Subscribe to Updates
Get the latest creative news from FooBar about art, design and business.
Author: kannadanewsnow09
ಯೆಮೆನ್ ರಾಜಧಾನಿ ಸನಾ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ ಬೆಂಬಲಿತ ಹೌತಿ ಪ್ರಧಾನ ಮಂತ್ರಿ ಅಹ್ಮದ್ ಅಲ್-ರಹಾವಿ ಸಾವನ್ನಪ್ಪಿದ್ದಾರೆ ಎಂದು ಯೆಮೆನ್ ಮತ್ತು ಇಸ್ರೇಲಿ ವರದಿಗಳನ್ನು ಉಲ್ಲೇಖಿಸಿ ಯೂರೋನ್ಯೂಸ್ ವರದಿ ಮಾಡಿದೆ. ಹೌತಿ ರಕ್ಷಣಾ ಸಚಿವರು ಸೇರಿದಂತೆ ಉನ್ನತ ಮಿಲಿಟರಿ ಅಧಿಕಾರಿಗಳನ್ನು ಸಹ ಈ ದಾಳಿಗಳು ಗುರಿಯಾಗಿಸಿಕೊಂಡಿವೆ. ಪ್ಯಾಲೆಸ್ಟೀನಿಯನ್ನರಿಗೆ ಬೆಂಬಲ ವ್ಯಕ್ತಪಡಿಸಲು ಪದೇ ಪದೇ ಕ್ಷಿಪಣಿಗಳು ಮತ್ತು ಡ್ರೋನ್ಗಳನ್ನು ಹಾರಿಸುತ್ತಿದ್ದ ಇರಾನ್ ಬೆಂಬಲಿತ ಗುಂಪಿನ ವಿರುದ್ಧ ಮಾರಕ ಸುತ್ತಿನ ಬಾಂಬ್ ದಾಳಿಯ ನಾಲ್ಕು ದಿನಗಳ ನಂತರ, ಗುರುವಾರ ಹೌತಿ ನಿಯಂತ್ರಿತ ರಾಜಧಾನಿ ಯೆಮೆನ್ ಮೇಲೆ ದಾಳಿ ನಡೆಸಿರುವುದಾಗಿ ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್) ತಿಳಿಸಿವೆ. ಆ ದಾಳಿಗಳ ನಂತರ ಇಸ್ರೇಲ್ ಸೇನೆಯು, ಇಸ್ರೇಲ್ ವಿರುದ್ಧದ ದಾಳಿಗಳಿಗೆ ಪ್ರತಿಯಾಗಿ ಅಧ್ಯಕ್ಷರ ಭವನ ಸೇರಿದಂತೆ ಹುತಿ ಮಿಲಿಟರಿ ತಾಣಗಳೆಂದು ಹೇಳಲಾದ ಸ್ಥಳಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿದೆ. ಸನಾದಲ್ಲಿನ ಅಧಿಕಾರಿಗಳು ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು 90 ಜನರು ಗಾಯಗೊಂಡಿದ್ದಾರೆ ಎಂದು…
ಬೆಂಗಳೂರು: ಕರ್ನಾಟಕದಿಂದ ತಿರು ಓಣಂ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ ಎಸ್ ಆರ್ ಟಿ ಸಿಯಿಂದ ವಿಶೇಷ ಸಾರಿಗೆ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ: 05.09.2025 ರಂದು ತಿರು ಓಣಂ ಹಬ್ಬದ ಪ್ರಯುಕ್ತ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ: 