Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಿ, ಮುಕ್ತಾಯಗೊಳಿಸಲಾಗಿತ್ತು. ಆ ಬಳಿಕ ಆನ್ ಲೈನ್ ಮೂಲಕ ಭಾಗವಹಿಸದೇ ಇರುವವರಿಗೆ ಅವಕಾಶ ನೀಡಲಾಗಿತ್ತು. ಆ ಅವಕಾಶವು ಇಂದೇ ಕೊನೆಯಾಗಲಿದೆ. ಸೆಪ್ಟೆಂಬರ್ 22 ರಿಂದ ಆರಂಭಿಸಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಇಂದು ಮುಕ್ತಾಯಗೊಳ್ಳಲಿದೆ. ಹೀಗಾಗಿ ಆದಷ್ಟು ಬೇಗ ಜಾತಿಗಣತಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳದವರು ಆನ್ ಲೈನ್ ಮೂಲಕ ದಾಖಲಿಸುವಂತೆ ಹಿಂದುಳಿದ ವರ್ಗಗಳ ಆಯೋಗವು ಮನವಿ ಮಾಡಿದೆ. ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದಿದ್ದಲ್ಲಿ, ಆನ್ಲೈನ್ ಮೂಲಕವೂ ನಿಮ್ಮ ವಿವರಗಳನ್ನು ದಾಖಲಿಸಲು ಇಂದೇ ಕೊನೆಯ ದಿನವಾಗಿದೆ. ಈ ಕೂಡಲೇ https://kscbcselfdeclaration.karnataka.gov.in ಲಿಂಕ್ಗೆ ಭೇಟಿ ನೀಡಿ, ಕೇಳಿರುವ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುವ ಮೂಲಕ ಸಮೀಕ್ಷೆ ಯಶಸ್ವಿಯಾಗುವಲ್ಲಿ ನಮ್ಮೊಂದಿಗೆ ಸಹಕರಿಸಿ. https://twitter.com/KarnatakaVarthe/status/1987823615954632830 https://kannadanewsnow.com/kannada/man-shoots-himself-dead-in-broad-dyalight-at-crowded-jantar-mantar/ https://kannadanewsnow.com/kannada/committee-formed-under-adgp-leadership-to-rein-in-prisoners-in-parappana-agrahara-jail/
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹತದಲ್ಲಿ ಕೈದಿಗಳಿಗೆ ರಾಜಾತಿಥ್ಯದ ವೀಡಿಯೋ ವೈರಲ್ ಆಗಿದ್ದವು. ಈ ಬೆನ್ನಲ್ಲೇ ಕೈದಿಗಳಿಗೆ ಲಗಾಮು ಹಾಕಲು ಎಡಿಜಿಪಿ ನೇತೃತ್ವದಲ್ಲಿ ಸಮಿತಿ ರಚನೆಯನ್ನು ಮಾಡಿರುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಇಂದು ಈ ಸಂಬಂಧ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಸಭೆಯನ್ನು ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ನಿಯಮ ಮೀರಿ ವಿಶೇಷ ಸವಲತ್ತು ನೀಡಿರುವ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇನ್ನು ಮುಂದೆ ಈ ರೀತಿಯ ಪ್ರಕರಣ ಮರುಕಳಿಸದೆ ಇರಲು ಎಡಿಜಿಪಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದೇವೆ ಎಂದು ಹೇಳಿದರು. https://twitter.com/KarnatakaVarthe/status/1987830707625070717 https://kannadanewsnow.com/kannada/man-shoots-himself-dead-in-broad-dyalight-at-crowded-jantar-mantar/ https://kannadanewsnow.com/kannada/a-9th-grade-girl-in-bengaluru-committed-suicide-after-hearing-heartbreaking-news-of-her-friends-death/
