Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಯಾರೋ ಹೆದರಿಸುತ್ತಾರೆಂದ ಮಾತ್ರಕ್ಕೆ ನಿಮ್ಮ ಕರ್ತವ್ಯದಿಂದ ವಿಮುಖರಾಗಬೇಡಿ ಎಂಬುದಾಗಿ ಪತ್ರಕರ್ತರಿಗೆ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಕಿವಿಮಾತು ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಜೋಷಿ ಫೌಂಡೇಶನ್ ವತಿಯಿಂದ ಪತ್ರಕರ್ತರ ಮಕ್ಕಳಿಗೆ ಉಚಿತವಾಗಿ ನೋಟ್ ಬುಕ್ ವಿತರಣೆ ಮಾಡಿ ಮಾತನಾಡಿದಂತ ಅವರು, ಸಮಾಜದಲ್ಲಿ ತಪ್ಪುಗಳು ನಡೆದಾಗ ಸುದ್ದಿಯ ರೂಪದಲ್ಲಿ ಈ ಜಗತ್ತಿಗೆ ತೋರಿಸುವುದು ಪತ್ರಕರ್ತರ ಕರ್ತವ್ಯವಾಗಿದೆ. ಆ ಮೂಲಕ ಸಮಾಜ ಸುಧಾರಣೆಯ ಕೆಲಸ ಮಾಡುತ್ತಿದ್ದಾರೆ ಎಂದರು. ಸಾಗರವು ಅತ್ಯಂತ ಸಭ್ಯರ ಊರಾಗಿದೆ. ಇಲ್ಲಿ ಶೇ.99ರಷ್ಟು ಉತ್ತಮ ಜನರಿದ್ದಾರೆ. ಶೇ.1ರಷ್ಟು ಮಾತ್ರವೇ ಮಿತಿ ಮೀರಿದ ವರ್ತನೆಯವರು ಇದ್ದಾರೆ. ಹಾಗಂತ ಹಣ, ಶಕ್ತಿ, ತೋಳ್ಬಲದ ಕಾರಣ ಏನು ಮಾಡಿದರೂ ನಡೆಯುತ್ತೆ ಎಂದು ಮರೆಯುವವರನ್ನು ಪೊಲೀಸ್ ಇಲಾಖೆ ಮಟ್ಟಹಾಕದೇ ಬಿಡೋದಿಲ್ಲ. ತಾಲ್ಲೂಕಿನಲ್ಲಿ ಶಾಂತಿ-ಸುವ್ಯವಸ್ಥೆಯ ಜೊತೆ ಜೊತೆಗೆ ಕಾನೂನು ಪಾಲನೆ ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು. ರೌಡಿಸಂ ಮಾಡಿಯೇ ಜೀವಿಸುತ್ತೇವೆ ಎಂದು ಮೆರೆಯುವವರಿಗೆ ಪೊಲೀಸ್…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ದಕ್ಷಿಣ ಆಫ್ರಿಕಾ ಕೊನೆಗೂ ಅದನ್ನು ಮಾಡಿದೆ! ಆಸ್ಟ್ರೇಲಿಯಾವನ್ನು ಆರು ವಿಕೆಟ್ಗಳಿಂದ ಸೋಲಿಸಿ ತಮ್ಮ ಮೊದಲ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವ ಮೂಲಕ ಅವರು ದೀರ್ಘಕಾಲದ ‘ಚೋಕರ್ಸ್’ ಹಣೆಪಟ್ಟಿಯನ್ನು ಕಳೆದುಕೊಂಡಿದ್ದಾರೆ. ಪ್ರೋಟಿಯಸ್ ತಂಡವು ಐಸಿಸಿ ಪ್ರಶಸ್ತಿಗಾಗಿ 27 ವರ್ಷಗಳ ಬರವನ್ನು ಕೊನೆಗೊಳಿಸಿದೆ, ಎಂಟು ಸತತ ಟೆಸ್ಟ್ ಗೆಲುವುಗಳೊಂದಿಗೆ WTC ಟ್ರೋಫಿಯನ್ನು ಗೆದ್ದುಕೊಂಡಿತು. ಲಾರ್ಡ್ಸ್ನಲ್ಲಿ ನಡೆದ WTC ಫೈನಲ್ನ 4 ನೇ ದಿನದಂದು (ಶನಿವಾರ, ಜೂನ್ 14), ಪ್ರೋಟಿಯಸ್ ತಂಡವು ಉಳಿದ 69 ರನ್ಗಳನ್ನು ಬೆನ್ನಟ್ಟಿ ಐಸಿಸಿ ಫೈನಲ್ನಲ್ಲಿ ಆಸ್ಟ್ರೇಲಿಯಾದ ಆಳ್ವಿಕೆಯನ್ನು ಕೊನೆಗೊಳಿಸಿತು. 