Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು ಶೇಕಡ 1ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಈ ಮೂಲಕ ರಾಜ್ಯದ ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಮೀಸಲಾತಿ ಕಲ್ಪಿಸುವಂತ ಸುಳಿವು ನೀಡಿದ್ದಾರೆ. ಒಳ ಮೀಸಲಾತಿ ಕುರಿತು ಅಲೆಮಾರಿ ಒಕ್ಕೂಟದ ಪದಾಧಿಕಾರಿಗಳ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಭೇಟಿ ಮಾಡಿ ಮನವಿ ಅರ್ಪಿಸಿತು. ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸಿ ಮುಖ್ಯಮಂತ್ರಿಗಳು ಮಾತನಾಡಿದರು. “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸುಧಾರಣೆಗೆ ಎಸ್ ಸಿ ಪಿ /ಟಿ ಎಸ್ ಪಿ ಕಾರ್ಯ ಕ್ರಮಗಳನ್ನು ಜಾರಿಗೊಳಿಸಿದ್ದೇ ನಮ್ಮ ಸರ್ಕಾರ . ಪ್ರತಿಯೊಬ್ಬರಿಗೂ ಪರಿಹಾರ ಸಿಗಲಿ ಎನ್ನುವುದೇ ಸರ್ಕಾರದ ಉದ್ದೇಶ. ಯಾವುದೇ ಜಾತಿಯೊಳಗೆ ಇನ್ನೊಂದನ್ನು ಸೇರಿಸುವ , ಯಾವುದೇ ಸಮುದಾಯಕ್ಕೆ ಅನ್ಯಾಯ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ಇದಕ್ಕೊಂದು ಪರಿಹಾರ ಹುಡುಕಿ, ನ್ಯಾಯ ಒದಗಿಸಲಾಗುವುದು” ಎಂದರು. ” ಒಳಮೀಸಲಾತಿ…

Read More

ಶಿವಮೊಗ್ಗ: ಜಿಲ್ಲೆಯ ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಆಡಳಿತ ಮಂಡಳಿಯ ಸದಸ್ಯರನ್ನಾಗಿ ಅಶೋಕ್ ಬೇಳೂರು ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ರಾಜ್ಯದ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 ರ ಪ್ರಕರಣ 28ಎ ಉಪ ಪ್ರಕರಣ (4ಬಿ)(1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ನಿ., ಶಿವಮೊಗ್ಗ, ಇದರ ಆಡಳಿತ ಮಂಡಳಿಗೆ ಅಶೋಕ ಬೇಳೂರು ತಂದೆ ನಾಗಪ್ಪ, ಬೇಳೂರು ಗ್ರಾಮ, ಕಸಬಾ ಹೋಬಳಿ, ಸಾಗರ ತಾಲ್ಲೂಕು, ಶಿವಮೊಗ, ಜಿಲ್ಲೆ ಇವರನ್ನು ಅಧಿಕಾರೇತರ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿ ಆದೇಶಿಸಿದ್ದಾರೆ. ಅಂದಹಾಗೇ ಅಶೋಕ್ ಬೇಳೂರು, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಸಹೋದರರ ಪುತ್ರರಾಗಿದ್ದಾರೆ. ಕಾಂಗ್ರೆಸ್…

