Author: kannadanewsnow09

ಬೆಂಗಳೂರು: “ಕುಮಾರಸ್ವಾಮಿ ಅವರು ನನ್ನ ವಿಚಾರದಲ್ಲಿ ಕೇವಲ ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ. ಇದಕ್ಕೆ ಕೊನೇ ಹಾಡಬೇಕು. ಮಾಧ್ಯಮಗಳೇ ಒಂದು ಸೂಕ್ತ ವೇದಿಕೆ ಕಲ್ಪಿಸಲಿ. ನಾನು, ಕುಮಾರಸ್ವಾಮಿ ಅವರ ಜೊತೆ ಬಹಿರಂಗ ಚರ್ಚೆ ಮಾಡಲು ಸಿದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದಿದ್ದಾರೆ. ಕೆಪಿಸಿಸಿ ಕಚೇರಿ ಹಾಗೂ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ನೀವು ಜೈಲಿಗೆ ಹೋಗುವ ದಿನ ಹತ್ತಿರವಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರಲ್ಲಾ ಎಂದು ಕೇಳಿದಾಗ, “ಮೊದಲಿನಿಂದಲೂ ನನ್ನನ್ನು ಜೈಲಿಗೆ ಹಾಕಿಸಲೇಬೇಕು ಎಂದು ಕುಮಾರಸ್ವಾಮಿ ಅವರು ಸಂಕಲ್ಪ ಮಾಡಿ ಷಡ್ಯಂತ್ರ ಮಾಡುತ್ತಿದ್ದಾರೆ. ಈಗಲೂ ಅದನ್ನೇ ಮುಂದುವರಿಸುತ್ತಿರುವುದಾಗಿ ಅವರೇ ಹೇಳಿದ್ದು, ಜೈಲಿಗೆ ಹೋಗುವ ದಿನ ಹತ್ತಿರಬರುತ್ತಿದೆ ಎಂದಿದ್ದಾರೆ. ಹಬ್ಬ ಮುಗಿದ ಬಳಿಕ ಅವರಿಗೆ ಉತ್ತರ ನೀಡುತ್ತೇನೆ” ಎಂದು ತಿಳಿಸಿದರು. ನನ್ನ ವಿರುದ್ಧ ಇರುವ ದಾಖಲೆ ಜನರ ಮುಂದಿಡಲಿ: “ಕುಮಾರಸ್ವಾಮಿ ಅವರು ತಮ್ಮ ಆಸೆ ವ್ಯಕ್ತಪಡಿಸಿದ್ದಾರೆ. ಅವರಿಗೆ ಒಳ್ಳೆಯದಾಗಲಿ. ಅವರ ಕುಟುಂಬ ನನ್ನ ಕುಟುಂಬದ ಮೇಲೆ…

Read More

ಬೆಂಗಳೂರು: ರಾಜ್ಯದ 2025-26ನೇ ಸಾಲಿನ ಸ್ನಾತಕ, ಸ್ನಾತಕೋತ್ತರ ಪದವಿ ಪರೀಕ್ಷೆಯ ಶೈಕ್ಷಣಿಕ ಪರಿಷ್ಕೃತ ವೇಳಾಪಟ್ಟಿಯನ್ನು ಉನ್ನತ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಸಂಬಂಧ ನಡವಳಿಯನ್ನು ಹೊರಡಿಸಿರುವಂತ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಜಿ ಶಶಿಧರ್ ಅವರು, 2025-26ನೇ ಸಾಲಿನ ಶೈಕ್ಷಣಿಕ ಸಾಲಿಗೆ ಉನ್ನತ ಶಿಕ್ಷಣ ಇಲಾಖೆಯಡಿ ಬರುವ ವಿಶ್ವವಿದ್ಯಾಲಯಗಳು ಕಾಲೇಜು ಶಿಕ್ಷಣ/ಅನುದಾನ/ ಅನುದಾನ ರಹಿತ ಕಾಲೇಜುಗಳಲ್ಲಿ (ತಾಂತ್ರಿಕ ಶಿಕ್ಷಣವನ್ನು ಹೊರತುಪಡಿಸಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗೆ ಸಂಬಂಧಿಸಿದಂತೆ ಶೈಕ್ಷಣಿಕ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಕಡ್ಡಾಯವಾಗಿ ಜಾರಿಗೊಳಿಸಲು ಆದೇಶಿಸಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಒಟ್ಟು 440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿದ್ದು 3.2 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಹೆಚ್ಚುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಹೆಚ್ಚುವರಿ ಬೋಧನಾ ಕಾರ್ಯಭಾರವನ್ನು ನಿರ್ವಹಿಸಲು ಸರ್ಕಾರಿ ಕಾಲೇಜಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ಆದರೆ ಅತಿಥಿ ಉಪನ್ಯಾಸಕರಿಗೆ ಸಂಬಂಧಿಸಿದ ನ್ಯಾಯಾಲಯದ ಪ್ರಕರಣಗಳಿಂದಾಗಿ 2025-26ನೇ ಸಾಲಿನ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯುವ ಪ್ರಕ್ರಿಯೆಯು ವಿಳಂಬಗೊಂಡಿರುತ್ತದೆ.…

