Subscribe to Updates
Get the latest creative news from FooBar about art, design and business.
Author: kannadanewsnow09
ರಾಯಚೂರು : ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸುವಂತೆ ರಾಜ್ಯ ಸರ್ಕಾರ ಪತ್ರದ ಮೂಲಕ ಸ್ಪಷ್ಟ ಪಡಿಸಿದರೂ ಬಿಜೆಪಿ ಸರ್ಕಾರ ಮತ್ತೆ, ಮತ್ತೆ ಗೊಂದಲ ಸೃಷ್ಠಿಸುತ್ತಿದೆ. ಏಮ್ಸ್ ಮಂಜೂರಾತಿಗಾಗಿ 1000 ದಿನಗಳಿಂದ ನಡೆಯುತ್ತಿರುವ ಹೋರಾಟವನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಕಾಂಗ್ರೆಸ್ ರಾಜ್ಯ ಯುವ ಮುಖಂಡರಾದ ರವಿ ಬೋಸರಾಜು ಅವರು ಗಂಭೀರವಾಗಿ ಆರೋಪಿಸಿದ್ದಾರೆ. 1000 ದಿನ ಪೂರೈಸಿದ ಏಮ್ಸ್ ಹೋರಾಟದ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು. ಹಿಂದುಳಿದ ಭಾಗವಾದ ಕಲ್ಯಾಣ ಕರ್ನಾಟಕದ ಮಹತ್ವಾಕಾಂಕ್ಷಿ ಜಿಲ್ಲೆಯಾದ ರಾಯಚೂರಿನಲ್ಲಿಯೇ ಏಮ್ಸ್ ಸ್ಥಾಪಿಸಬೇಕೆಂದು ಈಗಾಗಲೇ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನಾಲ್ಕು ಬಾರಿ ಕೇಂದ್ರಕ್ಕೆ ಪತ್ರವನ್ನು ಬರೆದಿದ್ದಾರೆ. ಆದರೆ ಕೇಂದ್ರ ಸರ್ಕಾರ ಕಲ್ಯಾಣ ಕರ್ನಾಟಕ ವನ್ನು ಮರೆತು ಹೋರಾಟಗಾರರನ್ನು ಕಡೆಗಣಿಸುತ್ತಿರುವುದು ಖಂಡನೀಯವಾಗಿದೆ ಎಂದರು. ವೈದ್ಯಕೀಯ ಶಿಕ್ಷಣ ಸಚಿವರಾದ ಶರಣ್ ಪ್ರಕಾಶ್ ಪಾಟೀಲ್ ಹಾಗೂ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಮಂತ್ರಿಗಳಾದ ಬೋಸರಾಜು ಸೇರಿ ಈ ಭಾಗದ ಜನಪ್ರತಿನಿಧಿಗಳ ನಿಯೋಗ ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಬೇಕು…
ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ, ಅದೇ ರೀತಿ ಜೀವನದಲ್ಲೂ ಏರುಪೇರು ಆಗುತ್ತಲೇ ಇರುತ್ತದೆ. ಒಂದು ವೇಳೆ ತಂತ್ರ ಶಕ್ತಿಯಿಂದ ತೊಂದರೆ ಅನುಭವಿಸುತ್ತಿದ್ದರೆ ಅಥವಾ ಹಣದ ಸಮಸ್ಯೆಯನ್ನು ಎದುರಿಸುತ್ತಿದ್ದರೆ ,ಶತ್ರುಗಳಿಂದ ನಿಮಗೆ ತೊಂದರೆಯಾಗುತ್ತಿದ್ದರೆ ,ಗಂಡ-ಹೆಂಡತಿ ನಡುವೆ ಯಾವುದಾದರೂ ವಿಚಾರಕ್ಕೆ ಯಾವಾಗಲೂ ಕಲಹ ಆಗುತ್ತಿದ್ದರೆ ನಾವು ಇಂದು ತಿಳಿಸಿಕೊಡುವ ಈ ಉಪಾಯವನ್ನು ಮಾಡಿದರೆ ಜೀವನವಿಡಿ ಸುಖ ಶಾಂತಿ ಹಾಗೂ ನೆಮ್ಮದಿಯಿಂದ ಜೀವನವನ್ನು ನಡೆಸಬಹುದು. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ,…
