Subscribe to Updates
Get the latest creative news from FooBar about art, design and business.
Author: kannadanewsnow09
ತುಮಕೂರು : ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಪ್ರಜಾ ಪ್ರಗತಿ ಪತ್ರಿಕೆ, ಕುರುಬ ಸಾಂಸ್ಕೃತಿಕ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕುರುಬ ಸಮಾಜದ ಸಾಂಸ್ಕೃತಿಕ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ 31 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ನಮ್ಮ ಜ್ಞಾನ ತಿಳಿವಳಿಕೆಯಲ್ಲಿ ಸ್ಪಷ್ಟತೆ ಇರಬೇಕು. ಕರ್ಮ ಸಿದ್ಧಾಂತವನ್ನು ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು. ಆಗ ಮಾತ್ರ ಗುಲಾಮಗಿರಿಯಿಂದ ಹೊರಗೆ ಬರಬಹುದು. ಸತ್ಯ ಹೇಳುವ ಚಾತಿ ಬೆಳೆಸಿಕೊಳ್ಳಬಹುದು ಎಂದರು. ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ ಅಕ್ಷರ ಬರೆದದ್ದಕ್ಕೆ ಮಹಾ ಸಾಹಿತಿಯಾದ ಎನ್ನುವ ಮಾತನ್ನೆಲ್ಲಾ ನಂಬಬೇಡಿ. ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ನಂಬಬೇಡಿ. ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹತ್ವವಾದದ್ದನ್ನು ಬರೆದರೆ ಅವರ ಬಗ್ಗೆ ಇಂಥಾ…
ಬೆಂಗಳೂರು: ಬಿಜೆಪಿ ಪಕ್ಷಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ಅವರು ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಿಜೆಪಿ ಪಕ್ಷದಿಂದ ಹೊರನಡೆದು, ಗುಡ್ ಬೈ ಹೇಳಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ತಾನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ರಾಜಕೀಯದಿಂದ ದೂರ ತೆರಳಿ ಪರಿಸರ ಚಟುವಟಿಕೆಯಲ್ಲಿ ಭಾಗಿಯಾಗುವುದಾಗಿ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅಂದಹಾಗೇ ಕಳೆದ ವಿಧಾನಸಭಾ ಚುನಾವಣೆ ವೇಳೆಯಲ್ಲಿ ಜೆಡಿಎಸ್ ಪಕ್ಷವನ್ನು ತೊರೆದು ಬಿಜೆಪಿಯನ್ನು ರಾಮಸ್ವಾಮಿ ಸೇರ್ಪಡೆಯಾಗಿದ್ದರು. ಬಿಜೆಪಿ-ಜೆಡಿಎಸ್ ಮೈತ್ರಿಯ ನಂತ್ರ ಬಿಜೆಪಿಯ ಎಲ್ಲಾ ಚಟುವಟಿಕೆಯಿಂದ ದೂರವೇ ಉಳಿದಿದ್ದರು. ಇದೀಗ ಮಾಜಿ ಶಾಸಕ ಎ.