Author: kannadanewsnow09

ಬೆಂಗಳೂರು: ನಿನ್ನೆ ನಿಧನರಾಗಿದ್ದಂತ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರ ಅಂತ್ಯಕ್ರಿಯೆಯನ್ನು ಇಂದು ಅವರ ಹುಟ್ಟೂರು ಬಿಡದಿಯ ಉರುಗಹಳ್ಳಿಯಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ನಿನ್ನೆ ನಿಧನರಾದಂತ ಮಾಜಿ ಐಎಎಸ್ ಅಧಿಕಾರಿ ಹಾಗೂ ನಟ ಕೆ. ಶಿವರಾಮ್ ಅವರ ಅಂತ್ಯಕ್ರಿಯೆಯನ್ನು ಅವರ ಹುಟ್ಟೂರು ಬಿಡದಿಯ ಉರುಗಹಳ್ಳಿಯಲ್ಲಿ ಮಾಡುವುದಾಗಿ ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಶಿವರಾಂ ಅವರ ಅಂತ್ಯಕ್ರಿಯೆಯನ್ನು ಛಲವಾದಿ ಮಹಾಸಭಾದ ಜಾಗದಲ್ಲಿ ಮಾಡಬೇಕು ಎಂದು ಅವರ ಅಭಿಮಾನಿಗಳು ಒತ್ತಾಯಿಸಿದ್ದರು. ಸರಕಾರ ಅದಕ್ಕೆ ಸಮ್ಮತಿ ನೀಡದೇ ಇರುವ ಕಾರಣದಿಂದಾಗಿ ಹುಟ್ಟೂರಿಗೆ ಪಾರ್ಥೀವ ಶರೀರವನ್ನು ತಗೆದುಕೊಂಡು ಹೋಗಲಾಗುತ್ತಿದೆ. ಇಂದು ಸಂಜೆ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರ ಅಂತ್ಯಕ್ರಿಯೆಯನ್ನು ಅವರ ಬಿಡದಿಯ ಹುಟ್ಟೂರು ಉರುಗಹಳ್ಳಿಯಲ್ಲಿ ನೆರವೇರಿಸಲಾಗುತ್ತಿದೆ. https://kannadanewsnow.com/kannada/bomb-blast-at-rameswaram-cafe-in-bengaluru-cm-siddaramaiah/ https://kannadanewsnow.com/kannada/kpsc-recruitment-for-364-posts-of-land-surveyors/

Read More

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಕಡಿಮೆ ತೀವ್ರತೆಯ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ದೃಢಪಡಿಸಿದ್ದಾರೆ. ಶುಕ್ರವಾರ ಮಧ್ಯಾಹ್ನ ಜನಪ್ರಿಯ ಉಪಾಹಾರ ಗೃಹದಲ್ಲಿ ಸಂಭವಿಸಿದ ಸ್ಫೋಟದಲ್ಲಿ 9 ಜನರು ಗಾಯಗೊಂಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ವ್ಯಕ್ತಿಯೊಬ್ಬ ಕೆಫೆಯಲ್ಲಿ ಚೀಲವನ್ನು ಬಿಟ್ಟು ಹೋಗುತ್ತಿರುವುದು ಕಂಡುಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ದೃಢಪಡಿಸಿದ್ದಾರೆ. ಆರಂಭಿಕ ವರದಿಗಳು ಚೀಲದಲ್ಲಿದ್ದ ವಸ್ತುವು ಕೆಫೆಯಲ್ಲಿ ಸ್ಫೋಟಕ್ಕೆ ಕಾರಣವಾಯಿತು ಎಂದು ಸೂಚಿಸಿತ್ತು. ಪರಿಸ್ಥಿತಿಯನ್ನು ಪರಿಶೀಲಿಸಲು ರಾಜ್ಯ ಗೃಹ ಸಚಿವರು ಕೆಫೆಗೆ ತೆರಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು. ತಮ್ಮ ಸರ್ಕಾರದ ಅಡಿಯಲ್ಲಿ ಮೊದಲ ಬಾರಿಗೆ ಸ್ಫೋಟ ಸಂಭವಿಸಿದೆ ಎಂದು ಸಿಎಂ ಹೇಳಿದರು. ಬೆಂಗಳೂರು ಕೆಫೆಯಲ್ಲಿ ಸ್ಫೋಟ: 9 ಮಂದಿಗೆ ಗಾಯ ನಗರದ ಪ್ರಸಿದ್ಧ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ನಿಗೂಢ ಸ್ಫೋಟದಲ್ಲಿ ಒಂಬತ್ತು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಹಠಾತ್ ಸ್ಫೋಟ ಸಂಭವಿಸಿದ್ದು, ಗ್ರಾಹಕರು ಜೀವ ಉಳಿಸಿಕೊಳ್ಳಲು…

