Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯಾಧ್ಯಂತ ಭಗವಾನ್ ಬುದ್ಧ ಜಯಂತಿಯನ್ನು ಪ್ರತಿ ವರ್ಷ ಬುದ್ಧ ಪೌರ್ಣಿಮೆಯಂದು ಆಚರಿಸುವಂತೆ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಸಹಕಾರ ಸಂಘಗಳ ಅಪರ ನಿಬಂಧಕರು (ನಿ), ಮೈಸೂರು ಇವರು ದಿನಾಂಕ:19.08.2023ರ ಪತ್ರದಲ್ಲಿ, ಮಹಾವೀರ, ಕನಕದಾಸರು ಮುಂತಾದ ಮಹಾತ್ಮ ದಾರ್ಶನಿಕರ ಜಯಂತಿಗಳನ್ನು ರಾಷ್ಟ್ರೀಯ ಹಬ್ಬಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಅವುಗಳ ಆಚರಣೆಯನ್ನು ಜಾರಿಗೆ ತಂದಿದ್ದು, ಏಷ್ಯಾ ಖಂಡದ ಹಲವಾರು ರಾಷ್ಟ್ರಗಳು ಬುದ್ದ ಜಯಂತಿಯನ್ನು ರಾಷ್ಟ್ರೀಯ ಹಬ್ಬವಾಗಿ ವೈಭವದಿಂದ ಆಚರಿಸುತ್ತಿದ್ದು, ವಿಶ್ವದ ಪ್ರಥಮ ಹಾಗೂ ಶ್ರೇಷ್ಠ ದಾರ್ಶನಿಕರಾದ ಬುದ್ಧರ ಜಯಂತಿಯನ್ನು ಅವರು ಜನಿಸಿದ ಭಾರತದಲ್ಲಿ ಸರ್ಕಾರದ ವತಿಯಿಂದ ಆಚರಿಸುವುದು ಸೂಕ್ತ ಎಂದು ತಿಳಿಸುತ್ತಾ, ಬುದ್ಧ ಜಯಂತಿಯನ್ನು ರಾಷ್ಟ್ರೀಯ ಹಬ್ಬಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಸರ್ಕಾರದ ವತಿಯಿಂದ ಪ್ರತಿವರ್ಷ ಆಯೋಜಿಸಿ ಆಚರಿಸಲು ಸರ್ಕಾರದ ಆದೇಶ ಹೊರಡಿಸುವಂತೆ ಕೋರಿರುತ್ತಾರೆ ಎಂದಿದ್ದಾರೆ. ಆದರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಈಗಾಗಲೇ ವಾರ್ಷಿಕವಾಗಿ ವಿವಿಧ ಮಹಾಪುರುಷರ…
ಲಂಡನ್: ಬ್ರಿಟನ್ನಲ್ಲಿ ಮೊದಲ ಬಾರಿಗೆ ಗರ್ಭಕೋಶ ಕಸಿ ನಂತರ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಲಂಡನ್ನ ಕ್ವೀನ್ ಷಾರ್ಲೆಟ್ ಮತ್ತು ಚೆಲ್ಸಿಯಾ ಆಸ್ಪತ್ರೆ ಮಂಗಳವಾರ ದೃಢಪಡಿಸಿದೆ. ಇಂಗ್ಲೆಂಡ್ನ ದಕ್ಷಿಣದಲ್ಲಿ ವಾಸಿಸುವ 36 ವರ್ಷದ ಹೊಸ ತಾಯಿ ಗ್ರೇಸ್ ಡೇವಿಡ್ಸನ್ ಕಾರ್ಯನಿರ್ವಹಿಸುವ ಗರ್ಭಕೋಶವಿಲ್ಲದೆ ಜನಿಸಿದೆ. 2023 ರ ಆರಂಭದಲ್ಲಿ ಅವರ ಸಹೋದರಿ ಆಮಿ ಗರ್ಭಕೋಶ ಕಸಿ ಯುಕೆ ಜೀವಂತ ದಾನಿ ಕಾರ್ಯಕ್ರಮದ ಭಾಗವಾಗಿ ತಮ್ಮ ಸ್ವಂತ ಗರ್ಭಕೋಶವನ್ನು ದಾನ ಮಾಡಿದ ನಂತರ ಬ್ರಿಟನ್ನಲ್ಲಿ ಗರ್ಭಕೋಶ ಕಸಿ ಮಾಡಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದಾಗ ಇದು ಬದಲಾಯಿತು. 2023 ರಲ್ಲಿ ಇಂಟರ್ನ್ಯಾಷನಲ್ ಜರ್ನಲ್ ಆಫ್ ಅಬ್ಸ್ಟೆಟ್ರಿಕ್ಸ್ ಅಂಡ್ ಗೈನಕಾಲಜಿ BJOG ವರದಿ ಮಾಡಿದಂತೆ, ಮೂಲ ದಾನಿ ಶಸ್ತ್ರಚಿಕಿತ್ಸೆ ಮತ್ತು ನಂತರದ ಕಸಿ OUH ನ ಚರ್ಚಿಲ್ ಆಸ್ಪತ್ರೆಯ ಭಾಗವಾಗಿರುವ ಆಕ್ಸ್ಫರ್ಡ್ ಕಸಿ ಕೇಂದ್ರದಲ್ಲಿ ನಡೆಯಿತು. ನಂತರ ಗ್ರೇಸ್ ಲಂಡನ್ನಲ್ಲಿರುವ HCA UK ಯ ಲಿಸ್ಟರ್ ಫರ್ಟಿಲಿಟಿ ಕ್ಲಿನಿಕ್ನಲ್ಲಿ ಇನ್ ವಿಟ್ರೊ ಫರ್ಟಿಲೈಸೇಶನ್…
