Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ( KUWJ) ತುಮಕೂರು, ಚಿತ್ರದುರ್ಗ ಜಿಲ್ಲಾ ಘಟಕಗಳ ಕಾರ್ಯಕಾರಿ ಸಮಿತಿ ಚುನಾವಣೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಅದೇ ರೀತಿ ಮಂಡ್ಯ ಜಿಲ್ಲಾ ಘಟದ ಚುನಾವಣೆಗೂ ತಡೆಯಾಜ್ಞೆ ನೀಡಬೇಕೆಂಬ ಮನವಿಯನ್ನು ಸ್ಥಳೀಯ ಸಿವಿಲ್ ನ್ಯಾಯಾಲಯ ತಿರಸ್ಕರಿಸಿದ್ದು, ರಾಜ್ಯದ 20 ಜಿಲ್ಲೆಗಳಿಗೆ ನವಂಬರ್ 9ರಂದು ಭಾನುವಾರ ನಿಗದಿಯಂತೆ ಚುನಾವಣೆ ನಡೆಯಲಿದೆ. ತುಮಕೂರು,ಚಿತ್ರದುರ್ಗ ಜಿಲ್ಲಾ ಘಟಕಗಳ ಚುನಾವಣೆಯಲ್ಲಿ ಅರ್ಜಿದಾರರು ಸದಸ್ಯತ್ವ, ಮತದಾನದ ಹಕ್ಕು ಮತ್ತು ನಾಮಪತ್ರ ತಿರಸ್ಕೃತ ಸಂಬಂಧ ಹೈಕೋರ್ಟ್ ನಲ್ಲಿ ರಿಟ್ ಪಿಟಿಶನ್ ಸಲ್ಲಿಸಿದ್ದು, ಚುನಾವಣೆಗೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿಕೊಂಡಿದ್ದರು. ಆದರೆ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಪೀಠ ಮತದಾನಕ್ಕೆ ಇನ್ನೆರೆಡು ದಿನಗಳು ಉಳಿದಿದ್ದು,ಎಲ್ಲಾ ಪ್ರಕ್ರಿಯೆ ಮುಗಿಯುವ ಹಂತದಲ್ಲಿರುವುದನ್ನು ಪರಿಗಣಿಸಿ ತಡೆಯಾಜ್ಞೆ ನೀಡಲು ನಿರಾಕರಿಸಿ, ವಿಚಾರಣೆಯನ್ನು ಮುಂದೂಡಿದ್ದಾರೆ. ಇದರಿಂದ ತುಮಕೂರು ,ಚಿತ್ರದುರ್ಗದ KUWJ ಜಿಲ್ಲಾಘಟಕಗಳ ಚುನಾವಣೆಗೆ ನಿಗದಿಯಂತೆ ನ. 9 ರಂದು ನಡೆಯಲಿದೆ. Kuwj ಬೆಂಗಳೂರು ನಗರ ಘಟಕದ ಚುನಾವಣೆಗೆ ಸಿವಿಲ್ ನ್ಯಾಯಾಲಯ ಎಕ್ಸ್…
ಬೆಂಗಳೂರು: ರಾಜ್ಯ ಸರ್ಕಾರದಿಂದ ಸಾಗರ ನಗರಸಭೆಗೆ ಶಿವಮೊಗ್ಗ ಜಿಲ್ಲಾಧಿಕಾರಿಯನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರವು ವಿಶೇಷ ರಾಜ್ಯ ಪತ್ರವನ್ನು ಹೊರಡಿಸಲಾಗಿದ್ದು, ಕರ್ನಾಟಕ ಪೌರಸಭೆಗಳ ಅಧಿನಿಯಮದ ಕಲಂ 11ರ ಉಪ ಕಲಂ (2) (3) (4) ಹಾಗೂ ಕಲಂ 42 (2ಎ) ರನ್ವಯ ಮತ್ತು ಸರ್ಕಾರದ ಮಾರ್ಗಸೂಚಿ ಸಂಖ್ಯೆ: ನಅಇ 65 ಎಂಎಲ್ಆರ್ 2020, ದಿನಾಂಕ 11-09-2020 ರಲ್ಲಿ ಸ್ಪಷ್ಟಪಡಿಸಿರುವಂತೆ ರಾಜ್ಯದಲ್ಲಿರುವ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಗಳಿಗೆ ವಿವಿಧ ಪ್ರವರ್ಗಗಳ ಮೀಸಲಾತಿಯನ್ನು 9ನೇ ಅವಧಿಗೆ ನಿಗದಿಪಡಿಸಿ ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 107 ಎಂಎಲ್ಆರ್ 2020 ನ್ನು ದಿನಾಂಕ: 08-10-2020 ರಂದು ಹೊರಡಿಸಲಾಗಿದೆ. ಈ ಆದೇಶವನ್ನು ಪ್ರಶ್ನಿಸಿ ಶ್ರೀ ಅರ್.ಬಸವರಾಜು ಚನ್ನಗಿರಿ ರವರು ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಂಖ್ಯೆ: 11566/2020 ನ್ನು ದಾಖಲಿಸಿದ್ದು, ಮಾನ್ಯ ನ್ಯಾಯಾಲಯವು ಈ ರಿಟ್ ಅರ್ಜಿ ಹಾಗೂ ಇದೇ ರೀತಿ…
ಬೆಂಗಳೂರು: ಬಿ ಎಂ ಆರ್ ಸಿ ಎಲ್ ಅತ್ಯಾವಶ್ಯಕ ಸೇವೆ ವ್ಯಾಪ್ತಿಗೆ ಒಳಪಡಿಸುವಂತ ಅಧಿಕಾರವು ರಾಜ್ಯ ಸರ್ಕಾರಕ್ಕೆ ಇಲ್ಲ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಕುರಿತಂತೆ ಹಿಎಂ ಆರ್ ಸಿಎಲ್ ಉದ್ಯೋಗಿಗಳ ಸಂಘದಿಂದ ಸಲ್ಲಿಸಿದ್ದಂತ ರಿಟ್ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಹೈಕೋರ್ಟ್ ಪೀಠವು ಈ ತೀರ್ಪು ನೀಡಿದೆ. ಅಲ್ಲದೇ ಜುಲೈ 7, 2017ರಂದು ರಾಜ್ಯ ಸರ್ಕಾರ ಹೊರಡಿಸಿದ್ದಂತ ಆದೇಶವನ್ನು ರದ್ದುಪಡಿಸಿದೆ. ಸಾರ್ವಜನಿಕ ಉಪಯುಕ್ತ ಸೇವೆ ಎಂದು ರಾಜ್ಯ ಸರ್ಕಾರ ಆದೇಶಿಸುವಂತಿಲ್ಲ. ಬಿಎಂಆರ್ ಸಿಎಲ್ ಪ್ರತ್ಯೇಕ ಕಂಪನಿಯಲ್ಲ. ರೈಲ್ವೆ ಕಂಪನಿಯಾಗಿದೆ. ಹೀಗಾಗಿ ಕೇಂದ್ರ ಸರ್ಕಾರವೇ ಆಡಳಿತಾತ್ಮಕ ಅಧಿಕಾರ ಹೊಂದಿದೆ ಎಂಬುದಾಗಿ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠವು ಮಹತ್ವದ ತೀರ್ಪು ನೀಡಿದೆ. https://kannadanewsnow.com/kannada/illegal-ore-transportation-case-interim-bail-granted-to-mla-satish-sail-cancelled/ https://kannadanewsnow.com/kannada/the-puja-rituals-of-the-new-dodda-ankanahalli-huchamma-devi-temple-begin-from-today/