Read More

ಫಿಲಿಫೈನ್: ಮಂಗಳವಾರ ರಾತ್ರಿ ಮಧ್ಯ ಫಿಲಿಪೈನ್ಸ್‌ನಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಜನರು ಬೀದಿಗಳಿಗೆ ನುಗ್ಗಿ, ಕಲ್ಲಿನ ಚರ್ಚ್‌ಗೆ ಹಾನಿಯಾಗಿದ್ದು, ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಂಡಿದೆ. ಸೆಬು ಪ್ರಾಂತ್ಯದ ಬೊಗೊ ನಗರದ ಈಶಾನ್ಯಕ್ಕೆ ಸುಮಾರು 17 ಕಿಲೋಮೀಟರ್ (10 ಮೈಲುಗಳು) ದೂರದಲ್ಲಿ ಭೂಕಂಪ ಕೇಂದ್ರೀಕೃತವಾಗಿದ್ದು, ಸ್ಥಳೀಯ ದೋಷದಲ್ಲಿನ ಚಲನೆಯಿಂದಾಗಿ ಇದು ಸಂಭವಿಸಿದೆ. ಫಿಲಿಪೈನ್ ಜ್ವಾಲಾಮುಖಿ ಮತ್ತು ಭೂಕಂಪಶಾಸ್ತ್ರ ಸಂಸ್ಥೆಯು ಹಾನಿ ಮತ್ತು ನಂತರದ ಆಘಾತಗಳನ್ನು ನಿರೀಕ್ಷಿಸಿದೆ ಎಂದು ಹೇಳಿದೆ. ಕಲ್ಲಿನ ಚರ್ಚ್ ಇರುವ ಡಾನ್‌ಬಂಟಾಯನ್‌ನ ಸೆಬು ಪ್ರಾಂತ್ಯದ ಪಟ್ಟಣದಲ್ಲಿ ವಿದ್ಯುತ್ ಕಡಿತಗೊಂಡಿದೆ. ಚರ್ಚ್‌ಗೆ ಆಗಿರುವ ಹಾನಿಯ ಪ್ರಮಾಣವು ತಕ್ಷಣವೇ ತಿಳಿದುಬಂದಿಲ್ಲ. ವಿಶ್ವದ ಅತ್ಯಂತ ವಿಪತ್ತು ಪೀಡಿತ ದೇಶಗಳಲ್ಲಿ ಒಂದಾದ ಫಿಲಿಪೈನ್ಸ್, ಸಾಗರದ ಸುತ್ತಲಿನ ಭೂಕಂಪನ ದೋಷಗಳ ಕಮಾನಿನ ಮೇಲೆ ಇರುವುದರಿಂದ ಆಗಾಗ್ಗೆ ಭೂಕಂಪಗಳು ಮತ್ತು ಜ್ವಾಲಾಮುಖಿ ಸ್ಫೋಟಗಳಿಗೆ ಗುರಿಯಾಗುತ್ತದೆ. ಈ ದ್ವೀಪಸಮೂಹವು ಪ್ರತಿ ವರ್ಷ ಸುಮಾರು 20 ಟೈಫೂನ್‌ಗಳು ಮತ್ತು ಬಿರುಗಾಳಿಗಳಿಂದ ಕೂಡಿದೆ. https://kannadanewsnow.com/kannada/green-signal-for-temporary-selection-of-guest-lecturers-from-the-state-government-these-conditions-apply/ https://kannadanewsnow.com/kannada/govt-pulls-up-e-commerce-players-for-not-reducing-prices-after-gst-cuts/