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರ ಜನದಟ್ಟಣೆಯ ಜಂತರ್ ಮಂತರ್ನಲ್ಲಿ ವ್ಯಕ್ತಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ನಡೆದಿದೆ. ಮೃತರ ಗುರುತು ಇನ್ನೂ ತಿಳಿದುಬಂದಿಲ್ಲ. ಸುದ್ದಿ ಸಂಸ್ಥೆ ANI ಪ್ರಕಾರ, ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದು, ತನಿಖೆ ನಡೆಸುತ್ತಿದ್ದಾರೆ. ಮಾಹಿತಿ ಪಡೆದ ನಂತರ, ಪೊಲೀಸ್ ತಂಡವು ಅಪರಾಧ ಸ್ಥಳಕ್ಕೆ ಧಾವಿಸಿ ವ್ಯಕ್ತಿಯ ದೇಹವನ್ನು ವಶಪಡಿಸಿಕೊಂಡಿದೆ. ಮೃತರ ಮೃತದೇಹದಲ್ಲಿ ಗುಂಡೇಟಿನ ಗಾಯವಿತ್ತು. https://twitter.com/ANI/status/1987768649541914626 ಅವರನ್ನು ಇನ್ನೂ ಗುರುತಿಸಲಾಗಿಲ್ಲ. ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದಾರೆ ಮತ್ತು ಘಟನಾ ಸ್ಥಳವನ್ನು ಸುತ್ತುವರೆದಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ. https://kannadanewsnow.com/kannada/man-commits-suicide-by-jumping-off-flyover-in-bengaluru/ https://kannadanewsnow.com/kannada/a-9th-grade-girl-in-bengaluru-committed-suicide-after-hearing-heartbreaking-news-of-her-friends-death/
ಬೆಂಗಳೂರು: ನಗರದಲ್ಲಿ ಸ್ನೇಹಿತೆಯ ಸಾವಿನಿಂದ ಮನನೊಂದ ಬಾಲಕಿಯೊಬ್ಬಳು, ತಾನೂ ಆತ್ಮಹತ್ಯೆ ಮಾಡಿಕೊಂಡು ಸಾವಿನ ಹಾದಿ ಹಿಡಿದಿರುವಂತ ಆಘಾತಕಾರಿ ಘಟನೆ ನಡೆದಿದೆ. ಬೆಂಗಳೂರಲ್ಲಿ 9ನೇ ತರಗತಿ ಬಾಲಕಿ ಸೂಸೈಡ್ ಮಾಡಿಕೊಂಡಿದ್ದಾಳೆ. 16 ವರ್ಷದ ಶರ್ಮಿಳಾ ಆತ್ಮಹತ್ಯೆಗೆ ಶರಣಾದಂತ ಬಾಲಕಿಯಾಗಿದ್ದಾಳೆ. ಕಲಾಸಿಪಾಳ್ಯದ ತಮ್ಮ ಮನೆಯಲ್ಲಿ ನಿನ್ನೆ ನೇಣಿಗೆ ಶರಣಾಗಿದ್ದಾಳೆ. 10ನೇ ತರಗತಿ ಗೆಳತಿಯೊಂದಿಗೆ ಶರ್ಮಿಳಾಗೆ ತುಂಬಾನೇ ಸ್ನೇಹವಾಗಿತ್ತು. ಮೃತ ಗೆಳತಿ ಮತ್ತು ಶರ್ಮಿಳಾ ಇಬ್ಬರೂ ಆತ್ಮೀಯರಾಗಿದ್ದರು. 3 ತಿಂಗಳ ಹಿಂದೆ ಗೆಳತಿ ಆತ್ಮಹತ್ಯೆಗೆ ಶರಣಾಗಿದ್ದಳು. ಆಕೆಯ ಸಾವಿನಿಂದ ಮನನೊಂದು ನಿನ್ನೆ ಶರ್ಮಿಳಾ ಮನೆಯಲ್ಲಿ ನೇಣಿಗೆ ಶರಣಾಗಿರುವಂತ ಶಂಕೆ ವ್ಯಕ್ತವಾಗಿದೆ. https://kannadanewsnow.com/kannada/man-commits-suicide-by-jumping-off-flyover-in-bengaluru/ https://kannadanewsnow.com/kannada/5-indian-nationals-abducted-in-mali-embassy-working-for-safe-release/
