Author: kannadanewsnow09

ಬೆಂಗಳೂರು: ಈ ಬಾರಿಯ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ದೇಶ- ವಿದೇಶಗಳ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಹೆಸರಾಂತ ಉದ್ಯಮಗಳ ಪ್ರತಿಷ್ಠಾನಗಳೊಂದಿಗೆ ಉದ್ದೇಶಿತ `ಕ್ವಿನ್ ಸಿಟಿ’ಯಲ್ಲಿ ಅತ್ಯುತ್ಕೃಷ್ಟ ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆಗಳ ಕ್ಷೇತ್ರದಲ್ಲಿ ಸಹಭಾಗಿತ್ವದ ಮೂಲಕ ದಕ್ಷ ಕಾರ್ಯ ಪರಿಸರ ಸೃಷ್ಟಿಸುವ ಕುರಿತು ಪ್ರತ್ಯೇಕ ರೌಂಡ್‌ ಟೇಬಲ್‌ ಗೋಷ್ಠಿಯನ್ನು ಏರ್ಪಡಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ. ಮಂಗಳವಾರ ಈ ಬಗ್ಗೆ ಮಾಹಿತಿ ನೀಡಿರುವ ಅವರು, `ಸಮಾವೇಶದ ಎರಡನೆಯ ದಿನವಾದ ಫೆ,13ರಂದು ಈ ಗೋಷ್ಠಿ ನಡೆಯಲಿದೆ. ಈ ಸಂದರ್ಭದಲ್ಲಿ ವಿದೇಶಗಳ 5-6 ಮತ್ತು ಭಾರತದ 7-8 ವಿಶ್ವವಿದ್ಯಾಲಯಗಳೊಂದಿಗೆ ಒಡಂಬಡಿಕೆಗೆ ಸಹಿ ಹಾಕುವ ಸಾಧ್ಯತೆ ಕೂಡ ಇದೆ. ಈ ಸಂಬಂಧ ಮಾತುಕತೆ ಪ್ರಗತಿಯಲ್ಲಿದ್ದು, ಯಾವ ವಿ.ವಿ.ಗಳೊಂದಿಗೆ ಒಡಂಬಡಿಕೆ ಆಗಲಿದೆ ಎನ್ನುವುದನ್ನು ನಂತರದ ದಿನಗಳಲ್ಲಿ ಅಂತಿಮವಾಗಲಿದೆ. ಯುಜಿಸಿ ನಿಯಮಗಳ ಪ್ರಕಾರ, ಜಗತ್ತಿನ ಮೊದಲ 500 ಸ್ಥಾನಗಳಲ್ಲಿರುವ ವಿ.ವಿ.ಗಳು ಭಾರತದಲ್ಲಿ ತಮ್ಮ ಕ್ಯಾಂಪಸ್ಸನ್ನು ತೆರೆಯಲು ಅವಕಾಶವಿದ್ದು, ಇದನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು’…