ಟಿ ರಾಮಸ್ವಾಮಿ ಅವರು ತಾನು ಪರಿಸರ ಚಟುವಟಿಕೆಯಲ್ಲಿ ತೊಡಗಿಕೊಳ್ಳುವ ನಿಟ್ಟಿನಲ್ಲಿ ಸಕ್ರೀಯವಾಗುತ್ತಿದ್ದೇನೆ. ಹೀಗಾಗಿ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿಸಿದ್ದೇನೆ ಅಂತ ತಿಳಿಸಿದ್ದಾರೆ. https://kannadanewsnow.com/kannada/new-utensils-for-16500-government-schools-in-the-state-smart-class-free-electricity-facility/ https://kannadanewsnow.com/kannada/shocking-man-chops-off-wifes-lovers-genitals-brings-him-to-police-station/
ಬೆಂಗಳೂರು: ರಾಜ್ಯದ 16,500 ಸರ್ಕಾರಿ ವಸತಿ ಶಾಲೆಗಳಿಗೆ ಹೊಸ ಪಾತ್ರೆ ನೀಡುವುದಾಗಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳ ಕಲಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಮಾಡಲಾಗುತ್ತದೆ. ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸುವುದಾಗಿಯೂ ಹೇಳಿದ್ದಾರೆ. ಬಿಳಾಗಿ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಬಿಳಾಗಿ ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ನವರು ಇಂದು ಶನಿವಾರ ಉದ್ಘಾಟಿಸಿದರು. ಈ ಬಳಿಕ ಮಾತನಾಡಿದರು. ಆರೋಗ್ಯದ ದೃಷ್ಟಿಯಿಂದ ಹೊಸ ಅಡುಗೆ ಪಾತ್ರೆಗಳು: ಮಕ್ಕಳ ಆರೋಗ್ಯದ ದೃಷ್ಟಿಯಿಂದ ಶಾಲಾ ಅಡುಗೆಯಲ್ಲಿ ಅಲ್ಯೂಮಿನಿಯಂ ಪಾತ್ರೆಗಳ ಬಳಕೆಯನ್ನು ನಿಲ್ಲಿಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ಈ ನಿಟ್ಟಿನಲ್ಲಿ ರಾಜ್ಯದ 16,500 ಸರ್ಕಾರಿ ಶಾಲೆಗಳಿಗೆ ಹೊಸ ಅಡುಗೆ ಪಾತ್ರೆಗಳನ್ನು ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು. ಮಕ್ಕಳಿಗೆ ಮೊಟ್ಟೆ ಮತ್ತು ಬಾಳೆಹಣ್ಣುಗಳನ್ನು ನೀಡಿ ಅಲ್ಯೂಮಿನಿಯಂ ಪಾತ್ರೆಗಳಲ್ಲಿ ಆಹಾರ ತಯಾರಿಸುವುದು ಒಳ್ಳೆಯದಲ್ಲ, ಹಾಗಾಗಿ ಹಳೆಯ ಪಾತ್ರೆಗಳನ್ನ…
ಕೇರಳ: ಮಾದಕ ದ್ರವ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅವರನ್ನು ಶನಿವಾರ ಬಂಧಿಸಲಾಗಿದ್ದು, ಸುಮಾರು ನಾಲ್ಕು ಗಂಟೆಗಳ ಕಾಲ ಪೊಲೀಸ್ ವಿಚಾರಣೆ ನಡೆಸಿದ ನಂತರ ಅವರನ್ನು ಬಂಧಿಸಲಾಗಿದೆ. ಈ ವಾರದ ಆರಂಭದಲ್ಲಿ ಕೊಚ್ಚಿಯ ಹೋಟೆಲ್ನಲ್ಲಿ ಮಾದಕ ದ್ರವ್ಯ ದಾಳಿಯ ಸಂದರ್ಭದಲ್ಲಿ ನಟ ಶೈನ್ ಟಾಮ್ ಚಾಕೊ ಪರಾರಿಯಾಗಿದ್ದ ಘಟನೆಗೆ ಈ ಬಂಧನ ಸಂಬಂಧಿಸಿದೆ. ಶೈನ್ ಟಾಮ್ ಚಾಕೊ ಅವರನ್ನು ಕೇರಳ ಪೊಲೀಸರು ಬಂಧನ ಪೊಲೀಸ್ ಅಧಿಕಾರಿಗಳ ಪ್ರಕಾರ, ಚಾಕೊ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವಿಕೃತ ವಸ್ತುಗಳ (ಎನ್ಡಿಪಿಎಸ್) ಕಾಯ್ದೆಯ ಸೆಕ್ಷನ್ 27 (ಮಾದಕ ದ್ರವ್ಯ ಸೇವನೆ) ಮತ್ತು 29 (ಕ್ರಿಮಿನಲ್ ಪಿತೂರಿ ಮತ್ತು ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವೈದ್ಯಕೀಯ ಪರೀಕ್ಷೆ ಮತ್ತು ಮುಂದಿನ ಕಾನೂನು ಕ್ರಮಗಳು ಮುಂದುವರಿಯಲಿವೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಈ ವಾರದ ಆರಂಭದಲ್ಲಿ ಪೊಲೀಸ್ ಮಾದಕ ದ್ರವ್ಯ ದಾಳಿಯ ಸಮಯದಲ್ಲಿ ಶೈನ್ ಟಾಮ್ ಚಾಕೊ ಓಡಿಹೋದ ನಂತರ ವಿವಾದಕ್ಕೆ ಸಿಲುಕಿದ್ದಾರೆ. ಕಳೆದ…
ಬೆಂಗಳೂರು: ಬೀದರ್ ನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿ ಜನಿವಾರ ಹಾಕಿರುವ ಕಾರಣಕ್ಕೆ ಪರೀಕ್ಷೆಗೆ ಅವಕಾಶ ನಿರಾಕರಣೆ ಮಾಡಿದ್ದು, ಶಿವಮೊಗ್ಗದಲ್ಲಿ ವಿದ್ಯಾರ್ಥಿ ಹಾಕಿಕೊಂಡಿದ್ದ ಜನಿವಾರ ಕಿತ್ತು ಹಾಕಿರುವುದು ಅತ್ಯಂತ ಹೀನ ಕೃತ್ಯವಾಗಿದ್ದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ನಮ್ಮ ದೇಶದ ಸಂಸ್ಕೃತಿ ಆಚಾರ, ವಿಚಾರ, ನಂಬಿಕೆಗಳ ಬಗ್ಗೆ ಅರಿವಿಲ್ಲದಿರುವ ಕಾಂಗ್ರೆಸ್ ಸರ್ಕಾರ ನಿಯಮಗಳ ಪಾಲನೆಯ ಹೆಸರಿನಲ್ಲಿ ಧರ್ಮ ದ್ರೋಹ ಮಾಡುವುದರ ಜೊತೆಗೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಜನಿವಾರ ಹಾಕಿಕೊಳ್ಳುವುದರಿಂದ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಏನು ಅಡ್ಡಿಯಾಗುತ್ತಿತ್ತು. ಸಂಸ್ಕಾರವೇ ಗೊತ್ತಿಲ್ಲದ ಸರ್ಕಾರದಲ್ಲಿ ಅಧಿಕಾರಿಗಳು ಹೃದಯ ಶೂನ್ಯರಾಗಿ ನಡೆದುಕೊಂಡಿರುವುದು ಅತ್ಯಂತ ಖಂಡನೀಯ. ಎಂಜನೀಯರ್ ಆಗಬೇಕೆಂದು ಕನಸು ಕಟ್ಟಿಕೊಂಡು ಅನಾಗರಿಕ ಅಧಿಕಾರಿಗಳಿಂದ ಈಗ ಸಿಇಟಿ ಪರೀಕ್ಷೆಯಿಂದ ವಂಚಿತರಾಗಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷೆ ನಡೆಸಿ ಅವರ ಮುಂದಿನ ಶೈಕ್ಷಣಿಕ ಬದುಕಿಗೆ ಅವಕಾಶ ಕಲ್ಪಿಸಿಕೊಡಬೇಕು…
