Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಕೊಲೆ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿ, ಪೊಲೀಸ್ ಠಾಣೆಗೆ ಕರೆತಂದು, ಬಂಧಿಸಿ ಜೈಲಿಗಟ್ಟದೇ, ಅವರನ್ನು ಸಾಗರ ಪೇಟೆ ಠಾಣೆಯ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಮೀನು ಹಿಡಿಯಲು ತೆರಳಿದ್ದಂತ ಮಂಜುನಾಥ್ ಮೇಲೆ ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಹಲ್ಲೆ ಮಾಡಿದ್ದಾರೆ. ಇಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂಬುದಾಗಿ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಹಕ್ರೆ ಒತ್ತಾಯಿಸಿದ್ದಾರೆ. ಶಾಸಕರ ಆಪ್ತ ಕಾರ್ಯದರ್ಶಿಗೆ ಸಭೆ ನಡೆಸುವ ಅಧಿಕಾರ ಕೊಟ್ಟವರಾರು? ಇಂದು ಸಾಗರ ನಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಸಾಗರದ ಪ್ರವಾಸಿ ಮಂದಿರಲ್ಲಿ ಶಾಸಕರ ಅನುಪಸ್ಥಿತಿಯಲ್ಲಿ ಆಪ್ತ ಕಾರ್ಯದರ್ಶಿ ಸಭೆ ನಡೆಸುವಂತ ಅಧಿಕಾರ ಹೇಗೆ ಬಂತು? ಶಾಸಕರ ಅಕ್ಕನ ಮಗ ಎನ್ನುವ ಕಾರಣಕ್ಕೋ, ಸಂಬಂಧಿಕ ಎನ್ನುವ ಕಾರಣಕ್ಕೋ ಎಂಬುದಾಗಿ ಪ್ರಶ್ನಿಸಿದರು. ಸಾಗರ ತಾಲ್ಲೂಕಿನಲ್ಲಿ ಶಾಸಕರ ಅನುಪಸ್ಥಿತಿಯಲ್ಲಿ ಆಡಳಿತಾಧಿಕಾರಿ ಇಓ, ಇಲ್ಲವೇ ತಹಶೀಲ್ದಾರ್, ಎಸಿ ಆಗಿದ್ದಾರೆ. ಮಳೆಹಾನಿ ಸೇರಿದಂತೆ ವಿವಿಧ ವಿಷಯಗಳಡಿ ಸಭೆ ನಡೆಸಬಹುದಾದಂತ ಅಧಿಕಾರ ಅವರಿಗಿದೆ. ಅವರು…
ಬೆಂಗಳೂರು: ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವವನ್ನು ಉದ್ಘಾಟಿಸಿ, ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡಿ ಮಾತನಾಡಿದರು. ನಮ್ಮದು ನುಡಿದಂತೆ ನಡೆಯುವ ಸರ್ಕಾರ. ನಿಮ್ಮ ಬೇಡಿಕೆಗಳ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ. NPS ಜಾರಿ ಮಾಡಿದ್ದು ಕೇಂದ್ರ ಸರ್ಕಾರ. ನಾವು OPS ಜಾರಿಯನ್ನು ಪ್ರಣಾಳಿಕೆಯಲ್ಲೇ ಘೋಷಿಸಿದ್ದೇವೆ. ಈ ಬಗ್ಗೆ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು. 