Read More

ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವಂತ ನಿಗೂಢ ಸ್ಪೋಟಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇ ಸುಧಾರಿತ ಐಇಡಿ ಬಳಸಿ ಸ್ಪೋಟಿಸಿರೋ ಶಂಕೆಯನ್ನು ಪೊಲೀಸರು ವ್ಯಕ್ತ ಪಡಿಸಿದ್ದಾರೆ. ಇದಕ್ಕೆ ಪುಷ್ಟೀಕರಣ ಎನ್ನುವಂತೆ ಐಡಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ ರಾಮೇಶ್ವರಂ ಕಫೆಯಲ್ಲಿ ಮಧ್ಯಾಹ್ನ 1 ಗಂಟೆಗೆ ಬಾಂಬ್ ಬ್ಲಾಸ್ಟ್ ಆಗಿದೆ ಎಂಬುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು, ಎಫ್ಎಸ್ಎಲ್ ತಜ್ಞರ ತಂಡವು ಪರಿಶೀಲನೆ ನಡೆಸುತ್ತಿದೆ. ಶ್ವಾನದಳದ ಸಿಬ್ಬಂದಿಯೂ ಸ್ಥಳದಲ್ಲಿದ್ದಾರೆ. ಪೊಲೀಸರು ಸಂಪೂರ್ಣ ತನಿಖೆಯನ್ನು ನಡೆಸುತ್ತಿದ್ದು, ತನಿಖೆಯ ನಂತ್ರ ಸ್ಪೋಟಕದ ಹಿಂದಿನ ಕಾರಣ ಏನು ಎಂಬುದು ತಿಳಿದು ಬರಬೇಕಿದೆ ಎಂದರು. ಮತ್ತೊಂದೆಡೆ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಈಗ ಬಿಗ್‌ ಟ್ವಿಸ್ಟ್ ಸಿಕ್ಕಿದೆ. ಸ್ಪೋಟದ ಜಾಗದಲ್ಲಿ ಸಾಕ್ಷ್ಯ ಗಳ ಪರಿಶೀಲನೆ ಮಾಡುತ್ತಿರುವ ಪೊಲೀಸರು ಉಗ್ರರ ಕೃತ್ಯ ಇರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಐಇಡಿ (impoverished explossive device – ಸುಧಾರಿತ ಸ್ಪೋಟಕ್ಕೆ ಸಾಮಾಗ್ರಿ) ಬಳಕೆ ಮಾಡಿಕೊಂಡು ಸ್ಪೋಟ ಮಾಡಿರುವ…