Read More

ಹಾವೇರಿ: ಗಾಯಗೊಂಡಾಗ, ಗಾಯವಾದಾಗ ಅದು ದೊಡ್ಡದಿದ್ದಾಗ ಸ್ಟಿಚ್ ಹಾಕುವುದು ಸರ್ವೇ ಸಾಮಾನ್ಯ. ಆದರೇ ರಾಜ್ಯದಲ್ಲೊಂದು ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಮಹಾ ಎಡವಟ್ಟು ಎನ್ನುವಂತೆ ಗಾಯಕ್ಕೆ ಹೊಲಿಗೆ ಹಾಕೋ ಬದಲು ಫೆವಿಕ್ವಿಕ್ ಹಾಕಿ ಕಳುಹಿಸಿದ್ದಾರೆ. ಇದರಿಂದಾಗಿ ಬಾಲಕ ನರಳಾಡುತ್ತಿರುವಂತ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಟವಾಡುತ್ತಿದ್ದಾಗ ಬಿದ್ದು ಗಾಯಗೊಂಡಿದ್ದಂತ 7 ವರ್ಷದ ಬಾಲಕ ಗುರುಶಿಕನ್ ಅಣ್ಣಪ್ಪ ಹೊಸಮನಿಯನ್ನು ಕರೆದುಕೊಂಡು ಹೋಗಲಾಗಿತ್ತು. ವೈದ್ಯರಿಲ್ಲದ ಕಾರಣ ನರ್ಸ್ ಜ್ಯೋತಿ ಚಿಕಿತ್ಸೆ ನೀಡಿದ್ದಾರೆ. ಗಾಯಗೊಂಡಿದ್ದಂತ ಜಾಗಕ್ಕೆ ಡ್ರೆಸ್ಸಿಂಗ್ ಮಾಡಿ, ಹೊಲಿಗೆ ಹಾಕುವ ಬದಲು ಗಾಯಕ್ಕೆ ಫೆವಿಕ್ವಿಕ್ ಹಚ್ಚಿ, ಅದರ ಮೇಲೆ ಬ್ಯಾಂಡೇಜ್ ಟೇಪ್ ಹಚ್ಚಿ ಕಳುಹಿಸಿದಂತ ಆರೋಪ ಕೇಳಿ ಬಂದಿದೆ. ಬಾಲಕನ ಕೆನ್ನೆಯ ಮೇಲಾದಂತ ಗಾಯಕ್ಕೆ ಸ್ಟಿಚ್ ಬದಲು ಫೆವಿಕ್ವಿಕ್ ಹಾಕಿದ್ದರ ಪರಿಣಾಮ ಬ್ಯಾಂಡೇಜ್ ತೆಗೆಯಲು ಬಾಲಕ ಪರದಾಡುತ್ತಿದ್ದಾರೆ. ಅಲ್ಲದೇ ನರ್ಸ್ ಎಡವಟ್ಟಿನ ವಿರುದ್ಧ ಬಾಲಕನ ಪೋಷಕರು, ಅಡೂರು ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಜನವರಿ 14ರಂದು ನಡೆದಂತ…

Read More

ಹಾವೇರಿ: ಕಾಡು ಹಂದಿ ಬೇಟೆಗಾಗಿ ಇರಿಸಿದ್ದಂತ ನಾಡಬಾಂಬ್ ಒಂದು ಸ್ಪೋಟಗೊಂಡ ಪರಿಣಾಮ, ಎಮ್ಮೆಯೊಂದರ ಬಾಯಿ ಗಾಯಗೊಂಡು ನರಳಿ ನರಳಿ ಪ್ರಾಣಬಿಟ್ಟಿರುವಂತ ಘಟನೆ ಹಾವೇರಿಯ ಹಾನಗಲ್ ನಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಹೊಸಕೊಪ್ಪದಲ್ಲಿ ರೈತ ಬಾಷಾಸಾಬ್ ಬಂಕಾಪುರ ಎಂಬುವರ ಎಮ್ಮೆಯನ್ನು ಕಾಡಂಜಿನನಲ್ಲಿ ಮೇಯೋದಕ್ಕೆ ಬಿಡಲಾಗಿತ್ತು. ಮೇವು ತಿನ್ನುವ ವೇಳೆಯಲ್ಲಿ ಕಾಡು ಹಂದಿಗೆ ಇರಿಸಿದ್ದಂತ ನಾಡಬಾಂಬ್ ಅನ್ನು ಕಚ್ಚಿದೆ. ಈ ಪರಿಣಾಮ ನಾಡ ಬಾಂಬ್ ಸ್ಪೋಟಗೊಂಡು ಬಾಯಿ ಛಿದ್ರ ಛಿದ್ರಗೊಂಡು ನರಳಾಡಿದೆ. ನಾಡಬಾಂಬ್ ಸ್ಪೋಟಗೊಂಡು ಗಾಯಗೊಂಡಿದ್ದಂತ ಎಮ್ಮೆಗೆ ಚಿಕಿತ್ಸೆ ಕೊಡಿಸಿದರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದೆ. ಯಾರೋ ದುಷ್ಕರ್ಮಿಗಳು ಕಾಡು ಹಂದಿ ಬೇಟೆಗಾಗಿ ನಾಡಬಾಂಬ್ ಇರಿಸಿದ್ದೇ ಈ ದುರ್ಘಟನೆಗೆ ಕಾರಣ. ಅವರನ್ನು ಪತ್ತೆ ಹಚ್ಚಿ ಬಂದಿಸುವಂತೆ ರೈತ ಬಾಷಾಸಾಬ್ ಆಗ್ರಹಿಸಿದ್ದಾರೆ. https://kannadanewsnow.com/kannada/shimoga-mother-leaves-one-day-old-baby-behind-seeks-trace-of-parents/ https://kannadanewsnow.com/kannada/big-news-brother-has-no-right-over-married-sisters-property-supreme-court-landmark-verdict/ https://kannadanewsnow.com/kannada/applications-invited-for-admission-to-class-6-in-residential-schools/

Read More

ಶಿವಮೊಗ್ಗ : ಶಿವಮೊಗ್ಗ ನಗರದ, ಶ್ರೀರಾಂಪುರ ನಗರ, ಮೊದಲ ತಿರುವಿನ ರಸ್ತೆಯ ಪಕ್ಕದಲ್ಲಿ ಕೈಚೀಲದಲ್ಲಿ ಸುಮಾರು 1 ದಿನದ ಗಂಡು ಮಗು ಪತ್ತೆಯಾಗಿದ್ದು ಸಾರ್ವಜನಿಕರು ರಕ್ಷಣೆ ಮಾಡಿ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ, ಡಿಸಿಪಿಯು ಘಟಕ ಮತ್ತು ಮಕ್ಕಳ ಸಹಾಯವಾಣಿ ಅಧಿಕಾರಿಗಳು, ಮಕ್ಕಳ ಕಲ್ಯಾಣ ಸಮಿತಿ ಶಿವಮೊಗ್ಗ ಇಲ್ಲಿಗೆ ದಾಖಲಿಸಿರುತ್ತಾರೆ. ಮಗುವಿನ ಮುಂದಿನ ಪುನರ್ವಸತಿ ಹಿತದೃಷ್ಠಿಯಿಂದ ಮಗುವಿನ ಸಂಬಂಧಿಕರು ಯಾರಾದರೂ ಇದ್ದಲ್ಲಿ ಅಥವಾ ಪೋಷಕರ ಬಗ್ಗೆ ಮಾಹಿತಿ ದೊರೆತಲ್ಲಿ ಸೂಕ್ತ ದಾಖಲಾತಿಯೊಂದಿಗೆ ಅಧೀಕ್ಷಕರು, ಸರ್ಕಾರಿ ಬಾಲಕರ ಬಾಲಮಂದಿರ, ಆಲ್ಕೊಳ, ಶಿವಮೊಗ್ಗ ಇವರ ಕಛೇರಿಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182-295511 ಗೆ ಸಂಪರ್ಕಿಸುವAತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. https://kannadanewsnow.com/kannada/siddaramaiah-to-present-state-budget-on-march-7/ https://kannadanewsnow.com/kannada/big-news-brother-has-no-right-over-married-sisters-property-supreme-court-landmark-verdict/

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಬಜೆಟ್ ಪೂರ್ವ ಸಾಲು ಸಾಲು ಸಭೆಯನ್ನು ಇಲಾಖಾ ವಾರು ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಅವರು ರಾಜ್ಯ ಬಜೆಟ್ ಅನ್ನು ಮಾರ್ಚ್ 7ರಂದು ಮಂಡಿಸಲಿದ್ದಾರೆ ಎಂಬುದಾಗಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಸಿಎಂ ಸಿದ್ಧರಾಮಯ್ಯ ಅವರು ಫೆಬ್ರವರಿ 6ರಂದು ಬಜೆಟ್ ಸಿದ್ಧತೆಯನ್ನು ಆರಂಭಿಸಲಿದ್ದಾರೆ. ಫೆಬ್ರವರಿ 6, 2025ರಿಂದ ಫೆಬ್ರವರಿ.14, 2025ರವರೆಗೆ ಕರ್ನಾಟಕ ಬಜೆಟ್ ಪೂರ್ವಭಾವಿ ಸಭೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನಡೆಸಲಿದ್ದಾರೆ. ಶಕ್ತಿ ಭವನದಲ್ಲಿ ವಿವಿಧ ಇಲಾಖೆಗಳ ಬೇಡಿಕೆಗಳ ಕುರಿತು ಬಜೆಟ್ ಸಿದ್ಧತಾ ಸಭೆಯನ್ನು ಮಾಡಲಿದ್ದಾರೆ. ಈ ಹಿನ್ನಲೆಯಲ್ಲಿ ಬಜೆಟ್ ಸಿದ್ಧತಾ ಸಭೆಯ ಬಳಿಕ ಸಿಎಂ ಸಿದ್ಧರಾಮಯ್ಯ ಅವರು ಮಾರ್ಚ್ ಮೊದಲ ವಾರ ರಾಜ್ಯ ಬಜೆಟ್ ಮಂಡನೆ ಮಾಡೋ ನಿರೀಕ್ಷೆಯಿದೆ. ಮಾರ್ಚ್ ಮೊದಲ ವಾರದಲ್ಲಿ ಜಂಟಿ ಅಧಿವೇಶನ ನಡೆಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಮಾರ್ಚ್.3ರಂದು ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇನ್ನೂ ಮಾರ್ಚ್.7ರಂದು ರಾಜ್ಯ ಬಜೆಟ್ ಅನ್ನು ಸಿಎಂ ಸಿದ್ಧರಾಮಯ್ಯ ಅವರು ಮಂಡಿಸಲಿದ್ದಾರೆ ಎಂದು…