ಬೆಂಗಳೂರು: 2025ರ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಹಾಜರಾತಿ ಕೊರತೆಯ ಕಾರಣ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಾಗದ ಅರ್ಹ ವಿದ್ಯಾರ್ಥಿಗಳಿಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಖಾಸಗಿ ಅಭ್ಯರ್ಥಿಯಾಗಿ ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಈ ಸಂಬಂಧ ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದ್ದು, 2025 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಹಾಜರಾತಿ ಕೊರತೆಯ ಕಾರಣ ಪರೀಕ್ಷೆ ತೆಗೆದುಕೊಳ್ಳಲು ಸಾಧ್ಯವಾಗದ ದಿನಾಂಕ: 31-03-2025 ಕ್ಕೆ 17 ವರ್ಷ ತುಂಬಿದ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪ್ರಸ್ತುತ ಪಿಯು ಪರೀಕ್ಷೆ – 2 ಕ್ಕೆ ಕಲಾ ಮತ್ತು ವಾಣಿಜ್ಯ ವಿಭಾಗಕ್ಕೆ ಆಯ್ತ ಸಂಯೋಜನೆಗಳೊಂದಿಗೆ ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸಿಕೊಳ್ಳಲು ಅರ್ಹರಿದ್ದು, ಅವರುಗಳು ಮಂಡಲಿಯ ನಿಯಮಾನುಸಾರ ತಾವು ಅಭ್ಯಸಿಸಿದ ಕಾಲೇಜಿನಲ್ಲಿಯೇ ನೋಂದಾಯಿಸಿಕೊಳ್ಳಲು ಉಲ್ಲೇಖಿತ ಇ-ಕಛೇರಿ ಕಡತದಲ್ಲಿ ಸರ್ಕಾರವು ಅನುಮತಿ ನೀಡಿರುತ್ತದೆ ಎಂದಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ ಹಾಗೂ ಮೇ ಮಾಹೆಯಲ್ಲಿ ಕರ್ನಾಟಕ ಶಾಲಾ…
ಮಡಿಕೇರಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದರು. ಮಡಿಕೇರಿಯಲ್ಲಿ ನಡೆದ ಬಿಜೆಪಿ ಜನಾಕ್ರೋಶ ಹೋರಾಟದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗಿದೆ. ಪ್ರಶಾಂತ್ ಪೂಜಾರಿ, ಆರ್ಎಸ್ಎಸ್ ರಾಜು, ರಾಜೇಶ್ ಕೋಟ್ಯಾನ್, ಪ್ರವೀಣ್ ಪೂಜಾರಿ, ಚರಣ್ ಪೂಜಾರಿ, ವಿಶ್ವನಾಥ್ ಹೀಗೆ ಅನೇಕ ಹಿಂದೂ ಕಾರ್ಯಕರ್ತರ ಕೊಲೆ ಪಿಎಫ್ಐ, ಎಸ್ಡಿಪಿಐ ಮೊದಲಾದ ಮುಸ್ಲಿಂ ಸಂಘಟನೆಗಳಿಂದ ನಡೆದಿದೆ. ಈಗ ಕೊಡಗಿನ ವಿನಯ್ ಸೋಮಯ್ಯ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿಂದೂಗಳನ್ನು ಟಾರ್ಗೆಟ್ ಮಾಡುವುದು ಬಹಳ ದಿನ ನಡೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಕೊಡಗಿನಲ್ಲಿ ಈ ಹಿಂದೆ ಟಿಪ್ಪು ಜಯಂತಿ ನಡೆದಾಗ ಕುಟ್ಟಪ್ಪ ಎಂಬುವರು ಹತ್ಯೆಯಾಗಿದ್ದರು. ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ಬೇರೆ ಮಾಡಲು ಯತ್ನಿಸುತ್ತಿದೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗಿದೆ. ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದರೆ ಕರ್ನಾಟಕವನ್ನು ಪಾಕಿಸ್ತಾನಕ್ಕೆ ಕೊಟ್ಟುಬಿಡುತ್ತಾರೆ ಎಂದರು. ಹಿಂದೆ ಮುಸ್ಲಿಮರು ಹಿಂದೂಗಳ ಮೇಲೆ ದಾಳಿ ಮಾಡುವುದು ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿತ್ತು.…
ಮಂಡ್ಯ : ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮತ್ತು ಜಿಎಸ್ಟಿ ಕಟ್ಟುವುದರಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ರಾಜ್ಯದ ಆರ್ಥಿಕ ಸ್ಥಿತಿ ಸಶಕ್ತವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಮಂಡ್ಯ ಜಿಲ್ಲಾ ಪೊಲೀಸ್ ಘಟಕದ ಪ್ರಗತಿ ಪರಿಶೀಲನೆಗೆ ಅಗಮಿಸಿದ್ದ ವೇಳೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಸುದ್ದಿಗಾರರನ್ನು ಉದ್ದೇಶಿಸಿ ಅವರು ಮಾತನಾಡಿದರು. ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದೆ ಎಂಬುದು ಬಿಜೆಪಿಯವರಿಗೆ ಈಗ ಅರ್ಥವಾಗಿದೆ. ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ರಾಷ್ಟ್ರದ ಗಮನ ಸೆಳೆದಿದ್ದೇವೆ. ಜಿಎಸ್ಟಿ ಕಟ್ಟುವುದರಲ್ಲಿ ದೇಶದಲ್ಲಿ 2ನೇ ಸ್ಥಾನದಲ್ಲಿದ್ದೇವೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮತ್ತು ತೆರಿಗೆ ಕಟ್ಟುವುದರಿಂದ ಆರ್ಥಿಕ ಸ್ಥಿತಿ ಹೇಗಿದೆ ಎಂಬುದು ಗೊತ್ತಾಗುತ್ತದೆ ಎಂದರು. ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸುವುದಿಲ್ಲ. ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗುತ್ತಾರೆ ಎಂದು ಬಿಜೆಪಿಯವರು ಆರೋಪಿಸುತ್ತಿದ್ದರು. ಐದು ಗ್ಯಾರಂಟಿ ಯೋಜನೆಗಳಿಗೆ ಬಜೆಟ್ನಲ್ಲಿ ಹಣ ಮೀಸಲಿಟ್ಟಿದ್ದೇವೆ. ಜಾತಿ, ಧರ್ಮ, ಪಕ್ಷ ಬೇದವಿಲ್ಲದೆ ಎಲ್ಲರಿಗೂ ಸಮಾನವಾಗಿ ಯೋಜನೆಗಳನ್ನು ಕೊಟ್ಟಿದ್ದೇವೆ. ಹೆಣ್ಣು ಮಕ್ಕಳು ಆರ್ಥಿಕಶಕ್ತಿ…
