Subscribe to Updates
Get the latest creative news from FooBar about art, design and business.
Author: kannadanewsnow09
ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು ಶುಕ್ರ ವಾರ ಗಳ ಕಾಲ ಈ ಪರಿಹಾರವನ್ನು ನೀವು ಪಾಲಿಸಿಕೊಂಡು ಬಂದಿದೆ ಅದರೆ ನಿಮ್ಮ ಜೀವನದಲ್ಲಿ ಎದುರಾಗುತ್ತ ಇರುವಂತಹ ಹಣಕಾಸಿಗೆ ಸಂಬಂಧಪಟ್ಟ ವಿಚಾರಗಳು ಬೇಗ ಪರಿಹರವಾಗುತ್ತದೆ. ಪಂಡಿತ್ ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಅದು ಹೇಗೆ ಅಂತೀರಾ ಈ ಲವಂಗಕ್ಕೆ ಬಹಳ ವಿಶೇಷವಾದ ಶಕ್ತಿ ಇದೆ ಹಾಗೂ ದುಷ್ಟಶಕ್ತಿಯನ್ನು ದೂರ ಮಾಡುವಂತಹ…
ಬೆಂಗಳೂರು: ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು, ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಉತ್ತರ ಪ್ರದೇಶದ ವಾರಣಾಸಿ ನಿಲ್ದಾಣಗಳ ನಡುವೆ 3 ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ವಿವರಗಳು ಈ ಕೆಳಗಿನಂತಿವೆ: ಹುಬ್ಬಳ್ಳಿ- ವಾರಣಾಸಿ ನಿಲ್ದಾಣಗಳ ನಡುವೆ ಮೂರು ಟ್ರಿಪ್ ವಿಶೇಷ ರೈಲು (07383/84) ಸಂಚಾರ ರೈಲು ಸಂಖ್ಯೆ 07383 ಎಸ್ಎಸ್ಎಸ್ ಹುಬ್ಬಳ್ಳಿ – ವಾರಣಾಸಿ ವಿಶೇಷ ಎಕ್ಸ್ಪ್ರೆಸ್ ರೈಲು ಫೆಬ್ರವರಿ 14, 21 ಮತ್ತು 28, 2025 (ಶುಕ್ರವಾರ) ರಂದು ಹುಬ್ಬಳ್ಳಿಯಿಂದ ಬೆಳಿಗ್ಗೆ 8:00 ಗಂಟೆಗೆ ಹೊರಟು, ಭಾನುವಾರದಂದು ಬೆಳಿಗ್ಗೆ 05:30 ಗಂಟೆಗೆ ಉತ್ತರ ಪ್ರದೇಶದ ವಾರಣಾಸಿ ನಿಲ್ದಾಣ ತಲುಪಲಿದೆ. ಪುನಃ ಇದೆ ರೈಲು (07384) ಫೆಬ್ರವರಿ 17, 24 ಮತ್ತು ಮಾರ್ಚ್ 3, 2025 (ಸೋಮವಾರ) ರಂದು ವಾರಣಾಸಿಯಿಂದ ಬೆಳಿಗ್ಗೆ 5:00 ಗಂಟೆಗೆ ಹೊರಟು, ಬುಧವಾರ 12:45 AM ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ. ಈ ರೈಲು…
