಿಳಿಸಿದ್ದಾರೆ. ಈ ದಾಳಿಯ ಸಂದರ್ಭದಲ್ಲಿ ಸೊರಬ ತಾಲ್ಲೂಕಿನ ದೂಗೂರು ಗ್ರಾಮದ ಸರ್ವೆ ನಂಬರ್.100ರಲ್ಲಿ ನೀಲಗಿರಿ ಕಡಿತಲೆ ಮಾಡಿದ್ದು ಕಂಡು ಬಂದಿದೆ. ದೂಗೂರು ಎಂ ಎಫ್ ಅರಣ್ಯದಲ್ಲಿ ಅಕ್ರಮವಾಗಿ ನೀಲಗಿರಿ ಮರಗಳನ್ನು ಕಡಿದು ಬೀಳಿಸಿದನ್ನು…
ಬೆಂಗಳೂರು: ನಗರದ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 50 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿಯನ್ನು ಎನ್ ಸಿ ಬಿ ಅಧಿಕಾರಿಗಳು ಮಾಡಿದ್ದಾರೆ. ಬೆಂಗಳೂರಿನ ಕೆಐಎಬಿಯಲ್ಲಿ ಬರೋಬ್ಬರಿ 50 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಬೆಂಗಳೂರು ವಲಯದ ಎನ್ ಸಿ ಬಿ ಅಧಿಕಾರಿಗಳಿಂದ ಕಾರ್ಯಾಚರಣೆ ನಡೆಸಿ, ಒಟ್ಟು 45 ಕೆಜಿ ಹೈಡ್ರೋಗಾಂಜಾ, 6 ಕೆಜಿ ಸೈಲೋಸಿಬಿನ್ ಅಣಬೆ ಸೀಜ್ ಮಾಡಿದ್ದಾರೆ. ಈ ಪ್ರಕರಣ ಸಂಬಂಧ ಎನ್ ಸಿ ಬಿ ಅಧಿಕಾರಿಗಳಿಂದ ಮೂವರು ಆರೋಪಿಗಳನ್ನು ಬಂಧಿಸಿದ್ದು, ಜಪ್ತಿ ಮಾಡಲಾಗಿರುವಂತ ಡ್ರಗ್ಸ್ ಮೌಲ್ಯವು 50 ಕೋಟಿ ಮೌಲ್ಯದ್ದು ಎನ್ನಲಾಗಿದೆ. ಥೈಲ್ಯಾಂಡ್ ನಿಂದ ಡ್ರಗ್ಸ್ ಸಾಗಾಟದ ಬಗ್ಗೆ ಮಾಹಿತಿ ಸಂಗ್ರಹಿಸಿ ಎನ್ ಸಿ ಬಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅಕ್ಟೋಬರ್.9ರಂದು ಕೊಲಂಬೋದಿಂದ ಬರುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಇಬ್ಬರಿಂದ 31 ಕೆಜಿ ಹೈಡ್ರೋಗಾಂಜಾ, 4 ಕೆಜಿ ಸೈಲೋಸಿಬಿನ್ ಅಣಬೆ ಸೀಜ್ ಮಾಡಿದ್ದರು. ಇಬ್ಬರನ್ನು ವಿಚಾರಣೆ ನಡೆಸಿದಾಗ ಹ್ಯಾಂಡ್ಲರ್ ಶ್ರೀಲಂಕಾದಿಂದ ಬರುವ…
ಶಿವಮೊಗ್ಗ: ಜಿಲ್ಲೆಯಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರ ಮೇಲಿನಿಂದ ಕೆಳಗೆ ಹಾರಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ನಡೆದಿದೆ. ಶಿವಮೊಗ್ಗ ನಗರದ ದುರ್ಗಿಗುಡಿ ರಸ್ತೆಯ ಶನಿ ಮಹಾತ್ಮ ಸ್ವಾಮಿ ದೇವಾಲಯ ಹಿಂಭಾಗದ ರಸ್ತೆಯಲ್ಲಿರುವಂತ ನಿರ್ಮಾಣ ಹಂತದ ಕಟ್ಟಡದ ಮೇಲಿನಿಂದ ಕೆಳಗೆ ಹಾರಿ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದಂತ ಅಮಿತ್(27) ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಉಡುಪಿ ಜಿಲ್ಲೆಯ ಕಾರ್ಕಳ ಮೂಲದ ಅಮಿತ್, ಶಿವಮೊಗ್ಗದ ಹೋಟೆಲ್ ಒಂದರಲ್ಲಿ ಉದ್ಯೋಗ ಮಾಡುತ್ತಿದ್ದನು. ಇಂದು ಸಂಜೆ 4.30ರ ಹಾಗೆ ನಿರ್ಮಾಣ ಹಂತದ ಕಟ್ಟಡ ಮೇಲಿನಿಂದ ಕೆಳಗೆ ಹಾರಿದ್ದನು. ಗಂಭೀರವಾಗಿ ಗಾಯಗೊಂಡ ಅಮಿತ್ ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅಂದಹಾಗೆ ಅಮಿತ್ ಮಧ್ಯಾಹ್ನದವರೆಗೂ ಹೋಟೆಲ್ ನಲ್ಲಿ ಕೆಲಸ ಮಾಡಿದ್ದನು. ಮಧ್ಯಾಹ್ನದ ನಂತ್ರ ಹೋಟೆಲ್ ರಜೆಯಿದ್ದ ಕಾರಣ ಹೊರಗೆ ಬಂದಿದ್ದನು. ಈ ವೇಳೆ ಕಟ್ಟಡದ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವಕ ಅಮಿತ್ ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಈ ಸಂಬಂಧ ಶಿವಮೊಗ್ಗದ ಜಯನಗರ ಪೊಲೀಸ್…
ದಕ್ಷಿಣ ಕೆರೋಲಿನಾ: ಅಸೋಸಿಯೇಟೆಡ್ ಪ್ರೆಸ್ (ಎಪಿ) ಪ್ರಕಾರ, ದಕ್ಷಿಣ ಕೆರೊಲಿನಾದ ಸೇಂಟ್ ಹೆಲೆನಾ ದ್ವೀಪದಲ್ಲಿರುವ ಜನದಟ್ಟಣೆಯ ಬಾರ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ. ಭಾನುವಾರ ಮುಂಜಾನೆ ವಿಲ್ಲೀಸ್ ಬಾರ್ ಮತ್ತು ಗ್ರಿಲ್ನಲ್ಲಿ ಗುಂಡಿನ ದಾಳಿ ನಡೆದಿದ್ದು, ಅಲ್ಲಿ ದೊಡ್ಡ ಜನಸಮೂಹ ಸೇರಿತ್ತು. ಶೆರಿಫ್ ನಿಯೋಗಿಗಳು ಬಂದಾಗ, ಹಲವಾರು ಜನರು ಗುಂಡೇಟಿನಿಂದ ಗಾಯಗೊಂಡಿರುವುದನ್ನು ಅವರು ಕಂಡುಕೊಂಡರು ಎಂದು ಬ್ಯೂಫೋರ್ಟ್ ಕೌಂಟಿ ಶೆರಿಫ್ ಕಚೇರಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ. ನಾಲ್ಕು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಗಾಯಗೊಂಡ 20 ಜನರಲ್ಲಿ, ನಾಲ್ವರು ಹತ್ತಿರದ ಆಸ್ಪತ್ರೆಗಳಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ವರದಿಯಾಗಿದೆ ಎಂದು ಎಪಿ ವರದಿ ಮಾಡಿದೆ. ಶೆರಿಫ್ ಕಚೇರಿ ಈ ಘಟನೆಯನ್ನು “ದುರಂತ ಮತ್ತು ಕಷ್ಟಕರ” ಎಂದು ಬಣ್ಣಿಸಿದೆ ಮತ್ತು ತನಿಖೆಗಳು ಮುಂದುವರೆದಿವೆ ಎಂದು ಹೇಳಿದೆ. ಅಧಿಕಾರಿಗಳು ಇನ್ನೂ ಕೊಲ್ಲಲ್ಪಟ್ಟ ಅಥವಾ ಗಾಯಗೊಂಡವರ ಹೆಸರುಗಳನ್ನು ಬಿಡುಗಡೆ ಮಾಡಿಲ್ಲ. https://kannadanewsnow.com/kannada/opposition-leader-r-ashok-says-the-congress-government-does-not-have-the-power-to-ban-rss/ https://kannadanewsnow.com/kannada/cabinet-post-fixed-for-sagar-constituency-mla-gopalakrishna-belur/
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಆರ್ಎಸ್ಎಸ್ ನಿಷೇಧ ಮಾಡುವ ಅಧಿಕಾರವೇ ಇಲ್ಲ. ಆದರೂ ಸುಮ್ಮನೆ ಮಾತನಾಡುವ ಚಟ ತೋರಿಸುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಿಗೆ ಬುದ್ಧಿ ಭ್ರಮಣೆಯಾಗಿದೆ. ಈ ದೇಶದ ಪ್ರಧಾನಿ, ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಜ್ಯದ ರಾಜ್ಯಪಾಲರು, ಕೇಂದ್ರ ಗೃಹ ಸಚಿವರು ಹೀಗೆ ಎಲ್ಲರೂ ರಾಷ್ಟ್ರೀಯ ಸ್ವಯಂಸೇವಕ ಸಂಘದವರೇ ಆಗಿದ್ದಾರೆ. ಭಯೋತ್ಪಾದಕರಿಗೆ ಕುಮ್ಮಕ್ಕು ನೀಡುವ ಕಾಂಗ್ರೆಸ್ ಪಕ್ಷವನ್ನು ಮೊದಲು ನಿಷೇಧ ಮಾಡಬೇಕಿದೆ. ಕಾಂಗ್ರೆಸ್ ಪಕ್ಷ ಸೀಮಿತವಾಗಿದೆ. ಆದರೆ ಆರ್ಎಸ್ಎಸ್ ಇಡೀ ದೇಶದಲ್ಲಿದೆ. ಆರ್ಎಸ್ಎಸ್ ಮುಟ್ಟಲು ಯಾರಿಗೂ ಸಾಧ್ಯವಿಲ್ಲ. ಈ ಸಂಘ ರಾಷ್ಟ್ರೀಯತೆಯನ್ನು ಕಲಿಸುವ ಒಂದು ಕೇಂದ್ರ. ಅಲ್ಲಿಗೆ ಯಾರು ಬೇಕಾದರೂ ಹೋಗಿ ಭಾಗವಹಿಸಬಹುದು. ಕಾಂಗ್ರೆಸ್ಗೆ ಆರ್ಎಸ್ಎಸ್ ನಿಷೇಧ ಮಾಡುವಷ್ಟು ತಾಕತ್ತು ಇಲ್ಲ ಎಂದರು. ಒಬ್ಬ ಸಚಿವನನ್ನು ಯಾರೂ ಲೆಕ್ಕಕ್ಕೆ ತೆಗೆದುಕೊಳ್ಳುವುದಿಲ್ಲ. ಆನೆಗೆ ಸೊಳ್ಳೆ ಬಂದು ಕಥೆ ಹೇಳುವಂತೆ ಆಗಿದೆ. ಸಿಎಂ ಸಿದ್ದರಾಮಯ್ಯನವರಿಗೆ ಏನು ಮಾಡುತ್ತಿದ್ದೇನೆ ಎಂದು ತಿಳಿದಿಲ್ಲ. ಸಚಿವ ಜಮೀರ್ ಅಹ್ಮದ್ ಆರ್ಎಸ್ಎಸ್ ಬಗ್ಗೆ…














