Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: HAL ನಮ್ಮ ರಾಜ್ಯದ ಹೆಮ್ಮೆ , ದಶಕಗಳಿಂದ ಈ ಸಂಸ್ಥೆಯೊಂದಿಗೆ ನಾಡಿನ ಜನರು ಅವಿನಾಭಾವ ಸಂಬಂಧ ಹೊಂದಿದ್ದಾರೆ. ಹೊಸ ಘಟಕಕ್ಕೆ ಅಗತ್ಯವಿರುವ ಭೂಮಿ, ಸೌಲಭ್ಯಗಳನ್ನು ಸರ್ಕಾರವು ನೀಡಲು ಸಿದ್ದವಿದ್ದು, ಯಾವುದೇ ಕಾರಣಕ್ಕೂ ನೆರೆರಾಜ್ಯಕ್ಕೆ ವರ್ಗಾಯಿಸಲು ಬಿಡುವುದಿಲ್ಲ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, HAL ನಮ್ಮ ಹೆಮ್ಮೆ ಮತ್ತು ಗೌರವ! ಕರ್ನಾಟಕದಲ್ಲಿ ಸೌಕರ್ಯ ಕೊರತೆ ಇದೆ ನಮಗೆ ಹಿಂದೂಸ್ತಾನ್ ಏರ್ಕ್ರಾಫ್ಟ್ ಕಂಪನಿಯ ಘಟಕವನ್ನು ವರ್ಗಾಯಿಸಿಕೊಡಿ ಎಂದು ಕೇಂದ್ರವನ್ನು ಕೇಳಿರುವ ಆಂಧ್ರಪ್ರದೇಶ ಮುಖ್ಯಮಂತ್ರಿಗಳ ನಡೆ ಬೇಜವಾಬ್ದಾರಿಯಿಂದ ಕೂಡಿದ ರಾಜಕೀಯ ಪ್ರೇರಿತ ಹೇಳಿಕೆಯಾಗಿದ್ದು,ಇದನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ. ಕಳೆದೊಂದು ದಿನದ ಹಿಂದೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ವರದಿಯನ್ವಯ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ದೇಶದಲ್ಲೇ ನಮ್ಮ ಕರ್ನಾಟಕ ರಾಜ್ಯ ಎರಡನೇ ಸ್ಥಾನದಲ್ಲಿದೆ. ಅಂದರೆ ಅರ್ಥ ನಮ್ಮ ರಾಜ್ಯವು ಮೂಲಭೂತ ಸೌಕರ್ಯ ಒದಗಿಸುವಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರದಲ್ಲಿ ಸಚಿವರಾಗಿರುವ ರಾಜ್ಯದ…
ನವದೆಹಲಿ : ಕೇಂದ್ರ ಸಚಿವ ಸಂಪುಟವು ಬುಧವಾರ 2025-26ರ ಹಣಕಾಸು ವರ್ಷಕ್ಕೆ ರೈತರಿಗೆ ಮಾರ್ಪಡಿಸಿದ ಬಡ್ಡಿ ಸಬ್ವೆನ್ಷನ್ ಯೋಜನೆ (MISS) ಅಡಿಯಲ್ಲಿ ಬಡ್ಡಿ ಸಬ್ವೆನ್ಷನ್ ಘಟಕವನ್ನು ಮುಂದುವರಿಸಲು ಅನುಮೋದನೆ ನೀಡಿತು ಮತ್ತು ಅಗತ್ಯವಿರುವ ನಿಧಿ ವ್ಯವಸ್ಥೆಗಳನ್ನು ಅನುಮೋದಿಸಿತು. ಇದು ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಮೂಲಕ ಕೈಗೆಟುಕುವ ಬಡ್ಡಿದರದಲ್ಲಿ ರೈತರಿಗೆ ಅಲ್ಪಾವಧಿಯ ಸಾಲದ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿರುವ ಕೇಂದ್ರ ವಲಯದ ಯೋಜನೆಯಾಗಿದೆ. ಯೋಜನೆಯಡಿಯಲ್ಲಿ: ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ಗಳ (KCC) ಮೂಲಕ ಶೇಕಡಾ 7 ರ ಸಬ್ಸಿಡಿ ಬಡ್ಡಿದರದಲ್ಲಿ 3 ಲಕ್ಷ ರೂ.