Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಸಿಎಂ ಸಿದ್ಧರಾಮಯ್ಯನವರೇ ನಿಮ್ಮ ಮೊಮ್ಮಗನ ಕ್ರಿಕೆಟ್ ಆಟಗಾರರ ಜೊತೆಗೆ ಪೋಟೋಗ್ರಾಫ್, ಆಟೋಗ್ರಾಫ್ ತೆಗೆಸುವ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನೇ ಕೊಂದು ಬಿಟ್ಲಲ್ಲ. ನಿಮಗೆ ಆತ್ಮಸಾಕ್ಷಿ ಇದ್ಯಾ? ಎಂಬುದಾಗಿ ಆರ್.ಅಶೋಕ್ ಕಿಡಿಕಾರಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಶನ್ ಮೇಲೆ ಗೂಬೆ ಕೂರಿಸಿ ಹರಕೆಯ ಕುರಿ ಮಾಡಲು ಹೊರಟಿರುವ ಕೊಲೆಗಡುಕ ಕಾಂಗ್ರೆಸ್ 11 ಅಮಾಯಕ ಜನರ ಸಾವಿಗೆ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದಿದ್ದಾರೆ. ಸ್ವಾಮಿ ಸಿಎಂ ಸಿದ್ಧರಾಮಯ್ಯನವರೇ, ನಿಮ್ಮ ಮೊಮ್ಮಗನಿಗೆ ಕ್ರಿಕೆಟ್ ಆಟಗಾರರ ಜೊತೆ ಫೋಟೋಗ್ರಾಫ್ ಆಟೋಗ್ರಾಫ್ ತೆಗೆಸಿಕೂಡುವ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನ ಕೊಂದು ಬಿಟ್ಟರಲ್ಲ ಸ್ವಾಮಿ, ನಿಮಗೆ ಆತ್ಮಸಾಕ್ಷಿ ಇದೆಯಾ? ಎಂದು ಪ್ರಶ್ನಿಸಿದ್ದಾರೆ. ನಿಮ್ಮ ಮೊಮ್ಮಗನಿಗೆ ವೇದಿಕೆಯ ಮೇಲೆ ಕುರ್ಚಿ, ಜನಸಾಮಾನ್ಯರಿಗೆ ಬೀದಿಯಲ್ಲಿ ಕಾಲ್ತುಳಿತ. ಆಹಾ, ಇನ್ನು ಮುಂದೆಂದೂ ಸಮಾಜವಾದ, ಸಾಮಾಜಿಕ ನ್ಯಾಯ ಎಂದು ಭಾಷಣ ಬಿಗಿದು ಆ ಪದಗಳಿಗೆ, ಸಿದ್ಧಾಂತಗಳಿಗೆ ಅಪಮಾನ ಮಾಡಬೇಡಿ ಎಂದು ವಾಗ್ಧಾಳಿ ನಡೆಸಿದ್ದಾರೆ.…
ಹಾಸನ: ಆರ್ ಸಿ ಬಿ ಸಂಭ್ರಮಾಚರಣೆಯ ವೇಳೆಯಲ್ಲಿ ಉಂಟಾದಂತ ಕಾಲ್ತುಳಿತ ದುರಂತದಲ್ಲಿ ಹಾಸನದ ಡಿ.ಟಿ ಲಕ್ಷ್ಮಣ್ ಅವರ ಪುತ್ರ ಭೂಮಿಕ್ ಕೂಡ ಪಾಲ್ಗೊಂಡಿದ್ದರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದಂತ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದರು. ಈ ಘಟನೆಯ ನಂತ್ರ ಪುತ್ರನ ಸಮಾಧಿಯ ಬಳಿಯಲ್ಲಿ ತಂದೆ ಮಲಗಿ ಕಣ್ಣೀರಿಡುತ್ತಿರುವಂತ ಹೃದಯ ವಿದ್ರಾವಕ ವೀಡಿಯೋ ವೈರಲ್ ಆಗಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕುಪ್ಪಗೋಡು ಗ್ರಾಮದಲ್ಲಿ ಡಿ.