Subscribe to Updates
Get the latest creative news from FooBar about art, design and business.
Author: kannadanewsnow09
ಬಳ್ಳಾರಿ: ಇಲ್ಲಿ ಡಿಸೆಂಬರ್ ನಲ್ಲಿ ನಡೆಯಲು ನಿರ್ಧರಿಸಿರುವಂತ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಕ್ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ. ಇಂದು ಬಳ್ಳಾರಿಯಲ್ಲಿ ನಡೆದಂತ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಸಭೆ ನಡೆಯಿತು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಷಿ, ಡಿಸೆಂಬರ್ ನಲ್ಲಿ ಬಳ್ಳಾರಿಯಲ್ಲಿ ಜರುಗಲಿರುವಂತ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಕ್ ಅವರ ಹೆಸರನ್ನು ಇಂದಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅಂತಿಮಗೊಳಿಸಿರುವುದಾಗಿ ತಿಳಿಸಿದರು. ಇದೇ ಸಂದರ್ಭದಲ್ಲಿ ದೀಪ ಬಾಸ್ತಿ ಅವರನ್ನು ಗೌರವಿಸಿ ಸನ್ಮಾನಿಸಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ. https://kannadanewsnow.com/kannada/breaking-the-psi-injured-in-an-accident-in-bangalore-may-have-succumbed-to-treatment/ https://kannadanewsnow.com/kannada/big-news-the-government-will-remain-stable-for-5-years-and-siddaramaiah-will-be-the-cm-minister-h-c-mahadeveappa/
ನಿಮ್ಮ ಜೀವನದ ಸಣ್ಣ ಅಗತ್ಯಗಳನ್ನು ಪೂರೈಸುವುದರಿಂದ ಹಿಡಿದು ದೊಡ್ಡ ಅಗತ್ಯಗಳನ್ನು ಪೂರೈಸುವವರೆಗೆ, ನೀವು ಈ ಹಾಸಿಗೆಯನ್ನು ಪ್ರಯತ್ನಿಸಬಹುದು. ನೀವು ಈ ಪರಿಹಾರವನ್ನು ನಿಮ್ಮ ಜೀವನದ ಒಳಿತಿಗಾಗಿ ಮಾತ್ರ ಬಳಸಬೇಕು. ಇತರರಿಗೆ ಹಾನಿ ಮಾಡುವ ಉದ್ದೇಶದಿಂದ ಅಥವಾ ಅದು ಇತರರಿಗೆ ಹಾನಿ ಮಾಡುತ್ತದೆ ಎಂದು ಅವರು ಭಾವಿಸಿದರೆ ಯಾರೂ ಈ ಪರಿಹಾರವನ್ನು ಪ್ರಯತ್ನಿಸಬಾರದು. ಈ ಪರಿಹಾರವನ್ನು ಒಳ್ಳೆಯದಕ್ಕಾಗಿ ಮಾತ್ರ ಬಳಸಬೇಕು. ನಮ್ಮ ದೈನಂದಿನ ಜೀವನದಲ್ಲಿ ಸಮಸ್ಯೆಗಳು ಸ್ವಲ್ಪ ಸ್ವಲ್ಪವಾಗಿ ಬರುತ್ತವೆ. ಸಣ್ಣಪುಟ್ಟ ತಪ್ಪುಗಳು ಸಂಭವಿಸುತ್ತವೆ. ಈ ಪರಿಹಾರವು ನಿಮ್ಮ ದೈನಂದಿನ ಅಗತ್ಯಗಳನ್ನು ಪೂರೈಸಲು, ತಪ್ಪುಗಳನ್ನು ಸರಿಪಡಿಸಲು ಮತ್ತು ಸಮಸ್ಯೆಗಳನ್ನು ನಿವಾರಿಸಲು ಖಂಡಿತವಾಗಿಯೂ ಸಹಾಯ ಮಾಡುತ್ತದೆ. ಉದಾಹರಣೆಗೆ, ಅವರು ತಮ್ಮ ಬೈಸಿಕಲ್ ಕೀಲಿಗಳನ್ನು ಆತುರದಲ್ಲಿ ಕಳೆದುಕೊಳ್ಳುತ್ತಾರೆ. ಅವರು ಆತುರದಲ್ಲಿ ತಮ್ಮ ಎಟಿಎಂ ಕಾರ್ಡ್ ಅನ್ನು ಕಳೆದುಕೊಳ್ಳುತ್ತಾರೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ…
ಬೆಂಗಳೂರು: 2025-26 ನೇ ಸಾಲಿನಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಧಾರವಾಡ ಜಿಲ್ಲೆಗೆ ಸೇರಿದ ಹಿಂದುಳಿದ ವರ್ಗಗಳ ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ, ಮತ್ತು ಪ್ರವರ್ಗ-3ಬಿ ವರ್ಗಕ್ಕೆ ಸೇರಿದ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಅವಧಿಯಲ್ಲಿ ತರಬೇತಿ ಭತ್ಯೆ ಪಾವತಿಸುವ ಕಾರ್ಯಕ್ರಮದಡಿ ಅರ್ಹ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಎರಡನೇ ತಂಡದ ಅಭ್ಯರ್ಥಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಪ್ರರ್ಗ-1 ರ ಅಭ್ಯರ್ಥಿಯ ಕುಟುಂಬದ ವಾರ್ಷಿಕ ರೂ. 3.50 ಲಕ್ಷ ಆದಾಯ ಮಿತಿ ಹೊಂದಿದ್ದು 40 ವರ್ಷದೊಳಗಿನವರಾಗಿರಬೇಕು. ಪ್ರವರ್ಗ-2ಎ, ಪ್ರವರ್ಗ-3ಎ, ಮತ್ತು ಪ್ರವರ್ಗ-3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಆದಾಯ 2.50 ಲಕ್ಷ ಆದಾಯ ಮಿತಿ ಹೊಂದಿದ್ದು 38 ವರ್ಷದೂಳಗಿನವರಾಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.4,000 ಭತ್ಯೆಯನ್ನು 4 ವರ್ಷಗಳವರೆಗೆ ನೀಡಲಾಗುವುದು. ಕಾನೂನು ಪದವೀಧರರಿಗೆ ವಕೀಲ ವೃತ್ತಿಯಲ್ಲಿ ನ್ಯಾಯಾಂಗ ಸೇವೆಯ ಪೂರ್ವ ತರಬೇತಿ ಪಡೆಯಲು ಪದವಿ ಪಡೆದ 2 ವರ್ಷದೊಳಗಿನ ಅವಧಿಯ ಅರ್ಹ ಆಸಕ್ತಿಯುಳ್ಳ ಕಾನೂನು ಪದವೀಧರರು ಜುಲೈ 31, 2025 ರೊಳಗಾಗಿ…
ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಮೀನಹಳ್ಳಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ಜೂ.29 ರಂದು ಬೆಳಿಗ್ಗೆ 9 ಗಂಟೆಯಿAದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-2 ಚಾಗನೂರು ಐಪಿ ಫೀಡರ್ ಮಾರ್ಗದ ಮೀನಹಳ್ಳಿ, ಶಿಡಿಗಿನಮೋಳ, ಕೆ.ವೀರಾಪುರ ಕಾರೆಕಲ್ಲು, ಚಾಗನೂರು ಕೃಷಿ ಪ್ರದೇಶಗಳು. ಎಫ್-1 ಮೀನಹಳ್ಳಿ/ ಕೆ.ವೀರಾಪುರ ಎನ್.ಜೆ.