Author: kannadanewsnow09

ನವದೆಹಲಿ : 2016ರಲ್ಲಿ ಯುಎಸ್ನಿಂದ ಭಾರತಕ್ಕೆ ಮರಳಿದ ಭಾರತೀಯ ಮೂಲದ ಮಹಿಳೆ ಐಸಿಐಸಿಐ ಬ್ಯಾಂಕಿನ ವ್ಯವಸ್ಥಾಪಕರು ಮೋಸದ ಚಟುವಟಿಕೆಗಳಲ್ಲಿ ತೊಡಗುವ ಮೂಲಕ 13.5 ಕೋಟಿ ರೂ.ಗಳನ್ನು ವಂಚಿಸಿದ್ದಾರೆ ಎಂದು ಆರೋಪಿಸಿದ್ದರು. ಈ ಬಗ್ಗೆ ನಿಮ್ಮ ಕನ್ನಡ ನ್ಯೂಸ್ ನೌ ಕೂಡ ಸುದ್ದಿ ಮಾಡಿತ್ತು. ಈ ಬೆನ್ನಲ್ಲೇ ಐಸಿಐಸಿಐ ಬ್ಯಾಂಕ್ ನಿಂದ ಮಹತ್ವದ ಸ್ಪಷ್ಟನೆ ನೀಡಲಾಗಿದೆ. ಅದು ಏನು ಅಂತ ಮುಂದೆ ಓದಿ. ಈ ಕುರಿತಂತೆ ಐಸಿಐಸಿಐ ಬ್ಯಾಂಕ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಮ್ಮ ಗ್ರಾಹಕರು ನಮ್ಮ ಅತ್ಯಂತ ಆದ್ಯತೆ. ಅವರ ಹಿತಾಸಕ್ತಿಗಳನ್ನು ರಕ್ಷಿಸಲು ನಾವು ಸಂಪೂರ್ಣವಾಗಿ ಸಮರ್ಪಿತರಾಗಿದ್ದೇವೆ. ಈ ಸಂದರ್ಭದಲ್ಲಿಯೂ, ಗ್ರಾಹಕರ ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸಲಾಗಿದೆ ಎಂದು ನಾವು ಖಚಿತಪಡಿಸುತ್ತೇವೆ ಎಂದಿದೆ. ವಾಸ್ತವವಾಗಿ, ತನಿಖೆಯ ಫಲಿತಾಂಶ ಬರುವವರೆಗೆ ವಿವಾದಿತ ಮೊತ್ತವಾದ 9.27 ಕೋಟಿ ರೂ.ಗಳನ್ನು (ಅವರು ಈಗಾಗಲೇ 2 ಕೋಟಿ ರೂ.ಗಳ ಸ್ಥಿರ ಠೇವಣಿಯನ್ನು ನಗದೀಕರಿಸಿದ್ದಾರೆ) ಅವರ ಖಾತೆಗೆ ವರ್ಗಾಯಿಸಲು ನಾವು ಸಿದ್ಧರಿದ್ದೇವೆ ಎಂದು ನಾವು ಗ್ರಾಹಕರಿಗೆ ತಿಳಿಸಿದ್ದೇವೆ…