1964 ರಲ್ಲಿ ಆರಂಭವಾದ ನೌಕರರ ಸಂಘ ಇಷ್ಟು ಮಹತ್ತರ ವರ್ಷಗಳ ಕಾಲ ನಿರಂತರವಾಗಿ ನೌಕರರ ಕಷ್ಟ ಸುಖಗಳಿಗೆ ಸ್ಪಂದಿಸಿ, ಪ್ರಾಮಾಣಿಕ ಹೋರಾಟ ನಡೆಸುತ್ತಿದೆ. ಜೊತೆಗೆ ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಸುವ ಹೊಣೆಗಾರಿಕೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದೀರಿ. ಇದಕ್ಕೆ ನೀವೆಲ್ಲರೂ ಅಭಿನಂದನಾರ್ಹರು ಎಂದು…
ಶಿವಮೊಗ್ಗ: ಮೀನು ಹಿಡಿಯಲು ತೆರಳಿದ್ದಂತ ಮಂಜುನಾಥ್ ಮೇಲೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಲ್ಲೆ ಮಾಡಿದ್ದು ಸಾಗರ ತಾಲ್ಲೂಕಿನಲ್ಲಿ ರಾಜಕೀಯ ಸ್ವರೂಪವನ್ನು ಪಡೆದಿತ್ತು. ಆದರೇ ಮಂಜುನಾಥ್ ಮೇಲೆ ಯಾವುದೇ ಹಲ್ಲೆಯನ್ನು ಮಾಡಿಲ್ಲ ಎಂಬುದಾಗಿ ಸಾಗರದ ಕಾರ್ಗಲ್ ನ ವೈಲ್ಡ್ ಲೈಫ್ ಆರ್ ಎಫ್ ಒ ಸಂತೋಷ್ ಪವಾರ್ ಸ್ಪಷ್ಟ ಪಡಿಸಿದ್ದಾರೆ. ಇಂದು ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿದಂತ ಅವರು, ಮೇ.31ರಂದು ಡಿಆರ್ ಎಫ್ ಅವರು ಗಸ್ತು ತೆರಳುತ್ತಿದ್ದಂತ ಸಂದರ್ಭದಲ್ಲಿ ಕಾಡಿನಲ್ಲಿ ನಾಡ ಬಂದೂಕು, ಕತ್ತಿಯೊಂದಿಗೆ ಮಂಜುನಾಥ್ ಹಾಗೂ ರಾಮು ಸಿಕ್ಕಿಬಿದ್ದಿದ್ದಾರೆ. ಮತ್ತೊಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ. ಅವರನ್ನು ಬಂಧಿಸಿ ಜೂನ್.1ರಂದು ವೈದ್ಯಕೀಯ ತಪಾಸಣೆ ನಡೆಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಕೋರ್ಟ್ ಜಾಮೀನು ಮಂಜೂರು ಮಾಡಿತ್ತು ಎಂಬುದಾಗಿ ತಿಳಿಸಿದರು. ಮೇ.31ರಂದು ವಶಕ್ಕೆ ಪಡೆದಿದ್ದಂತ ಮಂಜುನಾಥ್, ರಾಮು ಎಂಬುವರನ್ನು ಜೂನ್.1ರಂದು ಯಾವುದೇ ಹಲ್ಲೆ ಮಾಡದೇ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು, ಅವರ ಪರ ವಕೀಲರ ಮುಂದೆಯೇ ಅರಣ್ಯ ಸಿಬ್ಬಂದಿಗಳು ಹಲ್ಲೆ ಮಾಡಿದ್ದಾರೆಯೇ ಅಂತ ಪ್ರಶ್ನಿಸಿದ್ದರು. ಅಂದು…