ವೈ ಫೀಡರ್ ಮಾರ್ಗದ ಮೀನಹಳ್ಳಿ, ಶಿಡಿಗಿನಮೋಳ, ಕೆ.ವೀರಾಪುರ, ಕಾರೆಕಲ್ಲು ಗ್ರಾಮಗಳು. ಎಫ್-4 ಎ.ಟಿ.ಪಿ.ಎಸ್ ಎನ್.ಜೆ.ವೈ ಫೀಡರ್ ಮಾರ್ಗದ ಹಗರಿ, ಪಿ.ಡಿ.ಹಳ್ಳಿ, ಕಗ್ಗಲ್, ಲಿಂಗದೇವನಹಳ್ಳಿ, ಯಾಳ್ಪಿ, ಜೋಳದರಾಶಿ, ಚೆಳ್ಳಗುರ್ಕಿ ಗ್ರಾಮಗಳು. ಎಫ್-5 ಹಗರಿ ಐಪಿ ಫೀಡರ್ ಮಾರ್ಗದ ಹಗರಿ, ಪಿ.ಡಿ.ಹಳ್ಳಿ, ಕಗ್ಗಲ್, ಲಿಂಗದೇವನಹಳ್ಳಿ, ಯಾಳ್ಪಿ, ಜೋಳದರಾಶಿ, ಚೆಳ್ಳಗುರ್ಕಿ ಕೃಷಿ ಪ್ರದೇಶಗಳು. ಎಫ್-6 ಫೀಡರ್ ಮಾರ್ಗದ ಎ-ಒನ್ ಗೋಲ್ಡ್ ಪೈಪ್ಸ್ ಮತ್ತು ಟೂಬ್ಸ್. ಮೆ.ಜಾನಕಿ ಕಾರ್ಪೋ,ಪ್ರೆöÊ.ಲಿ., ಮೆ.ಬಸಾಯಿ ಸ್ಟೀಲ್ ಪ್ರೆöÊ.ಲಿ., ಮೆ.ಕ್ಲೀನ್ ಮ್ಯಾಕ್ಸ್ ಸೋಲಾರ್, ಕ್ಲೀನ್ ಸೋಲಾರ್, ಮೆ.ಮೌರ್ಯ…
ಮಂಡ್ಯ: ಮಾಜಿ ಶಾಸಕರ ಊರಿಂದ ಹಾಲಿ ಶಾಸಕರ ಹುಟ್ಟೂರಿಗೆ ಪೊಲೀಸ್ ಠಾಣೆ ಶಿಫ್ಟ್ ವಿರೋಧಿಸಿ ಬೀದಿಗಿಳಿದಿದ್ದಾರೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ ವಿರುದ್ದ ಚಿನಕುರುಳಿ ಗ್ರಾಮಸ್ಥರು ರೊಚ್ಚಿಗೆದ್ದಿದ್ದಾರೆ. ಅಲ್ಲದೇ ಚಿನಕುರುಳಿ ಗ್ರಾಮ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಚಿನಕುರುಳಿ ಗ್ರಾಮಸ್ಥರು ಇಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹುಟ್ಟೂರು ಕ್ಯಾತನಹಳ್ಳಿಗೆ ಪೊಲೀಸ್ ಠಾಣೆ ಶಿಫ್ಟ್ ಮಾಡಲು ನಿರ್ಧಾರವನ್ನು ವಿರೋಧಿಸಿ, ಬೃಹತ್ ಪ್ರತಿಭಟನೆ ನಡೆಸಿದರು. ಶಾಸಕರ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಚಿನಕುರುಳಿಯಲ್ಲಿದ್ದ ಉಪ ಪೊಲೀಸ್ ಠಾಣೆಯನ್ನು ಮೇಲ್ದರ್ಜೆಗೆರಿಸಲು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮನವಿ ಮಾಡಿದ್ದರು. ಹೆಚ್ ಡಿ ಕುಮಾರಸ್ವಾಮಿ ಮನವಿಗೆ ಸ್ಪಂದಿಸಿ ಒಪ್ಪಿಗೆಯನ್ನು ರಾಜ್ಯ ಗೃಹ ಇಲಾಖೆ ಸೂಚಿಸಿತ್ತು. ಇದರ ನಡುವೆ ಚಿನಕುರುಳಿ ಪೊಲೀಸ್ ಠಾಣೆಯನ್ನು ಕ್ಯಾತನಹಳ್ಳಿಗೆ ಶಿಫ್ಟ್ ಮಾಡುವುದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಶಾಸಕರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂಬುದಾಗಿ ಆಕ್ರೋಶವನ್ನು ಹೊರ ಹಾಕಿದರು. ಕ್ಯಾತನಹಳ್ಳಿಗೂ ಪೊಲೀಸ್ ಠಾಣೆ ಮಾಡಲಿ, ಜೊತೆಗೆ…