Read More

ಚಾಮರಾಜನಗರ: ಆ ಶಿವನ ದೇಗುಲವನ್ನು ಮೈಸೂರಿನ ಮಹಾರಾಜರ ಕಾಲದಲ್ಲಿ ಕಟ್ಟಿಸಲಾಗಿತ್ತು. ಸರಿಯಾದ ನಿರ್ವಹಣೆಯಿಲ್ಲದೇ ಪಾಳುಪಿದ್ದಿತ್ತು. ಈ ಪಾಳುಬಿದ್ದ ದೇಗುಲವನ್ನೇ ತಮ್ಮ ರೆಸ್ಟೋರೆಂಟ್ ಮಾಡಿಕೊಂಡ ಪುಂಡರು, ಶಿವಲಿಂಗದ ಮೇಲೆ ಮದ್ಯದ ಬಾಟಲಿಯನ್ನು ಇರಿಸಿ ಕುಡಿದು, ವಿಕೃತಿ ಮೆರೆದಿರುವಂತ ಘಟನೆ ಚಾಮರಾಜನಗರದ ಉಪ್ಪಾರ ಬೀದಿಯಲ್ಲಿ ನಡೆದಿದೆ. ಚಾಮರಾಜನಗರದ ಉಪ್ಪಾರ ಬೀದಿಯಲ್ಲಿ ಮೈಸೂರಿನ ಮಹಾರಾಜರ ಕಾಲದಲ್ಲಿ ಕಟ್ಟಿಸಿರುವಂತ ಶಿವನ ದೇಗುಲವೊಂದು ಪಾಳು ಬಿದ್ದಿತ್ತು. ಈ ದೇಗುಲವನ್ನೇ ಕುಡುಕರು ತಮ್ಮ ಅಡ್ಡೆಯನ್ನಾಗಿ ಮಾಡಿಕೊಂಡಿದ್ದಾರೆ. ಪಾಳು ಬಿದ್ದಂತ ದೇಗುಲದಲ್ಲಿ ಮೀಸೆ ಚಿಗುರುವ ಮುನ್ನವೇ ಮದ್ಯಕ್ಕೆ ದಾಸರಾಗಿರುವಂತ ಪಡ್ಡೆ ಹುಡುಗರು ಕುಡಿಯುವ ಅಡ್ಡೆಯನ್ನಾಗಿಸಿಕೊಂಡಿದ್ದಾರೆ. ಶಿವನ ಲಿಂಗದ ಮೇಲೆ ಮದ್ಯದ ಬಾಟಲಿಯನ್ನು ಇರಿಸಿ ಕುಡಿಯುತ್ತಿದ್ದಂತ ಸಂದರ್ಭದಲ್ಲೇ ಮಾದ್ಯಮದವರ ಕ್ಯಾಮರಾ ಕಂಡು ಅಲ್ಲಿಂದ ಪರಾರಿಯಾದಂತ ಘಟನೆ ನಡೆದಿದೆ. ಪೊಲೀಸರು ಗಸ್ತು ತಿರುಗುತ್ತಿದ್ದರೇ ಹೀಗೆ ಆಗುತ್ತಿರಲಿಲ್ಲ ಎಂಬುದು ಸ್ಥಳೀಯರ ಆರೋಪ. ಅಲ್ಲದೇ ದೇಗುಲವನ್ನು ಶುದ್ಧಗೊಳಿಸಿ, ಪುಂಡರ ಹಾವಳಿಯನ್ನು ತಪ್ಪಿಸಿ. ಮಟ ಮಟ ಮಧ್ಯಾಹ್ನವೇ ಹಾದಿ ಬೀದಿಯಲ್ಲಿ ಈ ಪುಂಡರು ಕುಡಿದು ತೂರಾಡೋದು ಜಾಸ್ತಿ ಆಗಿದೆ…

