Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ದೇವನಹಳ್ಳಿಯ ಕೆಐಎಡಿಬಿ ಏರೋಸ್ಪೇಸ್‌ ಪಾರ್ಕ್‌ನಲ್ಲಿ ಕಾಲಿನ್ಸ್‌ ಏರೋಸ್ಪೇಸ್‌ ಕಂಪನಿಯು ಅಭಿವೃದ್ಧಿಪಡಿಸಿರುವ ತನ್ನ `ಕಾಲಿನ್ಸ್ ಇಂಡಿಯಾ ಆಪರೇಷನ್ ಸೆಂಟರ್’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ, ಸಚಿವರಾದ ಕೆ.ಜೆ.ಜಾರ್ಜ್‌, ಕೆ.ಎಚ್.ಮುನಿಯಪ್ಪ ಮತ್ತು ಸಂಸದ ಡಾ.ಕೆ. ಸುಧಾಕರ್‌ ಹಾಗೂ ಕಾಲಿನ್ಸ್‌ ಏರೋಸ್ಪೇಸ್‌ ಕಂಪನಿಯ ಹಿರಿಯ ಉಪಾಧ್ಯಕ್ಷ ರಾಯ್‌ ಗಲಿಕ್ಸನ್ ಇದ್ದರು.‌ ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ʻಕಾಲಿನ್ಸ್‌ ಏರೋಸ್ಪೇಸ್‌ ರಾಜ್ಯದಲ್ಲಿ 25 ಮಿಲಿಯನ್‌ ಡಾಲರ್‌ ಹೂಡಿಕೆ ಮಾಡುತ್ತಿದೆ. ಈ ನೂತನ ಘಟಕದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ, ಆಧುನಿಕ ತಯಾರಿಕೆಗಳಲ್ಲಿ 2 ಸಾವಿರಕ್ಕೂ ಹೆಚ್ಚು ಕೌಶಲ್ಯಪೂರ್ಣ ಉದ್ಯೋಗ ಸೃಷ್ಟಿ ಆಗಲಿದೆ. ಭಾರತದ ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ರಾಜ್ಯದ ಕೊಡುಗೆ ಶೇಕಡ 65ರಷ್ಟಿದೆ. ಬೆಂಗಳೂರು, ಬೆಳಗಾವಿ, ಮೈಸೂರು, ತುಮಕೂರು ಮತ್ತು ಚಾಮರಾಜನಗರದಲ್ಲಿ ವಿಶ್ವದರ್ಜೆಯ ಏರೋಸ್ಪೇಸ್‌ ಮತ್ತು ಡಿಫೆನ್ಸ್ ಪಾರ್ಕ್‌ಗಳನ್ನು ಸ್ಥಾಪಿಸಲಾಗುತ್ತಿದೆ,ʼ…

Read More

ಬೆಂಗಳೂರು: ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಸಾರ್ವಜನಿಕರ ಸಾರಿಗೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆಗೆ ಫ್ಲೈ ಬಸ್ ಸೇವೆ ಆರಂಭಿಸಲಾಗುತ್ತಿದೆ. ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸುವುದು ಕೆಎಸ್‌ಆರ್‌ಟಿಸಿಯ ಪ್ರಥಮ ಆದ್ಯತೆಯಾಗಿದೆ. ಆ ನಿಟ್ಟಿನಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ – ದಾವಣಗೆರೆ‌ ನಡುವೆ ನೇರ ಫ್ಲೈ ಬಸ್ ಸೇವೆ ಆರಂಭಿಸಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟ ಬಸ್‌ ಸ್ಯಾಟ್‌ಲೈಟ್‌ ಟೌನ್‌ ರಿಂಗ್‌ ರೋಡ್‌ ಮೂಲಕ ದೊಡ್ಡಬಳ್ಳಾಪುರ ಬೈಪಾಸ್‌ – ದಾಬಸ್‌ ಪೇಟೆ – ತುಮಕೂರು ಬೈಪಾಸ್‌ – ಚಿತ್ರದುರ್ಗ ಬೈಪಾಸ್‌ ಮೂಲಕ ನೇರವಾಗಿ ದಾವಣಗೆರೆ ತಲುಪಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ತುಮಕೂರು ಬೈಪಾಸ್‌ ಮತ್ತು ಚಿತ್ರದುರ್ಗ ಬೈಪಾಸ್‌ ಬಳಿ ನಿಲುಗಡೆ ಇರಲಿದೆ. ಮುಂಗಡ ಟಿಕೆಟ್‌ ಬುಕ್ಕಿಂಗ್‌ಗಾಗಿ https://ksrtc.in ಗೆ ಭೇಟಿ ನೀಡಿ ಎಂಬುದಾಗಿ ಕೆ ಎಸ್ ಆರ್ ಟಿ ಸಿ ಮಾಹಿತಿ ನೀಡಿದೆ. https://twitter.com/KarnatakaVarthe/status/1988549440450580874 https://kannadanewsnow.com/kannada/good-news-for-the-people-of-the-state-thinking-of-opening-6000-kps-schools-minister-madhu-bangarappa/ https://kannadanewsnow.com/kannada/sagar-mla-gopalakrishna-belurs-public-relations-meeting-at-kalmane-received-a-great-response/

