Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಭಾರತದ ಸ್ವದೇಶಿ ಮೆಸೇಜಿಂಗ್ ಅಪ್ಲಿಕೇಶನ್ ಅರಟ್ಟೈ, ಆಪ್ ಸ್ಟೋರ್ ಶ್ರೇಯಾಂಕದಲ್ಲಿ ಪ್ರಮುಖ ಜಾಗತಿಕ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿ ಅಗ್ರಸ್ಥಾನ ಪಡೆದಿದೆ. ಇದು ಅದರ ಬೆಳೆಯುತ್ತಿರುವ ಆಕರ್ಷಣೆ ಮತ್ತು ಅದರೊಂದಿಗೆ ಬರುವ ಒತ್ತಡ ಎರಡನ್ನೂ ಎತ್ತಿ ತೋರಿಸುವ ಒಂದು ಮೈಲಿಗಲ್ಲು. ಮೂಲತಃ 2021 ರಲ್ಲಿ ಜೊಹೊ ಅವರಿಂದ ಪ್ರಾರಂಭಿಸಲ್ಪಟ್ಟ ಅರಟ್ಟೈ (“ಚಾಟ್” ಅಥವಾ “ಚಿಟ್-ಚಾಟ್” ಗಾಗಿ ತಮಿಳು ಪದ) ಇತ್ತೀಚಿನವರೆಗೂ ಪ್ರಾಯೋಗಿಕ ಯೋಜನೆಯಾಗಿ ಪರಿಗಣಿಸಲ್ಪಟ್ಟಿತ್ತು. ಆದರೆ ಡೇಟಾ ಗೌಪ್ಯತೆ, ಜಾಗತಿಕ ಕಣ್ಗಾವಲು ಮತ್ತು “ತಂತ್ರಜ್ಞಾನ ಸಾರ್ವಭೌಮತ್ವ”ದ ಬಗ್ಗೆ ಹೆಚ್ಚುತ್ತಿರುವ ಕಾಳಜಿಗಳೊಂದಿಗೆ ಪ್ರಸ್ತುತ ವಾತಾವರಣದಲ್ಲಿ. “ಸ್ಪೈವೇರ್-ಮುಕ್ತ, ಭಾರತದಲ್ಲಿ ತಯಾರಿಸಿದ” ಮೆಸೆಂಜರ್ ಆಗಿ ಅರಟ್ಟೈನ ಸ್ಥಾನೀಕರಣವು ಭಾರತೀಯರಲ್ಲಿ ಪ್ರತಿಧ್ವನಿಸಿದೆ. ಭಾರತದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಶಿಫಾರಸು ಮಾಡಿದ ಅಪ್ಲಿಕೇಶನ್ಗಳಲ್ಲಿ ಅರಟ್ಟೈ ಅನ್ನು ಉಲ್ಲೇಖಿಸಿ, ಸ್ಥಳೀಯ ಡಿಜಿಟಲ್ ಪ್ಲಾಟ್ಫಾರ್ಮ್ಗಳಿಗೆ ಒಲವು ತೋರುವಂತೆ ನಾಗರಿಕರನ್ನು ಸಾರ್ವಜನಿಕವಾಗಿ ಒತ್ತಾಯಿಸಿದಾಗ ಈ ಆವೇಗವು ಹೆಚ್ಚಾಯಿತು. ಅದೇ ಸಮಯದಲ್ಲಿ, ವಿವೇಕ್ ವಾಧ್ವಾ ಅವರಂತಹ ಉನ್ನತ-ಪ್ರೊಫೈಲ್ ತಂತ್ರಜ್ಞಾನದ ಧ್ವನಿಗಳು ಇದನ್ನು ಪ್ರಯತ್ನಿಸಿದವು…
ಬೆಂಗಳೂರು: ಥಣಿಸಂದ್ರದ ಸಾಮರ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ಮಾನ್ಯತೆಯನ್ನು ಶಾಲಾ ಶಿಕ್ಷಣ ಇಲಾಖೆ ರದ್ದುಪಡಿಸಿದ್ದು, ಶಾಲೆ ನಡೆಸುತ್ತಿರುವ ಮದರಸಾಗೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ನೀಡಿರುವ ಐದು ಲಕ್ಷ ರೂಪಾಯಿ ಅನುದಾನ ವಾಪಸ್ ಪಡೆಯುವುದು ಸೇರಿದಂತೆ ಎಲ್ಲಾ ಅಂಶಗಳನ್ನು ಕಾನೂನಿನನ್ವಯ ಪರಿಶೀಲಿಸುವಂತೆ ರಾಜ್ಯ ಹೈಕೋರ್ಟ್ ಆದೇಶಿಸಿದೆ. ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ವಿಭು ಭಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ನೇತೃತ್ವದ ವಿಭಾಗೀಯಪೀಠ ಈ ಕುರಿತಾದ ಅರ್ಜಿ ವಿಚಾರಣೆ ನಡೆಸಿ ಸಾಮರ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಶಾಲೆ ನಡೆಸುತ್ತಿರುವ ಮದರಸಾಗೆ ನೀಡಿರುವ ಹಣದ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ತೆಗೆದುಕೊಳ್ಳುವಂತೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಆದೇಶಿಸಿದೆ. ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಈ ಪ್ರಕರಣದಲ್ಲಿ ಅರ್ಜಿದಾರರ ಆರೋಪಗಳ ಸತ್ಯಾಸತ್ಯತೆ ಕುರಿತು ನ್ಯಾಯಾಲಯ ಯಾವುದೇ ಅಭಿಪ್ರಾಯ ನೀಡುವುದಿಲ್ಲ. 5 ಲಕ್ಷ ರೂ ವಾಪಸು ಪಡೆಯುವ ವಿಷಯ ಸೇರಿದಂತೆ ಎಲ್ಲಾ ಅಂಶಗಳನ್ನು ಕಾನೂನಿನ ಪ್ರಕಾರ ಪರಿಶೀಲಿಸಬೇಕು, ಅನಗತ್ಯವಾಗಿ ವಿಳಂಬವಿಲ್ಲದೆ ಕ್ರಮ ಕೈಗೊಳ್ಳಬೇಕು…
ಬೆಂಗಳೂರು: ಚಿತ್ರವೊಂದನ್ನು ಡಬ್ಬಿಂಗ್ ಮಾಡುವುದಾಗಿ ನಂಬಿಸಿದಂತ ಆನ್ ಲೈನ್ ವಂಚಕರು ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬುಗೆ 4.25 ಲಕ್ಷ ಪಡೆದು ವಂಚಿಸಿದ್ದಾರೆ. ಸೈಬರ್ ವಂಚಕರ ಕರಾಮತ್ತು ದಿನದಿಂದ ದಿನಕ್ಕೆ ಹೆಚ್ಚಿದೆ. ಇದೀಗ ಕನ್ನಡದ ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಬಳಿಯಲ್ಲಿಯೂ ಬರೋಬ್ಬರಿ 4.25 ಲಕ್ಷವನ್ನು ಸೈಬರ್ ವಂಚಕರು ದೋಚಿದ್ದಾರೆ. ನಟ ಉಪೇಂದ್ರ, ಪತ್ನಿ ಪ್ರಿಯಾಂಕಾಗೆ ವಂಚಿಸಿದ್ದ ಬೆನ್ನಲ್ಲೇ ರಾಜೇಂದ್ರ ಸಿಂಗ್ ಬಾಬು ಅವರಿಗೆ ರಕ್ತ ಕಾಶ್ಮೀರ ಸಿನಿಮಾ ಡಬ್ಬಿಂಗ್ ನೆಪದಲ್ಲಿ ಆಧಾರ್ ಸಂಖ್ಯೆ, ಪಾನ್ ಕಾರ್ಡ್ ದಾಖಲೆ ಪಡೆದು ಸೈಬರ್ ವಂಚಕರು 4.25 ಲಕ್ಷ ರೂಪಾಯಿಗಳನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ. ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರಿಗೆ ರಕ್ತ ಕಾಶ್ಮೀರ ಸಿನಿಮಾವನ್ನು ತೆಲುಗು ಭಾಷೆಗೆ ಡಬ್ಬಿಂಗ್ ಮಾಡುವಂತ ಆಮಿಷವೊಡ್ಡಿ ಸೈಬರ್ ವಂಚಕರು ವಂಚಿಸಿದ್ದಾರೆ. ಈ ಸಂಬಂಧ ಸೈಬರ್ ಕ್ರೈ ಪೊಲೀಸರಿಗೆ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ದೂರು ನೀಡಿದ್ದಾರೆ.
