Subscribe to Updates
Get the latest creative news from FooBar about art, design and business.
Author: kannadanewsnow09
ಬೆಳಗಾವಿ ಸುವರ್ಣವಿಧಾನಸೌಧ : ರಾಜ್ಯದಲ್ಲಿ ಕಳೆದ 2.5 ವರ್ಷದಲ್ಲಿ ಪೊಲೀಸರು 61299 ಸ್ವಯಂ ಪ್ರೇರಿತ ದೂರುಗಳನ್ನು ದಾಖಲು ಮಾಡಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಅವರು ವಿಧಾನ ಪರಿಷತ್ ನಲ್ಲಿ ಶಾಸಕ ಸಿ. ಟಿ. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ದಾಖಲು ಮಾಡಿರುವ ಸ್ವಯಂ ಪ್ರೇರಿತ ದೂರುಗಳಲ್ಲಿ 57646 ದೂರುಗಳಿಗೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದ್ದು, ಯಾವುದೇ ದೂರಗಳನ್ನು ಹಿಂಪಡೆದಿಲ್ಲ ಎಂದು ತಿಳಿಸಿದರು. ಸ್ವಯಂ ಪ್ರೇರಿತ ದೂರುಗಳನ್ನು ದಾಖಲಿಸುವಾಗ, ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಂದರ್ಭ, ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯನ್ನುಂಟು ಮಾಡಿದ ಸಂದರ್ಭ, ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದಲ್ಲಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದಲ್ಲಿ, ವಾರಸುದಾರರು ಯಾರೂ ಇಲ್ಲದೇ ಇರುವ ಪ್ರಕರಣಗಳಲ್ಲಿ, ದ್ವೇಷಭಾಷಣ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗುವ ಸಂದರ್ಭಗಳಲ್ಲಿ, ಕೆಲವು ಪ್ರಕರಣಗಳಲ್ಲಿ ಸಾರ್ವಜನಿಕರು ದೂರು ನೀಡಲು ಬಾರದೇ ಇದ್ದ ಸಂದರ್ಭಗಳಲ್ಲಿ ಸ್ವಯಂಪ್ರೇರಿತ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗುವುದು ಎಂದರು. ಸಾರ್ವಜನಿಕರ ಪ್ರಾಣ ಮತ್ತು ಮಾನ ಕಾಪಾಡುವ ಸಂದರ್ಭಗಳಲ್ಲಿ…
ಬೆಳಗಾವಿ ಸುವರ್ಣ ವಿಧಾನಸೌಧ: ರಾಜ್ಯದಲ್ಲಿ ಅಬಕಾರಿ ಆದಾಯದ ಪ್ರಮಾಣ ಏರಿಕೆಯಾಗುತ್ತಿದ್ದು, ಪ್ರಸಕ್ತ 2025-26ನೇ ಹಣಕಾಸು ವರ್ಷದ ನವೆಂಬರ್ ಅಂತ್ಯದ ವೇಳೆಗೆ ಸರ್ಕಾರಕ್ಕೆ 24,287.83 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಲಿಖಿತ ಉತ್ತರ ನೀಡಿದ್ದು, ರಾಜ್ಯದ ಅಬಕಾರಿ ವಹಿವಾಟಿನ ಕಂಪು ಮತ್ತು ಪರವಾನಗಿಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಆದಾಯದ ಹರಿವು: ಕಳೆದ ವರ್ಷಕ್ಕೆ ಹೋಲಿಸಿದರೆ ಸಾಧನೆ 2024-25ನೇ ಸಾಲಿನಲ್ಲಿ ಒಟ್ಟು ಅಬಕಾರಿ ಆದಾಯ 34,636.11 ಕೋಟಿ ರೂ. ಆಗಿತ್ತು (ಇದರಲ್ಲಿ 28,852.53 ಕೋಟಿ ರೂ. ಮೌಲ್ಯದ ಹಾಟ್ ಡ್ರಿಂಕ್ಸ್ ಮತ್ತು ಬಿಯರ್ನಿಂದ 5,783.58 ಕೋಟಿ ರೂ. ಆದಾಯ ಬಂದಿತ್ತು). ಪ್ರಸಕ್ತ ಸಾಲಿನ ನವೆಂಬರ್ 2025ರ ಅಂತ್ಯಕ್ಕೆ ಹಾಟ್ ಡ್ರಿಂಕ್ಸ್’ನಿಂದ 20,614.08 ಕೋಟಿ ರೂ. ಹಾಗೂ ಬಿಯರ್ ಮಾರಾಟದಿಂದ 3,673.75 ಕೋಟಿ ರೂ. ಸಂಗ್ರಹವಾಗಿದೆ ಎಂದು ಸಚಿವರು ಉತ್ತರಿಸಿದ್ದಾರೆ. ಪರವಾನಗಿಗಳ ವಿವರ: ಸಿಎಲ್-2 ಮತ್ತು ಸಿಎಲ್-9…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ತ್ಯಾಗರ್ತಿಯಲ್ಲಿ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿರುವುದಾಗಿ ತಿಳಿದು ಬಂದಿದೆ. ಅದನ್ನು ಪತ್ತೆ ಹಚ್ಚಿ ಓಡಿಸೋ ಕಾರ್ಯಾಚರಣೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ನಡೆಸುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಉಳವಿ ಹೋಬಳಿ ವ್ಯಾಪ್ತಿಗೆ ಜೋಡಿ ಕಾಡಾನೆಗಳು ಆಗಮಿಸಿ ರೈತರ ಬೆಳೆ ನಾಶ ಪಡಿಸಿದ್ದವು. ಅವುಗಳನ್ನು ದೂಗೂರಿನಿಂದ ಕಾನಹಳ್ಳಿ, ಕಣ್ಣೂರು ಮಾರ್ಗವಾಗಿ ಚಿಕ್ಕಲವತ್ತಿ ಕಡೆಗೆ ಓಡಿಸಲಾಗಿದೆ. ಮುಂದೆ ಅಂಬಲಗೋಡು ಡ್ಯಾಂ ಕಡೆಗೂ ಓಡಿಸೋ ಕಾರ್ಯಾಚರಣೆ ಮುಂದುವರೆದಿದೆ. ಮತ್ತೊಂದೆಡೆ ಸಾಗರ ತಾಲ್ಲೂಕಿನ ತ್ಯಾಗರ್ತಿ ಕಾಡಿನಲ್ಲಿ ಒಂಟಿ ಸಲಗವೊಂದು ಬಂದಿರುವುದಾಗಿ ಅರಣ್ಯ ಇಲಾಖೆಯ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಜೋಡಿ ಆನೆಗಳು ಇತ್ತಿಂದ ಅತ್ತ ತೆರಳಿದರೇ, ಅತ್ತಿಂದಲೇ ಇತ್ತ ಒಂಟಿ ಸಲಗ ಆಗಮಿಸಿರೋದಾಗಿ ಹೇಳಲಾಗುತ್ತಿದೆ. ಅಂದಹಾಗೆ ಕರ್ಜಿಕೊಪ್ಪದಲ್ಲಿ ಹುಚ್ಚಪ್ಪ ಎಂಬುವರ ಗದ್ದೆಯಲ್ಲಿ ಒಂಟಿ ಸಲಗ ಹಾದು ಹೋಗಿರುವಂತ ಹೆಜ್ಜೆ ಗುರುತು ಪತ್ತೆಯಾಗಿವೆ. ಅಲ್ಲಿಂದ ಕಣ್ಣೂರು, ತ್ಯಾಗರ್ತಿ ಪ್ರದೇಶಗಳಲ್ಲಿ ಒಂಟಿ ಸಲಗ ಅಲೆದಾಡುತ್ತಿರೋದಾಗಿ ಹೇಳಲಾಗುತ್ತಿದೆ. ಹೀಗಾಗಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆಯೂ ಅರಣ್ಯ ಇಲಾಖೆಯಿಂದ ಮನವಿ ಮಾಡಲಾಗಿದೆ.…