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಸಮೀಪದ ಶಿರಾಳಕೊಪ್ಪ ರಸ್ತೆಯ ಕರ್ಜಿಕೊಪ್ಪ ಬಳಿಯಲ್ಲಿ ಕ್ಯಾಂಟರ್ ಮೇಲೆ ಮರ ಬಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕ್ಯಾಂಟರ್ ಚಾಲನೆ ಮಾಡುತ್ತಿದ್ದಂತ ಹನುಮಂತಪ್ಪ ತಲೆಗೆ ಪೆಟ್ಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಲ್ಲದೇ ವೀರೇಶ್ ಎಂಬಾತನ ಕೆನ್ನೆಗೆ ಗಾಯವಾಗಿದೆ. ಮತ್ತೊಬ್ಬ ಕೂಲಿ ಕಾರ್ಮಿಕರ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಸಾಗರಕ್ಕೆ ಕರೆದೊಯ್ಯಲಾಗಿದೆ. ಸ್ಥಳದಲ್ಲಿ ಖುದ್ದು ನಿಂತು RFO ಮರ ತೆರವು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಉಳವಿಯ ಉಪ ವಲಯ ಅರಣ್ಯಾಧಿಕಾರಿ ಯೊಗೇಶ್, ಅರಣ್ಯ ಗಸ್ತು ಪಾಲಕ ಪ್ರವೀಣ್ ಜೊತೆಗೂಡಿ ಸೊರಬ ಆರ್ ಎಫ್ ಓ ಜಾವೆಧ್ ಬಾಷ ಅಂಗಡಿ ಅವರು ಸಿಬ್ಬಂದಿಗಳೊಂದಿಗೆ ಮರ ತೆರವುಗೊಳಿಸಿದರು. ಈ ವೇಳೆ ಮಾತನಾಡಿದ ಅವರು, ಕೆಲ ದಿನಗಳಿಂದ ಸೊರಬ ತಾಲ್ಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣ ಮರದ ಬುಡ ಸಡಿಲಗೊಂಡು ಕ್ಯಾಂಟರ್ ಮೇಲೆ ಬಿದ್ದು ಈ ದುರ್ಘಟನೆ…
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 11 ಸರ್ಕಾರಿ ಬ್ಲಡ್ ಬ್ಯಾಂಕ್ಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಅಲ್ಲದೇ, ದೇಶದಲ್ಲಿಯೇ ಪ್ರಥಮ ಬಾರಿಗೆ ರಾಜ್ಯದಲ್ಲಿ ಅತಿ ಹೆಚ್ಚು ರಕ್ತ ಸಂಗ್ರಹಿಸುವ ನಾಲ್ಕು ಸರ್ಕಾರಿ ಬ್ಲಡ್ ಬ್ಯಾಂಕ್ಗಳನ್ನು ರೀಜನಲ್ ಸೆಂಟರ್ ಆಫ್ ಎಕ್ಸಲೆನ್ಸ್ ಬ್ಲಡ್ ಬ್ಯಾಂಕ್ಗಳಾಗಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. https://twitter.com/KarnatakaVarthe/status/1934949054435450889 ರಾಜ್ಯದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ನಿಗದಿಪಡಿಸಿದ ರಕ್ತ ಸಂಗ್ರಹಣೆಯ ಗುರಿಗಿಂತ ಶೇ 124 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇಖಡ 1ರಷ್ಟು ಜನರಿಗೆ ರಕ್ತದ ಅವಶ್ಯಕತೆ ಇದ್ದು ಅದಕ್ಕೆ ಅನುಗುಣವಾಗಿ 2024-25ರಲ್ಲಿ 