Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯದ ಬಗ್ಗೆ ಸಿಎಂ ಸಿದ್ಧರಾಮಯ್ಯ ಬೆಂಗಳೂರು ಸಿಟಿ ರೌಂಡ್ ನಡೆಸುತ್ತಿದ್ದಾರೆ. ಈ ವೇಳೆ ಸಮರ್ಪಕ ನಿರ್ವಹಣೆ ಮಾಡದ ವೈಟ್ ಟಾಪಿಂಗ್ ಗುತ್ತಿಗೆದಾರರು, ಎಂಜಿನಿಯರ್ ಗಳ ವಿರುದ್ದ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಹೆಣ್ಣೂರಿನ ಬಾಗಲೂರು ರಸ್ತೆಯಲ್ಲಿ ವೈಟ್ ಟಾಪಿಂಗ್ ಮಾಡಲು ಆರಿಸಿಕೊಂಡ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿರುವುದರ ಹೊಣೆಯನ್ನು ಗುತ್ತಿಗೆದಾರರೇ ಹೊರಬೇಕಿದೆ. ಓಮ್ಮೆ ವೈಟ್ ಟಾಪಿಂಗ್ ಗೆ ರಸ್ತೆಯನ್ನು ಒಪ್ಪಿಸಿದ ಮೇಲೆ ಆ ರಸ್ತೆಗಳ ನಿರ್ವಹಣೆಗೆ ಬಿಬಿಎಂಪಿ ಹಣ ಕೊಡಲು ಬರುವುದಿಲ್ಲ. ವೈಟ್ ಟಾಪಿಂಗ್ ಮುಗಿಯುವಾಗ 2-3 ವರ್ಷ ಆಗುತ್ತದೆ. ಅಲ್ಲಿಯವರೆಗೂ ಗುತ್ತಿಗೆದಾರರೇ ರಸ್ತೆಗಳ ನಿರ್ವಹಣೆ ಮಾಡಬೇಕು. ಆದರೆ ಹೇಳೋರು ಕೇಳೇರು ಇಲ್ಲದಂತೆ ಗುತ್ತಿಗೆದಾರರು ವರ್ತಿಸುತ್ತಾರೆ ಎಂದು ಅಧಿಕಾರಿಗಳು ತಿಳಿಸಿದರು. ಸಮರ್ಪಕ ನಿರ್ವಹಣೆ ಮಾಡದ ವೈಟ್ ಟಾಪಿಂಗ್ ಗುತ್ತಿಗೆದಾರರು ಮತ್ತು ಎಂಜಿನಿಯರ್ ಗಳ ವಿರುದ್ದ ಕ್ರಮಕ್ಕೆ ಸಿಎಂ ಸೂಚನೆ ನೀಡಿದರು.