ಬೆಂಗಳೂರು: ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುತ್ತಿದ್ದು, ಸಾಮಾನ್ಯವಾಗಿ ಗುಂಪಿನ ನಾಯಕತ್ವ ವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ರೇಡಿಯೋ ಕಾಲರ್ ಅಳವಡಿಸುವ ಮೂಲಕ ಆನೆ ಚಲನ ವಲನದ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಅರಣ್ಯ ಭವನದಲ್ಲಿಂದು ಕರ್ನಾಟಕ ಅರಣ್ಯ ಇಲಾಖೆ ಬೆಂಗಳೂರಿನ ಇನ್ಫಿಕ್ಷನ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್ ಜೊತೆಗೂಡಿ ಅಭಿವೃದ್ಧಿಪಡಿಸಿರುವ ವೆಚ್ಚದಕ್ಷ ಕರ್ನಾಟಕ-ಪರಿಶೋಧಿತ ಪತ್ತೆ ಸಾಧನ (ಕೆ.ಪಿ. ಟ್ರ್ಯಾಕರ್) ಎಂಬ ಹೆಸರಿನ ರೇಡಿಯೋ ಕಾಲರ್ ಗಳನ್ನು ಬಂಡೀಪುರ ಮತ್ತು ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶದ ಅಧಿಕಾರಿಗಳಿಗೆ ಹಸ್ತಾಂತರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. 6395 ಆನೆಗಳನ್ನು ಹೊಂದಿರುವ ಕರ್ನಾಟಕ ದೇಶದಲ್ಲಿ ಆನೆಗಳ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲಿದೆ. ಆದರೆ ಆನೆಗಳ ಸಂಖ್ಯೆಗೆ ಅನುಗುಣವಾಗಿ ವನ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ. ಅಮೂಲ್ಯವಾದ ಜೀವ ಉಳಿಸಲು ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಸ್ಥಳೀಯರಿಗೆ ಮಾಹಿತಿ ನೀಡಲು ಸರ್ಕಾರ…
ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಂಡ್ ಟೀಂ ವಿರುದ್ಧ ಬಿವೈ ವಿಜಯೇಂದ್ರ ಬಣ ಸಿಡಿದೆದ್ದಿದೆ. ಫೆಬ್ರವರಿ 12ರಂದು ಬೆಂಗಳೂರಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಈ ಸಭೆಯ ಬಳಿಕ ದೆಹಲಿಗೆ ತೆರಳಿ ಪಕ್ಷದಿಂದ ಉಚ್ಚಾಟನೆಗೆ ಆಗ್ರಹಿಸಲಿದೆ ಎನ್ನಲಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಅಂಡ್ ಟೀಂ ದೆಹಲಿಯಲ್ಲಿ ಬೀಡು ಬಿಟ್ಟು ವಾಗ್ದಾಳಿ ಕೂಡ ನಡೆಸುತ್ತಿದೆ. ಇದರಿಂದಾಗಿ ಬಿಜೆಪ ಪಕ್ಷದಲ್ಲಿ ಆತಂರೀಕ ಕಚ್ಚಾಟ ಬೀದಿಗೆ ಬಿದ್ದಂತೆ ಆಗಿದೆ. ಈ ಹಿನ್ನೆಲೆಯಲ್ಲಿ ಬಿವೈ ವಿಜಯೇಂದ್ರಗೆ ಬೆಂಬಲಿಸಲು ಮತ್ತೊಂದು ಟೀಮ್ ರೆಡಿಯಾಗಿದೆ. ಇದೇ ಫೆಬ್ರವರಿ 12ರಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿ ಯತ್ನಾಳ್ ನಡೆ ಬಗ್ಗೆ ಚರ್ಚಿಸಲು ತೀರ್ಮಾನಿಸಿದೆ ಎನ್ನಲಾಗಿದೆ. ಫೆಬ್ರವರಿ 12ರ ಸಭೆಯಲ್ಲಿ 100ಕ್ಕೂ ಹೆಚ್ಚು ಮಾಜಿ ಸಚಿವರು, ಶಾಸಕರು ಭಾಗಿಯಾಗೋ ಸಾಧ್ಯತೆ ಇದೆ. ಈ ಸಭೆಯಲ್ಲಿ ಯತ್ನಾಳ್ ಅಂಡ್ ಟೀಂ ಬಗ್ಗೆ ಚರ್ಚೆ ನಡೆಸಿ, ದೆಹಲಿಗೆ ತೆರಳಿ ಪಕ್ಷದಿಂದ ಉಚ್ಚಾಟನೆ ಮಾಡಲು ಆಗ್ರಹಿಸೋದಾಗಿ ತಿಳಿದು…
ಬೆಂಗಳೂರು: ನಗರದ ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ. ಬೆಂಗಳೂರಿನ ಕೋಣನಕುಂಟೆ ಬಳಿ ಇರುವಂತ ದಯಾನಂದ ಸಾಗರ್ ಕಾಲೇಜಿನಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿ ಅಟಾಮಿಕ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಿದ್ಯಾರ್ಥಿನಿ ಅನಾಮಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಅಥವಾ ಹತ್ಯೆಯೋ ಎನ್ನುವುದು ತನಿಖೆಯಿಂದ ತಿಳಿಯಬೇಕು. ಸ್ಥಳದಲ್ಲಿ ಎರಡು ಪುಟಗಳ ಡೆತ್ ನೋಟ್ ಪತ್ತೆಯಾಗಿದೆ ಎನ್ನಲಾಗುತ್ತದೆ.
ಬೆಂಗಳೂರು: ಯಾವುದೇ ಧರ್ಮದ ಬಗ್ಗೆ ಶ್ರದ್ದೆ, ಆಚರಣೆ, ನಂಬಿಕೆಗಳು ಆಯಾಯ ವ್ಯಕ್ತಿಗೆ ಸಂಬಂಧಿಸಿದ ವಿಚಾರಗಳು. ನಾವು ಪ್ರತಿಯೊಂದಕ್ಕೂ ಗೌರವ ನೀಡಬೇಕು. ಆದರೆ ಇವುಗಳನ್ನು ಬಿಜೆಪಿ ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಬುಧವಾರ ಉತ್ತರಿಸಿದರು. ಕುಂಭಮೇಳದಲ್ಲಿ ಭಾಗವಹಿಸುತ್ತಿರುವ ಬಗ್ಗೆ ಆರ್.ಅಶೋಕ್ ಅವರು ಎಕ್ಸ್ ಖಾತೆಯಲ್ಲಿ ಟೀಕೆ ಮಾಡಿರುವ ಬಗ್ಗೆ ಕೇಳಿದಾಗ, “ವಿರೋಧ ಪಕ್ಷದ ನಾಯಕ ಅಶೋಕ್ ಅವರ ಹೇಳಿಕೆಗೆ ಉತ್ತರಿಸಲು ನಾನು ಇಷ್ಟ ಪಡುವುದಿಲ್ಲ. ಯಾರು ಏನಾದರೂ ಹೇಳಿಕೊಳ್ಳಲಿ, ನಮ್ಮ ಧರ್ಮ, ನಮ್ಮ ಕರ್ಮ, ಆಚಾರ ವಿಚಾರ ಅನವಶ್ಯಕವಾಗಿ ಈ ವಿಚಾರಗಳನ್ನು ಎಳೆದಾಡಲು ನಾನು ಹೋಗುವುದಿಲ್ಲ. ನಮ್ಮ ಪಕ್ಷದ ನಾಯಕರು ಈ ವಿಚಾರವಾಗಿ ವಿಶಾಲಾರ್ಥದ ಹೇಳಿಕೆ ನೀಡಿದ್ದಾರೆ. ಆದರೆ ಬಿಜೆಪಿ ಇದರಲ್ಲಿ ರಾಜಕೀಯ ಮಾಡುತ್ತಿದೆ. ಧರ್ಮ, ಆಚರಣೆ, ನಂಬಿಕೆಗಳು ರಾಜಕೀಯವಾಗಿ ಉಪಯೋಗಿಸಿಕೊಳ್ಳುವ ವಿಚಾರವಲ್ಲ” ಎಂದು ಹೇಳಿದರು. ನನ್ನ ವೈಯಕ್ತಿಕ ನಂಬಿಕೆ ವಿಚಾರವಾಗಿ ಮಾತನಾಡಲು ಯಾರಿಗೂ ಹಕ್ಕಿಲ್ಲ: “ಗಂಗೆಯಾಗಲಿ,…
