Subscribe to Updates
Get the latest creative news from FooBar about art, design and business.
Author: kannadanewsnow09
ಮ್ಯಾಸಿಡೋನಿಯಾ: ಉತ್ತರ ಮ್ಯಾಸಿಡೋನಿಯಾದ ನೈಟ್ಕ್ಲಬ್ನಲ್ಲಿ ಸಂಗೀತ ಕಚೇರಿಯ ಸಂದರ್ಭದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸುಮಾರು 51 ಜನರು ಸಾವನ್ನಪ್ಪಿದ್ದಾರೆ ಮತ್ತು 100 ಜನರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ವರದಿಯ ಪ್ರಕಾರ, ಕೊಕಾನಿಯ ಡಿಸ್ಕೋಥೆಕ್ನಲ್ಲಿ ಸುಮಾರು 1,500 ಜನರು ಸಂಗೀತ ಕಚೇರಿಯನ್ನು ವೀಕ್ಷಿಸಲು ಸೇರಿದ್ದರು. ದೇಶದ ಪ್ರಸಿದ್ಧ ಹಿಪ್-ಹಾಪ್ ಜೋಡಿಯಾದ ಡಿಎನ್ಕೆ ಅವರ ಪ್ರದರ್ಶನದ ಸಮಯದಲ್ಲಿ ಕೊಕಾನಿಯ ‘”ಪಲ್ಸ್” ಎಂಬ ನೈಟ್ಕ್ಲಬ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ ಮಧ್ಯರಾತ್ರಿ ಸಂಗೀತ ಕಚೇರಿ ಪ್ರಾರಂಭವಾಯಿತು. “ಇದು ಮ್ಯಾಸಿಡೋನಿಯಾಗೆ ಕಷ್ಟಕರ ಮತ್ತು ಅತ್ಯಂತ ದುಃಖದ ದಿನ. ಹಲವಾರು ಯುವ ಜೀವಗಳ ನಷ್ಟವನ್ನು ಸರಿಪಡಿಸಲಾಗದು, ಮತ್ತು ಕುಟುಂಬಗಳು, ಪ್ರೀತಿಪಾತ್ರರು ಮತ್ತು ಸ್ನೇಹಿತರ ನೋವು ಅಳೆಯಲಾಗದು” ಎಂದು ಉತ್ತರ ಮ್ಯಾಸಿಡೋನಿಯಾದ ಪ್ರಧಾನಿ ಕ್ರಿಸ್ಟಿಜನ್ ಮಿಕೊಸ್ಕಿ ‘X’ ನಲ್ಲಿ ಪೋಸ್ಟ್ನಲ್ಲಿ ಬರೆದಿದ್ದಾರೆ. ಸಂತ್ರಸ್ತರಿಗೆ ಸಹಾಯ ಮಾಡಲು ಸರ್ಕಾರ ಎಲ್ಲವನ್ನೂ ಮಾಡುತ್ತದೆ ಎಂದು ಪ್ರಧಾನಿ ಭರವಸೆ ನೀಡಿದರು. “ಜನರು ಮತ್ತು ಸರ್ಕಾರವು ಅವರ ನೋವನ್ನು ಸ್ವಲ್ಪವಾದರೂ ಕಡಿಮೆ ಮಾಡಲು…
ಬೆಂಗಳೂರು: ರಾಜ್ಯಾದ್ಯಂತ ಹಬ್ಬಿರುವ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ. ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ಎಂಡಿಎಂಎ ಮಾದಕ ದ್ರವ್ಯವನ್ನು ವಶಕ್ಕೆ ಪಡೆದು, ಸಾವಿರಾರು ಯುವ ಜನರ ಬದುಕಿಗೆ ಎದುರಾಗಲಿದ್ದ ಬಹುದೊಡ್ಡ ಅಪಾಯವೊಂದನ್ನು ನಮ್ಮ ಪೊಲೀಸರು ನಿವಾರಿಸಿದ್ದಾರೆ ಎಂದಿದ್ದಾರೆ. ನಾವು ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಾದಕದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣದ ಪಣತೊಟ್ಟು, ಡ್ರಗ್ಸ್ ಮಾರಾಟ ಮತ್ತು ಸೇವನೆಯ ವಿರುದ್ಧ ಸಮರ ಸಾರಿದ್ದೇವೆ. ಕೆಲವು ತಿಂಗಳುಗಳ ಹಿಂದೆ ನಾನು ಮಂಗಳೂರಿಗೆ ಭೇಟಿನೀಡಿದ್ದ ವೇಳೆ ಜಿಲ್ಲೆಯಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಿ ಸ್ವಸ್ಥ ಪರಿಸರ ಕಟ್ಟಿಕೊಡುವ ವಾಗ್ದಾನವನ್ನು ಜಿಲ್ಲೆಯ ಜನರಿಗೆ ನೀಡಿದ್ದೆ. ನಮ್ಮ ಈ ಪ್ರಯತ್ನದ ಭಾಗವಾಗಿ ಈಗ ಬಹುದೊಡ್ಡ…
ಬೆಂಗಳೂರು : ವಯೋವೃದ್ಧ ಅತ್ತೆ ಮಾವನ ಮೇಲೆ ಅಮಾನಮೀಯವಾಗಿ ಹಲ್ಲೆ ಮಾಡಿ, ಮಕ್ಕಳ ಜೊತೆಗೂಡಿ ಕಿರುಕುಳ ಕೊಟ್ಟಿದ್ದ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಗೆ ವಿರುದ್ಧ ವೈದ್ಯಕೀಯ ಶಿಕ್ಷಣ ಇಲಾಖೆ ಷೋಕಾಸ್ ನೋಟಿಸ್ ಜಾರಿ ಮಾಡಿದ್ದು ಕೂಡಲೇ ಇದಕ್ಕೆ ಉತ್ತರ ನೀಡಬೇಕೆಂದು ಸೂಚನೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೋಶಿನ್ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆ ಡಾ. ಪ್ರಿಯದರ್ಶಿನಿ ಅವರಿಗೆ ಲಿಖಿತ ಸಮಾಜಾಯಿಷಿ ನೀಡಲು ಸೂಚಿಸಲಾಗಿದೆ. ತಪ್ಪಿದ್ದಲ್ಲಿ ಮುಂದಿನ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ. ಪ್ರಿಯದರ್ಶಿನಿ ಎನ್. ಇತ್ತೀಚೆಗೆ ತಮ್ಮ ಮಕ್ಕಳ ಜೊತೆಗೂಡಿ ವಯೋವೃದ್ಧ ಅತ್ತೆ, ಮಾವಂದಿರನ್ನು ಥಳಿಸಿದ ವೀಡಿಯೋ ಭಾರಿ ವೈರಲ್ ಆಗಿತ್ತು. ಕಳೆದ ಹತ್ತು ವರ್ಷದಿಂದಲೂ ಡಾ. ಪ್ರಿಯದರ್ಶಿನಿ ಕಿರುಕುಳ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಪ್ರಿಯದರ್ಶಿನಿ ಈಗಾಗಲೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೂ ಅತ್ತೆ ಮಾವನ…
ಚಾಮರಾಜನಗರ: ತಲೆಯಲ್ಲಿ ಕೂದಲಿಲ್ಲ. ಹೊರಗೆ ತಲೆಯಲ್ಲಿ ಕೂದಲಿಲ್ಲದ ಗಂಡನ ಜೊತೆಗೆ ಹೋದ್ರೆ ನಾಚಿಕೆ ಆಗುತ್ತೆ ಎಂಬುದಾಗಿ ಕಿರುಕುಳ ನೀಡುತ್ತಿದ್ದಂತ ಪತ್ನಿಯ ಕಾಟಕ್ಕೆ ಬೇಸತ್ತು, ಪತಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಚಾಮರಾಜನಗರ ಉಡಿಗಾಲದ ಪರಶಿವಮೂರ್ತಿ(32) ಎಂಬುವರೇ ಪತ್ನಿಯ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವಂತ ವ್ಯಕ್ತಿಯಾಗಿದ್ದಾರೆ. 