02.09.2025 ರಿಂದ 04.09.2025 ರವರೆಗೆ ಬೆಂಗಳೂರಿನಿಂದ ಕೇರಳ ರಾಜ್ಯದ ಈ ಕೆಳಕಂಡ ಸ್ಥಳಗಳಿಗೆ ಹಾಲಿ ಕಾರ್ಯಾಚರಿಸುತ್ತಿರುವ ಸಾರಿಗೆಗಳ ಜೊತೆಗೆ 90 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ನಂತರ ಕೇರಳ ರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ: 07.09.2025 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದಿದೆ. ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣ ಹಾಗೂ ಶಾಂತಿನಗರ ಬಸ್ ನಿಲ್ದಾಣದಿಂದ ಕೇರಳ ರಾಜ್ಯಕ್ಕೆೆ ಅಂದರೆ ಕಣ್ಣೂರು, ಕೋಜಿಕೋಡ್, ಎರ್ನಾಕುಲಂ, ಪಾಲಕ್ಕಾಡ್, ತ್ರಿಶೂರ್, ಕೊಟ್ಟಾಯಂ, ತಿರುವನಂತಪುರಂ ಮುಂತಾದ ಸ್ಥಳಗಳಿಗೆ ವಿಶೇಷ…
ಮೈಸೂರು: ದಸರಾ, ದೀಪಾವಳಿ ಮತ್ತು ಚಟ್ ಹಬ್ಬದ ಅವಧಿಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಸರಿದೂಗಿಸಲು, ದಕ್ಷಿಣ ಮಧ್ಯ ರೈಲ್ವೆಯು ರೈಲು ಸಂಖ್ಯೆ 07033/07034 ಸಿಕಂದರಾಬಾದ್ – ಮೈಸೂರು – ಸಿಕಂದರಾಬಾದ್ ವಿಶೇಷ ರೈಲುಗಳ ಸಂಚಾರವನ್ನು ಈ ಮೊದಲಿನ ಸಮಯ, ನಿಲ್ದಾಣಗಳು ಮತ್ತು ಬೋಗಿ ವಿನ್ಯಾಸದಲ್ಲೇ ಮುಂದುವರಿಸುವುದಾಗಿ ಪ್ರಕಟಿಸಿದೆ. ರೈಲು ಸಂಖ್ಯೆ. 07033 ಸಿಕಂದರಾಬಾದ್ – ಮೈಸೂರು ವಿಶೇಷ ರೈಲು 01.09.2025 ರಿಂದ 31.10.2025 ರವರೆಗೆ, ಸೋಮವಾರ ಮತ್ತು ಶುಕ್ರವಾರಗಳಲ್ಲಿ ಒಟ್ಟು 17 ಟ್ರಿಪ್ ಗಳನ್ನು ಓಡುತ್ತದೆ. ಆದರೆ, 29.09.2025ರಂದು ಸಿಕಂದರಾಬಾದ್ ನಿಂದ ಸಂಚರಿಸುವುದಿಲ್ಲ. ಹಿಂತಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ. 