Author: kannadanewsnow09

ರೈಲ್ವೆ ನೇಮಕಾತಿ ಮಂಡಳಿಗಳು (RRBs) ಅಧಿಕೃತವಾಗಿ RRB NTPC 2025 ಅಧಿಸೂಚನೆಯನ್ನು ಪ್ರಕಟಿಸಿದ್ದು, ಭಾರತದಾದ್ಯಂತ ಒಟ್ಟು 8,875 ತಾಂತ್ರಿಕೇತರ ಜನಪ್ರಿಯ ವರ್ಗಗಳ (NTPC) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ನೇಮಕಾತಿ ಅಭಿಯಾನವು ಪದವೀಧರ ಮತ್ತು 12 ನೇ ತರಗತಿಯ ಅರ್ಹ ಅಭ್ಯರ್ಥಿಗಳಿಗೆ ಅವಕಾಶಗಳನ್ನು ಒಳಗೊಂಡಿದೆ ಮತ್ತು ವಿವಿಧ ರೈಲ್ವೆ ಇಲಾಖೆಗಳಲ್ಲಿ ತಾಂತ್ರಿಕೇತರ ಹುದ್ದೆಗಳನ್ನು ಭರ್ತಿ ಮಾಡುವ ಗುರಿಯನ್ನು ಹೊಂದಿದೆ. ಈ ಖಾಲಿ ಹುದ್ದೆಗಳಲ್ಲಿ, 5,817 ಹುದ್ದೆಗಳು ಪದವಿ ಹಂತದ ಅಭ್ಯರ್ಥಿಗಳಿಗೆ, ಆದರೆ 3,058 ಹುದ್ದೆಗಳು 12 ನೇ ತರಗತಿಯ ಉತ್ತೀರ್ಣ ಅಭ್ಯರ್ಥಿಗಳಿಗೆ ಕಾಯ್ದಿರಿಸಲಾಗಿದೆ. ಅರ್ಜಿಗಳನ್ನು ಅಧಿಕೃತ RRB ಪೋರ್ಟಲ್‌ಗಳ ಮೂಲಕ ಆನ್‌ಲೈನ್‌ನಲ್ಲಿ ಸಲ್ಲಿಸಲಾಗುತ್ತದೆ, ವಿವರವಾದ ಅಧಿಸೂಚನೆಗಳು rrbcdg.gov.in ನಲ್ಲಿ ಲಭ್ಯವಿದೆ. RRB NTPC 2025 ಕ್ಕೆ ಅರ್ಹತಾ ಮಾನದಂಡಗಳು ಪದವಿ ಹುದ್ದೆಗಳು: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. 12 ನೇ ತರಗತಿಯ ಹುದ್ದೆಗಳು: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.…

