Author: kannadanewsnow09

ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವಂತ ರಾಮೇಶ್ವರಂ ಕಫೆಯಲ್ಲಿ ಇಂದು ನಿಗೂಢ ಸ್ಪೋಟವೊಂದು ಸಂಭವಿಸಿತ್ತು. ಈ ಸ್ಪೋಟ ಸಂಭವಿಸಿರೋದು ಸಿಲಿಂಡರ್ ಬ್ಲಾಸ್ಟ್ ನಿಂದ ಅಲ್ಲ. ಬದಲಾಗಿ ಸ್ಥಳದಲ್ಲಿದ್ದಂತ ಬ್ಯಾಗ್ ನಲ್ಲಿ ಇದ್ದ ತುಂಡುಗಳಿಂದ ಎಂಬುದಾಗಿ ಪ್ರತ್ಯಕ್ಷ ದರ್ಶಿಯೊಬ್ಬರು ಹೇಳಿದ್ದಾರೆ. ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಪೋಟವೊಂದು ಸಂಭವಿಸಿತ್ತು. ಈ ಸ್ಪೋಟದಲ್ಲಿ ಮಹಿಳೆಯೊಬ್ಬರು ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಈ ಘಟನೆ ಕುರಿತಂತೆ ಪ್ರತ್ಯಕ್ಷ ದರ್ಶಿ ಶಬರೀಶ್ ಎಂಬುವರು ಸುದ್ದಿಗಾರರೊಂದಿಗೆ ಮಾತನಾಡಿದ್ದು, ನಿಗೂಢ ಸ್ಪೋಟಕ್ಕೆ ಹೊರಗಡೆಯಿಂದ ತಂದಿರುವಂತ ವಸ್ತುವೇ ಕಾರಣ. ಸ್ಪೋಟಕ ಸ್ಥಳದಲ್ಲಿ ಟೈಲ್ಸ್ ಕೂಡ ಪುಡಿ ಪುಡಿಯಾಗಿದೆ. ಕಫೆ ಸಿಬ್ಬಂದಿ ಗ್ರಾಹಕರಿಗೆ ಯಾವುದೇ ನೆರವು ನೀಡಲಿಲ್ಲ. ನಾವೇ ನೆರವಾಗಿ ಅವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲು ನೆರವಾದೆವು ಎಂದಿದ್ದಾರೆ. ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟಕ್ಕೆ ಗ್ಯಾಸ್ ಸಿಲಿಂಡರ್ ಕಾರಣವಲ್ಲ. ಬದಲಾಗಿ ಬ್ಯಾಗ್ ನಲ್ಲಿದ್ದಂತ ತುಂಡುಗಳು ಎಂಬುದಾಗಿದೆ. ಸ್ಪೋಟಕದ ನಂತ್ರ ಸಿಬ್ಬಂದಿ, ನಾಲ್ಕು ಗ್ರಾಹಕು ಗಾಯಗೊಂಡಿದ್ದರು ಎಂದು ಹೇಳಿದ್ದಾರೆ. https://kannadanewsnow.com/kannada/another-good-news-for-griha-jyoti-yojana-beneficiaries-from-the-state-government/ https://kannadanewsnow.com/kannada/kpsc-recruitment-for-364-posts-of-land-surveyors/

Read More

ಬೆಂಗಳೂರು: ನಗರದ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ ಉಂಟಾಗಿ, ಮಹಿಳೆ ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಈ ಘಟನಾ ಸ್ಥಳದಲ್ಲಿ ಕೆಲವು ಐಡಿ ಕಾರ್ಡ್ ಗಳು ದೊರೆತಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಅಲ್ಲದೇ ಮೂವರು ಶಂಕಿತರು ದುಷ್ಕೃತ್ಯವೆಸಗಿರೋ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಬೆಂಗಳೂರಿನ ಕುಂದಲಹಳ್ಳಿ ಬಳಿಯಲ್ಲಿ ಇರುವಂತ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟವೊಂದು ಸಂಭವಿಸಿದೆ. ಈ ವಿಷಯ ತಿಳಿದು ಸ್ಥಳಕ್ಕೆ ವೈಟ್ ಫೀಲ್ಟ್, ಹೆಚ್ಎಎಲ್ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ. ಮಧ್ಯಾಹ್ನ 1.30ರ ಸುಮಾರಿಗೆ ಕುಂದಲಹಳ್ಳಿಯ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕೆ ವೈಟ್ ಫೀಲ್ಡ್ ಡಿಸಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದೀಗ ಘಟನಾ ಸ್ಥಳವನ್ನು ಸುತ್ತುವರೆದಿರುವಂತ ವೈಟ್ ಫೀಲ್ಡ್ ಠಾಣೆಯ ಪೊಲೀಸರು, ಸ್ಪೋಟಕ ಸಂಬಂಧಿಸಿದಂತೆ ಪರಿಶೀಲನೆ ನಡೆಸುತ್ತಿದ್ದಾರೆ. https://kannadanewsnow.com/kannada/strict-action-will-be-taken-against-those-who-raised-pro-pakistan-slogans-siddaramaiah/ https://kannadanewsnow.com/kannada/another-good-news-for-griha-jyoti-yojana-beneficiaries-from-the-state-government/