07034 ಮೈಸೂರು – ಸಿಕಂದರಾಬಾದ್ ವಿಶೇಷ ರೈಲು 02.09.2025 ರಿಂದ 01.11.2025 ರವರೆಗೆ, ಮಂಗಳವಾರ ಮತ್ತು ಶನಿವಾರಗಳಲ್ಲಿ ಒಟ್ಟು 17 ಟ್ರಿಪ್ ಗಳನ್ನು ಓಡುತ್ತದೆ. ಆದರೆ, 30.09.2025ರಂದು ಮೈಸೂರಿನಿಂದ ಸಂಚರಿಸುವುದಿಲ್ಲ. https://kannadanewsnow.com/kannada/the-idgah-maidan-in-hubballi-will-henceforth-be-known-as-rani-chennamma-maidan-official-announcement-from-the-municipality/ https://kannadanewsnow.com/kannada/ugcet-neet-2nd-round-provisional-results-announced/
ಹುಬ್ಬಳ್ಳಿ: ಪ್ರತಿ ವರ್ಷವೂ ಗಣೇಶೋತ್ಸವದ ಸಂದರ್ಭದಲ್ಲಿ ವಿವಾದಕ್ಕೆ ಕಾರಣವಾಗುತ್ತಿದ್ದಂತ ಹುಬ್ಬಳ್ಳಿಯ ಈದ್ಗಾ ಮೈದಾನವನ್ನು ರಾಣಿ ಚೆನ್ನಮ್ಮ ಗ್ರೌಂಡ್ ಎಂಬುದಾಗಿ ಹುಬ್ಬಳ್ಳಿ ಮಹಾನಗರ ಪಾಲಿಕೆಯ ಉಪ ಮೇಯರ್ ಸಂತೋಷ್ ಚೌಹ್ವಾಣ್ ಅಧಿಕೃತವಾಗಿ ಘೋಷಿಸಿದ್ದಾರೆ. ಪ್ರತಿ ವರ್ಷ ಗಣೇಶ ಹಬ್ಬ ಪ್ರಾರಂಭವಾಗುತ್ತಿದ್ದಂತೇ, ಹುಬ್ಬಳ್ಳಿಯ ಈದ್ಗಾ ಮೈದಾನ ವಿವಾದಕ್ಕೆ ಕಾರಣವಾಗುತ್ತಿತ್ತು. ಗಣೇಶೋತ್ಸವ ಕೂರಿಸುವ ಸಂಬಂಧ ವಿವಾದ ತೀರ್ವಗೊಳ್ಳುತ್ತಿತ್ತು. ಇದಕ್ಕೆ ಕಾರಣ ಈದ್ಗಾ ಮೈದಾನ ಎಂಬುದಾಗಿ ಹೆಸರಿದ್ದದ್ದೇ ಆಗಿತ್ತು. ಆದರೇ ಈ ಬಾರಿ ಗಣೋಶೋತ್ಸವ ಈದ್ಗಾ ಮೈದಾನದಲ್ಲಿ ಶಾಂತಿಯುತವಾಗಿಯೇ ನಡೆಯುತ್ತಿದೆ. ಈ ಗಣೇಶೋತ್ಸವದ ಸಂದರ್ಭದಲ್ಲಿ ಹುಬ್ಬಳ್ಳಿ ಮಹಾನಗರ ಪಾಲಿಕೆಯಿಂದ ಈದ್ಗಾ ಮೈದಾನವನ್ನು ರಾಣಿ ಚೆನ್ನಮ್ಮ ಮೈದಾನ ಎಂಬುದಾಗಿ ಮರುನಾಮಕರಣ ಮಾಡಲಾಗಿದೆ. ಈಗಾಗಲೇ ಈ ಬಗ್ಗೆ ಹುಬ್ಬಳ್ಳಿ ಮಹಾನಗರ ಪಾಲೀಕೆಯಿಂದ ಠರಾವು ಪಾಸ್ ಮಾಡಲಾಗಿದೆ. ಈ ಬಳಿಕ ಈದ್ಗಾ ಮೈದಾನಕ್ಕೆ ರಾಣಿ ಚೆನ್ನಮ್ಮ ಮೈದಾನವೆಂದು ಹೆಸರಿಟ್ಟಿರೋದಕ್ಕೆ ಹಿಂದೂಪರ ಸಂಘಟನೆಗಳ, ಗಜಾನನ ಉತ್ಸವ ಸಮಿತಿಯವರು ಸಂತಸ ವ್ಯಕ್ತಪಡಿಸಿದ್ದಾರೆ. https://kannadanewsnow.com/kannada/special-trains-will-operate-between-hubballi-raksoul-and-hubballi-bhagat-ki-kothi/ https://kannadanewsnow.com/kannada/ugcet-neet-2nd-round-provisional-results-announced/
