Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಇಂದು ಜಾಮೀನಿನ ನಿರೀಕ್ಷೆಯಲ್ಲಿದ್ದಂತ ಅವರಿಗೆ ಕೋರ್ಟ್ ಅರ್ಜಿಯ ವಿಚಾರಣೆ ನಾಳೆಗೆ ಮುಂದೂಡಿಕೆ ಮಾಡಿದೆ. ಇಂದು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧದ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಪ್ರಕರಣದ 11 ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ನಡೆಸಿದಂತ ಕೋರ್ಟ್ ಮುಂದೆ ಎಸ್ ಪಿಪಿ ಪ್ರಸನ್ನಕುಮಾರ್ ಅವರು ವಾದ ಮಂಡಿಸಿದರು. ಕೊಲೆಯಾದಂತ ರೇಣುಕಾಸ್ವಾಮಿ ಗೌತಮ್ ಎಂಬ ಹೆಸರಿನ ಇನ್ಸ್ ಸ್ಟಾಗ್ರಾಂನಿಂದ ಪವಿತ್ರಾ ಗೌಡ ಅವರಿಗೆ ಫೆಬ್ರವರಿ 27, 2024ರಂದು ಮೆಸೇಜ್ ಮಾಡಿದ್ದಾನೆ. ಹೀಗೆ ಕಳುಹಿಸಿದ್ದಂತ ಸಂದೇಶಕ್ಕೆ ಪವೀತ್ರಾ ಗೌಡ ಅವರು ಜೂನ್ ನಲ್ಲಿ ರೇಣುಕಾಸ್ವಾಮಿ ಟ್ರ್ಯಾಪ್ ಮಾಡುವಂತ ಅವಶ್ಯಕತೆ ಏನಿತ್ತು? ಪವಿತ್ರಾ ಗೌಡ ಅವರು ಪೊಲೀಸರಿಗೆ ದೂರು ನೀಡಬಹುದಿತ್ತು. ಇಲ್ಲವೇ ರೇಣುಕಾಸ್ವಾಮಿ ಸಂದೇಶ ಕಳುಹಿಸಿದ್ದಂತ ಗೌತಮ್ ಹೆಸರಿನ ಇನ್ಸ್ ಸ್ಟಾಗ್ರಾಂ ಅಕೌಂಟ್ ಬ್ಲಾಕ್ ಮಾಡಬಹುದಾಗಿತ್ತು ಎಂದರು.…
ಬೆಂಗಳೂರು: ಶೀಘ್ರವೇ ರಾಜ್ಯದಲ್ಲಿ ಜಾತಿ ಗಣತಿ ವರದಿಯನ್ನು ಜಾರಿಗೆ ತರುವ ಸಂಬಂಧ ನಿರ್ಧಾರವನ್ನು ಪ್ರಕಟಿಸಲಾಗುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಜಾತಿ ಜನಗಣತಿ ಬಗ್ಗೆ ಬಿಜೆಪಿಗೆ ಯಾವ ತಕರಾರು-ವಿರೋಧ ಇಲ್ಲ, ಅದರ ಅನುಷ್ಠಾನಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ” ಎಂಬ ವಿರೋಧಪಕ್ಷದ ನಾಯಕರಾದ ಆರ್. ಅಶೋಕ್ ಅವರ ಹೇಳಿಕೆಯನ್ನು ಓದಿ ಮನಸ್ಸು ನಿರಾಳವಾಯಿತು ಎಂದಿದ್ದಾರೆ. ಅಶೋಕ್ ಅವರೇ, ನಮ್ಮ ಪಕ್ಷದೊಳಗಿನ ತಕರಾರುಗಳ ಬಗ್ಗೆ ತಲೆಕೆಡಿಸಿಕೊಳ್ಳಲು ಹೋಗಬೇಡಿ, ಅವುಗಳನ್ನು ನಾವು ಬಗೆಹರಿಸಿಕೊಳ್ಳುತ್ತೇವೆ. ನೀವು ನುಡಿದಂತೆ ನಡೆದರೆ ಜಾತಿ ಜನಗಣತಿ ಜಾರಿಯಾಗಿ ನೀವೇ ಹೇಳಿಕೊಂಡಿರುವ ನಿಮ್ಮ ಪಕ್ಷದ ಕನಸಿನ “ಅಂತ್ಯೋದಯ’’ ಸಾಕಾರಗೊಳ್ಳುತ್ತದೆ ಎಂಬ ವಿಶ್ವಾಸ ನನಗಿದೆ. ನೀವು ಮಾತ್ರ, ಕೊಟ್ಟ ಮಾತಿಗೆ ತಪ್ಪಿ ನಡೆಯಬಾರದು ಅಷ್ಟೆ ಎಂದು ಹೇಳಿದ್ದಾರೆ. 2018ರಲ್ಲಿ ಸಮೀಕ್ಷೆ ಪೂರ್ಣಗೊಂಡಿದ್ದರೂ ಅಂಕಿಅಂಶಗಳ ಪರಿಶೀಲನಾ ಕಾರ್ಯ ಪೂರ್ಣಗೊಳ್ಳದೆ ಇದ್ದ ಕಾರಣ ಆ ಅವಧಿಯಲ್ಲಿ ಕಾಂತರಾಜ್ ಆಯೋಗದ ವರದಿಯನ್ನು ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಇದಕ್ಕೆ ಬೇರೆ ಯಾವ…
ನವದೆಹಲಿ: ಭಾರತ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಸರಣಿಯ ನಂತರ ಬಾಂಗ್ಲಾದೇಶದ ಅನುಭವಿ ಆಟಗಾರ ಮಹಮದುಲ್ಲಾ ಟಿ 20 ಅಂತರರಾಷ್ಟ್ರೀಯ (ಟಿ 20) ಅಂತರರಾಷ್ಟ್ರೀಯ (ಟಿ 20) ಯಿಂದ ನಿವೃತ್ತರಾಗುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಬಾಂಗ್ಲಾದೇಶದ ಅತ್ಯಂತ ವಿಶಿಷ್ಟ ಆಟಗಾರರಲ್ಲಿ ಒಬ್ಬರಾದ 38 ವರ್ಷದ ಆಲ್ರೌಂಡರ್, 17 ವರ್ಷಗಳ ಗಮನಾರ್ಹ ಟಿ 20 ಐ ವೃತ್ತಿಜೀವನವನ್ನು ಕೊನೆಗೊಳಿಸಲಿದ್ದಾರೆ. ಕೇವಲ 30 ದಿನಗಳಲ್ಲಿ ಟಿ 20 ಪಂದ್ಯಗಳಲ್ಲಿ ತಂಡವು ತನ್ನ ಇಬ್ಬರು ಸ್ಟಾರ್ ಆಲ್ರೌಂಡರ್ಗಳನ್ನು ಕಳೆದುಕೊಂಡಿರುವುದರಿಂದ ಬಾಂಗ್ಲಾದೇಶಕ್ಕೆ ಗಮನಾರ್ಹ ನಷ್ಟವನ್ನು ಸೂಚಿಸುವ ಶಕೀಬ್ ಅಲ್ ಹಸನ್ ಅವರೊಂದಿಗೆ ಮಹಮುದುಲ್ಲಾ ಸೇರಿದ್ದಾರೆ. ಮಹಮದುಲ್ಲಾ 2007 ರಲ್ಲಿ ಕೀನ್ಯಾ ವಿರುದ್ಧ ಟಿ 20 ಐ ಗೆ ಪಾದಾರ್ಪಣೆ ಮಾಡಿದರು ಮತ್ತು ಅಂದಿನಿಂದ, ಅವರು ಬಾಂಗ್ಲಾದೇಶದ ಕ್ರಿಕೆಟ್ ಪ್ರಯಾಣದ ಅವಿಭಾಜ್ಯ ಅಂಗವಾಗಿದ್ದಾರೆ. ಶಕೀಬ್ ಅಲ್ ಹಸನ್ ಮತ್ತು ಜಿಂಬಾಬ್ವೆಯ ಸೀನ್ ವಿಲಿಯಮ್ಸ್ ನಂತರ ಟಿ 20 ಐ ಇತಿಹಾಸದಲ್ಲಿ ಅವರ ವೃತ್ತಿಜೀವನವು ಮೂರನೇ ಅತಿ ದೀರ್ಘವಾಗಿದೆ. 139 ಟಿ20…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಸಾಂಸ್ಕೃತಿಕ ದಸರಾ ಹಬ್ಬವನ್ನು ಟರ್ಮಿನಲ್ 1 ಮತ್ತು 2ನಲ್ಲಿ ಅಕ್ಟೋಬರ್ 11ರವರೆಗೆ ಅದ್ಧೂರಿಯಿಂದ ಆಚರಿಸಲಾಗುತ್ತಿದೆ. ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ನಮ್ಮ ಹೆಮ್ಮೆಯ ಸಂಸ್ಕೃತಿಯನ್ನು ಕಣ್ತುಂಬಿಸಿಕೊಳ್ಳಲು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ನಮ್ಮ ಸಾಂಸ್ಕೃತಿಕ ಕಲೆಗಳಾದ ಯಕ್ಷಗಾನ, ಕುಚ್ಚುಪುಡಿ, ಡೊಳ್ಳು ಕುಣಿತ, ತಮಟೆ ವಾಧ್ಯ, ನಾಟ್ಯ, ಸಂಗೀತ ಕಚೇರಿ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಟರ್ಮಿನಲ್ 