Subscribe to Updates
Get the latest creative news from FooBar about art, design and business.
Author: kannadanewsnow09
ಇಸ್ಲಾಮಾಬಾದ್: ಪಾಕಿಸ್ತಾನದ ಕಾನೂನು ಜಾರಿ ಸಂಸ್ಥೆಗಳು ಶುಕ್ರವಾರ ಹಿರಿಯ ಅಲ್-ಖೈದಾ ನಾಯಕ ಅಮೀನ್ ಉಲ್ ಹಕ್ ಅವರನ್ನು ಬಂಧಿಸಿದ್ದು, ಹತ್ಯೆಗೀಡಾದ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಅವರ ಆಪ್ತ ಸಹಾಯಕ ಎಂದು ತಿಳಿದು ಬಂದಿದೆ. ಪಂಜಾಬ್ ಪ್ರಾಂತ್ಯದಲ್ಲಿ ಯೋಜಿತ ಕಾರ್ಯಾಚರಣೆಯ ಸಮಯದಲ್ಲಿ ಇಲಾಖೆಯು ವಿವಿಧ ಗುಪ್ತಚರ ಸಂಸ್ಥೆಗಳ ಸಹಯೋಗದೊಂದಿಗೆ ಹಕ್ ನನ್ನು ಬಂಧಿಸಿದ್ದರಿಂದ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ವಕ್ತಾರರ ಭಯೋತ್ಪಾದನಾ ನಿಗ್ರಹ ಇಲಾಖೆ (ಸಿಟಿಡಿ) ತಿಳಿಸಿದೆ. ಹಕ್ 1996 ರಿಂದ ಒಸಾಮಾ ಬಿನ್ ಲಾಡೆನ್ ನ ನಿಕಟ ಸಹವರ್ತಿಯಾಗಿದ್ದು, ಪ್ರಾಂತ್ಯದಾದ್ಯಂತ ವಿಧ್ವಂಸಕ ಚಟುವಟಿಕೆಗಳನ್ನು ಯೋಜಿಸಿದ್ದ ಮತ್ತು ಪ್ರಮುಖ ಸ್ಥಾಪನೆಗಳು ಮತ್ತು ವ್ಯಕ್ತಿಗಳನ್ನು ಗುರಿಯಾಗಿಸಲು ಬಯಸಿದ್ದ ಎಂದು ಪೊಲೀಸ್ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಸಿಟಿಡಿ ತನ್ನ ಅಸಾಧಾರಣ ಕಾರ್ಯಾಚರಣೆ ಸಾಮರ್ಥ್ಯ ಮತ್ತು ಸಮರ್ಪಣೆಯನ್ನು ಪ್ರದರ್ಶಿಸಿ, ಅಮಿನುಲ್ ಹಕ್ ಅವರನ್ನು ಪತ್ತೆಹಚ್ಚುವಲ್ಲಿ ಮತ್ತು ಬಂಧಿಸುವಲ್ಲಿ ಯಶಸ್ವಿಯಾಗಿದೆ” ಎಂದು ಅದು ಹೇಳಿದೆ. ಬಂಧಿತ ಭಯೋತ್ಪಾದಕನ ವಿರುದ್ಧ ಸಿಟಿಡಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಖಾಸಗಿ ವಲಯದಲ್ಲಿಯೂ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನಿರ್ಧಾರವನ್ನು ಪೋನ್ ಪೇ ಸಿಇಒ ಟೀಕಿಸಿದ್ದರು. ಅವರ ಟೀಕೆಯ ವಿರುದ್ಧ ಸಿಡಿದೆದ್ದಿರುವಂತ ಕನ್ನಡಿಗರು ಎಕ್ಸ್ ನಲ್ಲಿ #BoycottPhonePe #UninstallPhonePe ಅಭಿಯಾನವನ್ನೇ ಆರಂಭಿಸಿದ್ದಾರೆ. ಈಗ ಈ ಅಭಿಯಾನವನ್ನು ಎಕ್ಸ್ ನಲ್ಲಿ ಭಾರೀ ಟ್ರೆಂಡ್ ಕೂಡ ಆಗಿದೆ. ಕನ್ನಡಿಗರಿಗೆ ಖಾಸಗಿ ವಲಯದಲ್ಲೂ ಶೇ.100ರಷ್ಟು ಉದ್ಯೋಗ ಮೀಸಲಾತಿ ಸಂಬಂಧದ ಸರ್ಕಾರದ ನಿರ್ಧಾರದ ಬಗ್ಗೆ ಪೋನ್ ಪೇ ಸಿಇಒ ಸಮೀರ್ ನಿಗಮ್ ಟೀಕಿಸಿದ್ದರು. ಅವರ ಟೀಕೆಗೆ ಕನ್ನಡಿಗರು ವ್ಯಾಪಕ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ಕರ್ನಾಟಕದ ಕನ್ನಡಿಗರ ವಿರುದ್ಧ ಮಾತನಾಡಿದಂತ ಪೋನ್ ಪೇ ಸಿಇಒ ಸಮೀರ್ ನಿಗಮ್ ಗೆ ಬುದ್ದಿ ಕಲಿಸಬೇಕು ಅಂತ ಕನ್ನಡಿಗರು ನಿರ್ಧರಿಸಿದ್ದಾರೆ. ಅಲ್ಲದೇ ಪೋನ್ ಪೇ ಗೆ 1 ರೇಟಿಂಗ್ ನೀಡಿ, ಮೊಬೈಲ್ ನಿಂದ ಆಪ್ ಡಿಲೀಟ್ ಮಾಡಿ ಅನ್ನೋ ಸಂದೇಶವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಈಗ ವೈರಲ್ ಆಗಿದೆ. https://twitter.com/mdiliyas77/status/1814224813176815839 https://twitter.com/sgowda79/status/1814193046591807836 ಸೋಷಿಯಲ್ ಮೀಡಿಯಾದಲ್ಲಿ ಅನೇಕ ಕನ್ನಡಿಗರು ಪೋನ್ ಪೇಗೆ 1…
ಬೆಂಗಳೂರು: ವಾಲ್ಮೀಕಿ ನಿಗಮದ 187 ಕೋಟಿ ಹಣವನ್ನು ಈ ಸರಕಾರದ ಒಬ್ಬ ಸಚಿವರು, ಒಬ್ಬ ಶಾಸಕ, ಮುಖ್ಯಮಂತ್ರಿ ಸೇರಿ ಹಲವಾರು ಸಚಿವರು ಲೂಟಿ ಮಾಡಿ ಲೋಕಸಭಾ ಚುನಾವಣೆಗೆ ಬಳಸಿದ್ದು, ಅದು ಇ.ಡಿ. ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟವಾಗಿದೆ. ಲೂಟಿ ಆದ ಹಣ ಎಲ್ಲೆಲ್ಲಿ ಹೋಗಿದೆ? ಯಾವಾಗ ವಾಪಸ್ ತರುತ್ತೀರಿ ಎಂದು ನಾವು ನಿಲುವಳಿ ಸೂಚನೆ ಮೂಲಕ ಪ್ರಶ್ನಿಸಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು. ಹಣ ಎಟಿಎಂ ಮೂಲಕ ಕಾಂಗ್ರೆಸ್ ನಾಯಕರಿಗೆ ಹೋಗಿದೆಯೇ? ಎಂದು ಕೇಳಿದ ಅವರು, ಎಫ್ಐಆರ್ನಲ್ಲಿ ನಾಗೇಂದ್ರ, ನಿಗಮದ ಅಧ್ಯಕ್ಷ, ಶಾಸಕ ದದ್ದಲ್ ಹೆಸರಿಲ್ಲ. ಒತ್ತಡ ಹಾಕಿ ಅವರ ಹೆಸರನ್ನು ಕೈಬಿಟ್ಟಿದ್ದಾರೆ. ಮುಖ್ಯಮಂತ್ರಿ ವೀರಾವೇಶದ ಮಾತನಾಡಿ ತಮ್ಮ ಸರಕಾರ ಭಾಗಿಯಾಗಿಲ್ಲ ಎಂದಿದ್ದಾರೆ. ಹಾಗಿದ್ದರೆ ರಾಜೀನಾಮೆ ಕೊಟ್ಟದ್ದು ಯಾಕೆ? ಬುದ್ಧಿ ಇಲ್ಲದೇ ರಾಜೀನಾಮೆ ಕೊಟ್ಟರೇ ಎಂದು ಕೇಳಿದರು. 