Read More

ಮೈಸೂರು: ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ಇಂದು ನಿಗೂಢ ಸ್ಪೋಟ ಸಂಭವಿಸಿತ್ತು. ಆ ಘಟನೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಆ ಕುರಿತಂತೆ ಸಿಎಂ ಸಿದ್ಧರಾಮಯ್ಯ ಏನು ಹೇಳಿದರು ಅಂತ ಮುಂದೆ ಓದಿ. ಈ ಕುರಿತಂತೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇತ್ತೀಚೆಗೆ ಯಾವತ್ತೂ ಹೀಗೆ ಆಗಿರಲಿಲ್ಲ. ಮಂಗಳೂರು ಬ್ಲಾಸ್ಟ್ ನಂತ್ರ ರಾಜ್ಯದಲ್ಲಿ ಹೀಗೆ ಆಗಿರಲಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲೇ ಆಗಿದ್ದು. ಯಾರು ಮಾಡಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಿ. ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಈ ತರದ ವಿಚಾರದಲ್ಲಿ ರಾಜಕಾರಣ ಮಾಡಬಾರದು. ಆದರೇ ಈ ಘಟನೆ ಸಂಬಂಧ ಎಲ್ಲರೂ ತನಿಖೆಗೆ ಸಹಕರಿಸಬೇಕು. ಹೇಗೆ ಆಗಿದೆ ಎನ್ನುವ ಬಗ್ಗೆ ತನಿಖೆಯಿಂದ ವಿಷಯ ಗೊತ್ತಾಗಬೇಕು. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರೊಂದಿಗೆ ಮಾಹಿತಿ ಪಡೆದು ಪ್ರಕರಣದ ತನಿಖೆಯನ್ನು ಯಾವುದರಿಂದ ನಡೆಸಬೇಕು ಎನ್ನುವ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ಮಧ್ಯಾಹ್ನ 12 ಗಂಟೆ ವೇಳೆಗೆ ರಾಮೇಶ್ವರಂ ಕಫೆಯಲ್ಲಿ ಸ್ಪೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ.…

Read More

ಬೆಂಗಳೂರು: ಕರ್ನಾಟಕ ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ ( KSRTC, BMTC, KKRTC, NWKRTC ) ದೆಹಲಿಯ ದೇಶದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ( ASRTU) 2022 -23ನೇ ಸಾಲಿನ ಒಟ್ಟು 5 ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳು ( National Transport Excellence Award) ಲಭಿಸಿರುತ್ತವೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ ( ASRTU)ದ ವ್ಯಾಪ್ತಿಯಲ್ಲಿ ದೇಶದ 62 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಸದಸ್ಯತ್ವವನ್ನು ಹೊಂದಿವೆ. ಸದರಿ ಒಕ್ಕೂಟವು 13ನೇ ಆಗಸ್ಟ್ 1965 ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು ,ಭಾರತ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ನಿರ್ದೇಶನದ ಅನುಸಾರ ಕಾರ್ಯನಿರ್ವಹಿಸುತ್ತದೆ ಈ ಸಂಸ್ಥೆಯು 58 ವರ್ಷಗಳ ಅನುಭವವನ್ನು ಹೊಂದಿದ್ದು, ದೇಶದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಕೆ ಎಸ್ ಆರ್ ಟಿ‌‌ ಸಿ‌ ಗೆ ಬ್ರ್ಯಾಂಡಿಂಗ್ ಹಾಗೂ ವರ್ಚಸ್ಸು ಅಭಿವೃದ್ಧಿ ಉಪಕ್ರಮ ಮತ್ತು ಸಿಬ್ಬಂದಿಗಳ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ…