Read More

ಹಾಸನ : ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಯನ್ನು ತಕ್ಷಣದಲ್ಲಿ ಮಾಡಲಾಗುವುದು. ಎಲ್ಲರೂ ಒಗ್ಗಟ್ಟಾಗಿರುವುದರಿಂದ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲವಿರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಘೋಷಣೆ ಕೂಗಿದ್ದು ನಿಜವಾದರೆ ಕಠಿಣ ಕ್ರಮ ಪಾಕಿಸ್ತಾನ ಪರ ಘೋಷಣೆ ಪ್ರಕರಣ ಸಂಬಂಧಿಸಿದಂತೆ ಎಫ್ ಎಸ್ ಎಲ್ ವರದಿ ಬೇಗ ಬಹಿರಂಗಪಡಿಸಬೇಕು ಎಂದು ವಿರೋಧಪಕ್ಷದ ನಾಯಕ ಅಶೋಕ್ ಒತ್ತಾಯಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವರದಿ ಬಂದ ತಕ್ಷಣ ತಬಹಿರಂಗ ಮಾಡುತ್ತೇವೆ. ಭಾರತದ ಪರವಾಗಿ ಇಲ್ಲದಿರುವವರು ಘೋಷಣೆ ಕೂಗಿದ್ದು ನಿಜವಾಗಿದ್ದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು..ದೇಶಭಕ್ತಿಯನ್ನು ಬಿಜೆಪಿಯವರು ಕಾಂಗ್ರೆಸ್ ಗೆ ಹೇಳಿಕೊಡುವ ಅಗತ್ಯವಿಲ್ಲ. ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ್ದು ಕಾಂಗ್ರೆಸ್ ಹೊರತು ಬಿಜೆಪಿಯಲ್ಲ ಎಂದರು. ಜಾತಿಗಣತಿ ವರದಿ ಬಗ್ಗೆ ಸಚಿವಸಂಪುಟದಲ್ಲಿ ಚರ್ಚೆ ಕಾಂತರಾಜು ವರದಿಯನ್ನು ಕೆಲವು ಸ್ವಾಮೀಜಿಗಳು ಹಾಗೂ ಪಕ್ಷದ ಕೆಲ ನಾಯಕರೇ ವಿರೋಧಿಸುತ್ತಿರುವ ಬಗ್ಗೆ ಉತ್ತರಿಸಿ, ಜಾತಿಗಣತಿ ವರದಿಯನ್ನು ಸ್ವೀಕರಿಸಲಾಗಿದೆ. ಆದರೆ ವರದಿಯಲ್ಲಿರುವ ಅಂಶಗಳ ಬಗ್ಗೆ ಮಾಹಿತಿಯಿಲ್ಲ. ಸದರಿ…

Read More

ಬೆಂಗಳೂರು: ಕರ್ನಾಟಕ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಪುನರಾರಂಭಿಸಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ ಕೆಲ ವರ್ಷಗಳಿಂದ ಸ್ಥಗಿತಗೊಂಡಿರುವ ಕರ್ನಾಟಕ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಪುನರಾರಂಭಗೊಳಿಸಲಾಗುವುದು ಎಂದರು. ಪ್ರಶಸ್ತಿಗೆ ಸಂಬಂಧಿಸಿದಂತೆ ಸಮಿತಿಗಳನ್ನು ಮಾಡಿದ್ದು, ಇವುಗಳು ವರದಿ ನೀಡಿದ ತಕ್ಷಣ ಈ ವರ್ಷದ್ದೂ ಸೇರಿದಂತೆ ಹಿಂದಿನ ವರ್ಷಗಳ ಪ್ರಶಸ್ತಿಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://kannadanewsnow.com/kannada/bengaluru-five-people-including-a-woman-injured-in-mysterious-explosion-at-rameswaram-cafe-in-indiranagar/ https://kannadanewsnow.com/kannada/another-good-news-for-griha-jyoti-yojana-beneficiaries-from-the-state-government/

Read More

ಬೆಂಗಳೂರು: ನಟ ದರ್ಶನ್ ವಿರುದ್ಧ ಬಂದಂತ ದೂರಿನ ಹಿನ್ನಲೆಯಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನಿನ್ನೆಯಷ್ಟೇ ನಾನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕರಿಸಿದ ಬಳಿಕ ನಟ ದರ್ಶನ್ ವಿರುದ್ಧ ದೂರು ಬಂದ ಹಿನ್ನಲೆಯಲ್ಲಿ ನೋಟಿಸ್ ನೀಡಲಾಗಿದೆ ಎಂದರು. ನಟ ದರ್ಶನ್ ಸಾರ್ವಜನಿಕವಾಗಿ ಅಂತಹ ಶಬ್ದ ಪ್ರಯೋಗಿಸಬಾರದಾಗಿತ್ತು. ಹೆಣ್ಣುಮಕ್ಕಳನ್ನು ಅವಳು, ಇವಳು ಎಂಬುದಾಗಿ ಶಬ್ದ ಪ್ರಯೋಗಿಸಿ ಕರೆಯಬಾರದು. ನಟ ದರ್ಶನ್ ಅಹೇಳನಕಾರಿಯಾಗಿ ಮಾತನಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು. https://kannadanewsnow.com/kannada/another-good-news-for-griha-jyoti-yojana-beneficiaries-from-the-state-government/ https://kannadanewsnow.com/kannada/kpsc-recruitment-for-364-posts-of-land-surveyors/

Read More

ಬೆಂಗಳೂರು: ನಗರದ ಇಂದಿರಾನಗರದಲ್ಲಿರುವಂತ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟ ಇಂದು ಉಂಟಾಗಿದೆ. ಈ ಸ್ಪೋಟದಲ್ಲಿ ಮಹಿಳೆ ಸೇರಿದಂತೆ ಐವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಇಂದಿರಾ ನಗರದಲ್ಲಿರುವಂತ ರಾಮೇಶ್ವರಂ ಕಫೆಯಲ್ಲಿ ನಿಗೂಢ ಸ್ಪೋಟವೊಂದು ಉಂಟಾಗಿದೆ. ಈ ಸ್ಪೋಟದಿಂದಾಗಿ ಮಹಿಳೆ ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಪೋಟಕದ ಸ್ಥಳದಲ್ಲಿ ಐಡಿ ಕಾರ್ಡ್ ಗಳು ಸಿಕ್ಕಿರೋದಾಗಿ ಹೇಳಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು, ಎಫ್ಎಸ್ಎಲ್ ತಂಡದ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಭಾರಿ ಶಬ್ದದೊಂದಿಗೆ ಉಂಟಾದಂತ ಸ್ಪೋಟದಿಂದಾಗಿ ಅಕ್ಕ ಪಕ್ಕದ ಮನೆಯವರು ಭಯ ಭೀತಿಯಿಂದ ಮನೆಯಿಂದ ಹೊರ ಓಡಿ ಬಂದಿರೋದಾಗಿ ಹೇಳಲಾಗತ್ತಿದೆ. ಸಿಲಿಂಡರ್ ಸ್ಪೋಟದಿಂದ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಆ ಬಗ್ಗೆ ತನಿಖೆಯ ನಂತ್ರ ಮತ್ತಷ್ಟು ಮಾಹಿತಿ ತಿಳಿದು ಬರಬೇಕಿದೆ. https://kannadanewsnow.com/kannada/another-good-news-for-griha-jyoti-yojana-beneficiaries-from-the-state-government/ https://kannadanewsnow.com/kannada/kpsc-recruitment-for-364-posts-of-land-surveyors/

Read More

ಬೆಂಗಳೂರು: ನಗರದಲ್ಲಿನ ರಾಮೇಶ್ವರಂ ಕಫೆ ಹೋಟೆಲ್ ಒಂದರಲ್ಲಿ ನಿಗೂಢ ಸ್ಪೋಟವೊಂದು ಸಂಭವಿಸಿದ್ದು, ಇದರಲ್ಲಿ ಹಲವರು ಗಾಯಗೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನ ಹೆಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಂದಲಹಳ್ಳಿಯ ಬಳಿಯಲ್ಲಿನ ರಾಮೇಶ್ವರಂ ಕಫೆ ಹೋಟೆಲ್ ಒಂದರಲ್ಲಿ ನಿಗೂಢವಾಗಿ ಸ್ಪೋಟವೊಂದು ಸಂಭವಿಸಿರುವುದಾಗಿ ತಿಳಿದು ಬಂದಿದೆ. ನಿಗೂಢ ಸ್ಪೋಟದಿಂದ ಹಲವರು ಗಾಯಗೊಂಡಿದ್ದು, ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿರೋದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಬೆಂಗಳೂರಿನ ಹೆಚ್ ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಗೂಢವಾಗಿ ಸಂಭವಿಸಿದಂತ ಸ್ಪೋಟದ ವಿಷಯ ತಿಳಿದು, ಸ್ಥಳಕ್ಕೆ ಹೆಚ್ ಎಎಲ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. https://kannadanewsnow.com/kannada/bjp-wishes-tn-cm-stalin-on-his-birthday-in-mandarin-amid-isro-ad-row/ https://kannadanewsnow.com/kannada/strict-action-will-be-taken-against-those-who-raised-pro-pakistan-slogans-based-on-fsl-report-siddaramaiah/

Read More

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸುವಾಗ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಇಸ್ರೋದ ಹೊಸ ಉಡಾವಣಾ ಸಂಕೀರ್ಣದ ಜಾಹೀರಾತಿನ ಸುತ್ತ ನಡೆಯುತ್ತಿರುವ ವಿವಾದವನ್ನು ಎತ್ತಿ ತೋರಿಸುವ ಮೂಲಕ ಮ್ಯಾಂಡರಿನ್ ಭಾಷೆಯಲ್ಲಿ ಜನ್ಮದಿನದ ಶುಭಾಶಯಗಳನ್ನು ರಾಜ್ಯ ಬಿಜೆಪಿ ತಿಳಿಸಿದೆ. https://twitter.com/BJP4India/status/1762888078992269716 ಬಿಜೆಪಿ ತನ್ನ ಅಧಿಕೃತ ಎಕ್ಸ್ ಖಾತೆಯ ಮೂಲಕ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಜನ್ಮದಿನದಂದು ಸೂಕ್ಷ್ಮವಾಗಿ ಟೀಕಿಸಿದೆ. ಟ್ವೀಟ್ನಲ್ಲಿ, ತಮಿಳುನಾಡು ಬಿಜೆಪಿ ಸ್ಟಾಲಿನ್ಗೆ ಮ್ಯಾಂಡರಿನ್ ಭಾಷೆಯಲ್ಲಿ ಹುಟ್ಟುಹಬ್ಬದ ಶುಭಾಶಯಗಳನ್ನು ವ್ಯಕ್ತಪಡಿಸಿದೆ. ಈ ಕ್ರಮವು ಇಸ್ರೋದ ಹೊಸ ಉಡಾವಣಾ ಸಂಕೀರ್ಣಕ್ಕೆ ಸಂಬಂಧಿಸಿದ ಜಾಹೀರಾತಿನ ಸುತ್ತಲಿನ ವಿವಾದಕ್ಕೆ ಕಾರಣವಾಗಿದೆ. https://twitter.com/BJP4TamilNadu/status/1763434298403872881 ಈ ಜಾಹೀರಾತಿನಲ್ಲಿ ‘ಚೀನೀ ಧ್ವಜ’ದ ಪ್ರಮುಖ ಪ್ರದರ್ಶನದಿಂದಾಗಿ ಅಸಮಾಧಾನವನ್ನು ಹುಟ್ಟುಹಾಕಲಾಯಿತು. ಇದು ರಾಜಕೀಯ ಚರ್ಚೆಗಳಿಗೆ ಕಾರಣವಾಯಿತು. ತಪ್ಪನ್ನು ಒಪ್ಪಿಕೊಂಡ ತಮಿಳುನಾಡು ಸರ್ಕಾರ, ಇಸ್ರೋ ಸೌಲಭ್ಯದ ಜಾಹೀರಾತಿನಲ್ಲಿ ಚೀನಾದ ರಾಕೆಟ್ ನ ಛಾಯಾಚಿತ್ರಕ್ಕೆ ಸಂಬಂಧಿಸಿದ ಮೇಲ್ವಿಚಾರಣೆಯನ್ನು ಒಪ್ಪಿಕೊಂಡಿದೆ. ಪ್ರಚಾರ ಸಾಮಗ್ರಿಯಲ್ಲಿ ಚೀನಾದ ಚಿಹ್ನೆಯನ್ನು ಅಸಾಮಾನ್ಯವಾಗಿ ಸೇರಿಸುವುದರಿಂದ…