ಬೆಂಗಳೂರು: ಕೇಂದ್ರ ಸರ್ಕಾರ ಹಾಗೂ ಯುಜಿಸಿ (ವಿಶ್ವವಿದ್ಯಾಲಯ ಧನ ಸಹಾಯ ಆಯೋಗ) ದ ಮೇಲೆ ಒತ್ತಡ ತಂದು ಅನೇಕ ಲೋಪದೋಷಗಳನ್ನು ಹೊಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂಪಡೆಯಲು ನಾವೆಲ್ಲರೂ ಸೇರಿ ಒತ್ತಡ ಹೇರಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಬುಧವಾರ ನಡೆದ ರಾಜ್ಯ ಉನ್ನತ ಶಿಕ್ಷಣ ಸಚಿವರ ಸಮ್ಮೇಳನದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ರಾಷ್ಟೀಯ ಶಿಕ್ಷಣ ನೀತಿಯಲ್ಲಿ ಸಾಕಷ್ಟು ಲೋಪಗಳಿದ್ದವು. ನಮ್ಮ ಕರ್ನಾಟಕ ಸರ್ಕಾರ ಧೈರ್ಯದಿಂದ ಮುನ್ನುಗ್ಗಿ ಒಂದಷ್ಟು ತಿದ್ದುಪಡಿ ಮಾಡುವ ತೀರ್ಮಾನಗಳನ್ನು ತೆಗೆದುಕೊಂಡಿದೆ” ಎಂದರು. “ಈ ಸಮ್ಮೇಳನದಿಂದ ಹೊರ ಬರುವ ವಿಚಾರಗಳು ಕೇಂದ್ರ ಸರ್ಕಾರಕ್ಕೆ ಮುಟ್ಟಬೇಕು. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳ ಶೈಕ್ಷಣಿಕ ಗುಣಮಟ್ಟ ಅತ್ಯುತ್ತಮವಾಗಿದೆ. ನಾವು ಸೌಲಭ್ಯ ಕೊಡುವುದರಲ್ಲೂ ಮುಂದಿದ್ದೇವೆ. ನನಗೆ ನೆನಪಿರುವಂತೆ ಕಳೆದ 30 ವರ್ಷಗಳ ಹಿಂದೆಯೇ ಉತ್ತರ ಭಾರತದ ವಿದ್ಯಾರ್ಥಿಗಳು ದಕ್ಷಿಣ ಭಾರತ ರಾಜ್ಯಗಳಿಗೆ ಉತ್ತಮ ಶಿಕ್ಷಣ ಪಡೆಯುವ ಸಲುವಾಗಿ…
ನವದೆಹಲಿ: ಸುಮಾರು 200 ಅಕ್ರಮ ಭಾರತೀಯ ವಲಸಿಗರನ್ನು ಹೊತ್ತ ಯುಎಸ್ ಮಿಲಿಟರಿ ವಿಮಾನವು ಅಮೃತಸರದ ಶ್ರೀ ಗುರು ರಾಮದಾಸ್ ಜಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ಈ ಮೊದಲು, ವಿಮಾನವು ಬೆಳಿಗ್ಗೆ ಇಳಿಯುವ ನಿರೀಕ್ಷೆಯಿತ್ತು. ವಿಮಾನದಲ್ಲಿದ್ದವರ ವಿವರಗಳು ಇನ್ನೂ ಲಭ್ಯವಿಲ್ಲ. ವರದಿಗಳ ಪ್ರಕಾರ, ಯುಎಸ್ ಮಿಲಿಟರಿ ವಿಮಾನ ಸಿ -17 ಪಂಜಾಬ್ ಮತ್ತು ನೆರೆಯ ರಾಜ್ಯಗಳಿಂದ ಬಂದ 205 ಅಕ್ರಮ ವಲಸಿಗರನ್ನು ಹೊತ್ತೊಯ್ಯುತ್ತಿದೆ. ಪಂಜಾಬ್ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಗೌರವ್ ಯಾದವ್ ಮಂಗಳವಾರ ರಾಜ್ಯ ಸರ್ಕಾರವು ವಲಸಿಗರನ್ನು ಸ್ವೀಕರಿಸುತ್ತದೆ ಮತ್ತು ವಿಮಾನ ನಿಲ್ದಾಣದಲ್ಲಿ ಕೌಂಟರ್ಗಳನ್ನು ಸ್ಥಾಪಿಸುತ್ತದೆ ಎಂದು ಹೇಳಿದರು.
