Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದ ಜನರ ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಲಕ ಕಾಂಗ್ರೆಸ್ ಕಾರ್ಯಕರ್ತರ ಜೇಬಿಗೆ ಹಾಕಲಾಗುತ್ತಿದೆ. ಪ್ರತಿ ವರ್ಷ 15 ರಿಂದ 20 ಕೋಟಿ ರೂ. ಲೂಟಿ ಮಾಡಿ ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಇದನ್ನು ಖಂಡಿಸಿ ಅಧಿವೇಶನದಲ್ಲಿ ಹಾಗೂ ಹೊರಗೆ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತೆರಿಗೆದಾರರ ಹಣವನ್ನು ಪೋಲು ಮಾಡುತ್ತಿದೆ. ಆ ಹಣವನ್ನು ಕಾಂಗ್ರೆಸ್ ಕಾರ್ಯಕರ್ತರ ಜೇಬಿಗೆ ಹಾಕಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡರನ್ನು ನೇಮಿಸಿ, 25,000 ರೂ. ಸಂಬಳ ನೀಡಿ, ಅವರಿಗೆ ಆಪ್ತ ಸಹಾಯಕರನ್ನು ನೇಮಿಸಲಾಗುತ್ತಿದೆ. 1,100 ರೂ. ಸಿಟ್ಟಿಂಗ್ ಫೀಸ್ ನಿಗದಿಪಡಿಸಲಾಗಿದೆ. ರಾಜ್ಯದ ಅಧ್ಯಕ್ಷನಿಗೆ 40,000 ರೂ. ಸಂಬಳ, ಉಪಾಧ್ಯಕ್ಷನಿಗೆ 25,000 ರೂ. ಸಂಬಳ ನೀಡಲಾಗುತ್ತಿದೆ. ಪ್ರತಿ ವರ್ಷ 15-20 ಕೋಟಿ ರೂ. ಲೂಟಿ ಮಾಡಿ ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಲಾಗುತ್ತಿದೆ ಎಂದರು. ಸರ್ಕಾರದ ಹಣ ಬಡವರಿಗೆ ತಲುಪಬೇಕು. ಅಂಗನವಾಡಿಯಲ್ಲಿ…
ನವದೆಹಲಿ: ಕೆನಡಾದೊಂದಿಗಿನ ದೀರ್ಘಕಾಲದ ವ್ಯಾಪಾರ ಯುದ್ಧದ ಗಮನಾರ್ಹ ಉಲ್ಬಣದಲ್ಲಿ, ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಕೆನಡಾದ ಎಲ್ಲಾ ಆಮದುಗಳ ಮೇಲೆ 50% ಕ್ಕೆ ದ್ವಿಗುಣ ಸುಂಕವನ್ನು ವಿಧಿಸಲು ತಮ್ಮ ವಾಣಿಜ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು. ಒಂಟಾರಿಯೊ ಯುಎಸ್ಗೆ ನೀಡುವ ವಿದ್ಯುತ್ ಮೇಲೆ 25% ಸುಂಕವನ್ನು ವಿಧಿಸಿದ ನಂತರ ಅವರ ಪ್ರತಿಕ್ರಿಯೆ ಬಂದಿದೆ. ಕೆನಡಾದ ಒಂಟಾರಿಯೊದಲ್ಲಿ, ಅಮೆರಿಕಕ್ಕೆ ಬರುವ “ವಿದ್ಯುತ್”ದ ಮೇಲೆ 25% ಸುಂಕವನ್ನು ವಿಧಿಸುವುದರ ಆಧಾರದ ಮೇಲೆ, ವಿಶ್ವದ ಯಾವುದೇ ಅತಿ ಹೆಚ್ಚು ಸುಂಕ ವಿಧಿಸುವ ರಾಷ್ಟ್ರಗಳಲ್ಲಿ ಒಂದಾದ ಕೆನಡಾದಿಂದ ಯುನೈಟೆಡ್ ಸ್ಟೇಟ್ಸ್ಗೆ ಬರುವ ಎಲ್ಲಾ ಉಕ್ಕು ಮತ್ತು ಅಲ್ಯೂಮಿನಿಯಂ ಮೇಲೆ 50% ಕ್ಕೆ ಹೆಚ್ಚುವರಿಯಾಗಿ 25% ಸುಂಕವನ್ನು ಸೇರಿಸಲು