ಮಂಡ್ಯ : 2025ರ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಮದ್ದೂರು ನಗರದ ಪೂರ್ಣಪ್ರಜ್ಞ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸಾನಿಕ. ಟಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಂಸದೀಯ ವ್ಯವಹಾರಗಳ ಇಲಾಖೆ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಮಂಡ್ಯ ಇವರ ಸಹಯೋಗದಲ್ಲಿ ದಿ. 6-11-2025 ರಂದು ಏರ್ಪಡಿಸಿದ್ದ 2025 ರ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಮದ್ದೂರು ನಗರದ ಪೂರ್ಣಪ್ರಜ್ಞ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಟಿ. ಸಾನಿಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ವಿದ್ಯಾರ್ಥಿನಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಬಿ. ಧನಂಜಯ, ಸಂಸ್ಥೆಯ ಅಧ್ಯಕ್ಷೆ ಪಿ.ಕಸ್ತೂರಿ, ಮುಖ್ಯ ಶಿಕ್ಷಕ ಹೆಚ್.ಆರ್.ಅನಂತೇಗೌಡ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದರು. https://kannadanewsnow.com/kannada/the-puja-rituals-of-the-new-dodda-ankanahalli-huchamma-devi-temple-begin-from-today/ https://kannadanewsnow.com/kannada/illegal-ore-transportation-case-interim-bail-granted-to-mla-satish-sail-cancelled/
ಮಂಡ್ಯ : ಮದ್ದೂರು ತಾಲೂಕಿನ ಆತಗೂರು ಹೋಬಳಿಯ ದೊಡ್ಡ ಅಂಕನಹಳ್ಳಿ ಗ್ರಾಮದಲ್ಲಿ ಶುಕ್ರವಾರ ( ನವೆಂಬರ್ 7 ರಿಂದ 10 ವರೆಗೆ ) ದಿಂದ ಹುಚ್ಚಮ್ಮ ದೇವಿ ದೇವಾಲಯದ ನೂತನ ಕಟ್ಟಡ ಲೋಕಾರ್ಪಣೆ ಮತ್ತು ಕುಂಭಾಭಿಷೇಕ ಹಾಗೂ ಜಾತ್ರ ಮಹೋತ್ಸವ ಅದ್ದೂರಿಯಾಗಿ ನೆರವೇರಲಿದೆ. ನವಂಬರ್ 