ಟಿ ಲಕ್ಷ್ಮಣ್ ತಮ್ಮ ಮಗನ ಸಮಾಧಿಯ ಮೇಲೆ ಮಲಗಿ ಗೋಳಾಡುತ್ತಿರೋ ವೀಡಿಯೋ ವೈರಲ್ ಆಗಿದೆ. ಅಲ್ಲದೇ ಈ ಥರ ಪರಿಸ್ಥಿತಿ ಯಾವುದೇ ತಂದೆ-ತಾಯಿಗೂ ಬರಬಾರದು. ಇದೇ ಜಾಗದಲ್ಲಿ ನನ್ನ ಮಗನನ್ನು ಮಲಗಿಸಿದ್ದೇನೆ. ನನ್ನ ಮಗನಿಗೋಸ್ಕರ ಈ ಜಾಗ ಮಾಡಿದ್ದು. ಈಗ ಇಲ್ಲೇ ಮಲಗಿಸಿದ್ದೀನಿ ಎಂಬುದಾಗಿ ಗೋಳಾಡುತ್ತಿರುವುದು ಕಂಡು ಬಂದಿದೆ. https://www.youtube.com/watch?v=QennqN7vDi0&embeds_referring_euri=https%3A%2F%2Fpublictv.in%2F&source_ve_path=MjM4NTE ಅಂದಹಾಗೆ ಡಿ.ಟಿ ಲಕ್ಷ್ಮಣ್ ಪುತ್ರ ಭೂಮಿಕ್ ಅಪ್ಪಟ ಆರ್ ಸಿ ಬಿ ಅಭಿಮಾನಿಯಾಗಿದ್ದರು. ಆರ್ ಸಿ ಬಿ ಗೆದ್ದ ಸಂಭ್ರಮಾಚರಣೆಯ ವಿಜಯೋತ್ಸವದಲ್ಲಿ ಪಾಲ್ಗೊಳ್ಳೋದಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಗೆ ತೆರಳಿದ್ದರು. ಬೆಂಗಳೂರಲ್ಲಿ…
ಕೋಲಾರ: ಬೆಂಗಳೂರು ಉತ್ತರ ವಿವಿಯ ಉಪಕುಲಪತಿ ಪ್ರೊ.ನಿರಂಜನ ವಾನಳ್ಳಿ ವಿರುದ್ಧ ಕೋಲಾರದ ಗಲ್ ಪೇಟೆ ಠಾಣೆಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಬೆಂಗಳೂರು ಉತ್ತರ ವಿವಿಯ ಪತ್ರಿಕೋದ್ಯಮ ವಿಭಾಗದ ಅತಿಥಿ ಉಪನ್ಯಾಸಕ ಮಂಜುನಾಥ್ ಎಂಬುವರು ಕೋರ್ಟ್ ಗೆ ಈ ಸಂಬಂಧ ಪಿಸಿಆರ್ ದಾಖಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ಕೋರ್ಟ್ ಬೆಂಗಳೂರು ಉತ್ತರ ವಿವಿಯ ಪ್ರೊ.ನಿರಂಜನ ವಾನಳ್ಳಿ ವಿರುದ್ಧ ಎಫ್ಐಆರ್ ದಾಖಲಿಸಿ ವರದಿ ಸಲ್ಲಿಸುವಂತೆ ಆದೇಶಿಸಿತ್ತು. ಈ ಆದೇಶದ ಹಿನ್ನಲೆಯಲ್ಲಿ ಕೋಲಾರದ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರೊ ನಿರಂಜನ ವಾನಳ್ಳಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಂದಹಾಗೇ ಮಹಿಳೆಯರ ಜೊತೆಗೆ ಅನುಚಿತ ವರ್ತನೆ ಆರೋಪದಡಿ ಬೆಂಗಳೂರು ಉತ್ತರ ವಿವಿಯಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಂತ ಮಂಜುನಾಥ್ ಅವರನ್ನು ಅಮಾನತುಗೊಳಿಸಲಾಗಿತ್ತು. ತಾನು ಯಾವುದೇ ಮಹಿಳೆಯ ಜೊತೆಗೆ ಅನುಚಿತವಾಗಿ ವರ್ತಿಸದೇ ಇದ್ದರೂ ವಿಸಿ ತಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿದ್ದಾರೆ. ಜಾತಿ ನಿಂದನೆ ಮಾಡಿ ನನ್ನ ಅವಮಾನಗೊಳಿಸಿದ್ದಾರೆ ಎಂಬುದಾಗಿ ಮಂಜುನಾಥ್ ಎಸ್ಪಿಗೆ ದೂರು ನೀಡಿದ್ದರೂ, ಪ್ರೊ.ನಿರಂಜನ…
ಮಂಡ್ಯ : ತುಂಬು ಗರ್ಭಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಮದ್ದೂರು ಪಟ್ಟಣದಲ್ಲಿ ಶನಿವಾರ ಬೆಳಗಿನ ಜಾವ ಜರುಗಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಕಾಮಗೆರೆ ನಿವಾಸಿಗಳಾದ ಚಂದನ್ ಗೌಡ (24) ಹಾಗೂ ಆಶಾ (19) ಇಬ್ಬರು ಪ್ರೇಮಿಗಳು ಕಳೆದ ಒಂದುವರೆ ವರ್ಷದ ಹಿಂದೆ ಕುಟುಂಬದವರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದರು. ಬಳಿಕ ಚಂದನ್ ಗೌಡ ಎಳೆ ನೀರು ವ್ಯಾಪಾರ ಮಾಡಿಕೊಂಡು ಮದ್ದೂರು ಪಟ್ಟಣದ ಚನ್ನೆಗೌಡ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ಇಬ್ಬರು ವಾಸವಾಗಿದ್ದರು. ನಾಳೆ ಭಾನುವಾರ ಪತ್ನಿ ಆಶಾ ಗೆ ಸೀಮಂತ ಕಾರ್ಯಕ್ರಮವನ್ನು ಮಾಡಲು ತಯಾರಿ ಕೂಡ ನಡೆಸಲಾಗಿತ್ತು. ಆದರೆ, ವೇಲ್ ನಿಂದ ತುಂಬು ಗರ್ಭಿಣಿ ಪತ್ನಿಯ ಕುತ್ತಿಗೆಗೆ ಬಿಗಿದ ಸ್ಥಿತಿಯಲ್ಲಿ ಶವ ಕಂಡು ಬಂದಿದೆ. ಬಳಿಕ ಪತಿ ಚಂದನ್ ಗೌಡ ತನ್ನ ಪತ್ನಿ ಕುಟುಂಬದವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೋಷಕರು ಪತಿ ಚಂದನ್ ಗೌಡ ವಿರುದ್ಧ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪೋಷಕರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಮದ್ದೂರು…
ಬೆಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದಂತ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಈ ಬಗ್ಗೆ ಅವರು ಹೇಳಿದ್ದೇನು ಅಂತ ಮುಂದ ಓದಿ. ಈ ಕುರಿತಂತೆ ಪ್ರತಿಕ್ರಿಯಿಸಿರುವಂತ ಅವರು, ನಾವು ನ್ಯಾಯಾಲಯದ ಆದೇಶವನ್ನು ಪಾಲಿಸಬೇಕಾಗುತ್ತದೆ. ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾಗಿ ಚರ್ಚೆ ನಡೆಸಿದ್ದೇನೆ. ಕೋರ್ಟ್ ಆದೇಶ ಕೊಟ್ಟಿದೆ. ಅದರ ಬಗ್ಗೆ ನಾನು ಮಾತನಾಡಲ್ಲ ಎಂದರು. ಜಾಮೀನು ರದ್ದತಿಯ ಹಿಂದೆ ಹಲವರ ಕೈವಾಡವಿದೆ. ಇದೇನು ದೊಡ್ಡ ಸಮಸ್ಯೆ ಅಲ್ಲ. ನ್ಯಾಯಾಲಯದಲ್ಲಿ ಸಾಕ್ಷಿ ಬೇಕು. ಸಾಕ್ಷ್ಯಾಧಾರಗಳ ಮೇಲೆ ಕೋರ್ಟ್ ತೀರ್ಮಾನ ಮಾಡುತ್ತದೆ ಎಂದರು. ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ನನ್ನ ಯಾವುದೇ ರೀತಿಯ ಕೈವಾಡವಿಲ್ಲ. ಒಂದು ಸಿಂಗಲ್ ಕಾಲ್ ಕೂಡ ನಾನು ಯಾರ ಜೊತೆಗೂ ಮಾತಾಡಿಲ್ಲ. ಇನ್ನೂ 15 ದಿನ ಇದೆ. ಮುಂದಿನ ಕಾನೂನು ಹೋರಾಟದ ಬಗ್ಗೆ ನೋಡುತ್ತೇವೆ. ಅವರು ರಾಜಕೀಯ ಮಾಡುತ್ತಿದ್ದಾರೆ ಮಾಡಲಿ. ನನ್ನನ್ನು ಮತ್ತೆ ಜೈಲಿಗೆ ಕಳಿಸಬೇಕು ಅಂತ ಮಾಡುತ್ತಿದ್ದಾರೆ. ಹುಬ್ಬಳ್ಳಿ ಧಾರವಾಡ ಭಾಗದ ನಾಯಕರು ಸೇರಿದಂತೆ…
ಕೈವ್ : ಉಕ್ರೇನ್ನ ವಾಯುಪಡೆಗಳು ಶನಿವಾರ ಬೆಳಿಗ್ಗೆ ರಷ್ಯಾದ Su-35 ಯುದ್ಧ ವಿಮಾನವನ್ನು ಹೊಡೆದುರುಳಿಸಿದೆ ಎಂದು ಉಕ್ರೇನಿಯನ್ ಸೇನೆ ತಿಳಿಸಿದೆ. ಇಂದು ಬೆಳಿಗ್ಗೆ, ಜೂನ್ 7, 2025 ರಂದು, ಕುರ್ಸ್ಕ್ ದಿಕ್ಕಿನಲ್ಲಿ ವಾಯುಪಡೆಯ ಯಶಸ್ವಿ ಕಾರ್ಯಾಚರಣೆಯ ಪರಿಣಾಮವಾಗಿ, ರಷ್ಯಾದ Su-35 ಯುದ್ಧ ವಿಮಾನವನ್ನು ಹೊಡೆದುರುಳಿಸಲಾಯಿತು ಎಂದು ಸೇನೆಯು ಟೆಲಿಗ್ರಾಮ್ ಮೆಸೆಂಜರ್ನಲ್ಲಿ ತಿಳಿಸಿದೆ. ಇದು ಹೆಚ್ಚಿನ ವಿವರಗಳನ್ನು ನೀಡಿಲ್ಲ. ರಾಯಿಟರ್ಸ್ ವರದಿಯನ್ನು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯವಾಗದಿದ್ದರೂ ರಷ್ಯಾದ ಪಡೆಗಳು ಈ ವಿಷಯದ ಬಗ್ಗೆ ಇನ್ನೂ ಯಾವುದೇ ಕಾಮೆಂಟ್ ಮಾಡಿಲ್ಲ. https://kannadanewsnow.com/kannada/ccpa-notice-for-e-commerce-platforms-to-take-necessary-action-against-fraudulent-activities-within-3-months/ https://kannadanewsnow.com/kannada/when-raj-kumar-passed-away-4-people-were-shot-did-kumaraswamy-resign-then-gopalakrishna-belur-questioning/
ನವದೆರಲಿ: ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (Central Consumer Protection Authority – CCPA) ಎಲ್ಲಾ ಇ-ಕಾಮರ್ಸ್ ಪ್ಲಾಟ್ಫಾರ್ಮ್ಗಳಿಗೆ ( e-commerce platforms ) ತಮ್ಮ ಪ್ಲಾಟ್ಫಾರ್ಮ್ಗಳು ಡಾರ್ಕ್ ಪ್ಯಾಟರ್ನ್ಗಳ ಸ್ವರೂಪದಲ್ಲಿರುವ ಮೋಸಗೊಳಿಸುವ ಮತ್ತು ಅನ್ಯಾಯದ ವ್ಯಾಪಾರ ಅಭ್ಯಾಸದಲ್ಲಿ ತೊಡಗಿಕೊಳ್ಳದಂತೆ ನೋಡಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಿದೆ. ಎಲ್ಲಾ ಇ-ಕಾಮರ್ಸ್ ಪ್ಲಾಟ್ಫಾರ್ಮ್ಗಳು