ಚಿತ್ರದುರ್ಗ : ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆ. 22 ರಿಂದ ಪ್ರಾರಂಭಿಸಿದ್ದು, ಗಣತಿ ಕಾರ್ಯಕ್ಕೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಆದರೆ ಚಿತ್ರದುರ್ಗ ತಾಲ್ಲೂಕಿನಲ್ಲಿ ಇದುವರೆಗೂ ಗಣತಿ ಕಾರ್ಯಕ್ಕೆ ವರದಿ ಮಾಡಿಕೊಳ್ಳದಿರುವ 68 ಗಣತಿದಾರರಿಗೆ ನೋಟಿಸ್ ಜಾರಿಗೊಳಿಸಲಾಗಿದ್ದು, ಶಿಸ್ತು ಕ್ರಮಕ್ಕೂ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳು ಕೂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕಾರ್ಯವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು, ಗೈರು ಮತ್ತು ನಿರ್ಲಕ್ಷö್ಯ ತೋರುವ ಸಿಬ್ಬಂದಿಗಳ ಮೇಲೆ ಕಠಿಣ ಕ್ರಮ ಜರುಗಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಕುರಿತಂತೆ ಸಮೀಕ್ಷಾ ಕರ್ತವ್ಯಕ್ಕೆ ಗೈರಾದ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದಾಗ್ಯೂ ಚಿತ್ರದುರ್ಗ ತಾಲ್ಲೂಕಿನಲ್ಲಿಯೇ ಸುಮಾರು 68 ಗಣತಿದಾರರು, ಸಮೀಕ್ಷಾ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಹೀಗಾಗಿ ಈ ಎಲ್ಲ 68 ಗಣತಿದಾರರಿಗೂ ನೋಟಿಸ್ ಜಾರಿಗೊಳಿಸಲಾಗಿದ್ದು, ಶಿಸ್ತು ಕ್ರಮಕ್ಕೂ ಪ್ರಕ್ರಿಯೆ ಆರಂಭಿಸಲಾಗಿದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಇಲ್ಲಸಲ್ಲದ ನೆಪವೊಡ್ಡಿ,…
ಬೆಂಗಳೂರು: ರಾಜ್ಯ ಬಿಜೆಪಿಯ ನಾಯಕರು ಒಬ್ಬೊಬ್ಬರಾಗಿ ಹೊರಗೆ ಬಂದು ನಮ್ಮ ಸಮೀಕ್ಷೆಯನ್ನು ಬಹಿಷ್ಕರಿಸುವಂತೆ ಕರೆನೀಡುವ ಮೂಲಕ ಸಾರ್ವಜನಿಕರ ಎದುರು ಬೆತ್ತಲಾಗುತ್ತಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ನಮ್ಮ ಸರ್ಕಾರ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತಿದ್ದಂತೆಯೇ ‘’ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಕೂಗು ಹಾಕುತ್ತಿರುವವರ ಆಂತರ್ಯದಲ್ಲಿರುವ ನಿಜ ಬಣ್ಣ ಬಯಲಾಗುತ್ತಿದೆ. ರಾಜ್ಯ ಬಿಜೆಪಿಯ ನಾಯಕರು ಒಬ್ಬೊಬ್ಬರಾಗಿ ಹೊರಗೆ ಬಂದು ನಮ್ಮ ಸಮೀಕ್ಷೆಯನ್ನು ಬಹಿಷ್ಕರಿಸುವಂತೆ ಕರೆನೀಡುವ ಮೂಲಕ ಸಾರ್ವಜನಿಕರ ಎದುರು ಬೆತ್ತಲಾಗುತ್ತಿದ್ದಾರೆ ಎಂದು ಗುಡುಗಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಮೀಕ್ಷೆ ಯಾವುದೇ ಒಂದು ಜಾತಿ-ಧರ್ಮಗಳಿಗೆ ಸೀಮಿತವಾದುದಲ್ಲ. ಇದು ರಾಜ್ಯದ ಏಳು ಕೋಟಿ ಜನರ ಸಾಮಾಜಿಕ”,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ. ಇದು ಯಾರ ವಿರುದ್ದವೂ ಅಲ್ಲ, ಇದು ಎಲ್ಲರ ಪರವಾಗಿರುವ ಸಮೀಕ್ಷೆ. ಇದರ ಮುಖ್ಯ ಉದ್ದೇಶ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮಾನತೆಯನ್ನು ಸಾಧಿಸಿ ಸರ್ವರಿಗೂ ಸಮಪಾಲು, ಸಮಬಾಳು…
ನವದೆಹಲಿ: ಏಷ್ಯಾ ಕಪ್ ಟೂರ್ನಿಯ ಎಲ್ಲಾ ಪಂದ್ಯಗಳ ಸಂಭಾವನೆಯನ್ನು ಭಾರತೀಯ ಸೇನೆಗೆ ನೀಡುವುದಾಗಿ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಘೋಷಣೆ ಮಾಡಿದ್ದಾರೆ. ಇಂದು ಮಾಹಿತಿ ಹಂಚಿಕೊಂಡಿರುವಂತ ಅವರು, ಏಷ್ಯಾ ಕಪ್ ಟೂರ್ನಿಯ ಎಲ್ಲಾ ಪಂದ್ಯಗಳ ಸಂಭಾವನೆಯನ್ನು ಪಹಲ್ಗಾಮ್ ದಾಳಿಯ ಸಂತ್ರಸ್ತರು, ಭಾರತೀಯ ಸೇನೆಗೆ ನೀಡುವುದಾಗಿ ಘೋಷಿಸಿದರು. ನಾನು ಆಡಿರುವ ಎಲ್ಲಾ ಪಂದ್ಯಗಳ ಸಂಭಾವನೆಯನ್ನು ಮೀಸಲಿಡುತ್ತೇನೆ. ಪಹಲ್ಗಾಮ್ ದಾಳಿಯ ಸಂತ್ರಸ್ತರು, ಭಾರತೀಯ ಸೇನೆಗೆ ಹಣ ಮೀಸಲಿಡುತ್ತೇನೆ ಎಂಬುದಾಗಿ ಏಷ್ಯಾ ಕಪ್ ಗೆಲುವಿನ ಬಳಿಕ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಘೋಷಿಸಿದ್ದಾರೆ. https://kannadanewsnow.com/kannada/another-good-news-for-householders-from-the-state-government-cooperative-society-to-be-established-soon/ https://kannadanewsnow.com/kannada/a-shameful-incident-has-come-to-light-in-the-state-rs-20-lakh-demanded-for-sexual-intercourse-with-a-minor/
ಶಿವಮೊಗ್ಗ: ರಾಜ್ಯದಲ್ಲಿ ಹಿಂದಿ ಹೇರಿಕೆ ವಿರೋಧಿಸಿ ಪ್ರತಿಭಟನೆ ನಡೆಸಿದಂತ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣದ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವಂತೆ ಸರ್ಕಾರವನ್ನು ಆಗ್ರಹಿಸಿ ಶಿವಮೊಗ್ಗದ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣದ ಶಿವಮೊಗ್ಗ ಜಿಲ್ಲಾಧ್ಯಕ್ಷ ಕೇಬಲ್ ಮಂಜು.ಆರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಸರ್ಕಾರವನ್ನು ಆಗ್ರಹಿಸಲಾಯಿತು. ಈ ವೇಳೆ ಮಾತನಾಡಿದಂತ ಶಿವಮೊಗ್ಗ ಕರವೇ ಜಿಲ್ಲಾಧ್ಯಕ್ಷ ಕೇಬಲ್ ಮಂಜು.