Read More

ಬೀದರ್: ಜಿಲ್ಲೆಯಲ್ಲಿ 3.0 ತೀವ್ರತೆಯಲ್ಲಿ ಭೂಕಂಪನ ಉಂಟಾಗಿದೆ. ಭೂಮಿ ಕಂಪಿಸಿದ ಅನುಭವದಿಂದಾಗಿ ಜನರು ಕೆಲ ಕಾಲ ಭಯಭೀತರಾದಂತ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ಮುದ್ನಾಳ್ ಗ್ರಾಮದಲ್ಲಿ ಭೂಕಂಪನ ಉಂಟಾಗಿದೆ. ಇದರಿಂದಾಗಿ ಭೂಮಿ ಕಂಪಿಸಿದಂತ ಅನುಭವ ಜನರಿಗೆ ಉಂಟಾಗಿದೆ. ಭೂಕಂಪನದ ಕೇಂದ್ರಬಿಂದು ಹುಮನಾಬಾದ್ ತಾಲ್ಲೂಕಿನ ಇಟಗಾ ಗ್ರಾಮದಿಂದ ಸುಮಾರು 5.1 ಕಿಲೋಮೀಟರ್ ಪಶ್ಚಿಮದಲ್ಲಿ ಹಾಗೂ ಚಿಟಗುಪ್ಪ ತಾಲ್ಲೂಕಿನ ಕೊಡಂಬಲ್ ಗ್ರಾಮದಿಂದ 7.3 ಕಿಲೋಮೀಟರ್ ಪಶ್ಚಿಮದಲ್ಲಿ ಎಂಬುದಾಗಿ ಇಲಾಖೆ ಮಾಹಿತಿ ನೀಡಿದೆ. https://kannadanewsnow.com/kannada/good-news-for-book-lovers-kannada-book-authority-announces-50-discount-on-all-books/ https://kannadanewsnow.com/kannada/breaking-renukashwami-murder-case-actor-darshan-gang-scheduled-for-charge-framing-on-nov-3/

Read More

ಬೆಂಗಳೂರು: ಪುಸ್ತಕ ಪ್ರಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳ ಮೇಲೆ ಶೇ.50ರಷ್ಟು ರಿಯಾಯಿತಿಯನ್ನು ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ ಕಿರಣ್ ಸಿಂಗ್ ಅವರು ಮಾಹಿತಿ ನೀಡಿದ್ದು, ಕನ್ನಡ ರಾಜ್ಯೋತ್ಸವದ ಅಂಗವಾಗಿ 2025ರ ನವೆಂಬರ್‌‌‌ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದ್ದಾರೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‌ ಲೈನ್‌ https://kpp.karnataka.gov.in (ಆನ್‌ಲೈನ್‌ ಪುಸ್ತಕ ಖರೀದಿಗೆ ವಿಭಾಗ ಇಲ್ಲಿ ವೀಕ್ಷಿಸಿ) ನಲ್ಲಿ…

Read More

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಒಳಗೆ ಆಕ್ರೋಶ ವ್ಯಕ್ತವಾಗಿದೆ. ಇಂದು ವಿಧಾನಸೌಧದ ಒಳಗೆ ಸರ್ಕಾರದ ವಿರುದ್ಧ ಧಿಕ್ಕಾರವನ್ನು ಅಲೆಮಾರಿಗಳು ಕೂಗಿರುವುದಾಗಿ ತಿಳಿದು ಬಂದಿದೆ. ವಿಧಾನಸೌಧದ ಒಳಗೆ ಸರ್ಕಾರಕ್ಕೆ ಧಿಕ್ಕಾರವನ್ನು ಅಲೆಮಾರಿಗಳು ಕೂಗಿದ್ದಾರೆ. ಒಳಮೀಸಲಾತಿ ವಿಚಾರವಾಗಿ ಅಲೆಮಾರಿ ಮುಖಂಡರ ಜೊತೆಗೆ ಸಭೆ ನಡೆಸಿದ್ದರು. ಸಭೆ ಮುಗಿಸಿ ಸಿಎಂ ತೆರಳುತ್ತಿದ್ದಂತೆ ಅಲೆಮಾರಿಗಳ ಮುಖಂಡರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ವಿಧಾನಸೌಧದ ಒಳಗೆ ಸರ್ಕಾರಕ್ಕೆ ಧಿಕ್ಕಾರವನ್ನು ಅಲೆಮಾರಿ ಮುಖಂಡರು ಕೂಗಿದ್ದಾರೆ. ರಾಜ್ಯ ಸರ್ಕಾರದಿಂದ ನಮಗೆ ನ್ಯಾಯ ಸಿಗುತ್ತಿಲ್ಲವೆಂದು ಅಸಮಾಧಾನವನ್ನು ಹೊರ ಹಾಕಿದ್ದಾರೆ. ಅಲ್ಲದೇ ಸುಪ್ರೀಂ ಕೋರ್ಟ್ ಆದೇಶದಂತೆ ತಳಸಮುದಾಯಕ್ಕೆ ನ್ಯಾಯಬೇಕು ಎಂಬುದಾಗಿಯೂ ಆಗ್ರಹಿಸಿದ್ದಾರೆ. ಸಾಮಾಜಿಕ ನ್ಯಾಯದಂತೆ ಅಲೆಮಾರಿ ಸಮಾಜಕ್ಕೆ ಮೀಸಲಾತಿ ಕೊಡಿ. ಯಾವುದೇ ಪ್ಯಾಕೇಜ್ ಬೇಡವೆಂದು ಅಲೆಮಾರಿ ಮುಖಂಡರು ಆಕ್ರೋಶವನ್ನು ವಿಧಾನಸೌಧದ ಒಳಗೆ ಹೊರ ಹಾಕಿದ್ದಾರೆ. https://kannadanewsnow.com/kannada/narasapur-express-special-train-service-extended-up-to-kakinada-town/ https://kannadanewsnow.com/kannada/breaking-renukashwami-murder-case-actor-darshan-gang-scheduled-for-charge-framing-on-nov-3/