2 ವರ್ಷಗಳ ಹಿಂದೆ ಪರಶಿವಮೂರ್ತಿ ಅವರು ಕೆಳಕಿಪುರದ ಮಮತಾ ಎಂಬುವರೊಂದಿಗೆ ವಿವಾಹವಾಗಿದ್ದರು. ಪರಶಿವಮೂರ್ತಿಯ ತಲೆ ಕೂದಲು ಮದುವೆ ನಂತ್ರ ಉದುರಿತ್ತು. ಇದರಿಂದಾಗಿ ಪತ್ನಿ ಮಮತಾ ದಿನಾಲೂ ತಲೆಯಲ್ಲಿ ಕೂದಲಿಲ್ಲ ಎಂಬುದಾಗಿ ಕಿರುಕುಳ ನೀಡುತ್ತಿದ್ದಳಂತೆ. ಇನ್ನೂ ತಲೆಯಲ್ಲಿ ಕೂದಲಿಲ್ಲದ ಪರಶಿವಮೂರ್ತಿಯನ್ನು ಗಂಡ ಅನ್ನುವುದಕ್ಕೂ ಅವಮಾನ ಆಗುತ್ತದೆ. ಹೊರಗೆ ಹೋಗೋದಕ್ಕೂ ನನಗೆ ನಾಚಿಕೆ ಆಗುತ್ತದೆ ಎಂಬುದಾಗಿ ಅಪಹಾಸ್ಯ ಮಾಡುತ್ತಿದ್ದಳಂತೆ. ಇದಲ್ಲದೇ ತಾಳಿಯನ್ನು ತೆಗೆದಿಟ್ಟಿರುವಂತ ಪೋಟೋವನ್ನು ವಾಟ್ಸ್ ಆಪ್ ಸ್ಟೇಟಸ್ ಹಾಕಿದ್ದಳಂತೆ. ಈ ವಿಚಾರಕ್ಕಾಗಿ ಪರಶಿವಮೂರ್ತಿ ಹಾಗೂ ಮಮತಾ ನಡುವೆ ಜಗಳ ಕೂಡ ಆಗಿತ್ತಂತೆ. ಇದಷ್ಟೇ ಅಲ್ಲದೇ ಪರಶಿವಮೂರ್ತಿ ವಿರುದ್ಧ ಮಮತಾ…
ರಾಮನಗರ: ಜಿಲ್ಲೆಯ ಬಿಡದಿ ಬಳಿಯಿರುವಂತ ಟೊಯೋಟೋ ಕಂಪನಿಯ ಟಾಯ್ಲೆಟ್ಟಿನಲ್ಲಿ ಪಾಕ್ ಪರ ಬರವನ್ನು, ಕನ್ನಡಿಗರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿ ಕಿಡಿಗೇಡಿಗಳು ಬರೆದಿರುವ ವಿಚಾರ ತಿಳಿದು ಬಂದಿದೆ. ರಾಮನಗರದ ಬಿಡದಿಯಲ್ಲಿರುವ ಟೊಯೋಟೋ ಕಂಪನಿಯ ಶೌಚಾಲಯದಲ್ಲಿ ಪಾಕಿಸ್ತಾನ ಜೈ, ಕನ್ನಡಿಗರು ಸೂ* ಮಕ್ಕಳು ಎಂಬುದಾಗಿ ಕಿಡಿಗೇಡಿಗಳು ಅವಹೇಳನಕಾರಿ ಬರಹವನ್ನು ಬರೆದಿದ್ದಾರೆ. ಇದು ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೂ ಕಾರಣವಾಗಿ, ಕಂಪನಿಯ ಬಳಿಯಲ್ಲಿ ಪ್ರತಿಭಟನೆಗೂ ಕಾರಣವಾಯ್ತು. ಈ ರೀತಿಯ ಅವಹೇಳನಕಾರಿ ಬರಹ ಬರೆದಂತ ಸಿಬ್ಬಂದಿಗೆ ಟೊಯೋಟೋ ಕಾನೂನು ಕ್ರಮ ಜರುಗಿಸುವುದಾಗಿಯೂ ಸುತ್ತೋಲೆ ಹೊರಡಿಸಿ ಎಚ್ಚರಿಕೆ ನೀಡಿದೆ. ಅಂದಹಾಗೇ ಟೊಯೋಟೋ ಕಂಪನಿಯ ಶೌಚಾಲಯದ ಗೋಡೆಯ ಮೇಲೆ ಪಾಕಿಸ್ತಾನ ಜೈ, ಕನ್ನಡಗಿರು ಸೂ* ಮಕ್ಕಳು ಎಂಬುದಾಗಿ ಬರೆಯಲಾಗಿದೆ. ಈ ರೀತಿಯಾಗಿ ಬರೆದಿದ್ದು ಯಾರು ಎನ್ನುವುದು ಈವರೆಗೆ ತಿಳಿದು ಬಂದಿಲ್ಲ. ಈ ರೀತಿಯಾಗಿ ಬರೆದಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ದೇಶದ್ರೋಹ ಅಪರಾಧದ ಅಡಿಯಲ್ಲಿ ಅವರ ವಿರುದ್ಧ ಕೇಸ್ ದಾಖಲಿಸಬೇಕು ಅಂತ ಕನ್ನಡಪರ ಸಂಘಟನೆಯ ಮುಖಂಡರು ಆಗ್ರಹಿಸಿದ್ದಾರೆ. https://kannadanewsnow.com/kannada/fight-over-water-food-wedding-scheduled-for-today-cancelled/…