ಆರ್ ಅವರು ನಿನ್ನೆ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಪಂಚತಾರಾ ಹೋಟೇಲ್ ನಲ್ಲಿ ಸಂಸದೀಯ ರಾಜಭಾಷಾ ಸಮಿತಿ ನಡೆಸುತ್ತಿದ್ದ ಹಿಂದಿ ಹೇರಿಕೆ ಕುತಂತ್ರಗಳ ಸಮಾಲೋಚನಾ ಕಾರ್ಯಗಾರಕ್ಕೆ ಕರವೇ ಮುಖಂಡರು, ಕಾರ್ಯಕರ್ತರು ತೆರಳಿ ಪ್ರತಿಭಟನೆ ನಡೆಸಿದ್ದಾರೆ. ಆ ಮೂಲಕ ಹಿಂದಿ ಸಾಮ್ರಾಜ್ಯ ಶಾಹಿಗಳಿಗೆ ಬಹುದೊಡ್ಡ ಎಚ್ಚರಿಕೆ ನೀಡಲಾಗಿದೆ ಎಂದರು. ಸ್ವಾತಂತ್ರ್ಯ ನಂತ್ರ ಇದೇ ರಾಜ ಭಾಷಾ ಆಯೋಗ, ಸಮಿತಿ ಹಿಂದಿಯೇತರ ರಾಜ್ಯಗಳ ಮೇಲೆ ಬಲವಂತವಾಗಿ ಹೇರುವ ವ್ಯವಸ್ಥಿತ ಕುತಂತ್ರವನ್ನು ನಡೆಸುತ್ತಾ ಬಂದಿದೆ. ಮೊಟ್ಟ ಮೊದಲ ಬಾರಿಗೆ ಈ ರಾಜ…
ಬೆಂಗಳೂರು: ಸೆ.29ರ ಇಂದು ವಿಶ್ವ ಹೃದಯ ದಿನ. ಹೃದಯದ ಪ್ರತಿ ಬಡಿತವೂ ಮುಖ್ಯ. ಇದೇ ಸಂದರ್ಭದಲ್ಲಿ ಸರ್ಕಾರ ಜಾರಿಗೊಳಿಸಿದಂತ ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಗೆ ರಾಜ್ಯಾಧ್ಯಂತ ಭರ್ಜರಿ ರೆಸ್ಪಾನ್ ದೊರೆತಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ಹಂಚಿಕೊಂಡಿದ್ದು, ಹೃದಯಾಘಾತಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ನಮ್ಮ ರಾಜ್ಯ ಸರ್ಕಾರದ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಹಲವರ ಹೃದಯ ಮಿಡಿತವನ್ನ ಜೀವಂತವಾಗಿರುಸುವಲ್ಲಿ ಯಶಸ್ವಿಯಾಗುತ್ತಿದೆ. ಯೋಜನೆ ಮುಖಾಂತರ ಇಲ್ಲಿಯ ವರೆಗು 9,21,020 ಜನರ ಇಸಿಜಿ ತೆಗೆಯಲಾಗಿದೆ. ಸುಮಾರು 13515 STEMI ಪ್ರಕರಣಗಳು ಕಂಡುಬಂದಿದ್ದು, Thrombolysis , Angioplasty, Stent & CABG ಸೇರಿದಂತೆ ಹೃದಯ ಸಮಸ್ಯೆ ಇರುವ 7815 ಜನರು ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದಿದ್ದಾರೆ. ವಿಶೇಷವಾಗಿ ಟೆನೆಕ್ಟೇಪ್ಲೇಸ್ ಚುಚ್ಚುಮದ್ದು ನೀಡುವ ಮೂಲಕ 1106 ಜನರಿಗೆ ಹಠಾತ್ ಹೃದಯಾಘಾತ ಆಗುವುದನ್ನ ತಪ್ಪಿಸಲಾಗಿದೆ. ಸಹಸ್ರಾರು ಜನರ ಜೀವ ಉಳಿಸುವಲ್ಲಿ ಹೃದಯ ಜ್ಯೋತಿ ಯೋಜನೆ ಯಶಸ್ವಿಯಾಗಿದ್ದು, ವಿಶ್ವ ಹೃದಯ ದಿನಾಚರಣೆಯ ಈ ಸಂದರ್ಭದಲ್ಲಿ, ಯೋಜನೆಯನ್ನು…
ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಘಾತಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವುದು ಜನರಲ್ಲಿ ಆತಂಕ ಮೂಡುವಂತೆ ಮಾಡಿದೆ.