1 ಮತ್ತು 2ನಲ್ಲಿ ನಡೆಸಲಾಗುತ್ತಿದೆ. ಈ ಎಲ್ಲಾ ಸಂಭ್ರಮಾಚರಣೆಯ ಭಾಗವಾಗಿ ಬೆಂಗಳೂರು ವಿಮಾನ ನಿಲ್ದಾಣ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಅಕ್ಟೋಬರ್ 8ರಂದು ಯಕ್ಷಗಾನ, ತಮಟೆವಾಧ್ಯ ಜರುಗಿತು, ಜೊತೆಗೆ, ಜಾನಪದ ಗಾಯನ ಮತ್ತು ನೃತ್ಯ ರೂಪಕ, ವಿದ್ವಾನ್ ರೂಪಶ್ರೀ ಮಧುಸೂದನ್ ಅವರಿಂದ ನೃತ್ಯ ಮತ್ತು ಸಂಗೀತ ಕಲಾ ಪ್ರದರ್ಶನ ಜರುಗಿತು. ಅ.೯ ರಂದು ಕರ್ನಾಟಕ ಸಂಗೀತ ಹಾಗೂ ನೃತ್ಯ ರೂಪಕ, ಅ.10 ರಂದು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಮತ್ತು ಕುಚುಪುಡಿ ನೃತ್ಯ ಪ್ರದರ್ಶನ,…
ಬೆಂಗಳೂರು: ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಅಧಿಕಾರಿಗಳು ಮತ್ತು ನೌಕರರ ನ್ಯಾಯಯುತ ಬೇಡಿಕೆಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ತಜ್ಞರ ತಂಡ ರಚಿಸಬೇಕು ಎಂದು ಶಾಸಕ ದಿನೇಶ್ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಮಾಡಿದ್ದಾರೆ. ಈ ಸಂಬಂಧ ಮನವಿ ಪತ್ರ ಬರೆದಿರುವ ಶಾಸಕ ದಿನೇಶ್ ಗೂಳಿಗೌಡ, ಸರ್ಕಾರದ ಬೆಂಬಲದಿಂದ ಗ್ರಾಮ ಪಂಚಾಯತಿಗಳು ಗ್ರಾಮ ಸರ್ಕಾರಗಳಂತೆ ಕಾರ್ಯ ನಿರ್ವಹಿಸುವತ್ತ ಹೆಜ್ಜೆ ಇಡುತ್ತಿವೆ. ಜನನ-ಮರಣ ಪ್ರಮಾಣ ಪತ್ರದಿಂದ ಹಿಡಿದು ವಸತಿ ಯೋಜನೆಗಳ ಅನುಷ್ಠಾನ, ಕುಡಿಯುವ ನೀರು, ಬೀದಿ ದೀಪಗಳ ನಿರ್ವಹಣೆ, ನೈರ್ಮಲ್ಯ ಸ್ವಚ್ಛತೆ, ಸ್ವಾವಲಂಬನೆಗೆ ನೆರವು ನೀಡುವುದರ ಜೊತೆಗೆ 29 ವಿಷಯಗಳನ್ನು ಒಳಗೊಂಡಂತೆ ಗ್ರಾಮ ಪಂಚಾಯತಿಗಳು ಸಾರ್ವಜನಿಕರಿಗೆ ಸೇವೆ ನೀಡುತ್ತಾ ಗ್ರಾಮೀಣ ಜನರ ಬದುಕಿಗೆ ನೆರವಾಗುತ್ತಿವೆ. ಆದರೆ, ಈಗ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕಳೆದ ನಾಲ್ಕು ದಿನಗಳಿಂದ ತಮ್ಮ ಕರ್ತವ್ಯ ಬಹಿಷ್ಕರಿಸಿ ಅನಿರ್ಧಿಷ್ಟ ಮುಷ್ಕರ ನಡೆಸುತ್ತಿದ್ದು,…