Read More

ಉತ್ತರ ಕನ್ನಡ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿ ದಿಢೀರ್ ಕುಸಿದು ಬಿದ್ದು ಅಬಕಾರಿ ಎಸ್ಐ ಸಾವನ್ನಪ್ಪಿರುವಂತ ಘಟನೆ ಅಂಕೋಲಾದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಅಕೋಲಾದ ಅಬಕಾರಿ ಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ಪುರುಷೋತ್ತಮ ಹಳದನ್ ಕರ್(59) ಎಂಬುವರೇ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವಂತ ಅಧಿಕಾರಿಯಾಗಿದ್ದಾರೆ. ಇಂದು ತಮ್ಮ ಮನೆಯಲ್ಲಿ ಬಾತ್ ರೂಮ್ ಗೆ ತೆರಳಿದ್ದಂತ ವೇಳೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದಾರೆ. ಅಲ್ಲದೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಎಷ್ಟು ಹೊತ್ತಾದರೂ ಬಾತ್ ರೂಮ್ ನಿಂದ ಬಾರದ ಕಾರಣ ಮನೆಯವರು ಹೋಗಿ ನೋಡಿದಾಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಪುರುಷೋತ್ತಮ್ ಕಂಡು ಬಂದಿದ್ದಾರೆ. ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪುರುಷೋತ್ತಮ್ ಅವರನ್ನು ಪರೀಕ್ಷಿಸಿದಂತ ವೈದ್ಯರು ಆಸ್ಪತ್ರೆಗೆ ತರುವ ಮೊದಲೇ ನಿಧನರಾಗಿದ್ದಾರೆ ಎಂಬುದಾಗಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಇದೀಗ ಕುಟುಂಬಸ್ಥರು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಕಾರವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/big-news-brother-has-no-right-over-married-sisters-property-supreme-court-landmark-verdict/ https://kannadanewsnow.com/kannada/applications-invited-for-admission-to-class-6-in-residential-schools/

Read More

ಶಿವಮೊಗ್ಗ: ದಿನಾಂಕ:05.02.2025ರ ನಾಳೆ ಸೊರಬ ಉಪವಿಭಾಗೀಯ ಕಛೇರಿಯಲ್ಲಿ ನಡೆಯುವ ವಿದ್ಯುತ್‌ ಗ್ರಾಹಕರುಗಳ ಕುರಿತಾದ “ಜನಸಂಪರ್ಕ ಸಭೆಯನ್ನು ನಡೆಸಲಾಗುತ್ತಿದೆ. ವಿದ್ಯುತ್ ಗ್ರಾಹಕರು ಭಾಗಿಯಾಗಿ, ತಮ್ಮ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಪಡೆಯುವಂತೆ ಸೊರಬ ಮೆಸ್ಕಾಂ ಎಇಇ ಮನವಿ ಮಾಡಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಸೊರಬ ಮೆಸ್ಕಾಂ ಉಪವಿಭಾಗೀಯ ಕಛೇರಿಯಲ್ಲಿ ADOB:05.02.2025 ರಂದು “ಜನಸಂಪರ್ಕ ಸಭೆ” ನಡೆಯಲಿದೆ ಎಂದಿದ್ದಾರೆ. ಸೊರಬ ಮೆಸ್ಕಾಂ ಉಪವಿಭಾಗದಲ್ಲಿ ಜನಸಂಪರ್ಕ ಸಭೆಯನ್ನು ದಿನಾಂಕ:05.02.2025 ರಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 1:00 ರವರೆಗೆ ಮೆಸ್ಕಾಂ ಸೊರಬ ಉಪವಿಭಾಗೀಯ ಕಛೇರಿಯಲ್ಲಿನ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಆದುದರಿಂದ ಈ ಸಭೆಯಲ್ಲಿ ಜನಪ್ರತಿನಿಧಿಗಳು/ಸಾರ್ವಜನಿಕರು/ವಿದ್ಯುತ್ ಗ್ರಾಹಕರು ಭಾಗವಹಿಸಿ” ವಿದ್ಯುತ್ ಸಮಸ್ಯೆಯ ಕುರಿತು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/shivamogga-power-outages-in-these-areas-of-soraba-taluk-on-february-6/ https://kannadanewsnow.com/kannada/big-news-brother-has-no-right-over-married-sisters-property-supreme-court-landmark-verdict/