ಗಳವರೆಗೆ ಅಲ್ಪಾವಧಿಯ ಸಾಲವನ್ನು ಪಡೆದರು, ಅರ್ಹ ಸಾಲ ನೀಡುವ ಸಂಸ್ಥೆಗಳಿಗೆ ಶೇಕಡಾ 1.5 ರ ಬಡ್ಡಿ ಸಬ್ವೆನ್ಷನ್ ನೀಡಲಾಗುತ್ತದೆ. ಹೆಚ್ಚುವರಿಯಾಗಿ, ಸಾಲಗಳನ್ನು ಸಮಯಕ್ಕೆ ಸರಿಯಾಗಿ ಮರುಪಾವತಿಸುವ ರೈತರು ತ್ವರಿತ ಮರುಪಾವತಿ ಪ್ರೋತ್ಸಾಹಕವಾಗಿ (PRI) ಶೇಕಡಾ 3 ರವರೆಗೆ ಪ್ರೋತ್ಸಾಹಧನಕ್ಕೆ ಅರ್ಹರಾಗಿರುತ್ತಾರೆ, ಇದು KCC ಸಾಲಗಳ ಮೇಲಿನ ಬಡ್ಡಿದರವನ್ನು ಶೇಕಡಾ 4 ಕ್ಕೆ ಪರಿಣಾಮಕಾರಿಯಾಗಿ ಕಡಿಮೆ ಮಾಡುತ್ತದೆ. ಪಶುಸಂಗೋಪನೆ…
ಬೆಂಗಳೂರು: ರಾಜ್ಯದ ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಬೆಂಬಲ ಬೆಲೆಯಡಿ ರೈತರ ಆಹಾರ ಧಾನ್ಯ ಖರೀದಿಸಲು ಖರೀದಿ ಕೇಂದ್ರ ಆರಂಭಿಸುವಂತೆ ಹೈಕೋರ್ಟ್ ನಿರ್ದೇಶಿಸಿದೆ. ಜಿಲ್ಲಾಧಿಕಾರಿ ಬೆಳೆಗಳ ಲಭ್ಯತೆಯ ವೈಜ್ಞಾನಿಕ ಅಧ್ಯಯನ ನಡೆಸಬೇಕು. ಅಗತ್ಯವಿದ್ದಷ್ಟು ಕನಿಷ್ಟ ಬೆಂಬಲ ಬೆಲೆಯ ಖರೀದಿ ಕೇಂದ್ರ ಸ್ಥಾಪಿಸಬೇಕು. ಪ್ರತಿ ತಾಲ್ಲೂಕಿನಲ್ಲೂ ಒಂದು ಖರೀದಿ ಕೇಂದ್ರ ಸ್ಥಾಪಿಸುವಂತೆ ಸೂಚಿಸಿದೆ. ಇನ್ನೂ ನಿಗದಿತ ಅವಧಿಗಿಂತ ಕನಿಷ್ಠ 2 ತಿಂಗಳು ಖರೀದಿ ಕೇಂದ್ರದ ಅವಧಿ ವಿಸ್ತರಿಸಬೇಕು ಎಂಬುದಾಗಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ ಅರವಿಂದ್ ಅವರಿದ್ದಂತ ನ್ಯಾಯಪೀಠ ಆದೇಶಿಸಿದೆ. ಅಂದಹಾಗೇ ರೈತ ಸೇನೆ ಕರ್ನಾಟಕ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿ, ಈ ಆದೇಶವನ್ನು ಕರ್ನಾಟಕ ಹೈಕೋರ್ಟ್ ಮಾಡಿದೆ. https://kannadanewsnow.com/kannada/conduct-a-survey-of-the-scheduled-castes-also-on-sunday-bbmp-commissioner-maheshwar-raos-instructions/ https://kannadanewsnow.com/kannada/security-drills-to-be-conducted-tomorrow-in-gujarat-rajasthan-punjab-and-jammu-kashmir/