ಮುಂಬೈ : ಭಾರತದಲ್ಲಿ ಕೃತಕ ಬುದ್ಧಿಮತ್ತೆ ಕ್ಷೇತ್ರಕ್ಕೆ ಚಾಲನೆಯನ್ನು ನೀಡುವುದಕ್ಕೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಪೂರ್ಣ ಸ್ವಾಮ್ಯದ ಹೊಸ ಘಟಕವಾದ ರಿಲಯನ್ಸ್ ಇಂಟೆಲಿಜೆನ್ಸ್ ಅನ್ನು ಶುಕ್ರವಾರ ಅನಾವರಣಗೊಳಿಸಲಾಗಿದೆ. ಇದು ಟೆಲಿಕಾಂ, ರೀಟೇಲ್ ವ್ಯಾಪಾರ ಮತ್ತು ಇಂಧನ ವ್ಯವಹಾರಗಳ ಜೊತೆಗೆ ಉದ್ಯಮ ಸಮೂಹವನ್ನು “ಡೀಪ್-ಟೆಕ್ ಉದ್ಯಮ” ವನ್ನಾಗಿ ಮಾಡುವ ಮುಕೇಶ್ ಅಂಬಾನಿ ಅವರ ಮಹತ್ವಾಕಾಂಕ್ಷೆಗೆ ಇದು ಪುಷ್ಟಿಯನ್ನು ನೀಡುತ್ತದೆ. ಕಂಪನಿಯು ತನ್ನ ನಾಲ್ಕು ಧ್ಯೇಯಗಳನ್ನು ಅನುಷ್ಠಾನಕ್ಕೆ ತರಲಿದೆ: ಜಾಮ್ನಗರದಲ್ಲಿ ಗಿಗಾವ್ಯಾಟ್-ಪ್ರಮಾಣದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್-ಸಿದ್ಧ ಡೇಟಾ ಕೇಂದ್ರಗಳ ಸ್ಥಾಪನೆ, ಪ್ರಮುಖ ತಂತ್ರಜ್ಞಾನ ಸಂಸ್ಥೆಗಳು ಮತ್ತು ಮುಕ್ತ-ಮೂಲ (ಓಪನ್ ಸೋರ್ಸ್) ಸಮುದಾಯಗಳೊಂದಿಗೆ ಸಹಯೋಗ ಮಾಡಿಕೊಳ್ಳುವುದು, ಶಿಕ್ಷಣ, ಆರೋಗ್ಯ, ಕೃಷಿ ಮತ್ತು ಸಣ್ಣ ವ್ಯಾಪಾರ ಕ್ಷೇತ್ರಗಳಲ್ಲಿ ಎಐ ಸೇವೆಗಳನ್ನು ತರುವುದು ಮತ್ತು ವಿಶ್ವ ದರ್ಜೆಯ ಎಐ ಪ್ರತಿಭೆಗಳನ್ನು ಭಾರತಕ್ಕೆ ಆಕರ್ಷಿಸುವುದು. ಇದನ್ನು ಸಾಕಾರ ಮಾಡುವುದಕ್ಕಾಗಿ ರಿಲಯನ್ಸ್ ಸಿಲಿಕಾನ್ ವ್ಯಾಲಿಯತ್ತ ಮುಖ ಮಾಡುತ್ತಿದೆ. ಸುಂದರ್ ಪಿಚೈ ನೇತೃತ್ವದ ಗೂಗಲ್ನೊಂದಿಗೆ “ಗಹನವಾದ, ಸಮಗ್ರ ಪಾಲುದಾರಿಕೆ”ಯನ್ನು ಅಂಬಾನಿ ಘೋಷಿಸಿದರು. “ಭಾರತದಲ್ಲಿ ಎಐ…
ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶ ಸಂಬಂಧ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪ್ರಕಟಿಸಿದೆ. ಎಂಜಿನಿಯರಿಂಗ್, ಆರ್ಕಿಟೆಕ್ಟರ್, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ, ವೆಟರಿನರಿ, ಬಿ.