Read More

ಶಿವಮೊಗ್ಗ: 2024-25ನೇ ಸಾಲಿನಲ್ಲಿ ಆಪ್ಸ್ ಕೋಸ್ ಗೆ 4.20 ಕೋಟಿ ಲಾಭಾಂಶ ಬಂದಿದೆ. ಅಡಿಕೆ ಬೆಳೆಗಾರರ ಹಿತಕಾಯಲು ಸಂಘವು ಸಿದ್ಧವಿದೆ. ಯಾವುದೇ ಬೆಳೆಗಾರರು ಆತಂಕಕ್ಕೆ ಒಳಗಾಗಬಾರದು ಎಂಬುದಾಗಿ ಅಧ್ಯಕ್ಷ ಬಿ.ಎ ಇಂದೂದರ ಬೇಸೂರು ತಿಳಿಸಿದ್ದಾರೆ. https://youtu.be/HSMZ-CSzGsc ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಭದ್ರಕಾಳಿ ಸಭಾಭವನದಲ್ಲಿ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಾಗರ, ಹೊಸನಗರ, ಸೊರಬ ತಾಲ್ಲೂಕಿನ ನಮ್ಮ ಸದಸ್ಯರು ಇಂದು ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಬಾರಿ 4.20 ಕೋಟಿ ಲಾಭ ಗಳಿಸಿದೆ. ಎಲೆಚುಕ್ಕಿ, ಕೊಳೆರೋಗ ಬಂದು ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಈಡಾಗಿದ್ದಾರೆ. ಅವರೊಂದಿಗೆ ಆಪ್ಸ್ ಕೋಸ್ ಇದೆ ಎಂಬುದಾಗಿ ಧೈರ್ಯ ತುಂಬಿದರು. ಕೃಷಿ ವಲಯದಲ್ಲಿ ರೈತರಿಗೆ ಅನುಕೂಲವಾಗುವಂತ ಎಲ್ಲಾ ವಸ್ತುಗಳನ್ನು ನೀಡಲಾಗುತ್ತಿದೆ. 2.50 ಕೋಟಿ ಮೌಲ್ಯದ ಎಲ್ಲಾ ಕೃಷಿ ಉಪಕರಣಗಳನ್ನು ಮಾರಾಟ ಮಾಡಲಾಗುತ್ತಿದೆ. ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ನಾವು ರೈತರಿಗಾಗಿ ಅನೇಕ ಸವಲತ್ತುಗಳನ್ನು ನೀಡಲಾಗುತ್ತಿದೆ. ಅಪಘಾತ ವಿಮೆ ಮಾಡಲಾಗುತ್ತಿದೆ. ಅಡಿಕೆ ಕೊಯ್ಲಿನ…

Read More

ಮಂಡ್ಯ: ನಾಳೆ ಶ್ರೀರಂಗಪಟ್ಟಣದಲ್ಲಿ ಅದ್ದೂರಿ ದಸರಾ ಆಚರಣೆ ಮಾಡಲಾಗುತ್ತಿದೆ. ಮೈಸೂರು ದಸರೆಗಯ ಮೂಲ ಶ್ರೀರಂಗಪಟ್ಟಣ ದಸರಾ ಆಗಿದೆ. 415ನೇ ದಸರಾ ಆಚರಣೆ ಶ್ರೀರಂಗಪಟ್ಟಣದಲ್ಲಿ ಸಕಲ ಸಿದ್ದತೆಯನ್ನು ಜಿಲ್ಲಾಡಳಿತ ಕೈಗೊಳ್ಳಲಾಗಿದೆ. ಶ್ರೀರಂಗ ಪಟ್ಟಣದ ಕಿರಂಗೂರು ಬನ್ನಿ ಮಂಟಪದ ಬಳಿ ದಸರಾ ಜಂಬೂ ಸವಾರಿಗೆ ಚಾಲನೆ ನೀಡಲಾಯಿತು. ಕಿರಂಗೂರು ಬನ್ನಿ ಮಂಟಪದ ಬಳಿ ಜಂಬೂ ಸವಾರಿಗಾಗಿ ಸಕಲ ಸಿದ್ದತೆ ಕೈಗೊಳ್ಳಲಾಗಿದೆ. ದಸರಾ ಬನ್ನಿಮಂಟದ ಬಳಿ ಬನ್ನಿಮರಕ್ಕೆ ಪೂಜೆ ಸಲ್ಲಿಸಿ ಜಂಬೂ ಸವಾರಿಗೆ ಚಾಲನೆ ನೀಡಲಾಯಿತು. ನಾಳೆ ಮಧ್ಯಾಹ್ನ ಅಭಿಜಿನ್ ಲಗ್ನದಲ್ಲಿ ಸಂಪ್ರದಾಯದಂತೆ ಅರ್ಚಕ ಭಾನುಪ್ರಕಾಶ್ ನೇತೃತ್ವದಲ್ಲಿ ಪೂಜಾ ಕೈಂಕರ್ಯ ನೆರವೇರಲಿದೆ. ಪೂಜೆ ಸಲ್ಲಿಕೆ ಬಳಿಕ ಗಣ್ಯರ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆಯೊಂದಿಗೆ ಜಂಬೂ ಸವಾರಿಗೆ ಚಾಲನೆ ದೊರೆಯಲಿದೆ. ಕಿರಂಗೂರು ಬನ್ನಿ ಮಂಟಪದಿಂದ ಪಟ್ಟಣದ ರಂಗನಾಥ ದೇಗುಲವರೆಗೂ ಸಾಗಲಿರುವ ಜಂಬೂ ಸವಾರಿ ಮೆರವಣಿಗೆ ಸಾಗಲಿದೆ. ಜಂಬೂ ಸವಾರಿಯ ಮೆರವಣಿಗೆಯಲ್ಲಿ ಸಾಗಲಿರುವ ಸ್ತಬ್ಧಚಿತ್ರ ಹಾಗು ಹಲವು ಕಲಾ ಪ್ರದರ್ಶನ ತಂಡಗಳು ಪಾಲ್ಗೊಳ್ಳಲಿದ್ದಾವೆ. ಆನೆಯ ಮೇಲೆ ಮೇಲಿನ ಮರದ ಅಂಬಾರಿಯಲ್ಲಿ…