ನವದೆಹಲಿ: ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅತಿಶಿ ವಿರುದ್ಧ ದೆಹಲಿ ಪೊಲೀಸರು ಮಂಗಳವಾರ ಎಫ್ಐಆರ್ ದಾಖಲಿಸಿದ್ದಾರೆ. ಕಲ್ಕಾಜಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಅತಿಶಿ ಅವರು ಪ್ರಚಾರ ಮುಗಿದ ನಂತರ ಗೋವಿಂದಪುರಿ ಪ್ರದೇಶದಲ್ಲಿ 50 ಕ್ಕೂ ಹೆಚ್ಚು ಬೆಂಬಲಿಗರು ಮತ್ತು 10 ವಾಹನಗಳೊಂದಿಗೆ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ನಿಷೇಧಾಜ್ಞೆಯ ಪ್ರಕಾರ ವಾಹನಗಳನ್ನು ತೆಗೆದುಹಾಕುವಂತೆ ಪೊಲೀಸರು ಕೇಳಿಕೊಂಡರು. ಫ್ಲೈಯಿಂಗ್ ಸ್ಕ್ವಾಡ್ ಅನ್ನು ಕರೆಸಲಾಯಿತು. ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. “4/2/25 ರಂದು ಮುಂಜಾನೆ 12:30 ಕ್ಕೆ, ಕಲ್ಕಾಜಿಯ ಎಎಪಿ ಅಭ್ಯರ್ಥಿ ಶ್ರೀಮತಿ ಅತಿಶಿ (ಎಸಿ -51) 50-70 ಜನರು ಮತ್ತು 10 ವಾಹನಗಳೊಂದಿಗೆ ಗೋವಿಂದಪುರಿಯ ಫತೇಹ್ ಸಿಂಗ್ ಮಾರ್ಗದಲ್ಲಿ ಪತ್ತೆಯಾಗಿದ್ದಾರೆ. ಎಂಸಿಸಿ ಮತ್ತು ನಿಷೇಧಾಜ್ಞೆಯಿಂದಾಗಿ ಪೊಲೀಸರು ಅವರನ್ನು ಖಾಲಿ ಮಾಡುವಂತೆ ಸೂಚನೆ ನೀಡಿದರು. ಡಿಸಿಪಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಎಫ್ಎಸ್ಟಿ ಮತ್ತು ಎಸ್ಎಸ್ಟಿಯನ್ನು ಕರೆಯಲಾಯಿತು. ಎಫ್ಎಸ್ಟಿ ದೂರಿನ ಮೇರೆಗೆ,…
ನವದೆಹಲಿ: ದೇಶದಲ್ಲಿ ಎನ್ ಡಿ ಎ ಅಧಿಕಾರಕ್ಕೆ ಬಂದ ಬಳಿಕ 25 ಕೋಟಿ ಜನರು ಬಡತನ ಮುಕ್ತರಾಗಿದ್ದಾರೆ. ನಾವು ಸುಳ್ಳು ಘೋಷಣೆ ಮಾಡಿಲ್ಲ. ಬಡತನ ನಿವಾರಿಸುವ ಕೆಲಸ ಮಾಡಿದ್ದೇವೆ. ಈವರೆಗೆ ಹೊಸದಾಗಿ 4 ಕೋಟಿ ಮನೆ ನಿರ್ಮಿಸಿಕೊಟ್ಟಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಈ ಉತ್ತರ ನೀಡಿದ್ದಾರೆ. ‘ಶೀಶ್ ಮಹಲ್’ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಕೆಲವು ನಾಯಕರು ತಮ್ಮ ಮನೆಗಳಲ್ಲಿ ಮಸಾಲೆ ಮತ್ತು ಸೊಗಸಾದ ಮಳೆಯತ್ತ ಗಮನ ಹರಿಸಿದ್ದಾರೆ. ಆದರೆ ನಾವು ಪ್ರತಿ ಮನೆಗೆ ನೀರನ್ನು ತರುವತ್ತ ಗಮನ ಹರಿಸಿದ್ದೇವೆ” ಎಂದು ಅವರು ಹೇಳಿದರು. ಇಲ್ಲಿಯವರೆಗೆ ಬಡವರಿಗೆ 4 ಕೋಟಿ ಮನೆಗಳನ್ನು ನೀಡಲಾಗಿದೆ. ಕಷ್ಟಕರ ಜೀವನವನ್ನು ನಡೆಸಿದವರಿಗೆ ಮನೆ ಪಡೆಯುವುದರ ಮೌಲ್ಯವೇನು ಎಂದು ಮಾತ್ರ ಅರ್ಥವಾಗುತ್ತದೆ. ಶೌಚಾಲಯ ವ್ಯವಸ್ಥೆಯ ಕೊರತೆಯಿಂದಾಗಿ…