ಡಾರ್ಕ್ ಪ್ಯಾಟರ್ನ್ಗಳನ್ನು ಗುರುತಿಸಲು ಸ್ವಯಂ-ಆಡಿಟ್ಗಳನ್ನು ನಡೆಸುವಂತೆ ಮತ್ತು ಅವರ ಪ್ಲಾಟ್ಫಾರ್ಮ್ಗಳು ಅಂತಹ ಡಾರ್ಕ್ ಪ್ಯಾಟರ್ನ್ಗಳಿಂದ ಮುಕ್ತವಾಗಿವೆ ಎಂದು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಸ್ವಯಂ-ಆಡಿಟ್ ವರದಿಗಳ ಆಧಾರದ ಮೇಲೆ ಇ-ಕಾಮರ್ಸ್ ಪ್ಲಾಟ್ಫಾರ್ಮ್ಗಳು ತಮ್ಮ ಪ್ಲಾಟ್ಫಾರ್ಮ್ ಯಾವುದೇ ಡಾರ್ಕ್ ಪ್ಯಾಟರ್ನ್ಗಳಲ್ಲಿ ತೊಡಗಿಕೊಳ್ಳುತ್ತಿಲ್ಲ ಎಂದು ಸ್ವಯಂ-ಘೋಷಣೆಗಳನ್ನು ನೀಡಲು ಪ್ರೋತ್ಸಾಹಿಸಿವೆ. ಪ್ಲಾಟ್ಫಾರ್ಮ್ಗಳ ಸ್ವಯಂ-ಘೋಷಣೆಗಳು ಗ್ರಾಹಕರು ಮತ್ತು ಇ-ಕಾಮರ್ಸ್ ಪ್ಲಾಟ್ಫಾರ್ಮ್ಗಳ ನಡುವೆ ವಿಶ್ವಾಸವನ್ನು ಬೆಳೆಸುವುದರ ಜೊತೆಗೆ ನ್ಯಾಯಯುತ ಡಿಜಿಟಲ್ ಪರಿಸರ ವ್ಯವಸ್ಥೆಯನ್ನು ಸಕ್ರಿಯಗೊಳಿಸುತ್ತದೆ. ಡಾರ್ಕ್ ಪ್ಯಾಟರ್ನ್ಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿರುವ ಕೆಲವು ಸಂದರ್ಭಗಳಲ್ಲಿ CCPA ಇ-ಕಾಮರ್ಸ್ ಪ್ಲಾಟ್ಫಾರ್ಮ್ಗಳಿಗೆ…
ಉತ್ತರಾಖಂಡ್: ಇಲ್ಲಿನ ಕೇದಾರನಾಥ್ ಬಳಿಯಲ್ಲಿ ಹೆಲಿಕಾಪ್ಟರ್ ಒಂದು ಹೆದ್ದಾರಿಯ ಪಕ್ಕದಲ್ಲೇ ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಮಾಡಿದೆ. ಕೇದಾರನಾಥಕ್ಕೆ ಭಕ್ತರನ್ನು ಕೊಂಡೊಯ್ಯುತ್ತಿದ್ದಂತ ಹೆಲಿಕಾಪ್ಟರ್ ಒಂದರಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಹೀಗಾಗಿ ಹೆದ್ದಾರಿಯ ಪಕ್ಕದಲ್ಲೇ ತುರ್ತು ಭೂ ಸ್ಪರ್ಶ ಮಾಡಿದೆ. ಈ ಘಟನೆಯಲ್ಲಿ ಫೈಲೆಟ್ ಗಾಯಗೊಂಡಿದ್ದಾರೆ. ಹೆಲಿಕಾಪ್ಟರ್ ನಲ್ಲಿದ್ದಂತ ಐವರು ಸೇಫ್ ಆಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ. https://twitter.com/ANI/status/1931268727946748106
ಬೆಂಗಳೂರು: ಆರ್.ಸಿ.ಬಿ. ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ ಸಂಭವಿಸಿದ ಸಾವು- ನೋವಿನ ನೇರ ಹೊಣೆಯನ್ನು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೇ ಹೊರಬೇಕಿದೆ. ಅವರು ಅಧಿಕಾರಿಗಳ ಮೂತಿಗೆ ಒರೆಸದೆ, ರಾಜೀನಾಮೆ ಕೊಡಬೇಕು ಎಂದು ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ ಅವರು