Read More

ಮಂಡ್ಯ : ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು ( ಸಿಎಸ್‌ಆರ್‌ ) ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಗೆಜ್ಜಲಗೆರೆ ಶಾಹಿ ಎಕ್ಸ್ ಪೋರ್ಟ್ ಪ್ರೈ ಲಿ ಹಿರಿಯ ಮಾನವ ಸಂಪನ್ಮೂಲ ವ್ಯವಸ್ಥಾಪಕ ರಮೇಶ್ ಬಂಡಿ ಬುಧವಾರ ಹೇಳಿದರು. ಮದ್ದೂರು ಪಟ್ಟಣದ ಮಳವಳ್ಳಿ ರಸ್ತೆಯ ಮದ್ದೂರು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆವರಣದಲ್ಲಿ ಶಾಯಿ ಎಕ್ಸ್ ಪೋರ್ಟ್ ಪ್ರೈ ಲಿ ವತಿಯಿಂದ ಸಿ.ಎಸ್.ಆರ್ ನಿಧಿ ಯೋಜನೆಯಡಿ ಅಂದಾಜು 8 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿರುವ ಶುದ್ದ ಕುಡಿಯುವ ನೀರು ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮದ್ದೂರಿನ ಶಾಹಿ ಎಕ್ಸ್ ಪೋರ್ಟ್ ಕಾರ್ಖಾನೆಯೂ ಅಂದಾಜು 5 ಸಾವಿರಕ್ಕೂ ಹೆಚ್ಚು ಕಾರ್ಮಿಕರಿಗೆ ಉದ್ಯೋಗ ನೀಡುವ ಮೂಲಕ ಅವರು ಜೀವನ ರೂಪಿಸಿಕೊಳ್ಳಲು ಸಾಧ್ಯವಾಗಿದೆ. ಕಾರ್ಖಾನೆಯ ಸಿಎಸ್ಆರ್ ನಿಧಿಯಿಂದಲೂ ಕೂಡ ಕಾರ್ಮಿಕರ ಗ್ರಾಮಗಳ ಅಭಿವೃದ್ಧಿಯನ್ನು ಕೈಗೊಳ್ಳಲಾಗುತ್ತಿದೆ. ಈಗಾಗಲೇ ತಾಲೂಕಿನ ಮಲ್ಲನಕುಪ್ಪೆ, ಮರಕಾಡದೊಡ್ಡಿ ಹಾಗೂ ವೈದ್ಯನಾಥಪುರ ಗ್ರಾಮಗಳಲ್ಲಿ ಅಂದಾಜು 45 ಲಕ್ಷ ರೂ ವೆಚ್ಚದಲ್ಲಿ ಅಂಗನವಾಡಿ, ಸರ್ಕಾರಿ…

