Author: kannadanewsnow09

ನವದೆಹಲಿ: ಎ.ಆರ್.ರೆಹಮಾನ್ ಪತ್ನಿ ಸೈರಾ ಪತಿಯಿಂದ ಬೇರ್ಪಡುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಹಾಗೂ ಪತ್ನಿ ಸೈರಾ ದೂರಾಗೋ ವಿಷಯ ಬಹಿರಂಗಗೊಂಡಂತೆ ಆಗಿದೆ. ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಮತ್ತು ಅವರ ಪತ್ನಿ ಸೈರಾ ತಮ್ಮ ಪ್ರತ್ಯೇಕತೆಯನ್ನು ಘೋಷಿಸಿದ್ದಾರೆ. ವಂದನಾ ಶಾ ಮತ್ತು ಅಸೋಸಿಯೇಟ್ಸ್ ದಂಪತಿಗಳ ಪ್ರತ್ಯೇಕತೆಯ ನಿರ್ಧಾರದ ಬಗ್ಗೆ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದೆ. “ಮದುವೆಯಾದ ಹಲವು ವರ್ಷಗಳ ನಂತರ, ಶ್ರೀಮತಿ ಸೈರಾ ತನ್ನ ಪತಿ ಎ ಆರ್ ರೆಹಮಾನ್ ಅವರಿಂದ ಬೇರ್ಪಡುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಅವರ ಸಂಬಂಧದಲ್ಲಿ ಗಮನಾರ್ಹ ಭಾವನಾತ್ಮಕ ಒತ್ತಡದ ನಂತರ ಈ ನಿರ್ಧಾರ ಬಂದಿದೆ. ಪರಸ್ಪರರ ಬಗ್ಗೆ ಆಳವಾದ ಪ್ರೀತಿಯ ಹೊರತಾಗಿಯೂ, ದಂಪತಿಗಳು ಉದ್ವಿಗ್ನತೆ ಮತ್ತು ತೊಂದರೆಗಳು ತಮ್ಮ ನಡುವೆ ಪರಿಹರಿಸಲಾಗದ ಅಂತರವನ್ನು ಸೃಷ್ಟಿಸಿವೆ ಎಂದು ಕಂಡುಕೊಂಡಿದ್ದಾರೆ, ಈ ಸಮಯದಲ್ಲಿ ಎರಡೂ ಪಕ್ಷಗಳು ಅದನ್ನು ನಿವಾರಿಸಲು ಸಾಧ್ಯವಾಗುವುದಿಲ್ಲ. ಶ್ರೀಮತಿ ಸೈರಾ ಅವರು ನೋವು ಮತ್ತು ಯಾತನೆಯಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ…

Read More

ಬೆಂಗಳೂರು: ವಕ್ಫ್ ಆಸ್ತಿ ಒತ್ತುವರಿ ಸಮಸ್ಯೆ ವಿರುದ್ಧ ‘ನಮ್ಮ ಭೂಮಿ ನಮ್ಮ ಹಕ್ಕು’ ಶೀರ್ಷಿಕೆಯ ಅಡಿಯಲ್ಲಿ ಜನಾಂದೋಲನ ಮಾಡಲು ನಿರ್ಧರಿಸಿದ್ದೇವೆ. ನವೆಂಬರ್ 21 ಮತ್ತು 22ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಮತ್ತು ತಾಲ್ಲೂಕು ತಹಸೀಲ್ದಾರರ ಕಚೇರಿಗಳ ಮುಂದೆ ದಿನವಿಡೀ ಪ್ರತಿಭಟನೆ ನಡೆಸಲಿದ್ದೇವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ತಿಳಿಸಿದ್ದಾರೆ. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಟನೆಯ ಜೊತೆಗೆ ಎಲ್ಲ ಸಂತ್ರಸ್ತರಿಂದ ಅರ್ಜಿಗಳ ಸ್ವೀಕಾರ, ವಕ್ಫ್ ಅಧಿಕಾರ ದುರ್ಬಳಕೆಯಿಂದ ಸಮಸ್ಯೆ -ಶೋಷಣೆಗೆ ಒಳಗಾದವರ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ವಿವರಿಸಿದರು. ಬೆಂಗಳೂರಿನ ಫ್ರೀಡಂ ಪಾಕ್ರ್Àನಲ್ಲಿ ಪ್ರತಿಭಟನೆ ನಡೆಸಲಿದ್ದೇವೆ. ಜೊತೆಗೆ 3 ತಂಡಗಳನ್ನು ರಚಿಸಿದ್ದೇವೆ. ಕೇಂದ್ರದ ಸಚಿವರು, ಮಾಜಿ ಮುಖ್ಯಮಂತ್ರಿಗಳು, ಹಿರಿಯರು, ವರಿಷ್ಠರು ಸೇರಿ 3 ತಂಡಗಳು ಕಾರ್ಯ ನಿರ್ವಹಿಸುತ್ತಿವೆ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಈ 3 ತಂಡಗಳ…