89 ಕೋಟಿ ಲೂಟಿ ಆಗಿದೆ ಎಂದು ನೀವೇ ಒಪ್ಪಿಕೊಂಡಿದ್ದೀರಿ. ಆತ್ಮಹತ್ಯೆಯ, ಲೂಟಿಯ ತನಿಖೆ ಮಾಡುವುದನ್ನು ಬಿಟ್ಟು ನಿಮ್ಮ ಸರಕಾರದಲ್ಲಿ ಹೀಗಾಗಿತ್ತು, ಹಾಗಾಗಿತ್ತು ಎಂದು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ದಿನ ಹತ್ತಿರ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿ ಇವತ್ತು ರಾಜ್ಯದಲ್ಲಿ ಉದ್ಭವವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹಣಕಾಸು ಇಲಾಖೆ ಸಚಿವರೂ ಆದ ಮುಖ್ಯಮಂತ್ರಿಗಳ ಸಮ್ಮತಿ ಇಲ್ಲದೇ, ಅವರ ಗಮನಕ್ಕೆ ಬಾರದೆ ಹಣ ವರ್ಗಾವಣೆ ಆಗಲು ಸಾಧ್ಯವೇ ಇರಲಿಲ್ಲ ಎಂದು ನುಡಿದರು. ಕೇವಲ ಮಾಜಿ ಸಚಿವ ನಾಗೇಂದ್ರ, ದದ್ದಲ್ ಅವರಷ್ಟೇ ಅಲ್ಲ; ಇನ್ನೂ ದೊಡ್ಡ ದೊಡ್ಡವರ ಹೆಸರು ಮುಂದೆ ಬರಲಿದೆ. ಹಾಗಾಗಿ ಆತಂಕದಿಂದಲೇ ನಿನ್ನೆ ರಾಜ್ಯದ 5 ಸಚಿವರು ಇ.ಡಿ. ಮೇಲೆ ಆಪಾದನೆ ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ತಿಳಿಸಿದರು. ಮುಖ್ಯಮಂತ್ರಿಗಳು ಸದನದಲ್ಲಿ ಉತ್ತರ ಕೊಡುವ ಪ್ರಯತ್ನ ಮಾಡಿದ್ದು, ಸತ್ಯಸಂಗತಿಗಳನ್ನು ಮರೆಮಾಚಿ, ಸದನಕ್ಕೆ ಮತ್ತು ರಾಜ್ಯದ ಜನತೆಗೆ ತಪ್ಪು ಮಾಹಿತಿ, ತಪ್ಪು ಸಂದೇಶ ಕೊಡುವ ಪ್ರಯತ್ನ ಮಾಡಿದ್ದಾರೆ ಎಂದು ಟೀಕಿಸಿದರು. ಮಾನ್ಯ ಮುಖ್ಯಮಂತ್ರಿಗಳು…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ತನಿಖೆ ನಡೆಸುತ್ತಿರುವಂತ ಎಸ್ಐಟಿ ಪೊಲೀಸರು, ಇದೀಗ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ತನ್ನ ಮೊಬೈಲ್ ನಿಂದ ಕಳುಹಿಸಿದ್ದಂತ ಅಶ್ಲೀಲ ಮೆಸೇಜ್ ಗಳ ಡೇಟಾವನ್ನು ಸಂಗ್ರಹಿಸಿರುವುದಾಗಿ ತಿಳಿದು ಬಂದಿದೆ. ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಎಂಬ ಒಂದೇ ಕಾರಣಕ್ಕೆ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿತ್ತು. ಅಲ್ಲದೇ ಆತನ ಮೃತದೇಹವನ್ನು ಮೋರಿಗೆ ಎಸೆದಿದ್ದರು. ಮೃತದೇಹ ಪತ್ತೆಯಾದ ನಂತ್ರ, ರೇಣುಕಾಸ್ವಾಮಿ ಕೊಲೆ ಹಿಂದಿನ ಅಸಲಿ ಕಾರಣ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದದ್ದು ಎಂಬುದಾಗಿ ಪೊಲೀಸರಿಗೆ ತಿಳಿದು ಬಂದಿತ್ತು. ಹೀಗಾಗಿ ಆತನ ಮೊಬೈಲ್ ಸಂಖ್ಯೆಯ ಮೂಲಕ ಆತ ಬಳಸುತ್ತಿದ್ದಂತ ಸಾಮಾಜಿಕ ಜಾಲತಾಣಗಳಲ್ಲಿನ ಡೇಟಾ ಮಾಹಿತಿ ಸಂಗ್ರಹಿಸೋದಕ್ಕೆ ಎಸ್ಐಟಿ ಪೊಲೀಸರು ಮುಂದಾಗಿದ್ದರು. ರೇಣುಕಾಸ್ವಾಮಿ ಬಳಸುತ್ತಿದ್ದಂತ ಎರಡು ಪೋನ್ ನಂಬರ್ ಗಳ ಪೈಕಿ ಒಂದು ನಂಬರ್ ಪತ್ನಿ ಹೆಸರಿನಲ್ಲಿ ಖರೀದಿಸಿದ್ದರು. ಆ ನಂಬರ್ ನನ್ನು ಸರ್ವೀಸ್ ಪ್ರೊವೈಡಿಂಗ್ ಕಂಪನಿಗೆ ಕಳುಹಿಸಿ, ಎರಡು ಪೋನ್…
ಬೆಂಗಳೂರು : “ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಅವರು ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು ₹ 300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು “ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ ₹87 ಕೋಟಿ. ಎಪಿಎಂಸಿಯ ₹47 ಕೋಟಿ, 2019 ರಲ್ಲಿ ಅಂಗವಿಕಲ ಕಲ್ಯಾಣ ಇಲಾಖೆಯ ₹22 ಕೋಟಿ, ಅಂಬೇಡ್ಕರ್ ನಿಗಮದ ಕೆನರಾ ಬ್ಯಾಂಕ್ ಅಲ್ಲಿನ ಹಣ ಜೂನ್ 2018 ರಲ್ಲಿ ₹5 ಕೋಟಿ, ದೇವರಾಜ್ ಅರಸು ನಿಗಮದ ₹47 ಕೋಟಿ, ಮಾಲಿನ್ಯ ನಿಯಂತ್ರಣ ಮಂಡಲಿಯ ₹10 ಕೋಟಿ ಹಾಗೂ ಕೆಐಡಿಬಿಯ ಹಣ ಸೇಲಂಗೆ ಅಕ್ರಮವಾಗಿ ವರ್ಗಾವಣೆಯಾಗಿದೆ” ಎಂದು ತಿಳಿಸಿದರು. ಬಿಜೆಪಿಯ ಅಕ್ರಮಗಳನ್ನು ತನಿಖೆ ನಡೆಸುವಿರಾ ಎಂದು ಪ್ರಶ್ನಿಸಿದಾಗ “ಖಂಡಿತವಾಗಿಯೂ ತನಿಖೆ ನಡೆಸುತ್ತೇವೆ. ಆದರೆ ಎಲ್ಲವೂ ದಾಖಲೆಯಲ್ಲಿ ಇರಬೇಕು ಎನ್ನುವ ಕಾರಣಕ್ಕೆ ಸದನದಲ್ಲಿ ಎಲ್ಲಾ ದಾಖಲೆಗಳನ್ನು…
Good News: ಶೀಘ್ರವೇ ‘PU ಕಾಲೇಜು’ಗಳಲ್ಲಿ ಖಾಲಿ ಇರುವ ‘814 ಉಪನ್ಯಾಸಕ’ರ ನೇಮಕಾತಿಗೆ ಅಧಿಸೂಚನೆ: ಸಚಿವ ಮಧು ಬಂಗಾರಪ್ಪ
ಬೆಂಗಳೂರು: ಉಪನ್ಯಾಸಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವಂತ 814 ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಮಾಹಿತಿ ಹಂಚಿಕೊಂಡಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕೊರತೆ, ಖಾಲಿ ಇರುವ ವಿವಿಧ ವಿಷಯಗಳ ನೇರ ನೇಮಕಾತಿ ಕೋಟಾದಡಿ ಒಟ್ಟು 814 ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಇಲಾಖೆ ಮುಂದಾಗಿದೆ ಅಂತ ತಿಳಿಸಿದ್ದಾರೆ. ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಒಟ್ಟಾರೆ 4259 ಉಪನ್ಯಾಸಕರ ಕೊರತೆ ಇದೆ. ಆದರೇ ಅವುಗಳಲ್ಲಿ ಈಗ ಸರ್ಕಾರವು 814 ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಿದೆ ಎಂದರು. ಯಾವ ಯಾವ ವಿಷಯದ ಉಪನ್ಯಾಸಕರ ಎಷ್ಟು ಹುದ್ದೆ ಭರ್ತಿ? ಕನ್ನಡ ಉಪನ್ಯಾಸಕರು – 105 ಹುದ್ದೆ ಇಂಗ್ಲೀಷ್ ಉಪನ್ಯಾಸಕರು – 125 ಹುದ್ದೆ ಇತಿಹಾಸ – 124 ಹುದ್ದೆಗಳು ಅರ್ಥಶಾಸ್ತ್ರ…
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ದಕ್ಷಿಣ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ 11 ಇಂದಿರಾ ಕ್ಯಾಂಟೀನ್ಗಳು ಬಿಲ್ ಪಾವತಿಯಾಗದೆ ಸ್ಥಗಿತಗೊಂಡಿರುವ ಬಗ್ಗೆ ಕೆಲ ದಿನ ಪತ್ರಿಕೆಗಳಲ್ಲಿ ಪ್ರಕಟಗೊಂಡಿದ್ದು, ವಿದ್ಯುನ್ಮಾಧ್ಯಮಗಳಲ್ಲಿ ವರದಿಯಾಗಿರುತ್ತದೆ. ಈ ಕುರಿತು ಕೆಳಕಂಡಂತೆ ಸ್ಪಷ್ಠೀಕರಣ ನೀಡಲಾಗಿದೆ. “ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲಾ ವಲಯಗಳಲ್ಲಿ 2017 ರಿಂದ ಇಂದಿರಾ ಕ್ಯಾಂಟೀನ್ಗಳನ್ನು ಸ್ಥಾಪಿಸಿದ್ದು, ಯಶಸ್ವಿಯಾಗಿ ಕಾರ್ಯನಿರ್ವಹಿಸಲಾಗುತ್ತಿದೆ.” ಈ ಸಂಬಂಧ ದಕ್ಷಿಣ ವಲಯದ 11 ಇಂದಿರಾ ಕ್ಯಾಂಟೀನ್ಗಳನ್ನು ಸಂಬಂಧಪಟ್ಟ ಸಂಸ್ಥೆಯವರು ಇಂದಿರಾ ಕ್ಯಾಂಟೀನ್ಗಳಲ್ಲಿ ಉಪಹಾರ, ಮಧ್ಯಾಹ್ನದ ಊಟ ಮತ್ತು ರಾತ್ರಿ ಊಟವನ್ನು ರಿಯಾಯಿತಿ ದರಗಳಲ್ಲಿ ಒದಗಿಸುತ್ತಿದೆ. ಮುಂದುವರಿದು, ಗುತ್ತಿಗೆ ಪಡೆದಿರುವ ಸಂಸ್ಥೆಯು ಸಲ್ಲಿಸಿರುವ ಬಿಲ್ಲುಗಳಲ್ಲಿ ಬಾಕಿ ಮೊತ್ತ ಅಂದಾಜು 40.00 ಕೋಟಿ ರೂ.ಗಳನ್ನು ಪಾವತಿಸದೇ ಇರುವ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ಅಡುಗೆ ಕೋಣೆಯಲ್ಲಿ ನೀರಿನ ಮತ್ತು ವಿದ್ಯುತ್ ಬಿಲ್ಗಳನ್ನು ಪಾವತಿಸದೇ ಇರುವುದರಿಂದ ದಿನಾಂಕ: 18-07-2024ರಂದು ಸ್ಥಗಿತಗೊಳಿಸಿರುತ್ತಾರೆ. ಈ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಲಾಗಿದ್ದು, ಪಾಲಿಕೆಯ ವ್ಯಾಪ್ತಿಯಲ್ಲಿ ಆಹಾರದ ಗುಣಮಟ್ಟ, ಪ್ರಮಾಣವನ್ನು ಪರಿಶೀಲಿಸಲು ಪ್ರತಿ ಇಂದಿರಾ ಕ್ಯಾಂಟೀನ್ಗಳಲ್ಲಿ ಮಾರ್ಷ್ಲ್ಗಳನ್ನು ನಿಯೋಜಿಸಲಾಗಿದೆ.…
ನವದೆಹಲಿ: ಭಾರತ ಸೇರಿದಂತೆ ವಿಶ್ವಾದ್ಯಂತ ಮೈಕ್ರೋಸಾಫ್ಟ್ ಬಳಕೆದಾರರು ಶುಕ್ರವಾರ ಗಮನಾರ್ಹ ಸೇವಾ ಅಡೆತಡೆಗಳನ್ನು ವರದಿ ಮಾಡಿದ್ದಾರೆ. ಸ್ಥಗಿತ ಟ್ರ್ಯಾಕಿಂಗ್ ವೆಬ್ಸೈಟ್ ಡೌನ್ಡೆಟೆಕ್ಟರ್ ವಿವಿಧ ಪ್ಲಾಟ್ಫಾರ್ಮ್ಗಳಲ್ಲಿನ ಸಮಸ್ಯೆಗಳನ್ನು ಎತ್ತಿ ತೋರಿಸಿದೆ. ಇದರ ನಡುವೆ ಸಮಸ್ಯೆ ಗುರುತಿಸಿ, ಸರಿಪಡಿಸಲಾಗುತ್ತಿದೆ ಅಂತ ಮೈಕ್ರೋಸಾಫ್ಟ್ ಕ್ರೌಡ್ ಸ್ಟ್ರೈಕ್ ಸಿಇಒ ಸ್ಪಷ್ಟ ಪಡಿಸಿದ್ದಾರೆ. ಜಾಗತಿಕ ಮೈಕ್ರೋಸಾಫ್ಟ್ ಕ್ಲೌಡ್ ಸ್ಥಗಿತಕ್ಕೆ ಸೈಬರ್ ಸೆಕ್ಯುರಿಟಿ ಸಂಸ್ಥೆಯಾದ ಕ್ರೌಡ್ಸ್ಟ್ರೈಕ್ನ ಇತ್ತೀಚಿನ ನವೀಕರಣವು ಕಾರಣವಾಗಿದೆ, ಇದು ವಿಂಡೋಸ್ ಆಧಾರಿತ ಡೆಸ್ಕ್ಟಾಪ್ಗಳು ಮತ್ತು ಲ್ಯಾಪ್ಟಾಪ್ಗಳ ಮೇಲೆ ಪರಿಣಾಮ ಬೀರಿದೆ. ವಿಮಾನಯಾನ ಸಂಸ್ಥೆಗಳು, ಬ್ಯಾಂಕುಗಳು ಮತ್ತು ವ್ಯವಹಾರಗಳ ಮೇಲೆ ಪರಿಣಾಮ ಬೀರುವ ಪ್ರಮುಖ ಜಾಗತಿಕ ಸ್ಥಗಿತದ ಹಿನ್ನೆಲೆಯಲ್ಲಿ, ಕ್ರೌಡ್ ಸ್ಟ್ರೈಕ್ ಸಿಇಒ ಜಾರ್ಜ್ ಕರ್ಟ್ಜ್ ಕಂಪನಿಯು ತನ್ನ ಸಾಧನಗಳ ವಿಂಡೋಸ್ ಬಳಕೆದಾರರಿಗೆ ಇತ್ತೀಚಿನ ನವೀಕರಣದಿಂದ ಉಂಟಾಗುವ ಸಮಸ್ಯೆಗಳನ್ನು ಪರಿಹರಿಸುತ್ತಿದೆ ಎಂದು ಎಕ್ಸ್ ನಲ್ಲಿ ಘೋಷಿಸಿದರು. https://twitter.com/George_Kurtz/status/1814235001745027317 “ವಿಂಡೋಸ್ ಹೋಸ್ಟ್ಗಳಿಗಾಗಿ ಒಂದೇ ವಿಷಯ ನವೀಕರಣದಲ್ಲಿ ಕಂಡುಬರುವ ದೋಷದಿಂದ ಪ್ರಭಾವಿತರಾದ ಗ್ರಾಹಕರೊಂದಿಗೆ ಕ್ರೌಡ್ಸ್ಟ್ರೈಕ್ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಮ್ಯಾಕ್ ಮತ್ತು ಲಿನಕ್ಸ್…
ಬೆಂಗಳೂರು: ಮಂಗಳೂರಿನ ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಕೆಎಸ್ಆರ್ ಬೆಂಗಳೂರು-ಮಂಗಳೂರು ಜಂಕ್ಷನ್-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಬಗ್ಗೆ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು ಈ ಕೆಳಗಿನ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿದೆ. ಈ ವಿಶೇಷ ರೈಲುಗಳು ಈ ಕೆಳಗಿನ ದಿನಾಂಕಗಳಲ್ಲಿ ಕಾರ್ಯನಿರ್ವಹಿಸುತ್ತವೆ ಎಂದಿದೆ. ರೈಲು ಸಂಖ್ಯೆ 06547/06548 ಕೆಎಸ್ಆರ್ ಬೆಂಗಳೂರು-ಮಂಗಳೂರು ಜಂಕ್ಷನ್-ಯಶವಂತಪುರ ವಿಶೇಷ ಎಕ್ಸ್ಪ್ರೆಸ್. ರೈಲು ಸಂಖ್ಯೆ 06547 ಜುಲೈ 19, 2024 ರಂದು ರಾತ್ರಿ 11 ಗಂಟೆಗೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 11:40 ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಈ ರೈಲು ಬೆಂಗಳೂರು ಕಂಟೋನ್ಮೆಂಟ್ (ರಾತ್ರಿ 11:10/11:12), ಎಸ್ಎಂವಿಟಿ ಬೆಂಗಳೂರು (11:25/11:27), ಚಿಕ್ಕಬಾಣಾವರ (12:08/12:10), ನೆಲಮಂಗಲ (12:23/12:25), ಚನ್ನರಾಯಪಟ್ಟಣ (02:18/02) ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ. ರೈಲು ಸಂಖ್ಯೆ 06548 ಜುಲೈ 20, 2024 ರಂದು ಮಧ್ಯಾಹ್ನ 1:40 ಕ್ಕೆ ಮಂಗಳೂರು ಜಂಕ್ಷನ್ನಿಂದ…