ಚಿತ್ರದುರ್ಗ: ಆ ವರ ನಿಗದಿತ ಸಮಯಕ್ಕೆ ಬಾರದೇ ರಾತ್ರಿ 9.30ಕ್ಕೆ ಚೌಟರಿಗೆ ಆಗಮಿಸಿದ್ದರು. ಹೀಗಾಗಿ ರಾತ್ರಿ ನಡೆಯಬೇಕಿದ್ದಂತ ಆರತಕ್ಷತೆಯೇ ನಡೆದಿರಲಿಲ್ಲ. ಈ ಬಳಿಕ ವರನ ಕೊಠಡಿಗೆ ನೀರಿಟ್ಟಿಲ್ಲ. ನೀರು ಕೊಟ್ಟಿಲ್ಲ, ರಾತ್ರಿ ಊಟವೂ ವರನ ಕಡೆಯ ಸಂಬಂಧಿಕರಿಗೆ ಸಿಕ್ಕಿಲ್ಲ ಅಂತ ಜಗಳ ಉಂಟಾಗಿದೆ. ಈ ಜಗಳ ತಾರಕಕ್ಕೇರಿ ಇಂದು ನಡೆಯಬೇಕಿದ್ದಂತ ಮದುವೆಯೇ ಮುರಿದು ಬಿದ್ದಿರುವಂತ ಘಟನೆ ಹಿರಿಯೂರು ಪಟ್ಟಣದಲ್ಲಿ ನಡೆದಿದೆ. ನೀರು, ಊಟದ ವಿಚಾರಕ್ಕೆ ಜಗಳ, ಮದುವೆ ಕ್ಯಾನ್ಸಲ್ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಲಿಜ ಸಮುದಾಯ ಭವನದಲ್ಲಿ ಜಗಳೂರು ಮೂಲದ ವರ ಹಾಗೂ ಶಿರಾ ಮೂಲದ ವಧುವಿನ ಮದುವೆ ನಿಗದಿಯಾಗಿತ್ತು. ನಿನ್ನೆ ರಾತ್ರಿ ವರ ಆರತಕ್ಷತೆಯ ಸಮಯಕ್ಕೆ ಬಾರದೇ ರಾತ್ರಿ 9.30ಕ್ಕೆ ಆಗಮಿಸಿದ್ದರಿಂದ ರಿಸೆಪ್ಷನ್ ಕೂಡ ನಡೆಯದೇ ರದ್ದುಗೊಂಡಿತ್ತು. ಆ ನಂತ್ರ ಊಟಕ್ಕೆ ತೆರಳಿದಂತ ವರನ ಕಡೆಯ ಕೆಲವರಿಗೆ ಊಟ ಮುಗಿದಿದ್ದರಿಂದ ಖಾಲಿಯಾಗಿದ್ದಕ್ಕೆ ಗಲಾಟೆ ಕೂಡ ಮಾಡಲಾಗಿತ್ತಂತೆ. ಈ ಗಲಾಟೆ ತಾರಕಕ್ಕೇರಿದ್ದರಿಂದ ವರನ ರೂಮಿನಲ್ಲಿ ನೀರು ಇಟ್ಟಿಲ್ಲ ಎಂಬುದಕ್ಕೂ ಕಿರಿಕ್…
ಪಾಕಿಸ್ತಾನ: ಭಾನುವಾರ ಬಲೂಚ್ ಬಂಡುಕೋರರು ಸೈನಿಕರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ಬೆಂಗಾವಲು ಪಡೆಯ ಮೇಲೆ ಬಾಂಬ್ ದಾಳಿ ಮಾಡಿದ ನಂತರ ಒಟ್ಟು 90 ಪಾಕಿಸ್ತಾನಿ ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಬಲೂಚ್ ಲಿಬರೇಶನ್ ಆರ್ಮಿ ತಿಳಿಸಿದೆ. ಆದಾಗ್ಯೂ, ದಾಳಿಯಲ್ಲಿ ಕೇವಲ ಐದು ಅರೆಸೈನಿಕ ಪಡೆಗಳು ಮಾತ್ರ ಸಾವನ್ನಪ್ಪಿವೆ ಎಂದು ಪಾಕಿಸ್ತಾನಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದಾಳಿಯ ಹೊಣೆಯನ್ನು ಹೊತ್ತುಕೊಂಡಿರುವ ಪಾಕಿಸ್ತಾನದ ಬಲೂಚಿಸ್ತಾನದಲ್ಲಿರುವ ಪ್ರತ್ಯೇಕತಾವಾದಿ ಗುಂಪು ಬಿಎಲ್ಎ, “ಕೆಲವು ಗಂಟೆಗಳ ಹಿಂದೆ ನೋಶ್ಕಿಯ ಆರ್ಸಿಡಿ ಹೆದ್ದಾರಿಯಲ್ಲಿರುವ ರಕ್ಷನ್ ಮಿಲ್ ಬಳಿ ನಡೆದ ವಿಬಿಐಇಡಿ ಫಿದಾಯಿ ದಾಳಿಯಲ್ಲಿ ಆಕ್ರಮಿತ ಪಾಕಿಸ್ತಾನಿ ಮಿಲಿಟರಿಯ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡಿದೆ” ಎಂದು