ಬೆಂಗಳೂರು: ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆಯನ್ನು ಪ್ರಕಟಿಸಿ ಕೋರ್ಟ್ ಆದೇಶಿಸಿದೆ. ಬರೋಬ್ಬರಿ 1 ಕೋಟಿ 25 ಲಕ್ಷ ದಂಡವನ್ನು ವಿಧಿಸಿದೆ. ಈ ಮೂಲಕ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ಶಾಕ್ ನೀಡಿದೆ. ಮಾಜಿ ಸಚಿವ ಬಿ ನಾಗೇಂದ್ರಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಕೋರ್ಟ್ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ. 1 ಕೋಟಿ 25 ಲಕ್ಷ ದಂಡ ಪಾವತಿಸಲು ಮೂವರು ಆರೋಪಿಗಳಿಗೆ ಶಿಕ್ಷೆ ವಿಧಿಸಿದೆ. ಇನ್ನೂ ದಂಡ ಪಾವತಿಸದೇ ಇದ್ದರೇ 1 ವರ್ಷ ಸೆರೆವಾಸ ಅನುಭವಿಸುವಂತೆ 42ನೇ ಎಸಿಜೆಎಂ ಕೋರ್ಟ್ ನ ನ್ಯಾಯಮೂರ್ತಿ ಶಿವಕುಮಾರ್ ಆದೇಶಿಸಿದ್ದಾರೆ. ಅಂದಹಾಗೇ ವಿಎಸ್ ಎಲ್ ಸ್ಟೀಲ್ ಲಿಮಿಟೆಡ್ ಮಾಜಿ ಸಚಿವ ಬಿ ನಾಗೇಂದ್ರ ಸೇರಿದಂತೆ ಮೂವರ ವಿರುದ್ಧ ಚೆಕ್ ಬೌನ್ಸ್ ಕೇಸ್ ದಾಖಲಿಸಿತ್ತು. ಈ ಪ್ರಕರಣದಲ್ಲಿ ಇಂದು ಕೋರ್ಟ್ ತೀರ್ಪು ನೀಡಿದೆ. https://kannadanewsnow.com/kannada/jds-launches-sakappa-saku-congress-sarkar-campaign-nikhil-kumaraswamy/ https://kannadanewsnow.com/kannada/alert-those-who-sleep-with-their-mobile-phones-near-their-heads-should-read-this/
ಚೀನಾ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಅಮೆರಿಕ ಮತ್ತು ಚೀನಾ ನಡುವಿನ ವ್ಯಾಪಾರ ಯುದ್ಧವು ಉಲ್ಬಣಗೊಳ್ಳುತ್ತಿದ್ದಂತೆ, ಚೀನಾ ತನ್ನ ಇತ್ತೀಚಿನ ಕ್ರಮದಲ್ಲಿ ಎಲ್ಲಾ ಯುಎಸ್ ಉತ್ಪನ್ನಗಳ ಮೇಲೆ ಶೇಕಡಾ 84 ರಷ್ಟು ಸುಂಕವನ್ನು ವಿಧಿಸಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಚೀನಾದ ಹಣಕಾಸು ಸಚಿವಾಲಯವು ಇತ್ತೀಚಿನ ಕ್ರಮವನ್ನು ಘೋಷಿಸುವಾಗ, ಹೊಸ ಶುಲ್ಕಗಳು ಏಪ್ರಿಲ್ 10 ರಿಂದ ಜಾರಿಗೆ ಬರುತ್ತವೆ ಎಂದು ಪ್ರತಿಪಾದಿಸಿದೆ. ಅಮೆರಿಕ ಮತ್ತು ಚೀನಾ ನಡುವೆ ನಡೆಯುತ್ತಿರುವ ವ್ಯಾಪಾರ ವಿವಾದದ ಮಧ್ಯೆ ಅಮೆರಿಕದ ಸರಕುಗಳ ಮೇಲೆ ತನ್ನದೇ ಆದ ಶೇಕಡಾ 84 ರಷ್ಟು ಹೆಚ್ಚುವರಿ ಸುಂಕವನ್ನು ವಿಧಿಸುವ ಮೂಲಕ ಡೊನಾಲ್ಡ್ ಟ್ರಂಪ್ ಅವರ ಶೇಕಡಾ 104 ರಷ್ಟು ಸುಂಕದ ವಿರುದ್ಧ ಚೀನಾ ಪ್ರತೀಕಾರ ತೀರಿಸಿಕೊಂಡಿದೆ. ಈ ಹೊಸ ಸುಂಕಗಳು ಏಪ್ರಿಲ್ 10 ರಿಂದ ಜಾರಿಗೆ ಬರಲಿವೆ ಎಂದು ಚೀನಾದ ಹಣಕಾಸು ಸಚಿವಾಲಯ ಘೋಷಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಈ ಕ್ರಮವು ಯುಎಸ್ ಸರಕುಗಳ ಮೇಲಿನ ಚೀನಾದ ಸುಂಕ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ದರ ಏರಿಕೆ, ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದಿರುವ ಜೆಡಿಎಸ್ ಪಕ್ಷವು, ಸರಕಾರದ ವಿರುದ್ಧ ವಿನೂತನ ಅಭಿಯಾನ ಆರಂಭಿಸಿದೆ. ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ‘ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ’ ಎಂಬ ಅಭಿಯಾನ ಆರಂಭ ಮಾಡಿದ್ದು, ಈ ಅಭಿಯಾನ ಇಡೀ ದೇಶಾದ್ಯಂತ ಸದ್ದು ಮಾಡುತ್ತಿದೆ. ಅಲ್ಲದೆ, ಅಭಿಯಾನದ ಬಗ್ಗೆ ಪಕ್ಷ ಕಚೇರಿ ಜೆಪಿ ಭವನದಲ್ಲಿ ಮಾಹಿತಿ ನೀಡಿದ ನಿಖಿಲ್ ಕುಮಾರಸ್ವಾಮಿ ಅವರು; https://www.saakappasaaku.com ಎಂಬ ನೂತನ ವೆಬ್ಸೈಟ್ ಅನ್ನು ಲೋಕಾರ್ಪಣೆ ಮಾಡಿದರು. ಈ ವೆಬ್ ತಾಣದಲ್ಲಿ ಜೆಡಿಎಸ್ ಕಾರ್ಯಕರ್ತರು ಮಾತ್ರವಲ್ಲ, ರಾಜ್ಯದ ಯಾರೇ ಆದರೂ ನೋಂದಣಿ ಮಾಡಿಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಅವರು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದಲೂ ಜನರ ಮೇಲೆ ಬೆಲೆ ಏರಿಕೆ ಬರೆ ಎಳೆಯುತ್ತಿದೆ. ಆರ್ಥಿಕವಾಗಿ ರಾಜ್ಯವನ್ನು ವಿಕೋಪದ ಪರಿಸ್ಥಿತಿಗೆ ದೂಡಿರುವ ಕಾಂಗ್ರೆಸ್ ಸರಕಾರವು, ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಸೃಷ್ಟಿಸಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಗಂಭೀರ…
ಉತ್ತರ ಕನ್ನಡ: ಜಿಲ್ಲೆಯಲ್ಲಿನ 32 ಚಾರಣ ಪ್ರಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ಚಾರಣಕ್ಕೆ ಅವಕಾಶ ನೀಡುವ ಸಂಬಂಧ ಚಾರಣ ಪಥವನ್ನು ಜಿಲ್ಲಾಡಳಿತ ಗುರುತಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಅವರು, ಅರಣ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಸೇರಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಚಾರಣಕ್ಕೆ ಉತ್ತಮ ಎನಿಸುವ ಪ್ರದೇಶಗಳ ಬಗ್ಗೆ ಸರ್ವೆ ನಡೆಸಲಾಯಿತು. ಈ ಸರ್ವೆಯಲ್ಲಿ 32 ಚಾರಣ ಪಥಗಳನ್ನು ಗುರಿತಿಸಲಾಗಿದೆ ಎಂದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಚಾರಣಕ್ಕಾಗಿ ಗುರುತಿಸಿರುವಂತ 32 ಸ್ಥಳಗಳನ್ನು ಚಾರಣ ಪಥಗಳಾಗಿ ಅನುಮತಿಸಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಲ್ಲಿ ಮನವಿ ಮಾಡಲಾಗಿದೆ. ಅರಣ್ಯ ಇಲಾಖೆಯಿಂದ ಅನುಮತಿ ನೀಡಿದ ಬಳಿಕ 32 ಕಡೆ ಚಾರಣಕ್ಕೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ. ಅರಣ್ಯ ಸಂರಕ್ಷಣಾಧಿಕಾರಿಗಳು ಅನುಮತಿ ನೀಡಿದ ಬಳಿಕ ಉತ್ತರ ಕನ್ನಡ ಜಿಲ್ಲೆಯ 32 ಚಾರಣ ಪಥಗಳ ಬಗ್ಗೆ ವೆಬ್ ಸೈಟ್ ಹಾಗೂ ಪ್ರವಾಸೋದ್ಯ ಇಲಾಖೆಯ ಮೂಲಕ ಪ್ರಚಾರ ನೀಡಲಾಗುತ್ತದೆ. ಈ ಚಾರಣ ಸ್ಥಳಗಳನ್ನು…
ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳ ವ್ಯಾಪ್ತಿಯ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ಉಚಿತವಾಗಿ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ತಿಳಿಸಿದೆ. ಪಡಿತರ ಚೀಟಿದಾರರು ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ಮೂಲಕ ತಮ್ಮ ಗುರುತು, ನೋಂದಣಿ ಅಥವಾ ಮರು ನೋಂದಣಿ ಮಾಡಿಸದೆ ಇರುವ ಎಲ್ಲಾ ಸದಸ್ಯರು ಏ.30 ರೊಳಗೆ ಬಯೋಮೆಟ್ರಿಕ್ ಸಂಗ್ರಹಣೆ (ಇ-ಕೆವೈಸಿ) ಮಾಡಿಸಿಕೊಳ್ಳಲು ಅಂತಿಮ ಅವಕಾಶವನ್ನು ನೀಡಲಾಗಿದ್ದು, ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ ಎಂದಿದೆ. ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿದಾರರಿಗೆ ಮುಂದಿನ ತಿಂಗಳು ಆಹಾರ ಧಾನ್ಯ ವಿತರಣೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಆಧಾರ್ ದೃಢೀಕರಣ (ಇ-ಕೆವೈಸಿ)ಯನ್ನು ಮಾಡದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ. https://kannadanewsnow.com/kannada/dr-mallikarjuna-kalamarahallis-kadugolla-tribal-kulakathana-wins-book-title/…