ಉತ್ತರ ಕನ್ನಡ: ಜಿಲ್ಲೆಯಲ್ಲಿ ಅಕ್ರಮವಾಗಿ ಮರ ಕಡಿತಲೆ ಮಾಡಿದರೂ, ನಾಮಕಾವಸ್ಥೆಗೆ ಪರಿಶೀಲನೆ ಮಾಡಿ, ಪ್ರಕರಣ ಮುಚ್ಚಿ ಹಾಕಿರುವಂತ ಆರೋಪವು ಕ್ಯಾದಗಿಯ RFO ಹಾಗೂ ವಾಚರ್ ಉದಯ ನಾಯ್ಕ್ ವಿರುದ್ಧ ಕೇಳಿ ಬಂದಿದೆ. ಮೂಗರ್ಜಿಯನ್ನು ಗಂಭೀರವಾಗಿ ಪರಿಗಣಿಸದಂತ ಅರಣ್ಯ ಇಲಾಖೆಯು, ವಾಚರ್, ಮರ ಕಡಿತಲೆ ಮಾಡಿದವರಿಗೆ ಬೆಂಬಲವಾಗಿ ನಿಂತಿರುವುದಾಗಿ ಹೇಳಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲ್ಲೂಕಿನ ಕ್ಯಾದಗಿ ವಲಯ ಅರಣ್ಯಾಧಿಕಾರಿಗಳ ಸಮೀಪದ ಗ್ರಾಮವಾಗಿರುವಂತ ಹೊನ್ನೆಬಿಡಾರದಲ್ಲಿ ಬೃಹತ್ ಗಾತ್ರದ ಮರಗಳನ್ನು ಕಟ್ಟಿಂಗ್ ಮಿಷಿನ್ ಬಳಸಿ ಬಾಬು ನಾಯ್ಕ್ ಎಂಬುವರು ಕಡಿತಲೆ ಮಾಡಿದಂತ ಆರೋಪ ಕೇಳಿ ಬಂದಿದೆ. ಖುದ್ದು ಮರ ಕಡಿತಲೆ ಮಾಡೋದಕ್ಕೆ ಆ ಭಾಗದ ವಾಚರ್ ಉದಯ ನಾಯ್ಕ್ ಎಂಬಾತ ಸಾಥ್ ನೀಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ RFOಗೆ ಸಾರ್ವಜನಿಕರೊಬ್ಬರು ಮೂಗರ್ಜಿ ಬರೆದಿದ್ದಾರೆ. ಅದನ್ನು ಗೌಪ್ಯವಾಗಿಟ್ಟು ಸ್ಥಳಕ್ಕೆ ತೆರಳಿ ಲಕ್ಷಾಂತರ ಬೆಲೆ ಬಾಳುವಂತ ಕಡಿತಲೆ ಮಾಡಿದಂತ ಮರಗಳನ್ನು ವಶಕ್ಕೆ ಪಡೆಯೋದು ಬಿಟ್ಟು, ವಾಚರ್ ಉದಯ ನಾಯ್ಕ್ ಗೆ ದೂರು ಅರ್ಜಿಯ ವಿಷಯವನ್ನೇ ತಿಳಿಸಿದ್ದಾರೆ.…
ಬೆಳಗಾವಿ ಸುವರ್ಣ ವಿಧಾನಸೌಧ : ಕೃಷಿ ಜಮೀನುಗಳಲ್ಲಿ ಬೆಳೆ ಸಮೀಕ್ಷೆಯನ್ನು ಸ್ವತಃ ರೈತರೇ “ಬೆಳೆ ಸಮೀಕ್ಷೆ ರೈತರ ಆ್ಯಪ್” ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ವ್ಯತ್ಯಾಸಗಳು ಕಂಡುಬಂದಲ್ಲಿ ರೈತರು ನಿಗದಿತ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಹೆಚ್. ಶ್ರೀನಿವಾಸ್ ಅವರ ಪ್ರಶ್ನೆಗೆ ಸದನದಲ್ಲಿ ಉತ್ತರಿಸಿದರು. ರಾಜ್ಯದ ಎಲ್ಲ ರೈತರ ತಾಕುಗಳ ಬೆಳೆ ಮಾಹಿತಿ ದಾಖಲಿಸುವ ಸಲುವಾಗಿ ಆದ್ಯತೆ ಮೇರೆಗೆ ಪ್ರಥಮವಾಗಿ ಸ್ವತಃ ರೈತರೇ “ಬೆಳೆ ಸಮೀಕ್ಷೆ ರೈತರ ಆ್ಯಪ್” ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದೆ. ಸಕಾಲದಲ್ಲಿ ರೈತರು ಬೆಳೆ ಸಮೀಕ್ಷೆ ಮಾಡದೇ ಇದ್ದಲ್ಲಿ ಖಾಸಗಿ ನಿವಾಸಿಗಳ ಮೂಲಕ ಬೆಳೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಖಾಸಗಿ ನಿವಾಸಿಗಳ ಬದಲಿಗೆ ಸಂಘ ಸಂಸ್ಥೆಗಳ ಮೂಲಕ ಬೆಳೆ ಸಮೀಕ್ಷೆ ಮಾಡಿಸಲು ಅವಕಾಶ…