Read More

ಇತ್ತೀಚೆಗೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಹಿರಿಯ ನಟ ಗೋವಿಂದ ಅವರು ಮನೆಯಲ್ಲಿ ಪ್ರಜ್ಞಾಹೀನರಾಗಿ ಬಿದ್ದ ನಂತರ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಆಸ್ಪತ್ರೆಯ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಗೋವಿಂದ, “ನಾನು ಅತಿಯಾದ ಶ್ರಮವಹಿಸಿ ಕೆಲಸ ಮಾಡಿದ್ದೆ ಮತ್ತು ಆಯಾಸಗೊಂಡಿದ್ದೆ. ವೈದ್ಯರು ನನಗೆ ಔಷಧಿ ನೀಡಿದರು, ಮತ್ತು ನಾನು ಈಗ ಚೆನ್ನಾಗಿದ್ದೇನೆ” ಎಂದು ಹೇಳಿದರು. ಆರೋಗ್ಯಕರ ಜೀವನಶೈಲಿಯನ್ನು ಪ್ರತಿಪಾದಿಸುತ್ತಾ, “ಒಬ್ಬರು ತಮ್ಮನ್ನು ತಾವು ಆರೋಗ್ಯವಾಗಿಡಲು ಯೋಗ ಮತ್ತು ಪ್ರಾಣಾಯಾಮವನ್ನು ಅಭ್ಯಾಸ ಮಾಡಬೇಕು” ಎಂದು ತಮ್ಮ ಅಭಿಮಾನಿಗಳಿಗೆ ಬಲವಾಗಿ ಸಲಹೆ ನೀಡಿದರು. https://kannadanewsnow.com/kannada/sagar-mla-gopalakrishna-belurs-public-relations-meeting-at-kalmane-received-a-great-response/ https://kannadanewsnow.com/kannada/applications-invited-for-free-30-day-two-wheeler-repair-and-servicing-training/

Read More

ಬೆಂಗಳೂರು: ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನವೆಂಬರ್ ತಿಂಗಳ ದಿ:20/11/2025 ರಿಂದ 30 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವೀಸಿಂಗ್ ಉಚಿತ ತರಬೇತಿ ಶಿಬಿರವನ್ನು ಏರ್ಪಡಿಸಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಆಸಕ್ತಿಯುಳ್ಳ ಶಿಬಿರಾರ್ಥಿಗಳು ನ. 20 ಬೆಳಗ್ಗೆ 10.00 ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ…