Read More

ಮಂಡ್ಯ :- ಕುರಿಮರಿಯೊಂದನ್ನು ಹೆಬ್ಬಾವು ದಾಳಿ ನಡೆಸಿ ಕುರಿಯನ್ನು ನುಂಗುತ್ತಿದ್ದ ವೇಳೆ ಕುರಿ ಮರಿ ಮೃತಪಟ್ಟಿದ್ದು, ಹೆಬ್ಬಾವನ್ನು ರಕ್ಷಿಸಿರುವ ಘಟನೆ ಮದ್ದೂರು ತಾಲೂಕಿನ ಚಾಮನಹಳ್ಳಿ ಗ್ರಾಮದಲ್ಲಿ ಬುಧವಾರ ಜರುಗಿದೆ. ಮದ್ದೂರು ತಾಲೂಕಿನ ಚಾಮನಹಳ್ಳಿ ಗ್ರಾಮ ವ್ಯಾಪ್ತಿಯ ಶ್ರೀ ಪಟ್ಟಲದಮ್ಮ ದೇವಾಲಯದ ಸಮೀಪ ಬುಧವಾರ ಮಧ್ಯಾಹ್ನ ಕಾಣಿಸಿಕೊಂಡ ಬೃಹತ್ ಗಾತ್ರದ ಸುಮಾರು 11 ಅಡಿಯಷ್ಟು ಉದ್ದದ ಹೆಬ್ಬಾವು, ಕುರಿ ಮಂದೆ ಮೇಲೆ ದಾಳಿ ನಡೆಸಿ 5 ತಿಂಗಳ ಕುರಿಯನ್ನು ನುಂಗುತ್ತಿದ್ದ ವೇಳೆ ಇದನ್ನು ಗಮನಿಸಿದ ಕುರಿಗಾಯಿ ರಾಮಕೃಷ್ಣೇಗೌಡ ಉರಗ ತಜ್ಞ ರವಿ ಅವರಿಗೆ ವಿಷಯ ತಿಳಿಸಿದ್ದಾನೆ. ಸ್ಥಳಕ್ಕೆ ಆಗಮಿಸಿದ ಉರಗ ತಜ್ಞ ರವಿ ಹೆಬ್ಬಾವಿನಿಂದ ಕುರಿ ಮರಿಯನ್ನು ರಕ್ಷಿಸಿ ವೈದ್ಯರ ಬಳಿ ಚಿಕಿತ್ಸೆ ಕೊಡಿಸಲು ತೆಗೆದುಕೊಂಡು ಹೋಗಿದ್ದಾರೆ ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕುರಿಮರಿ ಮೃತಪಟ್ಟಿದೆ. ಕೂಡಲೇ ಗ್ರಾಮಸ್ಥರು ಅರಣ್ಯ ಇಲಾಖೆಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ತಕ್ಷಣವೇ ಗ್ರಾಮಕ್ಕೆ ಧಾವಿಸಿದ ಉಪ ವಲಯ ಅರಣ್ಯಾಧಿಕಾರಿಗಳಾದ ಸವಿತಾ, ಕಾಂತರಾಜ್ ಉರಗ ತಜ್ಞ ರವಿ ಅವರ…