ಚಂಡೀಗಢ: ಹರ್ಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ಲಾಡ್ವಾ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಸಮೀಪದ ಕಾಂಗ್ರೆಸ್ ಪ್ರತಿಸ್ಪರ್ಧಿ ಮೇವಾ ಸಿಂಗ್ ವಿರುದ್ಧ 16,054 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಹರಿಯಾಣದ 90 ಸ್ಥಾನಗಳಲ್ಲಿ ಬಿಜೆಪಿ 50 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 35 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹರಿಯಾಣದಲ್ಲಿ ಅಕ್ಟೋಬರ್ 5 ರಂದು ಮತದಾನ ನಡೆದಿದ್ದು, ಮತ ಎಣಿಕೆ ನಡೆಯುತ್ತಿದೆ. https://kannadanewsnow.com/kannada/haryana-hat-trick-achievement-bjp-celebrates-victory-at-bjp-office-in-bengaluru/ https://kannadanewsnow.com/kannada/breaking-haryana-assembly-election-congress-candidate-vinesh-pogat-wins-big-vinesh-phogat/
ಬೆಂಗಳೂರು: ಹರಿಯಾಣ ರಾಜ್ಯದಲ್ಲಿ ಬಿಜೆಪಿ ಸರಕಾರ ಸತತವಾಗಿ 3ನೇ ಬಾರಿಗೆ ಅಧಿಕಾರ ಪಡೆಯುತ್ತಿದೆ. ಅಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧನೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸಂತಸ ವ್ಯಕ್ತಪಡಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಧ್ಯಾಹ್ನ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷ ಬಹಳಷ್ಟು ಪಿತೂರಿ ನಡೆಸಿತು. ಕಾಂಗ್ರೆಸ್ ಪಕ್ಷ ಏನೇ ತಿಪ್ಪರಲಾಗ ಹಾಕಿದರೂ ಸಹ ಕಾಂಗ್ರೆಸ್ ಗ್ಯಾರಂಟಿಗಿಂತ ನರೇಂದ್ರ ಮೋದಿಜೀ ಅವರ ಅಭಿವೃದ್ಧಿಯ ಗ್ಯಾರಂಟಿ ಬಗ್ಗೆ ಹರಿಯಾಣದ ಜನರು ಮತ್ತೊಮ್ಮೆ ವ್ಯಕ್ತಪಡಿಸಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು. ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವುದು ನಮ್ಮೆಲ್ಲರಿಗೆ ಸಂತೋಷವನ್ನು ತಂದು ಕೊಟ್ಟಿದೆ. ಪ್ರಜ್ಞಾವಂತ ಜನರು ಮೋದಿಜೀ ಅವರ ನಾಯಕತ್ವಕ್ಕೆ ಇನ್ನಷ್ಟು ಹೆಚ್ಚು ಪುಷ್ಟಿ ಕೊಟ್ಟಿದ್ದಾರೆ. ಜಮ್ಮು ಕಾಶ್ಮೀರದಲ್ಲೂ ಬಿಜೆಪಿ ದೊಡ್ಡ ಸಾಧನೆ ಮಾಡಿದೆ. ಹರಿಯಾಣದ ಫಲಿತಾಂಶವು ಮುಂಬರುವ ಮಹಾರಾಷ್ಟ್ರ ರಾಜ್ಯದ ಚುನಾವಣೆಯಲ್ಲಿ ಸಕಾರಾತ್ಮಕ ಪರಿಣಾಮ ಬೀರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.…
ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024ರ ಸಂದರ್ಭದಲ್ಲಿ ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆಯನ್ನು ಮಾಡಿದೆ. ಈ ಮೂಲಕ ರೈಲು ಮೂಲಕ ಮೈಸೂರು ದಸರಾ ವೀಕ್ಷಣೆಗೆ ತೆರಳುವಂತ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ದಸರಾ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಕಾಯ್ದಿರಿಸಿದ ಮತ್ತು ಕಾಯ್ದಿರಿಸದ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ವಿವರಗಳು ಈ ಕೆಳಗಿನಂತಿವೆ:- 1.ರೈಲು ಸಂಖ್ಯೆ 07305/07306 ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ-ಬೆಳಗಾವಿ ಎಕ್ಸ್ಪ್ರೆಸ್ ವಿಶೇಷ. ರೈಲು ಸಂಖ್ಯೆ 07305 ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ ಎಕ್ಸ್ಪ್ರೆಸ್ ವಿಶೇಷ ರೈಲು ಅಕ್ಟೋಬರ್ 10, 2024 ರಂದು 11:30 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು ಅದೇ ದಿನ 19:40 ಗಂಟೆಗೆ ಯಶವಂತಪುರವನ್ನು ತಲುಪಲಿದೆ. ಇದು ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲ್ಲುತ್ತದೆ. ರೈಲು ಸಂಖ್ಯೆ 07306 ಯಶವಂತಪುರ-ಬೆಳಗಾವಿ ಎಕ್ಸ್ಪ್ರೆಸ್ ವಿಶೇಷ ರೈಲು ಅಕ್ಟೋಬರ್ 10, 2024 ರಂದು 20:55 ಗಂಟೆಗೆ ಯಶವಂತಪುರದಿಂದ…
ಕೆಎನ್ಎನ್ ಡಿಜಿಟಲ್ ಡೆಸ್ಕ್: ಜಾನ್ ಹಾಪ್ಫೀಲ್ಡ್ ಮತ್ತು ಜೆಫ್ರಿ ಹಿಂಟನ್ ಅವರಿಗೆ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಸ್ವೀಡನ್ನ ಸ್ಟಾಕ್ಹೋಮ್ನಲ್ಲಿರುವ ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಮಂಗಳವಾರ ಪ್ರಕಟಿಸಿದೆ. ಈ ವರ್ಷದ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ ವಿಜೇತರು ಇಂದಿನ ಶಕ್ತಿಯುತ ಯಂತ್ರ ಕಲಿಕೆಯ ಆಧಾರವನ್ನು ರೂಪಿಸುವ ವಿಧಾನಗಳನ್ನು ಅಭಿವೃದ್ಧಿಪಡಿಸಲು ಭೌತಶಾಸ್ತ್ರದ ಸಾಧನಗಳನ್ನು ಬಳಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. https://twitter.com/NobelPrize/status/1843589140455272810 ಜಾನ್ ಹಾಪ್ಫೀಲ್ಡ್ ಡೇಟಾದಲ್ಲಿ ಚಿತ್ರಗಳು ಮತ್ತು ಇತರ ಮಾದರಿಗಳನ್ನು ಸಂಗ್ರಹಿಸುವ ಮತ್ತು ಪುನರ್ನಿರ್ಮಿಸುವ ಸಂಬಂಧಿತ ಮೆಮೊರಿಯನ್ನು ರಚಿಸಿದರು. ಜೆಫ್ರಿ ಹಿಂಟನ್ ಡೇಟಾದಲ್ಲಿ ಸ್ವಯಂಚಾಲಿತವಾಗಿ ಗುಣಲಕ್ಷಣಗಳನ್ನು ಕಂಡುಹಿಡಿಯುವ ವಿಧಾನವನ್ನು ಕಂಡುಹಿಡಿದರು, ಇದು ಚಿತ್ರಗಳಲ್ಲಿ ನಿರ್ದಿಷ್ಟ ಅಂಶಗಳನ್ನು ಗುರುತಿಸಲು ಅನುವು ಮಾಡಿಕೊಡುತ್ತದೆ. ಕಳೆದ ವರ್ಷ ಭೌತಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿಯನ್ನು ಗೆದ್ದವರು ಯಾರು? ಎಲೆಕ್ಟ್ರಾನಿಕ್ಸ್ ಅನ್ನು ಸುಧಾರಿಸುವ ಅಥವಾ ರೋಗನಿರ್ಣಯಕ್ಕೆ ಸಹಾಯ ಮಾಡುವ ಆವಿಷ್ಕಾರವಾದ ನೂಲುವ ಎಲೆಕ್ಟ್ರಾನ್ಗಳ ಮೊದಲ ವಿಭಜಿತ-ಸೆಕೆಂಡುಗಳ ನೋಟವನ್ನು ಸೆರೆಹಿಡಿದಿದ್ದಕ್ಕಾಗಿ ಮೂವರು ವಿಜ್ಞಾನಿಗಳಿಗೆ ಕಳೆದ ವರ್ಷದ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ ನೀಡಲಾಯಿತು.…
ಉಜಿರೆ : ಇಂದು ಹೆಚ್ಚುತ್ತಿರುವ ಜನಸಂಖ್ಯೆಯ ಪರಿಣಾಮ ನಮ್ಮ ದೇಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಸ್ಪರ್ಧೆ ಇರುವುದರಿಂದ ಜೀವನದಲ್ಲಿ ನಾವು ಯಾವ ರೀತಿಯ ಮೌಲ್ಯಗಳನ್ನು ಅಳವಡಿಸಿಕೊಂಡಿದ್ದೇವೆ ಅನ್ನುವುದರ ಮೂಲಕ ನಮ್ಮ ಯಶಸ್ವ ಇರುತ್ತದೆ. ಸ್ವಯಂ ಶಿಸ್ತು ಅಳವಡಿಸಿಕೊಂಡು ಉತ್ತಮ ಆಚಾರ, ವಿಚಾರ ಗಳನ್ನು ಅನುಸರಿಸಿ, ಜೊತೆಗೆ ಉತ್ತಮವಾದ ಆಹಾರ ಪದ್ಧತಿ ಅಳವಡಿಸಿಕೊಂಡು ಅದಕ್ಕೆ ಸರಿಯಾದ ವಿಹಾರ ಮಾಡಿಕೊಂಡಲ್ಲಿ ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸಬಹುದು. ಇದಕ್ಕೆ ಪೂರಕವಾಗಿ ನಿಮಗೆ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ ಅಧ್ಯಕ್ಷತೆಯಲ್ಲಿ ನಡೆಯುವ ರುಡ್ ಸೆಟ್ ಸಂಸ್ಥೆಯಲ್ಲಿ ಅತ್ಯತ್ತುಮವಾದ ತರಬೇತಿಯನ್ನು ಪಡೆದುಕೊಂಡಿದ್ದೀರಿ ಅದನ್ನು ಜೀವನದಲ್ಲಿ ಮತ್ತು ಸ್ವ ಉದ್ಯೋಗದಲ್ಲಿ ಉಪಯೋಗಿಸಿಕೊಂಡು ಯಶಸ್ವಿಗಳಿಸಿ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಶುಂಪಾಲರಾದ ಡಾ. ಬಿ. ಎ. ಕುಮಾರ್ ಹೆಗ್ಡೆ ಅಭಿಪ್ರಾಯಪಟ್ಟರು. ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದೆ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ…