Subscribe to Updates
Get the latest creative news from FooBar about art, design and business.
Author: kannadanewsnow09
ಚಾಮರಾಜನಗರ: ಆ ಶಿವನ ದೇಗುಲವನ್ನು ಮೈಸೂರಿನ ಮಹಾರಾಜರ ಕಾಲದಲ್ಲಿ ಕಟ್ಟಿಸಲಾಗಿತ್ತು. ಸರಿಯಾದ ನಿರ್ವಹಣೆಯಿಲ್ಲದೇ ಪಾಳುಪಿದ್ದಿತ್ತು. ಈ ಪಾಳುಬಿದ್ದ ದೇಗುಲವನ್ನೇ ತಮ್ಮ ರೆಸ್ಟೋರೆಂಟ್ ಮಾಡಿಕೊಂಡ ಪುಂಡರು, ಶಿವಲಿಂಗದ ಮೇಲೆ ಮದ್ಯದ ಬಾಟಲಿಯನ್ನು ಇರಿಸಿ ಕುಡಿದು, ವಿಕೃತಿ ಮೆರೆದಿರುವಂತ ಘಟನೆ ಚಾಮರಾಜನಗರದ ಉಪ್ಪಾರ ಬೀದಿಯಲ್ಲಿ ನಡೆದಿದೆ. ಚಾಮರಾಜನಗರದ ಉಪ್ಪಾರ ಬೀದಿಯಲ್ಲಿ ಮೈಸೂರಿನ ಮಹಾರಾಜರ ಕಾಲದಲ್ಲಿ ಕಟ್ಟಿಸಿರುವಂತ ಶಿವನ ದೇಗುಲವೊಂದು ಪಾಳು ಬಿದ್ದಿತ್ತು. ಈ ದೇಗುಲವನ್ನೇ ಕುಡುಕರು ತಮ್ಮ ಅಡ್ಡೆಯನ್ನಾಗಿ ಮಾಡಿಕೊಂಡಿದ್ದಾರೆ. ಪಾಳು ಬಿದ್ದಂತ ದೇಗುಲದಲ್ಲಿ ಮೀಸೆ ಚಿಗುರುವ ಮುನ್ನವೇ ಮದ್ಯಕ್ಕೆ ದಾಸರಾಗಿರುವಂತ ಪಡ್ಡೆ ಹುಡುಗರು ಕುಡಿಯುವ ಅಡ್ಡೆಯನ್ನಾಗಿಸಿಕೊಂಡಿದ್ದಾರೆ. ಶಿವನ ಲಿಂಗದ ಮೇಲೆ ಮದ್ಯದ ಬಾಟಲಿಯನ್ನು ಇರಿಸಿ ಕುಡಿಯುತ್ತಿದ್ದಂತ ಸಂದರ್ಭದಲ್ಲೇ ಮಾದ್ಯಮದವರ ಕ್ಯಾಮರಾ ಕಂಡು ಅಲ್ಲಿಂದ ಪರಾರಿಯಾದಂತ ಘಟನೆ ನಡೆದಿದೆ. ಪೊಲೀಸರು ಗಸ್ತು ತಿರುಗುತ್ತಿದ್ದರೇ ಹೀಗೆ ಆಗುತ್ತಿರಲಿಲ್ಲ ಎಂಬುದು ಸ್ಥಳೀಯರ ಆರೋಪ. ಅಲ್ಲದೇ ದೇಗುಲವನ್ನು ಶುದ್ಧಗೊಳಿಸಿ, ಪುಂಡರ ಹಾವಳಿಯನ್ನು ತಪ್ಪಿಸಿ. ಮಟ ಮಟ ಮಧ್ಯಾಹ್ನವೇ ಹಾದಿ ಬೀದಿಯಲ್ಲಿ ಈ ಪುಂಡರು ಕುಡಿದು ತೂರಾಡೋದು ಜಾಸ್ತಿ ಆಗಿದೆ…
ಉತ್ತರ ಕನ್ನಡ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿ ದಿಢೀರ್ ಕುಸಿದು ಬಿದ್ದು ಅಬಕಾರಿ ಎಸ್ಐ ಸಾವನ್ನಪ್ಪಿರುವಂತ ಘಟನೆ ಅಂಕೋಲಾದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಅಕೋಲಾದ ಅಬಕಾರಿ ಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಪುರುಷೋತ್ತಮ ಹಳದನ್ ಕರ್(59) ಎಂಬುವರೇ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವಂತ ಅಧಿಕಾರಿಯಾಗಿದ್ದಾರೆ. ಇಂದು ತಮ್ಮ ಮನೆಯಲ್ಲಿ ಬಾತ್ ರೂಮ್ ಗೆ ತೆರಳಿದ್ದಂತ ವೇಳೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದಾರೆ. ಅಲ್ಲದೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಎಷ್ಟು ಹೊತ್ತಾದರೂ ಬಾತ್ ರೂಮ್ ನಿಂದ ಬಾರದ ಕಾರಣ ಮನೆಯವರು ಹೋಗಿ ನೋಡಿದಾಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಪುರುಷೋತ್ತಮ್ ಕಂಡು ಬಂದಿದ್ದಾರೆ. ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪುರುಷೋತ್ತಮ್ ಅವರನ್ನು ಪರೀಕ್ಷಿಸಿದಂತ ವೈದ್ಯರು ಆಸ್ಪತ್ರೆಗೆ ತರುವ ಮೊದಲೇ ನಿಧನರಾಗಿದ್ದಾರೆ ಎಂಬುದಾಗಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಇದೀಗ ಕುಟುಂಬಸ್ಥರು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಕಾರವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/big-news-brother-has-no-right-over-married-sisters-property-supreme-court-landmark-verdict/ https://kannadanewsnow.com/kannada/applications-invited-for-admission-to-class-6-in-residential-schools/
ಶಿವಮೊಗ್ಗ: ದಿನಾಂಕ:05.02.2025ರ ನಾಳೆ ಸೊರಬ ಉಪವಿಭಾಗೀಯ ಕಛೇರಿಯಲ್ಲಿ ನಡೆಯುವ ವಿದ್ಯುತ್ ಗ್ರಾಹಕರುಗಳ ಕುರಿತಾದ “ಜನಸಂಪರ್ಕ ಸಭೆಯನ್ನು ನಡೆಸಲಾಗುತ್ತಿದೆ. ವಿದ್ಯುತ್ ಗ್ರಾಹಕರು ಭಾಗಿಯಾಗಿ, ತಮ್ಮ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಪಡೆಯುವಂತೆ ಸೊರಬ ಮೆಸ್ಕಾಂ ಎಇಇ ಮನವಿ ಮಾಡಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಸೊರಬ ಮೆಸ್ಕಾಂ ಉಪವಿಭಾಗೀಯ ಕಛೇರಿಯಲ್ಲಿ ADOB:05.02.2025 ರಂದು “ಜನಸಂಪರ್ಕ ಸಭೆ” ನಡೆಯಲಿದೆ ಎಂದಿದ್ದಾರೆ. ಸೊರಬ ಮೆಸ್ಕಾಂ ಉಪವಿಭಾಗದಲ್ಲಿ ಜನಸಂಪರ್ಕ ಸಭೆಯನ್ನು ದಿನಾಂಕ:05.02.2025 ರಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 1:00 ರವರೆಗೆ ಮೆಸ್ಕಾಂ ಸೊರಬ ಉಪವಿಭಾಗೀಯ ಕಛೇರಿಯಲ್ಲಿನ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಆದುದರಿಂದ ಈ ಸಭೆಯಲ್ಲಿ ಜನಪ್ರತಿನಿಧಿಗಳು/ಸಾರ್ವಜನಿಕರು/ವಿದ್ಯುತ್ ಗ್ರಾಹಕರು ಭಾಗವಹಿಸಿ” ವಿದ್ಯುತ್ ಸಮಸ್ಯೆಯ ಕುರಿತು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/shivamogga-power-outages-in-these-areas-of-soraba-taluk-on-february-6/ https://kannadanewsnow.com/kannada/big-news-brother-has-no-right-over-married-sisters-property-supreme-court-landmark-verdict/
ಶಿವಮೊಗ್ಗ: ಮೆಸ್ಕಾಂನಿಂದ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಫೆ.6, 2025ರಂದು 110/11 ಕೆವಿ ವಿ.ವಿ ಕೇಂದ್ರ ಸೊರಬದಿಂದ ವಿದ್ಯುತ್ ಸರಬರಾಜಾಗುವ 11 ಕೆವಿ ಫೀಡರ್ ಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಹಿನ್ನಲೆಯಲ್ಲಿ ಈ ಕೆಳಕಂಡ ಸೊರಬ ತಾಲ್ಲೂಕಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಸೊರಬ ತಾಲ್ಲೂಕಿನ ಮೆಸ್ಕಾಂ ಎಇಇ ಮಾಹಿತಿ ನೀಡಿದ್ದು, ದಿನಾಂಕ:06.02.2025 ರಂದು 110/11 ಕೆವಿ ಸೊರಬ ಕೆಳಕಂಡ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಫೀಡರ್ಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಅಂತ ತಿಳಿಸಿದ್ದಾರೆ. ದಿನಾಂಕ:06.02.2025 ರಂದು 110/11 ಕೆವಿ ಸೊರಬ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕವಿಪ್ರನಿನಿ’ ರವರಿಂದ ತ್ರೈಮಾಸಿಕ ನಿರ್ವಹಣಾ ಕಾಮಗಾಲಿಯನ್ನು ನಡೆಸಲು ಉದ್ದೇಶಿಸಿರುವುದರಿಂದ, 110/11 ಕೆವಿ ವಿ.ವಿ ಕೇಂದ್ರ ಸೊರಬದಿಂದ ವಿದ್ಯುತ್ ಸರಬರಾಜಾಗುವ ಎಫ್-21 ಸೊರಬ ಪಟ್ಟಣ ಸೇರಿದಂತೆ ಎಫ್-2 ಸಾರೇಕೊಪ್ಪ, ಎಫ್-3 ಬಳ್ಳಬೈಲು, ಎಫ್-4 ಓಟೂರು, ಎಫ್-5 ಚಿಕ್ಕಾವಲಿ, ಎಫ್15 ಕಲ್ಲಂಬಿ ಕರೆಂಟ್ ಇರೋದಿಲ್ಲ. ಎಫ್-16 ಕಡಸೂರು ಎನ್ಜೆವೈ, ಎಫ್-17 ಯಲವಳ್ಳಿ ಎನ್ಜೆವೈ, ಎಫ್-8 ಹಾಲಗಳಲೆ,…
ಶಿವಮೊಗ್ಗ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಶಿವಮೊಗ್ಗ ಇಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ/ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2025-26 ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಶೇ.75 ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿ ವಿದ್ಯಾರ್ಥಿಗಳಿಗೆ ಮತ್ತು ಶೇ.25 ರಷ್ಟು ಇತರೆ ಹಿಂದುಳಿದ ವರ್ಗದ ಸಮುದಾಯಗಳ ಅಭ್ಯರ್ಥಿಗಳು ಸೇವಾಸಿಂಧು ಆನ್ಲೈನ್ ಪೋರ್ಟಲ್ https://sevsindhuservices.karnataka.gov.in ನಲ್ಲಿ ಅಥವಾ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು, ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರಗಳು ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಕೂಡ ಅರ್ಜಿ ಸಲ್ಲಿಸಬಹುದು. ಮಾ.10 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಅಭ್ಯರ್ಥಿಯು ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಿಂದ 5 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು/ಉತ್ತಿರ್ಣರಾಗಿರಬೇಕು. ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಅಂಕಪಟ್ಟಿಯನ್ನು ಹೊಂದಿರಬೇಕು. ರಾಜ್ಯದ ಖಾಯಂ ನಿವಾಸಿಯಾಗಿರಬೇಕು. 11 ರಿಂದ 13 ವರ್ಷದ ವಯೋಮಾನದವರಾಗಿರಬೇಕು. ಅಭ್ಯರ್ಥಿಗಳು ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ, ಜಾತಿ…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತಂತ ಪತಿಯೊಬ್ಬ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿ, ಕೆರೆಗೆ ಶವ ಎಸೆದು ಪೊಲೀಸರ ಮುಂದೆ ಬಂದು ಶರಣಾಗಿರುವಂತ ಘಟನೆ ನಡೆದಿದೆ. ವಿಜಯಪುರ ಮೂಲದ ನಿಜಾಮುದ್ದೀನ್ ಎಂಬಾತನೇ ತನ್ನ ಪತ್ನಿ ರಾಬಿನಾ (32) ಅನೈತಿಕ ಸಂಬಂಧಕ್ಕೆ ಬೇಸತ್ತು ಕತ್ತು ಹಿಸುಕಿ ಕೊಲೆಗೈದು, ಪೊಲೀಸರಿಗೆ ಶರಣಾದಂತ ಆರೋಪಿಯಾಗಿದ್ದಾರೆ. ವಿಜಯಪುರ ಮೂಲದ ನಿಜಾಮುದ್ದೀನ್ ಹಾಗೂ ರಾಬಿನಾ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ವಾಸವಿದ್ದರು. ರಾಬಿನಾ ಮತ್ತೊಬ್ಬನೊಂದಿಂಗ ಅನೈತಿಕ ಸಂಬಂಧ ಹೊಂದಿದ್ದರಂತೆ. ಎಷ್ಟೇ ಹೇಳಿದರೂ ಬಿಡದಿದ್ದಕ್ಕೆ ಸಿಟ್ಟುಗೊಂಡ ನಿಜಾಮುದ್ದೀನ್ ಕತ್ತು ಹಿಸುಕಿ ಕೊಲೆ ಮಾಡಿ, ಶವವನ್ನು ಕೆರೆಗೆ ಎಸೆದಿದ್ದನು. ಆ ಬಳಿಕ ಹೊಸಕೋಟೆ ಪೊಲೀಸ್ ಠಾಣೆಗೆ ತೆರಳಿ ಕೊಲೆಯ ಮಾಹಿತಿ ನೀಡಿ, ಶರಣಾಗಿದ್ದಾನೆ. ರಾಬಿನಾ ಅವರ ಶವವನ್ನು ಕೆರೆಯಿಂದ ಮೇಲೆತ್ತಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/historic-kottur-gurubasaveshwara-theru-tragedy-devotees-escape-by-a-hairs-breadth/ https://kannadanewsnow.com/kannada/big-news-brother-has-no-right-over-married-sisters-property-supreme-court-landmark-verdict/
ವಿಜಯನಗರ: ಜಿಲ್ಲೆಯ ಪ್ರಸಿದ್ಧ ಐತಿಹಾಸಿಕ ಜಾತ್ರೆಗಳಲ್ಲಿ ಒಂದು ಕೊಟ್ಟೂರು ಬಸವೇಶ್ವರ ಜಾತ್ರೆ. ಸೋಮವಾರ ಜಾತ್ರೆಯ ವೇಳೆ ಕೊಟ್ಟೂರು ಗುರು ಬಸವೇಶ್ವರ ತೇರನ್ನು ಎಳೆಯುವಂತ ಸಂದರ್ಭದಲ್ಲಿ ಅವಘಟ ಸಂಭವಿಸಿದೆ. ಆದರೇ ಭಕ್ತರು ಮಾತ್ರ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಿನ್ನೆಯ ಸಂಜೆಯಂದು ಕೊಟ್ಟೂರು ಗುರುಬಸವೇಶ್ವರ ತೇರನ್ನು ಎಳೆಯುತ್ತಿದ್ದಾಗ ಸ್ಟೇರಿಂಗ್ ಕೈಕೊಟ್ಟಿದೆ. ಈ ಸಂದರ್ಭದಲ್ಲಿ ಬೃಹತ್ ಗಾತ್ರದ ತೇರು ಕೆಳಗೆ ಬಿದ್ದಿದೆ. ತೇರು ಕೆಳಗೆ ಬೀಳುತ್ತಿದ್ದನ್ನು ಗಮನಿಸಿದಂತ ಭಕ್ತರು ಪಕಕ್ಕೆ ಸರಿದಿದ್ದಾರೆ. ಹೀಗಾಗಿ ಭಾರೀ ಅವಘಡ, ಪ್ರಾಣಾಪಾಯದಿಂದ ಭಕ್ತರು ಪಾರಾಗಿದ್ದಾರೆ. ರಥದ ಗಾಲಿಗಳನ್ನು ನಿರ್ವಹಣೆ ಮಾಡುತ್ತಿದ್ದವರ ಸಮಯ ಪ್ರಜ್ಞೆಯಿಂದ ಭಕ್ತರು ಕೂದಲೆಳೆಯ ಅಂತರದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ರಥ ಮುರಿದು ಬಿದ್ದ ರಭಸಕ್ಕೆ ಪಕ್ಕದಲ್ಲಿನ ಬೈಕ್, ಸ್ಕೂಟಿ ಅಪ್ಪಚ್ಚಿಯಾಗಿದೆ. https://kannadanewsnow.com/kannada/backward-classes-editors-and-reporters-associations-annual-v-p-singh-award-announced/ http://kannadanewsnow.com/kannada/big-news-brother-has-no-right-over-married-sisters-property-supreme-court-landmark-verdict/
ಬೆಂಗಳೂರು: ಹಿಂದುಳಿದ ವರ್ಗಗಳ ಕರ್ನಾಟಕ ಮಾನ್ಯತೆ ಪಡೆದ ಸಂಪಾಧಕರ ಮತ್ತು ವರದಿಗಾರರ ಸಂಘ ಪ್ರಸಕ್ತ ವರ್ಷದ ದಿವಂಗತ ಮಾಜಿ ಪ್ರಧಾನಿ ವಿ.ಪಿ.ಸಿಂಗ್ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದೆ. ಕಳೆದ ವರ್ಷದಂತೆ ಈ ವರ್ಷದಲ್ಲಿ 5 ಜನ ಸಾಧಕರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ. ಇದೇ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಮಣಿಯವರ ವಿರಚಿತ ಒಳಕೋರೆ ಪುಸ್ತಕವನ್ನು ಬಿಡುಗಡೆಗೊಳಿಸಲಾಗುತ್ತಿದೆ. ತುಳಿತಕ್ಕೊಳಗಾದ ಸಮುದಾಯಗಳ ಪರ ದ್ವನಿಯಾಗಿದ್ದ ಹಿರಿಯ ಸಾಹಿತಿ ಕೆ.ಶರೀಪಾ, ಲಂಕೇಶ್ ಸೇರಿದಂತೆ ಅನೇಕ ಪತ್ರಿಕೆಗಳಲ್ಲಿ ವರದಿಗಾರರಾಗಿ, ಸಂಪಾದಕರಾಗಿ ಸೇವೆ ಸಲ್ಲಿಸಿ ಹೆಸರು ಮಾಡಿರುವ ಹಿರಿಯ ಪತ್ರಕರ್ತ ಐ.ಎಚ್.ಸಂಗಮ್ ದೇವ್, ಹಿಂದುಳಿದ ವರ್ಗಗಳ ಮಹಿಳೆಯರ ಸಬಲೀಕರಣಕ್ಕೆ ಶ್ರಮಿಸಿರುವ ನಳಿನಾಕ್ಷಿ ಸಣ್ಣಪ್ಪ, ಸಮಾಜ ಸೇವೆಯಲ್ಲಿ ಅನುಪಮ ಸೇವೆ ಸಲ್ಲಿಸಿರುವ ಎಂ.ನಾಗವೇಣಿ, ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಕನ್ನಡ ಭಾಷಾ ಉಳಿವಿಗಾಗಿ ಕನ್ನಡ ಭಾಷೆ ಪತ್ರಿಕೆ ಆರಂಭಿಸಿ ಶೋಷಿತರ ದ್ವನಿಯಾಗಿರುವ ಸಂಧ್ಯಾಕಾಲ ಪತ್ರಿಕೆಯ ಸಂಪಾದಕ ಶಿವಲಿಂಗಪ್ಪ ಅವರುಗಳಿಗೆ ವಿ.ಪಿ.ಸಿಂಗ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಸಂಘದ ಅಧ್ಯಕ್ಷ ಗಂಧರ್ವ ಶ್ರೀನಿವಾಸ್, ಪ್ರಧಾನ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಟಿ.ನರಸೀಪುರದ ಕುಂಭಮೇಳಕ್ಕೆ ರೂ. 6 ಕೋಟಿ ಅನುದಾನ ಬಿಡುಗಡೆ ಮಾಡಿರುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಅವರು ಸುಮಾರು ಮೂರೂವರೆ ದಶಕದಿಂದಲೂ ಮೂರು ವರ್ಷಗಳಿಗೊಮ್ಮೆ ಕುಂಭಮೇಳವನ್ನು ಟಿ.ನರಸೀಪುರದಲ್ಲಿ ಆಯೋಜಿಸಿಕೊಂಡು ಬರಲಾಗುತ್ತಿದೆ. ಟಿ.ನರಸೀಪುರದ ತ್ರಿವೇಣಿ ಸಂಗಮ ದಕ್ಷಿಣಕಾಶಿಯಲ್ಲಿ ನಡೆಯುವ ಕುಂಭಮೇಳ ಭಾರತೀಯರಿಗೆ ಸನಾತನ ಸಂಸ್ಕೃತಿ ಮತ್ತು ದಿವ್ಯ ಜೀವನ ಧರ್ಮವನ್ನು ಸಾರುವ ಧಾರ್ಮಿಕ ಕಾರ್ಯಕ್ರಮವಾಗಿದೆ ಎಂದರು. ರಾಜ್ಯ ಸರ್ಕಾರದಿಂದ ಫೆಬ್ರವರಿ 10, 11 ಹಾಗೂ 12ರಂದು ನಡೆಯಲಿರುವಂತ ಟಿ.ನರಸೀಪುರ ಕುಂಭಮೇಳಕ್ಕೆ 6 ಕೋಟಿ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ಹೇಳಿದರು. ದಕ್ಷಿಣ ಭಾರತದಲ್ಲಿ ಈ ಪುಣ್ಯಸ್ನಾನವನ್ನು ಪ್ರಾರಂಭಿಸಲು ಪ್ರಮುಖರಾದವರು ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳವರು ಪೀಠಾಧ್ಯಕ್ಷರು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ಶ್ರೀಕ್ಷೇತ್ರ, ಶ್ರೀ ಆದಿಚುಂಚನಗಿರಿ, ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠ, ಸುತ್ತೂರು ಶ್ರೀಕ್ಷೇತ್ರ,…
ಮಂಡ್ಯ : ಕಾಮಗಾರಿ ಮಾಡಿರುವ ಬಿಲ್ ಬಿಡುಗಡೆ ಮಾಡಲು ತಾರತಮ್ಯ ಮಾಡಲಾಗುತ್ತಿದೆ ಎಂಬ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಮಂಡ್ಯ ನಗರದ ಲೋಕೋಪಯೋಗಿ ಇಲಾಖೆ ಕಚೇರಿಗೆ ಸೋಮವಾರ ದಾಳಿ ನಡೆಸಿ ಸತತ ನಾಲ್ಕೂವರೆ ಗಂಟೆಗಳ ಕಾಲ ಕಡತಗಳ ಪರಿಶೀಲನೆ ನಡೆಸಿದ್ದಾರೆ. 2021ರಲ್ಲಿ ಮಾಡಿರುವ ಕಾಮಗಾರಿಗೆ ಬಿಲ್ ಬಿಡುಗಡೆ ಮಾಡಿಲ್ಲ. ಬದಲಿಗೆ 2024ರಲ್ಲಿ ಮಾಡಿರುವ ಕಾಮಗಾರಿಯ ಹಣವನ್ನು ಬಿಡುಗಡೆ ಮಾಡುವ ಸೀನಿಯಾರಿಟಿ ನಿಯಮ ಉಲ್ಲಂಘಿಸಲಾಗುತ್ತಿದೆ ಎಂದು ಆರೋಪಿಸಿ ಹಲವು ಗುತ್ತಿಗೆದಾರರು ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನ 3.30ರಿಂದ ರಾತ್ರಿ 8 ಗಂಟೆವರೆಗೂ ಪರಿಶೀಲನೆ ನಡೆಸಿ ಕೆಲವೊಂದು ಮುಖ್ಯವಾದ ಕಡತಗಳನ್ನು ತೆಗೆದುಕೊಳ್ಳಲಾಗಿದೆ. ಮಾತ್ರವಲ್ಲದೆ ಕಚೇರಿಗೆ ಬೀಗ ಹಾಕಿಸಿ, ಮಂಗಳವಾರವೂ ಪರಿಶೀಲನೆ ಮುಂದುವರಿಯಲಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಸುರೇಶ್ಬಾಬು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ಸುನೀಲ್ ಕುಮಾರ್, ಇನ್ಸ್ಪೆಕ್ಟರ್ಗಳಾದ ಬ್ಯಾಟರಾಯಗೌಡ, ಜಯರತ್ನಾ, ಸಿಬ್ಬಂದಿ ಶಂಕರ್, ಶರತ್, ಮಹದೇವ, ಮಹದೇವಸ್ವಾಮಿ, ನವೀನ, ಮನು, ರಾಮಲಿಂಗ ಇದ್ದರು. ವರದಿ…