ಬೆಂಗಳೂರು: ಇಂದು, ವಿಶ್ವ ಕಾನ್ಸರ್ ದಿನದ ಅಂಗವಾಗಿ HCG Cancer Care ರವರಿಂದ ಕ್ಯಾನ್ಸರ್ ಸ್ಕ್ರೀನಿಂಗ್ ತಪಾಸಣಾ ಕಾರ್ಯಕ್ರಮವನ್ನು ಕೆ.ಎಸ್.ಆರ್.ಟಿ.ಸಿಯ, ಬೆಂಗಳೂರು ಕೇಂದ್ರೀಯ ವಿಭಾಗ, ಘಟಕ-2 ರಲ್ಲಿ 1,000 ಕ್ಕೂ ಹೆಚ್ಚು ನೌಕರರಿಗೆ ಉಚಿತವಾಗಿ ORAL and BREAST ಕ್ಯಾನ್ಸರ್ ತಪಾಸಣೆ ಮತ್ತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ವಿ. ಅನ್ಬುಕುಮಾರ್, ಭಾಆಸೇ., ವ್ಯವಸ್ಥಾಪಕ ನಿರ್ದೇಶಕರು, ಕರಾರಸಾ ನಿಗಮ ರವರು ಕ್ಯಾನ್ಸರ್ ತಡೆಗಟ್ಟುವಿಕೆ, ಆರಂಭಿಕ ಪತ್ತೆ ಮತ್ತು ನಿಯಮಿತ ತಪಾಸಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಅವಶ್ಯಕವಾಗಿರುತ್ತದೆ. ನಿಗಮದ ಸಿಬ್ಬಂದಿಗಳು ಹಗಲಿರಳು ಎನ್ನದೆ, ಧೂಳು, ಮಾಲಿನ್ಯ ಮತ್ತು ಎಲ್ಲಾ ಸಂದರ್ಭಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಸಿಬ್ಬಂದಿಗಳು ಆರೋಗ್ಯವಾಗಿದಲ್ಲಿ ನಿಗಮವು ಆರೋಗ್ಯವಾಗಿರುತ್ತದೆ ಎಂಬ ಉದ್ದೇಶದಿಂದ ಆರೋಗ್ಯ ತಪಾಸಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಆದುದರಿಂದ, ಈ ವರ್ಷವನ್ನು “Healthy Employees, Healthy KSRTC” ಎಂದು ಘೋಷಿಸಲಾಗಿದೆ. ಕ್ಯಾನ್ಸರ್ ಜಾಗೃತಿಯ ಮಹತ್ವವನ್ನು ತಿಳಿಸಿ ಮತ್ತು ಜೀವಗಳನ್ನು ಉಳಿಸುವಲ್ಲಿ ಆರಂಭಿಕ ಹಸ್ತಕ್ಷೇಪವು ಪ್ರಮುಖ ಪಾತ್ರ ವಹಿಸುತ್ತದೆ ಎಂದು…
ಬೆಂಗಳೂರು: ಈ ಬಾರಿಯ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ದೇಶ- ವಿದೇಶಗಳ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಹೆಸರಾಂತ ಉದ್ಯಮಗಳ ಪ್ರತಿಷ್ಠಾನಗಳೊಂದಿಗೆ ಉದ್ದೇಶಿತ `ಕ್ವಿನ್ ಸಿಟಿ’ಯಲ್ಲಿ ಅತ್ಯುತ್ಕೃಷ್ಟ ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆಗಳ ಕ್ಷೇತ್ರದಲ್ಲಿ ಸಹಭಾಗಿತ್ವದ ಮೂಲಕ ದಕ್ಷ ಕಾರ್ಯ ಪರಿಸರ ಸೃಷ್ಟಿಸುವ ಕುರಿತು ಪ್ರತ್ಯೇಕ ರೌಂಡ್ ಟೇಬಲ್ ಗೋಷ್ಠಿಯನ್ನು ಏರ್ಪಡಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ. ಮಂಗಳವಾರ ಈ ಬಗ್ಗೆ ಮಾಹಿತಿ ನೀಡಿರುವ ಅವರು, `ಸಮಾವೇಶದ ಎರಡನೆಯ ದಿನವಾದ ಫೆ,13ರಂದು ಈ ಗೋಷ್ಠಿ ನಡೆಯಲಿದೆ. ಈ ಸಂದರ್ಭದಲ್ಲಿ ವಿದೇಶಗಳ 5-6 ಮತ್ತು ಭಾರತದ 7-8 ವಿಶ್ವವಿದ್ಯಾಲಯಗಳೊಂದಿಗೆ ಒಡಂಬಡಿಕೆಗೆ ಸಹಿ ಹಾಕುವ ಸಾಧ್ಯತೆ ಕೂಡ ಇದೆ. ಈ ಸಂಬಂಧ ಮಾತುಕತೆ ಪ್ರಗತಿಯಲ್ಲಿದ್ದು, ಯಾವ ವಿ.ವಿ.ಗಳೊಂದಿಗೆ ಒಡಂಬಡಿಕೆ ಆಗಲಿದೆ ಎನ್ನುವುದನ್ನು ನಂತರದ ದಿನಗಳಲ್ಲಿ ಅಂತಿಮವಾಗಲಿದೆ. ಯುಜಿಸಿ ನಿಯಮಗಳ ಪ್ರಕಾರ, ಜಗತ್ತಿನ ಮೊದಲ 500 ಸ್ಥಾನಗಳಲ್ಲಿರುವ ವಿ.ವಿ.ಗಳು ಭಾರತದಲ್ಲಿ ತಮ್ಮ ಕ್ಯಾಂಪಸ್ಸನ್ನು ತೆರೆಯಲು ಅವಕಾಶವಿದ್ದು, ಇದನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು’…
ಹಾವೇರಿ: ಗಾಯಗೊಂಡಾಗ, ಗಾಯವಾದಾಗ ಅದು ದೊಡ್ಡದಿದ್ದಾಗ ಸ್ಟಿಚ್ ಹಾಕುವುದು ಸರ್ವೇ ಸಾಮಾನ್ಯ. ಆದರೇ ರಾಜ್ಯದಲ್ಲೊಂದು ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಮಹಾ ಎಡವಟ್ಟು ಎನ್ನುವಂತೆ ಗಾಯಕ್ಕೆ ಹೊಲಿಗೆ ಹಾಕೋ ಬದಲು ಫೆವಿಕ್ವಿಕ್ ಹಾಕಿ ಕಳುಹಿಸಿದ್ದಾರೆ. ಇದರಿಂದಾಗಿ ಬಾಲಕ ನರಳಾಡುತ್ತಿರುವಂತ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಟವಾಡುತ್ತಿದ್ದಾಗ ಬಿದ್ದು ಗಾಯಗೊಂಡಿದ್ದಂತ 7 ವರ್ಷದ ಬಾಲಕ ಗುರುಶಿಕನ್ ಅಣ್ಣಪ್ಪ ಹೊಸಮನಿಯನ್ನು ಕರೆದುಕೊಂಡು ಹೋಗಲಾಗಿತ್ತು. ವೈದ್ಯರಿಲ್ಲದ ಕಾರಣ ನರ್ಸ್ ಜ್ಯೋತಿ ಚಿಕಿತ್ಸೆ ನೀಡಿದ್ದಾರೆ. ಗಾಯಗೊಂಡಿದ್ದಂತ ಜಾಗಕ್ಕೆ ಡ್ರೆಸ್ಸಿಂಗ್ ಮಾಡಿ, ಹೊಲಿಗೆ ಹಾಕುವ ಬದಲು ಗಾಯಕ್ಕೆ ಫೆವಿಕ್ವಿಕ್ ಹಚ್ಚಿ, ಅದರ ಮೇಲೆ ಬ್ಯಾಂಡೇಜ್ ಟೇಪ್ ಹಚ್ಚಿ ಕಳುಹಿಸಿದಂತ ಆರೋಪ ಕೇಳಿ ಬಂದಿದೆ. ಬಾಲಕನ ಕೆನ್ನೆಯ ಮೇಲಾದಂತ ಗಾಯಕ್ಕೆ ಸ್ಟಿಚ್ ಬದಲು ಫೆವಿಕ್ವಿಕ್ ಹಾಕಿದ್ದರ ಪರಿಣಾಮ ಬ್ಯಾಂಡೇಜ್ ತೆಗೆಯಲು ಬಾಲಕ ಪರದಾಡುತ್ತಿದ್ದಾರೆ. ಅಲ್ಲದೇ ನರ್ಸ್ ಎಡವಟ್ಟಿನ ವಿರುದ್ಧ ಬಾಲಕನ ಪೋಷಕರು, ಅಡೂರು ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಜನವರಿ 14ರಂದು ನಡೆದಂತ…