Read More

ಬೆಂಗಳೂರು: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳ ಕುರಿತು ಸರ್ಕಾರದೊಂದಿಗೆ ನಾಲ್ಕು ವರ್ಷಗಳ ಕಾನೂನು ಹೋರಾಟ ನಡೆಸಿದ ನಂತರ, ಕರ್ನಾಟಕ ರಾಜ್ಯ ಚುನಾವಣಾ ಆಯೋಗ (SEC) ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಸಂಬಂಧಿಸಿದಂತೆ ಈಗ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಗ್ರಾಮ ಪಂಚಾಯಿತಿಗಳಿಗೆ ಅಂತಿಮ ಮೀಸಲಾತಿ ಅಧಿಸೂಚನೆಯನ್ನು ಹೊರಡಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನಗಳನ್ನು ಕೋರಿ SEC ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (PIL) ಸಲ್ಲಿಸಿದೆ. ಮುಂದಿನ ವರ್ಷದ ಜನವರಿಯಲ್ಲಿ ಅವಧಿ ಕೊನೆಗೊಳ್ಳುವ ರಾಜ್ಯಾದ್ಯಂತ 5,950 ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಗಳನ್ನು ಸಮಯಕ್ಕೆ ಸರಿಯಾಗಿ ನಡೆಸುವುದನ್ನು ಖಚಿತಪಡಿಸಿಕೊಳ್ಳಲು ಇದು ಅತ್ಯಗತ್ಯ ಎಂದು ಆಯೋಗ ಹೇಳಿದೆ. ಬುಧವಾರ (ನವೆಂಬರ್ 12) ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠದ ಮುಂದೆ ಅರ್ಜಿಯ ವಿಚಾರಣೆ ನಡೆಯಲಿದೆ. SEC ಪ್ರಕಾರ, ಮುಕ್ತ ಮತ್ತು ನ್ಯಾಯಯುತ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ನಡೆಸಲು ಮತ್ತು ತಳಮಟ್ಟದಲ್ಲಿ ಪ್ರಜಾಪ್ರಭುತ್ವದ ನಿರಂತರತೆಯನ್ನು ಕಾಪಾಡಿಕೊಳ್ಳಲು ಮೀಸಲಾತಿ ಅಧಿಸೂಚನೆಯನ್ನು ಸಕಾಲಿಕವಾಗಿ ಹೊರಡಿಸುವುದು ನಿರ್ಣಾಯಕವಾಗಿದೆ. https://kannadanewsnow.com/kannada/sagar-mla-gopalakrishna-belurs-public-relations-meeting-at-kalmane-received-a-great-response/ https://kannadanewsnow.com/kannada/police-conduct-intensive-search-for-another-car-used-at-red-fort-delhi-on-high-alert/