ಎಸ್ಸಿ (ನರ್ಸಿಂಗ್), ಬಿ-ಫಾರ್ಮ, ಫಾರ್ಮ-ಡಿ, ಬಿಪಿಟಿ, ಬಿಪಿಒ, ಅಲೈಡ್ ಹೆಲ್ತ್ ಸೈನ್ಸ್ ಮತ್ತು ಆಯುಷ್ ಕೋರ್ಸುಗಳ 2ನೇ ಸುತ್ತಿನ ತಾತ್ಕಾಲಿಕ ಫಲಿತಾಂಶದ ಜೊತೆಗೆ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸುಗಳ 2ನೇ ಸುತ್ತಿನ ತಾತ್ಕಾಲಿಕ ಫಲಿತಾಂಶವನ್ನು ಇದು ಒಳಗೊಂಡಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಧ್ಯಮ ಪ್ರಕಟಣೆಯಲ್ಲಿ ಈ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆಗೆ ಆ. 26ರ ಮಧ್ಯಾಹ್ನ 1 ರವರೆಗೆ ನಮೂದಿಸಿದ್ದ ಆಪ್ಷನ್ ಗಳನ್ನು ಪರಿಗಣಿಸಲಾಗಿದೆ. ಇದು ತಾತ್ಕಾಲಿಕ ಹಂಚಿಕೆಯಾಗಿರುವುದರಿಂದ ಅಭ್ಯರ್ಥಿಗಳು ಕಾಲೇಜಿನಲ್ಲಿ ಪ್ರವೇಶ ಪಡೆಯುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ತಾತ್ಕಾಲಿಕ ಸೀಟು ಹಂಚಿಕೆ ಸಂಬಂಧ ನಿರ್ದಿಷ್ಟ ಆಕ್ಷೇಪಣೆಗಳಿದ್ದಲ್ಲಿ ಆ. 30ರ ಮಧ್ಯಾಹ್ನ 1ರೊಳಗೆ keauthority-ka@nic.in…
ಹುಬ್ಬಳ್ಳಿ: ಮುಂಬರುವ ದೀಪಾವಳಿ ಮತ್ತು ಛತ್ ಹಬ್ಬಗಳ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು ನೈರುತ್ಯ ರೈಲ್ವೆಯು ಹುಬ್ಬಳ್ಳಿ ಮತ್ತು ರಕ್ಸೌಲ್ (ಬಿಹಾರ) ಹಾಗೂ ಹುಬ್ಬಳ್ಳಿ ಮತ್ತು ಭಗತ್-ಕಿ-ಕೋಠಿ (ರಾಜಸ್ಥಾನ) ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಈ ರೈಲುಗಳ ವಿವರ ಹೀಗಿದೆ: 1. ಹುಬ್ಬಳ್ಳಿ–ರಕ್ಸೌಲ್ ವಿಶೇಷ ರೈಲು (17 ಟ್ರಿಪ್ಗಳು): ಸೆಪ್ಟೆಂಬರ್ 6, 2025 ರಿಂದ ಡಿಸೆಂಬರ್ 27, 2025 ರವರೆಗೆ ರೈಲು ಸಂಖ್ಯೆ 07357 ಹುಬ್ಬಳ್ಳಿಯಿಂದ ಪ್ರತೀ ಶನಿವಾರ ಬೆಳಿಗ್ಗೆ 9:00 ಗಂಟೆಗೆ ಹೊರಟು, ಸೋಮವಾರ ರಾತ್ರಿ 10:05 ಗಂಟೆಗೆ ರಕ್ಸೌಲ್ ತಲುಪಲಿದೆ. ವಾಪಸು, ರೈಲು ಸಂಖ್ಯೆ 07358 ರಕ್ಸೌಲ್ನಿಂದ ಪ್ರತೀ ಮಂಗಳವಾರ, ಸೆಪ್ಟೆಂಬರ್ 9, 2025 ರಿಂದ ಡಿಸೆಂಬರ್ 30, 2025 ರವರೆಗೆ ಸಂಜೆ 4:55 ಗಂಟೆಗೆ ಹೊರಟು, ಶುಕ್ರವಾರ ಮುಂಜಾನೆ 5:25 ಗಂಟೆಗೆ ಹುಬ್ಬಳ್ಳಿ ಆಗಮಿಸಲಿದೆ. ಈ ವಿಶೇಷ ರೈಲು ಮಾರ್ಗಮಧ್ಯೆ ಎಸ್ಎಂಎಂ ಹಾವೇರಿ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಲಹಂಕ, ಧರ್ಮಾವರಂ, ಗುಂತಕಲ್, ಕೃಷ್ಣ, ಸಿಕಂದರಾಬಾದ್,…
