Author: kannadanewsnow09

ಬೆಂಗಳೂರು: ಕರ್ನಾಟಕದ ಮೂರು ವಿಧಾನಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿರುವುದಾಗಿ ಆದೇಶ ಕಾಪಿಯೊಂದು ವೈರಲ್ ಆಗಿತ್ತು. ಆದರೇ ಅದು ನಕಲಿ ಎಂಬುದಾಗಿ ಕೆಪಿಸಿಸಿ ಸ್ಪಷ್ಟ ಪಡಿಸಿದೆ. ಎಐಸಿಸಿ ಜನರಲ್ ಸೆಕ್ರೇಟರಿ ಕೆ.ಸಿ ವೇಣುಗೋಪಾಲ್ ಅವರು ಬಿಡುಗಡೆ ಮಾಡಿದ್ದಾರೆ ಎನ್ನಲಾದಂತ ಕರ್ನಾಟಕ ವಿಧಾನಸಭೆಯ 3 ಉಪ ಚುನಾವಣೆಗಳ ಅಭ್ಯರ್ಥಿಗಳ ಪಟ್ಟಿಯು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅದರಲ್ಲಿ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಸಿ.ಪಿ ಯೋಗೇಶ್ವರ್ ಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಲಾಗಿದೆ. ಶಿಗ್ಗಾವಿ ವಿಧಾನಸಭಾ ಉಪ ಚುನಾವಣೆಯ ಕ್ಷೇತ್ರಕ್ಕೆ ವೈಶಾಲಿ ಕುಲಕರ್ಣಿ ಅವರಿಗೆ ಟಿಕೆಟ್ ನೀಡಿದ್ದರೇ, ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅನ್ನಪೂರ್ಣ ತುಕಾರಾಂ ಅವರಿಗೆ ಟಿಕೆಟ್ ನೀಡಿರುವುದಾಗಿ ಘೋಷಲಾಗಿದೆ ಎಂದು ಹೇಳಲಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವಂತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷವು, ವೈರಲ್ ಆಗಿರುವಂತ ಪಟ್ಟಿಯು ನಕಲಿಯಾಗಿದೆ. ಇನ್ನೂ ಕಾಂಗ್ರೆಸ್ ಪಕ್ಷದಿಂದ ಕರ್ನಾಟಕದ ಮೂರು ವಿಧಾನಸಭಾ ಉಪ ಚುನಾವಣೆಯ ಕ್ಷೇತ್ರಗಳಿಗೆ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ…

Read More

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ಶ್ರೀಕೃಷ್ಣನ ಪ್ರಕಾರ ಯಾರಿಗೆ ಪಿತೃಗಳ ಆಶೀರ್ವಾದ ದೊರೆಯುತ್ತದೆಯೋ ಅವರಿಗೆ ಜೀವನದಲ್ಲಿ ಉನ್ನತಿ ಎಂಬುದು ದೊರೆಯುತ್ತದೆ. ಮನುಷ್ಯರು ಪಿತೃಗಳ ನೆನಪಿಗೋಸ್ಕರ ಅವರ ಫೋಟೋಗಳನ್ನು ಗೋಡೆಯ ಮೇಲೆ ಹಾಕುತ್ತಾರೆ. ಆದರೆ ಫೋಟೋಗಳನ್ನು ಗೋಡೆಯ ಮೇಲೆ ಹಾಕಬೇಕಾದರೆ ದಿಕ್ಕಿನ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಈ ಒಂದು ಕಾರಣದಿಂದ ಪಿತೃಗಳಿಗೆ ಬೇಸರ ಉಂಟಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಪೂರ್ವಜರ ಅಥವಾ ಪಿತೃಗಳ ಫೋಟೋವನ್ನು ಗೋಡೆಯ ಮೇಲೆ ಅಂಟಿಸಿದರೆ ಒಳ್ಳೆಯ ಫಲಗಳು ಲಭಿಸುತ್ತದೆ. ಒಂದು ವೇಳೆ ತಪ್ಪಾದ ದಿಕ್ಕಿನಲ್ಲಿ ಫೋಟೋಗಳನ್ನು ಹಾಕಿದರೆ ಅದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗಿ ತೊಂದರೆಯನ್ನು ಸಹ ಅನುಭವಿಸಬೇಕಾಗುತ್ತದೆ. ಹಾಗಾದರೆ ವಾಸ್ತು ಶಾಸ್ತ್ರದ ಪ್ರಕಾರ ಪೂರ್ವಜರ ಫೋಟೋಗಳನ್ನು ಯಾವ ದಿಕ್ಕಿನಲ್ಲಿ ಇಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಫೋಟೋದಲ್ಲಿರುವ ಪೂರ್ವಜರು ಖುಷಿಯಿಂದ ನಗುನಗುತ್ತಾ ಇರುವಂತಹ ಫೋಟೋವನ್ನು ಗೋಡೆಯ ಮೇಲೆ ಹಾಕಬೇಕು.…