Read More

ಬೆಂಗಳೂರು: ನಗರದಲ್ಲಿ ಕಟ್ಟಡ ನಿರ್ಮಾಣದ ವೇಳೆಯಲ್ಲಿ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಈ ದುರಂತದಲ್ಲಿ ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನ ಮಡಿವಾಳದ ಸಿದ್ಧಾರ್ಥ ಕಾಲೋನಿಯಲ್ಲಿ ಈ ದುರ್ಘಟನೆ ನಡೆದಿದೆ. ಕಟ್ಟಡ ನಿರ್ಮಾಣದ ವೇಳೆಯಲ್ಲಿ ಮಣ್ಣು ಕುಸಿದು ಲಾಲ್ ಮದನ್(33) ಹಾಗೂ ರಜಾವುದ್ದೀನ್ (30) ದುರ್ಮರಣ ಹೊಂದಿದ್ದಾರೆ. ಮತ್ತೊಬ್ಬ ಕಾರ್ಮಿಕ ಸೈಪುಲ್ಲಾ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಟ್ಟಡ ನಿರ್ಮಾಣಕ್ಕೆ ಪಿಲ್ಲರ್ ಹಾಕಲು ಮಣ್ಣು ತೆಗೆಯುತ್ತಿದ್ದಂತ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಪಿಲ್ಲರ್ ಗಾಗಿ 20ಕ್ಕೂ ಹೆಚ್ಚು ಅಡಿ ಮಣ್ಣು ತೆಗೆಯಲಾಗುತ್ತಿತ್ತು. ಈ ವೇಳೆ ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಮಣ್ಣು ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಈ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/bjp-you-implemented-the-mahishasura-tax-when-you-were-in-power-minister-ramalinga-reddy-hits-back/ https://kannadanewsnow.com/kannada/green-signal-for-temporary-selection-of-guest-lecturers-from-the-state-government-these-conditions-apply/

Read More

ಬೆಂಗಳೂರು: ದಸರಾ ಹಾಗೂ ಇತರೆ ವಿಶೇಷ ಸಂದರ್ಭಗಳಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಟಿಕೆಟ್ ದರವನ್ನು ಕಳೆದ 20 ವರ್ಷಗಳಿಂದ ಏರಿಕೆ ಮಾಡಿಕೊಂಡು ಬರಲಾಗುತ್ತಿದೆ. ಬಿಜೆಪಿಗರೇ ನೀವು ಅಧಿಕಾರದಲ್ಲಿ ಇದ್ದಾಗ ಮಹಿಷಾಸುರ ಟ್ಯಾಕ್ಸ್, ನಿಮ್ಮ ಸರ್ಕಾರವು ಜಾರಿ ಮಾಡಿರಲಿಲ್ವ? ಅದಕ್ಕೆ ನಿಮ್ಮ ಉತ್ತರವೇನು ಎಂಬುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಪ್ರಹ್ಲಾದ್ ಜೋಷಿ ಅವರೇ, ಬಿ.ಜೆ.ಪಿ ಯ ಎಲ್ಲಾ ನಾಯಕರುಗಳಿಗೆ ಯಾವ ರೀತಿಯ ಮಾನಸಿಕ ಅಸ್ವಸ್ಥತೆ ಕಾಡುತಿದೆಯೋ‌ ತಿಳಿಯದಾಗಿದೆ ಎಂದಿದ್ದಾರೆ. ಕೆ‌ ಎಸ್ ಆರ್ ಟಿ‌ ಸಿ ಯು ಪ್ರತಿವರ್ಷ ದಸರಾ ಹಾಗೂ ಇತರೆ ವಿಶೇಷ ಸಂದರ್ಭಗಳಲ್ಲಿ ಕಳೆದ 20 ವರುಷಗಳಿಂದ ದರ ಏರಿಕೆಯನ್ನು ಅನುಷ್ಠಾನಗೊಳಿಸುತ್ತಾ ಬಂದಿದೆ. ಆಂದರೆ ನೀವು ಹೇಳುತ್ತಿರುವ ಮಹಿಷಾಸುರ ಟ್ಯಾಕ್ಸ್ ಅನ್ನು ತಮ್ಮ ಪಕ್ಷ ಸಹ ಬಿ.ಜೆ.ಪಿ ಅಧಿಕಾರದಲ್ಲಿದ್ದಾಗ ಜಾರಿ ಮಾಡಿದ್ದೀರಾಲ್ಲ ಅದಕ್ಕೆ ತಮ್ಮ‌ ಉತ್ತರವೇನು?‌ ಮಾಹಿತಿ ಕೊರತೆ ಇದ್ದರೆ ಸಮರ್ಪಕವಾದ ಮಾಹಿತಿ ಪಡೆದು ಮಾತನಾಡಿ, ತಾವು‌…