Read More

ನವದೆಹಲಿ: ಕೆಂಪು ಕೋಟೆ ಸ್ಫೋಟದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಶಂಕಿತರೊಂದಿಗೆ ಸಂಪರ್ಕ ಹೊಂದಿರುವ ಕೆಂಪು ಫೋರ್ಡ್ ಇಕೋಸ್ಪೋರ್ಟ್ ಕಾರುಗಾಗಿ ದೆಹಲಿ ಪೊಲೀಸರು ಬುಧವಾರ ನಗರಾದ್ಯಂತ ಎಚ್ಚರಿಕೆ ನೀಡಿದ್ದಾರೆ. ಸೋಮವಾರ ಕೆಂಪು ಕೋಟೆ ಮೆಟ್ರೋ ನಿಲ್ದಾಣದಲ್ಲಿ ನಡೆದ ಸ್ಫೋಟದಲ್ಲಿ ಆರೋಪಿಗಳ ಒಡೆತನದ ಹುಂಡೈ ಐ20 ಕಾರು ಭಾಗಿಯಾಗಿದೆ. ದೆಹಲಿ ಪೊಲೀಸರನ್ನು ಉಲ್ಲೇಖಿಸಿ ಐಎಎನ್‌ಎಸ್ ವರದಿ ಮಾಡಿರುವ ಪ್ರಕಾರ, ವಾಹನವನ್ನು ಪತ್ತೆಹಚ್ಚಲು ಐದು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ ಮತ್ತು ಎಲ್ಲಾ ದೆಹಲಿ ಪೊಲೀಸ್ ಠಾಣೆಗಳು, ಪೋಸ್ಟ್‌ಗಳು ಮತ್ತು ಗಡಿ ಚೆಕ್‌ಪೋಸ್ಟ್‌ಗಳನ್ನು ಹೈ ಅಲರ್ಟ್‌ನಲ್ಲಿ ಇರಿಸಲಾಗಿದೆ. ಶಂಕಿತರು ಪ್ರದೇಶದಿಂದ ಪಲಾಯನ ಮಾಡುವುದನ್ನು ತಡೆಯಲು ಉತ್ತರ ಪ್ರದೇಶ ಮತ್ತು ಹರಿಯಾಣ ಪೊಲೀಸರೊಂದಿಗೆ ಎಚ್ಚರಿಕೆಗಳನ್ನು ಹಂಚಿಕೊಳ್ಳಲಾಗಿದೆ. ಸೋಮವಾರ ಸಂಜೆ ನಿಧಾನವಾಗಿ ಚಲಿಸುತ್ತಿದ್ದ ಕಾರು ಸ್ಫೋಟಗೊಂಡು 12 ಜನರು ಸಾವನ್ನಪ್ಪಿದರು ಮತ್ತು ಹಲವಾರು ಜನರು ಗಾಯಗೊಂಡರು. ಇದಕ್ಕೂ ಮೊದಲು, ಜೈಶ್-ಎ-ಮೊಹಮ್ಮದ್ ಮತ್ತು ಅನ್ಸರ್ ಘಜ್ವತ್-ಉಲ್-ಹಿಂದ್ ಜೊತೆ ಸಂಪರ್ಕ ಹೊಂದಿರುವ ಭಯೋತ್ಪಾದಕ ಮಾಡ್ಯೂಲ್ ಅನ್ನು ಪೊಲೀಸರು ಭೇದಿಸಿದ್ದರು, ಮೂವರು ವೈದ್ಯರು ಮತ್ತು ಇತರ…

Read More

ಬೆಂಗಳೂರು: ನಗರದಲ್ಲಿ ಬೈಕ್ ಅಪಘಾತದಲ್ಲಿ ಡೆಹ್ರಾಡೂನ್ ಮೂಲದ ದೀಪಕ್ ಎಂಬಾತ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೆಂಗಳೂರಿನ ವಿಂಡ್ಲರ್ ಮ್ಯಾನರ್ ಬಳಿ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ದೀಪಕ್, ಸ್ನೇಹಿತೆ ರೋಹಿಣಿ ಜೊತೆ ಕೋರಮಂಗಲಕ್ಕೆ ಹೋಗುತ್ತಿದ್ದರು. ಮಧ್ಯರಾತ್ರಿ ದೇವನಹಳ್ಳಿ ಅಪಾರ್ಮೆಂಟ್ ಗೆ ದೀಪಕ್ ತೆರಳುತ್ತಿದ್ದರು. ವಿಂಡ್ಸರ್ ಮ್ಯಾನರ್ ಬಳಿ ಸ್ಟೆಪ್ಸ್ ಮೇಲೆ ಬೈಕ್ ಅನ್ನು ದೀಪಕ್ ಇರಿಸಿದ್ದರು. ಆಯತಪ್ಪಿ ಬುಲೆಟ್ ಬೈಕ್ ನಿಂದ ಬಿದ್ದು ದೀಪಕ್ ತಲೆಗೆ ಪೆಟ್ಟಾಗಿತ್ತು. ದೀಪಕ್ ಗೆಳತಿ ರೋಹಿಣಿಗೆ ಕಾಲು ಮುರಿದು ಬಿದ್ದು ಒದ್ದಾಡಿದ್ದರು. ಪೊಲೀಸರು ಗಾಯಾಳು ದೀಪಕ್, ರೋಹಣಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೇ ಚಿಕಿತ್ಸೆ ಫಲಿಸದೇ ದೀಪಕ್ ಸಾವನ್ನಪ್ಪಿದ್ದರೇ, ರೋಹಿಣಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/sagar-mla-gopalakrishna-belurs-public-relations-meeting-at-kalmane-received-a-great-response/ https://kannadanewsnow.com/kannada/road-encroachments-worth-rs-10-crore-cleared-in-bengaluru/