Read More

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಘೋಷಣೆ ಮಾಡಲಾಗಿದೆ. ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡ ಸೈನಿಕ ಸಿ.ಪಿ ಯೋಗೇಶ್ವರ್ ಗೆ ಚನ್ನಪಟ್ಟಣಕ್ಕೆ ಟಿಕೆಟ್ ಘೋಷಣೆ ಮಾಡಲಾಗಿದೆ. ಈ ಸಂಬಂಧ ಎಐಸಿಸಿಯಿಂದ ಆದೇಶ ಹೊರಡಿಸಲಾಗಿದ್ದು, ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಸಿ.ಪಿ ಯೋಗೇಶ್ವರ್ ಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಿರುವುದಾಗಿ ತಿಳಿಸಿದೆ. ಇನ್ನೂ ಶಿಗ್ಗಾವಿ ವಿಧಾನಸಭಾ ಉಪ ಚುನಾವಣೆಯ ಕ್ಷೇತ್ರಕ್ಕೆ ವೈಶಾಲಿ ಕುಲಕರ್ಣಿ ಅವರಿಗೆ ಟಿಕೆಟ್ ನೀಡಿದ್ದರೇ, ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅನ್ನಪೂರ್ಣ ತುಕಾರಾಂ ಅವರಿಗೆ ಟಿಕೆಟ್ ನೀಡಿರುವುದಾಗಿ ಘೋಷಿಸಿದೆ. https://kannadanewsnow.com/kannada/another-good-news-for-the-rural-people-of-the-state-home-health-scheme-to-be-implemented-from-tomorrow/ https://kannadanewsnow.com/kannada/kannada-minds-should-unite-for-the-success-of-mandya-sahitya-sammelana-minister-n-chaluvarayaswamy/

Read More

ಬೆಂಗಳೂರು : ಮಂಡ್ಯ ಜಿಲ್ಲೆಯಲ್ಲಿ ಡಿ.20 ರಿಂದ 22ರವರಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಯಲು ಕನ್ನಡದ ಎಲ್ಲಾ ಮನಸ್ಸುಗಳು ಒಂದಾಗಿ ಶ್ರಮಿಸಬೇಕಿದೆ ಎಂದು ಮಂಡ್ಯ ಜಿಲ್ಲಾ ಉಸ್ತವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದರು. ವಿಕಾಸ ಸೌಧದ ತಮ್ಮ ಕೊಠಡಿಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಂಡ್ಯ ಜಿಲ್ಲೆಯ ಸೊಗಡಿನ ಜೊತೆಗೆ ರಾಜ್ಯದ ಬದುಕನ್ನು ಬೆಸೆಯುವ ಸ್ವರೂಪದಲ್ಲಿ ಕಾರ್ಯಕ್ರಮ ಆಯೋಜಿಸಬೇಕಿದೆ. ಇದರಲ್ಲಿ ಜಿಲ್ಲೆಯ ಎಲ್ಲಾ ಜನ ಪ್ರತಿನಿಧಿಗಳು ಸಂಘ ಸಂಸ್ಥೆಗಳು, ಸಾಹಿತಿಗಳು, ಚಿಂತಕರು, ಅಧಿಕಾರಿ ಸಿಬ್ಬಂದಿ ಹೆಚ್ಚಿನ ಕಾಳಜಿ, ಪರಿಶ್ರಮ ವಹಿಸಬೇಕು ಎಂದರು. ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆರ್ಥಿಕ ಇಲಾಖೆಯಿಂದ 25 ಕೋಟಿ ರೂ ಬಿಡುಗಡೆಗೆ ಶಿಫಾರಸು ಮಾಡಿದೆ. ಆದಷ್ಟು ಅದರ ಇತಿ ಮಿತಿಯೊಳಗೆ ವೆಚ್ಚ ನಿಯಂತ್ರಣ ಮಾಡಿಕೊಳ್ಳುವುದು ಸೂಕ್ತ ಎಂದು ಚಲುವರಾಯಸ್ವಾಮಿ ಅವರು…