15 ವರ್ಷಗಳಲ್ಲಿ ಪ್ಯಾಟ್ ಕಮ್ಮಿನ್ಸ್ ತಂಡವು ಐಸಿಸಿ ಫೈನಲ್ನ ಭವ್ಯ ಹಂತದಲ್ಲಿ ಎಡವಿದ್ದು, ಅವರ ಅಜೇಯತೆಯ ಸೆಳವನ್ನು ಮುರಿಯುತ್ತಿರುವುದು ಇದೇ ಮೊದಲು. ಈ ಗೆಲುವು ದಕ್ಷಿಣ ಆಫ್ರಿಕಾದ ಕ್ರಿಕೆಟ್ಗೆ ಐತಿಹಾಸಿಕ ಕ್ಷಣವನ್ನು ಮಾತ್ರವಲ್ಲದೆ ಜಾಗತಿಕ ಪಂದ್ಯಾವಳಿಗಳಲ್ಲಿ ಅವರ ಪರಂಪರೆಯನ್ನು ಮರು ವ್ಯಾಖ್ಯಾನಿಸುತ್ತದೆ. ಪಂದ್ಯದಲ್ಲಿ ಬ್ಯಾಟ್ಸ್ಮನ್ಗಳಿಗೆ ಅತ್ಯಂತ ಉತ್ಪಾದಕ ದಿನವಾಗಿ ಹೊರಹೊಮ್ಮಿತು, ಕೇವಲ ನಾಲ್ಕು…
2000 KSRTC ‘ಚಾಲಕ ಕಂ ನಿರ್ವಾಹಕರ ಹುದ್ದೆ’ಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ | KSRTC Recruitment 2025
ಬೆಂಗಳೂರು: ಕೆ ಎಸ್ ಆರ್ ಟಿ ಸಿಯಿಂದ 2000 ಚಾಲಕ ಕಂ ನಿರ್ವಾಹಕರ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿತ್ತು. ಕೆಲ ದಿನಗಳ ಹಿಂದೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿತ್ತು. ಇದಕ್ಕೆ ಬಂದ ಆಕ್ಷೇಪಣೆಯ ನಂತ್ರ ಗುರುವಾರದಂದು ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈ ಬೆನ್ನಲ್ಲೇ ಕೌನ್ಸಿಲಿಂಗ್ ಗೆ ದಿನಾಂಕ ಪ್ರಕಟಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿದ್ದು, ಹೊಸದಾಗಿ ನೇಮಕಗೊಂಡ ಚಾಲಕ-ಕಂ- ನಿರ್ವಾಹಕ ಅಭ್ಯರ್ಥಿಗಳಿಗೆ ಸ್ಥಳವನ್ನು ಗಣಕೀಕೃತ ಕೌನ್ಸಿಲಿಂಗ್ ಮೂಲಕ ನಿಯೋಜಿಸುವುದಾಗಿ ಹೇಳಿದೆ. ಜಾಹೀರಾತು ಸಂ. 1/2020 ದಿನಾಂಕ : 14-02-2020 ರಂತೆ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ , ಆಯ್ಕೆ ಪಟ್ಟಿಯ ಜ್ಯೇಷ್ಠತೆಯನ್ವಯ ಗಣಕೀಕೃತ ಕೌನ್ಸೆಲಿಂಗ್ ಮೂಲಕ ನೇರವಾಗಿ ವಿಭಾಗ/ಘಟಕಗಳಿಗೆ ನಿಯೋಜನೆ ಮಾಡಲಾಗುವುದು ಎಂದು ತಿಳಿಸಿದೆ. ಹೀಗಿದೆ ಗಣಕೀಕೃತ ಕೌನ್ಸಿಲಿಂಗ್ ವೇಳಾಪಟ್ಟಿ ದಿನಾಂಕ:16-06-25 ಸಮಯ: ಬೆಳಗ್ಗೆ 8 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕ್ರಮ ಸಂಖ್ಯೆ 1 – 325, ಮಧ್ಯಾಹ್ನ 2 ಗಂಟೆಯಿಂದ ಕ್ರಮಸಂಖ್ಯೆ326-650…