Read More

ಮೈಸೂರು: ದಕ್ಷಿಣ ಮಧ್ಯ ರೈಲ್ವೆಯು ರೈಲು ಸಂಖ್ಯೆ 07033/34 ನರಸಾಪುರ – ಮೈಸೂರು – ನರಸಾಪುರ ವಿಶೇಷ ಎಕ್ಸ್‌ಪ್ರೆಸ್ ರೈಲಿನ ಸಂಚಾರವನ್ನು ನವೆಂಬರ್ 3, 2025 ರಿಂದ ನವೆಂಬರ್ 29, 2025 ರವರೆಗೆ ಕಾಕಿನಾಡ ಟೌನ್‌ವರೆಗೆ ವಿಸ್ತರಿಸಲು ಸೂಚಿಸಿದೆ. ಈ ಮೊದಲು ನರಸಾಪುರ ಮತ್ತು ಮೈಸೂರು ನಡುವೆ ಸಂಚರಿಸುತ್ತಿದ್ದ ರೈಲು ಸಂಖ್ಯೆ 07033, ಈಗ ನವೆಂಬರ್ 3, 2025 ರಿಂದ ನವೆಂಬರ್ 28, 2025 ರವರೆಗೆ ಕಾಕಿನಾಡ ಟೌನ್ ಮತ್ತು ಮೈಸೂರು ನಡುವೆ ಕಾರ್ಯಾಚರಣೆ ಮಾಡಲಿದೆ. ಅದೇ ರೀತಿ, ಈ ಮೊದಲು ಮೈಸೂರು ಮತ್ತು ನರಸಾಪುರ ನಡುವೆ ಸಂಚರಿಸುತ್ತಿದ್ದ ರೈಲು ಸಂಖ್ಯೆ 07034, ಈಗ ನವೆಂಬರ್ 4, 2025 ರಿಂದ ನವೆಂಬರ್ 29, 2025 ರವರೆಗೆ ಮೈಸೂರು ಮತ್ತು ಕಾಕಿನಾಡ ಟೌನ್ ನಡುವೆ ಸಂಚರಿಸಲಿದೆ. ರೈಲು ಸಂಖ್ಯೆ 07033 ಕಾಕಿನಾಡ ಟೌನ್ – ಮೈಸೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಕಾಕಿನಾಡ ಟೌನ್‌ನಿಂದ ಬೆಳಿಗ್ಗೆ 9 ಗಂಟೆಗೆ ಹೊರಟು, ಮರುದಿನ ಸಂಜೆ 4 ಗಂಟೆಗೆ…