ಬೆಂಗಳೂರು: ರಾಜ್ಯಾಧ್ಯಂತ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲಿಯ ನೀರು ಬಳಕೆ ಮಾಡದಂತೆ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ಕೇವಲ ಗ್ಲಾಸ್ ನಲ್ಲಿ ನೀರು ಪೂರೈಕೆ ಮಾಡುವಂತೆ, ಪರಿಸರ ಮಾರಕವಾಗಿರುವಂತ ಪ್ಲಾಸ್ಟಿಕ್ ಬಾಟಲಿ ನೀರು ಪೂರೈಕೆ ಮಾಡದಂತೆ ಖಡಕ್ ಸೂಚನೆ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದ್ದು, ಸರ್ಕಾರದ ಅಧಿಸೂಚನೆ ಸಂಖ್ಯೆ: ಅಪಜೀ 17 ಇಪಿಸಿ 2012, ದಿನಾಂಕ: 11.03.2016 ರಲ್ಲಿ ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನ (Single use packaged water bottles) ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ. ಇಂತಹ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರನ್ನು…
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಗಾಗಿ ಇಂದು ಮತದಾನ ನಡೆಯುತ್ತಿದೆ. ಇದೀಗ ತಿಳಿದು ಬಂದಿರುವ ಮಾಹಿತಿಯಂತೆ ಇಂದು ಬೆಳಿಗ್ಗೆ 11 ಗಂಟೆಯವರೆಗೆ ಶೇ.19.95ರಷ್ಟು ಮತದಾನ ಆಗಿರುವುದಾಗಿ ಹೇಳಲಾಗುತ್ತಿದೆ. ಕೇಂದ್ರ ಚುನಾವಣಾ ಆಯೋಗದ ಮಾಹಿತಿಯಂತೆ ದೆಹಲಿ ವಿಧಾನಸಭಾ ಚುನಾವಣೆಗೆ ನಡೆಯುತ್ತಿರುವಂತ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ. ಇಂದು ಬೆಳಗ್ಗೆ 11ರವರೆಗೆ ಶೇ.19.95ರಷ್ಟು ಆಗಿರುವುದಾಗಿ ಮಾಹಿತಿ ನೀಡಿದೆ. ಇಂದು ತಮ್ಮ ಮತ ಚಲಾಯಿಸಿ ಮಾತನಾಡಿದಂತ ಕೇಜ್ರಿವಾಲ್ ಪತ್ನಿ ಸುನೀತಾ ಕೇಜ್ರಿವಾಲ್, ದೆಹಲಿಯ ಜನರು ತುಂಬಾ ಬುದ್ಧಿವಂತರಾಗಿದ್ದಾರೆ. ನಾವು ಅವರನ್ನು ನಂಬುತ್ತೇವೆ. ಗೂಂಡಾಗಿರಿಯನ್ನು ಅವರು ಸಹಿಸೋದಿಲ್. ದೆಹಲಿಯ ಜನರು ಸರಿಯಾದ ಆಯ್ಕೆ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.