ನಾಟಿಂಗ್ಹ್ಯಾಮ್: ಸ್ಮೃತಿ ಮಂಧಾನ ತಮ್ಮ ಚೊಚ್ಚಲ ಟಿ20 ಶತಕ ಗಳಿಸುವ ಮೂಲಕ ಇತಿಹಾಸ ಪುಸ್ತಕಗಳಲ್ಲಿ ತಮ್ಮ ಹೆಸರನ್ನು ಬರೆದಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್ನ ಮೂರು ಸ್ವರೂಪಗಳಲ್ಲಿ ಶತಕ ದಾಖಲಿಸಿದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಕೇವಲ 51 ಎಸೆತಗಳಲ್ಲಿ ಅದ್ಭುತ ಶತಕ ಬಾರಿಸಿ ಈ ಮೈಲಿಗಲ್ಲು ತಲುಪಿದರು. ಇನ್ನಿಂಗ್ಸ್ ಆರಂಭಿಸಿದ ಮಂಧಾನಾ, ಬೌಂಡರಿ ಮತ್ತು ಸಿಕ್ಸರ್ಗಳ ಸುರಿಮಳೆಯೊಂದಿಗೆ ಇಂಗ್ಲಿಷ್ ಬೌಲಿಂಗ್ ಗಳನ್ನು ಬಗ್ಗು ಬಡಿದರು. ಆರಂಭದಿಂದಲೇ ಅವರು ಇಚ್ಛಾಶಕ್ತಿಯನ್ನು ಪ್ರದರ್ಶಿಸಿದರು. ಆಕ್ರಮಣಕಾರಿ ವಿಧಾನದೊಂದಿಗೆ ಪವರ್ಪ್ಲೇ ಅನ್ನು ಸಂಪೂರ್ಣವಾಗಿ ಬಳಸಿಕೊಂಡರು. ಬೌಂಡರಿಯೊಂದಿಗೆ ಇನ್ನಿಂಗ್ಸ್ ಅನ್ನು ಪ್ರಾರಂಭಿಸಿದರು ಮತ್ತು ಅವರ ಉಳಿದ ಇನ್ನಿಂಗ್ಸ್ನಲ್ಲಿ ವೇಗವನ್ನು ಕಾಯ್ದುಕೊಂಡರು. ಏತನ್ಮಧ್ಯೆ, ಅರ್ಧಶತಕವನ್ನು ಪೂರ್ಣಗೊಳಿಸಿದ ನಂತರ, ಟಿ20ಐ ಕ್ರಿಕೆಟ್ ಇತಿಹಾಸದಲ್ಲಿ ಇಂಗ್ಲೆಂಡ್ ವಿರುದ್ಧ ಅತಿ ಹೆಚ್ಚು 50+ ಸ್ಕೋರ್ಗಳನ್ನು ಗಳಿಸಿದ ಬೆತ್ ಮೂನಿ ಅವರ ದಾಖಲೆಯನ್ನು ಮಂಧಾನ ಸರಿಗಟ್ಟಿದರು. ಆಸ್ಟ್ರೇಲಿಯಾ ನಾಯಕಿ ಎಂಟು ಶತಕಗಳನ್ನು ಗಳಿಸಿದ್ದರು ಮತ್ತು ಈಗ ಮಂಧಾನಾ ಅವರ ಜೊತೆ ಅಗ್ರಸ್ಥಾನದಲ್ಲಿದ್ದಾರೆ. ಮೆಗ್…
ಉತ್ತರ ಪ್ರದೇಶ: ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru – RCB) ತಂಡದ ವೇಗದ ಬೌಲರ್ ಯಶ್ ದಯಾಳ್ ( fast bowler Yash Dayal ) ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಐಪಿಎಲ್ 2025 ಗೆದ್ದ ಆರ್ಸಿಬಿ ವೇಗಿ ಮೇಲೆ ಅವರ ಸಂಗಾತಿ ದೈಹಿಕ ಮತ್ತು ಮಾನಸಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ಕಚೇರಿಗೂ ಅಧಿಕೃತ ದೂರು ತಲುಪಿದೆ. ಕಿರುಕುಳ ಪ್ರಕರಣದಲ್ಲಿ ಆರೋಪಿಯಾಗಿರುವ ಯಶ್ ದಯಾಳ್ ಒನ್ಕ್ರಿಕೆಟ್ ವರದಿಯ ಪ್ರಕಾರ, ಆರ್ಸಿಬಿ ವೇಗಿ ಯಶ್ ದಯಾಳ್ ಕಾನೂನು ತೊಂದರೆಗೆ ಸಿಲುಕಿದ್ದಾರೆ. ವರದಿಯ ಪ್ರಕಾರ, ಕಳೆದ ಐದು ವರ್ಷಗಳಿಂದ ತಾನು ವೇಗದ ಬೌಲರ್ ಜೊತೆ ಸಂಬಂಧ ಹೊಂದಿರುವುದಾಗಿ ಸಂತ್ರಸ್ತೆ ಹೇಳಿಕೊಂಡಿದ್ದಾಗಿ ಎಫ್ಐಆರ್ ಉಲ್ಲೇಖಿಸಲಾಗಿದೆ. ಅವರು ಪರಸ್ಪರರ ಕುಟುಂಬಗಳನ್ನು ಭೇಟಿಯಾಗಿದ್ದರು. ದಯಾಳ್ ತನ್ನನ್ನು ಮಾನಸಿಕವಾಗಿ, ದೈಹಿಕವಾಗಿ ಮತ್ತು ಆರ್ಥಿಕವಾಗಿ ಶೋಷಿಸಿದ್ದಾರೆ ಎಂದು ಎಫ್ಐಆರ್ ಆರೋಪಿಸಿದೆ. ಯಶ್ ದಯಾಳ್ ಇತರ ಮಹಿಳೆಯರೊಂದಿಗೆ ಸಹ ಇದೇ ರೀತಿಯ…
