Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕರ್ನಾಟಕದ ಎರಡು ಕ್ಷೇತ್ರಗಳಿಗೆ ವಿಧಾನ ಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಅಧಿಕೃತ ಪಟ್ಟಿಯನ್ನು ಪ್ರಕಟಿಸಲಾಗಿದೆ. ಎಐಸಿಸಿಯ ಜನರಲ್ ಸೆಕ್ರೆಟರಿ ಕೆ.ಸಿ ವೇಣುಗೋಪಾಲ್ ಅಧಿಕೃತ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಅಸ್ಸಾಂನ ಒಂದು ಕ್ಷೇತ್ರ ಹಾಗೂ ಕರ್ನಾಟಕದ ಎರಡು ವಿಧಾನ ಸಭಾ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಕರ್ನಾಟಕದ ಸಂಡೂರು ವಿಧಾನ ಸಭಾ ಉಪ ಚುನಾವಣೆಗೆ ಇ.ಅನ್ನಪೂರ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರಿದಂತೆ ಸಿ.ಪಿ ಯೋಗೇಶ್ವರ್ ಗೆ ಟಿಕೆಟ್ ಘೋಷಿಸಲಾಗಿದೆ. ಆದರೆ ಶಿಗ್ಗಾವಿ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಘೋಷಿಸಿಲ್ಲ. ಅಂದಹಾಗೆ ಸಂಡೂರು, ಶಿಗ್ಗಾಂವ್ ಮತ್ತು ಚನ್ನಪಟ್ಟಣಕ್ಕೆ ನವೆಂಬರ್.13ರಂದು ಮತದಾನ ನಡೆಯಲಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅಕ್ಟೋಬರ್.25, 2024 ಕೊನೆಯ ದಿನವಾಗಿದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್.30, 2024 ಲಾಸ್ಟ್ ಡೇಟ್. ನವೆಂಬರ್.23ರಂದು ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಬಿಜೆಪಿಯಿಂದ ಸಂಡೂರು ಮತ್ತು ಶಿಗ್ಗಾಂವ್ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು…
ಬೆಂಗಳೂರು: ಕರ್ನಾಟಕದ ವಿಧಾನ ಸಭಾ ಉಪ ಚುನಾವಣೆಗೆ ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಘೋಷಣೆ ಮಾಡಲಾಗಿದೆ. ಎಐಸಿಸಿಯ ಜನರಲ್ ಸೆಕ್ರೆಟರಿ ಕೆ.ಸಿ ವೇಣುಗೋಪಾಲ್ ಅಧಿಕೃತ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಅಸ್ಸಾಂನ ಒಂದು ಕ್ಷೇತ್ರ ಹಾಗೂ ಕರ್ನಾಟಕದ ಎರಡು ವಿಧಾನ ಸಭಾ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಕರ್ನಾಟಕದ ಸಂಡೂರು ವಿಧಾನ ಸಭಾ ಉಪ ಚುನಾವಣೆಗೆ ಇ.ಅನ್ನಪೂರ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರಿದಂತೆ ಸಿ.ಪಿ ಯೋಗೇಶ್ವರ್ ಗೆ ಟಿಕೆಟ್ ಘೋಷಿಸಲಾಗಿದೆ. ಆದರೆ ಶಿಗ್ಗಾವಿ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಘೋಷಿಸಿಲ್ಲ. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