Read More

ಬೆಂಗಳೂರು: ಕರ್ನಾಟಕ ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ ( KSRTC, BMTC, KKRTC, NWKRTC ) ದೆಹಲಿಯ ದೇಶದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ( ASRTU) 2022 -23ನೇ ಸಾಲಿನ ಒಟ್ಟು 5 ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳು ( National Transport Excellence Award) ಲಭಿಸಿರುತ್ತವೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ ( ASRTU)ದ ವ್ಯಾಪ್ತಿಯಲ್ಲಿ ದೇಶದ 62 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಸದಸ್ಯತ್ವವನ್ನು ಹೊಂದಿವೆ. ಸದರಿ ಒಕ್ಕೂಟವು 13ನೇ ಆಗಸ್ಟ್ 1965 ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು ,ಭಾರತ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ನಿರ್ದೇಶನದ ಅನುಸಾರ ಕಾರ್ಯನಿರ್ವಹಿಸುತ್ತದೆ ಈ ಸಂಸ್ಥೆಯು 58 ವರ್ಷಗಳ ಅನುಭವವನ್ನು ಹೊಂದಿದ್ದು, ದೇಶದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಕೆ ಎಸ್ ಆರ್ ಟಿ‌‌ ಸಿ‌ ಗೆ ಬ್ರ್ಯಾಂಡಿಂಗ್ ಹಾಗೂ ವರ್ಚಸ್ಸು ಅಭಿವೃದ್ಧಿ ಉಪಕ್ರಮ ಮತ್ತು ಸಿಬ್ಬಂದಿಗಳ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ…

Read More

ಬೆಂಗಳೂರು: ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿ ಇಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಅಂಗಾಂಗ ದಾನಿಗಳ ಕುಟುಂಬದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಂಸಾ ಪತ್ರ ನೀಡಿ ಸಾಂತ್ವನ ಹಾಗೂ ಧೈರ್ಯ ಹೇಳಿದರು. ಅಪಘಾತಕ್ಕೀಡಾದ ಶರವಣ ಅವರ ಪತ್ನಿ, ಪ್ರಶಂಸಾ ಪತ್ರ ಸ್ವೀಕರಿಸುವಾಗ ಅಗಲಿದ ತಮ್ಮ ಪತಿಯನ್ನು ನೆನೆದು ಕಣ್ಣೀರಾದರು. ಕೊಲೆಗೀಡಾದ ರಾಮನಗರದ ಕೆ.ಜಿ. ನವೀನ್‌ ಕುಟುಂಬದವರಿಗೆ ಅವರ ಸಾವಿಗೆ ನ್ಯಾಯ ಒದಗಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು. ನೀವು ಕೈಗೊಂಡ ನಿರ್ಧಾರ ಸುಲಭವಲ್ಲ. ಆದರೆ ಇತರರ ಜೀವ ಉಳಿಸುವ ಕೆಲಸ ನೀವು ಮಾಡಿದ್ದೀರಿ ಎಂದು ಮೆಚ್ಚುಗೆಯ ನುಡಿಗಳನ್ನಾಡಿದರು. ನಿಮಗೆ ಯಾವುದೇ ಸಂಕಷ್ಟ ಎದುರಾದರೂ ನಿಮ್ಮೊಂದಿಗೆ ನಾವಿದ್ದೇವೆ ಎಂದು ಸ್ಥೈರ್ಯ ತುಂಬಿದರು. ತಮ್ಮ ಹಿಂದಿನ ಅವಧಿಯಲ್ಲಿ ಅಂಗಾಂಗ ದಾನಕ್ಕೆ ಸೊಸೈಟಿ ಸ್ಥಾಪಿಸಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಯವರು ಇನ್ನಷ್ಟು ಜನರು ಅಂಗಾಂಗ ದಾನಕ್ಕೆ ಮುಂದಾಗಬೇಕೆಂದು ಕರೆ ನೀಡಿದರು. ಸಮಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಮಾತನಾಡಿ, ಅಂಗಾಂಗ ದಾನ ಕೋರಿ, ನೋಂದಾಯಿಸಿಕೊಂಡವರ ಸಂಖ್ಯೆ…

Read More