Read More

ಬೆಂಗಳೂರು: ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಉತ್ತರಹಳ್ಳಿ ಉಪವಿಭಾಗ ಅರೇಹಳ್ಳಿ ಗ್ರಾಮ, ಉತ್ತರಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಸರ್ವೇ ಸಂಖ್ಯೆ 2 , 6/2 ಹಾಗೂ 4 ರಲ್ಲಿ 2 ಮತ್ತು 3ನೇ ಮುಖ್ಯರಸ್ತೆಯಲ್ಲಿ ಒಟ್ಟಾರೆ 6,000 ಚದರ ಅಡಿ ಜಾಗದಲ್ಲಿ ಅನಧಿಕೃತವಾಗಿ ಶೆಡ್ ನಿರ್ಮಾಣ ಮಾಡಿದ್ದು, ರಸ್ತೆ ಒತ್ತುವರಿ ಮಾಡಲಾಗಿರುತ್ತದೆಯೆಂದು ಸಾರ್ವಜನಿಕರು ಮಾನ್ಯ ಕರ್ನಾಟಕ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದರು. ಈ ದೂರಿನನ್ವಯ ಮಾನ್ಯ ಲೋಕಾಯುಕ್ತರವರು ಒತ್ತುವರಿ ತೆರವುಗೊಳಿಸಲು ನೀಡಿರುವ ಸೂಚನೆ ಮೇರೆಗೆ ಬೆಂಗಳೂರು ದಕ್ಷಿಣ ನಗರ ಪಾಲಿಕೆ ವತಿಯಿಂದ ಇಂದು ತೆರವು ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿರುತ್ತದೆ. ಈ ಕಾರ್ಯಾಚರಣೆಯಿಂದ ರಸ್ತೆಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಅನಧಿಕೃತ ಶೆಡ್ ತೆರವುಗೊಳಿಸಿ ಸಾರ್ವಜನಿಕರಿಗೆ ರಸ್ತೆ ಉಪಯೋಗಿಸಲು ಅನುಕೂಲ ಮಾಡಿಕೊಡಲಾಗಿದ್ದು , 6,000 ಚದರ ಅಡಿ ಇರುವ ಸುಮಾರು ರೂ.10. 00 ಕೋಟಿ ಮೌಲ್ಯದ ಜಾಗವನ್ನು ಪಾಲಿಕೆ ವತಿಯಿಂದ ವಶಪಡಿಸಿಕೊಳ್ಳಲಾಗಿರುತ್ತದೆ. ರಸ್ತೆ ಒತ್ತುವರಿದಾರರ ವಿರುಧ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಕಾರ್ಯಾಚರಣೆ ವೇಳೆ ಕಾರ್ಯಪಾಲಕ ಅಭಿಯಂತರರು…