Read More

ಬೆಂಗಳೂರು : “ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ 5 ಲಕ್ಷ ಪರಿಹಾರ, ಮನೆಗೆ ನೀರು ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ 10 ಸಾವಿರ ಪರಿಹಾರ, ವಸತಿ ಇಲ್ಲದವರಿಗೆ ವಾಸಿಸಲು ತಾತ್ಕಾಲಿಕ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಇದರ ಜತೆಗೆ ನಗರದಾದ್ಯಂತ ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರವಿಗೆ ಸೂಚನೆ ನೀಡಲಾಗಿದ್ದು, ಮಳೆ ನೀರುಗಾಲುವೆಗಳನ್ನು ಸ್ವಚ್ಚಗೊಳಿಸಿ ಸರಾಗವಾಗಿ ನೀರು ಹರಿಯುವಂತೆ ಮಾಡಲು ವಿಶ್ವಬ್ಯಾಂಕಿನಿಂದ 1 ಸಾವಿರ ಕೋಟಿ ಸಾಲ ಪಡೆದು ಈಗಾಗಲೇ ಕೆಲಸ ಮಾಡಲಾಗುತ್ತಿದೆ” ಎಂದೂ ತಿಳಿಸಿದ್ದಾರೆ. ಮಳೆಯಿಂದ ಸಮಸ್ಯೆಗೆ ಒಳಗಾಗಿರುವ ಯಲಹಂಕದ ಕೇಂದ್ರಿಯ ವಿಹಾರ ವಸತಿ ಸಮುಚ್ಚಯ, ಬ್ಯಾಟರಾಯನಪುರದ ಮರಿಯಣ್ಣಪಾಳ್ಯ, ಕೆ ಆರ್ ಪುರಂನ ಹೊರಮಾವಿನ ಶ್ರೀ ಸಾಯಿ ಬಡಾವಣೆಗೆ ಶಿವಕುಮಾರ್ ಅವರು ಪಾಲಿಕೆ ಅಧಿಕಾರಿಗಳ ತಂಡದೊಂದಿಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಪರಿಹಾರ ಕಾರ್ಯ ವೀಕ್ಷಣೆ ಜತೆಗೆ ಅಪಾರ್ಟ್ ಮೆಂಟ್…

Read More

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಜಲಪ್ರಳಯವೇ ಉಂಟಾಗಿದೆ. ಕೆಲ ಏರಿಯಾಗಳ ಅಪಾರ್ಮೆಂಟ್ ಗಳಿಗೆ ನೀರು ನುಗ್ಗಿದ ಪರಿಣಾಮ, ನೆರೆ ಸಂತ್ರಸ್ತರಾಗಿದ್ದಾರೆ. ಅವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಇದರ ನಡುವೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಕುರಿತಂತೆ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ದಕ್ಷಿಣ ಕನ್ನಡ, ಬಳ್ಳಾರಿ, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ತುಮಕೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂದಿನ 3 ಗಂಟೆಯಲ್ಲಿ ಭಾರೀ ಮಳೆಯಾಗಲಿದೆ. ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಯಲ್ಲೂ ಮಳೆಯಾಗಲಿದೆ ಎಂದಿದೆ. ಮುಂದಿನ ಮೂರು ಗಂಟೆಯಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಭಾರೀ…