ವೇಗವಾಗಿ ಬೆಳೆಯುತ್ತಿರುವ ಆಧುನಿಕ ಬದುಕಿಗೆ ಹೊಂದಿಕೊಳ್ಳುತ್ತಾ, ಎಲ್ಲರ ಜೀವನಶೈಲಿ ಹಾಗೂ ಆಹಾರ ಪದ್ಧತಿ ಬದಲಾಗಿರುವ ಪರಿಣಾಮ ಮನುಷ್ಯನ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಸದ್ದಿಲ್ಲದೆ ದುಷ್ಪರಿಣಾಮಿಸುತ್ತಿದೆ. ಹೆಚ್ಚುತ್ತಿರುವ ಹೃದಯಘಾತಕ್ಕೆ ಕಾರಣಗಳನ್ನು ಗಮನಿಸಿದಾಗ ಬಹು ಮುಖ್ಯವಾಗಿ ಮಾದಕ ವಸ್ತುಗಳ ಸೇವನೆಯು( ಸಿಗರೇಟ್,ಗುಟಕ ಇತ್ಯಾದಿ) ಎದ್ದು ತೋರುತ್ತಿದ್ದರು. ಆಧುನಿಕ ಜೀವನ ಶೈಲಿ ಮತ್ತು ಆಹಾರ ಪದ್ಧತಿ ತೆರೆಮರೆಯಲ್ಲಿ ಇರುವ ಕಾರಣಗಳು. ಆಹಾರ ಪದ್ಧತಿ : “ಆಹಾರ ಸಂಭವೋ ದೇಹಃ” ಅಂದರೆ ದೇಹವು ಆಹಾರದಿಂದ ರಚನೆಯಾಗಿದೆ. ಹೀಗಿದ್ದಲ್ಲಿ ಪಾಶ್ಚಿಮಾತ್ಯ ಜೀವನಶೈಲಿಯ ಅನುಕರಣೆಯಿಂದ ಅತಿಯಾದ ಜಂಕ್ ಫುಡ್ಗ / ಫಾಸ್ಟಪುಡ್ ಗಳ ಸೇವನೆಯಿಂದ, ಅಪರೂಪವಾಗಿದ್ದಂತಹ ಸಕ್ಕರೆ ಕಾಯಿಲೆ,ರಕ್ತದೊತ್ತಡ ಹಾಗೂ ಹೃದಯ ಸಂಬಂಧಿ ಕಾಯಿಲೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿವೆ. ಕೇವಲ ಆಕರ್ಷಣೆ ಮತ್ತು ರುಚಿಕರವಾದಂತಹ ಈ ಪದಾರ್ಥಗಳು ಕಡಿಮೆ ಪೌಷ್ಟಿಕತೆ, ಅತಿಯಾದ ಕ್ಯಾಲೋರಿಗಳಿಂದ ಕೂಡಿವೆ.ಹಲವಾರು ಸಂಶೋಧನೆಗಳ ಪ್ರಕಾರ ಇಂತಹ ಪದಾರ್ಥಗಳ ಸೇವನೆಯಿಂದ…
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ಇತರೆ ಕಡೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಹಾಗೂ ನೀರಿನ ಸಂಪರ್ಕ ಕಲ್ಪಿಸಲು ಇರುವ ಸಮಸ್ಯೆಗಳ ಕುರಿತಂತೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಆ ಸಭೆಯಲ್ಲಿ ಚರ್ಚಿಸಲಾದಂತ ವಿಷಯಗಳ ಪ್ರಮುಖ ಹೈಲೈಟ್ಸ್ ಮುಂದಿದೆ. ದಿನಾಂಕ: 17-12-2024ರ ಸರ್ವೋಚ್ಚ ನ್ಯಾಯಾಲಯದ ಆದೇಶದ ನಂತರ ಗ್ರೇಟರ್ ಬೆಂಗಳೂರು ಸೇರಿದಂತೆ ರಾಜ್ಯ ವ್ಯಾಪ್ತಿಯಲ್ಲಿ ಸಿಸಿ ಮತ್ತು ಓಸಿ ಇಲ್ಲದೇ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡಲು ಸಮಸ್ಯೆ ಉಂಟಾಗಿರುವ ಬಗ್ಗೆ ಚರ್ಚೆ ನಡೆಸಲಾಯಿತು. ಸುಪ್ರೀಂಕೋರ್ಟ್ ನ ಆದೇಶ ಭಾರತದ ಎಲ್ಲ ರಾಜ್ಯಗಳಿಗೂ ಅನ್ವಯವಾಗುತ್ತಿದ್ದೂ, ಎಲ್ಲ ರಾಜ್ಯಗಳೂ ಆದೇಶವನ್ನು ಅನುಷ್ಠಾನಗೊಳಿಸುತ್ತಿವೆಯೇ? ಪರಿಶೀಲಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿದರು ನಿಯಮ ಉಲ್ಲಂಘಿಸಿ ನಿರ್ಮಾಣಗೊಂಡಿರುವ ಕಟ್ಟಡಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಅನುಮತಿ ನೀಡುವ ಸಾಧ್ಯತೆ ಬಗ್ಗೆ ಚರ್ಚೆ ನಡೆಸಲಾಗಿ, ನಿರ್ಮಾಣಗೊಂಡಿರುವ ಕಟ್ಟಡಗಳನ್ನು ನೆಲಸಮಗೊಳಿಸಲು ಸಾಧ್ಯವಿಲ್ಲ.ಸರ್ಕಾರದ ನಿರ್ಧಾರದಿಂದ ಜನರಿಗೆ ಅನುಕೂಲವಾಗಬೇಕು. ಸೂಕ್ತ ಅನುಮತಿಗಳಿಲ್ಲದೇ ಈಗಾಗಲೇ ಮನೆ ನಿರ್ಮಿಸಿ ವಾಸವಿದ್ದಾರೆ. ಅಂತಹವರಿಗೆ…