Read More

ಬೆಂಗಳೂರು: “ಇದುವರೆಗೂ 13,000 ಗುಂಡಿಗಳನ್ನು ಮುಚ್ಚಲಾಗಿದೆ. ಪ್ರತಿ ಗುಂಡಿ ಮುಚ್ಚಿರುವುದಕ್ಕೆ ಫೋಟೋ, ವಿಡಿಯೋ ದಾಖಲೆ ಮಾಡಿಸಲಾಗಿದೆ. ನೀವುಗಳು (ಮಾಧ್ಯಮಗಳು) ಕೂಡ ಪರಿಶೀಲನೆ ಮಾಡಬಹುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರು ನಾಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಶಿವಕುಮಾರ್ ಅವರು ಮಂಗಳವಾರ ಸಿಟಿ ರೌಂಡ್ ನಡೆಸಿ ರಸ್ತೆಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಅಧಿಕಾರಿಗಳು ಸರ್ಕಾರದ ಆದೇಶ ಪಾಲನೆ ಮಾಡಿ ಗುಂಡಿ ಮುಚ್ಚುವ ಕಾರ್ಯ ಮಾಡುತ್ತಿದ್ದಾರೆ. ಇದರ ಜೊತೆಗೆ 550 ಕಿ.ಮೀ ಉದ್ದದ ಮುಖ್ಯರಸ್ತೆಗಳ ಅಭಿವೃದ್ಧಿಗೆ ₹1100 ಕೋಟಿ ವೆಚ್ಚದ ಕಾರ್ಯಯೋಜನೆ ಸಿದ್ಧಪಡಿಸಲು ಸೂಚನೆ ನೀಡಿದ್ದೇನೆ” ಎಂದು ಮಾಹಿತಿ ನೀಡಿದರು. “ಇನ್ನು ಮುಖ್ಯರಸ್ತೆಗಳ ಜಂಕ್ಷನ್ ನಲ್ಲಿ ಕಾಂಕ್ರೀಟ್ ಹಾಕಲು 26 ದಿನಗಳ ಅಗತ್ಯವಿದ್ದು, ಟ್ರಾಫಿಕ್ ನಿಯಂತ್ರಣದ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ನಾನು ಬೆಂಗಳೂರು ರಸ್ತೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಪ್ರಯತ್ನಿಸುತ್ತಿದ್ದೇನೆ. ಇನ್ನು ರಸ್ತೆಗುಂಡಿ ಮುಚ್ಚುವುದಕ್ಕಾಗಿ ₹750 ಕೋಟಿ ನೀಡುವುದಾಗಿ ಸಿಎಂ ಹೇಳಿದ್ದಾರೆ” ಎಂದರು. “ಇನ್ನು ವಾರ್ಡ್…

Read More

ಕಲಬುರ್ಗಿ: NDRF ಪರಿಹಾರದ ಜೊತೆಗೆ ಹೆಚ್ಚುವರಿ ಪ್ಯಾಕೇಜ್ ಅನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.NDRF ನಿಯಮದ ಪ್ರಕಾರ ಕುಷ್ಕಿ ಜಮೀನಿಗೆ ಹೆಕ್ಟೇರ್ ಗೆ 8500ರೂ, ನೀರಾವರಿ ಜಮೀನಿಗೆ ಹೆಕ್ಟೇರ್ ಗೆ 17 ಸಾವಿರ, ಬಹು ವಾರ್ಷಿಕ ಬೆಳೆಗೆ 22,500 ರೂ ಇದೆ. ಈ ಹಣವನ್ನು ಸಮೀಕ್ಷೆ ಮುಗಿದ ತಕ್ಷಣ ಬಿಡುಗಡೆ ಆಗುತ್ತದೆ ಎಂದರು. NDRF ಹಣದ ಜೊತೆಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಪ್ರತೀ ಹೆಕ್ಟೇರ್ ಗೆ 8500 ರೂ ಪರಿಹಾರ ಕೊಡಲಿದೆ. ಇದರಿಂದಾಗಿ ಕುಷ್ಕಿ ಜಮೀನಿಗೆ ಹೆಕ್ಟೇರ್ ಗೆ 8500ರೂ+8500 ರೂ ಸೇರಿ ಒಟ್ಟು 17000 ಆಗುತ್ತದೆ. ನೀರಾವರಿ ಜಮೀನಿಗೆ 17000+8500 ಸೇರಿ ಒಟ್ಟು 25500 ರೂ ಆಗುತ್ತದೆ. ಬಹುವಾರ್ಷಿಕ ಬೆಳೆಗೆ ಹೆಕ್ಟೇರ್ ಗೆ 22500+8500 ಸೇರಿ ಒಟ್ಟು 31000 ಸಾವಿರ ರೂಪಾಯಿ ಆಗುತ್ತದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. NDRF + ರಾಜ್ಯ ಸರ್ಕಾರದ ಪ್ಯಾಕೇಜ್ ಸೇರಿ 2000-2500 ಕ್ಕೂ ಹೆಚ್ಚು ಕೋಟಿ ಹಣ ಪರಿಹಾರ ಕೊಡುತ್ತೇವೆ. ಪ್ರವಾಹದಿಂದ ಬೆಳೆ ಜೊತೆಗೆ ಮೂಲಭೂತ ಸೌಕರ್ಯಗಳು ಅಪಾರ ಪ್ರಮಾಣದಲ್ಲಿ…

Read More

ಕಲಬುರ್ಗಿ: ಭೀಮಾ ತೀರದಲ್ಲಿ ಪ್ರವಾಹದಿಂದಾಗಿ ನೆರೆ ಬಂದು ಬೆಳೆಹಾನಿಗೊಂಡ ರೈತರಿಗೆ ಪರಿಹಾರ ನೀಡುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಅದೇ ಜಂಟಿ ಸರ್ವೆ ಮುಗಿದ ಬಳಿಕ ಬೆಳೆಹಾನಿಗೆ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಇಂದು ವೈಮಾನಿಕ ಸಮೀಕ್ಷೆಯ ಬಳಿಕ ಕಲಬುರ್ಗಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, NDRF ಮಾರ್ಗಸೂಚಿಯಂತೆ 1 ಹೆಕ್ಟೇರ್ ಖುಷ್ಕಿ ಜಮೀನಿಗೆ 8,500, ನೀರಾವರಿಗೆ ಒಂದು ಹೆಕ್ಟೇರಿಗೆ 17,000 ಪರಿಹಾರವಿದೆ. ಖುಷ್ಕಿ ಜಮೀನಿಗೆ ಹೆಚ್ಚುವರಿಯಾಗಿ 8,500 ಕೊಡಬೇಕೆಂದು ನಿರ್ಧರಿಸಲಾಗಿದೆ. ನೀರಾವರಿಗೂ 8,500 ಹೆಚ್ಚು ಕೊಡಬೇಕು ಎಂದು ತೀರ್ಮಾನಿಸಿದ್ದೇನೆ ಎಂದರು. ಇದು ರಾಜ್ಯ ಸರ್ಕಾರದಿಂದ ರೈತರಿಗೆ ನೀಡಬೇಕು ಎಂದು ನಿರ್ಧರಿಸಲಾಗಿದೆ. 2 ಸಾವಿರ ಕೋಟಿಗಿಂತಲೂ ಹೆಚ್ಚು ರೈತರಿಗೆ ಪರಿಹಾರ ನೀಡುತ್ತಿದ್ದೇವೆ. ಸೇತುವೆ, ರಸ್ತೆ, ಬ್ಯಾರೇಜ್, ಶಾಲೆ, ಟ್ರಾನ್ಸ್ ಫಾರ್ಮರ್ ಗಳು ಹಾಳಾಗಿವೆ. ಸಮೀಕ್ಷೆ ಮುಗಿದ ಬಳಿಕ ದುರಸ್ಥಿ ಮಾಡುತ್ತೇವೆ ಎಂದರು. ಕೇಂದ್ರ ಸರ್ಕಾರ ಸಹ ಪ್ರವಾಹಕ್ಕೆ ಸ್ಪಂದಿಸಬೇಕು. ಸರ್ವೆ ಮುಗಿದ ಬಳಿಕ ಹೆಚ್ಚು ಪರಿಹಾರ ನೀಡುವಂತೆ ಕೇಂದ್ರ…