Read More

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ನವೆಂಬರ್.1ರಿಂದ ಹೆಚ್ಚುವರಿಯಾಗಿ ಐದು ರೈಲುಗಳು ವಾಣಿಜ್ಯ ಸಂಚಾರ ಆರಂಭಿಸಲಿವೆ. ಹೀಗಾಗಿ ಪ್ರತಿ 15 ನಿಮಿಷಕ್ಕೊಂದು ರೈಲುಗಳು ಸಂಚರಿಸಲಿವೆ. ಈ ಕುರಿತಂತೆ ಬಿಎಂಆರ್ ಸಿ ಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯೋತ್ಸವದ ೭೦ನೇ ವರ್ಷದ ಆಚರಣೆಯ ಸಂದರ್ಭದಲ್ಲಿ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL), ದಿನಾಂಕ 1ನೇ ನವೆಂಬರ್ 2025ರಿಂದ ಹಳದಿ ಮಾರ್ಗದಲ್ಲಿ ಐದನೇ ಮೆಟ್ರೋ ರೈಲನ್ನು ವಾಣಿಜ್ಯ ಸೇವೆಗೆ ಒಳಪಡಿಸುತ್ತಿದೆ. ಈ ಹೊಸ ರೈಲಿನ ಚಾಲನೆಯಿಂದ, ಹಳದಿ ಮಾರ್ಗದಲ್ಲಿ ಪೀಕ್ ಅವಧಿಯಲ್ಲಿ ರೈಲುಗಳ ಆವರ್ತನವು ಪ್ರತಿ 15 ನಿಮಿಷಕ್ಕೊಮ್ಮೆ ರೈಲುಗಳು ಸಂಚರಿಸುತ್ತವೆ. (ಪ್ರಸಕ್ತ 19 ನಿಮಿಷಗಳ ಅಂತರದ ಬದಲಾಗಿ). ಇದರಿಂದ ಪ್ರಯಾಣಿಕರಿಗೆ ಕಡಿಮೆ ಅವಧಿಯಲ್ಲಿ ಸುಗಮ ಮತ್ತು ನಿರಂತರ ಸೇವೆ ನೀಡಲು ಸಹಾಯಕವಾಗಲಿದೆ. ಈ ಬದಲಾವಣೆ ಎಲ್ಲಾ ದಿನಗಳಿಗೆ ಅನ್ವಯವಾಗುತ್ತದೆ. ಆರ್.ವಿ. ರಸ್ತೆ ಮತ್ತು ಬೊಮ್ಮಸಂದ್ರ ಟರ್ ಮಿನಲ್ ನಿಲ್ದಾಣಗಳಿಂದ ಹೊರಡುವ ಮೊದಲ ಹಾಗೂ ಕೊನೆಯ ರೈಲುಗಳ ವೇಳಾಪಟ್ಟಿಯಲ್ಲಿ…

Read More

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಸಂಘಕ್ಕೆ ನವೆಂಬರ್ 9ರಂದು ನಡೆಯಲಿರುವ ಚುನಾವಣೆಗೆ ಅಖಾಡ ಸಜ್ಜಾಗಿದ್ದು, ಉಮೇದುವಾರಿಕೆಯನ್ನು ಹಿಂಪಡೆಯಲು ಕೊನೆಯ ದಿನವಾದ ಇಂದು 41 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದಿದ್ದಾರೆ. ಈ ಕುರಿತು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ವಿ.ನಂಜುಂಡಪ್ಪ ಮಾಹಿತಿ ನೀಡಿದ್ದು, ಒಟ್ಟು 25 ಸ್ಥಾನಗಳ ಪೈಕಿ 3 ಕಾರ್ಯದರ್ಶಿ ಹುದ್ದೆಗಳಿಗೆ ಕೆ. ಹರೀಶ್, ಕೆ ಎಲ್ ಲೋಕೇಶ್, ಗೋದಾವರಿ ಡಿ ಎಸ್ ಅವರು ಕಣದಲ್ಲಿ ಉಳಿದಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಎಸ್.ಸೋಮಶೇಖರ್ (ಗಾಂಧಿ), ಮು. ವೆಂಕಟೇಶಯ್ಯ, ಎ. ಬಿ. ಶಿವರಾಜ್ ಅವರು ಸ್ಪರ್ಧೆಯಲ್ಲಿದ್ದಾರೆ. 3 ಉಪಾಧ್ಯಕ್ಷ ಸ್ಥಾನಗಳಿಗೆ ಡಾ. ಕೆ. ಎಸ್. ಸ್ವಾಮಿ, ಎಚ್ ಕೆ ಬಸವರಾಜ್, ಬಿ. ಟಿ ಶ್ರೀನಿವಾಸ್, ಪರಿಮಳ ಎಚ್ಎಸ್, ಕೆ ಎಂ. ಜಕ್ರಿಯ ಕಣದಲ್ಲಿದ್ದಾರೆ. ಪ್ರಧಾನ ಕಾರ್ಯ ದರ್ಶಿ ಸ್ಥಾನಕ್ಕೆ ಕೆ.ಸಿ. ವೇದಮೂರ್ತಿ, ಎನ್ ಶ್ರೀನಾಥ್, ಆರ್ ಜಯಕುಮಾರ್, ಖಜಾಂಚಿ ಸ್ಥಾನಕ್ಕೆ ಎಸ್ ಡಿ. ಚಿಕ್ಕಣ್ಣ, ಟಿ.…