Read More

ಶಿವಮೊಗ್ಗ: ಮೆಸ್ಕಾಂನಿಂದ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಫೆ.6, 2025ರಂದು 110/11 ಕೆವಿ ವಿ.ವಿ ಕೇಂದ್ರ ಸೊರಬದಿಂದ ವಿದ್ಯುತ್ ಸರಬರಾಜಾಗುವ 11 ಕೆವಿ ಫೀಡರ್‌ ಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಹಿನ್ನಲೆಯಲ್ಲಿ ಈ ಕೆಳಕಂಡ ಸೊರಬ ತಾಲ್ಲೂಕಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಸೊರಬ ತಾಲ್ಲೂಕಿನ ಮೆಸ್ಕಾಂ ಎಇಇ ಮಾಹಿತಿ ನೀಡಿದ್ದು,  ದಿನಾಂಕ:06.02.2025 ರಂದು 110/11 ಕೆವಿ ಸೊರಬ ಕೆಳಕಂಡ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಫೀಡರ್‌ಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಅಂತ ತಿಳಿಸಿದ್ದಾರೆ. ದಿನಾಂಕ:06.02.2025 ರಂದು 110/11 ಕೆವಿ ಸೊರಬ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ಕವಿಪ್ರನಿನಿ’ ರವರಿಂದ ತ್ರೈಮಾಸಿಕ ನಿರ್ವಹಣಾ ಕಾಮಗಾಲಿಯನ್ನು ನಡೆಸಲು ಉದ್ದೇಶಿಸಿರುವುದರಿಂದ, 110/11 ಕೆವಿ ವಿ.ವಿ ಕೇಂದ್ರ ಸೊರಬದಿಂದ ವಿದ್ಯುತ್ ಸರಬರಾಜಾಗುವ ಎಫ್-21 ಸೊರಬ ಪಟ್ಟಣ ಸೇರಿದಂತೆ ಎಫ್-2 ಸಾರೇಕೊಪ್ಪ, ಎಫ್-3 ಬಳ್ಳಬೈಲು, ಎಫ್-4 ಓಟೂರು, ಎಫ್-5 ಚಿಕ್ಕಾವಲಿ, ಎಫ್15 ಕಲ್ಲಂಬಿ ಕರೆಂಟ್ ಇರೋದಿಲ್ಲ. ಎಫ್-16 ಕಡಸೂರು ಎನ್‌ಜೆವೈ, ಎಫ್-17 ಯಲವಳ್ಳಿ ಎನ್‌ಜೆವೈ, ಎಫ್-8 ಹಾಲಗಳಲೆ,…

Read More

ಶಿವಮೊಗ್ಗ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಶಿವಮೊಗ್ಗ ಇಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ/ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2025-26 ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಶೇ.75 ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿ ವಿದ್ಯಾರ್ಥಿಗಳಿಗೆ ಮತ್ತು ಶೇ.25 ರಷ್ಟು ಇತರೆ ಹಿಂದುಳಿದ ವರ್ಗದ ಸಮುದಾಯಗಳ ಅಭ್ಯರ್ಥಿಗಳು ಸೇವಾಸಿಂಧು ಆನ್‌ಲೈನ್ ಪೋರ್ಟಲ್ https://sevsindhuservices.karnataka.gov.in ನಲ್ಲಿ ಅಥವಾ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು, ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರಗಳು ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಕೂಡ ಅರ್ಜಿ ಸಲ್ಲಿಸಬಹುದು. ಮಾ.10 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಅಭ್ಯರ್ಥಿಯು ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಿಂದ 5 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು/ಉತ್ತಿರ್ಣರಾಗಿರಬೇಕು. ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಅಂಕಪಟ್ಟಿಯನ್ನು ಹೊಂದಿರಬೇಕು. ರಾಜ್ಯದ ಖಾಯಂ ನಿವಾಸಿಯಾಗಿರಬೇಕು. 11 ರಿಂದ 13 ವರ್ಷದ ವಯೋಮಾನದವರಾಗಿರಬೇಕು. ಅಭ್ಯರ್ಥಿಗಳು ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ, ಜಾತಿ…

Read More