ಹಾವೇರಿ: ಕಾಡು ಹಂದಿ ಬೇಟೆಗಾಗಿ ಇರಿಸಿದ್ದಂತ ನಾಡಬಾಂಬ್ ಒಂದು ಸ್ಪೋಟಗೊಂಡ ಪರಿಣಾಮ, ಎಮ್ಮೆಯೊಂದರ ಬಾಯಿ ಗಾಯಗೊಂಡು ನರಳಿ ನರಳಿ ಪ್ರಾಣಬಿಟ್ಟಿರುವಂತ ಘಟನೆ ಹಾವೇರಿಯ ಹಾನಗಲ್ ನಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಹೊಸಕೊಪ್ಪದಲ್ಲಿ ರೈತ ಬಾಷಾಸಾಬ್ ಬಂಕಾಪುರ ಎಂಬುವರ ಎಮ್ಮೆಯನ್ನು ಕಾಡಂಜಿನನಲ್ಲಿ ಮೇಯೋದಕ್ಕೆ ಬಿಡಲಾಗಿತ್ತು. ಮೇವು ತಿನ್ನುವ ವೇಳೆಯಲ್ಲಿ ಕಾಡು ಹಂದಿಗೆ ಇರಿಸಿದ್ದಂತ ನಾಡಬಾಂಬ್ ಅನ್ನು ಕಚ್ಚಿದೆ. ಈ ಪರಿಣಾಮ ನಾಡ ಬಾಂಬ್ ಸ್ಪೋಟಗೊಂಡು ಬಾಯಿ ಛಿದ್ರ ಛಿದ್ರಗೊಂಡು ನರಳಾಡಿದೆ. ನಾಡಬಾಂಬ್ ಸ್ಪೋಟಗೊಂಡು ಗಾಯಗೊಂಡಿದ್ದಂತ ಎಮ್ಮೆಗೆ ಚಿಕಿತ್ಸೆ ಕೊಡಿಸಿದರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದೆ. ಯಾರೋ ದುಷ್ಕರ್ಮಿಗಳು ಕಾಡು ಹಂದಿ ಬೇಟೆಗಾಗಿ ನಾಡಬಾಂಬ್ ಇರಿಸಿದ್ದೇ ಈ ದುರ್ಘಟನೆಗೆ ಕಾರಣ. ಅವರನ್ನು ಪತ್ತೆ ಹಚ್ಚಿ ಬಂದಿಸುವಂತೆ ರೈತ ಬಾಷಾಸಾಬ್ ಆಗ್ರಹಿಸಿದ್ದಾರೆ. https://kannadanewsnow.com/kannada/shimoga-mother-leaves-one-day-old-baby-behind-seeks-trace-of-parents/ https://kannadanewsnow.com/kannada/big-news-brother-has-no-right-over-married-sisters-property-supreme-court-landmark-verdict/ https://kannadanewsnow.com/kannada/applications-invited-for-admission-to-class-6-in-residential-schools/
ಶಿವಮೊಗ್ಗ : ಶಿವಮೊಗ್ಗ ನಗರದ, ಶ್ರೀರಾಂಪುರ ನಗರ, ಮೊದಲ ತಿರುವಿನ ರಸ್ತೆಯ ಪಕ್ಕದಲ್ಲಿ ಕೈಚೀಲದಲ್ಲಿ ಸುಮಾರು 1 ದಿನದ ಗಂಡು ಮಗು ಪತ್ತೆಯಾಗಿದ್ದು ಸಾರ್ವಜನಿಕರು ರಕ್ಷಣೆ ಮಾಡಿ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ, ಡಿಸಿಪಿಯು ಘಟಕ ಮತ್ತು ಮಕ್ಕಳ ಸಹಾಯವಾಣಿ ಅಧಿಕಾರಿಗಳು, ಮಕ್ಕಳ ಕಲ್ಯಾಣ ಸಮಿತಿ ಶಿವಮೊಗ್ಗ ಇಲ್ಲಿಗೆ ದಾಖಲಿಸಿರುತ್ತಾರೆ. ಮಗುವಿನ ಮುಂದಿನ ಪುನರ್ವಸತಿ ಹಿತದೃಷ್ಠಿಯಿಂದ ಮಗುವಿನ ಸಂಬಂಧಿಕರು ಯಾರಾದರೂ ಇದ್ದಲ್ಲಿ ಅಥವಾ ಪೋಷಕರ ಬಗ್ಗೆ ಮಾಹಿತಿ ದೊರೆತಲ್ಲಿ ಸೂಕ್ತ ದಾಖಲಾತಿಯೊಂದಿಗೆ ಅಧೀಕ್ಷಕರು, ಸರ್ಕಾರಿ ಬಾಲಕರ ಬಾಲಮಂದಿರ, ಆಲ್ಕೊಳ, ಶಿವಮೊಗ್ಗ ಇವರ ಕಛೇರಿಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182-295511 ಗೆ ಸಂಪರ್ಕಿಸುವAತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. https://kannadanewsnow.com/kannada/siddaramaiah-to-present-state-budget-on-march-7/ https://kannadanewsnow.com/kannada/big-news-brother-has-no-right-over-married-sisters-property-supreme-court-landmark-verdict/
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಬಜೆಟ್ ಪೂರ್ವ ಸಾಲು ಸಾಲು ಸಭೆಯನ್ನು ಇಲಾಖಾ ವಾರು ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಅವರು ರಾಜ್ಯ ಬಜೆಟ್ ಅನ್ನು ಮಾರ್ಚ್ 7ರಂದು ಮಂಡಿಸಲಿದ್ದಾರೆ ಎಂಬುದಾಗಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಸಿಎಂ ಸಿದ್ಧರಾಮಯ್ಯ ಅವರು ಫೆಬ್ರವರಿ 6ರಂದು ಬಜೆಟ್ ಸಿದ್ಧತೆಯನ್ನು ಆರಂಭಿಸಲಿದ್ದಾರೆ. ಫೆಬ್ರವರಿ 6, 2025ರಿಂದ ಫೆಬ್ರವರಿ.14, 2025ರವರೆಗೆ ಕರ್ನಾಟಕ ಬಜೆಟ್ ಪೂರ್ವಭಾವಿ ಸಭೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನಡೆಸಲಿದ್ದಾರೆ. ಶಕ್ತಿ ಭವನದಲ್ಲಿ ವಿವಿಧ ಇಲಾಖೆಗಳ ಬೇಡಿಕೆಗಳ ಕುರಿತು ಬಜೆಟ್ ಸಿದ್ಧತಾ ಸಭೆಯನ್ನು ಮಾಡಲಿದ್ದಾರೆ. ಈ ಹಿನ್ನಲೆಯಲ್ಲಿ ಬಜೆಟ್ ಸಿದ್ಧತಾ ಸಭೆಯ ಬಳಿಕ ಸಿಎಂ ಸಿದ್ಧರಾಮಯ್ಯ ಅವರು ಮಾರ್ಚ್ ಮೊದಲ ವಾರ ರಾಜ್ಯ ಬಜೆಟ್ ಮಂಡನೆ ಮಾಡೋ ನಿರೀಕ್ಷೆಯಿದೆ. ಮಾರ್ಚ್ ಮೊದಲ ವಾರದಲ್ಲಿ ಜಂಟಿ ಅಧಿವೇಶನ ನಡೆಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಮಾರ್ಚ್.3ರಂದು ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇನ್ನೂ ಮಾರ್ಚ್.7ರಂದು ರಾಜ್ಯ ಬಜೆಟ್ ಅನ್ನು ಸಿಎಂ ಸಿದ್ಧರಾಮಯ್ಯ ಅವರು ಮಂಡಿಸಲಿದ್ದಾರೆ ಎಂದು…