Read More

ಬೆಂಗಳೂರು: ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದ್ದರಿಂದ ಫಲಿತಾಂಶ ಬಂದ ಬಳಿಕ ರಾಹುಲ್‌ ಗಾಂಧಿ ಮತಗಳ್ಳತನ ಆರೋಪ ಮಾಡುವುದು ಖಂಡಿತ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದ ಚುನಾವಣೆ ಪ್ರತಿಷ್ಠಿತ ಚುನಾವಣೆಯಾಗಿದೆ. ಬಿಹಾರದಲ್ಲಿ ನಕ್ಸಲ್‌ ಚಟುವಟಿಕೆ ಹೆಚ್ಚಿದ್ದರೂ ಈ ಬಾರಿ ಉತ್ತಮವಾಗಿ ಮತದಾನ ನಡೆದಿದೆ. ಅಮಿತ್‌ ಶಾ ಗೃಹ ಸಚಿವರಾದ ಬಳಿಕ ನಕ್ಸಲ್‌ ಚಟುವಟಿಕೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. 12 ಕ್ಕೂ ಹೆಚ್ಚು ಸಂಸ್ಥೆಗಳು ಸಮೀಕ್ಷೆ ಮಾಡಿದ್ದು, ಎನ್‌ಡಿಎ ಅಧಿಕಾರಕ್ಕೆ ಬರಲಿದೆ ಎಂದು ಅಂದಾಜಿಸಲಾಗಿದೆ. ಕಾಂಗ್ರೆಸ್‌ನ ಘಟಬಂಧನಕ್ಕೆ ಬೆಂಬಲ ಇಲ್ಲ ಎಂದು ಹೇಳಲಾಗಿದೆ ಎಂದರು. ಬಿಹಾರ ಚುನಾವಣೆಯ ಫಲಿತಾಂಶ ಬಂದ ಬಳಿಕ ರಾಹುಲ್‌ ಗಾಂಧಿ ಮತಗಳ್ಳತನದ ಆರೋಪ ಮಾಡುತ್ತಾರೆ. ರಾಹುಲ್‌ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್‌ ಸರಣಿಯಾಗಿ ಸೋಲುತ್ತಿದೆ. ಲೋಕಸಭೆ, ವಿಧಾನಸಭಾ ಚುನಾವಣೆಗಳಲ್ಲಿ ರಾಹುಲ್‌ ಗಾಂಧಿ ಐರನ್‌ ಲೆಗ್‌ ಎಂದು ಪ್ರಸಿದ್ಧಿ ಪಡೆದಿದ್ದಾರೆ. ಬಿಹಾರ ಚುನಾವಣೆಯ ಫಲಿತಾಂಶ ಬಂದ ನಂತರ ಅವರು ವಿದೇಶ ಪ್ರವಾಸಕ್ಕೆ ತೆರಳುತ್ತಾರೆ.…

Read More

ಶಿವಮೊಗ್ಗ: ಇಂದು ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಜನಸಂಪರ್ಕ ಸಭೆ ನಡೆಸಿದರು. ಈ ಜನಸಂಪರ್ಕ ಸಭೆಗೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಬರೋಬ್ಬರಿ 66ಕ್ಕೂ ಹೆಚ್ಚು ಜನರು ತಮ್ಮ ಸಮಸ್ಯೆ ಪರಿಹರಿಸುವಂತೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳಿಗೆ ಸ್ಥಳದಲ್ಲೇ ಅಧಿಕಾರಿಗಳ ಮೂಲಕ ಸಮಸ್ಯೆ ಪರಿಹರಿಸುವಂತ ಕೆಲಸ ಮಾಡಿದರು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಂಭಾಗದಲ್ಲಿ ಇಂದು ಶಾಸಕ ಗೋಪಾಲಕೃಷ್ಣ ಬೇಳೂರು ಜನಸಂಪರ್ಕ ಸಭೆಯನ್ನು ನಡೆಸಿದರು. ಈ ಕಾರ್ಯಕ್ರಮ ಉದ್ಘಾಟಿಸಿ, ಜನಸಂಪರ್ಕ ಸಭೆಯನ್ನು ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನೊಂದ ಜನರಿಗೆ ಸ್ಪಂದಿಸಬೇಕು. ಅವರ ಅಹವಾಲುಗಳನ್ನು ಪರಿಹರಿಸಬೇಕು ಎನ್ನುವ ಕಾರಣದಿಂದ ಜನಸಂಪರ್ಕ ಸಭೆ ನಡೆಸಲಾಗಿದೆ. ಇಲ್ಲಿ ಬಂದಿರುವಂತ ಅರ್ಜಿಗಳಲ್ಲಿ ಬಹುತೇಕವು 94ಸಿ ಗೆ ಸಂಬಂಧಿಸಿದ್ದವು. ಸರ್ಕಾರದಿಂದ ಕಾನು, ಕಂದಾಯ ಭೂಮಿ ಪರಿಹಾರಕ್ಕಾಗಿ ಕಂದಾಯ ಹಾಗೂ ಅರಣ್ಯ ಇಲಾಖೆಯಿಂದ ಜಂಟಿ ಸರ್ವೆಗೆ ಸೂಚಿಸಲಾಗಿದೆ. ಆ ಸರ್ವೆ ಬಳಿಕ…

Read More