Read More

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇವರಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಸಾವು ಬದುಕಿನ ನಡುವೆ ಹೋರಾಡುತ್ತಿರುವುದಾಗಿ ತಿಳಿದು ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಗ್ಗನಹಳ್ಳಿಯಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇವರಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಹೆಗ್ಗನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಸಾವನ್ನಪ್ಪಿ, ಮತ್ತಿಬ್ಬರ ಸ್ಥಿತಿ ಗಂಭೀರಗೊಂಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/public-awareness-raised-through-garbage-dumping-festival-in-bengaluru-2-80-lakh-fines-collected/ https://kannadanewsnow.com/kannada/k-hanumantharayappa-elected-as-district-president-of-bangalore-rural-government-employees-association/

Read More

ಬೆಂಗಳೂರು: ಬೆಂಗಳೂರು ನಗರದಲ್ಲಿ “ಕಸ ಸುರಿಯುವ ಹಬ್ಬ” ದ ಮೂಲಕ 218 ಮನೆಗಳ ಮುಂದೆ ಕಸ ಸುರಿದು 2.80 ಲಕ್ಷ ರೂ. ಗಳ ದಂಡ ವಿಧಿಸಲಾಗಿದೆ ಎಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಕರೀಗೌಡ ರವರು ತಿಳಿಸಿದರು.  ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಎಲ್ಲಾ 5 ನಗರ ಪಾಲಿಕೆಗಳಲ್ಲಿ ಪ್ರತಿ ಮನೆಗೆ ಬೆಳಿಗ್ಗೆ ಆಟೋ ಟಿಪ್ಪರ್ ಗಳಲ್ಲಿ ಹೋಗಿ ಕಸವನ್ನು ಸಂಗ್ರಹಿಸಲಾಗುತ್ತಿದೆ. ಆದರೂ ಕೆಲ ಸಾರ್ವಜನಿಕರು ಕಸವನ್ನು ರಸ್ತೆ ಬದಿ, ಪಾದಚಾರಿ ಮಾರ್ಗ ಹಾಗೂ ಖಾಲಿ ಜಾಗಗಳಲ್ಲಿ ಎಸೆಯುತ್ತಿದ್ದಾರೆ. ರಸ್ತೆ ಬದಿ ಕಸ ಸುರಿಯುವುದರಿಂದ ನಗರ ನೈರ್ಮಲ್ಯ ಹಾಳಾಗುತ್ತಿದೆ. ಇಂತಹ ಪ್ರಕರಣಗಳನ್ನು ತಪ್ಪಿಸುವ ಉದ್ದೇಶದಿಂದ  ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದಿಂದ ರಸ್ತೆ ಬದಿ ಕಸ ಬಿಸಾಡುವವರನ್ನು ಗುರುತಿಸಿ ಅವರ ಮನೆ ಮುಂದೆ ಕಸ ಬಿಸಾಡುವಂತಹ ವಿನೂತನ ಜಾಗೃತಿ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಆಟೋ ಟಿಪ್ಪರ್ ಗಳಿಗೆ ಕಸ ಕೊಡದೆ ರಾತ್ರಿ ವೇಳೆ ರಸ್ತೆ…

Read More