Read More

ಬೆಂಗಳೂರು: ಬಡವರ 14 ಲಕ್ಷ ಬಿಪಿಎಲ್ ಕಾರ್ಡ್ ಕಿತ್ತುಕೊಳ್ಳುವ ಘೋರ ಅಪರಾಧವನ್ನು ರಾಜ್ಯ ಸರಕಾರ ಮಾಡಿದೆ. ಅದರಲ್ಲೂ ನಮಗೆ ಮತ ಹಾಕಿದ್ದಾರಾ ಎಂದು ಜಾತಿ, ಕೋಮು ಹುಡುಕಿ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿರುವ ದೂರುಗಳಿವೆ ಎಂದು ವಿಧಾನಪರಿಷತ್ ಸದಸ್ಯ ಮತ್ತು ಬಿಜೆಪಿ ನಿಕಟಪೂರ್ವ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಡವರ ಅನ್ನಕ್ಕೂ ಕನ್ನ ಹಾಕುವ ಪರಮ ಅನ್ಯಾಯ ಇದಾಗಿದೆ ಎಂದು ಟೀಕಿಸಿದರು. ಜಾತಿ ಹುಡುಕಿ ಕಾರ್ಡ್ ರದ್ದು ಮಾಡಿದ್ದನ್ನು ಸೋಷಿಯಲ್ ಮೀಡಿಯದಲ್ಲಿ ನೋಡಿದ್ದೇನೆ. ಬಡವರ ಅನ್ನಕ್ಕೂ ಕನ್ನ ಹಾಕುವ ಸರಕಾರ ಇದೆಂದು ಆರೋಪಿಸಿದರು. ಎಐಸಿಸಿ ಅಧ್ಯಕ್ಷ ಖರ್ಗೆಯವರು ನಿನ್ನೆ ಆರೆಸ್ಸೆಸ್, ಬಿಜೆಪಿಯನ್ನು ವಿಷ ಸರ್ಪಕ್ಕೆ ಹೋಲಿಸಿದ್ದಾರೆ. ಅನುಭವ ಪಕ್ವತೆಯನ್ನು ಪಡೆದುಕೊಳ್ಳಬೇಕು. ಹಿರಿತನಕ್ಕೆ ತಕ್ಕ ಮಾತು ಅದಲ್ಲ; ಅವರ ಮಾತುಗಳು ಹುಚ್ಚುನಾಯಿ ಕಡಿತಕ್ಕೆ ಒಳಗಾದವರುÀ ಆಡುವ ಥರ ಮಾತಿನಂತಿತ್ತು. ಮಲ್ಲಿಕಾರ್ಜುನ ಖರ್ಗೆಯವರು ಆ…