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾರ್ವಜನಿಕ ರಜಾ ದಿನವಾದ ಭಾನುವಾರವೂ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯವನ್ನು ಪರಿಣಾಮಕಾರಿಯಾಗಿ ಮಾಡಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ದಕ್ಷಿಣ ಹಾಗೂ ಬೊಮ್ಮನಹಳ್ಳಿ ವಲಯಗಳಲ್ಲಿ ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯಕ್ಕೆ ಸಂಬಂಧಿಸಿದಂತೆ ಆಯಾ ವಲಯ ಕಛೇರಿಗಳಲ್ಲಿ ಅಧಿಕಾರಿಗಳ ಜೊತೆ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು. ಈ ಉದ್ದೇಶದಿಂದ ಪರಿಶಿಷ್ಟ ಜಾತಿ ಸಮುದಾಯಗಳು ಹೆಚ್ಚು ವಾಸವಿರುವ ಪ್ರದೇಶಗಳಲ್ಲಿ ಬೂತ್ ಮಟ್ಟದಲ್ಲಿ ಪ್ರಚಾರ ಕಾರ್ಯಗಳನ್ನು ಕೈಗೊಳ್ಳಲು ಸಹಾಯಕ ಕಂದಾಯ ಅಧಿಕಾರಿಗಳಿಗೆ ಸೂಚಿಸಿದರು. ಬೂತ್ ಮಟ್ಟದಲ್ಲಿ ಹಾಗೂ ವಾರ್ಡ್ ಮಟ್ಟದಲ್ಲಿ ಜಾಗೃತಿ ಮೂಡಿಸಲು ಗಣತಿದಾರರ ಹೆಸರು ಮತ್ತು ಸಂಪರ್ಕ ವಿವರಗಳಿರುವ ಪಟ್ಟಿ ಸಿದ್ದಪಡಿಸಬೇಕು. ಆಯಾ ವಾರ್ಡ್ ವ್ಯಾಪ್ತಿಯಲ್ಲಿ ಈ ಬಗ್ಗೆ ಹೆಚ್ಚು ಪ್ರಚಾರ ಮಾಡಿ ಪರಿಶಿಷ್ಟ ಜಾತಿ ಸಮುದಾಯದ ಎಲ್ಲರೂ ಸಮೀಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕೆಂದು ತಿಳಿಸಿದರು. ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ (RWA) ಸಹಯೋಗ…
ಬೆಂಗಳೂರು: ಕೆಪಿಟಿಸಿಎಲ್ ನ ಎಇ, ಜೆಇ ಹುದ್ದೆಗಳ ಆಯ್ಕೆ ಪಟ್ಟಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಮೇ.8, 2024ರಂದು ಪ್ರಕಟಿಸಿದ್ದಂತ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿ, ಮರುಪರೀಕ್ಷೆಗೆ ಹೈಕೋರ್ಟ್ ಆದೇಶಿಸಿದೆ. ಈ ಸಂಬಂಧ ಹೈಕೋರ್ಟ್ ಗೆ ನೆಗೆಟಿವ್ ಮಾರ್ಕಿಂಗ್ ಪ್ರಶ್ನಿಸಿ ಅಭ್ಯರ್ಥಿಗಳು ಸಲ್ಲಿಸಿದ್ದಂತ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ, ನ್ಯಾಯಮೂರ್ತಿ ಕೆ.ವಿ ಅರವಿಂದ್ ಅವರಿದ್ದಂತ ಪೀಠವು ವಿಚಾರಣೆ ನಡೆಸಿ, ಈ ಆದೇಶ ಮಾಡಿದೆ. ಫೆಬ್ರವರಿ 18, 2024ರಂದು ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ಮರುಪರೀಕ್ಷೆ ನಡೆಸುವಂತೆ ಕೆಪಿಸಿಎಲ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಅಲ್ಲದೇ ನೆಗೆಟಿವ್ ಮಾರ್ಕಿಂಗ್ ಬಗ್ಗೆ ಪೂರ್ವ ಮಾಹಿತಿ ನೀಡಲು ಸೂಚಿಸಿರುವಂತ ಸೂಚಿಸಿದೆ. https://kannadanewsnow.com/kannada/tax-on-garbage-in-bengaluru-r-ashok-demands-withdrawal-of-decision-to-impose-fee/ https://kannadanewsnow.com/kannada/security-drills-to-be-conducted-tomorrow-in-gujarat-rajasthan-punjab-and-jammu-kashmir/