ನಾನು ನನ್ನ ವಾಣಿಜ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ” ಎಂದು ಟ್ರಂಪ್ ತಮ್ಮ ಟ್ರೂತ್ ಸೋಶಿಯಲ್ ವೇದಿಕೆಯಲ್ಲಿ ಹೇಳಿದರು. https://kannadanewsnow.com/kannada/actress-ranya-rao-gold-smuggling-how-to-play-smoke-without-fire/ https://kannadanewsnow.com/kannada/the-state-government-has-announced-the-annual-film-awards-for-the-year-2020-prajwal-devaraj-best-actor/
ಚಿಕ್ಕಮಗಳೂರು: ರಾಜ್ಯವು ಅಭಿವೃದ್ಧಿಯೇ ಕಾಣದ ಕೆಟ್ಟ ಪರಿಸ್ಥಿತಿಗೆ ಬಂದು ನಿಂತಿದೆ; ಈ ಸರಕಾರದ ಆಡಳಿತವೈಖರಿಯನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು. ಬಾಳೆಹೊನ್ನೂರಿನಲ್ಲಿ ಇಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಕಾಂಗ್ರೆಸ್ ಸರಕಾರವು ಅಧಿಕಾರ ವಹಿಸಿಕೊಂಡು 20 ತಿಂಗಳಾಗಿದೆ. ರಸ್ತೆಗಳು, ಆಸ್ಪತ್ರೆಗಳು, ಶಾಲಾ ಕೊಠಡಿಗಳನ್ನೂ ಕೊಡದ ಕೆಟ್ಟ ಪರಿಸ್ಥಿತಿಗೆ ಬಂದು ನಿಂತಿದೆ ಎಂದು ಆಕ್ಷೇಪಿಸಿದರು. ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಕ್ಷೇತ್ರಗಳಿಗೆ ಮುಖ್ಯಮಂತ್ರಿಗಳು ಅನುದಾನ ನೀಡದ ಕಾರಣ ಶಾಸಕರು ಒಂದುರೀತಿ ಅಸಹಾಯಕರಾಗಿದ್ದಾರೆ. ಕ್ಷೇತ್ರಗಳಲ್ಲಿ ಓಡಾಡಲಾಗದ ಸ್ಥಿತಿ ಇದೆ ಎಂಬ ಭಾವನೆಯನ್ನು ಆಡಳಿತ ಪಕ್ಷದ ಶಾಸಕರೂ ತೋಡಿಕೊಂಡಿದ್ದಾರೆ ಎಂದು ಪ್ರಶ್ನೆಗೆ ಉತ್ತರ ನೀಡಿದರು. ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಹಿಂದೆ ಕೆಲವು ಸಚಿವರು ಇರುವ ಮಾಹಿತಿ ಬಗೆಗಿನ ಪ್ರಶ್ನೆಗೆ ಉತ್ತರ ನೀಡಿದ ಅವರು, ಬಹಳ ಪ್ರಮುಖ ಪತ್ರಿಕೆಗಳಲ್ಲೂ ಈ ವಿಷಯ ಪ್ರಕಟಗೊಂಡಿದೆ. ಬೆಂಕಿ ಇಲ್ಲದೆ…
ಬೆಂಗಳೂರು: ರಾಜ್ಯ ಸರ್ಕಾರದಿಂದ 2020ನೇ ಸಾಲಿನ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ. ಅತ್ಯುತ್ತಮ ನಟ ಪ್ರಶಸ್ತಿಗೆ ಪ್ರಜ್ವಲ್ ದೇವರಾಜ್ ಭಾಜನರಾಗಿದ್ದರೇ, ಅತ್ಯುತ್ತಮ ನಟಿ ಪ್ರಶಸ್ತಿಗೆ ಅಕ್ಷತಾ ಪಾಂಡವಪುರ ಬಾಜನರಾಗಿದ್ದಾರೆ. ಈ ಸಂಬಂಧ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯ ಸರ್ಕಾರದ ಆದೇಶ ಮತ್ತು ತಿದ್ದುಪಡಿ/ಸೇರ್ಪಡೆ ಆದೇಶಗಳಲ್ಲಿ, ಶ್ರೀ ಬಿ.