07 ರಂದು ಸಂಜೆ ಗೋಧೂಳಿ ಲಗ್ನದಲ್ಲಿ ಅಮ್ಮನವರ ಬಾಲಾಲಯದ ಸನ್ನಿಧಾನದಲ್ಲಿ ಶ್ರೀ ಮಹಾ ಗಣಪತಿಪೂಜೆ, ಶುದ್ದಿಪುಣ್ಯಾಹ, ಪಂಚಗವ್ಯಸಾಧನೇ, ತೀರ್ಥಪ್ರೋಕ್ಷಣೆ ಮೂಲಕ ಯಾಗಾಶಾಲಾ ಪೂರ್ವಸಿದ್ಧತೆ ಮಾಡುವುದು. ನ.8 ರಂದು ಬೆಳಿಗ್ಗೆ 7.50 ಕ್ಕೆ ಅನುಜ್ಞೆ, ಸುವಾಸಿನಿ, ಸವತ್ತಧೇನು ಸಮೇತ, ಅಕ್ರೋಧಕ ತೀರ್ಥಸಂಗ್ರಹ, ಪ್ರವೇಶಬಲಿ, ಯಾಗಾಶಾಲಾಪ್ರವೇಶ, ಶ್ರೀ ಮಹಾಗಣಪತಿ ಪೂಜೆ, ಶುಬ್ಧ ಪುಣ್ಯಾಹ, ಪಂಚಗವ್ಯ, ತೀರ್ಥಪ್ರೋಕ್ಷಣೆ, ಆಲಯಶುದ್ದಿ, ದೇವನಾಂಬ, ಪ್ರತಿಮಾಸ್ವೀಕಾರ, ಮೃತ್ಸಂಗ್ರಹಣ, ಅಂಕುರಾರ್ಪಣೆ, ರಕ್ಷಾಬಂಧನ, ಗುತ್ತಿಗ್ಧರಣ, ಜಲಾಧಿವಾಸ, ವಾಸ್ತುರಾಷ್ಟ್ರೀಘ್ರಪೂಜೆ, ಕಳಸಾಭಿವಾಸ, ಪ್ರತಿಮಾಶೋಧನೆ, ದಶದಿಕ್ಷಾಲಕ ಕಳಸಾರಾಧನೆ, ಮೃತ್ಯಂಜಯಸಮೇತ, ನವಗ್ರಹರಾಧನೆ, ಧಾನ್ಯಾಧಿವಾಸ, ಸಿದ್ಧಿವಲ್ಲಭಸಮೇತ, ಗಣಪತಿಪೂಜೆ, ವಲ್ಲದೇವಸೇನಾಸಮೇತ, ಶ್ರೀ ಸುಬ್ಬಮಣ್ಯಸ್ವಾಮಿ, ಕಳಶಾರಾಧನೆ, ಗಣಹೋಮ, ವಾಸ್ತುರಾಕ್ಷೆಘ್ನಹೋಮ, ಪರ್ಯಗ್ನಿಕರಣ, ಶೆಯ್ಯಾಭಿವಾಸ, ಮಹಾ ಮ0ಗಳಾರತಿ, ತೀರ್ಥಪ್ರಸಾದ ವಿನಿಯೋಗ…
ಬೆಂಗಳೂರು: ಶಾಸಕ ಸತೀಶ್ ಸೈಲ್ ಗೆ ಬಿಗ್ ಶಾಕ್ ಎನ್ನುವಂತೆ ಬೆಲೆಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯವು ನೀಡಿದ್ದಂತ ಮಧ್ಯಂತ ಜಾಮೀನನ್ನು ರದ್ದುಗೊಳಿಸಲಾಗಿದೆ. ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್.25ರಂದು ಹೈಕೋರ್ಟ್ ಶಾಸಕ ಸತೀಶ್ ಸೈಲ್ ಗೆ ಜಾಮೀನು ಮಂಜೂರು ಮಾಡಿತ್ತು. ಅನಾರೋಗ್ಯಕ್ಕೆ ಚಿಕಿತ್ಸೆ ಕಾರಣಕ್ಕಾಗಿ ಈ ಜಾಮೀನು ಮಂಜೂರು ಮಾಡಲಾಗಿತ್ತು. ಇಂದಿನವರೆಗೆ ಜಾಮೀನು ವಿಸ್ತರಣೆ ಕೂಡ ಆಗಿತ್ತು. ಇಂದು ಈ ಪ್ರಕರಣದ ವಿಚಾರಣೆ ನಡೆಸಿದಂತ ಜನಪ್ರತಿನಿಧಿಗಳ ನ್ಯಾಯಾಲಯವು ಅವರಿಗೆ ನೀಡಿದ್ದಂತ ಮಧ್ಯಂತರ ಜಾಮೀನು ರದ್ದುಗೊಳಿಸಿದೆ. ಹೀಗಾಗಿ ಶಾಸಕ ಸತೀಶ್ ಸೈಲ್ ಮತ್ತೆ ಜೈಲುಪಾಲಾಗಲಿದ್ದಾರೆ ಎನ್ನಲಾಗುತ್ತಿದೆ. https://kannadanewsnow.com/kannada/cm-siddaramaiah-is-shirking-responsibility-for-not-resolving-the-problems-of-sugarcane-farmers-hdk/ https://kannadanewsnow.com/kannada/did-the-authorities-really-give-duty-to-a-bmtc-driver-who-was-drunk-what-is-the-real-truth-read-here/
ಬೆಂಗಳೂರು: ಬೆಳಗಾವಿಯಲ್ಲಿ ಪ್ರತಿಭಟನಾನಿರತ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಪರವಾಗಿ ಸತತ 7 ಗಂಟೆಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಪರ ಖಚಿತ ನಿಲುವು ತೆಗೆದುಕೊಂಡು, ಟನ್ ಕಬ್ಬಿಗೆ 3300 ರೂ ಕೊಡಲು ನಿರ್ಧರಿಸಿದೆ. ಸತತ ಏಳು ಗಂಟೆಗಳ ನಿರಂತರ ಸಭೆ ಬಳಿಕ ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ನಿರ್ಧಾರ ಪ್ರಕಟಿಸಿದರು. ಸರ್ಕಾರ ಮತ್ತು ಕಾರ್ಖಾನೆ ಮಾಲೀಕರು ತಲಾ 50ರೂ ಸೇರಿಸಿ ರೈತರಿಗೆ ಟನ್ ಗೆ 3300 ಕೊಡಲು ತೀರ್ಮಾನ ಮಾಡಲಾಗಿದೆ ಎಂದರು. ರಾಜ್ಯದಲ್ಲಿ 81 ಸಕ್ಕರೆ ಕಾರ್ಖಾನೆಗಳಿವೆ. ಇವುಗಳಲ್ಲಿ 11 ಸಹಕಾರಿ ಕಾರ್ಖಾನೆಗಳು ಒಂದು ಕಾರ್ಖಾನೆ ಮಾತ್ರ ಸರ್ಕಾರಿ ಸೌಮ್ಯದ್ದು. ಉಳಿದವೆಲ್ಲಾ ಖಾಸಗಿ ಸಕ್ಕರೆ ಕಾರ್ಖಾನೆಗಳಾಗಿವೆ. ಅಕ್ಟೋಬರ್ 30ರಿಂದ ಬೆಳಗಾವಿ ರೈತರು ಕೇಂದ್ರ ಸರ್ಕಾರದ FRP ದರ ವಿರೋಧಿಸಿ ಇನ್ನೂ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆಗೆ ಇಳಿದಿದ್ದಾರೆ. ಪ್ರತಿಭಟನಾ ನಿರತ ರೈತ ಮುಖಂಡರ ಜೊತೆಗೆ ಬೆಳಗಾವಿ ಜಿಲ್ಲಾಧಿಕಾರಿಗಳು ಮಾತುಕತೆ ನಡೆಸಿದ್ದರು. ಆದರೆ ಮಾತುಕತೆ ವಿಫಲವಾದ…
