Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ : ಕಾಮಗಾರಿ ಮಾಡಿರುವ ಬಿಲ್ ಬಿಡುಗಡೆ ಮಾಡಲು ತಾರತಮ್ಯ ಮಾಡಲಾಗುತ್ತಿದೆ ಎಂಬ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಮಂಡ್ಯ ನಗರದ ಲೋಕೋಪಯೋಗಿ ಇಲಾಖೆ ಕಚೇರಿಗೆ ಸೋಮವಾರ ದಾಳಿ ನಡೆಸಿ ಸತತ ನಾಲ್ಕೂವರೆ ಗಂಟೆಗಳ ಕಾಲ ಕಡತಗಳ ಪರಿಶೀಲನೆ ನಡೆಸಿದ್ದಾರೆ. 2021ರಲ್ಲಿ ಮಾಡಿರುವ ಕಾಮಗಾರಿಗೆ ಬಿಲ್ ಬಿಡುಗಡೆ ಮಾಡಿಲ್ಲ. ಬದಲಿಗೆ 2024ರಲ್ಲಿ ಮಾಡಿರುವ ಕಾಮಗಾರಿಯ ಹಣವನ್ನು ಬಿಡುಗಡೆ ಮಾಡುವ ಸೀನಿಯಾರಿಟಿ ನಿಯಮ ಉಲ್ಲಂಘಿಸಲಾಗುತ್ತಿದೆ ಎಂದು ಆರೋಪಿಸಿ ಹಲವು ಗುತ್ತಿಗೆದಾರರು ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನ 3.30ರಿಂದ ರಾತ್ರಿ 8 ಗಂಟೆವರೆಗೂ ಪರಿಶೀಲನೆ ನಡೆಸಿ ಕೆಲವೊಂದು ಮುಖ್ಯವಾದ ಕಡತಗಳನ್ನು ತೆಗೆದುಕೊಳ್ಳಲಾಗಿದೆ. ಮಾತ್ರವಲ್ಲದೆ ಕಚೇರಿಗೆ ಬೀಗ ಹಾಕಿಸಿ, ಮಂಗಳವಾರವೂ ಪರಿಶೀಲನೆ ಮುಂದುವರಿಯಲಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಸುರೇಶ್ಬಾಬು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ಸುನೀಲ್ ಕುಮಾರ್, ಇನ್ಸ್ಪೆಕ್ಟರ್ಗಳಾದ ಬ್ಯಾಟರಾಯಗೌಡ, ಜಯರತ್ನಾ, ಸಿಬ್ಬಂದಿ ಶಂಕರ್, ಶರತ್, ಮಹದೇವ, ಮಹದೇವಸ್ವಾಮಿ, ನವೀನ, ಮನು, ರಾಮಲಿಂಗ ಇದ್ದರು. ವರದಿ…
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಫೆ.05 ರಿಂದ 07 ರವರೆಗೆ ಜಿಲ್ಲೆಯ ರೈತರಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕ್ರಮವಾಗಿ ದಾಳಿಂಬೆ, ಮಾವು ಹಾಗೂ ಬಾಳೆ ಬೆಳೆಗಳಲ್ಲಿ ಸೂಕ್ಷ್ಮ ನೀರಾವರಿ ತಾಂತ್ರಿಕತೆಗಳ ಅಳವಡಿಕೆ ಮತ್ತು ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಫೆ.05ರಂದು ಬೆಳಿಗ್ಗೆ 10ಕ್ಕೆ ಬಬ್ಬೂರಿನ ತೋಟಗಾರಿಕೆ ಕಾಲೇಜಿನ ಸಹಾಯಕ ಪ್ರಾಧ್ಯಪಕರಾದ ಡಾ. ಶ್ರೀಧರ್ ಅವರು ದಾಳಿಂಬೆ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಗಳ ಕುರಿತು, ರೋಗಶಾಸ್ತ್ರಜ್ಞರಾದ ಡಾ, ಗುರುದೇವಿ ಅವರು ಈ ಬೆಳೆಯಲ್ಲಿ ಬರುವ ರೋಗಗಳ ನಿರ್ವಹಣೆ ಹಾಗೂ ಕೀಟಶಾಸ್ತ್ರಜ್ಞರಾದ ಡಾ.