ಅಫ್ಘಾನಿಸ್ತಾನ: ಇಲ್ಲಿನ ಗಡಿಯಲ್ಲಿ ಶನಿವಾರ 5.8 ತೀವ್ರತೆಯ ಭೂಕಂಪನ ಸಂಭವಿಸಿದ್ದು, ದೆಹಲಿ-ಎನ್ಸಿಆರ್ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ನಡುಕ ಉಂಟಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಪ್ರಕಾರ, ಮಧ್ಯಾಹ್ನ 12:17 ಕ್ಕೆ ಮೇಲ್ಮೈಯಿಂದ 86 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನ-ತಜಿಕಿಸ್ತಾನ್ ಗಡಿ ಪ್ರದೇಶದಲ್ಲಿದೆ, ಇದು ಟೆಕ್ಟೋನಿಕ್ ಚಲನೆಯಿಂದಾಗಿ ಭೂಕಂಪನ ಚಟುವಟಿಕೆಗೆ ಗುರಿಯಾಗುವ ಪ್ರದೇಶವಾಗಿದೆ. “ಇಕ್ಯೂ ಆಫ್ ಎಂ: 5.8, ಆನ್: 19/04/2025 12:17:53 IST, Lat: 36.10 N, ಉದ್ದ: 71.20 E, ಆಳ: 130 ಕಿ.ಮೀ, ಸ್ಥಳ: ಅಫ್ಘಾನಿಸ್ತಾನ” ಎಂದು ಎನ್ಸಿಎಸ್ ಎಕ್ಸ್ನಲ್ಲಿ ಬರೆದಿದೆ. https://twitter.com/NCS_Earthquake/status/1913488138472763402 ಕಾಶ್ಮೀರದ ಪೂಂಚ್ನಿಂದ ದೃಶ್ಯಗಳು ಅಭಿಮಾನಿಗಳು ಅಲುಗಾಡುತ್ತಿರುವುದನ್ನು ತೋರಿಸಿದೆ. ನೆಲ ನಡುಗಲು ಪ್ರಾರಂಭಿಸಿದ ಕೆಲವೇ ಕ್ಷಣಗಳಲ್ಲಿ ಜನರು ಕಟ್ಟಡದಿಂದ ಹೊರಗೆ ಧಾವಿಸುತ್ತಿದ್ದಾರೆ. https://twitter.com/ANI/status/1913490788958249057 ಈ ವರದಿಯ ಪ್ರಕಟಣೆಯ ಪ್ರಕಾರ, ಗಡಿಯ ಎರಡೂ ಬದಿಗಳಿಂದ ಸಾವುನೋವುಗಳು ಅಥವಾ ದೊಡ್ಡ…
ಬಿಳಾಗಿ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಬಿಳಾಗಿ ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ನವರು ಇಂದು ಶನಿವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ತಮ್ಮ ಸರ್ಕಾರದ ಬದ್ಧತೆಯನ್ನು ವ್ಯಕ್ತಪಡಿಸಿದರು. ಆರೋಗ್ಯದ ದೃಷ್ಟಿಯಿಂದ ಹೊಸ ಅಡುಗೆ ಪಾತ್ರೆಗಳು: ಮಕ್ಕಳ ಆರೋಗ್ಯದ ದೃಷ್ಟಿಯಿಂದ ಶಾಲಾ ಅಡುಗೆಯಲ್ಲಿ ಅಲ್ಯೂಮಿನಿಯಂ ಪಾತ್ರೆಗಳ ಬಳಕೆಯನ್ನು ನಿಲ್ಲಿಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ಈ ನಿಟ್ಟಿನಲ್ಲಿ ರಾಜ್ಯದ 16,500 ಸರ್ಕಾರಿ ಶಾಲೆಗಳಿಗೆ ಹೊಸ ಅಡುಗೆ ಪಾತ್ರೆಗಳನ್ನು ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು. ಮಕ್ಕಳಿಗೆ ಮೊಟ್ಟೆ ಮತ್ತು ಬಾಳೆಹಣ್ಣುಗಳನ್ನು ನೀಡಿ ಅಲ್ಯೂಮಿನಿಯಂ ಪಾತ್ರೆಗಳಲ್ಲಿ ಆಹಾರ ತಯಾರಿಸುವುದು ಒಳ್ಳೆಯದಲ್ಲ, ಹಾಗಾಗಿ ಹಳೆಯ ಪಾತ್ರೆಗಳನ್ನ ಬದಲಾಯಿಸಲಾಗುವುದು ಎಂದು ಹೇಳಿದರು. ಸರ್ಕಾರಿ ಶಾಲೆಗಳತ್ತ ಮಕ್ಕಳನ್ನು ಆಕರ್ಷಿಸುವ ಪ್ರಯತ್ನ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಓದಿಸುವ ಮನೋಭಾವವನ್ನು ಹೆಚ್ಚಿಸುವ ಅಗತ್ಯವನ್ನು ಸಚಿವರು ಒತ್ತಿ ಹೇಳಿದರು. ದೇವಸ್ಥಾನಗಳಲ್ಲಿ ಪ್ರಾರಂಭವಾದ ಸರ್ಕಾರಿ…