ಹೇಳಿದೆ. ಬಂಡುಕೋರ ಗುಂಪು ಬೆಂಗಾವಲು ಪಡೆಯು “ಎಂಟು ಬಸ್ಗಳನ್ನು ಒಳಗೊಂಡಿತ್ತು, ಅವುಗಳಲ್ಲಿ ಒಂದು ಸ್ಫೋಟದಲ್ಲಿ ಸಂಪೂರ್ಣವಾಗಿ ನಾಶವಾಯಿತು” ಎಂದು ಹೇಳಿಕೊಂಡಿದೆ. https://kannadanewsnow.com/kannada/minister-sharan-prakash-patil-orders-cancellation-of-transfer-of-property-of-children-who-leave-their-parents-in-hospital-in-the-evening/ https://kannadanewsnow.com/kannada/shocking-incident-transgender-stripped-naked-shaved-off-and-assaulted-in-kalaburagi/
ಬೆಂಗಳೂರು : ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಇದು ಯಾವ ಮಟ್ಟಕ್ಕೆ ಹೋಗಿದೆ ಎಂದರೆ ಜನ್ಮ ನೀಡಿದ ತಂದೆ-ತಾಯಂದಿರನ್ನೇ ಅನಾಥರನ್ನಾಗಿ ಮಾಡುತ್ತಿರುವ ಪರಿಪಾಠ ಹೆಚ್ಚಾಗಿದೆ. ಇಂಥ ಅಮಾನವೀಯ ಕೃತ್ಯಗಳಿಗೆ “ಬ್ರೇಕ್” ಹಾಕಲು ವೈದ್ಯಕೀಯ ಶಿಕ್ಷಣ ಇಲಾಖೆ ಮುಂದಾಗಿದೆ. ಕರ್ನಾಟಕದಲ್ಲಿ ಇತ್ತೀಚೆಗೆ ವೃದ್ಧ ಪೋಷಕರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಬಿಟ್ಟು ಹೋಗುತ್ತಿರುವ ಉದಾಹರಣೆಗಳು ಹೆಚ್ಚಾಗಿದೆ. ಅದೂ ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗೆ ಬಿಟ್ಟು ಮಕ್ಕಳು ನಾಪತ್ತೆಯಾಗುತ್ತಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್) ಒಂದರಲ್ಲೇ, 150 ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಮಕ್ಕಳು ತೊರೆದ ಪ್ರಕರಣಗಳು ವರದಿಯಾಗಿವೆ. ರಾಜ್ಯಾದ್ಯಂತ ಇತರ ವೈದ್ಯಕೀಯ ಸಂಸ್ಥೆಗಳಲ್ಲಿ ಇಂಥ 100 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈ ವಿಷಯವನ್ನು ಅರಿತ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್,…