ತಾರಣಿ ಅವರು ದಾಳಿಂಬೆ ಬೆಳೆಯಲ್ಲಿ ಕೀಟಗಳ ನಿರ್ವಹಣೆ ಕುರಿತು ವಿಷಯ ಮಂಡನೆ ಮಾಡುವರು. ಫೆ.06 ರಂದು ಬೆಳಿಗ್ಗೆ 10ಕ್ಕೆ ಬಬ್ಬೂರಿನ ತೋಟಗಾರಿಕೆ ಕಾಲೇಜಿನ ಸಹಾಯಕ ಪ್ರಾಧ್ಯಪಕರಾದ ಡಾ. ಶ್ರೀಧರ್ ರವರು ಮಾವು ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಗಳ ಕುರಿತು ಹಾಗೂ ಈ ಬೆಳೆಯಲ್ಲಿ ಬರುವ ರೋಗ ಮತ್ತು…
ಬೆಂಗಳೂರು: ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪದಡಿ ನಳೀನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದಂತ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಈ ಆದೇಶವನ್ನು ಸುಪ್ರೀಂ ಕೋರ್ಟ್ ಕೂಡ ಎತ್ತಿ ಹಿಡಿಯುವ ಮೂಲಕ ನಳೀನ್ ಕುಮಾರ್ ಕಟೀಲ್ ಗೆ ಬಿಗ್ ರಿಲೀಫ್ ನೀಡಿದೆ. ಸೀತಾರಾಮನ್ ಮತ್ತು ಇತರರು ಚುನಾವಣಾ ಬಾಂಡ್ಗಳ ಸೋಗಿನಲ್ಲಿ ಸುಲಿಗೆ ದಂಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಸಂಘಟನೆಯ (ಜೆಎಸ್ಪಿ) ಆದರ್ಶ ಅಯ್ಯರ್ ಅವರು ದೂರು ದಾಖಲಿಸಿದ್ದರು. ಈ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಈ ಅರ್ಜಿಯ ವಿಚಾರಣೆ ನಡೆಸಿ ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪದಡಿ ದಾಖಲಾಗಿದ್ದಂತ ಎಫ್ಐಆರ್ ರದ್ದುಗೊಳಿಸಲಾಗಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಜನಾಧಿಕಾರ ಸಂಘರ್ಷ ಸಂಘಟನೆಯ (ಜೆಎಸ್ಪಿ) ಆದರ್ಶ ಅಯ್ಯರ್ ಅವರು ಸುಪ್ರೀಂ…
ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ಸಂಚರಿಸುತ್ತಿದ್ದಂತ 30 ಐಶಾರಾಮಿ ಕಾರುಗಳನ್ನು ಆರ್ ಟಿ ಓ ಅಧಿಕಾರಿಗಳು ವಿಶೇಷ ಕಾರ್ಯಾಚರಣೆ ನಡೆಸಿ, ಜಪ್ತಿ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ಆರ್ ಟಿ ಓ ಅಧಿಕಾರಿಗಳಉ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕದಲ್ಲಿ ಟ್ಯಾಕ್ಸ್ ಕಟ್ಟದೇ ಸಂಚರಿಸುತ್ತಿದ್ದಂತ 30 ಕಾರುಗಳನ್ನು ಸೀಜ್ ಮಾಡಿದ್ದಾರೆ. ದೆಹಲಿ, ಪುದುಚೇರಿ, ಮಹಾರಾಷ್ಟ್ರ, ಉತ್ತರ ಪ್ರದೇಶ, ಜಾರ್ಖಂಡ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನೋಂದಣಿಯನ್ನು ಐಶಾರಾಮಿ ಕಾರುಗಳು ಮಾಡಿದ್ದವು. ಹಲವು ರಾಜ್ಯಗಳಲ್ಲಿ ನೋಂದಣಿ ಮಾಡಿದ್ದಂತ ಕಾರುಗಳನ್ನು ಕರ್ನಾಟಕದಲ್ಲಿ ಓಡಿಸಲಾಗುತ್ತಿತ್ತು. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಅನಧಿಕೃತವಾಗಿ ಸಂಚರಿಸುತ್ತಿದ್ದಂತ ಐಷಾರಾಮಿ 30 ಕಾರುಗಳನ್ನು ಆರ್ ಟಿ ಓ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಜಪ್ತಿಯಾದಂತ ಕಾರುಗಳಿಂದ 3 ಕೋಟಿ ತೆರಿಗೆಯನ್ನು ವಸೂಲಿ ಮಾಡುವ ಸಾಧ್ಯತೆ ಇದೆ. https://kannadanewsnow.com/kannada/good-news-for-farmers-applications-invited-for-installation-of-sprinklers-with-90-subsidy/ https://kannadanewsnow.com/kannada/big-news-minister-ishwar-khandre-asks-hd-kumaraswamy-whether-hmt-should-be-allowed-to-sell-forest-land-for-real-estate/
ಮಡಿಕೇರಿ : 2024-25 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್ಗೆ ಶೇ.90ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರಗಳಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಹಾಗೂ ಎರಡು ಸ್ಟ್ಯಾಂಪ್ ಅಳತೆಯ ಫೋಟೋಗಳನ್ನು ಸಲ್ಲಿಸುವುದರ ಮುಖಾಂತರ ಈ ಯೋಜನೆಯ ಫಲಾನುಭವಿಗಳಾಗಬಹುದು. ಈ ಯೋಜನೆ ಅಡಿ ಒಂದು ಎಕರೆ ಜಮೀನಿಗಿಂತ ಹೆಚ್ಚಿನ ವಿಸ್ತೀರ್ಣ ಹೊಂದಿರುವ ರೈತರು ರೂ.4667 ಹಣವನ್ನು ಪಾವತಿಸುವ ಮೂಲಕ ಒಟ್ಟು 30 ಪೈಪುಗಳು ಹಾಗೂ 5 ಸ್ಪ್ರಿಂಕ್ಲರ್ ಜೆಟ್ಗಳು ಹಾಗೂ ಇತರೆ ಜೋಡಣಾ ಸಾಮಗ್ರಿಗಳನ್ನು ಪಡೆಯಬಹುದು. ಒಂದು ಎಕರೆಗಿಂತ ಕಡಿಮೆ ವಿಸ್ತೀರ್ಣ ಹಾಗೂ ಅರ್ಧ ಎಕರೆಗಿಂತ ಹೆಚ್ಚು ವಿಸ್ತೀರ್ಣ ಜಮೀನು ಹೊಂದಿರುವ ರೈತರು ರೂ.2496…
ಧಾರವಾಡ : ಧಾರವಾಡ ಜಿಲ್ಲೆಯ ಧಾರವಾಡ, ಅಳ್ಳಾವರ, ಹುಬ್ಬಳ್ಳಿ, ಕುಂದಗೋಳ ಅಣ್ಣಿಗೇರಿ ಮತ್ತು ನವಲಗುಂದ ಘಟಕಗಳಲ್ಲಿ ಖಾಲಿ ಇರುವ ಗೃಹರಕ್ಷಕರ ಸ್ವಯಂ ಸೇವಕ ಸದಸ್ಯರ ಹುದ್ದೆಗಳ ನೊಂದಣಿಗಾಗಿ ಅರ್ಹ ಪುರುಷ, ಮಹಿಳಾ ಸ್ಥಳೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅರ್ಜಿಯನ್ನು ಧಾರವಾಡ ಡಿ.ಎ.