ಎಸ್.ಲಿಂಗದೇವರು, ನಿರ್ದೇಶಕರು ಇವರ ಅಧ್ಯಕ್ಷತೆಯಲ್ಲಿ 2020ನೇ ಕ್ಯಾಲೆಂಡರ್ ವರ್ಷದ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳಿಗಾಗಿ ಚಲವಚಿತ್ರಗಳನ್ನು ಆಯ್ಕೆ ಮಾಡಲು ಆಯ್ಕೆ ಸಲಹಾ ಸಮಿತಿಯನ್ನು ರಚಿಸಲಾಗಿತ್ತು ಎಂದಿದ್ದಾರೆ. ಮೇಲೆ ಓದಲಾದ ಕ್ರಮ ಸಂಖ್ಯೆ (3)ರ ಪತ್ರದಲ್ಲಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಇವರು 2020ನೇ ಕ್ಯಾಲೆಂಡರ್ ವರ್ಷದ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಮಿತಿಯ ಅಂತಿಮ ವರದಿಯನ್ನು ಸರ್ಕಾರಕ್ಕೆ ಕಳುಹಿಸುತ್ತಾ, ಅಂಗೀಕರಿಸಿ ಅನುಮೋದನೆ ನೀಡಿ ಆದೇಶ ಹೊರಡಿಸುವಂತೆ ಕೋರಿರುತ್ತಾರೆ ಎಂದು ಹೇಳಿದ್ದಾರೆ. 2020ನೇ ಸಾಲಿನ ಆಯ್ಕೆ ಸಮಿತಿಯು ಸಲ್ಲಿಸಿರುವ…
ಒಬ್ಬ 80 ವರ್ಷದ ಮುದುಕನಿಗೆ ಹೃದಯದ ಆಪರೇಷನ್ ಆಯಿತು. ಆಸ್ಪತ್ರೆ ಬಿಲ್ಲು 8 ಲಕ್ಷ… ಬಿಲ್ಲು ನೋಡಿ ಮುದುಕ ಕಣ್ಣಿರು ಹಾಕಿದ… ಅದನ್ನು ಕಂಡ ವೈದ್ಯರು ಹೇಳಿದರು ಅಳಬೇಡಿ ನಿಮ್ಮ ಬಿಲ್ಲು ಸ್ವಲ್ಪ ಕಡಿಮೆ ಮಾಡುತ್ತೇನೆ.. ಸರ್ ಈ ಬಿಲ್ಲು ತುಂಬಾ ಕಡಿಮೆ… 10 ಲಕ್ಷ ಆದರೂ ತುಂಬುವ ಯೋಗ್ಯತೆ ನನಗಿದೆ… ನಾನು ಅತ್ತಿದ್ದು ಅದಕ್ಕಲ್ಲ, ಯಾಕೆಂದರೆ ಆ ಪರಮಾತ್ಮ 80 ವರ್ಷ ನನ್ನ ಹೃದಯವನ್ನು ಕಾಪಾಡಿದ್ದಕ್ಕೆ ಯಾವುದೇ ಬಿಲ್ಲು ನನಗೆ ಕಳಿಸಲಿಲ್ಲ… ನೀವು ಕೇವಲ 3 ಗಂಟೆ ನನ್ನ ಹೃದಯದ ಫಂಕ್ಷನಿಂಗ್ ನೋಡಿಕೊಂಡಿದ್ದಕ್ಕೆ 8 ಲಕ್ಷ ರೂಪಾಯಿಯೇ…? ಓ ಪರಮಾತ್ಮ ನೀನು ನಮ್ಮ ಮೇಲೆ ಎಷ್ಟು ಕಾಳಜಿ ವಹಿಸುತ್ತಿಯಾ… ನೀನು ನಮ್ಮ ಒಂದೊಂದು ಅಂಗಾಂಗದ ಮೇಲೂ ಬೆಲೆಕಟ್ಟಲಾಗದ ಇನ್ವೆಸ್ಟ್ಮೆಂಟ್ ಮಾಡಿದ್ದೀಯಾ… ನಮ್ಮ ದೇಹದ ಯಾವುದೋ ಒಂದು ಅಂಗ ಸರಿಯಾಗಿ ಕೆಲಸಮಾಡಲಿಲ್ಲ ಅಂತ ಡಾಕ್ಟರ್ ಬಳಿಗೆ ಹೋದಾಗಲೇ ನಿನ್ನ ಬೆಲೆ ನಮಗೆ ಅರ್ಥವಾಗೋದು… ನೀನು ಮ್ಯಾನ್ಯುಫ್ಯಾಕ್ಚರರ್ ನಿನ್ನನ್ನೆಂದೂ ನಾವು ನೀನು ನಮ್ಮ…