ಬೆಂಗಳೂರು: ದಿನಾಂಕ 30.06.2025 (ಸೋಮವಾರ) ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 4:00 ಗಂಟೆಯವರೆಗೆ “66/11 ಕೆ.ವಿ ಹೆಣ್ಣೂರು ರೋಡ ಉಪ-ಕೇಂದ್ರ” ದಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಬೆಂಗಳೂರಿನ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಹೆಣ್ಣೂರು ಬಂಡೆ, ಸಮುದ್ರಿಕಾ ಎನ್ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ಟ್ ಜಯಂತಿ ಕಾಲೇಜ್, ಕೆ.ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್ಶಿಪ್, ನಗರಗಿರಿ ಟೌನ್ಶಿಪ್, ಕೆ.ನಾರಾಯಣಪುರ ಕ್ರಾಸ್, ಬಿ.ಡಿ.ಎಸ್. ಗಾರ್ಡನ್, ಕೊತನೂರು, ಪಟೇಲ್ ರಾಮಯ್ಯ ಲೇಔಟ್, ಅಂಜನಪ್ಪ ಲೇಔಟ್, ಸಿ.ಎಸ್.ಐ ಗೇಟ್, ಬೈರತಿ ಕ್ರಾಸ್, ಬೈರತಿ ಹಳ್ಳಿ, ಎವರ್ ಗ್ರೀನ್ ಲೇಔಟ್, ಕನಕ ಶ್ರೀ ಲೇಔಟ್, ಗೆದ್ದಲ ಹಳ್ಳಿ, ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್ಮೆಂಟ್, ಹಿರೇಮಠ ಲೇಔಟ್, ಟ್ರಿನಿಟಿ ಫಾರ್ಚೂನ್, ಮೈಕಲ್ ಸ್ಕೂಲ್, ಬಿ.ಹೆಚ್.ಕೆ. ಇಂಡಸ್ಟ್ರೀಸ್ ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ. ಜಾನಕೀ ರಾಮ್ ಲೇಔಟ್, ವಡ್ಡರ ಪಾಳ್ಯ, ಅನುಗ್ರಹ ಲೇಔಟ್, ಕಾವೇರಿ ಲೇಔಟ್, ಆತ್ಮ ವಿದ್ಯಾನಗರ, ಬೈರತಿ ಹಳ್ಳಿ,…
ಬೆಂಗಳೂರು: ಕರ್ನಾಟಕದ ನಂದಿನಿಯು ದೇಶದ ಅತ್ಯುನ್ನತ ಬ್ರಾಂಡ್ ಗಳಲ್ಲೊಂದಾಗಿದೆ. ಈ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ಮೆರುಗನ್ನು ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಮೂಡಿಸಿದೆ. ಅಪ್ಪಟ ಕನ್ನಡ ಬ್ರ್ಯಾಂಡ್ ನಂದಿನಿಯು $1,079 ಮಿಲಿಯನ್ (₹9,009.65 ಕೋಟಿ) ಮೌಲ್ಯದೊಂದಿಗೆ ‘ಬ್ರ್ಯಾಂಡ್ ಫೈನಾನ್ಸ್ 2025’ರ ಪಟ್ಟಿಯಲ್ಲಿ 38ನೇ ಸ್ಥಾನಕ್ಕೆ ಏರಿದೆ. ಕಳೆದ ವರ್ಷ ನಂದಿನಿ ಭಾರತದ ಟಾಪ್ 100 ಅಮೂಲ್ಯ ಬ್ರ್ಯಾಂಡ್ಗಳ ಪಟ್ಟಿಯಲ್ಲಿ 43ನೇ ಸ್ಥಾನದಲ್ಲಿತ್ತು. ಬ್ರ್ಯಾಂಡ್ ಫೈನಾನ್ಸ್ ಲಂಡನ್ ಮೂಲದ ಅಂತರರಾಷ್ಟ್ರೀಯ ಸಲಹಾ ಸಂಸ್ಥೆಯಾಗಿದೆ. ಆಹಾರ ಮತ್ತು ಪಾನೀಯ ವಿಭಾಗದಲ್ಲಿ 4ನೇ ಸ್ಥಾನ ಪಡೆದಿರುವ ನಂದಿನಿಯು ಅಮುಲ್, ಬ್ರಿಟಾನಿಯಾ ಮತ್ತು ಮದರ್ ಡೈರಿಗಳಂತಹ ದೊಡ್ಡದೊಡ್ಡ ಬ್ರ್ಯಾಂಡ್ಗಳ ಜೊತೆಗೆ ಸ್ಪರ್ಧಿಸುತ್ತಿದೆ. ನಂದಿನಿಯು ಜಾಗತಿಕ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವುದು ಸರ್ಕಾರದ ಸಂಕಲ್ಪ, ರೈತರ ಶ್ರಮ ಮತ್ತು ಹೆಚ್ಚುತ್ತಿರುವ ಗ್ರಾಹಕರ ವಿಶ್ವಾಸಾರ್ಹತೆಯ ಪ್ರತಿಬಿಂಬವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. https://twitter.com/CMofKarnataka/status/1938904635609117069 https://kannadanewsnow.com/kannada/krishnarajasagara-reservoir-is-overflowing-cm-siddaramaiah-to-dedicate-the-baghina-on-june-30/ https://kannadanewsnow.com/kannada/doctor-demands-bribe-for-the-renewal-of-contract-staff-nurses-audio-goes-viral/
ಬೆಂಗಳೂರು: ಮೈದುಂಬಿ ಹರಿಯುತ್ತಿರುವ ಕೃಷ್ಣರಾಜಸಾಗರ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜೂನ್ 30 ರಂದು ಬಾಗಿನ ಅರ್ಪಿಸಲಿದ್ದಾರೆ. 1940ರ ಬಳಿಕ ಇದೇ ಮೊದಲ ಬಾರಿಗೆ ಜೂನ್ ತಿಂಗಳಿಗೆ ನೀರಿನ ಮಟ್ಟ 124 ಅಡಿ ತಲುಪಿರುವುದು ವಿಶೇಷ. https://twitter.com/KarnatakaVarthe/status/1938930458689184215 ಕೆಆರ್ ಎಸ್ ಡ್ಯಾಂ ಭರ್ತಿಯಾಗಿದ್ದು, ಜೂನ್ 30 ರಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಾಗಿನ ಅರ್ಪಿಸಲಿದ್ದಾರೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಕಾವೇರಿ ಅಚ್ಚುಕಟ್ಟಿನಲ್ಲಿ ತುಂಬಿ ತುಳುಕುತಿದೆ. ಸಿಎಂ ಸಿದ್ದರಾಮಯ್ಯ, ಡಿಕೆಶಿ ಅವರು ಸೋಮವಾರ 30 ರಂದು KRS ಡ್ಯಾಂ ಗೆ ಭಾಗಿನ ಅರ್ಪಿಸಲಿದ್ದಾರೆ ಎಂದಿದ್ದಾರೆ. ಸ್ವತಂತ್ರ ಪೂರ್ವ ಕೆಂಪೇಗೌಡರು ಬೆಂಗಳೂರು ಕಟ್ಟಿದ್ದಾರೆ. ಮುಂದಿನ ಉದ್ದೇಶ ಇಟ್ಟುಕೊಂಡು ಈ ಬೃಹತ್ ಬೆಂಗಳೂರು ಕಟ್ಟಿದ್ದಾರೆ. ಅವರನ್ನು ನಾವು ಪೂಜಿಸುವ ಕೆಲಸ ಮಾಡಬೇಕು. ಬೆಂಗಳೂರು ನಗರ ಇಲ್ಲದಿದ್ದರೆ ಕರ್ನಾಟಕಕ್ಕೆ ಮಹತ್ವ ಸಿಲ್ತಿರಲಿಲ್ಲ. ದೊಡ್ಡ ಮಟ್ಟದಲ್ಲಿ ಬೆಂಗಳೂರು ಬೆಳೆದಿರುವುದಕ್ಕೆ ಕೆಂಪೇಗೌಡರು ಕಾರಣ ಎಂದು ಹೇಳಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಹಳೆ ಮೈಸೂರು…