Read More

ಚಿತ್ರದುರ್ಗ : ರಾಜ್ಯ ಚುನಾವಣಾ ಆಯೋಗವು ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ ಘೋಷಿಸಿದ್ದು, ಮತದಾನ ದಿನದಂದು ಇದೇ ನ.23ರಂದು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಕಾರ್ಮಿಕರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಿದೆ. ಜಿಲ್ಲೆಯ ಚಿತ್ರದುರ್ಗ ನಗರಸಭೆ 15ನೇ ವಾರ್ಡ್, ಚಳ್ಳಕೆರೆ ನಗರಸಭೆ 4ನೇ ವಾರ್ಡ್ ಹಾಗೂ ನಾಯಕನಹಟ್ಟಿ ಪಟ್ಟಣ ಪಂಚಾಯತಿ 1ನೇ ವಾರ್ಡ್‍ನಲ್ಲಿ ಸ್ಥಳೀಯ ಮತದಾನ ನಡೆಯಲಿದ್ದು, ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾನ ದಿನದಂದು ಸ್ಥಳೀಯ ಸಂಸ್ಥೆಗಳಲ್ಲಿ ಬರುವ ಕಾರ್ಖಾನೆಗಳು, ಗಾರ್ಮೆಂಟ್ ಪ್ಯಾಕ್ಟರಿಗಳಲ್ಲಿ, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸುವಂತೆ ಸಂಬಂಧಪಟ್ಟ ಎಲ್ಲಾ ಉದ್ಯೋಗದಾತರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಜಿ.ಇಬ್ರಾಹಿಂ ಸಾಬ್ ತಿಳಿಸಿದ್ದಾರೆ. https://kannadanewsnow.com/kannada/for-liquor-lovers-liquor-will-not-be-available-here-from-november-22-to-24/ https://kannadanewsnow.com/kannada/congress-has-kindergarten-system-too-narendra-swamy-on-ministerial-berth/

Read More

ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆಯ ಅಂಗವಾಗಿ ನ.23 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಮುಕ್ತ ಹಾಗೂ ಶಾಂತಿಯುತ ನಡೆಸುವ ನಿಟ್ಟಿನಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ, 1951ರ ಕಲಂ 135-ಸಿ ಹಾಗೂ ಕರ್ನಾಟಕ ಅಬಕಾರಿ(ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು, 1967ರ ನಿಯಮ 10-ಬಿ ಅಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಬಳ್ಳಾರಿ ಜಿಲ್ಲೆಯಾದ್ಯಂತ ನ.22 ರ ಮಧ್ಯರಾತ್ರಿ 12 ಗಂಟೆಯಿAದ ನ.24 ರ ಬೆಳಿಗ್ಗೆ 06 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ. ಸಂಡೂರು ವಿಧಾನಸಭೆ ಉಪಚುನಾವಣೆ; ಮತ ಎಣಿಕೆ ದಿನದಂದು ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಿ ಡಿಸಿ ಮಿಶ್ರಾ ಆದೇಶ ಸಂಡೂರು ವಿಧಾನಸಭೆ ಉಪಚುನಾವಣೆ-2024 ರ ಹಿನ್ನಲೆಯಲ್ಲಿ ನ.23 ರಂದು ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆ ಸಂಬAಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನ.22 ರ ಸಂಜೆ 06 ಗಂಟೆಯಿAದ ನ.24 ರ ಬೆಳಿಗ್ಗೆ 06 ಗಂಟೆಯವರೆಗೆ ಭಾರತೀಯ ನಾಗರಿಕ…

Read More

ಚಿಕ್ಕಬಳ್ಳಾಪುರ: ವಕ್ಫ್‌ ಮಂಡಳಿ ಮಾಡುತ್ತಿರುವ ಲ್ಯಾಂಡ್‌ ಜಿಹಾದ್‌ ವಿರುದ್ಧ ಬಿಜೆಪಿ ಇನ್ನಷ್ಟು ಹೋರಾಟ ಮಾಡಲಿದೆ. ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸಂಸದ ಡಾ.ಕೆ.ಸುಧಾಕರ್‌ ಅವರೊಂದಿಗೆ ಆರ್‌.ಅಶೋಕ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಕರ್ನಾಟಕದ ವಕ್ಫ್‌ ಬೋರ್ಡ್‌ ತಿಮಿಂಗಿಲದಂತಿದೆ. ಇದು ದೇವಸ್ಥಾನ, ಶಾಲೆ, ಕೃಷಿ ಜಮೀನುಗಳನ್ನು ನುಂಗಿ ಹಾಕುತ್ತಿದೆ. ಸಂವಿಧಾನದಲ್ಲಿ ಎಲ್ಲರೂ ಒಂದೇ ಎಂದು ಹೇಳಿದ್ದರೂ, ವಕ್ಫ್‌ ಮಂಡಳಿಗೆ ಮಾತ್ರ ಪ್ರತ್ಯೇಕ ಸಂವಿಧಾನವಿದೆ. ಬೌದ್ಧರು, ಕ್ರೈಸ್ತರಿಗೆ ಇಲ್ಲದ ನ್ಯಾಯಾಂಗದ ಅಧಿಕಾರ ವಕ್ಫ್‌ ಮಂಡಳಿಗಿದೆ. ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಕಾಂಗ್ರೆಸ್‌ ವರ್ತಿಸುತ್ತಿದೆ ಎಂದರು. ಕಂದವಾರದಲ್ಲಿ ಸರ್‌ ಎಂ.ವಿಶ್ವೇಶ್ವರಯ್ಯನವರು ಓದಿದ ಶಾಲೆಯ ಆವರಣವನ್ನು ವಕ್ಫ್‌ ಕಬಳಿಸಿದೆ. ಅಲ್ಲಿನ ಮಸೀದಿಯಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡಿದರೆ, ಶಾಲಾ ಮಕ್ಕಳು ಯಾವ ಪ್ರಾರ್ಥನೆ ಮಾಡಬೇಕು? ರಾಷ್ಟ್ರಧ್ವಜ ಹಾರಿಸುವ ಸ್ಥಳದಲ್ಲಿ ಹಸಿರು ಬಾವುಟ ಹಾರಿಸಲಾಗಿದೆ. ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದಾಗ ವಕ್ಫ್‌ ಮಂಡಳಿಗೆ ಇಂತಹ ವಿಶೇಷ ಸ್ಥಾನಮಾನ ಕಲ್ಪಿಸಲಾಗಿದೆ ಎಂದು ದೂರಿದರು.…

Read More

ಭುವನೇಶ್ವರ : ನೈಸರ್ಗಿಕ ವಿಪತ್ತುಗಳ ಸಮಯದಲ್ಲಿ ತ್ವರಿತ ಪ್ರತಿಕ್ರಿಯೆಯನ್ನು ಬಲಪಡಿಸಲು ರಿಲಯನ್ಸ್ ಫೌಂಡೇಶನ್ ಮತ್ತು ವಿಶ್ವಸಂಸ್ಥೆ (ಭಾರತ) ಒಡಿಶಾದಲ್ಲಿ ಸಮ್ಮೇಳನವನ್ನು ಆಯೋಜಿಸಿದೆ. ಸಮ್ಮೇಳನದ ವಿಷಯ ‘ತ್ವರಿತ ಕ್ರಮಕ್ಕೆ ಆರಂಭಿಕ ಎಚ್ಚರಿಕೆ – ಬಹು ವಿಪತ್ತು, ಬಹು ಮಧ್ಯಸ್ಥಗಾರರ ವಿಧಾನ: ಕರಾವಳಿ ಪರಿಸರ ವ್ಯವಸ್ಥೆಗಳಿಂದ ಕಲಿಕೆಗಳು’. ತಜ್ಞರು ಕರಾವಳಿ ಪರಿಸರ ವ್ಯವಸ್ಥೆಯ ಸೂಕ್ಷ್ಮತೆಗಳ ಬಗ್ಗೆ ತಮ್ಮ ಅನುಭವಗಳು ಮತ್ತು ಸಲಹೆಗಳನ್ನು ಹಂಚಿಕೊಂಡರು. ಕಾರ್ಯಕ್ರಮದ ಮುಖ್ಯ ಅತಿಥಿ, ಒಡಿಶಾದ ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಶ್ರೀ ಸುರೇಶ್ ಪೂಜಾರಿ ಮಾತನಾಡಿ ‘ಮುಂಚಿತ ಎಚ್ಚರಿಕೆ ವ್ಯವಸ್ಥೆಯನ್ನು ಬಲಪಡಿಸಲು ನಾವು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ಒಡಿಶಾ ಸರ್ಕಾರವು ವಿವಿಧ ಮಧ್ಯಸ್ಥಗಾರರ ಸಹಯೋಗದೊಂದಿಗೆ ನೈಸರ್ಗಿಕ ವಿಪತ್ತುಗಳ ಪರಿಣಾಮವನ್ನು ತಗ್ಗಿಸುವ ಪ್ರಯತ್ನಗಳನ್ನು ಮಾಡುತ್ತಿದೆ’ ಎಂದರು. ರಿಲಯನ್ಸ್ ಫೌಂಡೇಶನ್‌ನ ಸಿಇಒ ಜಗನ್ನಾಥ್ ಕುಮಾರ್ ಮಾತನಾಡಿ, ‘ಹವಾಮಾನ ಬದಲಾವಣೆಯಿಂದಾಗಿ ಹೆಚ್ಚುತ್ತಿರುವ ವಿಪತ್ತುಗಳ ಪರಿಣಾಮವನ್ನು ತಗ್ಗಿಸಲು ನಿಖರವಾದ ಎಚ್ಚರಿಕೆಗಳ ಅಗತ್ಯವಿದೆ. ಸಮುದಾಯಗಳನ್ನು ರಕ್ಷಿಸಲು ನಾವು ಹೊಸ ಎಚ್ಚರಿಕೆ ವ್ಯವಸ್ಥೆಗಳನ್ನು ಜಾರಿಗೆ ತರುತ್ತಿದ್ದೇವೆ’ ಎಂದು…

Read More

ಬೆಂಗಳೂರು: ನೆಲಮಂಗಲ ಬಳಿಯಲ್ಲಿ ಬೈಕ್ ಹಾಗೂ ಲಾರಿ ನಡುವಿನ ಅಪಘಾತದಲ್ಲಿ ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿಯ ಮಲ್ಲರಬಾಣವಾಡಿ ಕ್ರಾಸ್ ನಲ್ಲಿ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಕೋಲಾರದ ಶ್ರೀನಿವಾಸಪುರದ ನಿವಾಸಿ ಜೀವನ್ ಹಾಗೂ ಆದಿತ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವೇಗವಾಗಿ ಬಂದಂತ ಲಾರಿಯೊಂದು ಬೈಕ್ ಹಿಂಬದಿಗೆ ಡಿಕ್ಕಿಯಾದ ನಂತ್ರ ಈ ಅಪಘಾತ ಸಂಭವಿಸಿದೆ. ಅಪಘಾತದ ನಂತ್ರ ಲಾರಿ ಕೆಳಗೆ ಬೈಕ್ ಸಿಕ್ಕಿ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬೈಕ್ ಸವಾರರಾದಂತ ಜೀವನ್, ಆದಿತ್ಯ ಸ್ಥಳದಲ್ಲೇ ದುರ್ಮಣ ಹೊಂದಿದ್ದಾರೆ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/good-news-for-rural-people-of-karnataka-minister-dinesh-gundu-rao-says-telemedicine-tele-icu-services-are-being-planned/ https://kannadanewsnow.com/kannada/congress-has-kindergarten-system-too-narendra-swamy-on-ministerial-berth/

Read More

ಬೆಂಗಳೂರು : ಗ್ರಾಮೀಣ ಪ್ರದೇಶಗಳಲ್ಲಿ ಎಐ, ಟೆಲಿಮೆಡಿಸಿನ್, ಟೆಲಿ ಐಸಿಯುಗಳ ಮೂಲಕ ಅತ್ಯಾಧುನಿಕ ಗುಣಮಟ್ಟದ ಆರೋಗ್ಯ ಸೇವೆ ನೀಡುವತ್ತ ನಮ್ಮ ಸರ್ಕಾರ ಚಿತ್ತ ಹರಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಸ್ಟಾರ್ಟ್‌ಅಪ್ ಸ್ಪ್ರಿಂಗ್ ಬೋರ್ಡ್ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ದಿನೇಶ್ ಗುಂಡೂರಾವ್ ಅವರು, ಆರೋಗ್ಯ ಕ್ಷೇತ್ರವನ್ನು ಸುಧಾರಿಸುವಲ್ಲಿ ತಂತ್ರಜ್ಞಾನದ ಪಾತ್ರ ಹೆಚ್ಚಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಉತ್ಕೃಷ್ಟ ಗುಣಮಟ್ಟದ ಆರೋಗ್ಯ ಸೇವೆಯ ಅಗತ್ಯತೆ ಇದೆ. ಈ ಕಾರಣಕ್ಕಾಗಿ ಎಐ, ಟೆಲಿಮೆಡಿಸಿನ್ ಮತ್ತು ಟೆಲಿ-ಐಸಿಯುಗಳ ಸಮರ್ಪಕ ಬಳಕೆಯೊಂದಿಗೆ ಅತ್ಯಾಧುನಿಕ ಆರೋಗ್ಯ ಸೇವೆ ನೀಡಲು ನಮ್ಮ ಸರ್ಕಾರ ಶ್ರಮಿಸುತ್ತಿದೆ ಎಂದು ತಿಳಿಸಿದರು. ಲೆಟ್ಸ್ ವೆಂಚರ್‌ನ ಸಂಸ್ಥಾಪಕಿ ಶಾಂತಿ ಮೋಹನ್ ಮಾತನಾಡಿ, ಸ್ಟಾರ್ಟ್‌ಅಪ್‌ಗಳು ಮತ್ತು ಉದ್ಯಮದ ಅಗತ್ಯಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸ್ಟಾರ್ಟ್‌ಅಪ್‌ಗಳು ತಜ್ಞರೊಂದಿಗೆ ಸಂಪರ್ಕಿಸಿ ಮಾರ್ಗದರ್ಶನವನ್ನು ಪಡೆಯಲು ಹಾಗೂ ಆರ್ಥಿಕ ನೆರವು ಪಡೆಯಲು ಇದು ವೇದಿಕೆಯಾಗಿದೆ…