Read More

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯು ಬ್ರಿಟಿಷ್ ಕೌನ್ಸಿಲ್ ಸಹಯೋಗದಲ್ಲಿ ಇಂಗ್ಲಿಷ್ ಪ್ರಿಮಿಯರ್ ಲೀಗ್ ಸ್ಪೋರ್ಟ್ಸ್ ತರಬೇತುದಾರರಿಂದ ಕರ್ನಾಟಕದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೈಹಿಕ ಶಿಕ್ಷಕರಿಗೆ ಕ್ರೀಡಾ ಮತ್ತು ಲೈಫ್ ಸ್ಕಿಲ್ಸ್ ತರಬೇತು ನೀಡುವ ಪ್ರೀಮಿಯರ್ ಲೀಗ್ ಪ್ರೈಮರಿ ಸ್ಟಾರ್ಸ್ ಪ್ರಾಜೆಕ್ಟ್ ಕಾರ್ಯಕ್ರಮಕ್ಕೆ ಬುಧವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸ್ವತಃ ಕ್ರೀಡಾಪಟುವಾಗಿ ನಾನು ಕ್ರೀಡೆಗೆ ಮಹತ್ವ ನೀಡುತ್ತೇನೆ.  ನಮ್ಮ ಸ್ಟುಡಿಯೋದಲ್ಲಿ ದೊಡ್ಡ ಪರೆದೆಯಲ್ಲಿ ಪ್ರಮುಖ ಫುಟ್ಬಾಲ್ ಪಂದ್ಯಾವಳಿಗಳ ವೀಕ್ಷಿಸುವ ಅಭ್ಯಾಸವಿದೆ. ಪ್ರೀಮಿಯರ್ ಲೀಗ್ ತರಬೇತುದಾರರಿಂದ ನಮ್ಮ ಶಿಕ್ಷಕರಿಗೆ ತರಬೇತಿ ನೀಡುವ ಕಾರ್ಯಕ್ರಮವನ್ನು ನಮ್ಮ ಇಲಾಖೆಯಲ್ಲಿ ಯಶಸ್ವಿಗೊಳಿಸಲಾಗುವುದು ಎಂದರು. ಕೊಕೊ, ಕಬಡ್ಡಿ ಮುಂತಾದ ಪ್ರಾಚೀನ ಕ್ರೀಡೆಗಳು ಸಹ ಪುಟ್ಬಾಲ್ ಕ್ರೀಡೆಯಂತೆ ಬೆಳೆಯಬೇಕು. ಪ್ರಾಚೀನ ಕ್ರೀಡೆಗಳನ್ನು ನಾವು ಉಳಿಸಬೇಕು. ಇವುಗಳನ್ನು ಮರೆಯಲಾಗುತ್ತಿದೆ. ಶಾಲಾ ಹಂತದಲ್ಲಿ ಮಕ್ಕಳಿಗೆ ಈ ಕ್ರೀಡೆಗಳನ್ನು ಪರಿಚಯಿಸಲಾಗುತ್ತಿದೆ. ಈ ಆಟಗಳನ್ನು ಯಾವುದೇ ವಯಸ್ಸಿನಲ್ಲಿ ಆಡಬಹುದು…

Read More

ಶಿವಮೊಗ್ಗ: ನಗರದಲ್ಲಿ ಮೆಸ್ಕಾಂನಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಅಕ್ಟೋಬರ್.25, 2024ರಂದು ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಶಿವಮೊಗ್ಗ ನಗರದ ಗಾಂಧಿಬಜಾರ್, ಭರಮಪ್ಪನಗರ, ಎಂ.ಕೆ.ಕೆ ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅ.25, 2024ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ. ಅಕ್ಟೋಬರ್.25, 2024ರಂದು ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ ಗಾಂಧಿಬಜಾರ್, ಭರಮಪ್ಪನಗರ, ಎಂ.ಕೆ.ಕೆ.ರಸ್ತೆ, ನಾಗಪ್ಪಕೇರಿ, ಉಪ್ಪಾರಕೇರಿ, ತಿರುಪಳಯ್ಯನ ಕೇರಿ, ಸಾವರ್ಕರ್ ನಗರ, ಪೆನ್ಷನ್‌ಮೊಹಲ್ಲಾ, ಲಷ್ಕರ್ ಮೊಹಲ್ಲಾ, ಓ.ಬಿ.ಎಲ್ ರಸ್ತೆ, ಮಹಾರಾಜ ರಸ್ತೆ, ಅಶೋಕರಸ್ತೆ, ತುಳುಜಾ ಭವಾನಿ ರಸ್ತೆ, ಉರ್ದು ಬಜಾರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. https://kannadanewsnow.com/kannada/indian-mens-hockey-team-beat-germany-2-0/ https://kannadanewsnow.com/kannada/kuvempu-university-extends-deadline-for-admissions/