ಧಾರವಾಡ: ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಂತ ಸಿ.ಡಿ ಗೀತಾ ಅವರ ಕಾರು ಅಪಘಾತಗೊಂಡಿರುವುದಾಗಿ ತಿಳಿದು ಬಂದಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಹೆಬಸೂರು ಬಳಿಯಲ್ಲಿ ಎಡಿಸಿ ಸಿ.ಡಿ ಗೀತಾ ಅವರ ಕಾರಿಗೆ ಸಿಲಿಂಡರ್ ತುಂಬಿದ್ದ ಕ್ಯಾಂಟರ್ ಡಿಕ್ಕಿಯಾಗಿ ಅಪಘಾತ ಉಂಟಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಳೆಹಾನಿ ವೀಕ್ಷಣೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಜೊತೆಗೆ ಎಡಿಸಿ ಗೀತಾ ತೆರಳಿದ್ದರು. ಮಳೆಹಾನಿ ಪ್ರದೇಶ ಪರಿಶೀಲಿಸಿ ಹಿಂದಿರುಗುವಾಗ ಈ ಅಪಘಾತ ಉಂಟಾಗಿದೆ. ಸಣ್ಣಪುಟ್ಟ ಗಾಯದೊಂದಿಗೆ ಎಡಿಸಿ ಸಿ.ಡಿ ಗೀತಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/from-july-1-mobile-based-attendance-is-mandatory-for-health-department-employees-state-government-order/ https://kannadanewsnow.com/kannada/big-shock-from-the-state-government-to-asha-mentors-order-to-release-from-duty/
ಬೆಂಗಳೂರು: ಜುಲೈ.1, 2025ರಿಂದ ಆರೋಗ್ಯ ಸಂಸ್ಥೆಗಳನ್ನು ಒಳಗೊಂಡು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಾದ್ಯಂತ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಪ್ರಸ್ತುತ ಬಳಸಲ್ಪಡುತ್ತಿರುವ ಹಾಜರಾತಿ ನಿರ್ವಹಣಾ ವ್ಯವಸ್ಥೆಯು ಮೀಸಲಾದ ಹಾರ್ಡ್ವೇ ಸಾಧನಗಳ ಮೂಲಕ ಆಧಾರ್ ಆಧಾರಿತ ಬಯೋಮೆಟ್ರಿಕ್ ಪ್ರಮಾಣೀಕರಣವನ್ನು ಅವಲಂಭಿಸಿದೆ. ಹಾರ್ಡ್ ಸಾಧನಗಳಿಗೆ ಆಗಾಗ್ಗೆ ನಿರ್ವಹಣೆ, ದುರಸ್ತಿ ಮತ್ತು ಆವರ್ತಕ ಬದಲಾವಣೆಗಳ ಅಗತ್ಯವಿದ್ದು, ಇದು ಇಲಾಖೆಗೆ ಗಣನೀಯ ಪುನರಾವರ್ತಿತ ವೆಚ್ಚಗಳಿಗೆ ಕಾರಣವಾಗಿದೆ. ಬಯೋಮೆಟ್ರಿಕ್ ಸಾಧನಗಳ ಸ್ಥಿರ ಸ್ವರೂಪದಿಂದಾಗಿ ಹಾಜರಾತಿ ಗುರುತಿಸುವಿಕೆಯನ್ನು ನಿರ್ದಿಷ್ಟ ಸ್ಥಳಗಳಿಗೆ ಸೀಮಿತಗೊಳಿಸಿದೆ. ಕ್ಷೇತ್ರ ಸಿಬ್ಬಂದಿ ಮತ್ತು ದೂರದ ಪ್ರದೇಶಗಳಲ್ಲಿ ಕೆಲಸ ಮಾಡುವವರಿಗೆ ಅಸಮರ್ಥತೆಗಳನ್ನು ಸೃಷ್ಟಿಸುತ್ತದೆ. ಈ ವ್ಯವಸ್ಥೆಯ ಸೀಮಿತ ವಿಸ್ತರಣೆ, ಅಂದರೆ ಹೊಸ ಸೌಲಭ್ಯಗಳಿಗೆ ವಿಸ್ತರಿಸಲು ಹಾರ್ಡ್ ಹೂಡಿಕೆಗಳು ಮತ್ತು ಭೌತಿಕ ಸ್ಥಾಪನಾ ಪ್ರಕ್ರಿಯೆಗಳ ಅಗತ್ಯವಿದೆ. ಇದಲ್ಲದೆ, ಹಾರ್ಡ್ವೇರ್…
ಮೈಸೂರು: ಹಾಸನ ಮತ್ತು ಮಾವಿನಕೆರೆ ನಡುವೆ ಟ್ರ್ಯಾಕ್ ನವೀಕರಣ ಕಾಮಗಾರಿ ನಡೆಯುವುದರಿಂದ ಕೆಳಗಿನ ರೈಲುಗಳ ಸೇವೆಯನ್ನು 18 ದಿನಗಳ ಕಾಲ ಮಾರ್ಗ ಮಧ್ಯದಲ್ಲಿ ನಿಯಂತ್ರಿಸಲಾಗುತ್ತದೆ. 1. ರೈಲು ಸಂಖ್ಯೆ 16221 ತಾಳಗುಪ್ಪ – ಮೈಸೂರು ಎಕ್ಸ್ಪ್ರೆಸ್, ಜೂನ್ 18ರಿಂದ 20, ಜೂನ್ 23ರಿಂದ 27, ಜೂನ್ 30ರಿಂದ ಜುಲೈ 04 ಮತ್ತು ಜುಲೈ 07ರಿಂದ 11 ರವರೆಗೆ ಪ್ರಯಾಣ ಆರಂಭಿಸುವ ರೈಲುಗಳು ಮಾರ್ಗಮಧ್ಯದಲ್ಲಿ 15 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ. 2. ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್, ಜೂನ್ 18ರಿಂದ 20, ಜೂನ್ 23ರಿಂದ 27, ಜೂನ್ 30ರಿಂದ ಜುಲೈ 04 ಮತ್ತು ಜುಲೈ 07ರಿಂದ 11 ರವರೆಗೆ ಪ್ರಯಾಣ ಆರಂಭಿಸುವ ರೈಲುಗಳು ಮಾರ್ಗಮಧ್ಯದಲ್ಲಿ 80 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ. 3. ರೈಲು ಸಂಖ್ಯೆ 06583 ಕೆಎಸ್ಆರ್ ಬೆಂಗಳೂರು – ಹಾಸನ ಡೆಮು, ಜೂನ್ 18ರಿಂದ 20, ಜೂನ್ 23ರಿಂದ 27, ಜೂನ್ 30ರಿಂದ ಜುಲೈ 04 ಮತ್ತು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಶಾ ಮೆಂಟರ್ ಗಳನ್ನ ಕರ್ತವ್ಯದಿಂದ ಬಿಡುಗಡೆ ಮಾಡಿದ್ದು ಖಂಡನೀಯವೇ ಸರಿ. ಈ ಆದೇಶ ಹಿಪಡೆಯದಿದ್ದರೆ ಕಾನೂನು ಹೋರಾಟ ಮಾಡುವುದಾಗಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ( KSHCOEA BMS ) ಸಂಘದ ಅಧ್ಯಕ್ಷ ಶ್ರೀಕಾಂತ್ ಸ್ವಾಮಿ ಎಚ್ಚರಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಜಿಲ್ಲೆ ಹಾಗೂ ತಾಲುಕು ಮಟ್ಟದಲ್ಲಿ ಆಶಾ ಕಾರ್ಯಕ್ರಮ ಅನುಷ್ಠಾನ ಮಾಡಲು 2007-2008 ರಿಂದ ನೇಮಕಾತಿ ಮಾಡಿಕೊಂಡಿದ್ದು, ಈಗ ದಿಢೀರನೆ ಈ ಎಲ್ಲಾ 195 ಆಶಾ ಮೆಂಟರ್ ಗಳನ್ನು ಕರ್ತವ್ಯದಿಂದ ಬಿಡುಗಡೆ ಮಾಡಿ ಆದೇಶ ಹೊರಡಿಸಿದ್ದು ಈ ಆದೇಶದಲ್ಲಿ ಬಿಡುಗಡೆ ಹೊಂದಿದ ಸದರಿ ಸಿಬ್ಬಂದಿಗಳನ್ನು ಅರ್ಹರಿದ್ದಲ್ಲಿ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆದ್ಯತೆ ಮೇಲೆ ನೇಮಿಸಲು ಪರಿಗಣಿಸಬಹುದು ಎಂದು ಆದೇಶದಲ್ಲಿ ತಿಳಿಸಿರುತ್ತಾರೆ, ಅಂದರೆ ಹೊಸ ನೇಮಕಾತಿ ಮಾಡಿಕೊಳ್ಳಲು ತಿಳಿಸಿರುತ್ತಾರೆ ಎಂದಿದ್ದಾರೆ. ಕಳೆದ 15-18 ವರ್ಷಗಳಿಂದ ಸೇವೆ…
ನವದೆಹಲಿ: ಏರ್ ಇಂಡಿಯಾ 171 ಅಪಘಾತದ ತನಿಖೆ ಆರಂಭವಾಗುತ್ತಿದ್ದಂತೆ, ನಾಗರಿಕ ವಿಮಾನಯಾನ ಸಚಿವಾಲಯವು ಶನಿವಾರ ಗುರುವಾರ ಮಧ್ಯಾಹ್ನ ಘಟನೆ ಹೇಗೆ ನಡೆಯಿತು ಎಂಬುದನ್ನು ವಿವರಿಸಿದೆ. ನಿನ್ನೆ ಸಂಜೆ ಮರುಪಡೆಯಲಾದ ಕಪ್ಪು ಪೆಟ್ಟಿಗೆಯ ಡೇಟಾವನ್ನು ಡಿಕೋಡ್ ಮಾಡಿದ ನಂತರ ಅಪಘಾತದ ಕಾರಣವನ್ನು ಕಂಡುಹಿಡಿಯುವ ಭರವಸೆಯನ್ನು ವ್ಯಕ್ತಪಡಿಸಿದೆ. ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ಸಮೀರ್ ಕುಮಾರ್ ಸಿನ್ಹಾ, ಲಂಡನ್ಗೆ ಹೊರಟಿದ್ದ ವಿಮಾನವು ಮಧ್ಯಾಹ್ನ 1.39 ಕ್ಕೆ ಹೊರಟು ವಿಮಾನ ನಿಲ್ದಾಣದಿಂದ 2 ಕಿ.ಮೀ ದೂರದಲ್ಲಿ ಪತನಗೊಂಡಿತು ಎಂದು ಹೇಳಿದರು. ಪೈಲಟ್ ವಾಯು ಸಂಚಾರ ನಿಯಂತ್ರಕಕ್ಕೆ ಮೇಡೇ ಕರೆ ಕಳುಹಿಸಿದ್ದಾರೆ ಎಂದು ಅವರು ದೃಢಪಡಿಸಿದರು. ಆದಾಗ್ಯೂ, ATC ವಿಮಾನವನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಜೂನ್ 12 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ, ಅಹಮದಾಬಾದ್ನಿಂದ ಲಂಡನ್ನ ಗ್ಯಾಟ್ವಿಕ್ಗೆ ಹೋಗುತ್ತಿದ್ದ ವಿಮಾನ ಅಪಘಾತಕ್ಕೀಡಾಗಿದೆ ಎಂಬ ಮಾಹಿತಿ ನಮಗೆ ಸಿಕ್ಕಿತು. ಅಹಮದಾಬಾದ್ನ ATC ಮೂಲಕ ನಮಗೆ ಇದರ ಬಗ್ಗೆ ವಿವರವಾದ ಮಾಹಿತಿ ತಕ್ಷಣ ಸಿಕ್ಕಿತು. ಇದು…