ಆರ್. ಪೊಲೀಸ್ ಹೆಡ್ ಕ್ವಾರ್ಟಸ್ಟ್ ಆವರಣದಲ್ಲಿರುವ ಗೃಹರಕ್ಷಕದಳ ಕಛೇರಿಯ ಜಿಲ್ಲಾ ಸಮಾದೇಷ್ಟರಿಂದ ಉಚಿತವಾಗಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಮಾರ್ಚ 5, 2025 ರೊಳಗಾಗಿ ಸಲ್ಲಿಸಬಹುದು. ಅರ್ಜಿಯನ್ನು ಫೆಬ್ರವರಿ 05, 2025 ರಿಂದ ವಿತರಿಸಲಾಗುವುದು. 296 ಗೃಹರಕ್ಷಕರ ಸ್ವಯಂ ಸೇವಕ ಹುದ್ದೆಗಳ ವಿವರ: ಧಾರವಾಡ ಪುರಷ-95, ಮಹಿಳಾ- 14, ಅಳ್ಳಾವರ ಪುರಷ-95, ಹುಬ್ಬಳ್ಳಿ ಪುರಷ-97, ಮಹಿಳಾ- 1, ಕುಂದಗೋಳ ಪುರಷ-24, ನವಲಗುಂದ ಪುರಷ-8, ಅಣ್ಣಿಗೇರಿ ಪುರಷ-14, ಕಲಘಟಗಿ ಪುರಷ-02, ಒಟ್ಟು ಪುರಷ-254, ಮಹಿಳಾ-15. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0836-2442496 ಹಾಗೂ ಸಹಾಯಕ ಆಡಳಿತಾಧಿಕಾರಿಗಳು, ಪೊಲೀಸ್ ಅಧೀಕ್ಷಕರ ಕಛೇರಿಯ ದೂರವಾಣಿ…
ಧಾರವಾಡ: ವಕೀಲರ ಆರೋಗ್ಯ ವಿಮೆ ಕೊಡದ ಆದಿತ್ಯಾ ಬಿರ್ಲಾ ವಿಮಾ ಕಂಪನಿಗೆ ದಂಡ ವಿಧಿಸಿ ಮತ್ತು ಪರಿಹಾರ ನೀಡಲು ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ. ಧಾರವಾಡದ ಮುರಗಾಮಠದ ಹತ್ತಿರದ ನಿವಾಸಿ ಸ್ಥಳೀಯ ವಕೀಲರಾದ ಚೇತನಕುಮಾರ ಈಟಿರವರು ರೂ.23,999 ಹಣಕೊಟ್ಟು ಹೊಸ ಮೊಬೈಲನ್ನು ಬಜಾಜ್ ಫೈನಾನ್ಸ್ ಕಂಪನಿಯಲ್ಲಿ ಲೋನ್ ಮಾಡಿ ಖರೀದಿಸಿದ್ದರು. ಆ ಮೊಬೈಲನ್ನು ಆದಿತ್ಯಾ ಬಿರ್ಲಾ ವಿಮಾ ಕಂಪನಿಯಲ್ಲಿ ರೂ.1 ಲಕ್ಷಕ್ಕೆ ಗ್ರೂಪ್ ಹೆಲ್ತ್ ವಿಮೆಯನ್ನು ಮಾಡಿಸಿದ್ದರು. ದಿ:23/02/2023 ರಂದು ದೂರುದಾರರು ತಮ್ಮ ಮನೆಯಲ್ಲಿ ಅಕಸ್ಮಾತಾಗಿ ಬಿದ್ದು ಕಾಲು ನೋವಿನಿಂದ ಧಾರವಾಡದ ಮಾಳವ್ಮಡ್ಡಿಯ ಚಿರಾಯು ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಅದಕ್ಕಾಗಿ ಅವರು ರೂ.1,25,000 ಆಸ್ಪತ್ರೆಯ ಖರ್ಚನ್ನು ಭರಿಸಿದ್ದರು. ಚಿಕಿತ್ಸೆಯ ನಂತ್ರ ವಿಮಾ ಪಾಲಸಿಯ ಕರಾರಿನಂತೆ ತಮ್ಮ ಆಸ್ಪತ್ರೆಯ ಖರ್ಚನ್ನು ಕೊಡುವಂತೆ ಆದಿತ್ಯಾ ಬಿರ್ಲಾ ಆರೋಗ್ಯ ವಿಮಾ ಕಂಪನಿಗೆ ಎಲ್ಲ ದಾಖಲೆಗಳೊಂದಿಗೆ ಕ್ಲೇಮು ಹಾಕಿದ್ದರು. ಯಾವುದೇ ಸಕಾರಾಣ ನೀಡದೇ ಎದುರುದಾರ ವಿಮಾ ಕಂಪನಿಯವರು ದೂರುದಾರರ ಕ್ಲೇಮನ್ನು ನಿರಾಕರಿಸಿದ್ದರು. ಅಂತಹ ವಿಮಾ ಕಂಪನಿಯವರ…
ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ಬಿಎಂಟಿಸಿಯ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ವಿಮೆಯನ್ನು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ವಿತರಿಸಿದರು. ಅಪಘಾತ ವಿಮೆ ₹1.5 ಕೋಟಿ ನೀಡುವ ಯೋಜನೆಗೆ ಸಂಬಂಧಿಸಿದಂತೆ ಬಿಎಂಟಿಸಿ ಮತ್ತು ಕೆನರಾ ಬ್ಯಾಂಕ್ ಮಧ್ಯೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಅಪಘಾತದಲ್ಲಿ ನೌಕರರು ಮೃತಪಟ್ಟ ಪ್ರಕರಣಗಳಲ್ಲಿ ಅವರ ಕುಟುಂಬಕ್ಕೆ ವಿಮೆ ಭದ್ರತೆ ₹1 ಕೋಟಿ, ಸಂಸ್ಥೆಯಿಂದ ₹50 ಲಕ್ಷ ಪರಿಹಾರ ದೊರೆಯಲಿದೆ. ಅಪಘಾತ ಹೊರತುಪಡಿಸಿ ಅನಾರೋಗ್ಯ, ಇನ್ನಿತರ ಕಾರಣದಿಂದ ಮೃತಪಟ್ಟ ಕುಟುಂಬಕ್ಕೆ ₹10 ಲಕ್ಷ ಪರಿಹಾರ ನೀಡಲಾಗಿದೆ. ಬಿಎಂಟಿಸಿಯಲ್ಲಿ ಜಾರಿಯಲ್ಲಿದ್ದ ಗುಂಪು ವಿಮಾ ಯೋಜನೆಯನ್ನು ಪರಿಷ್ಕರಿಸಿ 2024ರ ಫೆ.19ರಂದು ಜಾರಿ ಮಾಡಲಾಗಿತ್ತು. ಆ ನಂತರದ ಅವಧಿಯಲ್ಲಿ ಈವರೆಗೆ 86 ನೌಕರರು ಮೃತಪಟ್ಟಿದ್ದಾರೆ. ಪರಿಶೀಲನೆ ಹಂತದಲ್ಲಿ 31 ಪ್ರಕರಣಗಳಿದ್ದು, ಉಳಿದವರಿಗೆ ಪರಿಹಾರ ವಿಮೆ ನೀಡಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. https://twitter.com/KarnatakaVarthe/status/1886320313912398005 https://kannadanewsnow.com/kannada/cm-approves-ordinance-to-prevent-microfinance-harassment-whats-in-the-draft-heres-the-information/ https://kannadanewsnow.com/kannada/big-news-minister-ishwar-khandre-asks-hd-kumaraswamy-whether-hmt-should-be-allowed-to-sell-forest-land-for-real-estate/ https://kannadanewsnow.com/kannada/breaking-car-parked-on-road-in-bengaluru-catches-fire/
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬ್ರೇಕ್ ಹಾಕುವ ಸಂಬಂಧ ಹೊಸ ಮಸೂದೆಯನ್ನು ಸರ್ಕಾರ ಜಾರಿಗೆ ತರುತ್ತಿದೆ. ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತರುವಂತ ಮಸೂದೆಯನ್ನು ಸಿಎಂ ಸಿದ್ಧರಾಮಯ್ಯಗೆ ಸಮಿತಿ ಸಲ್ಲಿಸಿದೆ. ಈ ವರದಿಗೆ ಸಿಎಂ ಕೂಡ ಒಪ್ಪಿಗೆ ಸೂಚಿಸಿದ್ದಾರೆ. ಹಾಗಾದ್ರೇ ಸುಗ್ರೀವಾಜ್ಞೆಯ ಕರಡಿನಲ್ಲಿ ಏನಿದೆ ಅಂತ ಮುಂದೆ ಓದಿ. ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸಂಬಂಧ ಸುಗ್ರೀವಾಜ್ಞೆ ರಚನೆಗಾಗಿ ಅಧಿಕಾರಿಗಳ ವಿಶೇಷ ತಂಡವನ್ನು ರಾಜ್ಯ ಸರ್ಕಾರ ರಚಿಸಿತ್ತು. ಇದೀಗ ಅಧ್ಯಯನ ಮಾಡಿರುವಂತ ತಂಡವು ಸಿಎಂ ಸಿದ್ಧರಾಮಯ್ಯ ಅವರಿಗೆ 10 ಪುಟಗಳ ಕರಡನ್ನ ಸಲ್ಲಿಸಿದೆ. ಅಧಿಕಾರಿಗಳ ವರದಿ ಪರಿಶೀಲಿಸಿದ ನಂತರ ರವಾನೆ ಮಾಡಲಾಗಿದೆ. ಆ ಬಳಿಕ ರಾಜ್ಯಪಾಲರಿಗೆ ಸುಗ್ರೀವಾಜ್ಞೆಯನ್ನು ಸಿಎಂ ಸಿದ್ಧರಾಮಯ್ಯ ರವಾನಿಸಲಿದ್ದಾರೆ. ವರದಿಯಂತೆ ಕಿರುಕುಳ ಕೊಟ್ಟರೆ ಮೈಕ್ರೋ ಫೈನಾನ್ಸ್ ಪರವಾನಗಿ ರದ್ದತಿ. ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸಾಲಗಾರರಿಗೆ ಕಿರುಕುಳ ನೀಡಿದರೆ ಗರಿಷ್ಠ 3 ವರ್ಷಗಳ ಜೈಲು ಶಿಕ್ಷೆ. 5 ಲಕ್ಷ ರೂ ವರೆಗೆ ದಂಡ. ಲೈಸೆನ್ಸ್ ರದ್ದುಗೊಳಿಸುವುದು. ಸಾಲ ನೀಡುವಾಗ ಅಡಮಾನ ಪಡೆಯಬಾರದು. ಕಿರುಕುಳ ನೀಡಿದರೆ ಜಾಮೀನುರಹಿತ ಪ್ರಕರಣ ಎಂದು…
ಬೆಂಗಳೂರು: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು ಹಾಸ್ಟೆಲ್ಗಳಿಗೆ ಭೇಟಿ ನೀಡದಿರುವುದು ನನ್ನ ಗಮನಕ್ಕೆ ಬಂದಿದೆ. ಕೇವಲ ಕಚೇರಿಯಲ್ಲಿ ಕುಳಿತು ಕಾಲಹರಣ ಮಾಡುವುದನ್ನು ನಾನು ಸಹಿಸುವುದಿಲ್ಲ. ಇನ್ನು ಮುಂದೆ ಕಡ್ಡಾಯವಾಗಿ ಆಯಾ ಜಿಲ್ಲೆಯ ಪ್ರತಿಯೊಂದು ಹಾಸ್ಟೆಲ್ಗಳಿಗೆ ಭೇಟಿ ನೀಡಿ, ಆಹಾರ ಗುಣಮಟ್ಟ ಹಾಗೂ ಶುಚಿತ್ವಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಈ ಕೆಲಸ ನಿರಂತರವಾಗಿ ನಡೆಯಬೇಕು. ಜಿಲ್ಲಾ ಕಲ್ಯಾಣಾಧಿಕಾರಿಗಳು ಹಾಸ್ಟೆಲ್ಗಳಿಗೆ ಭೇಟಿ ನೀಡಿದ ವೇಳೆ ಅಲ್ಲಿಯೇ ಊಟ ಸೇವಿಸಬೇಕು. ಇದರಿಂದ ಅಲ್ಲಿನ ಆಹಾರದ ಗುಣಮಟ್ಟ ಸೇರಿದಂತೆ ಇನ್ನಿತರ ವಿಚಾರಗಳು ಗಮನಕ್ಕೆ ಬರಲಿವೆ ಎಂಬುದಾಗಿ ಸಚಿವ ಶಿವರಾಜ್ ತಂಡರಗಿ ಹೇಳಿದರು. ಸೋಮವಾರ ದೇವರಾಜ ಅರಸು ಭವನದಲ್ಲಿ ಒಕ್ಕಲಿಗರ ಅಭಿವೃದ್ಧಿ ನಿಗಮ, ದೇವರಾಜ ಅರಸು ಅಭಿವೃದ್ಧಿ ನಿಗಮ, ವೀರಶೈವ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿದ ಅವರು, ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ನಿಗಮಗಳಿಗೆ ಈಗಾಗಲೇ ಆರ್ಥಿಕ ಇಲಾಖೆ, 1600 ಕೋಟಿ ಅನುದಾನವನ್ನು ಒದಗಿಸಿದೆ. ಕೂಡಲೇ ಎಲ್ಲಾ ನಿಗಮಗಳ ವ್ಯವಸ್ಥಾಪಕ…