8,15,402 ರಕ್ತದ ಯುನಿಟ್ ಗಳನ್ನು ಸಂಗ್ರಹಿಸುವ ಗುರಿ ನಿಗದಿಪಡಿಸಲಾಗಿತ್ತು. ಸದರಿ ಸಾಲಿನಲ್ಲಿ 10,11,073 ರಕ್ತದ ಯುನಿಟ್ಗಳನ್ನು ಸಂಗ್ರಹಿಸುವ ಮೂಲಕ ಶೇ.124%ರಷ್ಟು ಪ್ರಗತಿ ಸಾಧಿಸಲಾಗಿದೆ. ರಕ್ತದಾನಿಯಗಳ ದಿನಾಚರಣೆಯನ್ನು ಆಚರಿಸುವ ಮೂಲಕ ರಕ್ತದಾನಕ್ಕೆ ಪ್ರೋತ್ಸಾಹಿಸಲಾಗುತ್ತಿದೆ. 1 ಯುನಿಟ್ ರಕ್ತವು 4 ಜೀವಗಳನ್ನು ಉಳಿಸಬಹುದು. ಹೀಗಾಗಿ ನಮ್ಮ ಯುವಕ ಯುವತಿಯರು…
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿ ಸದಾನಂದ ಎಂಬುವರು ಅನುಮಾನ್ಪದ ರೀತಿಯಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಇದೊಂದು ಕೊಲೆ ಎಂಬುದಾಗಿ ಅವರ ಸಂಬಂಧಿ ರಶ್ಮಿ ಎಂಬುವರೇ ದೂರು ನೀಡಿದ್ದರು. ಆ ದೂರಿನಲ್ಲಿ ತನ್ನ ಪತಿ ವೆಂಕಟೇಶ್ ಆಚಾರಿ ಹಾಗೂ ಇತರರು ಸೇರಿ ಕೊಲೆ ಮಾಡಿರೋದಾಗಿ ಆರೋಪಿಸಿದ್ದರು. ಆ ಬಗ್ಗೆ ಹಿರಿಯ ಪತ್ರಕರ್ತ ಹಿತಕರ್ ಜೈನ್ ಅವರ ಸಾರಥ್ಯದ ಸುವರ್ಣಪ್ರಭ ಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಗಿದೆ. ಅದರ ಯಥಾವತ್ತು ಈ ಕೆಳಗೆ ಪ್ರಕಟಿಸಲಾಗಿದೆ ನೀವು ಓದಿ. ಸಾಗರದ ಶಿವಪ್ಪನಾಯಕ ನಗರದ ನಿವಾಸಿ ಸದಾನಂದ ಆಚಾರಿ ಕೊಲೆ ಪ್ರಕರಣದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಗಳ ಸಹಿತ ಗ್ರಾಮಲೆಕ್ಕಿಗನ ವಿರುದ್ಧ ಸಾಗರ ಪಟ್ಟಣ ಪೊಲೀಸ್ ಠಾಣೆ ಪಿ.ಎಸ್.ಐ ನಾಗರಾಜ ಟಿ.ಎಂ.ಅವರು ಎಫ್ಐಆರ್ ದಾಖಲಿಸಿ ಕಾನೂನು ಜರುಗಿಸಿದ್ದಾರೆ. ಕಳೆದ ಭಾನುವಾರ ದಿನಾಂಕ 15-06-2025ರಂದು ಸುಮಾರು 7 ಗಂಟೆಯ ಸಮಯದಲ್ಲಿ ಸಾಗರ ಪಟ್ಟಣದ ವಿಜಯನಗರ ಬಡಾವಣೆಯಲ್ಲಿ ಸದಾನಂದ ಆಚಾರಿ ಎಂಬ 46 ವರ್ಷದ ನನ್ನ ಮಾವನನ್ನು ಯಾರೋ ಕೊಲೆ ಮಾಡಿ ಬಿಸಾಕಿ…
ಬೆಂಗಳೂರು: ಇಂದು ಬೆಳಿಗ್ಗೆ 11:00 ಗಂಟೆಯಿಂದ ಸಂಜೆ 16:00 ಗಂಟೆಯವರೆಗೆ 66/11ಕೆ.ವಿ ಮಾನ್ಯತಾ ಟೆಕ್ ಪಾರ್ಕ್’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂಬುದಾಗಿ ಬೆಸ್ಕಾಂ ತಿಳಿಸಿದೆ. ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಡೆಲಿಟಿ, ಫಿಲಿಪ್ಸ್, ಇಕ್ಯುಬೇಟರ್, IBM D4 ಬ್ಲಾಕ್, IBM D1 & D2 ಬ್ಲಾಕ್, IBM D3 ಬ್ಲಾಕ್, F2 ಬ್ಲಾಕ್, L6 ಸೀಮೆನ್ಸ್, ಮಾನ್ಯತಾ ರೆಸಿಡೆನ್ಸಿ, B.T.S ಲೌಸೆಂಟ್, Anz H ಬ್ಲಾಕ್, C4 ಬ್ಲಾಕ್, ಗೋದ್ರೇಜ್ ಅಪಾರ್ಟ್ಮೆಂಟ್, ಹೆಬ್ಬಾಳ್ ಕೆಂಪಾಪುರ, ಲಾಯ್ಔಟ್, ವಿನ್ಯಾಕ ವೆಂಕಟಾವಿ ಲೇಔಟ್, JNC, L5 ನೋಕಿಯಾ ಬ್ಲಾಕ್, G1 ಬ್ಲಾಕ್, MFAR, ಮಧುವನ M2 ಬ್ಲಾಕ್, ರಾಚೇನಹಳ್ಳಿಯಲ್ಲಿ ಕರೆಂಟ್ ಇರೋದಿಲ್ಲ. ಶ್ರೀರಾಂಪುರ, ಚಾಮುಂಡೇಶ್ವರಿ ಲೇಔಟ್, ರಾಯಲ್ ಎನ್ಕ್ಲೇವ್, ಮೇಸ್ತ್ರಿ ಪಾಳ್ಯ, ಥಣಿಸಂದ್ರ, SNN ಕ್ಲರ್ಮಾಂಟ್ ಅಪಾರ್ಟ್ಮೆಂಟ್, ಕಾರ್ಲೆ, ಬಿ.ನಾರಾಯಣಪುರ ಕ್ರಾಸ್, ಮಂತ್ರಿಆಫ್ ಲಿಥೌಟ್, ಬೋರ್ಡ್ ಲಿಥೌಟ್ ಲೇಔಟ್, ಅಮರಜೋತಿ ಲೇಔಟ್,…
ಬೆಂಗಳೂರು: ತಾಯಂದಿರ ಸಾವುಗಳನ್ನು ತಡೆಯುವಲ್ಲಿ ರಕ್ತದ ಪಾತ್ರ ಪ್ರಮುಖವಾಗಿದೆ. 147 ತಾಲೂಕು ಆಸ್ಪತ್ರೆಗಳಲ್ಲಿ ಪ್ಲಾಸ್ಮಾ ಸಂಗ್ರಹಣೆ ವ್ಯವಸ್ಥೆ ಜಾರಿಗೆ ತರಲಾಗುತ್ತಿದ್ದು, ಅಗತ್ಯ ಉಪಕರಣಗಳ ಖರೀದಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1934949609551405520 ರಾಜ್ಯ ಸರ್ಕಾರದಿಂದ ರಕ್ತ ಸಂಗ್ರಹಣೆಗೆ ಉತ್ತಮ ವ್ಯವಸ್ಥೆ ಕಲ್ಪಿಸಲು ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ. ತಾಯಂದಿರ ಸಾವುಗಳನ್ನು ತಡೆಯುವಲ್ಲಿ ರಕ್ತದ ಪಾತ್ರ ಪ್ರಮುಖವಾಗಿದೆ. ತಾಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ಲಾಸ್ಮಾ ರಕ್ತ ಸಂಗ್ರಹಣೆಯ ವ್ಯವಸ್ಥೆ ಇರಲಿಲ್ಲ. ಇದೀಗ ಎಲ್ಲ 147 ತಾಲೂಕು ಆಸ್ಪತ್ರೆಗಳಲ್ಲಿ ಪ್ಲಾಸ್ಮಾ ರಕ್ತ ಸಂಗ್ರಹಣೆ ವ್ಯವಸ್ಥೆ ಜಾರಿಗೆ ತರಲಾಗುತ್ತಿದ್ದು, ಅಗತ್ಯ ಉಪಕರಣಗಳ ಖರೀದಿಗೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇಖಡ 1ರಷ್ಟು ಜನರಿಗೆ ರಕ್ತದ ಅವಶ್ಯಕತೆ ಇದ್ದು ಅದಕ್ಕೆ ಅನುಗುಣವಾಗಿ 2024-25ರಲ್ಲಿ 8,15,402 ರಕ್ತದ ಯುನಿಟ್ ಗಳನ್ನು ಸಂಗ್ರಹಿಸುವ ಗುರಿ ನಿಗದಿಪಡಿಸಲಾಗಿತ್ತು. ಸದರಿ ಸಾಲಿನಲ್ಲಿ 10,11,073 ರಕ್ತದ ಯುನಿಟ್ಗಳನ್ನು ಸಂಗ್ರಹಿಸುವ ಮೂಲಕ ಶೇ.124%ರಷ್ಟು ಪ್ರಗತಿ ಸಾಧಿಸಲಾಗಿದೆ. ರಕ್ತದಾನಿಯಗಳ…