Read More

ಬೆಂಗಳೂರು: ಕೃಷಿ ಇಲಾಖೆ ವತಿಯಿಂದ ಕೇಂದ್ರ ಪುರಸ್ಕೃತ ಆತ್ಮ ಯೋಜನೆಯಡಿ ಬೆಂಗಳೂರು ನಗರ ಜಿಲ್ಲೆಯಲ್ಲಿ ನೇರಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ (BTM) ಹುದ್ದೆ-1 ಮತ್ತು ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ATM) – 02 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ (BTM) ಹುದ್ದೆಗೆ MSC. Agri / Allied Subject ಪದವಿಯೊಂದಿಗೆ ಕನಿಷ್ಠ 02 ವರ್ಷಗಳ ಕೃಷಿ ಅಥವಾ ಕೃಷಿ ಸಂಬಂಧಿತ ವಿಭಾಗದಲ್ಲಿ ಕರ್ತವ್ಯ ನಿರ್ವಹಹಿಸಿದ ಅನುಭವ ಹೊಂದಿರಬೇಕು. ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ATM) – ಹುದ್ದೆಗೆ BSC. Agri / Allied Subject ಪದವಿಯೊಂದಿಗೆ ಕನಿಷ್ಠ01 ವರ್ಷಗಳ ಕೃಷಿ ಅಥವಾ ಕೃಷಿ ಸಂಬಂಧಿತ ವಿಭಾಗದಲ್ಲಿ ಕರ್ತವ್ಯ ನಿರ್ವಹಹಿಸಿದ ಅನುಭವ ಹೊಂದಿರಬೇಕು. ಅಭ್ಯರ್ಥಿಗಳು ತಮ್ಮ ಬಯೋಡೇಟಾ ಹಾಗೂ ಸೂಕ್ತ ದಾಖಲೆಗಳನ್ನು ಜಂಟಿ ಕೃಷಿ ನಿರ್ದೇಶಕರ ಕಛೇರಿ, ಕೃಷಿ ಸಂಕೀರ್ಣ, ಎಸ್.ಕರಿಯಪ್ಪ ರಸ್ತೆ (ಕನಕಪುರ ರಸ್ತೆ) ಬನಶಂಕರಿ, ಬೆಂಗಳೂರು -560 070…

Read More

ಶಿವಮೊಗ್ಗ: ಗೆಲುವು ಬಂದಾಗ ಎಲ್ಲವೂ ನಾನು, ನನ್ನಿಂದ ಎನ್ನುವ ಮನುಷ್ಯ ಸೋತಾಗ ಹಣೆ ಬರಹ, ವಿಧಿ ಲಿಖಿತ ಎಂಬ ಶಬ್ದ ಬಳಸುತ್ತಾನೆ ಆದರೆ ನಿಜವಾಗಿಯೂ ಗೆಲುವು ಮತ್ತು ಸೋಲು ಎಲ್ಲವೂ ಭಗವಂತನ ಇಚ್ಚೆ. ಗೆದ್ದಾಗಲೂ ಅವನನ್ನೇ ಸ್ಮರಿಸಬೇಕು ಇನ್ನು ಸೋತಾಗ ಹೇಗೂ ಭಗವಂತನ ನೆನಪು ಮಾಡಲೇ ಬೇಕು ಎಂದು ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಶಿವಮೊಗ್ಗದ ಸಾಗರದ ಶ್ರೀ ರಾಘವೇಶ್ವರ ಸಭಾ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ನವರಾತ್ರ ನಮಸ್ಯಾದ 9 ನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಅವರು ನುಡಿದರು. ಪ್ರಸ್ತುತ ಆಧುನಿಕ ಜಗತ್ತಿನಲ್ಲಿ ರಕ್ಕಸರ ಮನಸ್ಥಿತಿ ಎಲ್ಲ ಕಡೆಯೂ ವ್ಯಾಪಿಸುತ್ತಿದೆ. ಹೇಳಿಕೇಳಿ ಅವರು ನಿಶಾಚರಿಗಳು. ನಾವುಗಳು ಅದೇ ದಾರಿ ಹಿಡಿಯುತ್ತಿರುವುದು ವಿಪರ್ಯಾಸ. ಪ್ರಕೃತಿಯೇ ಹಗಲು ಮತ್ತು ರಾತ್ರಿಯ ವ್ಯವಸ್ಥೆ ಮಾಡಿದೆ. ರಾತ್ರಿ ಎಂದರೆ ಅದು ವಿಶ್ರಾಂತಿಯ ಹೊತ್ತು. ಆದರೆ ಪ್ರಕೃತಿಗೆ ವಿರುದ್ದವಾಗಿ ರಾತ್ರಿ ಎಚ್ಚರವಿದ್ದು, ಹಗಲು ಮಲಗುವ ಅನಿವಾರ್ಯವಲ್ಲದ ಸ್ಥಿತಿಯನ್ನು ನಾವು ತಂದುಕೊಳ್ಳುತ್ತಿದ್ದೇವೆ ಎಂದ ಅವರು,…

Read More