ಬೆಂಗಳೂರು: ಬೆಂಗಳೂರಿನ ಜನರ ಮೇಲೆ ಕಸದ ಸೆಸ್ ಜೊತೆಗೆ, ಬಳಕೆದಾರರ ಶುಲ್ಕ ವಿಧಿಸಲಾಗಿದೆ. ಈ ನಿರ್ಧಾರವನ್ನು ಸರ್ಕಾರ ಹಿಂಪಡೆದು ಹಿಂದಿನಂತೆಯೇ ಚದರ ಅಡಿಗೆ ತಕ್ಕಂತೆ ಶುಲ್ಕ ವಿಧಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಬಿಬಿಎಂಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಜನರ ಮೇಲೆ ಕಾಂಗ್ರೆಸ್ ಸರಕಾರ ಟನ್ನುಗಟ್ಟಲೆ ತೆರಿಗೆಯ ಭಾರವನ್ನು ಹೇರಿದೆ. ಈಗ ಕಸದಿಂದ ರಸ ತೆಗೆಯುವ ಸ್ಕೀಮ್ ಮಾಡಿದ್ದಾರೆ. ಇಡೀ ದೇಶದಲ್ಲಿ ಅತಿ ಹೆಚ್ಚು ಕಸದ ತೆರಿಗೆಯನ್ನು ಕಾಂಗ್ರೆಸ್ ವಿಧಿಸಿದೆ. ಕೆಂಪೇಗೌಡರು ನಾಡು ಕಟ್ಟಿದ ನಾಡಪ್ರಭು ಎಂಬ ಹೆಸರು ಪಡೆದಿದ್ದರೆ, ಕಾಂಗ್ರೆಸ್ ನಾಯಕರು ನಾಡನ್ನು ಹಾಳು ಮಾಡಿದವರು ಎಂಬ ಬಿರುದು ಪಡೆದಿದ್ದಾರೆ ಎಂದು ಟೀಕಿಸಿದರು. ಈ ಮೊದಲು ನಗರದಲ್ಲಿ ಸೆಸ್ ಇತ್ತು. ಈಗ ಇದರ ಜೊತೆಗೆ ಬಳಕೆದಾರರ ಶುಲ್ಕ ವಿಧಿಸಿದ್ದಾರೆ. ಸೆಸ್ನಿಂದಲೇ ಸುಮಾರು 250 ಕೋಟಿ ರೂ. ಸಂಗ್ರಹವಾಗುತ್ತಿದೆ. ಕಸದ ಟೆಂಡರ್ನ ಮೌಲ್ಯವೇ 147 ಕೋಟಿ ರೂ. ಆಗಿದ್ದರೆ, ಜನರಿಂದ ಅತ್ಯಧಿಕ ಶುಲ್ಕ ವಸೂಲಿ ಮಾಡುತ್ತಿದ್ದಾರೆ. ಇನ್ನು ಬಳಕೆದಾರರ ಶುಲ್ಕವೂ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇಂದಿನಿಂದ ಮತ್ತೆ ಆರು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಇಂದಿನಿಂದ 6 ದಿನ ಗುಡುಗು, ಮಿಂಚು ಸಹಿತ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. https://twitter.com/KarnatakaVarthe/status/1927652643616223421 ಕಳೆದ ಒಂದು ವಾರದಿಂದ ಎಡಬಿಡದೆ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಚಳಿಗಾಳಿ ಬೀಸುತ್ತಿದ್ದು, ಜನರು ಹೊರ ಬರದಂತೆ ಆಗಿದೆ. ಮಹಾಮಳೆಗೆ ರಾಜ್ಯದ ಹಲವೆಡೆ ಸಾವು-ನೋವುಗಳು ಸಂಭವಿಸಿದ್ದಾವೆ. ಅಲ್ಲಲ್ಲೇ ಮನೆ, ಧನದ ಕೊಟ್ಟಿಗೆಗಳು ಬಿದ್ದು ಹಾನಿಗೊಂಡಿದ್ದಾವೆ. ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಪರಿಹಾರ ನೀಡುವಂತ ಕಾರ್ಯವನ್ನು ಸ್ಥಳೀಯ ಆಡಳಿತಗಳು ಮಾಡುತ್ತಿವೆ. https://kannadanewsnow.com/kannada/parking-dispute-man-bites-neighbors-nose/ https://kannadanewsnow.com/kannada/thug-of-life-controvarsary/
ಉತ್ತರ ಪ್ರದೇಶ: ಇಲ್ಲಿನ ಕಾನ್ಪುರದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಪಾರ್ಕಿಂಗ್ ಗಲಾಟೆಯ ವೇಳೆಯಲ್ಲಿ ವ್ಯಕ್ತಿಯೊಬ್ಬ ನಿವೃತ್ತ ಎಂಜಿನಿಯರ್ ಒಬ್ಬರ ಮೂಗನ್ನು ಕಚ್ಚಿದ್ದಾನೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಗಾಯಾಳುವನ್ನು ಅವರ ಕುಟುಂಬ ಖಾಸಗಿ ಆಸ್ಪತ್ರೆಗೆ ದಾಖಲಿಸಿದೆ. ಏತನ್ಮಧ್ಯೆ, ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ವರದಿಗಳ ಪ್ರಕಾರ, ನರಮಾವೊದ ರತನ್ ಪ್ಲಾನೆಟ್ ಅಪಾರ್ಟ್ಮೆಂಟ್ಸ್ನ ಕಾರ್ಯದರ್ಶಿ ನಿವೃತ್ತ ಎಂಜಿನಿಯರ್ ರೂಪೇಂದ್ರ ಸಿಂಗ್ ಯಾದವ್ ಅವರಿಗೆ ಭಾನುವಾರ ಸಂಜೆ ನಿವಾಸಿ ಕ್ಷಿತಿಜ್ ಮಿಶ್ರಾ ಕರೆ ಮಾಡಿದ್ದಾರೆ. ಮತ್ತೊಬ್ಬ ನಿವಾಸಿಯ ಕಾರು ತನ್ನ ನಿಗದಿತ ಸ್ಥಳದಲ್ಲಿ ನಿಂತಿದೆ ಎಂದು ಮಿಶ್ರಾ ದೂರಿದ್ದಾರೆ. ಸಮಸ್ಯೆಯನ್ನು ಪರಿಹರಿಸಲು ಯಾದವ್ ಭದ್ರತಾ ಸಿಬ್ಬಂದಿಗೆ ಸೂಚಿಸಿದರು. ಆದರೆ ಮಿಶ್ರಾ ಯಾದವ್ ಅವರನ್ನು ಕೆಳಗಿಳಿಯುವಂತೆ ಒತ್ತಾಯಿಸಿದರು. ಆಗಮಿಸಿದ ಮಿಶ್ರಾ, ಯಾದವ್ ಅವರನ್ನು ಕಪಾಳಮೋಕ್ಷ ಮಾಡಿ ನಂತರ ಇದ್ದಕ್ಕಿದ್ದಂತೆ ಅವರ ಮೂಗಿನ ಭಾಗವನ್ನು ಕಚ್ಚಿದರು. ಪಾರ್ಕಿಂಗ್ ಸ್ಥಳದಲ್ಲಿ ಯಾದವ್ ಕುಸಿದು ಬಿದ್ದು, ತೀವ್ರ ರಕ್ತಸ್ರಾವವಾಯಿತು. ಇಡೀ ಘಟನೆ ಸೊಸೈಟಿಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. https://twitter.com/janabkhan08/status/1927288388261929207 ಯಾದವ್…
ಬೆಂಗಳೂರು: ಕನ್ನಡದ ಭಾಷೆ ಬಗ್ಗೆ ಹಗುರವಾಗಿ ಮಾತನಾಡಿರುವ ನಟ ಕಮಲ್ ಹಾಸನ್ ಅವರು ಕೂಡಲೇ ರಾಜ್ಯದ ಜನರ ಕ್ಷಮೆಯಾಚಿಸಬೇಕು, ಇಲ್ಲದ್ದಿದ್ದರೆ ಅವರ ಚಿತ್ರಗಳಿಗೆ ರಾಜ್ಯದಲ್ಲಿ ನಿರ್ಬಂಧ ಏರುವಂತೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆಯಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಹೇಳಿದ್ದಾರೆ. ವಿಕಾಸಸೌಧದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡದ ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ದೊಡ್ಡ ವ್ಯಕ್ತಿ ಇದ್ದರೂ ಅದನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕಮಲ್ ಹಾಸನ್ ಅವರು ಕೂಡಲೇ ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಕನ್ನಡದ ಹಲವು ಚಿತ್ರಗಳಲ್ಲಿ ಕಮಲ್ ಹಾಸನ್ ಅವರು ನಟನೆ ಮಾಡಿದ್ದಾರೆ. ಓರ್ವ ಹಿರಿಯ ನಟ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಅವರ ಚಿತ್ರಗಳಿಗೆ ರಾಜ್ಯದಲ್ಲಿ ಬಿಡುಗಡೆಗೆ ನಿಷೇಧ ಏರುವಂತೆ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆಯಲಾವುದು ಎಂದು ತಿಳಿಸಿದರು. ನಟನೆ ಮಾಡಲು ಹಾಗೂ ಹಣ ಸಂಪಾದನೆ…
ನವದೆಹಲಿ: ಐಟಿಸಿ ನೇತೃತ್ವದ ಹೆವಿವೇಯ್ಟ್ಗಳು ಮಾರುಕಟ್ಟೆಯ ಮೇಲೆ ಒತ್ತಡ ಹೇರುತ್ತಿರುವುದರಿಂದ, ಮೇ 28 ರ ಬುಧವಾರದಂದು ಭಾರತೀಯ ಮುಂಚೂಣಿ ಸೂಚ್ಯಂಕಗಳು ತಮ್ಮ ಸತತ ಎರಡನೇ ದಿನದ ನಷ್ಟದ ಹಾದಿಯನ್ನು ಮುಂದುವರಿಸಿದವು. ವಾಲ್ ಸ್ಟ್ರೀಟ್ನಿಂದ ಬಲವಾದ ಹಸ್ತಾಂತರದ ಹೊರತಾಗಿಯೂ, ಆಟೋ, ಐಟಿ ಮತ್ತು ಮೆಟಲ್ ಕೌಂಟರ್ಗಳಲ್ಲಿ ಲಾಭದ ಬುಕಿಂಗ್ ಸಹ ಮಾನದಂಡ ಸೂಚ್ಯಂಕಗಳ ಮೇಲೆ ಒತ್ತಡ ಹೇರಿತು. ನಿಫ್ಟಿ 50 63 ಪಾಯಿಂಟ್ಗಳ ಕುಸಿತದೊಂದಿಗೆ ಅಥವಾ 0.3% ರಷ್ಟು 24,752 ಕ್ಕೆ ಸ್ಥಿರವಾಯಿತು, ಆದರೆ ಸೆನ್ಸೆಕ್ಸ್ 240 ಪಾಯಿಂಟ್ಗಳ ಕುಸಿತದೊಂದಿಗೆ ಅಥವಾ 0.29% ರಷ್ಟು 81,312 ಕ್ಕೆ ದಿನದ ಅಂತ್ಯವನ್ನು ತಲುಪಿತು. ನಿಫ್ಟಿ ಸ್ಮಾಲ್ಕ್ಯಾಪ್ 100 ಸೂಚ್ಯಂಕವು 0.33% ರಷ್ಟು ಏರಿಕೆ ಕಂಡರೆ, ನಿಫ್ಟಿ ಮಿಡ್ಕ್ಯಾಪ್ 100 ಸೂಚ್ಯಂಕವು ಸ್ಥಿರವಾಗಿ ಮುಕ್ತಾಯಗೊಂಡ ಕಾರಣ ವಿಶಾಲ ಮಾರುಕಟ್ಟೆಗಳು ಪ್ರವೃತ್ತಿಯನ್ನು ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾದವು. ವೈಯಕ್ತಿಕ ಷೇರುಗಳ ವಿಷಯದಲ್ಲಿ, ಬ್ರಿಟಿಷ್ ಬಹುರಾಷ್ಟ್ರೀಯ ಬಿಎಟಿ ಪಿಎಲ್ಸಿ ₹11,613 ಕೋಟಿ ಮೌಲ್ಯದ ಬ್ಲಾಕ್ ಡೀಲ್ ಮೂಲಕ ಸಂಸ್ಥೆಯಲ್ಲಿನ ತನ್ನ ಪಾಲನ್ನು…