ಮೈಸೂರು: ನೈರುತ್ಯ ರೈಲ್ವೆಯ ಮೈಸೂರು ವಿಭಾಗದಿಂದ ಸಂಚರಿಸುತ್ತಿದ್ದಂತ ಎರಡು ದಿನ ರೈಲುಗಳ ರದ್ದತಿ ಮತ್ತು ಭಾಗಶಃ ರದ್ದತಿ ಮಾಡಿರುವುದಾಗಿ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ ಧರ್ಮರಾಜ ಕಾಲಗೊಂಡ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕೋರವಂಗಲ ಯಾರ್ಡ್ನಲ್ಲಿ ನಡೆಯುವ ಸುರಕ್ಷಾ ಮತ್ತು ಟ್ರ್ಯಾಕ್ ನಿರ್ವಹಣಾ ಕೆಲಸದ ಹಿನ್ನೆಲೆಯಲ್ಲಿ ಕೆಳಕಂಡ ರೈಲು ಸೇವೆಗಳನ್ನು ಸಂಪೂರ್ಣವಾಗಿ ಮತ್ತು ಭಾಗಶಃ ರದ್ದುಗೊಳಿಸಲಾಗಿದೆ ಎಂದಿದ್ದಾರೆ. ಸಂಪೂರ್ಣ ರದ್ದತಿ ರೈಲು ಸಂಖ್ಯೆ 56267 ಅರಸೀಕೆರೆ – ಮೈಸೂರು ಪ್ಯಾಸೆಂಜರ್ ರೈಲು ಜೂನ್ 20 ಮತ್ತು 22, 2025 ರಂದು ರದ್ದುಗೊಳಿಸಲಾಗುತ್ತದೆ. ಭಾಗಶಃ ರದ್ದತಿ ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್ ರೈಲು ಮೈಸೂರು ಮತ್ತು ಅರಸೀಕೆರೆ ನಡುವಿನ ಮಾರ್ಗದಲ್ಲಿ ಭಾಗಶಃ ರದ್ದುಗೊಳಿಸಲಾಗುತ್ತದೆ. ಜೂನ್ 20 ಮತ್ತು 22, 2025 ರಂದು ಈ ರೈಲು ಅರಸೀಕೆರೆಯಿಂದ ಶಿವಮೊಗ್ಗ ಟೌನ್ವರೆಗೆ ಮಾತ್ರ ಓಡಿಸಲಾಗುತ್ತದೆ ಮತ್ತು ಅರಸೀಕೆರೆಯಿಂದ ನಿಗದಿತ ವೇಳೆಯಲ್ಲಿ…
ಮಗ ಮಾತ್ರ ಮಾತು ಕೇಳುವುದಿಲ್ಲವೇ? ಮಾತು ಕೇಳದ ಹೆಣ್ಣು ಮಕ್ಕಳೂ ಇದ್ದಾರೆ. ಏನ್ ಮಾಡೋದು. ಈಗಿನ ಕಾಲದಲ್ಲಿ ಮಕ್ಕಳಿರುವವರ ವಿರುದ್ಧ ಮಾತನಾಡುವುದು ಫ್ಯಾಶನ್ ಆಗಿಬಿಟ್ಟಿದೆ. ನಿಮ್ಮ ಮನೆಯಲ್ಲಿ ನಿಮ್ಮ ಮಗ ಅಥವಾ ಮಗಳು ಯಾರೇ ಇರಲಿ, ನೀವು ಈ ಪರಿಹಾರವನ್ನು ಮಾಡಬಹುದು. ನೀವು ಈ ದೇವಾಲಯಕ್ಕೆ ಭೇಟಿ ನೀಡಬಹುದು. ಇದೇ ವೇಳೆ ನನ್ನ ಮಗು ದಾರಿ ತಪ್ಪುತ್ತದೆ. ಅಡ್ಮಿಷನ್ ಚೆನ್ನಾಗಿಲ್ಲ, ಅಭ್ಯಾಸ ಚೆನ್ನಾಗಿಲ್ಲ, ಓದುವುದರಲ್ಲಿ ಆಸಕ್ತಿ ಇಲ್ಲ, ಅಪ್ಪ-ಅಮ್ಮ ಹೇಳುವ ಒಳ್ಳೆ ಮಾತು ಕೇಳೋಕೆ ಮನಸ್ಸಿಲ್ಲ, ಈ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಹೊಂದಲು ಇಲ್ಲಿದೆ ಸರಳ ಆಧ್ಯಾತ್ಮಿಕ ಉಪಾಸನೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ…