ಬೆಂಗಳೂರು: ನಗರದಲ್ಲಿ ಸಿಎಂ ಸಿದ್ಧರಾಮಯ್ಯ ಸಿಟಿ ರೌಂಡ್ಸ್ ನಡೆಸುತ್ತಿದ್ದಾರೆ. ಇಂದು ಘನ ತ್ಯಾಜ್ಯ ಸಂಗ್ರಹಣಾ ಕೇಂದ್ರದಿಂದ ಹೊರಗೆ ಬಂದು ಕುಳಿತಿರುವ ತ್ಯಾಜ್ಯಯವನ್ನು ಗಮನಿಸಿದಂತ ಸಿಎಂ ಸಿದ್ಧರಾಮಯ್ಯ ಅಧಿಕಾರಿಗಳ ವಿರುದ್ಧ ಗರಂ ಆದರು. ಅಲ್ಲದೇ ಬಿ ಸ್ಮೈಲ್ ರಾಘವೇಂದ್ರ ಪ್ರಸಾದ್ ಮತ್ತು ಪ್ರಹ್ಲಾದ್ ಗೆ ನೋಟಿಸ್ ಕೊಡಲು ಸೂಚಿಸಿದ್ದಾರೆ. ವಾರ್ಡ್ ನಂಬರ್ 23 ರ ಘನ ತ್ಯಾಜ್ಯ ಸಂಗ್ರಹಣಾ ಕೇಂದ್ರದ ಒಳಗೆ ಇರಬೇಕಾದ ತ್ಯಾಜ್ಯ ಸಂಗ್ರಹಣಾ ಕೇಂದ್ರದ ಹೊರಗೆ ಬಂದು ರಾಶಿ ಬಿದ್ದಿರುವುದನ್ನು ಗಮನಿಸಿದ ಸಿಎಂ ಸಿಟ್ಟಾದರು. ಸಂಗ್ರಹಣಾ ಕೇಂದ್ರದ ಒಳಗೆ ಸಾಕಷ್ಟು ಜಾಗ ಖಾಲಿ ಇರುವುದನ್ನು ಗಮನಿಸಿದ ಸಿಎಂ ಬಿ ಸ್ಮೈಲ್ ಚೀಫ್ ಎಂಜಿನಿಯರ್ ಪ್ರಹ್ಲಾದ್ ಅವರಿಗೆ ನೋಟಿಸ್ ನೀಡಲು ಸೂಚನೆ ನೀಡಿದರು ಬಳಿಕ ಅಲ್ಲಿಂದ ಕೆಲವೇ ದೂರದಲ್ಲಿ ರಸ್ತೆಯಲ್ಲಿ ಜೆಲ್ಲಿ ಕಲ್ಲುಗಳು ಬಿದ್ದಿರುವುದನ್ನು ಗಮನಿಸಿ ಇದಕ್ಕೆ ಕಾರಣರಾದ ಮತ್ತೋರ್ವ ಎಂಜಿನಿಯರ್ ಚೀಫ್ ರಾಘವೇಂದ್ರ ಪ್ರಸಾದ್ ಅವರಿಗೂ ನೋಟಿಸ್ ನೀಡಿ ಎಂದು ಸಿಎಂ ಸೂಚಿಸಿದರು. ಇದಷ್ಟೇ ಅಲ್ಲದೇ ಬೆಂಗಳೂರಿನ ರಸ್ತೆ ಪಕ್ಕದಲ್ಲೇ…
ಶಿವಮೊಗ್ಗ : ಜಿಲ್ಲೆಯನ್ನು ಜಗತ್ತಿಗೆ ಪರಿಚಯಿಸುವ ನಿಟ್ಟಿನಲ್ಲಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ನೂತನವಾಗಿ ಆರಂಭಿಸಿರುವ ಜಾಲತಾಣದಲ್ಲಿ ಜಿಲ್ಲೆಯ ವಿಶೇಷವಾದ, ಅತ್ಯದ್ಭುತವಾದ ಛಾಯಾಚಿತ್ರಗಳು, ವಿಡಿಯೋ ತುಣುಕುಗಳು, ಮತ್ತಿತರ ಮಾಹಿತಿಯನ್ನು ಅಳವಡಿಸಿರುವುದು ಅತ್ಯಂತ ಪ್ರಶಂಸನಾರ್ಹ ಸಂಗತಿಯಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಈ ಜಾಲತಾಣದಲ್ಲಿ ಜಿಲ್ಲೆಯ 61ಕ್ಕೂ ಹೆಚ್ಚಿನ ಜಿಲ್ಲೆಯ ಪ್ರವಾಸಿ ತಾಣಗಳು, ಸ್ಥಳ ಐತಿಹ್ಯ, ವ್ಯಕ್ತಿಚಿತ್ರ, ವಿಶ್ವ ಪ್ರಸಿದ್ಧ ಜೋಗದ ಜಲಪಾತ, ನಗರಕೋಟೆ, ಕೊಡಚಾದ್ರಿ ತಪ್ಪಲು, ವನ್ಯ ಮೃಗಗಳು, ಸಸ್ಯ ಸಂಪತ್ತು ಸೇರಿದಂತೆ ಸಹಸ್ರಾರು ವಿವಿಧ ಮಾಹಿತಿಯನ್ನು ಒದಗಿಸಿರುವುದು ಜಗತ್ತಿನ ಹಲವು ಭಾಗಗಳಲ್ಲಿ ವಾಸಿಸುವವರನ್ನು ಆಕರ್ಷಸುವಂತೆ ಮಾಡಿರುವುದರಲ್ಲಿ ಯಾವುದೇ ಸಂದೇಹ ಇಲ್ಲ ಎಂದವರು ಪ್ರಶಂಸಿದರು.…