ಬೆಂಗಳೂರು: ರಾಜ್ಯದ ಕೆಂಪು ಮೆಣಸಿನಕಾಯಿ ಬೆಳೆಗಾರರ ಹಿತರಕ್ಷಣೆಗೆ ಸರ್ಕಾರ ಧಾವಿಸಿದೆ. ಇದಕ್ಕಾಗಿ ಸಿಎಂ ಸಿದ್ಧರಾಮಯ್ಯ ಪ್ರಧಾನಿ ಮೋದಿ, ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದಿದ್ದಾರೆ. ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ (ಎಂಐಎಸ್) ಅಡಿಯಲ್ಲಿ ಬೆಲೆ ಕೊರತೆ ಪಾವತಿ (ಪಿಡಿಪಿ) ಯೋಜನೆಯನ್ನು ಕರ್ನಾಟಕದ ಕೆಂಪು ಮೆಣಸಿನಕಾಯಿ ಬೆಳೆಗಾರರಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದಾರೆ. ಆಂಧ್ರಪ್ರದೇಶದಲ್ಲಿ ರೈತರು ಬೆಳೆದ ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ (ಎಂಐಎಸ್) ಅಡಿಯಲ್ಲಿ ಬೆಲೆ ಕೊರತೆ ಪಾವತಿ (ಪಿಡಿಪಿ) ಯೋಜನೆಯನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ. ಉತ್ಪಾದನೆಯ ಶೇ 25ವರೆಗಿನ ವ್ಯಾಪ್ತಿಯೊಂದಿಗೆ ಕ್ವಿಂಟಲ್ಗೆ ₹11,781 ಕನಿಷ್ಠ ಮಧ್ಯಸ್ಥಿಕೆ ಬೆಲೆ (ಎಂಐಪಿ)ಯನ್ನು ನಿಗದಿಪಡಿಸಿದೆ. ಅದನ್ನು ಕರ್ನಾಟಕದ ರೈತರಿಗೂ ವಿಸ್ತರಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ. https://kannadanewsnow.com/kannada/no-eviction-without-disposing-of-bagar-hukums-petition-minister-krishna-byre-gowda/ https://kannadanewsnow.com/kannada/x-down-across-the-world-including-india-for-the-fourth-time-in-two-days-users/
ಬೆಂಗಳೂರು : ಬಡ ಹಾಗೂ ಭೂ ರಹಿತ ರೈತರಿಗೆ ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ಭೂ ಮಂಜೂರು ಮಾಡಲು ರಾಜ್ಯಾದ್ಯಂತ ಈವರೆಗೆ ಒಟ್ಟಾರೆ 185 ಸಮಿತಿಗಳನ್ನು ರಚಿಸಲಾಗಿದೆ, ಅರ್ಜಿ ವಿಲೇವಾರಿಯನ್ನೂ ತ್ವರಿತಗೊಳಿಸಲಾಗುತ್ತಿದೆ. ಇತ್ತೀಚಿನ ವರ್ಷಗಳಲ್ಲೇ ಇದೊಂದು ಹೊಸ ದಾಖಲೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯಪಟ್ಟರು. ಸೋಮವಾರು ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕರಾದ ಶೈಲೇಂದ್ರ ಬೆಲ್ದಾಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಕಳೆದ ಹಲವು ವರ್ಷಗಳಿಗೆ ಹೋಲಿಸಿದರೆ, ಅತಿಹೆಚ್ಚು ಬಗರ್ ಹುಕುಂ ಸಮಿತಿಗಳನ್ನು ರಚಿಸಿದ್ದು ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ. ಅಲ್ಲದೆ, ಅರ್ಜಿ ವಿಲೇವಾರಿಗೊಳಿಸಿ ಅರ್ಹ ರೈತರಿಗೆ ಭೂ ಮಂಜೂರುಗೊಳಿಸುವ ಪ್ರಕ್ರಿಯೆಗೂ ಸಾಕಷ್ಟು ವೇಗ ತುಂಬಲಾಗುತ್ತಿದೆ. ಸ್ವತಃ ನಾನೇ ನೇರವಾಗಿ ಪರಿಶೀಲಿಸಿ ವಿಲೇ ಕೆಲಸಗಳನ್ನು ಶೀಘ್ರ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ಸಂಬಂಧ ಅಧಿಕಾರಿಗಳಿಗೆ ಗಡುವು ನೀಡಿದ್ದು ನಿಜ, ಸರ್ಕಾರವೇ ಅದನ್ನು ಬೆನ್ನಟ್ಟಿರುವುದೂ ನಿಜ” ಎಂದು ತಿಳಿಸಿದರು. ಈ ವೇಳೆ…
ಬೆಂಗಳೂರು: ನಗರದಲ್ಲಿ ದಿಢೀರ್ ಮಳೆಯ ಆಗಮನವಾಗಿದೆ. ನಗರದ ವಿವಿಧೆಡೆ ವರುಣಾರ್ಭಟ ಜೋರಾಗಿದೆ. ಗಾಳಿ, ಗುಡುಗು ಸಹಿತ ಜೋರು ಮಳೆಯಾಗುತ್ತಿದೆ. ಹೀಗಾಗಿ ಬೇಸಿಗೆಯ ಬಿಸಿಲಿನಿಂದ ತತ್ತರಿಸಿದ್ದಂತ ಜನರಿಗೆ ತಂಪನೆರದಂತೆ ಆಗಿದೆ. ಬೆಂಗಳೂರಿನಲ್ಲಿ ದಿಢೀರ್ ಮಳೆಯಾಗುತ್ತಿದೆ. ಬೆಂಳೂರಿನ ಶಾಂತಿನಗರ, ಕಾರ್ಪೋರೇಷನ್, ರಿಚ್ಮಂಡ್ ಸರ್ಕಲ್ ಸೇರಿದಂತೆ ವಿವಿಧೆಡೆ ಗುಡುಗು ಸಹಿತ ಜೋರು ಮಳೆಯಾಗುತ್ತಿದೆ. ಕೆ ಆರ್ ಮಾರ್ಕೆಟ್, ಬೆಂಗಳೂರಿನ ಹೃದಯಭಾಗವಾದಂತ ಮೆಜೆಸ್ಟಿಕ್ ಸೇರಿದಂತೆ ಇತರೆಡೆ ಮಳೆಯಾಗುತ್ತಿದೆ. ದಿಢೀರ್ ಸುರಿಯುತ್ತಿರುವಂತ ಮಳೆಯಿಂದಾಗಿ ವಾಹನ ಸವಾರರು ತತ್ತರಿಸಿ ಹೋಗಿದ್ದಾರೆ. ಅಲ್ಲಲ್ಲಿ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ. https://kannadanewsnow.com/kannada/wont-stop-guarantee-as-long-as-congress-government-is-in-power-dk-shivakumar/ https://kannadanewsnow.com/kannada/dkss-reply-to-oppositions-ruckus-with-dvg-get-up-fall-fight-and-lose/
ಬೆಂಗಳೂರು: ನಾವು ಈ ರಾಜ್ಯದ ಬಡಜನತೆಗೆ, ಮಹಿಳೆಯರಿಗೆ ಅನುಕೂಲವಾಗಲಿ ಎಂದು ಗ್ಯಾರಂಟಿ ಮೂಲಕ ಅನುಕೂಲ ಮಾಡಿಕೊಟ್ಟಿದ್ದೇವೆ. ಹೆಣ್ಣು ಕುಟುಂಬದ ಕಣ್ಣು ಎಂದು ಅವರಿಗೆ ಸಹಾಯ ಮಾಡಿದ್ದೇವೆ. ಒಂದು ಸಮಯದಲ್ಲಿ ವಿಪಕ್ಷಗಳು ನಮ್ಮನ್ನು ಹೆದರಿಸಲು ಪ್ರಯತ್ನಪಟ್ಟವು. ಈ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿಇರುವ ತನಕ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಇದು ನಮ್ಮ ಬದ್ಧತೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಶಾಸಕ ಎಂ.ಟಿ.ಕೃಷ್ಣಪ್ಪ ಅವರ, ಗ್ಯಾರಂಟಿ ಅನುಷ್ಠಾನ ಸಮಿತಿಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಕೂರಿಸಲಾಗಿದೆ. ಅವರಿಗೆ ವೇತನ ನೀಡಲಾಗುತ್ತಿದೆ ಎನ್ನುವ ಆಕ್ಷೇಪಕ್ಕೆ ಉತ್ತರ ನೀಡಲು ಮುಂದಾದಾಗ ಗದ್ದಲ ಎಬ್ಬಿಸಿದ ವಿಪಕ್ಷಗಳ ಸದಸ್ಯರಿಗೆ ಡಿಸಿಎಂ ಅವರು ಮಂಗಳವಾರ ತಿರುಗೇಟು ನೀಡಿದರು. “ನಮ್ಮ ಜನ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದರು. ಪ್ರತಿಯೊಂದು ಪದಾರ್ಥಗಳ ಬೆಲೆಯೂ ಹೆಚ್ಚಾಗಿತ್ತು. ಆದ ಕಾರಣಕ್ಕೆ ನಮ್ಮ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿತು. ಈ ಯೋಜನೆಗಳಿಗೆ ನೂರಾರು ಟೀಕೆ- ಟಿಪ್ಪಣಿಗಳು ಬಂದವು. ಒಂದು ಕಾಳು ಕಡಿಮೆ ಕೊಟ್ಟರೂ…
ಬೆಂಗಳೂರು : “ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದಂತಹ ಪಕ್ಷದ ಕಾರ್ಯಕರ್ತರಿಗೆ ಸರ್ಕಾರದ ಕಾರ್ಯಕ್ರಮಗಳ ಮೂಲಕ ಅನುಕೂಲ ಮಾಡಿಕೊಡುವ ಹಾಗೂ ಹುದ್ದೆಗಳನ್ನು ಕೊಡುವ ಹಕ್ಕು ನಮಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡರು. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಶಾಸಕ ಎಂ.ಟಿ.ಕೃಷ್ಣಪ್ಪ ಅವರ, ಗ್ಯಾರಂಟಿ ಅನುಷ್ಠಾನ ಸಮಿತಿಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಕೂರಿಸಲಾಗಿದೆ. ಅವರಿಗೆ ವೇತನ ನೀಡಲಾಗುತ್ತಿದೆ ಎನ್ನುವ ಆಕ್ಷೇಪಕ್ಕೆ ಉತ್ತರ ನೀಡಲು ಮುಂದಾದಾಗ ಗದ್ದಲ ಎಬ್ಬಿಸಿದ ವಿಪಕ್ಷಗಳ ಸದಸ್ಯರಿಗೆ ಡಿಸಿಎಂ ಅವರು ಮಂಗಳವಾರ ತಿರುಗೇಟು ನೀಡಿದರು. “52 ಸಾವಿರ ಕೋಟಿ ರೂಪಾಯಿಯ ಬೃಹತ್ ಯೋಜನೆ ಜನರಿಗೆ ತಲುಪುತ್ತಿದೆಯೋ ಇಲ್ಲವೋ ಎಂಬುದನ್ನು ಮನೆ, ಮನೆಗೆ ತೆರಳಿ ಪರೀಕ್ಷೆ ಮಾಡಿ. ಜನರಿಗೆ ಉಪಯೋಗವಾಗುತ್ತಿದೆಯೋ ಇಲ್ಲವೋ ಎಂದು ತಿಳಿಯಲು ಕಾರ್ಯಕರ್ತರಿಗೆ ಅವಕಾಶ ಮಾಡಿಕೊಟ್ಟರೆ ಅದನ್ನು ನಿಮ್ಮ ಕೈಯಲ್ಲಿ ತಡೆದುಕೊಳ್ಳಲು ಆಗುತ್ತಿಲ್ಲವಲ್ಲ” ಎಂದು ಲೇವಡಿ ಮಾಡಿದರು. ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಅಶೋಕ ಅವರು, 187 ಕೋಟಿ ರೂಪಾಯಿ ಸರ್ಕಾರದ ಹಣವನ್ನು ಬಳ್ಳಾರಿಯಲ್ಲಿ ಹಂಚಿದ್ದಾರೆ, ಪಕ್ಷಕ್ಕೆ…