ಶಿವಮೊಗ್ಗ: ಇಂದು ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಗ್ರಾಮದಲ್ಲಿ ಸೊರಬ ಪೊಲೀಸ್ ಠಾಣೆಯ ವತಿಯಿಂದ ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆಯನ್ನು, ಸೊರಬ ಪೊಲೀಸ್ ಠಾಣೆಯ ಪಿಎಸ್ಐ ನಾಗರಾಜ್ ಅವರು ನಡೆಸಿದರು. ಈ ಸಭೆಗೆ ಸಿಪಿಐ ಬರಬೇಕಾಗಿತ್ತು. ತುರ್ತು ಕಾರ್ಯದ ನಿಮಿತ ಬೇರೆಡೆಗೆ ತೆರಳಿದ್ದರಿಂದ ಬರಲಾಗಲಿಲ್ಲ. ಹೀಗಾಗಿ ತಾವು ಆಗಮಿಸಿ, ಸಭೆ ನಡೆಸುತ್ತಿರುವುದಾಗಿ ಹೇಳಿದ ಅವರು, ಉಳವಿಯಲ್ಲಿ ವಾಹನಗಳ ಸಂಚಾರ ಸಮಸ್ಯೆ ಇದೆ. ವಾಹನಗಳ ನಿಲುಗಡೆಯ ಸಮಸ್ಯೆ ಆಗುತ್ತಿರುವುದು ಕಂಡು ಬಂದಿದೆ. ಆ ಎಲ್ಲಾ ಸಮಸ್ಯೆಯನ್ನು ಸ್ಥಳೀಯ ಆಡಳಿತದ ಜೊತೆಗೂಡಿ ಬಗೆ ಹರಿಸುವುದಾಗಿ ತಿಳಿಸಿದರು. ರಸ್ತೆ ಬದಿಯಲ್ಲಿ ವಾಹನ ಸವಾರರು ನಿಲ್ಲಿಸಬಾರದು. ಸೂಕ್ತ ಸ್ಥಳಗಳಲ್ಲಿ ತಮ್ಮ ವಾಹನಗಳನ್ನು ಪಾರ್ಕ್ ಮಾಡುವಂತೆ ಮನವಿಯನ್ನು ಮಾಡಿದರು. ಗಾಂಜಾ ಬೆಳೆಯೋರ ಬಗ್ಗೆ ಮಾಹಿತಿ ಕೊಡಿ ಉಳವಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಂಜಾ ಬೆಳೆಯುವ ಮಾಹಿತಿ ಇದ್ದರೇ ತಮ್ಮೊಂದಿಗೆ ಹಂಚಿಕೊಳ್ಳಿ. ಪೊಲೀಸ್ ಇಲಾಖೆಯು ಮಾಹಿತಿದಾರರ ಹೆಸರನ್ನು ಬಹಿರಂಗ ಪಡಿಸುವುದಿಲ್ಲ. ಗಂಜಾ ಬೆಳೆಯುವುದು ತಪ್ಪು, ಅಪರಾಧ ಕೂಡ. ಇಂತಹ…
ಚೆನ್ನೈ: ಕಾಂಚೀಪುರಂ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಮಹತ್ವದ ತೀರ್ಪಿನಲ್ಲಿ, ರೌಂಡಿಂಗ್ ಆಫ್ ದೋಷದಿಂದಾಗಿ ತಪ್ಪಾಗಿ ಶುಲ್ಕ ವಿಧಿಸಿದ ಗ್ರಾಹಕರಿಗೆ 50 ಪೈಸೆ ಹಿಂದಿರುಗಿಸದಂತ ಅಂಚೆ ಇಲಾಖೆ 15,000 ಮರುಪಾವತಿಸುವಂತೆ ನಿರ್ದೇಶನ ನೀಡಿದೆ. ಈ ನಿರ್ಧಾರವು ಮರುಪಾವತಿಯನ್ನು ಕಡ್ಡಾಯಗೊಳಿಸುವುದಲ್ಲದೆ, ಮಾನಸಿಕ ಯಾತನೆ, ಅನ್ಯಾಯದ ವ್ಯಾಪಾರ ಅಭ್ಯಾಸ ಮತ್ತು ಸೇವೆಯ ಕೊರತೆಗೆ ಕಾರಣವಾದ ದೂರುದಾರ ಎ. ಮಾನಶಾ ಅವರಿಗೆ 10,000 ರೂ.ಗಳ ಪರಿಹಾರವನ್ನು ನೀಡುವಂತೆ ಇಂಡಿಯಾ ಪೋಸ್ಟ್ಗೆ ಆದೇಶಿಸುತ್ತದೆ. ಹೆಚ್ಚುವರಿಯಾಗಿ, ಆಯೋಗವು ಅಂಚೆ ಇಲಾಖೆಗೆ (ಡಿಒಪಿ) 5,000 ರೂ.ಗಳ ದಾವೆ ವೆಚ್ಚವನ್ನು ವಿಧಿಸಿದೆ. ಪ್ರಕರಣದ ಹಿನ್ನೆಲೆ ಡಿಸೆಂಬರ್ 13, 2023 ರಂದು ಮಾನಶಾ ನೋಂದಾಯಿತ ಪತ್ರವನ್ನು ಕಳುಹಿಸಲು ಪೊಜಿಚಲೂರು ಅಂಚೆ ಕಚೇರಿಗೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ. ಪೂರ್ಣ ಮೊತ್ತವನ್ನು ಪ್ರತಿಬಿಂಬಿಸುವ ರಸೀದಿಯನ್ನು ಪಡೆಯುವ ನಿರೀಕ್ಷೆಯಲ್ಲಿ ಅವರು 30 ರೂ.ಗಳನ್ನು ನಗದು ರೂಪದಲ್ಲಿ ಪಾವತಿಸಿದರು. ಆದರೆ, ರಸೀದಿಯಲ್ಲಿ ಕೇವಲ 29.50 ರೂ. ವ್ಯತ್ಯಾಸವನ್ನು ಗಮನಿಸಿದ ನಂತರ, ಮಾನಶಾ ಉಳಿದ 50…