ಬಳ್ಳಾರಿ: ಮಾಜಿ ಶಾಸಕ ಬಸವರಾಜ ದಡೇಸೂಗೂರು ನನ್ನ ಗಂಡ ಎಂಬುದಾಗಿ ಹೇಳಿದ್ದಂತ ವಿಜಯನಗರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿಯ ಮೇಲೆ ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ವಿಜಯನಗರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿದ್ದರು. ಈ ವೇಳೆಯಲ್ಲಿ ಮಹಿಳಾ ಅಧಿಕಾರಿ ಶ್ವೇತಾ ಅವರ ಮೊಬೈಲ್ ಪೋನ್ ಚೆಕ್ ಮಾಡಲಾಗಿತ್ತು. ಈ ವೇಳೆ ಹಣ ವಹಿವಾಟಿನ ವಿಚಾರ ಬೆಳಕಿಗೆ ಬಂದಿತ್ತು. ಹಣದ ವಹಿವಾಟಿನ ಬಗ್ಗೆ ವಿಚಾರಿಸಿದಾಗ ನನ್ನ ಗಂಡ ಕಳಿಸಿದ್ದಾರೆ. ನನ್ನ ಗಂಡ ರಾಜಕಾರಣಿ. ನನ್ನ ಪತಿ ಮಾಜಿ ಶಾಸಕ ಬಸವರಾಜ ದಡೇಸೂಗೂರು ಎಂಬುದಾಗಿ ತಿಳಿಸಿದ್ದರು. ಮಹಿಳಾ ಅಧಿಕಾರಿ ಶ್ವೇತಾ ಈ ಉತ್ತರದಿಂದ ಉಪ ಲೋಕಾಯುಕ್ತರಿಗೆ ಸಮಾಧಾನವಾಗಿರಲಿಲ್ಲ. ಜೊತೆಗೆ ಭ್ರಷ್ಟಾಚಾರದ ಅನುಮಾನ ವ್ಯಕ್ತವಾಗಿತ್ತು. ಹೀಗಾಗಿ ಸ್ವಯಂ ಪ್ರೇರಿತ ಕೇಸ್ ದಾಖಲಿಸಿ, ತನಿಖೆಗೆ ಸೂಚಿಸಿದ್ದಾರೆ. https://kannadanewsnow.com/kannada/mandya-residential-school-student-dies-due-to-poisoning-cm-siddaramaiah-announces-compensation/ https://kannadanewsnow.com/kannada/shocking-incident-transgender-stripped-naked-shaved-off-and-assaulted-in-kalaburagi/
ಬೆಂಗಳೂರು: ಮಂಡ್ಯದಲ್ಲಿ ವಸತಿ ಶಾಲೆಯ ವಿದ್ಯಾರ್ಥಿಯೊಬ್ಬ ವಿಷಾಹಾರ ಸೇವಿಸಿ ಸಾವನ್ನಪ್ಪಿದ್ದರ ಬಗ್ಗೆ ಸಿಎಂ ಸಿದ್ಧರಾಮಯ್ಯ ವಿಷಾದ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಪೊಲೀಸರಿಗೆ ಸೂಕ್ತ ತನಿಖೆಗೆ ಸೂಚಿಸಿದ್ದಾರೆ. ಈ ಘಟನೆಯಲ್ಲಿ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು ತೀವ್ರ ಅಸ್ವಸ್ಥಗೊಂಡ ವಿಚಾರ ತಿಳಿದು ನೋವಾಯಿತು ಎಂದಿದ್ದಾರೆ. ಘಟನೆ ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮಕ್ಕಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಹಾಗೂ ಘಟನೆಗೆ ಕಾರಣರಾದವರ ಮೇಲೆಯೂ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದೆ, ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ ಎಂದು ಹೇಳಿದ್ದಾರೆ. ಈ ದುರ್ಘಟನೆಯಲ್ಲಿ ಮಡಿದ ಬಾಲಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲಾಗುವುದು. ಬೇರೆಡೆ…
 
		



 