ಬೆಳಗಾವಿ ಸುವರ್ಣ ವಿಧಾನಸೌಧ : ಮಾನವ-ಆನೆ ಸಂಘರ್ಷವನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಆನೆ ಧಾಮಕ್ಕೆ ಕೇಂದ್ರ ಸರ್ಕಾರ ಇನ್ನೂ ತನ್ನ ಸಮ್ಮತಿ ನೀಡಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಸಭೆಗಿಂದು ತಿಳಿಸಿದ್ದಾರೆ. ನಿಯಮ 73ರಡಿಯಲ್ಲಿ ಶಾಸಕ ಎಚ್.ಕೆ. ಸುರೇಶ್ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಅವರು, ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಆನೆಗಳ ಮೃದು ಧಾಮ ಮಾಡಲು ರಾಷ್ಟ್ರೀಯ ಹುಲಿ ಪ್ರಾಧಿಕಾರದ ಮತ್ತು ಕೇಂದ್ರದ ಅನುಮತಿ ಬೇಕು, ಒಂದೊಮ್ಮೆ ಕೇಂದ್ರ ಅನುಮತಿಸದಿದ್ದರೆ ಪರ್ಯಾಯ ಮಾರ್ಗದ ಚಿಂತನೆಯೂ ಸರ್ಕಾರಕ್ಕಿದೆ ಎಂದರು. ಪ್ರತಿ ವರ್ಷ ರಾಜ್ಯದಲ್ಲಿ 45 ರಿಂದ 50 ಜನರು ಮಾನವ ವನ್ಯಜೀವಿ ಸಂಘರ್ಷದಲ್ಲಿ ಸಾವಿಗೀಡಾಗುತ್ತಿದ್ದಾರೆ ಇದು ನೋವಿನ ಸಂಗತಿ. ಈ ಪೈಕಿ ಆನೆ ದಾಳಿಯಿಂದ ಹೆಚ್ಚಿನ ಸಾವು ಸಂಭವಿಸುತ್ತಿದ್ದು, ಅದಕ್ಕಾಗಿಯೇ ಆನೆ ಧಾಮ ಮಾಡಲು ಸಂಪುಟದ ಅನುಮತಿ ಪಡೆದು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ಆನೆ-ಮಾನವ…
ಬೆಂಗಳೂರು: ಬೆಂಗಳೂರು: ದಶಕದಿಂದ ಜಟಿಲ ಸಮಸ್ಯೆಯಿಂದ ನ್ಯಾಯಾಲಯದಲ್ಲಿ ಬಾಕಿ ಉಳಿದಿದ್ದ ಪಿಡಿಒ ಜೇಷ್ಠತಾ ಪಟ್ಟಿ ಪ್ರಕರಣವು ತಾರ್ಕಿಕವಾಗಿ ನ್ಯಾಯಾಲಯದಲ್ಲಿ ಬಗೆ ಹರಿದು ಸಾವಿರಾರು ಪಿಡಿಒಗಳಿಗೆ ನ್ಯಾಯ ದೊರಕಿದೆ. ಶೀಘ್ರವೇ ಪಿಡಿಒಗಳ ಪದೋನ್ನತಿ ಸರಾಗವಾಗಿ ನಡೆಯಲಿದೆ ಎಂಬುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಮೂಲಕ ಪದೋನ್ನತಿ ನಿರೀಕ್ಷೆಯಲ್ಲಿದ್ದ ಪಿಡಿಒಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಮಹತ್ವದ ಮತ್ತು ಐತಿಹಾಸಿಕ ನ್ಯಾಯ ದೊರಕಿದೆ. ಇಚ್ಚಾಶಕ್ತಿಯ ಕೊರತೆಯಿಂದಾಗಿ ದಶಕಗಳ ಕಾಲ ಜೇಷ್ಠತಾ ಪಟ್ಟಿಯ ಪ್ರಕರಣವು ಕಗ್ಗಂಟಾಗಿ ನ್ಯಾಯಾಲಯದಲ್ಲಿತ್ತು, ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ಮತ್ತು