ಬೆಂಗಳೂರು: ನಗರದಲ್ಲಿ ಮೇಲ್ ಸೇತುವೆಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ನಾಯಂಡಹಳ್ಳಿ ಫ್ಲೈಓವರ್ ಮೇಲಿನಿಂದ ಬಿದ್ದು ಸೂಸೈಡ್ ಮಾಡಿಕೊಳ್ಳಲಾಗಿದೆ. ಮೃತ ವ್ಯಕ್ತಿ ಬಗ್ಗೆ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ. ಬ್ಯಾಟರಾಯನಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಭೇಟಿ ನೀಡಿ, ಪರಿಶೀಲನೆ ಮಾಡುತ್ತಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಗುರುತು ಪತ್ತೆ ಹಚ್ಚುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ. ವ್ಯಕ್ತಿಯದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎನ್ನುವುದು ಪೊಲೀಸರ ತನಿಖೆಯಿಂದ ತಿಳಿಯಬೇಕಿದೆ. https://kannadanewsnow.com/kannada/5-indian-nationals-abducted-in-mali-embassy-working-for-safe-release/ https://kannadanewsnow.com/kannada/hindus-stay-in-bars-during-festivals-former-minister-anjaneyas-controversial-statement/
ನವದೆಹಲಿ: ಪಶ್ಚಿಮ ಆಫ್ರಿಕಾದ ದೇಶದಲ್ಲಿ ನಡೆಯುತ್ತಿರುವ ಅಶಾಂತಿಯ ನಡುವೆ ನವೆಂಬರ್ 6 ರಂದು ಮಾಲಿಯಲ್ಲಿ ಐದು ಭಾರತೀಯ ಪ್ರಜೆಗಳನ್ನು ಶಸ್ತ್ರಸಜ್ಜಿತ ವ್ಯಕ್ತಿಗಳು ಅಪಹರಿಸಿದ ನಂತರ ಬಮಾಕೊದಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಾಲಿಯನ್ ಅಧಿಕಾರಿಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದೆ. ಭಾರತೀಯರು ವಿದ್ಯುತ್ ಯೋಜನೆಗಳಲ್ಲಿ ತೊಡಗಿರುವ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಅವರನ್ನು ಕೊಬ್ರಿ ಬಳಿ ಅಪಹರಿಸಲಾಗಿದೆ ಎಂದು ಭದ್ರತಾ ಅಧಿಕಾರಿಗಳನ್ನು ಉಲ್ಲೇಖಿಸಿ AFP ಈ ಹಿಂದೆ ವರದಿ ಮಾಡಿದೆ. ಕಂಪನಿಯ ಇತರ ಭಾರತೀಯ ಉದ್ಯೋಗಿಗಳನ್ನು ಬಮಾಕೊಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. https://twitter.com/IndianEmbassyML/status/1987415395368681946 ಭಾರತೀಯ ರಾಯಭಾರ ಕಚೇರಿ ಪ್ರತಿಕ್ರಿಯೆ ಏನು? X ನಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ, ಮಾಲಿಯಲ್ಲಿರುವ ಭಾರತೀಯ ರಾಯಭಾರ ಕಚೇರಿಯು, “ನವೆಂಬರ್ 6, 2025 ರಂದು ಮಾಲಿಯಲ್ಲಿ ನಮ್ಮ ಐದು ಪ್ರಜೆಗಳ ಅಪಹರಣದ ದುರದೃಷ್ಟಕರ ಘಟನೆಯ ಬಗ್ಗೆ ರಾಯಭಾರ ಕಚೇರಿಗೆ ತಿಳಿದಿದೆ. ಸಾಧ್ಯವಾದಷ್ಟು ಬೇಗ ಅವರ ಸುರಕ್ಷಿತ ಬಿಡುಗಡೆಯನ್ನು ಖಚಿತಪಡಿಸಿಕೊಳ್ಳಲು ರಾಯಭಾರ ಕಚೇರಿ ಮಾಲಿಯನ್ ಅಧಿಕಾರಿಗಳು ಮತ್ತು…
ಹಾವೇರಿ: ಹಬ್ಬದ ವೇಳೆಯಲ್ಲಿ ಹಿಂದೂಗಳು ಬಾರ್ ನಲ್ಲಿ ಇರುತ್ತಾರೆ ಎಂಬುದಾಗಿ ಮಾಜಿ ಸಚಿವ ಹೆಚ್.ಆಂಜನೇಯ ಹೊಸ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಬೆಂಗಳೂರು ಏರ್ ಪೋರ್ಟ್ ನಲ್ಲಿ ನಮಾಜ್ ಮಾಡಿರೋದನ್ನು ಸಮರ್ಥಿಸಿಕೊಳ್ಳೋ ಭರದಲ್ಲಿ ಇಂತದ್ದೊಂದು ವಿವಾದಾತ್ಮಕ ಹೇಳಿಕೆಯನ್ನು ಮಾಜಿ ಸಚಿವ ಹೆಚ್.ಆಂಜನೇಯ ನೀಡಿದ್ದಾರೆ ಎನ್ನಲಾಗುತ್ತಿದೆ. ಮುಸ್ಲೀಮರು ಮಾಡಿದ್ದು ಪ್ರಾರ್ಥನೆ, ಕೋಲು ಹಿಡಿದುಕೊಂಡು ಹೋಗಲ್ಲ. ಅವರಲ್ಲಿರೋ ಶ್ರದ್ಧೆಯನ್ನು ನೋಡಿ ನೀವೆಲ್ಲರೂ ಕಲಿತುಕೊಳ್ಳಿ ಎಂಬುದಾಗಿ ತಿಳಿಸಿದರು. ಮುಸ್ಲಿಮರು ಮೂರ್ಖರಲ್ಲ. ಮಸೀದಿ ಇಲ್ಲ ಅಂತ ಹೇಳಿ ಅಲ್ಲಿ ನಮಾಜ್ ಮಾಡಿರಬಹುದು. ಅದರಲ್ಲೂ ನಾವು ಸಣ್ಣ ತನ ತೋರಿಸಿದ್ರೆ ಹೇಗೆ ಎಂಬುದಾಗಿ ಪ್ರಶ್ನಿಸಿದರು. ಗಣೇಶ ಹಬ್ಬದಲ್ಲಿ ಬಾರ್ ಗಳು ಪುಲ್ ರಶ್ ಇರುತ್ತವೆ. ಹಬ್ಬದಲ್ಲಿ ಹೂ, ಹಣ್ಣಿನ ವ್ಯಾಪಾರವೂ ಆಗಲ್ಲ. ಅದರ ಬದಲಾಗಿ ಹೈಕ್ಲಾಸ್ ಬಾರ್ ಅಂಡ್ ರೆಸ್ಟೋರೆಂಟ್ ಗಳು ಹೌಸ್ ಪುಲ್ ಆಗಿರುತ್ತವೆ ಎಂಬುದಾಗಿ ಹೇಳಿದ್ದಾರೆ. https://kannadanewsnow.com/kannada/railway-work-disruption-in-the-movement-of-5-trains-including-chennai-and-bangalore-express/ https://kannadanewsnow.com/kannada/shivamogga-power-outage-in-these-areas-of-sagar-town-tomorrow-november-11th/
ಶಿವಮೊಗ್ಗ: ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ದಿನಾಂಕ 11-11-2025ರ ನಾಳೆ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಪವರ್ ಕಟ್ ಆಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ. ಈ ಕುರಿತಂತೆ ಸಾಗರ ತಾಲ್ಲೂಕು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 11-11-2025ರ ನಾಳೆ ಬಿಹೆಚ್ ರಸ್ತೆ ಅಗಲೀಕರಣ ಕಾಮಗಾರಿ ಸಲುವಾಗಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕೆಲಸವನ್ನು ನಡೆಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ತಿಳಿಸಿದ್ದಾರೆ. ನಾಳೆ ಸಾಗರದ ಈ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಕರೆಂಟ್ ಇರಲ್ಲ ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್ ಫೀಡರ್ ಮಾರ್ಗದಿಂದ ವಿದ್ಯುತ್ ಸಂಪರ್ಕ ಪಡೆದಿರುವಂತ ನೆಹರು ನಗರ, ಅರಳೀಕೊಪ್ಪ, ಜನ್ನತ್ ಗಲ್ಲಿ, ಸಿಗಂದೂರು ಮಾರ್ಕೆಟ್ ರಸ್ತೆ, ಬಿಹೆಚ್ ರಸ್ತೆ, ಅಶೋಕ ರಸ್ತೆ, ಕೃಷ್ಣ ಗ್ಯಾರೇಜ್, ಎಲ್ಐಸಿ ಆಫೀಸ್ ಹತ್ತಿರ ವ್ಯಾಪ್ತಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್…