Read More

ಮೈಸೂರು : “ರೈತರ ಒಳಿತಿಗಾಗಿ ಕಾವೇರಿ ಮಾತೆಯನ್ನು ಪೂಜಿಸಿ, ಪಾರ್ಥಿಸುವ ಕಾವೇರಿ ಆರತಿ ಕಾರ್ಯಕ್ರಮಕ್ಕೆ ರೈತರ ವಿರೋಧವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಬುಧವಾರ ಈ ರೀತಿ ಉತ್ತರಿಸಿದರು. ಕಾವೇರಿ ಆರತಿಗೆ ರೈತರ ವಿರೋಧವಿದೆ ಎಂದು ಕೇಳಿದಾಗ, “ರೈತರ ವಿರೋಧ ಇದೆ ಎಂದು ಯಾರು ಹೇಳಿದರು? ಪೂಜೆ ಮಾಡಲು ಯಾರಾದರೂ ವಿರೋಧ ಮಾಡುತ್ತಾರಾ? ನೀವು ವಿರೋಧ ಮಾಡಬಹುದು” ಎಂದು ತಿಳಿಸಿದರು. “ಕೆಆರ್ ಎಸ್ ನಲ್ಲಿ ಈ ಬಾರಿ ಸಾಂಕೇತಿಕವಾಗಿ ಹಮ್ಮಿಕೊಂಡಿರುವ ಕಾವೇರಿ ಆರತಿ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ ಮಾಡಿದ್ದೇನೆ. ನಾವು ದೊಡ್ಡದಾಗಿ ಮಾಡಬೇಕು ಎಂದುಕೊಂಡಿದ್ದ ಜಾಗದಲ್ಲಿ ಈ ಬಾರಿ ಕಾರ್ಯಕ್ರಮ ಮಾಡುತ್ತಿಲ್ಲ” ಎಂದು ತಿಳಿಸಿದರು. ನೇರ, ನಿಷ್ಠುರ ನಡೆಯ ಕ್ರಾಂತಿಕಾರಿ ಸಾಹಿತಿ ಎಸ್.ಎಲ್. ಬೈರಪ್ಪ ಸಾಹಿತಿ ಎಸ್.ಎಲ್. ಬೈರಪ್ಪ ಅವರ ನಿಧನದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಎಸ್.ಎಲ್. ಬೈರಪ್ಪ ಅವರು ಕ್ರಾಂತಿಕಾರಿ ಸಾಹಿತಿಗಳು. ಯಾರಿಗೂ ಹೆದರದೆ ನೇರ, ನಿಷ್ಠುರವಾಗಿ…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳನ್ನು ಕಡ್ಡಾಯವಾಗಿ ನಿಲ್ಲಿಸುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಸೂಚಿಸಿದ್ದಾರೆ. ಈ ಕುರಿತಂತೆ ಶಿವಮೊಗ್ಗದ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಬರೆದು ಸೂಚಿಸಿದ್ದಾರೆ. ಅದರಲ್ಲಿ  ಸಾಗರ ತಾಲ್ಲೂಕು, ಉಳ್ಳೂರು ಗ್ರಾಮ ಪಂಚಾಯಿತಿಯ ಉಳ್ಳೂರು ಗ್ರಾಮವು ಪಂಚಾಯಿತಿಯ ಕೇಂದ್ರ ಸ್ಥಾನವಾಗಿದ್ದು, ಈ ವ್ಯಾಪ್ತಿಯಲ್ಲಿ ಸುಮಾರು 700 ರಿಂದ 800 ಕುಟುಂಬಗಳು ವಾಸಿಸುತ್ತಿದ್ದು, ಸದರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಸಾರ್ವಜನಿಕರು, ರೈತಾಪಿ ವರ್ಗದವರು, ಮಹಿಳೆಯರು ವೃದ್ಧರು ಆಸ್ಪತ್ರೆ ಹಾಗೂ ಇನ್ನಿತರೆ ಕೆಲಸ ಕಾರ್ಯಗಳಿಗೆ ಹಾಗೂ ಶಾಲಾ ಮಕ್ಕಳು ವಿದ್ಯಾಭ್ಯಾಸ ಸಲುವಾಗಿ ನಗರ ಪ್ರದೇಶಕ್ಕೆ ಸ್ಥಳೀಯವಾಗಿ ಮತ್ತು ಶಿವಮೊಗ್ಗ ಮಾರ್ಗವಾಗಿ ಚಲಿಸುವ ಸರ್ಕಾರಿ ಬಸ್‌ ಮುಖಾಂತರವಾಗಿಯೇ ತೆರಳಬೇಕಾಗಿರುತ್ತದೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಸಾಗರದಿಂದ ಶಿವಮೊಗ್ಗ ಮತ್ತು ಶಿವಮೊಗ್ಗದಿಂದ ಸಾಗರ ಮಾರ್ಗವಾಗಿ ಸಾಗರ ಡಿಪೊ ವ್ಯಾಪ್ತಿಯಿಂದ ಹೊರಡುವ ಸರ್ಕಾರಿ ಬಸ್ ಗಳನ್ನು ಉಳ್ಳೂರು ಗ್ರಾಮದಲ್ಲಿ ಎಲ್ಲಿ ಸುವಂತೆ ಈ ಮೂಲಕ…

