Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದಲ್ಲಿ ಅಪ್ಪ-ಮಗನಿಂದಲೇ ಬರೋಬ್ಬರಿ 93 ಮೊಬೈಲ್ ಕದ್ದು ಪೊಲೀಸರಿಗೆ ಸಿಕ್ಕಿಬಿದ್ದಿರುವಂತ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ತಂದೆ-ಮಗ ಸೇರಿದಂತೆ ಸ್ನೇಹಿತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಮಹದೇವಪುರ ಪೊಲೀಸರಿಂದ ಮೊಬೈಲ್ ಕಳ್ಳತನ ಪ್ರಕರಣ ಸಂಬಂಧ ಮೂವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 30 ಲಕ್ಷ ಮೌಲ್ಯದ 93 ಮೊಬೈಲ್ ಪೋನ್ ಗಳನ್ನು ಜಪ್ತಿ ಮಾಡಿದ್ದಾರೆ. ಬಂಧಿತ ಆರೋಪಿಗಳು ಫಾರೂಕ್, ಅವರ ಪುತ್ರ ಸಲ್ಮಾನ್ ಹಾಗೂ ಸ್ನೇಹಿತ ಸಾಜಿದ್ ಎಂಬುವರಾಗಿದ್ದಾರೆ. ಮಹದೇವಪುರ ವ್ಯಾಪ್ತಿಯಲ್ಲಿ ವಾಕಿಂಗ್ ಮಾಡುವ ಹಾಗೂ ರಸ್ತೆಯಲ್ಲಿ ಹೋಗುವವರನ್ನೇ ಟಾರ್ಗೆಟ್ ಮಾಡಿ ಅವರಿಂದ ಮೊಬೈಲ್ ಕಸಿದುಕೊಂಡು ಪರಾರಿಯಾಗುತ್ತಿದ್ದರು. ಅಂದಹಾಗೇ ಸ್ನೇಹಿತ ಸಾಜಿದ್ ಜೊತೆ ಸೇರಿ ಸನ್ಮಾನ್ ಕದಿಯುತ್ತಿದ್ದನು. ಕದ್ದ ಪೋನ್ ಗಳನ್ನು ತಂದೆ ಫಾರೂಖ್ ಗೆ ನೀಡಲಾಗುತ್ತಿತ್ತು. ಅವುಗಳನ್ನು ಫಾರೂಕ್ ಮಾರಾಟ ಮಾಡುತ್ತಿದ್ದರು. ಇದೀಗ ಮಹದೇವಪುರ ಠಾಣೆಯ ಪೊಲೀಸರು ಮೂವರು ಆರೋಪಿಗಳನ್ನು ಬಂದಿಸಿ, ಜೈಲಿಗಟ್ಟಿದ್ದಾರೆ. https://kannadanewsnow.com/kannada/student-injured-after-boiler-drum-falls-on-him-in-davanagere-dies/ https://kannadanewsnow.com/kannada/big-news-brother-has-no-right-over-married-sisters-property-supreme-court-landmark-verdict/
ದಾವಣಗೆರೆ: ಜಿಲ್ಲೆಯಲ್ಲಿ ನಿನ್ನೆ ಟೆರೇಸ್ ನಲ್ಲಿದ್ದಂತ ಬಾಯ್ಲರ್ ಡ್ರಮ್ ಬಿದ್ದು ಖಾಸಗಿ ವಸತಿ ಶಾಲೆಯ ವಿದ್ಯಾರ್ಥಿಯೊಬ್ಬ ಗಾಯಗೊಂಡಿದ್ದನು. ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೇ ಇಂದು ಚಿಕಿತ್ಸೆ ಫಲಿಸದೇ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆ ನಗರದ ಶಿವಕುಮಾರಸ್ವಾಮಿ ಬಡಾವಣೆಯಲ್ಲಿರುವಂತ ಮಂಜುನಾಥ್ ವಸತಿ ಶಾಲೆಯಲ್ಲಿ ನಿನ್ನೆ ಟೆರೇಸ್ ನಲ್ಲಿದ್ದ ಬಾಯ್ಲರ್ ಡ್ರಮ್ ಬಿದ್ದು ನಾಲ್ಕನೇ ತರಗತಿ ವ್ಯಾಸಂಗ ಮಾಡುತ್ತಿದ್ದಂತ ರಂಗನಾಥ್(9) ಗಂಭೀರವಾಗಿ ಗಾಯಗೊಂಡಿದ್ದನು. ಗಾಯಾಳು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೇ ಚಿಕಿತ್ಸೆ ಫಲಿಸದೇ ಹರಿಹರ ತಾಲ್ಲೂಕಿನ ಜಿಗಳಿ ಗ್ರಾಮ ನಿವಾಸಿ 4ನೇ ತರಗತಿ ವಿದ್ಯಾರ್ಥಿ ರಂಗನಾಥ್ ಸಾವನ್ನಪ್ಪಿದ್ದಾರೆ. https://kannadanewsnow.com/kannada/gst-council-to-decide-on-rates-slab-numbers-soon-nirmala-sitharaman/ https://kannadanewsnow.com/kannada/big-news-brother-has-no-right-over-married-sisters-property-supreme-court-landmark-verdict/
ನವದೆಹಲಿ: ಪರಿಶೀಲನಾ ಕಾರ್ಯಗಳು ಬಹುತೇಕ ಪೂರ್ಣಗೊಂಡಿರುವುದರಿಂದ ಕಡಿಮೆ ಮತ್ತು ಕಡಿಮೆ ದರಗಳನ್ನು ಹೊಂದುವ ಬಗ್ಗೆ ಜಿಎಸ್ಟಿ ಕೌನ್ಸಿಲ್ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಹೇಳಿದ್ದಾರೆ. ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ನಾಲ್ಕು ಹಂತದ ತೆರಿಗೆ ರಚನೆಯಾಗಿದ್ದು, ಪ್ರಸ್ತುತ ಶೇಕಡಾ 5, 12, 18 ಮತ್ತು 28 ರ ಸ್ಲ್ಯಾಬ್ಗಳನ್ನು ಹೊಂದಿದೆ. ಬಜೆಟ್ ನಂತರದ ದುಂಡು ಮೇಜಿನ ಸಭೆಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ಜಿಎಸ್ಟಿ ಮತ್ತು ಕೌನ್ಸಿಲ್ನಲ್ಲಿರುವ ಸಚಿವರಿಗೆ ನ್ಯಾಯಯುತವಾಗಿರಲು, ಜಿಎಸ್ಟಿ ದರಗಳನ್ನು ತರ್ಕಬದ್ಧಗೊಳಿಸುವ ಮತ್ತು ಸರಳಗೊಳಿಸುವ ಕೆಲಸ ಈಗಾಗಲೇ ಪ್ರಾರಂಭವಾಗಿದೆ ಎಂದರು. ವಾಸ್ತವವಾಗಿ, ಇದು ಸುಮಾರು ಮೂರು ವರ್ಷಗಳ ಹಿಂದೆ ಪ್ರಾರಂಭವಾಯಿತು” ಎಂದು ಸೀತಾರಾಮನ್ ಹೇಳಿದರು, ನಂತರ ವ್ಯಾಪ್ತಿಯನ್ನು ವಿಸ್ತರಿಸಲಾಯಿತು ಮತ್ತು ಈಗ ಕೆಲಸವು ಬಹುತೇಕ ಪೂರ್ಣಗೊಂಡಿದೆ ಎಂದರು. ನಾವು ಅವಕಾಶವನ್ನು ಕಳೆದುಕೊಳ್ಳಬಾರದು, ನಾವು ದರಗಳ ಸಂಖ್ಯೆಯನ್ನು ಸಹ ಕಡಿಮೆ ಮಾಡಬಹುದು ಎಂಬುದು ಮುಖ್ಯವಾಗಿತ್ತು. ಇದು ನಾವು ಕಡಿಮೆ ದರಗಳು ಮತ್ತು ಕಡಿಮೆ…
ಸ್ವೀಡನ್: ಸ್ಟಾಕ್ಹೋಮ್ನಿಂದ ಪಶ್ಚಿಮಕ್ಕೆ 200 ಕಿ.ಮೀ ದೂರದಲ್ಲಿರುವ ಒರೆಬ್ರೊ ನಗರದ ಶಾಲೆಯೊಂದರಲ್ಲಿ ಐವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಸ್ವೀಡನ್ ಪೊಲೀಸರು ಮಂಗಳವಾರ ತಿಳಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಉಲ್ಲೇಖಿಸಿದೆ. ಸ್ಥಳೀಯ ಕಾಲಮಾನ 13:00 ಕ್ಕಿಂತ ಮೊದಲು ಈ ಘಟನೆ ನಡೆದಿದ್ದು, ಅಧಿಕಾರಿಗಳು ನಿವಾಸಿಗಳನ್ನು ಶಾಲೆಯಿಂದ ದೂರವಿರಲು ಒತ್ತಾಯಿಸುತ್ತಿದ್ದಾರೆ. ಐದು ಜನರಿಗೆ ಗುಂಡು ಹಾರಿಸಲಾಗಿದೆ ಎಂದು ದೃಢಪಡಿಸಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಇದನ್ನು ಪ್ರಸ್ತುತ ಕೊಲೆ ಯತ್ನ, ಅಗ್ನಿಸ್ಪರ್ಶ ಮತ್ತು ಉಲ್ಬಣಗೊಂಡ ಶಸ್ತ್ರಾಸ್ತ್ರಗಳ ಅಪರಾಧವೆಂದು ಕರೆಯಲಾಗಿದೆ. ಆಂಬ್ಯುಲೆನ್ಸ್ಗಳು, ರಕ್ಷಣಾ ಸೇವೆಗಳು ಮತ್ತು ಪೊಲೀಸರು ಆನ್ಸೈಟ್ನಲ್ಲಿದ್ದಾರೆ ಎಂದು ಸ್ಥಳೀಯ ರಕ್ಷಣಾ ಸೇವೆಗಳ ವಕ್ತಾರರು ತಿಳಿಸಿದ್ದಾರೆ. https://kannadanewsnow.com/kannada/bomb-threat-e-mail-to-another-school-in-the-state/ https://kannadanewsnow.com/kannada/big-news-brother-has-no-right-over-married-sisters-property-supreme-court-landmark-verdict/
ಕಲಬುರಗಿ: ರಾಜ್ಯದ ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ಕಲಬುರ್ಗಿಯ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿದ್ದು, ಪೋಷಕರು, ವಿದ್ಯಾರ್ಥಿಗಳು ಕೆಲ ಕಾಲ ಆತಂಕಕ್ಕೆ ದೂಡುವಂತೆ ಮಾಡಿತ್ತು. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು, ನಗರದ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ- ಮೇಲ್ ಬಂದಿರುವ ಹಿನ್ನೆಲೆಯಲ್ಲಿ ನಗರದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶಾಲೆಯ ಸಂಪೂರ್ಣ ತಪಾಸಣೆ ನಡೆಸಲಾಗಿದ್ದು ಯಾವುದೇ ಬಾಂಬ್ ಅಥವಾ ಸ್ಪೋಟಕ ವಸ್ತು ಕಂಡು ಬಂದಿಲ್ಲ. ಹಾಗಾಗಿ, ಪೋಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಹೊಸ ಜೇವರ್ಗಿ ರಸ್ತೆಯ ಮಾರ್ಗದಲ್ಲಿರುವ ಖಾಸಗಿ ಶಾಲೆಯ ಮೇಲ್ ಐಡಿಗೆ ಇಂದು ಮೇಲ್ ಬಂದಿದ್ದು, ಶಾಲೆಗೆ ಬಾಂಬ್ ಬೆದರಿಕೆ ಹಾಕಲಾಗಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ನಗರದ ಪೊಲೀಸರು, ಶಾಲೆಗೆ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ದೊಂದಿಗೆ ದೌಡಾಯಿಸಿ ತಕ್ಷಣ ಶಾಲೆಯಿಂದ ಮಕ್ಕಳನ್ನು ಹೊರಗಡೆ ಕಳಿಸಿದರು. ಶಾಲೆಯ…
ಹಾಸನ: ಕಾಂಗ್ರೆಸ್ ಸರ್ಕಾರದಿಂದಾಗಿ ಕರ್ನಾಟಕ ಸೂತಕದ ಮನೆಯಾಗಿದೆ. ಆರ್ಥಿಕ ವ್ಯವಸ್ಥೆ ಹದಗೆಟ್ಟಿರುವುದರಿಂದ ಜನರು ದಾರಿ ಕಾಣದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕರ್ನಾಟಕ ಸೂತಕದ ಮನೆಯಾಗಿದೆ. ಮೈಕ್ರೋ ಫೈನಾನ್ಸ್ಗಳಿಂದ ಆತ್ಮಹತ್ಯೆ ನಡೆಯುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಸಾಯುತ್ತಿದ್ದಾರೆ. ಗುತ್ತಿಗೆದಾರರು ಹಣವಿಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಶೇ.60 ರ ಕಮಿಶನ್ ದಂಧೆಯಿಂದಾಗಿ ಅಧಿಕಾರಿಗಳು ಸಾಯುತ್ತಿದ್ದಾರೆ. ಇದರ ಜೊತೆಗೆ ಬಾಲಕಿಯರ ಮೇಲೆ ಅತ್ಯಾಚಾರ, ಕೊಲೆ, ಬ್ಯಾಂಕ್ ದರೋಡೆ ನಡೆಯುತ್ತಿದೆ ಎಂದು ದೂರಿದರು. ರಾಜ್ಯದಲ್ಲಿ ಸುಮಾರು 24-25 ಜನರು ಮೈಕ್ರೋ ಫೈನಾನ್ಸ್ಗಳ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೂ ಸರ್ಕಾರ ಸುಗ್ರೀವಾಜ್ಞೆ ಎನ್ನುತ್ತಿದೆಯೇ ಹೊರತು, ಒಂದೇ ಒಂದು ಮೈಕ್ರೋ ಫೈನಾನ್ಸ್ನ ವಿರುದ್ಧ ಕ್ರಮ ಕೈಗೊಂಡಿಲ್ಲ. ಸಿಎಂ ಸಿದ್ದರಾಮಯ್ಯ ಎಷ್ಟು ಗುಡುಗಿದರೂ ಮೈಕ್ರೋ ಫೈನಾನ್ಸ್ಗಳು ಕ್ಯಾರೇ ಎಂದಿಲ್ಲ. ಕುಂಭಮೇಳದಲ್ಲಿ ಜನರು ಸತ್ತಿದ್ದಕ್ಕೆ ಕಾಂಗ್ರೆಸ್ ನಾಯಕರು ಬಾಯಿ ಬಡಿದುಕೊಂಡರು. ಆದರೆ ಸಾಲ ವಸೂಲಿಗಾರರ ಕಿರುಕುಳದಿಂದ ಸತ್ತವರ…
BREAKING: ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿ ಅಯೋಧ್ಯೆಗೆ ತೆರಳುತ್ತಿದ್ದ ಕರ್ನಾಟಕದ ಯುವಕ ವಿದ್ಯುತ್ ಪ್ರವಹಿಸಿ ಸಾವು
ಕೊಪ್ಪಳ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವಂತ ಕುಂಭಮೇಳಕ್ಕೆ ತೆರಳಿ, ಪವಿತ್ರ ಸ್ನಾನ ಮಾಡಿದಂತ ಕೊಪ್ಪಳದ ಯುವಕನೊಬ್ಬ, ಅಲ್ಲಿಂದ ಅಯೋಧ್ಯೆಗೆ ರಾಮನ ದರ್ಶನ ಪಡೆಯಲು ತೆರಳುತ್ತಿದ್ದರು. ಈ ವೇಳೆಯಲ್ಲಿ ಗೋರಖ್ ಪುರದಲ್ಲಿ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಸಿದ್ಧಾಪುರ ನಿವಾಸಿ ಪ್ರವೀಣ್ ಹೊಸಮನಿ(27) ಎಂಬುವರು ಕುಂಭಮೇಳಕ್ಕೆ ತೆರಳಿದ್ದರು. ಅಲ್ಲಿ ಪವಿತ್ರ ಸ್ನಾನ ಮುಗಿಸಿ ಅಯೋದ್ಯೆಗೆ ಶ್ರೀರಾಮನ ದರ್ಶನಕ್ಕೆ ತೆರಳುತ್ತಿದ್ದರು. ಈ ವೇಳೆಯಲ್ಲಿ ಗೋರಖ್ ಪುರದ ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾನೆ. https://kannadanewsnow.com/kannada/here-are-the-key-highlights-of-pm-modis-speech-on-the-motion-of-thanks-in-the-lok-sabha/ https://kannadanewsnow.com/kannada/big-news-brother-has-no-right-over-married-sisters-property-supreme-court-landmark-verdict/
ನವದೆಹಲಿ: ‘ಹಮ್ ಜೆಹರ್ ಕಿ ರಾಜನೀತಿ ನಿ ಕಾರ್ತೆ’ ಎಂಬುದಾಗಿ ಪ್ರಧಾನಿ ಮೋದಿ ಹೇಳುವ ಮೂಲಕ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಸಂವಿಧಾನವನ್ನು ಜೇಬಿನಲ್ಲಿ ಇಟ್ಟುಕೊಳ್ಳುವ ಜನರಿಗೆ ಅದರ ನಿಜವಾದ ಅರ್ಥ ಅರ್ಥವಾಗುವುದಿಲ್ಲ ಎಂಬುದಾಗಿ ಹೇಳುವ ಮೂಲಕ ಹೆಸರೇಳದೇ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ್ದಾರೆ. ಇಂದಿನ ಪ್ರಧಾನಿ ಮೋದಿ ಲೋಕಸಭೆಯಲ್ಲಿನ ವಂದನಾ ನಿರ್ಣಯದ ಮೇಲಿನ ಭಾಷಣದ ಪ್ರಮುಖ ಹೈಲೈಟ್ಸ್ ಮುಂದೆ ಓದಿ. ಇಂದು ಬಜೆಟ್ ಅಧಿವೇಶನದಲ್ಲಿ ಪ್ರತಿಪಕ್ಷಗಳು ಮತ್ತು ಎನ್ಡಿಎ ಸರ್ಕಾರದ ನಡುವೆ ತೀವ್ರ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಲೋಕಸಭೆಯಲ್ಲಿ ವಂದನಾ ನಿರ್ಣಯದ ಮೇಲೆ ಭಾಷಣ ಮಾಡಿದಂತ ಅವರು, ಇಂದು ನಾನು ದೇಶದ ಜನರಿಗೆ ನನ್ನ ಧನ್ಯವಾದಗಳನ್ನು ಅರ್ಪಿಸಲು ಬಯಸುತ್ತೇನೆ. ಸಂಸತ್ತಿನಲ್ಲಿ ತಮ್ಮ ಅಭಿಪ್ರಾಯಗಳನ್ನು ನೀಡಿದವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದರು. ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಪರೋಕ್ಷವಾಗಿ ಉಲ್ಲೇಖಿಸಿದ ಅವರು, ಇತ್ತೀಚಿನ ದಿನಗಳಲ್ಲಿ, ಕೆಲವು ರಾಜಕಾರಣಿಗಳು ಜಕುಜಿಗಳಲ್ಲಿ…
ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು ಶುಕ್ರ ವಾರ ಗಳ ಕಾಲ ಈ ಪರಿಹಾರವನ್ನು ನೀವು ಪಾಲಿಸಿಕೊಂಡು ಬಂದಿದೆ ಅದರೆ ನಿಮ್ಮ ಜೀವನದಲ್ಲಿ ಎದುರಾಗುತ್ತ ಇರುವಂತಹ ಹಣಕಾಸಿಗೆ ಸಂಬಂಧಪಟ್ಟ ವಿಚಾರಗಳು ಬೇಗ ಪರಿಹರವಾಗುತ್ತದೆ. ಪಂಡಿತ್ ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಅದು ಹೇಗೆ ಅಂತೀರಾ ಈ ಲವಂಗಕ್ಕೆ ಬಹಳ ವಿಶೇಷವಾದ ಶಕ್ತಿ ಇದೆ ಹಾಗೂ ದುಷ್ಟಶಕ್ತಿಯನ್ನು ದೂರ ಮಾಡುವಂತಹ…
ಬೆಂಗಳೂರು: ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು, ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಉತ್ತರ ಪ್ರದೇಶದ ವಾರಣಾಸಿ ನಿಲ್ದಾಣಗಳ ನಡುವೆ 3 ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ವಿವರಗಳು ಈ ಕೆಳಗಿನಂತಿವೆ: ಹುಬ್ಬಳ್ಳಿ- ವಾರಣಾಸಿ ನಿಲ್ದಾಣಗಳ ನಡುವೆ ಮೂರು ಟ್ರಿಪ್ ವಿಶೇಷ ರೈಲು (07383/84) ಸಂಚಾರ ರೈಲು ಸಂಖ್ಯೆ 07383 ಎಸ್ಎಸ್ಎಸ್ ಹುಬ್ಬಳ್ಳಿ – ವಾರಣಾಸಿ ವಿಶೇಷ ಎಕ್ಸ್ಪ್ರೆಸ್ ರೈಲು ಫೆಬ್ರವರಿ 14, 21 ಮತ್ತು 28, 2025 (ಶುಕ್ರವಾರ) ರಂದು ಹುಬ್ಬಳ್ಳಿಯಿಂದ ಬೆಳಿಗ್ಗೆ 8:00 ಗಂಟೆಗೆ ಹೊರಟು, ಭಾನುವಾರದಂದು ಬೆಳಿಗ್ಗೆ 05:30 ಗಂಟೆಗೆ ಉತ್ತರ ಪ್ರದೇಶದ ವಾರಣಾಸಿ ನಿಲ್ದಾಣ ತಲುಪಲಿದೆ. ಪುನಃ ಇದೆ ರೈಲು (07384) ಫೆಬ್ರವರಿ 17, 24 ಮತ್ತು ಮಾರ್ಚ್ 3, 2025 (ಸೋಮವಾರ) ರಂದು ವಾರಣಾಸಿಯಿಂದ ಬೆಳಿಗ್ಗೆ 5:00 ಗಂಟೆಗೆ ಹೊರಟು, ಬುಧವಾರ 12:45 AM ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ. ಈ ರೈಲು…