ಬೆಂಗಳೂರು: ಭಯೋತ್ಪಾದಕರನ್ನು ಓಲೈಕೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಅವರಿಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ರೇಸ್ ಕೋರ್ಸ್ ರಸ್ತೆ ಬಳಿ ಪ್ರತಿಭಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ವಿಭಜನೆ ಮಾಡುವ, ಹಿಂದೂಗಳನ್ನು ಕೊಲ್ಲುವ ಭಯೋತ್ಪಾದಕರಿಗೆ ರಾಜಾತಿಥ್ಯ ನೀಡಲಾಗುತ್ತಿದೆ. ಕುಕ್ಕರ್ ಬಾಂಬ್ ಬ್ಲಾಸ್ಟ್ ಆದಾಗ ಅವರನ್ನು ಬ್ರದರ್ ಎಂದರು. ಪಾಕಿಸ್ತಾನ ಜಿಂದಾಬಾದ್ ಎಂದವರಿಗೆ ಬಿರಿಯಾನಿ ಊಟ ಹಾಕಿಸಿದ್ದರು. ಕಾಂಗ್ರೆಸ್ ಪರೋಕ್ಷವಾಗಿ ಉಗ್ರರಿಗೆ ಬೆಂಬಲ ನೀಡುತ್ತಿದೆ. 5 ಕೋಟಿ ರೂ. ಖರ್ಚು ಮಾಡಿ, ಜೈಲಿನಲ್ಲಿ ನೂರಾರು ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿದ್ದರೂ, ಅವುಗಳನ್ನು ಆಫ್ ಮಾಡಲಾಗಿದೆ. ಒಂದೇ ಬಾರಿಗೆ ಎಲ್ಲ ಕ್ಯಾಮರಾಗಳು ಆಫ್ ಆಗಿದ್ದು ಹೇಗೆ ಎಂದು ಪ್ರಶ್ನಿಸಿದರು. ಜೈಲಿನೊಳಗೆ ಬಾಂಬ್, ಮಾಂಸ, ಗಾಂಜಾ. ಮೊಬೈಲ್ ಹೋಗುವುದು ಗೊತ್ತಾಗುವುದಿಲ್ಲ. ಕೈದಿಗಳು ಟಿವಿಯಲ್ಲಿ ಐಟಂ ಸಾಂಗ್ ನೋಡುವುದು ತಿಳಿಯುವುದಿಲ್ಲ. ಗುಪ್ತಚರ ತಂಡಕ್ಕೆ ಮಾಹಿತಿ ಸಿಗುವುದಿಲ್ಲ. ಕೈದಿಗಳು ಮೊಬೈಲ್ ಬಳಸಿ ಬ್ಲಾಕ್ಮೇಲ್ ಮಾಡುತ್ತಿದ್ದು, ಅದರಿಂದ ಹಣ ಸಂಪಾದಿಸುತ್ತಿದ್ದಾರೆ. ಪೊಲೀಸರು ಇದಕ್ಕೆ…
ಮೈಸೂರು: ಮೈಸೂರು ನ್ಯೂ ಗೂಡ್ಸ್ ಟರ್ಮಿನಲ್ ಮತ್ತು ನಾಗನಹಳ್ಳಿ ನಡುವೆ ರಸ್ತೆ ಕೆಳಸೇತುವೆ ಕಾಮಗಾರಿ ನಡೆಯುವುದರಿಂದ ಕೆಳಗಿನಂತೆ ರೈಲು ಸೇವೆಗಳು ನಿಯಂತ್ರಣ, ಮರುನಿಗದಿ ಮತ್ತು ಭಾಗಶಃ ರದ್ದುಗೊಳ್ಳಲ್ಲಿದೆ. 1. ರೈಲು ಸಂ. 16552 ಅಶೋಕಪುರಂ – ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ ಎಕ್ಸಪ್ರೆಸ್ 12, 14 ನವೆಂಬರ್, 3, 5, 10, 12, 31 ಡಿಸೆಂಬರ್ 2025, 2 ಜನವರಿ 2026 ರಂದು ಪ್ರಯಾಣ ಪ್ರಾರಂಭಿಸುವ ಈ ರೈಲು ಅಶೋಕಪುರಂ ನಿಂದ 40 ನಿಮಿಷ ತಡವಾಗಿ ಹೊರಡಲಿದೆ. 2. ರೈಲು ಸಂ. 16586 ಮುರ್ಡೇಶ್ವರ – ಕೆ.ಎಸ್.ಆರ್ ಬೆಂಗಳೂರು ಎಕ್ಸಪ್ರೆಸ್ 11, 13 ನವೆಂಬರ್, 2, 4, 9, 11, 30 ಡಿಸೆಂಬರ್ 2025, 1 ಜನವರಿ 2026 ರಂದು ಪ್ರಯಾಣ ಪ್ರಾರಂಭಿಸುವ ಈ ರೈಲು ಮಾರ್ಗಮಧ್ಯೆ 90 ನಿಮಿಷ ನಿಯಂತ್ರಿಸಲ್ಪಡಲಿದೆ. 3. ರೈಲು ಸಂ. 06270 ಎಸ್ಎಂವಿಟಿ ಬೆಂಗಳೂರು – ಮೈಸೂರು ಪ್ಯಾಸೆಂಜರ್ 11, 13 ನವೆಂಬರ್, 2, 4, 9, 11,…