ಬೆಂಗಳೂರು: ಕನ್ನಡದ ಬಿಗ್ ಬಾಸ್ ಶೋಗೆ ಬಾಂಬ್ ಇಡುವುದಾಗಿ ಇನ್ ಸ್ಟಾಗ್ರಾಮ್ ನಲ್ಲಿ ಯುವಕನೊಬ್ಬ ಬೆದರಿಕೆ ಹಾಕಿರೋದಾಗಿ ತಿಳಿದು ಬಂದಿದೆ. ಈ ಸಂಬಂಧ ಪೊಲೀಸರು ಎನ್ ಸಿ ಆರ್ ದಾಖಲಿಸಿದ್ದಾರೆ. ಕನ್ನಡದ ಖ್ಯಾತ ರಿಯಾಲಿಟಿ ಶೋಗಳಲ್ಲಿ ಬಿಗ್ ಬಾಸ್ ಕೂಡ ಒಂದಾಗಿದೆ. ಇಂತಹ ಬಿಗ್ ಬಾಸ್ ಶೋಗೆ ಬಾಂಬ್ ಇಡೋದಾಗಿ ಯುವಕನೊಬ್ಬ ಇನ್ ಸ್ಟಾಗ್ರಾಂನಲ್ಲಿ ವೀಡಿಯೋ ಸಹಿತ ಬೆದರಿಕೆ ಹಾಕಿದ್ದಾನೆ. ವೈರಲ್ ಆಗಿರುವಂತ ವೀಡಿಯೋದಲ್ಲಿ ಬಿಗ್ ಬಾಸ್ ಗೆ ನನ್ನ ಕರೆದಿಲ್ಲ ಅಂದ್ರೆ ಬಾಂಬ್ ಇಡ್ತೀನಿ ಎಂಬುದಾಗಿ ಮಮ್ಮಿ ಅಶೋಕ್ ಎನ್ನುವ ಯುವಕ ಇನ್ ಸ್ಟಾಗ್ರಾಂನಲ್ಲಿ ವೀಡಿಯೋ ಸಹಿತ ಪೋಸ್ಟ್ ಮಾಡಿದ್ದಾನೆ. ಈ ವೀಡಿಯೋ ಹಿನ್ನಲೆಯಲ್ಲಿ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/do-you-run-blindfolded-on-the-road-cm-gives-a-class-to-officials-during-city-roads-in-bengaluru/ https://kannadanewsnow.com/kannada/the-police-commissioner-has-issued-this-stern-instruction-to-the-bengaluru-city-police/
ಬೆಂಗಳೂರು: ನಗರದಲ್ಲಿ ಕಾನೂನು ಸುವ್ಯವಸ್ಥೆ ಕರ್ತವ್ಯದ ಜೊತೆಯಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಪೊಲೀಸರಿಗೆ ಆಯುಕ್ತರಾದಂತ ಸೀಮಾಂತ್ ಕುಮಾರ್ ಸಿಂಗ್ ಖಡಕ್ ಸೂಚನೆ ನೀಡಿದ್ದಾರೆ. ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ಅವರು, ಬೆಂಗಳೂರು ನಗರದ ಎಲ್ಲಾ ಕಾನೂನು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ ಹೆಚ್ಚಿನ ವಾಹನಗಳ ದಟ್ಟಣೆ (ಪೀಕ್ ಅವಧಿಯಲ್ಲಿ ) ಅವಧಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಅಧಿಕಾರಿ/ಸಿಬ್ಬಂದಿಗಳು