Read More

ಹಾಸನ : “ಗ್ಯಾರಂಟಿ ಯೋಜನೆಗಳಿಂದ ಒಂದು ಬಡ ಕುಟುಂಬಕ್ಕೆ ವಾರ್ಷಿಕ 50-60 ಸಾವಿರ ಉಳಿತಾಯವಾಗುತ್ತಿದೆ. ಐದು ಗ್ಯಾರಂಟಿ ಯೋಜನೆಗಳ ಹೊರತಾಗಿ ವಿವಿಧ ಅಭಿವೃದ್ಧಿಗೆ ರಾಜ್ಯ ಸರ್ಕಾರ ರೂ.1.20 ಸಾವಿರ ಕೋಟಿ ಹಣವನ್ನು ಬಜೆಟ್ ನಲ್ಲಿ ಮೀಸಲಿಟ್ಟಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು‌. ಹಾಸನದಲ್ಲಿ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು “1.56 ಕೋಟಿ ಕುಟುಂಬಗಳಿಗೆ ಉಚಿತವಾಗಿ ವಿದ್ಯುತ್‌ ನೀಡುವುದರ ಜೊತೆಗೆ 1.50 ರುಪಾಯಿ ವಿದ್ಯುತ್ ದರ ಇಳಿಸಿದ್ದೇವೆ. ಇದಕ್ಕೆ ವಿರೋಧ ಪಕ್ಷಗಳು ಏನು ಹೇಳುತ್ತವೆ. ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಕುಮಾರಸ್ವಾಮಿ, ಆರ್‌. ಅಶೋಕ್‌ ಅವರು ಇದಕ್ಕೆ ಉತ್ತರಿಸಲಿ ಎಂದರು. ವಸ್ತುಗಳ ಬೆಲೆ ಏರಿಕೆಯಾಗಿತ್ತು. ಬಿಜೆಪಿಯವರು ವಿದ್ಯುತ್‌ ಬೆಲೆ ಏರಿಕೆ ಮಾಡಿದ್ದರು. ನಾವು ಉಚಿತವಾಗಿ ವಿದ್ಯುತ್‌ ನೀಡುವುದರ ಜೊತೆಗೆ ಬೆಲೆ ಇಳಿಕೆ ಮಾಡಿದ್ದೇವೆ. ಗೃಹಲಕ್ಷ್ಮೀ ಯೋಜನೆಯಿಂದ ಅತ್ತೆ-ಸೊಸೆ ಜಗಳವಾಡುತ್ತಾರೆ ಎಂದು ಗುಲ್ಲೆಬ್ಬಿಸಿದರು. ಯಾವುದಾದರೂ ಮನೆಯಲ್ಲಿ ಜಗಳ ಉಂಟಾಗಿದೆಯೇ? ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರು “ಶಕ್ತಿ ಯೋಜನೆಯಿಂದ ದೇವಸ್ಥಾನಕ್ಕೆ ಜನ ಹೆಚ್ಚು ಬರುತ್ತಿದ್ದಾರೆ. ಹುಂಡಿ…

Read More

ತುಮಕೂರು: ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ಸಂಭವಿಸಿದಂತ ಸ್ಪೋಟಕ ಪ್ರಕರಣದಲ್ಲಿ 9 ಜನರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ನಗರದ ಕುಣಿಗಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕಫೆಯಲ್ಲಿ ಸಂಭವಿಸಿದಂತ ಸ್ಪೋಟ ಘಟನೆಯಲ್ಲಿ 9 ಜನರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿರೋದಾಗಿ ಹೇಳಿದರು. ನಮ್ಮ ಪೊಲೀಸರು ಹೋಗಿ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ಸ್ಪೋಟಕ ಹೇಗೆ ಸಂಭವಿಸಿದೆ ಎಂಬುದಾಗಿ ತನಿಖೆಯಿಂದ ತಿಳಿದು ಬರಬೇಕಿದೆ ಎಂದರು. ಕುಂದಲಹಳ್ಳಿಯ ರಾಮೇಶ್ವರಂ ಕಫೆಯಲ್ಲಿ ಮಧ್ಯಾಹ್ನ ಊಟದ ಸಮಯದಲ್ಲಿ ಸ್ಪೋಟಕ ಸಂಭವಿಸಿದೆ. ಐಇಡಿ ಸ್ಪೋಟದ ಬಗ್ಗೆ ಖಚಿತವಾಗಿ ಮಾಹಿತಿ ಸಿಕ್ಕಿಲ್ಲ. ಏನು ಸ್ಪೋಟವಾಗಿದೆ ಅಂತ ತನಿಖೆಯಿಂದ ತಿಳಿದುಬರಬೇಕಿದೆ ಎಂದು ಹೇಳಿದರು. https://kannadanewsnow.com/kannada/another-good-news-for-griha-jyoti-yojana-beneficiaries-from-the-state-government/ https://kannadanewsnow.com/kannada/kpsc-recruitment-for-364-posts-of-land-surveyors/

Read More

ಮೈಸೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಅನ್ನು ಘೋಷಣೆ ಮಾಡಲಾಗಿದೆ. ಮಾರ್ಚ್.3ರಂದು ನಡೆಯುವಂತ ವಿವಿಯ 104ನೇ ಘಟಿಕೋತ್ಸವದಲ್ಲಿ ಪ್ರದಾನ ಮಾಡಲಾಗುತ್ತಿದೆ. ಮಂಡ್ಯದ ಸುಪುತ್ರ, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರಿಗೆ ಗೌರವ ಡಾಕ್ಟರೇಟ್‌ ಘೋಷಣೆ ಮಾಡುವ ಮೂಲಕ ಮೈಸೂರು ವಿಶ್ವ ವಿದ್ಯಾಲಯದ ಗೌರವ ಇನ್ನಷ್ಟು ಹೆಚ್ಚಿದೆ ಎಂದು ವಿಧಾನ ಪರಿಷತ್‌ ಶಾಸಕರಾದ ದಿನೇಶ ಗೂಳಿಗೌಡ ಅಭಿಪ್ರಾಯಪಟ್ಟಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ದಿನೇಶ್‌ ಗೂಳಿಗೌಡ, ಮೈಸೂರು ವಿಶ್ವ ವಿದ್ಯಾಲಯದ 104 ನೇ ಘಟಿಕೋತ್ಸವವು ಮಾರ್ಚ್‌ 3 ರಂದು ಆಯೋಜನೆಯಾಗಿದ್ದು, ಅಂದು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರಿಗೆ ಗೌರವ ಡಾಕ್ಟರೇಟ್‌ ನೀಡಲು ವಿವಿ ಸಿಂಡಿಕೇಟ್‌ ತೀರ್ಮಾನಿಸಿರುವುದು ಅತ್ಯಂತ ಸ್ವಾಗತಾರ್ಹ ನಿರ್ಧಾರವಾಗಿದೆ ಎಂದು ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಸುಪುತ್ರರೊಬ್ಬರಿಗೆ ಮೈಸೂರು ವಿವಿ ಗೌರವ ಡಾಕ್ಟರೇಟ್‌ ನೀಡಿರುವುದು ಶ್ಲಾಘನಾರ್ಹ, ಅಭಿನಂದನಾರ್ಹ. ಅವರಿಗೆ ಮಂಡ್ಯ ಜಿಲ್ಲೆಯ ಜನರ ಪರವಾಗಿ, ವೈಯಕ್ತಿಕವಾಗಿ ಅಭಿನಂದಿಸುತ್ತೇನೆ ಎಂದು ದಿನೇಶ್‌ ಗೂಳಿಗೌಡ ಹೇಳಿದ್ದಾರೆ. ಸುಶಿಕ್ಷಿತ ಸಿಎಂ ಮಂಡ್ಯ ಜಿಲ್ಲೆಯ…

Read More

ಬೆಂಗಳೂರು: ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಮೊದಲ ದಿನದ ಪರೀಕ್ಷೆ  ಯಶಸ್ವಿಯಾಗಿ ನಡೆದಿದೆ. ಈ ಮೊದಲ ದಿನದ ದ್ವಿತೀಯ ಪಿಯುಸಿ ಪರೀಕ್ಷೆಗೆ 5,07,556 ವಿದ್ಯಾರ್ಥಿಗಳು ಹಾಜರಾಗಿದ್ದರೇ, 18,231 ಗೈರು ಹಾಜರಾಗಿದ್ದಾರೆ. ಅಲ್ಲದೇ ಪರೀಕ್ಷೆಯಲ್ಲಿ ನಕಲು ಮಾಡಲು ಪ್ರಯತ್ನಿಸಿದಂತ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ. ಈ ಕುರಿತಂತೆ ದ್ವಿತೀಯ ಪಿಯು ಪರೀಕ್ಷಾ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ 01-03-2024ರ ಇಂದು ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆ-1ಕ್ಕೆ ಸಂಬಂಧಿಸಿದಂತೆ ಕನ್ನಡ ಮತ್ತು ಅರೇಬಿಕ್ ವಿಷಯದ ಪರೀಕ್ಷೆಗಳು ನಡೆದವು. ಈ ಪರೀಕ್ಷೆಗೆ  5,25,787 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 5,07,556 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರೋದಾಗಿ ತಿಳಿಸಿದೆ. ಇನ್ನೂ 5,25,787 ನೋಂದಾಯಿಸಿದಂತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಲ್ಲಿ 18,231 ವಿದ್ಯಾರ್ಥಿಗಳು ಮೊದಲ ದಿನದ ಪರೀಕ್ಷೆಯಲ್ಲಿ ಗೈರಾಗಿದ್ದಾರೆ. ಶೇ.96.53ರಷ್ಟು ಹಾಜರಾತಿ ತೋರಿಬಂದಿದೆ ಎಂದು ತಿಳಿಸಿದೆ. ಇಂದು ಕನ್ನಡ ಮತ್ತು ಅರೇಬಿಕ್ ವಿಷಯದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ನಕಲು ಮಾಡಲು ಪ್ರಯತ್ನಿಸಿದಂತ ಓರ್ವ ವಿದ್ಯಾರ್ಥಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಬಾರ್ ಮಾಡಲಾಗಿದೆ…