ನವದೆಹಲಿ: ಗಾಜಿಯಾಬಾದ್ನ 31 ವರ್ಷದ ಮಹಿಳೆಯೊಬ್ಬರು ತಮ್ಮ ಜೀವನದಲ್ಲಿ ಎಂದಿಗೂ ಧೂಮಪಾನ ಮಾಡಿಲ್ಲ, ಮೊದಲು ರಕ್ತದೊಂದಿಗೆ ಕೆಮ್ಮಿದರು, ಅದು ಅವರ ನೆರೆಹೊರೆಯ ವೈದ್ಯರು ಸೂಚಿಸಿದ ಕೆಲವು ಔಷಧಿಗಳಿಂದ ಕಡಿಮೆಯಾಯಿತು. ಆದರೆ ನಂತರ ಅವರಿಗೆ ಎಡಭಾಗದ ಎದೆ ನೋವು ಅನುಭವಿಸಿತು. ಶ್ವಾಸಕೋಶದ ಸೋಂಕಿಗೆ ಹೆದರಿ, ಅವರು ಹತ್ತಿರದ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರಣ ಗುರುಗ್ರಾಮ್ನ ಮೆಡಾಂತಾದಲ್ಲಿರುವ ಶ್ವಾಸಕೋಶ ಕಸಿ, ಎದೆ ಶಸ್ತ್ರಚಿಕಿತ್ಸೆ/ಆಂಕೊಸರ್ಜರಿಯ ಅಧ್ಯಕ್ಷ ಡಾ. ಅರವಿಂದ್ ಕುಮಾರ್ ಅವರ ಚಿಕಿತ್ಸಾಲಯಕ್ಕೆ ನಡೆದರು. “ಎಕ್ಸ್-ರೇ ಅವರ ಎಡ ಶ್ವಾಸಕೋಶದ ಮೇಲ್ಭಾಗದಲ್ಲಿ ಗೆಡ್ಡೆ ಇರುವುದು ಕಂಡುಬಂದಿದೆ. ಬಯಾಪ್ಸಿ ಹಂತ 2 ಶ್ವಾಸಕೋಶದ ಕ್ಯಾನ್ಸರ್ ಅನ್ನು ದೃಢಪಡಿಸಿತು, ಇದು ಚಿಕಿತ್ಸೆ ನೀಡಬಹುದಾದ ಕಿಟಕಿಯಾಗಿದೆ. ಅವರು ರೋಗ ಮುಕ್ತರಾಗಿದ್ದಾರೆ ಮತ್ತು ಕೆಲಸಕ್ಕೆ ಮರಳಿದ್ದಾರೆ ಆದರೆ ಅವರ ಪ್ರಕರಣವು ಗೊಂದಲದ ಪ್ರವೃತ್ತಿಯನ್ನು ತೋರಿಸುತ್ತದೆ” ಎಂದು ಅವರು ಹೇಳುತ್ತಾರೆ. ಸಾಮಾನ್ಯವಾಗಿ, ಶ್ವಾಸಕೋಶದ ಕ್ಯಾನ್ಸರ್ ಧೂಮಪಾನಿಗಳೊಂದಿಗೆ, ಸಾಮಾನ್ಯವಾಗಿ 50 ವರ್ಷಕ್ಕಿಂತ ಮೇಲ್ಪಟ್ಟವರೊಂದಿಗೆ ಮತ್ತು ಪುರುಷರೊಂದಿಗೆ ಸಂಬಂಧಿಸಿದೆ. ಆದರೆ ಡಾ. ಕುಮಾರ್ ಅವರ OPD…
ಬೆಂಗಳೂರು: ರಾಜ್ಯ ಸರ್ಕಾರವು ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದಿದೆ. ನಿನ್ನೆ ರೂ.3,200 ಪ್ರತಿ ಟನ್ ಗೆ ನೀಡುವುದಾಗಿ ತಿಳಿಸಿದ್ದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಇಂದು ರೂ.3,200 ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರಿಂದ ಹೆಚ್ಚುವರಿಯಾಗಿ ರೂ.50 ಮತ್ತು ಸರ್ಕಾರದಿಂದ 50 ರೂ ಸೇರಿದಂತೆ ಪ್ರತಿ ಟನ್ ಕಬ್ಬಿಗೆ ರೂ.3,300 ನೀಡುವುದಾಗಿ ಘೋಷಣೆ ಮಾಡಿದರು. ಇಂದು ಸಕ್ಕರೆ ಕಾರ್ಖಾನೆ ಮಾಲೀಕರು, ಕಬ್ಬು ಬೆಳೆಗಾರ ರೈತರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ರಾಜ್ಯದಲ್ಲಿ 12 ಕಾರ್ಖಾನೆ ಹೊರತುಪಡಿಸಿದರೇ ಉಳಿದೆಲ್ಲವೂ ಖಾಸಗಿಯವು. ದಿನಾಂಕ 06-05-2025ರಂದು ಎಫ್ ಆರ್ ಸಿ ಯನ್ನು ಕೇಂದ್ರ ಸರ್ಕಾರ ನಿಗದಿ ಮಾಡಿದೆ. 