Read More

ನವದೆಹಲಿ : ವಿಶ್ವ ಚಾಂಪಿಯನ್ ಜರ್ಮನಿ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 2-0 ಅಂತರದ ಗೆಲುವು ದಾಖಲಿಸಿದೆ. ಒಂದು ದಶಕದ ನಂತರ ಹಾಕಿ ರಾಜಧಾನಿಗೆ ಮರಳುತ್ತಿತ್ತು ಮತ್ತು ಹೆನ್ರಿಕ್ ಮೆರ್ಟ್ಜೆನ್ಸ್ ಮತ್ತು ನಾಯಕ ಲುಕಾಸ್ ವಿಂಡ್ಫೆಡರ್ ಅವರ ಗೋಲುಗಳು ಕೊನೆಯಲ್ಲಿ ವ್ಯತ್ಯಾಸವನ್ನು ಸಾಬೀತುಪಡಿಸುತ್ತವೆ. ನಾಯಕ ಹರ್ಮನ್ ಪ್ರೀತ್ ಸಿಂಗ್ ಅವರ ಪೆನಾಲ್ಟಿ ಸ್ಟ್ರೋಕ್ ನಿಂದಾಗಿ ಭಾರತ ಒಟ್ಟು 8 ಪಿಸಿಗಳನ್ನು ವ್ಯರ್ಥ ಮಾಡಿದ್ದರಿಂದ ಗೋಲ್ ಮುಂದೆ ಮರೆಯಲು ಒಂದು ದಿನವಿತ್ತು. ಜರ್ಮನಿಯು ಗೊನ್ಜಾಲೊ ಪೀಲಾಟ್ ಮತ್ತು ಕ್ರಿಸ್ಟೋಫರ್ ರುಹ್ರ್ ಅವರಂತಹ ದೊಡ್ಡ ಹೆಸರುಗಳಿಲ್ಲದೆ ಇತ್ತು ಆದರೆ ತಂಡದಲ್ಲಿ ಜೂನಿಯರ್ ವಿಶ್ವ ಚಾಂಪಿಯನ್ ತಂಡದ ಆಟಗಾರರು ಮತ್ತು ಒಲಿಂಪಿಕ್ಸ್ನ ಪದಕ ವಿಜೇತ ತಂಡ ಇತ್ತು. ಆಟದ ಆರಂಭದಲ್ಲಿ ಎರಡೂ ತಂಡಗಳು ಡಿ ಗೆ ಪಾಸ್ ಗಳನ್ನು ಜೋಡಿಸಲು ಪ್ರಯತ್ನಿಸಿದವು, ಆದರೆ ಸಂದರ್ಶಕರು ಬೇಗನೆ ಗೋಲು ಗಳಿಸಿದರು. 4ನೇ ನಿಮಿಷದಲ್ಲಿ ಹೆನ್ರಿಕ್ ಮೆರ್ಟ್ಜೆನ್ಸ್ ಗಳಿಸಿದ ಗೋಲಿನಿಂದ ಜರ್ಮನಿ ತಂಡ…

Read More

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಶೈಕ್ಷಣಿಕ ಸಾಲಿನ ಸ್ನಾತಕೊತ್ತರ ಪದವಿ/ ಸ್ನಾತಕೊತ್ತರ ಡಿಪ್ಲೋಮಾ/ ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಾತಿಗೆ ಯು.ಯು.ಸಿ.ಎಂ.ಎಸ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅ.30 ಕೊನೆಯ ದಿನಾಂಕವೆಂದು ನಿಗದಿಪಡಿಸಲಾಗಿತ್ತು. ಆದರೆ ತಾಂತ್ರಿಕ ದೋಷದಿಂದ ನ. 05 ರವರೆಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿದಾರರು ನ.06 ರ ಒಳಗೆ ಹಾರ್ಡ್ ಕಾಪಿಯನ್ನು ಸಂಬಂಧಪಟ್ಟ ವಿಭಾಗಕ್ಕೆ ಕಡ್ಡಾಯವಾಗಿ ನೀಡಬೇಕು. ಅರ್ಜಿ ಶುಲ್ಕ ಸಾಮಾನ್ಯ ಮತ್ತು ಓ.ಬಿ.ಸಿ ವರ್ಗದ ಅಭ್ಯರ್ಥಿಗಳಿಗೆ ರೂ.350 ಹಾಗೂ ಎಸ್.ಸಿ/ಎಸ್.ಟಿ/ ಪ್ರವರ್ಗ-01ರ ವಿದ್ಯಾರ್ಥಿಗಳಿಗೆ ರೂ.175 ನಿಗದಿಪಡಿಸಲಾಗಿದೆ. ಹಣವನ್ನು ಹಣಕಾಸು ಅಧಿಕಾರಿಗಳು, ಕುವೆಂಪು ವಿಶ್ವವಿದ್ಯಾಲಯ, ಜ್ಞಾನ ಸಹ್ಯಾದ್ರಿ ಪದನಾಮದಲ್ಲಿ ಚಲನ್ ಮೂಲಕ ಖಾತೆ ಸಂಖ್ಯೆ 54023036291 ಐಎಫ್‌ಎಸ್‌ಸಿ ಕೋಡ್ SBIN0040759 ಗೆ ಜಮಾ ಮಾಡಬೇಕೆಂದು ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/another-achievement-by-doctors-at-fortis-hospital-in-bengaluru-successful-treatment-of-pregnant-breast-cancer-woman/ https://kannadanewsnow.com/kannada/gold-prices-cross-rs-80000-mark-for-the-first-time-in-history-gold-price/

Read More