Read More

ಬೆಂಗಳೂರು: ನಗರದ ಕುಂದಲಹಳ್ಳಿಯ ರಾಮೇಶ್ವರಂ ಕಫೆಯಲ್ಲಿ ಉಂಟಾದಂತ ನಿಗೂಢ ಸ್ಪೋಟಕ ಪ್ರಕರಣಕ್ಕೆ ಕಾರಣ ಸಿಲಿಂಡರ್ ಸ್ಪೋಟ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣವಲ್ಲ. ಹೊರಗಿನಿಂದ ತಂದಿಟ್ಟ ಬ್ಯಾಂಗ್ ನಿಂದ ಸ್ಪೋಟಕ ಸಂಭವಿಸಿದೆ ಎಂಬುದಾಗಿ ಕಫೆ ಸಹ ಸಂಸ್ಥಾಪಕಿ ದಿವ್ಯಾ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಮೇಶ್ವರಂ ಕಫೆಯ ಒಳಗೆ ಯಾವುದೇ ಸ್ಪೋಟ ಸಂಭವಿಸಿಲ್ಲ. ಯಾವುದೇ ಸಿಲಿಂಡರ್ ಅಥವಾ ವಿದ್ಯುತ್ ಅವಘಡದಿಂದಲೂ ಸ್ಪೋಟಕ ಸಂಭವಿಸಿಲ್ಲ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ. ಕಫೆಯಲ್ಲಿ ಸಂಭವಿಸಿದಂತ ಸ್ಪೋಟಕ್ಕೆ ಹೊರಗಿನಿಂದ ತಂದಿದ್ದ ಬ್ಯಾಗ್ ನಿಂದ ಸ್ಪೋಟವೇ ಕಾರಣ. 10 ಸೆಕೆಂಡ್ ಅಂತರದಲ್ಲಿ 2 ಬಾರಿ ಸ್ಪೋಟವಾಗಿದೆ. ಈ ಸ್ಪೋಟಕದಲ್ಲಿ ನಾಲ್ವರು ಗ್ರಾಹಕರು, ಮೂವರು ಸಿಬ್ಬಂದಿ ಸೇರಿ 7 ಮಂದಿ ಗಾಯಗೊಂಡಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ಕಫೆ ಚೆನ್ನಾಗಿ ನಡೆಯುತ್ತಿತ್ತು. ದೇಶಾದ್ಯಂತವೂ ವಿಸ್ತರಿಸೋ ಯೋಚನೆಯಿತ್ತು. ಈ ಕಾರಣದಿಂದ ದ್ವೇಷದಿಂದ ಈ ಸ್ಪೋಟವನ್ನು ನಡೆಸಲಾಗಿದೆ. ಕಫೆಯ ಪ್ಲೇಟ್ ಗಳನ್ನು ಇಡುವ ಸ್ಥಳದಲ್ಲಿ ಸ್ಪೋಟವಾಗಿದೆ. ಒಂದು ಬ್ಯಾಗ್ ತಂದಿಟ್ಟ ನಂತ್ರ ಮತ್ತೊಂದು ಬ್ಯಾಗ್…

Read More