2025-26ನೇ ಸಾಲಿನಲ್ಲಿ 10.25 ರಿಕವರಿ ಇದ್ದರೇ ಟನ್ ಗೆ ರೂ.3,550 ರೂ ನಿಗದಿ ಪಡಿಸಲಾಗಿದೆ. ಇದರಲ್ಲಿ ಕಟಾವು, ಸಾರಿಗೆ ವೆಚ್ಚವೂ ಸೇರಿರುತ್ತದೆ ಎಂಬುದಾಗಿ ತಿಳಿಸಿದರು. 9.5 ರಿಕವರಿಗಿಂತ ಕಡಿಮೆ ಇದ್ದರೇ 3290.50 ರೂಪಾಯಿ ನಿಗದಿ ಪಡಿಸಲಾಗಿದೆ. ಎಫ್ ಆರ್ ಪಿ ಗಿಂತ ಹೆಚ್ಚಿನ ದರವನ್ನು ನೀಡುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ.…
ಬೆಂಗಳೂರು: ಕಬ್ಬು ಬೆಳೆಗಾರರು ಬೆಲೆ ನಿಗದಿಗೆ ಒತ್ತಾಯಿಸಿ ನಡೆಸುತ್ತಿರುವಂತ ಪ್ರತಿಭಟನೆ ಸಂಬಂಧ ಇಂದು ಬೆಳಗ್ಗೆಯಿಂದ ಕಾರ್ಖಾನೆ ಮಾಲೀಕರು, ರೈತರೊಂದಿಗೆ ಸಭೆ ನಡೆಸಿದ್ದೇನೆ. ಪ್ರತಿ ಟನ್ ಕಬ್ಬಿಗೆ ರೂ.3,300 ನೀಡಲು ನಿರ್ಧರಿಸಿರುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದರು. ರಾಜ್ಯದಲ್ಲಿ 12 ಕಾರ್ಖಾನೆ ಹೊರತುಪಡಿಸಿದರೇ ಉಳಿದೆಲ್ಲವೂ ಖಾಸಗಿಯವು. ದಿನಾಂಕ 06-05-2025ರಂದು ಎಫ್ ಆರ್ ಸಿ ಯನ್ನು ಕೇಂದ್ರ ಸರ್ಕಾರ ನಿಗದಿ ಮಾಡಿದೆ. 2025-26ನೇ ಸಾಲಿನಲ್ಲಿ 10.25 ರಿಕವರಿ ಇದ್ದರೇ ಟನ್ ಗೆ ರೂ.3,550 ರೂ ನಿಗದಿ ಪಡಿಸಲಾಗಿದೆ. ಇದರಲ್ಲಿ ಕಟಾವು, ಸಾರಿಗೆ ವೆಚ್ಚವೂ ಸೇರಿರುತ್ತದೆ ಎಂಬುದಾಗಿ ತಿಳಿಸಿದರು. 9.5 ರಿಕವರಿಗಿಂತ ಕಡಿಮೆ ಇದ್ದರೇ 3290.50 ರೂಪಾಯಿ ನಿಗದಿ ಪಡಿಸಲಾಗಿದೆ. ಎಫ್ ಆರ್ ಪಿ ಗಿಂತ ಹೆಚ್ಚಿನ ದರವನ್ನು ನೀಡುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾನಿರತ ರೈತರ ಜೊತೆಗೆ ಡಿಸಿ, ಎಸ್ ಪಿ ಸಭಎ ವಿಫಲವಾಗಿತ್ತು ಎಂದರು. ಪ್ರತಿ ಟನ್ ಕಬ್ಬಿಗೆ ರೂ.3,500 ನೀಡುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಈಗಾಗಲೇ ಈ ವಿಷಯ ಸಂಬಂಧ ಕೇಂದ್ರ ಸರ್ಕಾರಕ್ಕೆ…