ಕೂಡ : ಟ್ರಾಫಿಕ್ ಜಂಕ್ಷನ್ಗಳಲ್ಲಿ ಸಂಚಾರ ಪೊಲೀಸರೊಂದಿಗೆ ಸೇರಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡುವ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ ವಿಭಾಗದ ಅಧಿಕಾರಿ, ಸಿಬ್ಬಂದಿಗಳು ಸಂಚಾರಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳೊಂದಿಗೆ ಸಹಕರಿಸುವ ಜೊತೆಗೆ ತಮ್ಮ ಕರ್ತವ್ಯದ ಅವಧಿಯಲ್ಲಿ ವಾಹನ ಸವಾರ, ಚಾಲಕರು ಸಂಚಾರ ನಿಯಮಗಳ ಉಲ್ಲಂಘನೆ ಮಾಡುತ್ತಿರುವುದು ಕಂಡುಬಂದಲ್ಲಿ, ಅದನ್ನು ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದು, ತಮ್ಮ ಮೊಬೈಲ್ನಲ್ಲಿ ಪೊಲೀಸ್ ಇಲಾಖೆಯ ಪಬ್ಲಿಕ್-ಐ ಆರ್ ಅನ್ನು ಡೌನ್…
‘ರಸ್ತೇಲಿ ಕಣ್ಣು ಮುಚ್ಚಿ’ಕೊಂಡು ಓಡಾಡ್ತೀರಾ?: ಬೆಂಗಳೂರಲ್ಲಿ ಸಿಟಿ ರೌಡ್ಸ್ ವೇಳೆ ಅಧಿಕಾರಿಗಳಿಗೆ ‘ಸಿಎಂ ಪುಲ್ ಕ್ಲಾಸ್’
ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿ ಸಮಸ್ಯೆ ಕಾರಣದಿಂದ ಖುದ್ದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ಪರಿಶೀಲನೆಗೆ ಸಿಟಿ ರೌಂಡ್ಸ್ ಮಾಡುತ್ತಿದ್ದಾರೆ. ಈ ವೇಳೆ ರಸ್ತೆ ಗುಂಡಿಗಳನ್ನು ಕಂಡಂತ ಸಿಎಂ ಸಿದ್ಧರಾಮಯ್ಯ ಅಧಿಕಾರಗಳ ವಿರುದ್ಧ ಕೆಂಡಾಮಂಡಲರಾದರು. ಈ ವೇಳೆ ಅಧಿಕಾರಿಗಳು ರಸ್ತೇಲಿ ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪುಲ್ ಕ್ಲಾಸ್ ತೆಗೆದುಕೊಂಡರು. ಮಾರ್ಗ ಮಧ್ಯದಲ್ಲಿ ರಿಂಗ್ ರಸ್ತೆಯ ಬದಿಯಲ್ಲಿ CC ಕ್ಯಾಮರಾ ಇಲ್ಲದಿರುವ ಜಾಗದಲ್ಲಿ ಹಳೆ ಕಟ್ಟಡ ತ್ಯಾಜ್ಯ ಸುರಿದಿರುವುದನ್ನು ಗಮನಿಸಿದ ಸಿಎಂ, ತಮ್ಮ ವಾಹನ ಚಾಲಕ ನವೀನ್ ಗೆ ಕಾರು ನಿಲ್ಲಿಸುವಂತೆ ಸೂಚಿಸಿದರು. ಕಾರಿನಿಂದ ಇಳಿದ ಸಿಎಂ ಈ ಜಾಗದಲ್ಲಿ ತ್ಯಾಜ್ಯ ಸುರಿದಿರುವವರನ್ನು ಪತ್ತೆ ಹಚ್ಚಿ ಅವರ ವಾಹನ ಸೀಜ್ ಮಾಡಿ ಕೇಸು ದಾಖಲಿಸುವಂತೆ ಸೂಚಿಸಿದರು. ಬಳಿಕ, ಅಧಿಕಾರಿಗಳೇನು ರಸ್ತೆಯಲ್ಲಿ ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ? ರಸ್ತೆಗೆ ತ್ಯಾಜ್ಯ ಸುರಿದಿರುವುದನ್ನು ಗಮನಿಸೋಕೆ ಆಗೋದಿಲ್ಲವಾ ಎಂದು ಬಿಬಿಎಂಪಿ, ಬಿಡಿಎ ಮತ್ತು ಟ್ರಾಫಿಕ್ ಪೊಲೀಸರನ್ನು ಖಾರವಾಗಿ ಪ್ರಶ್ನಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದರು. ಮೆಟ್ರೋ ಕಾಮಗಾರಿ…
ಬೆಂಗಳೂರು: ಅಮೆರಿಕವು ಭಾರತದ ಉತ್ಪನ್ನಗಳ ಮೇಲೆ ವಿಪರೀತ ಸುಂಕ ಹಾಕುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ. ಈಗ ಅವರು ನಮ್ಮ ಔಷಧೋತ್ಪನ್ನಗಳ ಮೇಲೂ ವಿಪರೀತ ಸುಂಕ ಏರಿದ್ದಾರೆ. ಕೇಂದ್ರ ಸರ್ಕಾರವು ಮಧ್ಯ ಪ್ರವೇಶಿಸಿ ಇದನ್ನು ತ್ವರಿತವಾಗಿ ಬಗೆಹರಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಶನಿವಾರ ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಚೀನಾ ಮತ್ತು ವಿಯಟ್ನಾಂ ಎರಡೂ ಉತ್ಪಾದನೆ ಹಾಗೂ ರಫ್ತಿನಲ್ಲಿ ನಮಗಿಂತ ಮುಂದಿವೆ. ಅವುಗಳ ಮೇಲೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕ್ರಮವಾಗಿ ಶೇ.30 ಮತ್ತು ಶೇ 19ರಷ್ಟು ಮಾತ್ರ ಸುಂಕ ಹಾಕಿದ್ದಾರೆ. ಆದರೆ ಭಾರತದ ಉತ್ಪನ್ನಗಳ ಮೇಲೆ ಶೇ 50ರಷ್ಟು ಸುಂಕ ಹೇರಿದ್ದಾರೆ. ಇದರಿಂದ ನಮಗೆ ಹೊಡೆತ ಬೀಳುತ್ತಿರುವುದು ಸುಳ್ಳಲ್ಲ ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಹೋದ ಸಲ ಅಮೆರಿಕದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಅಬ್ ಕೀ ಬಾರ್ ಟ್ರಂಪ್ ಎಂದು ಅವರ ಪರ ನೇರವಾಗಿ ಪ್ರಚಾರ…
ಪದೇ ಪದೇ ಎದುರಾಗುವ ನೆಟ್ವರ್ಕ್ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಈ ಸುಲಭ ವಿಧಾನ ಅನುಸರಿಸಿ. ನಿಮ್ಮ ಪೋನ್ ನೆಟ್ವರ್ಕ್ ಸಮಸ್ಯೆ ಖಂಡಿತ ಸರಿಯಾಗಲಿದೆ ಎಂಬುದು ತಜ್ಞರ ಮಾಹಿತಿಯಾಗಿದೆ. ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಕಾಲ್ ಡ್ರಾಪ್ಸ್ ಅಥವಾ ನಿಧಾನಗತಿಯ ಇಂಟರ್ನೆಟ್ನಂತಹ ನೆಟ್ವರ್ಕ್ ಸಮಸ್ಯೆಗಳು ಆಗಾಗ್ಗೆ ಎದುರಾಗುತ್ತಿದ್ದರೆ, ಭಯಪಡುವ ಅಗತ್ಯವಿಲ್ಲ. ಕೆಲವೊಮ್ಮೆ ಈ ಸಮಸ್ಯೆ ದುರ್ಬಲ ಸಿಗ್ನಲ್ನಿಂದ ಉಂಟಾಗುತ್ತದೆ, ಆದರೆ ಕೆಲವು ಸುಲಭ ಮತ್ತು ಪರಿಣಾಮಕಾರಿ ಕ್ರಮಗಳನ್ನು ಅಳವಡಿಸಿಕೊಳ್ಳುವ ಮೂಲಕ, ನೀವು ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ನಿಮ್ಮ ಫೋನ್ನ ನೆಟ್ವರ್ಕ್ ಅನ್ನು ಸುಧಾರಿಸಬಹುದಾದ 5 ಸುಲಭ ಮಾರ್ಗಗಳನ್ನು ತಿಳಿದುಕೊಳ್ಳೋಣ. 1. ನಿಮ್ಮ ಸ್ಥಳವನ್ನು ಬದಲಾಯಿಸಿ ದುರ್ಬಲ ನೆಟ್ವರ್ಕ್ನ ಸಂದರ್ಭದಲ್ಲಿ ಮೊದಲ ಹೆಜ್ಜೆ ನಿಮ್ಮ ಸ್ಥಳವನ್ನು ಬದಲಾಯಿಸುವುದು. ನೀವು ನೆಲಮಾಳಿಗೆಯಲ್ಲಿ, ಲಿಫ್ಟ್ನಲ್ಲಿ ಅಥವಾ ದಪ್ಪ ಗೋಡೆಗಳನ್ನು ಹೊಂದಿರುವ ಕಟ್ಟಡದಲ್ಲಿದ್ದರೆ, ಅಲ್ಲಿ ನೆಟ್ವರ್ಕ್ ಸಿಗ್ನಲ್ ದುರ್ಬಲವಾಗಿರಬಹುದು. ಅಂತಹ ಪರಿಸ್ಥಿತಿಯಲ್ಲಿ, ಬಾಲ್ಕನಿಗೆ, ಕಿಟಕಿಯ ಬಳಿ ಅಥವಾ ತೆರೆದ ಜಾಗಕ್ಕೆ ಹೋಗುವುದರಿಂದ ನೆಟ್ವರ್ಕ್ ಸುಧಾರಿಸಬಹುದು. 2. ಫೋನ್ ಅನ್ನು ಮರುಪ್ರಾರಂಭಿಸಿ…
ಬೆಂಗಳೂರು: ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯವು ಅನುಮೋದನೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ರವರು ಇಂದು ಮಾಹಿತಿ ನೀಡಿದ್ದು, ಈ ಅನುಮೋದನೆಯಿಂದ ಎರಡೂ ನಗರಗಳ ನಾಗರಿಕರ 30 ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು “ಬೆಂಗಳೂರು ಮತ್ತು ಮುಂಬೈ ನಡುವೆ ನಾವು ಶೀಘ್ರದಲ್ಲೇ ಸೂಪರ್ಫಾಸ್ಟ್ ರೈಲನ್ನು ಪ್ರಾರಂಭಿಸಲಿದ್ದೇವೆ. ಎರಡೂ ನಗರಗಳು ಪ್ರಮುಖ ಆರ್ಥಿಕ ಕೇಂದ್ರಗಳಾಗಿದ್ದು ಅವುಗಳ ನಿಲ್ದಾಣಗಳಲ್ಲಿನ ಸಾಮರ್ಥ್ಯದ ವಿಸ್ತರಣೆಯಿಂದಾಗಿ ಇದು ಈಗ ಸಾಧ್ಯವಾಗಿದೆ,” ಎಂದಿದ್ದಾರೆ. ಬೆಂಗಳೂರು ಮತ್ತು ಮುಂಬೈ ಭಾರತದ ಎರಡು ಪ್ರಮುಖ ಆರ್ಥಿಕ ಕೇಂದ್ರಗಳಾಗಿದ್ದರೂ, ಈ ಎರಡೂ ನಗರಗಳು ಕೇವಲ ಒಂದೇ ಒಂದು ರೈಲಿನಿಂದ ಸಂಪರ್ಕ ಹೊಂದಿದ್ದವು. ಆ ರೈಲು ಉದ್ಯಾನ ಎಕ್ಸ್ಪ್ರೆಸ್ ಆಗಿದ್ದು, ಈ ಪ್ರಯಾಣವನ್ನು ಪೂರ್ಣಗೊಳಿಸಲು 24 ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿತ್ತು. “ಇದು 30 ವರ್ಷಗಳಿಂದ ಬಾಕಿ ಉಳಿದಿದ್ದ ಬೇಡಿಕೆಯಾಗಿದೆ. ಕಳೆದ ಮೂರು ದಶಕಗಳಲ್ಲಿ ಎರಡೂ ನಗರಗಳ ಬೆಳವಣಿಗೆಯ ಹೊರತಾಗಿಯೂ,…
ಶಿವಮೊಗ್ಗ: ಇನ್ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂಬುದಾಗಿ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಘೋಷಿಸಿದ್ದಾರೆ. ಆ ಮೂಲಕ ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶ್ವೇತಾ ಬಂಡಿ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನಾನು ಇನ್ನೂ ಶಿವಮೊಗ್ಗದಲ್ಲಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಚುನಾವಣೆಗೆ ಸ್ಪರ್ಧಿಸದೇ ಇದ್ದರೂ ಕೂಡ ಪಕ್ಷ ಸಂಘಟನೆಯಲ್ಲಿ ಜೊತೆಗೆ ಇರುತ್ತೇನೆ. ನಿಮ್ಮೊಂದಿಗೆ ಕೆಲಸ ಮಾಡುವೆ. ಯಾವಾಗ ಕರೆದರೂ ಬರುವುದಾಗಿ ತಿಳಿಸಿದರು. ನೂತನ ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ ಅವರು ಪಕ್ಷಕ್ಕಾಗಿ ಶ್ರಮಿಸಿದ್ದಾರೆ. ಇಂತಹ ಅವರಿಗೆ ಈ ಹುದ್ದೆಯನ್ನು ನೀಡಿದ್ದು ಹರ್ಷತಂದಿದೆ. ನನ್ನ ಚುನಾವಣಾ ಪ್ರಚಾರದಲ್ಲೂ ಶ್ರಮಿಸಿದ್ದರು. ಅವರಿಗೆ ಅಭಿನಂದನೆಗಳು ಅಂತ ಹೇಳಿದರು. ಇಂದಿನ ಸಮಾವೇಶವು ಖುಷಿ ತಂದಿದೆ. ಮಹಿಳೆಯರು ಅಬಲೆಯರಲ್ಲ. ಅವರು ಎಲ್ಲರನ್ನು ಜೊತೆಗೂಡಿಸಿಕೊಂಡು ಪಕ್ಷ ಸಂಘಟನೆಯ ಕೆಲಸ ಮಾಡಲಿ ಎಂಬುದಾಗಿ ಸಲಹೆಯನ್ನು ಗೀತಾ ಶಿವರಾಜ್ ಕುಮಾರ್ ನೀಡಿದರು. https://kannadanewsnow.com/kannada/shocking-one-and-a-half-month-old-baby-dies-after-suffocating-while-breastfeeding/ https://kannadanewsnow.com/kannada/modi-inaugurates-bsnls-swadeshi-4g-network-from-odisha/