ವಿಶೇಷ ಆಸಕ್ತಿಯಿಂದಾಗಿ ಈ ಪ್ರಕರಣವನ್ನು ಸಕಾರಾತ್ಮಕವಾಗಿ ಬಗೆಹರಿಸುವಲ್ಲಿ ಯಶಸ್ವಿಯಾಗಿದೆ ಎಂದಿದ್ದಾರೆ. ಪಂಚಾಯತ್ ರಾಜ್ ಇಲಾಖೆಯ ಜವಾಬ್ದಾರಿಯನ್ನು ವಹಿಸಿಕೊಂಡಾಗ ಇಲಾಖೆಯಲ್ಲಿನ ಪಿಡಿಒ ಜೇಷ್ಠತಾ ಪಟ್ಟಿಯ ಪ್ರಕರಣವು ಸವಾಲಿನಂತೆ ಎದುರಿಗಿತ್ತು, ಇದನ್ನು ಬಗೆಹರಿಸಲೇಬೇಕು ಎಂಬ ದೃಷ್ಟಿಯಿಂದ ಸುಮಾರು 15ಕ್ಕೂ ಹೆಚ್ಚು ಸಭೆಗಳನ್ನು ನಡೆಸಿ, ನಿರಂತರವಾಗಿ…
ಬೆಳಗಾವಿ ಸುವರ್ಣ ವಿಧಾನಸೌಧ: – ಇಳಕಲ್ ಮತ್ತು ಹುನಗುಂದ ಎರಡೂ ತಾಲ್ಲೂಕುಗಳಲ್ಲಿ 100 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದ್ದು, ನಿವೇಶನ ಮತ್ತು ಅನುದಾನದ ಲಭ್ಯತೆಯನುಸಾರ ಸ್ವಂತ ಕಟ್ಟಡಗಳನ್ನು ನಿರ್ಮಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳಕರ್ ತಿಳಿಸಿದರು. ಇಂದು ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಹುನುಗುಂದ ಶಾಸಕ ಕಾಶಪ್ಪನವರ ವಿಜಯಾನಂದ ಶಿವಶಂಕರಪ್ಪ ಇವರು ಇಳಕಲ್ ಹಾಗೂ ಹುನಗುಂದ ತಾಲ್ಲೂಕುಗಳಲ್ಲಿ 358 ಅಂಗನವಾಡಿಗಳ ಪೈಕಿ 217 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿದ್ದು, 41 ಅಂಗನವಾಡಿ ಕೇಂದ್ರಗಳು ಸರ್ಕಾರಿ ಕಟ್ಟಡ/ಪರ್ಯಾಯ ವ್ಯವಸ್ಥೆಯಾಗಿ ಇತರೆ ಕಟ್ಟಡದಲ್ಲಿ ನಡೆಯುತ್ತಿವೆ . ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ 100 ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಿಕೊಡಬೇಕೆಂದು ಕೇಳಿದ ಪ್ರಶ್ನೆಗೆ ಒಟ್ಟಾರೆ 3500 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ. ಈಗಾಗಲೇ ಸ್ವಂತ ಕಟ್ಟಡ ನಿರ್ಮಿಸಲು ಅಗತ್ಯ ಕ್ರಮ ವಹಿಸಲಾಗಿದ್ದು, ಸ್ವಂತ ಕಟ್ಟಡ…
ಬೆಳಗಾವಿ ಸುವರ್ಣಸೌಧ : ಕರ್ನಾಟಕ ವಿಧಾನಸಭೆಯಲ್ಲಿ ಮಂಡಿಸಲಾದಂತೆ ಮತ್ತು ಪರಿಶೀಲನಾ ಸಮಿತಿಯು ಶಿಫಾರಸ್ಸು ಮಾಡಿದಂತೆ ಹಾಗೂ ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿರುವ ಕರ್ನಾಟಕ ಭೂಕಂದಾಯ ಎರಡನೇ ತಿದ್ದುಪಡಿ ವಿಧೇಯಕ 2025ಕ್ಕೆ ಪರಿಷತ್ತಿನಲ್ಲಿ ಡಿ.17ರಂದು ಅಂಗೀಕಾರ ದೊರೆಯಿತು. ಕೊಡಗು ಜಿಲ್ಲೆಯ ಭೂ ದಾಖಲೆಗಳನ್ನು ಕಾನೂನಿಗೆ ಅನುಗುಣವಾಗುವಂತೆ ಮಾಡಲು ಮತ್ತು ರಾಜ್ಯದ ಉಳಿದ ಭಾಗದಲ್ಲಿ ಅದರ ಸಂಗತತೆಯನ್ನು ಖಚಿತಪಡಿಸಿಕೊಳ್ಳಲು ಉದ್ದೇಶಿಸಿ ಈ ವಿಧೇಯಕ ತರಲಾಗುತ್ತಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿ ವಿಧೇಯಕವನ್ನು ಅಂಗೀಕರಿಸಲು ಕೋರಿದರು. ಚರ್ಚೆಯ ಬಳಿಕ, ಧ್ವನಿಮತದ ಮೂಲಕ ಪರಿಷತ್ತ್ತಿನಲ್ಲಿ ವಿಧೇಯಕಕ್ಕೆ ಅನುಮೋದನೆ ದೊರೆಯಿತು. https://kannadanewsnow.com/kannada/teaching-the-bhagavad-gita-is-not-meant-to-create-religious-conflict-union-minister-h-d-kumaraswamy/ https://kannadanewsnow.com/kannada/breaking-new-scheme-of-the-centre-1-5-lakh-cashless-treatment-for-road-accident-victims-ambulance-service-within-10-minutes/
ನವದೆಹಲಿ: ಶಾಲಾ ಹಂತದಿಂದಲೇ ಭಗವದ್ಗೀತೆಯನ್ನು ಮಕ್ಕಳಿಗೆ ಬೋಧಿಸಬೇಕು. ಇದು ಅತ್ಯಂತ ಉತ್ತಮ ಶೈಕ್ಷಣಿಕ ಸುಧಾರಣಾ ಕ್ರಮವಾಗುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪುನರುಚ್ಚರಿಸಿದರು. ನವದೆಹಲಿಯಲ್ಲಿ ಮೈಸೂರಿನ ಕುವೆಂಪು ವಿಶ್ವಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್ ಹಾಗೂ ದೆಹಲಿ ಕರ್ನಾಟಕ ಸಂಘ ಹಮ್ಮಿಕೊಂಡಿದ್ದ ರಾಷ್ಟ್ರಕವಿ ಕುವೆಂಪು ಅವರ ಕೊಡುಗೆ ಮತ್ತು ಸಾಧನೆ ಕುರಿತ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು. ಭಗವದ್ಗೀತೆಯನ್ನು ಬೋಧಿಸಬೇಕು ಎಂದು ಎಂದು ನಾನು ಹೇಳಿದ್ದು ರಾಜಕೀಯ ಉದ್ದೇಶ ಅಥವಾ ಯಾವುದೇ ಧರ್ಮ ಸಂಘರ್ಷ ಉಂಟು ಮಾಡುವುದಕ್ಕಲ್ಲ. ಉತ್ತಮ ಸಮಾಜ ನಿರ್ಮಾಣ ಮಾಡುವ ಅಗತ್ಯದ ದೃಷ್ಟಿಯಿಂದ ಹೇಳಿದ್ದೇನೆ ಎಂದು ಅವರು ಒತ್ತಿ ಹೇಳಿದರು. ಭಗವದ್ಗೀತೆಯ ಉದಾತ್ತ, ಶ್ರೇಷ್ಟ ಮೌಲ್ಯಗಳ ಬಗ್ಗೆ ಹೊಸದಾಗಿ ತಿಳಿಹೇಳುವ ಅಗತ್ಯವಿಲ್ಲ. ಆದರೆ ಷಸಮಾಜದಲ್ಲಿ ನೈತಿಕ ಮೌಲ್ಯಗಳು ಅಧಃಪತನ ಆಗುತ್ತಿರುವ ಸಂದರ್ಭದಲ್ಲಿ ಗೀತೆಯ ಅಗತ್ಯ ಇನ್ನೂ ಹೆಚ್ಚಿದೆ. ಮಾನವ ಕುಲಕ್ಕೆ ಕೃಷ್ಣನ ಉಪದೇಶವು ದಾರಿದೀಪವಾಗಿದೆ. ಹೀಗಾಗಿ ಮಕ್ಕಳಿಗೆ…