Read More

ಶಿವಮೊಗ್ಗ: ಸಾಗರದ ಡಿಎಫ್ಓ ಮೋಹನ್ ವಿನಾಕಾರಣ ನಮ್ಮ ಹೆಸರನ್ನು ಹೇಳುತ್ತಿದ್ದಾರೆ. ಈ ಮೂಲಕ ಒಬ್ಬರನ್ನೊಬ್ಬರನ್ನು ಎತ್ತಿ ಕಟ್ಟುವಂತ ಕೆಲಸ ಮಾಡುತ್ತಿದ್ದಾರೆ. ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ಬಹಿರಂಗ ಪಡಿಸಬೇಕು. ಒಂದು ವಾರದ ಒಳಗಾಗಿ ಸ್ಪಷ್ಟ ಪಡಿಸಿ, ಬಹಿರಂಗವಾಗಿ ಕ್ಷಮೆ ಕೇಳದೇ ಹೋದರೇ, ಎಸಿ, ಡಿಸಿ ಕಚೇರಿಯ ಮುಂದೆ ಪಕ್ಷಾತೀತವಾಗಿ ಪ್ರತಿಭಟನೆ ಮಾಡಲಾಗುತ್ತದೆ. ಮೇಲಧಿಕಾರಿಗಳಿಗೆ ದೂರು ನೀಡಲಾಗುವುದು ಅಂತ ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ರತ್ನಾಕರ ಹೊನಗೂಡು ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿನ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಅಧಿಕಾರಿಗಳನ್ನು ಬಿಟ್ಟು ಕಿರುಕುಳ, ಅನೇಕ ರೀತಿಯಲ್ಲಿ ಕಿರುಕುಳ ನೀಡಲಾಗುತ್ತಿತ್ತು. ಆದರೇ ಬಿಜೆಪಿಯವರು ಇದಕ್ಕೆಲ್ಲ ಬಗ್ಗಲಿಲ್ಲ. ಈಗ ಹೊಸ ರೀತಿಯಲ್ಲಿ ಕಿರುಕುಳ ಶುರು ಮಾಡಿದ್ದಾರೆ. ಆನಂದಪುರ ಗ್ರಾಮ ಪಂಚಾಯ್ತಿಯ ವ್ಯಾಪ್ತಿಯ ಸಾಗುವಾನಿ ಮರಗಳನ್ನು ಕಡಿದುಕೊಂಡು ಹೋಗಿದ್ದಾರೆ. ಗಾಡಿಯನ್ನು ಸೀಜ್ ಮಾಡಲಾಗಿದೆ. ಊರಿನ ಗ್ರಾಮಸ್ಥರು, ಕಾಂಗ್ರೆಸ್ ಮುಖಂಡರು ಆರ್ ಎಫ್ ಓ, ಡಿಎಫ್ಓ ಬಳಿಯಲ್ಲಿ ಹೋಗಿ ಮಾತುಕತೆ ನಡೆಸಿದ್ದಾರೆ.…

Read More