ಟರ್ಕಿ: ಅಂಕಾರಾ ಬಳಿಯ ಟರ್ಕಿಶ್ ಏರೋಸ್ಪೇಸ್ ಇಂಡಸ್ಟ್ರೀಸ್ (ಟಿಯುಎಸ್ಎಎಸ್) ಪ್ರಧಾನ ಕಚೇರಿಯ ಮೇಲೆ ಬುಧವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು 14 ಜನರು ಗಾಯಗೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಇಬ್ಬರು ದಾಳಿಕೋರರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಟರ್ಕಿಯ ಆಂತರಿಕ ಸಚಿವ ಅಲಿ ಯೆರ್ಲಿಕಾಯಾ ತಿಳಿಸಿದ್ದಾರೆ. ಗುಂಡಿನ ದಾಳಿಯ ನಂತರ ದೊಡ್ಡ ಸ್ಫೋಟ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ವರದಿ ಮಾಡಿದ್ದಾರೆ, ಇದು ಪ್ರದೇಶದ ಭದ್ರತಾ ಪರಿಸ್ಥಿತಿಯ ಬಗ್ಗೆ ಎಚ್ಚರಿಕೆಯನ್ನು ಹೆಚ್ಚಿಸಿದೆ. “ಅಂಕಾರಾದ ಕಹ್ರಮನ್ಕಜಾನ್ನಲ್ಲಿರುವ ತುಸಾಸ್ ಸೌಲಭ್ಯಗಳ ಮೇಲೆ ಭಯೋತ್ಪಾದಕ ದಾಳಿ ನಡೆಸಲಾಯಿತು. ದುರದೃಷ್ಟವಶಾತ್, ಹುತಾತ್ಮರು ಮತ್ತು ಗಾಯಗೊಂಡ ವ್ಯಕ್ತಿಗಳು ಇದ್ದಾರೆ” ಎಂದು ಯೆರ್ಲಿಕಾಯಾ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಬರೆದಿದ್ದಾರೆ. ಸ್ಫೋಟ ಮತ್ತು ನಂತರದ ಗುಂಡಿನ ದಾಳಿಯ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ, ಆದಾಗ್ಯೂ ಕೆಲವು ಮಾಧ್ಯಮಗಳು ಇದು ಆತ್ಮಾಹುತಿ ದಾಳಿಯಾಗಿರಬಹುದು ಎಂದು ಊಹಿಸಿವೆ. ಸರ್ಕಾರಿ ಸ್ವಾಮ್ಯದ ಅನಾಡೋಲು ಏಜೆನ್ಸಿ ವರದಿ ಮಾಡಿದಂತೆ ತುರ್ತು ಸೇವೆಗಳನ್ನು ತ್ವರಿತವಾಗಿ ಸ್ಥಳಕ್ಕೆ ರವಾನಿಸಲಾಗಿದೆ.…
ಟರ್ಕಿ: ಅಂಕಾರಾ ಬಳಿಯ ಟರ್ಕಿಶ್ ಏರೋಸ್ಪೇಸ್ ಇಂಡಸ್ಟ್ರೀಸ್ (ಟುಸಾಸ್) ಪ್ರಧಾನ ಕಚೇರಿಯಲ್ಲಿ ಮಾರಣಾಂತಿಕ ದಾಳಿ ನಡೆಸಲಾಗಿದೆ ಎಂದು ಟರ್ಕಿ ಬುಧವಾರ ಹೇಳಿದೆ. ಆದರೆ ಮಾಧ್ಯಮಗಳು ಸ್ಥಳದಲ್ಲಿ ದೊಡ್ಡ ಸ್ಫೋಟವನ್ನು ವರದಿ ಮಾಡಿವೆ ಮತ್ತು ಅಲ್ಲಿ ಗುಂಡಿನ ವಿನಿಮಯದ ತುಣುಕನ್ನು ತೋರಿಸಿವೆ. ಈ ಸ್ಪೋಟದಲ್ಲಿ ಹಲವರು ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ. ಅಂಕಾರಾದ ಕಹ್ರಮನ್ಕಜಾನ್ನಲ್ಲಿರುವ ತುಸಾಸ್ ಸೌಲಭ್ಯಗಳ ಮೇಲೆ ಭಯೋತ್ಪಾದಕ ದಾಳಿ ನಡೆಸಲಾಯಿತು. ದುರದೃಷ್ಟವಶಾತ್, ನಾವು ಹುತಾತ್ಮರು ಮತ್ತು ಗಾಯಗೊಂಡ ಜನರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದೇವೆ ಎಂದು ಆಂತರಿಕ ಸಚಿವ ಅಲಿ ಯೆರ್ಲಿಕಾಯಾ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಹೇಳಿದ್ದಾರೆ. https://twitter.com/AliYerlikaya/status/1849076451074564307 ಸ್ಫೋಟ ಮತ್ತು ನಂತರದ ಗುಂಡಿನ ದಾಳಿಯ ಕಾರಣ ಸ್ಪಷ್ಟವಾಗಿಲ್ಲ, ಕೆಲವು ಮಾಧ್ಯಮ ವರದಿಗಳು ಆತ್ಮಾಹುತಿ ದಾಳಿ ನಡೆದಿದೆ ಎಂದು ಹೇಳಿವೆ. ತುರ್ತು ಸೇವೆಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಸರ್ಕಾರಿ ಸ್ವಾಮ್ಯದ ಅನಾಡೋಲು ಏಜೆನ್ಸಿ ವರದಿ ಮಾಡಿದೆ. ಟೆಲಿವಿಷನ್ ಚಿತ್ರಗಳು ಹಾನಿಗೊಳಗಾದ ಗೇಟ್ ಮತ್ತು ಪಾರ್ಕಿಂಗ್ ಸ್ಥಳದಲ್ಲಿ ಹತ್ತಿರದ ಘರ್ಷಣೆಯನ್ನು ತೋರಿಸಿವೆ. ಟುಸಾಸ್ ಟರ್ಕಿಯ ಪ್ರಮುಖ ರಕ್ಷಣಾ…
ಬೆಂಗಳೂರು: ರಾಜ್ಯದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕೌಶಲ ಶೃಂಗಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. 2025ರ ಜನವರಿ ತಿಂಗಳಲ್ಲಿ 2-3 ದಿನಗಳ ಕಾಲ ನಡೆಯುವ ಈ ಶೃಂಗಸಭೆಗೆ ಕಾರ್ಪೋರೇಟ್ ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಅನುದಾನಿತ ಸಂಸ್ಥೆಗಳು, ನಾಸ್ಕಂ, ಕೈಗಾರಿಕೆಗಳು, ಕೌಶಲ ತರಬೇತುದಾರರನ್ನು ಆಹ್ವಾನಿಸಲಾಗುವುದು. ಮುಂದಿನ 3-4 ವರ್ಷ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡಬಹುದು. ನೀಲನಕ್ಷೆ ಸಿದ್ದಪಡಿಸಲಾಗುವುದು ಮತ್ತು ಬಜೆಟ್ನಲ್ಲಿ ಅನುದಾನ ಹಂಚಿಕೆಗೂ ಸಹಕಾರಿಯಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಯುವ ವಿದ್ಯಾರ್ಥಿಗಳಲ್ಲಿ ನಾವೀನ್ಯತೆ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸುವ ಪ್ರಾಮುಖ್ಯತೆಯನ್ನು ಒತ್ತಿಹೇಳಿದ ಸಚಿವರು ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ವೈಜ್ಞಾನಿಕ ಮನೋಭಾವ ಮತ್ತು ಮನಃಸ್ಥಿತಿಯನ್ನು ಬೆಳೆಸಲು ವಿದ್ಯಾರ್ಥಿಗಳನ್ನು ಚರ್ಚೆಗಳು, ರಸಪ್ರಶ್ನೆಗಳು ಮತ್ತು ವಿಜ್ಞಾನ ಪ್ರದರ್ಶನಗಳಂತಹ ಜ್ಞಾನಾಭಿವೃದ್ಧಿ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವಂತಹ ಕಾರ್ಯಕ್ರಮ ಚೌಕಟ್ಟನ್ನು ರೂಪಿಸಲು ಸಚಿವರು ಸಲಹೆ ನೀಡಿದರು. ಕರ್ನಾಟಕ ಸರ್ಕಾರದ ಉದ್ದೇಶವು ಅತ್ಯಂತ ಸ್ಪಷ್ಟವಾಗಿದ್ದು, ನಾವು ಕೇವಲ ಹೂಡಿಕೆಯ ತಾಣವಾಗಿ…
ಬೆಂಗಳೂರು: ನಗರದ ಬಾಬುಸಾಬ್ ಪಾಳ್ಯದಲ್ಲಿ ನಾಲ್ಕು ಹಂತದ ಕಟ್ಟಡಕ್ಕೆ ಅನುಮತಿ ಪಡೆದು ಆರು ಹಂತದ ಕಟ್ಟಡ ಕಟ್ಟಿದ್ದರ ಪರಿಣಾಮ, ಕುಸಿತಗೊಂಡು 8 ಕಾರ್ಮಿಕರು ಸಾವನ್ನಪ್ಪಿದ್ದರು. ಈ ಸಂಬಂಧ ಬಿಬಿಎಂಪಿಯಿಂದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾದಂತ ವಿನಯ್.ಕೆ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಈ ಕುರಿತಂತೆ ಬಿಬಿಎಂಪಿಯ ಉಪ ಆಯುಕ್ತರು ನಡವಳಿಯನ್ನು ಹೊರಡಿಸಿದ್ದು, ವಿನಯ್ ಕೆ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಹೊರಮಾವು ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ತಮ್ಮ ವ್ಯಾಪ್ತಿಯ ವಾರ್ಡ್-25, (ಹೊಸ ವಾರ್ಡ್-86), ನಿವೇಶನ ಸಂಖ್ಯೆ: 24, 7ನೇ ‘ಬಿ’ ಅಡ್ಡರಸ್ತೆ, ಅಂಜನಾದ್ರಿ ಎನ್ಕ್ಷೇವ್, ಬಾಬುಸಾಬ್ ಪಾಳ್ಯ ಇಲ್ಲಿ ಕಟ್ಟಡದ ಮಾಲೀಕರು ಅನಧಿಕೃತ / ನಕ್ಷೆಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಮಾಡುತ್ತಿದ್ದು, ಕಟ್ಟಡವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ- 2020ರ ಕಟ್ಟಡ ಉಪವಿಧಿಗಳನ್ನು ಉಲ್ಲಂಘಿಸಿ ನಿರ್ಮಾಣ ಮಾಡಿರುವ ಕಟ್ಟಡದ ಭಾಗಗಳನ್ನು ತೆರವುಗೊಳಿಸಬೇಕೆಂದು ಉಲ್ಲೇಖ-(1)ರಂತೆ ಬಿ.ಬಿ.ಎಂ.ಪಿ ಕಾಯ್ದೆ 2020ರ ನಿಯಮ 248 (3)ರ ಅನ್ವಯ ಸ್ಥಿರೀಕರಣ ಆದೇಶ ಹೊರಡಿಸಿರುತ್ತಾರೆ ಎಂದಿದ್ದಾರೆ. ನಂತರ ಸಿರೀಕರಣ ಆದೇಶ…
ಬೆಂಗಳೂರು: ವೈದ್ಯಕೀಯ ವ್ಯಾಸಂಗದ ನಿರೀಕ್ಷೆಯಲ್ಲಿದ್ದಂತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಕರ್ನಾಟಕದಲ್ಲಿ ಹೊಸದಾಗಿ 11 ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವುದಾಗಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಘೋಷಿಸಿದ್ದಾರೆ. ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನನಸು ಮಾಡಬೇಕೆಂಬ ಉದ್ದೇಶ ನಮ್ಮ ಸರ್ಕಾರದ್ದಾಗಿದೆ. ಈಗಾಗಲೇ ರಾಜ್ಯದ 22 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಇನ್ನುಳಿದ 11 ಜಿಲ್ಲೆಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ತೆರೆಯಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಾಗಲಕೋಟೆ, ಕೋಲಾರ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ವಿಜಯಪುರ, ವಿಜಯನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳು ತಲೆ ಎತ್ತಲಿವೆ. https://twitter.com/KarnatakaVarthe/status/1849015207408091562 https://kannadanewsnow.com/kannada/karnataka-assembly-bypolls-kpcc-clarifies-that-list-of-congress-candidates-is-fake/ https://kannadanewsnow.com/kannada/another-good-news-for-the-rural-people-of-the-state-home-health-scheme-to-be-implemented-from-tomorrow/ https://kannadanewsnow.com/kannada/heavy-rains-in-bengaluru-deputy-cm-dk-shivakumar-forms-committee-to-resolve-issues/
ಬೆಂಗಳೂರು: ನಿರಂತರ ಮಳೆಯಿಂದಾಗಿ ಬೆಂಗಳೂರು ನಗರದಲ್ಲಿನ ಐಟಿ ಕಂಪೆನಿಗಳು ಸೇರಿದಂತೆ ಉದ್ಯಮಗಳ ಮೇಲೆ ಉಂಟಾಗಿರುವ ಗಂಭೀರ ಪರಿಣಾಮಗಳನ್ನು ಸರ್ಕಾರ ಅತ್ಯಂತ ತೀವ್ರವಾಗಿ ಗಮನಿಸುತ್ತಿದೆ. ಸಮಸ್ಯೆಯನ್ನು ಪ್ರಾಮುಖ್ಯತೆಯ ಮೇರೆಗೆ ಗಮನಿಸಿ ಬಗೆ ಹರಿಸಲು ಡಿಸಿಎಂ ಡಿ.ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಂಗಳೂರು ನಗರ ಮತ್ತು ನಗರದ ನಿವಾಸಿಗಳಿಗೆ ತೀವ್ರ ಸವಾಲುಗಳಿಗೆ ಕಾರಣವಾಗಿರುವ ವಾತಾವರಣ ವೈಪರೀತ್ಯದಿಂದಾಗಿ 92 ಮಿಮೀ ನಿಂದ 157 ಮಿಮೀ ನಷ್ಟು ಭಾರೀ ಮಳೆಯಾಗಿ ಜನಜೀವನ ಜರ್ಜರಿತವಾಗಿದೆ, ಇದರ ಪರಿಣಾಮದಿಂದಾಗಿ ಐಟಿ ಕಂಪೆನಿಗಳು ಹಾಗೂ ಉದ್ಯೋಗಿಗಳು ತೊಂದರೆಗೀಡಾಗಿದ್ದಾರೆ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮನಗೊಂಡು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿದ್ದಾರೆ ಎಂದೂ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಅದರಂತೆ ಪರಿಸ್ಥಿತಿಯನ್ನು ಅವಲೋಕಿಸಿ ಸೂಕ್ತ ಪರಿಹಾರೋಪಾಯಗಳನ್ನು ಕಲ್ಪಿಸಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಲಾಗಿದ್ದು, ಈ ಸಮಿತಿಯು ಐಟಿ, ಬಿಟಿ ಮತ್ತು ಸ್ಟಾರ್ಟಪ್ ವಿಷನ್ ಗ್ರೂಪ್ಗಳ ಮುಖ್ಯಸ್ಥರನ್ನು…