BREAKING: ಡ್ರಗ್ಸ್ ಕೇಸಿನಲ್ಲಿ ಖ್ಯಾತ ಮಲಯಾಳಂ ‘ನಟ ಶೈನ್ ಟಾಮ್ ಚಾಕೋ’ ಬಂಧನ | Malayalam actor Shine Tom Chacko
ನವದೆಹಲಿ: ಡ್ರಗ್ಸ್ ಕೇಸಿನಲ್ಲಿ ಮಲಯಾಳಂ ನಟ ಶೈನ್ ಟಾಮ್ ಚಾಕೋ ಅವರನ್ನು ಕೇರಳ ಪೊಲೀಸರು ಶನಿವಾರ ಬಂಧಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಅವರ ವಿರುದ್ಧ ಮಾದಕ ದ್ರವ್ಯಗಳು ಮತ್ತು ಮನೋವಿಕೃತ ವಸ್ತುಗಳ (NDPS) ಕಾಯ್ದೆಯ ಸೆಕ್ಷನ್ 27 (ಮಾದಕ ದ್ರವ್ಯಗಳು ಅಥವಾ ಮನೋವಿಕೃತ ವಸ್ತುಗಳ ಸೇವನೆ) ಮತ್ತು 29 (ಪ್ರೇರಣೆ ಮತ್ತು ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶೀಘ್ರದಲ್ಲೇ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗುವುದು ಮತ್ತು ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಪೊಲೀಸ್ ಮೂಲಗಳ ಪ್ರಕಾರ, ಶೈನ್ ತನ್ನ ವಕೀಲರೊಂದಿಗೆ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಎರ್ನಾಕುಲಂ ಉತ್ತರ ಪೊಲೀಸ್ ಠಾಣೆಗೆ ಬಂದರು. ಇತ್ತೀಚಿನ ಪೊಲೀಸ್ ಶೋಧದ ಸಮಯದಲ್ಲಿ ಹೋಟೆಲ್ನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪದ ಸುತ್ತಲಿನ ಸಂದರ್ಭಗಳನ್ನು ನಿರ್ಧರಿಸಲು ನಟನನ್ನು ಪ್ರಶ್ನಿಸಲಾಯಿತು. ಪೊಲೀಸರು ಶುಕ್ರವಾರ ನಟನಿಗೆ ನೋಟಿಸ್ ನೀಡಿದ್ದು, ಶನಿವಾರ ಬೆಳಿಗ್ಗೆ 10 ಗಂಟೆಗೆ ಎರ್ನಾಕುಲಂ ಉತ್ತರ…
ಬೆಳಗಾವಿ: ಮುಸ್ಲಿಂ ಯುವಕನ ಕಿರುಕುಳಕ್ಕೆ ಬೇಸತ್ತು ದಲಿತ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಚಿಕ್ಕಮಲ್ಲೂರು ಗ್ರಾಮದ ಶಿಲ್ಪಾ(22) ಎಂಬುವರೇ ಆತ್ಮಹತ್ಯೆಗೆ ಶರಣಾದಂತ ವಿದ್ಯಾರ್ಥಿನಿಯಾಗಿದ್ದಾರೆ. ಈಕೆ ಬೆಳಗಾವಿಯಲ್ಲಿ ಬಿಸಿಎ ಓದುತ್ತಿದ್ದರು. ಶಿಗ್ಗಾಂವಿಯ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಂತ ನವೀನ್ ಎಂಬಾತನನ್ನು ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಈ ವಿಷಯ ಅಂಗಡಿಯ ಮಾಲೀಕನಿಗೆ ಗೊತ್ತಾಗಿ ಟಾರ್ಚರ್ ಕೊಡೋದಕ್ಕೆ ಶುರು ಮಾಡಿದ್ದರು. ಶಿಗ್ಗಾಂವಿಯ ಫರ್ನಿಚರ್ ಅಂಗಡಿಯ ಮಾಲೀಕ ರಂಜಾನ್ ನದಾಫ್ ಎಂಬಾತ ಶಿಲ್ಪಾಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದನಂತೆ. ಈ ಕಾರಣದಿಂದ ಮನನೊಂದು ಯುವತಿ ಶಿಲ್ಪಾ ಬೆಳಗಾವಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಂದಹಾಗೇ ಕಳೆದ ವಾರ ನಡೆದಂತ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನವೀನ್ ಕೆಲಸ ಮಾಡ್ತಿದ್ದಂತ ಅಂಗಡಿ ಮಾಲೀಕನ ಟಾರ್ಚರ್ ಗೆ ಶಿಲ್ಪಾ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. https://kannadanewsnow.com/kannada/man-cuts-off-mans-genitals-and-brings-him-to-police-station-for-having-illicit-relationship-with-wife/ https://kannadanewsnow.com/kannada/check-website-avoid-unknown-links-mha-advisory-on-scams-targeting-pilgrims-tourists/
ಮಧ್ಯಪ್ರದೇಶ: ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಂತ ವ್ಯಕ್ತಿಗೆ ಎಷ್ಟೇ ಎಚ್ಚರಿಕೆ ನೀಡಿದರೂ, ತನ್ನ ಚಾಳಿಯನ್ನು ಮುಂದುವರೆಸಿದ್ದನು. ಈ ಸಿಟ್ಟಿನಿಂದ ಪತ್ನಿಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಂತ ಬಾಯ್ ಫ್ರೆಂಡ್ ಜನನಾಂಗವನ್ನೇ ಕತ್ತರಿಸಿ ಠಾಣೆಗೆ ತಂದಂತ ಪತಿಯೊಬ್ಬ, ಪೊಲೀಸರ ಮುಂದೆ ಶರಣಾಗಿದ್ದಾನೆ. ಮಧ್ಯಪ್ರದೇಶದ ಇಂದೋರ್ ನ ದೆಹರಿ ಗ್ರಾಮದಲ್ಲಿ ಇಂತಹ ಘಟನೆ ನಡೆದಿದೆ. ಈಶ್ವರ್ ಸಿಂಗ್ ಎಂಬಾತ ಕಾಲು ಸಿಂಗ್ ಎಂಬುವರ ಪತ್ನಿಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದನು. ಈ ಕಾರಣಕ್ಕೆ ಇಬ್ಬರ ನಡುವೆ ಜಗಳ ಉಂಟಾಗಿ, ಎಚ್ಚರಿಕೆಯನ್ನು ನೀಡಲಾಗಿತ್ತು. ಆದರೇ ಇದಕ್ಕೂ ಡೋಂಟ್ ಕೇರ್ ಎನ್ನುವಂತೆ ಕಾಲು ಸಿಂಗ್ ಪತ್ನಿಯೊಂದಿಗೆ ಅಕ್ರಮ ಸಂಬಂಧ ಮುಂದುವರೆಸಿದ್ದನು. ಇಂದು ಕಾಲು ಸಿಂಗ್ ತನ್ನ ನಾಲ್ವರು ಸ್ನೇಹಿತರೊಂದಿಗೆ ಈಶ್ವರ್ ಸಿಂಗ್ ಹಿಡಿದು, ಆತನ ಜನನಾಂಗವನ್ನೇ ಕತ್ತರಿಸಿದ್ದಾನೆ. ಕತ್ತರಿಸಿದಂತ ಜನನಾಂಗದೊಂದಿಗೆ ಬರೋಡ್ ಪೊಲೀಸ್ ಠಾಣೆಗೆ ತೆರಳಿ ಕಾಲು ಸಿಂಗ್ ಪೊಲೀಸರ ಮುಂದೆ ಶರಣಾಗಿದ್ದಾನೆ. ಇನ್ನೂ ಜನನಾಂಗ ಕತ್ತರಿಸಿದ್ದರಿಂದ ಗಾಯಗೊಂಡಿದ್ದಂತ ಈಶ್ವರ್ ಸಿಂಗ್ ನನ್ನು ಆಸ್ಪತ್ರೆಗೆ ದಾಖಲಿಸಿ…