ಬೆಂಗಳೂರು: ಸಂಜು ವೆಡ್ಸ್ ಗೀತಾ-2 ಚಿತ್ರದ ಪ್ರಚಾರಕ್ಕೆ ಬಾರದಂತ ನಟಿ ರಚಿತಾ ರಾಮ್ ವಿರುದ್ಧ ಫಿಲ್ಮ್ ಚೇಂಬರ್ ಗೆ ದೂರು ನೀಡಲಾಗಿದೆ. ಫಿಲ್ಮ್ ಚೇಂಬರ್ ಗೆ ತೆರಳಿದಂತ ಸಂಜು ವೆಡ್ಸ್ ಗೀತಾ-2 ನಿರ್ದೇಶಕ ನಾಗಶೇಖರ್, ನಟ ಶ್ರೀನಗರ ಕಿಟ್ಟಿಯವರು ನಟಿ ರಚಿತಾ ರಾಮ್ ವಿರುದ್ಧ ದೂರು ನೀಡಿದ್ದಾರೆ. ಸಂಚು ವೆಡ್ಸ್ ಗೀತಾ-2 ಚಿತ್ರದ ಪ್ರಚಾರ ಕಾರ್ಯವನ್ನು ಮಾಡಲಾಗುತ್ತಿದೆ. ಆದರೇ ನಟಿ ರಚಿತಾ ರಾಮ್ ಮಾತ್ರ ಪ್ರಚಾರಕ್ಕೆ ಬರುತ್ತಿಲ್ಲ. ಹೀಗಾಗಿ ನಾವು ಇಂಥ ಕಲಾವಿದರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ನಮ್ಮ ಸಿನಿಮಾ ಪ್ರಚಾರಕ್ಕೆ ಒಂಚೂರು ಸಹಕಾರ ಕೊಟ್ಟಿಲ್ಲ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 16 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಬಾಗಲಕೋಟೆ ಜಿಲ್ಲಾಧಿಕಾರಿಯಾಗಿದ್ದಂತ ಜಾನಕಿ ಕೆ ಎಂ, ಐಎಎಸ್ (ಕೆಎನ್: 2012) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಕರ್ನಾಟಕ ಲೋಕಸೇವಾ ಸೇವಾ ಆಯೋಗದ ಕಾರ್ಯದರ್ಶಿಯಾಗಿ ನೇಮಿಸಿದೆ. ಈ ಹುದ್ದೆಯಲ್ಲಿದ್ದಂತ ಡಾ. ವಿಶಾಲ್ ಆರ್, ಐಎಎಸ್ ಅವರನ್ನು ಸಮಕಾಲೀನ ಪ್ರಭಾರದಿಂದ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲಾಧಿಕಾರಿಯಾಗಿದ್ದಂತ ಸತ್ಯಭಾಮ ಸಿ, ಐಎಎಸ್ (ಕೆಎನ್: 2012) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಸಮಗ್ರ ಶಿಕ್ಷಣ ಕರ್ನಾಟಕ, ಬೆಂಗಳೂರು ಅವರನ್ನು ರಾಜ್ಯ ಯೋಜನಾ ನಿರ್ದೇಶಕಿಯಾಗಿ ನೇಮಿಸಿದೆ. ಈ ಹುದ್ದೆಯಲ್ಲಿದ್ದಂತ ಡಾ. ತ್ರಿಲೋಕ್ ಚಂದ್ರ ಕೆ ವಿ., ಐಎಎಸ್ ಅವರನ್ನು ಸಮಕಾಲೀನ ಪ್ರಭಾರದಿಂದ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲತಾ ಕುಮಾರಿ ಕೆ…