Read More

ಮಂಗಳೂರು : ಮಂಗಳೂರಿನಲ್ಲಿ ಅತಿ ದೊಡ್ಡ ಟೆಕ್ ಪಾರ್ಕ್ ನಿರ್ಮಾಣದ ಪ್ರಸ್ತಾವ ಗುರುವಾರ ಅಥವಾ ಮುಂದಿನ ವಾರ ಅನುಮೋದನೆಗಾಗಿ ಸಚಿವ ಸಂಪುಟದ ಮುಂದೆ ಬರಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ಮತ್ತು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನಗರದ ಟಿಎಂಎ ಪೈ ಕನ್ವೆನ್ಶನ್ ಸೆಂಟರ್ ನಲ್ಲಿ ಬುಧವಾರ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ)ನ ಐದನೇ ಆವೃತ್ತಿಯ ‘ಟೆಕ್ನೋವಾಂಜಾ-2025’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಮಂಗಳೂರಿನಲ್ಲಿ 3.25 ಎಕರೆ ಭೂಮಿಯಲ್ಲಿ ಟೆಕ್ ಪಾರ್ಕ್ ನಿರ್ಮಿಸಲು ಉದ್ದೇಶಿಸಲಾಗಿದೆ. ಇದು 3.5 ಲಕ್ಷ ಚದರ ಅಡಿ ವಿಸ್ತೀರ್ಣದ ಕಟ್ಟಡ ಮತ್ತು 3,500 ಕೋಟಿ ರೂ.ಗಳ ಕಾರ್ಯಕಾರಿ ಬಂಡವಾಳದೊಂದಿಗೆ ಟೆಕ್ ಪಾರ್ಕ್ ಅಸ್ತಿತ್ವಕ್ಕೆ ಬರಲಿದ್ದು, ಮುಂದಿನ ಐದು ವರ್ಷದೊಳಗೆ ಮಂಗಳೂರನ್ನು ಐಟಿ ಕ್ಷೇತ್ರದಲ್ಲಿ ಮತ್ತೊಂದು ಬೆಂಗಳೂರು ಆಗಿ ರೂಪಿಸಲು ಪ್ರಯತ್ನವಾಗಲಿದೆ. ಮಂಗಳೂರಿನ ಅಭಿವೃದ್ಧಿಯ ನಿಟ್ಟಿನಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಪಕ್ಷಭೇದ ಮರೆತು ಜತೆಯಾಗಿ ಕಾರ್ಯ ನಿರ್ವಹಿಸಬೇಕಾಗಿದೆ ಎಂದು ಕರೆ ನೀಡಿದ ಸಚಿವ…