ಆಗ್ರಹವನ್ನು ಮುಂದಿಟ್ಟಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕರಣದ ಕುರಿತು ಹೈಕೋರ್ಟಿನ ಪ್ರಸಕ್ತ ನ್ಯಾಯಮೂರ್ತಿಯಿಂದ ತನಿಖೆ ನಡೆಸಬೇಕು. ಯಾರ ತಪ್ಪೆಂಬುದು ಹೊರಬರಲಿ ಎಂದು ಅಭಿಪ್ರಾಯಪಟ್ಟರು. ಪ್ರಕರಣದ ಕುರಿತು ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದೆ. ನೀವು ಯಾವುದೇ ನಿರ್ಧಾರ ಮಾಡಿದರೂ ಅದಕ್ಕೆ ನಾವು ಸಿದ್ಧ ಎಂದು ಸರಕಾರ ತಿಳಿಸಲಿ ಎಂದು ಸವಾಲೆಸೆದರು. ಬೆಂಗಳೂರು ಪೊಲೀಸ್ ಕಮೀಷನರ್ ಸರಕಾರದ ಅಂಗವೇ ಆಗಿದ್ದಾರೆ. ಸರಕಾರದ್ದೇನೂ ತಪ್ಪಿಲ್ಲವೆಂದಾದರೆ ಅವರನ್ನು ಅಮಾನತು ಮಾಡುವುದು ಸರಕಾರಕ್ಕೆ ಕಪ್ಪು ಚುಕ್ಕಿ ಎಂದು ಯಾಕೆ ಅನಿಸಿಲ್ಲ ಎಂದು ಕೇಳಿದರು. ಇವತ್ತು ಆರ್ಸಿಬಿಯವರು, ಮ್ಯಾನೇಜ್ಮೆಂಟ್ ತಂಡದವರನ್ನೂ ಬಂಧಿಸಿದ್ದಾರೆ. ಯಾಕೆ ನಿಮ್ಮನ್ನು ಬಂಧಿಸಬಾರದು? ನಟ ಅಲ್ಲು ಅರ್ಜುನ್ ಕಾರ್ಯಕ್ರಮದಲ್ಲಿ…
ಬೆಂಗಳೂರು: ಫೈನಲ್ ಪಂದ್ಯ ಆರಂಭವಾಗುವುದಕ್ಕೆ ಮೊದಲೇ ಆರ್ ಸಿಬಿ ಆಡಳಿತ ಮಂಡಳಿ ಕಡೆಯವರು ವಿಜಯೋತ್ಸವ ಮಾಡುತ್ತೇವೆ ಎಂದು ನಗರ ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಗೆಲ್ಲುತ್ತೇವೆ ಎಂದು ಆರ್ ಸಿಬಿ ತಂಡಕ್ಕೆ ಕನಸು ಬಿದ್ದಿತ್ತಾ ಎಂದು ಪ್ರಶ್ನಿಸಿದ್ದಾರೆ. ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಮಾಧ್ಯಮಗಳ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಅಹಮದಾಬಾದ್ ನಲ್ಲಿ ಫೈನಲ್ಸ್ ಪಂದ್ಯ ಆರಂಭವಾಗಿದ್ದು ಏಳೂವರೆ ಗಂಟೆಗೆ. ಇಲ್ಲಿ ನೋಡಿದರೆ ಆರು ಗಂಟೆಗೆಲ್ಲ ವಿಜಯೋತ್ಸವ ಮಾಡುತ್ತೇವೆ, ನಮಗೆ ಅನುಮತಿ ಕೊಡಿ ಪೊಲೀಸರಿಗೆ ಆರ್ ಸಿಬಿ ಅವರು ಅರ್ಜಿ ಕೊಡುತ್ತಾರೆ! ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಮಾಡುತ್ತೇವೆ ಎಂದು ಅರ್ಜಿ ಹಾಕಿದ್ದಾರೆ. ಇದು ಹೇಗೆ ಸಾಧ್ಯ? ಪದ್ಯ ಆರಂಭಕ್ಕೆ ಮೊದಲೇ ಆರ್ ಸಿಬಿ ಆಡಳಿತ ಮಂಡಳಿಗೆ ತಮ್ಮ ತಂಡ ಗೆಲುತ್ತದೆ ಎಂದು ಹೇಗೆ ಗೊತ್ತು? ಎಂದು ಪ್ರಶೈಸಿದರು. ನಾವು ಗೆಲ್ಲುತ್ತೇವೆ ಎಂದು ಇವರಿಗೇನು ಕನಸು ಬಿದ್ದಿತ್ತಾ? ಫೈನಲ್ ಗೆಲ್ತೀವಿ ಅಂತ ಮೊದಲೇ…