ಬೆಂಗಳೂರು: ಬೂಕರ್ ಪ್ರಶಸ್ತಿ ವಿಜೇತ ಲೇಖಕಿ, ಸಾಹಿತಿ ಬಾನು ಮುಷ್ತಾಕ್ ಅವರು ಹಸುವಿನ ಮಾಂಸ ತಿನ್ನುತ್ತಾರೆ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಾಹಿತಿ ಬಾನು ಮುಷ್ತಾಕ್ ಹಸುವಿನ ಮಾಂಸ ತಿನ್ನುತ್ತಾರೆ. ಅವರು ಗೋಪೂಜೆ, ನಂದಿ ಪೂಜೆ ಹೇಗೆ ಮಾಡುತ್ತಾರೆ? ಒಂದು ಕಡೆ ಹಸುವನ್ನ ಕಡಿದು ತಿನ್ನುವವರು ಅವರು. ಹಾಗಿದ್ದಾಗ ಅದನ್ನ ಪೂಜೆ ಮಾಡೋದು ಹೇಗೆ ಸಾಧ್ಯ ಎಂಬುದಾಗಿ ಪ್ರಶ್ನಿಸಿದ್ದಾರೆ. https://kannadanewsnow.com/kannada/good-news-for-state-property-owners-land-records-will-be-available-in-digital-form/
ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದಂತ ಪೋಸ್ಟ್ ಗೆ ಅಶ್ಲೀಲ ಕಮೆಂಟ್ ಮಾಡಲಾಗಿತ್ತು. ಹೀಗೆ ಕಾಮೆಂಟ್ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಮಹಿಳಾ ಆಯೋಗ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ವಿಜಲಕ್ಷ್ಮೀಗೆ ಅಶ್ಲೀಲ ಕಮೆಂಟ್ ಮಾಡಿದವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಿನ್ನೆ ಸಾಮಾಜಿಕ ಹೋರಾಟಗಾರ ಬಿಆರ್ ಭಾಸ್ಕರ್ ಪ್ರಸಾದ್ ಅವರು ರಾಜ್ಯ ಮಹಿಳಾ ಆಯೋಗಕ್ಕೆ ಸಲ್ಲಿಸಿದ್ದಂತ ಮನವಿಯ ಮೇರೆಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ, ಪುತ್ರರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲವಾಗಿ ಸಂದೇಶ ಹರಿಬಿಟ್ಟವರ ವಿರುದ್ಧ ಕಾನೂನು ಕ್ರಮಕ್ಕೆ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಗೆ ಸೂಚಿಸಲಾಗಿತ್ತು. ಈ ಹಿನ್ನಲೆಯಲ್ಲಿ ವಿಜಯಲಕ್ಷ್ಮಿ, ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ದರ್ಶನ್ ಪತ್ನಿ ಎಂಬುದಾಗಿ ಕಮೆಂಟ್ ಮಾಡಿದ್ದಂತವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸ್ವಯಂ ಪ್ರೇರಿತವಾಗಿ ಕೇಸ್ ಅನ್ನು ಸಿಕೆ ಅಚ್ಚುಕಟ್ಟು ಠಾಣೆಯ ಪೊಲೀಸರು ದಾಖಲಿಸಿದ್ದಾರೆ. ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್…
ಬೆಂಗಳೂರು: ಪ್ರಮುಖ ಜಾಗತಿಕ ತಂತ್ರಜ್ಞಾನ ಕಂಪನಿ ಎಚ್ಸಿಎಲ್ಟೆಕ್ ಬೆಂಗಳೂರಿನ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಟೆಕ್ಬೀ ಅರ್ಲೀ ಕರೀರ್ ಪ್ರೋಗ್ರಾಮ್ ಅನ್ನು ಒದಗಿಸುತ್ತಿದೆ ಮತ್ತು ತಂತ್ರಜ್ಞಾನ ಉದ್ಯಮದಲ್ಲಿ ವೃತ್ತಿ ಕಂಡುಕೊಳ್ಳುವ ಅವಕಾಶವನ್ನು ಒದಗಿಸುತ್ತಿದೆ. ಟೆಕ್ಬೀ ಎಂಬುದು ಪ್ರೌಢಶಾಲೆ ವಿದ್ಯಾರ್ಥಿಗಳಿಗೆಂದೇ ವಿನ್ಯಾಸ ಮಾಡಿರುವ ಪರಿವರ್ತನೀಯ ಕಾರ್ಯಕ್ರಮವಾಗಿದೆ. ಇದು ವಿಶಿಷ್ಟ ‘ಕಲಿಯುವಾಗ ನೀವು ಗಳಿಸಿ’ ಎಂಬ ವಿಶಿಷ್ಟ ಮಾದರಿಯನ್ನು ಇದು ಹೊಂದಿದ್ದು, ಉನ್ನತ ಶಿಕ್ಷಣದ ಜೊತೆಗೆ ತಂತ್ರಜ್ಞಾನ ತರಬೇತಿಯನ್ನೂ ಒಳಗೊಂಡಿದೆ. ಉದ್ಯಮಕ್ಕೆ ಸೂಕ್ತವಾದ ಕೌಶಲಗಳನ್ನು ವಿದ್ಯಾರ್ಥಿಗಳಿಗೆ ಈ ಪ್ರೋಗ್ರಾಮ್ ಒದಗಿಸುತ್ತದೆ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕ ವೃತ್ತಿಗೆ ಅಡಿಪಾಯವನ್ನು ಹಾಕಿಕೊಡುವ ಮೂಲಕ ಶೈಕ್ಷಣಿಕ ಸುಧಾರಣೆಯನ್ನು ಕಂಡುಕೊಳ್ಳಲು ಅವರಿಗೆ ಸಹಾಯ ಮಾಡುತ್ತದೆ. ಉನ್ನತ ಶೈಕ್ಷಣಿಕ ಸಂಸ್ಥೆಗಳ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾದ ಜನರೇಟಿವ್ ಎಐ ಮತ್ತು ಸೈಬರ್ಸೆಕ್ಯುರಿಟಿ ಪಠ್ಯಕ್ರಮವನ್ನು ಇದು ಹೊಂದಿದೆ. ಇಡೀ ದೇಶದಲ್ಲಿ ಉನ್ನತ ಗುಣಮಟ್ಟದ ತಂತ್ರಜ್ಞಾನ ವೃತ್ತಿಯನ್ನು ಕೈಗೊಳ್ಳಲು ಅನುಕೂಲವಾಗುವಂತೆ ಈ ಪ್ರೋಗ್ರಾಮ್ಗಳನ್ನು ವಿನ್ಯಾಸ ಮಾಡಲಾಗಿದೆ. ಟೆಕ್ಬೀ ಪದವೀಧರರು ಈಗಾಗಲೇ AI ಮತ್ತು ಕ್ಲೌಡ್ ಕಂಪ್ಯೂಟಿಂಗ್ನಂತಹ ಸುಧಾರಿತ ಕ್ಷೇತ್ರಗಳಲ್ಲಿ…