Read More

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಪ್ರಮುಖ ರಸ್ತೆ ಸೇರಿದಂತೆ ಗ್ರಾಮೀಣ ಭಾಗದ ರಸ್ತೆಗಳಲ್ಲಿ ಗುಂಡಿಗಳದ್ದೇ ದರ್ಬಾರು ಹೆಚ್ಚಾಗಿದೆ. ವಾಹನ ಸವಾರರು ಓಡಾಡೋದಕ್ಕೆ ಕಷ್ಟವಾಗಿದೆ.  ರಾಜ್ಯದ ಜನರಿಗೆ ಆಸೆ, ಆಮೀಷದ ಬಲಿಯೊಡ್ಡಿ ಅಭಿವೃದ್ಧಿ ಶೂನ್ಯ ಆಡಳಿತ ನೀಡುತ್ತಿರುವ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ವಿರೋಧಿ ನೀತಿ ಅನುಸರಿಸುತ್ತದೆ ಎಂದು ಬಿಜೆಪಿ ಮುಖಂಡ ಡಾ.ಜ್ಞಾನೇಶ್ ಆರೋಪಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ತಾಲ್ಲೂಕು ಬಿಜೆಪಿ ವತಿಯಿಂದ ಸಾಗರ, ಉಳವಿ ಮುಖ್ಯ ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ ವೇಳೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಬಿಟ್ಟಿ ಯೋಜನೆಯಿಂದ ರಾಜ್ಯದ ಆರ್ಥಿಕತೆ ಹಳಿ ತಪ್ಪಿದೆ. ಖಜಾನೆಯಲ್ಲಿ ಹಣವಿಲ್ಲ. ಅಭಿವೃದ್ಧಿ ಕುಂಠಿತಗೊಂಡಿದೆ. ಗ್ಯಾರಂಟಿ ಯೋಜನೆ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಖಜಾನೆ ಲೂಟಿ ಮಾಡಿದೆ ಎಂಬುದಾಗಿ ಆಕ್ರೋಶ ವ್ಯಕ್ತ ಪಡಿಸಿದರು. ಕೇಂದ್ರದಲ್ಲೂ ಒಂದೊಮ್ಮೆ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದ್ದರೆ ಇವತ್ತಿನ ದೇಶ ಸ್ಥಿತಿ ಹೇಗಿರುತಿತ್ತು ಎನ್ನುವುದನ್ನು ಜನರು ಯೋಚಿಸಬೇಕಿದೆ ಎಂದರು. ರಸ್ತೆಯಲ್ಲಿ ಗುಂಡಿ‌ಗಳು ಬಿದ್ದು…

Read More

ಜಮ್ಮು: ಪ್ರಮುಖ ಪ್ರಗತಿಯಲ್ಲಿ, ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಭದ್ರತಾ ಸಂಸ್ಥೆಗಳು ಮೊದಲ ಆರೋಪಿಯನ್ನು ಬಂಧನವನ್ನು ಮಾಡಿವೆ. ಮಾಧ್ಯಮ ವರದಿಗಳ ಪ್ರಕಾರ, ಭಯೋತ್ಪಾದಕರಿಗೆ ಸಹಾಯ ಮಾಡಿದ ಆರೋಪದ ಮೇಲೆ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಮಹತ್ವದ ಪ್ರಗತಿಯೊಂದರಲ್ಲಿ, ಏಪ್ರಿಲ್ 22 ರ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾದ ಭಯೋತ್ಪಾದಕರಿಗೆ ಲಾಜಿಸ್ಟಿಕ್ಸ್ ಬೆಂಬಲ ನೀಡಿದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಜುಲೈನಲ್ಲಿ ನಡೆದ ಆಪರೇಷನ್ ಮಹಾದೇವ್ ಸಮಯದಲ್ಲಿ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳ ವಿಶ್ಲೇಷಣೆಯ ನಂತರ 26 ವರ್ಷದ ಮೊಹಮ್ಮದ್ ಯೂಸುಫ್ ಕಟಾರಿಯಾ ಎಂದು ಗುರುತಿಸಲ್ಪಟ್ಟ ವ್ಯಕ್ತಿಯನ್ನು ಬಂಧಿಸಲಾಗಿದೆ.

Read More