Read More

ಬೆಂಗಳೂರು: ನಿರುದ್ಯೋಗಿ ಪದವೀಧರರು, ಡಿಪ್ಲೋಮಾ ಓದಿದವರು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದ್ದರೇ ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡದೇ ಹೋದಲ್ಲಿ ಯುವನಿಧಿ ಸೌಲಭ್ಯದಿಂದ ಅನರ್ಹ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ʼಯುವನಿಧಿʼ ಅಡಿಯಲ್ಲಿ ಈಗಾಗಲೇ ಸೇವಾಸಿಂಧು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡ ಪದವೀಧರರು/ ಸ್ನಾತಕೋತ್ತರ ಪದವೀಧರರು ಮತ್ತು ಡಿಪ್ಲೋಮಾದಾರರು ಅವರ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನಗಳನ್ನು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024ರಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿರುತ್ತದೆ ಎಂದು ತಿಳಿಸಿದೆ. ಫೆಬ್ರವರಿ 2024ರಲ್ಲಿ ಪ್ರಯೋಜನ ಪಡೆಯಲು ಅಭ್ಯರ್ಥಿಗಳು 29.02.2024ರೊಳಗೆ ತಾನು ನಿರುದ್ಯೋಗಿ ಎಂದು ಕಡ್ಡಾಯವಾಗಿ ಸ್ವಯಂ ಘೋಷಣೆ ಮಾಡಬೇಕು. ಸೂಚಿತ ಸಮಯದೊಳಗೆ ಮಾಸಿಕ ಸ್ವಯಂ ಘೋಷಣೆ ಮಾಡದೇ ಹೋದಲ್ಲಿ ʼಯುವನಿಧಿʼ ನೇರ ನಗದು ವರ್ಗಾವಣೆ ಸೌಲಭ್ಯದಿಂದ ಅನರ್ಹಗೊಳಿಸಲಾಗುವುದು ಎಂಬುದಾಗಿ ರಾಜ್ಯ ಸರ್ಕಾರ ಹೇಳಿದೆ. https://kannadanewsnow.com/kannada/bitcoin-case-court-sends-accused-to-7-day-sit-custody/ https://kannadanewsnow.com/kannada/bengaluru-miscreants-set-ablaze-jcb-during-encroachment-complaint-lodged-against-two-accused/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿದ್ಯುತ್ ಗ್ರಾಹಕರಿಗೆ ಗುಡ್ ನ್ಯೂಸ್ ಎನ್ನುವಂತೆ ವಿದ್ಯುತ್ ದರವನ್ನು ಇಳಿಕೆ ಮಾಡಲಾಗಿದೆ. ಈ ಸಂಬಂಧ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ಅಧಿಕೃತ ವಿದ್ಯುತ್ ದರ ಇಳಿಕೆಯ ಅಧಿಕೃತ ಪರಿಷ್ಕರಣೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಇಂದು ವಿದ್ಯುತ್ ಪರಿಷ್ಕರಣೆಯ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕ.ವಿ.ನಿ.ಆ)ವು ಆರ್ಥಿಕ ವರ್ಷ 2024-25ನೇ ಸಾಲಿಗೆ ಎಲ್ಲಾ ವಿತರಣಾ ಪರವಾನಿಗೆದಾರರ ವ್ಯಾಪ್ತಿಯ ಗ್ರಾಹಕರಿಗೆ ಅನ್ವಯವಾಗುವಂತೆ ವಿದ್ಯುಚ್ಛಕ್ತಿ ದರಗಳ ಪರಿಷ್ಕರಣೆಯನ್ನು ಅನುಮೋದಿಸಿದೆ ಎಂದಿದೆ. ದರ ಆದೇಶದ ಪ್ರಮುಖ ಅಂಶಗಳು * ಆರ್ಥಿಕ ವರ್ಷ 2024-25ರಲ್ಲಿ ಅಲ್ಪ ಪ್ರಮಾಣದ ಹೆಚ್ಚಳವನ್ನು ಎಲ್ಲಾ ಪವರ್ಗಗಳ ಗ್ರಾಹಕರಿಗೆ ದರ ಮರುಹೊಂದಾಣಿಕೆ ಮಾಡಲು ಉಪಯೋಗಿಸಲಾಗಿದೆ. * ವಾಣಿಜ್ಯ, ಕೈಗಾರಿಕಾ ಮತ್ತು ಗೃಹ ಬಳಕೆ ಗ್ರಾಹಕರ ವಿದ್ಯುತ್‌ ದರದಲ್ಲಿ ಗಣನೀಯ ಇಳಿಕೆ. (ಪ್ರತಿ ತಿಂಗಳು 100 ಯೂನಿಟ್‌ಗಳಿಗಿಂತ ಹೆಚ್ಚಿನ ಬಳಕೆಗೆ) * ಎಲ್.ಟಿ. ಗೃಹ ಬಳಕೆ ವಿದ್ಯುತ್ ದೀಪ: 100…

Read More

ಬೆಂಗಳೂರು: ರಾಜ್ಯದ ಜನತೆಗೆ ಇಂದು ಸಂಜೆಯೊಳಗೆ ಕರೆಂಟ್ ಶಾಕ್ ಅನ್ನು ಸರ್ಕಾರ ನೀಡಲಿದೆ ಎನ್ನಲಾಗುತ್ತಿತ್ತು. ಅಲ್ಲದೇ ವಿದ್ಯುತ್ ದರ ಪರಿಷ್ಕರಣೆ ಮಾಡಿ ಏರಿಕೆಯ ಬರೆಯನ್ನು ಎಳೆಯಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದರೇ ಕರೆಂಟ್ ಶಾಕ್ ನಲ್ಲಿದ್ದಂತ ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ವಿದ್ಯುತ್ ದರ ಭಾರೀ ಇಳಿಕೆ ಮಾಡಲಾಗಿದೆ. ಈ ಕುರಿತಂತೆ ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗ ( KERC ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಎಲ್ ಟಿ ಗೃಹ ಬಳಕೆಯಲ ವಿದ್ಯುತ್ ದೀಪದ 100 ಯೂನಿಟ್ ಗಳಿಗಿಂತ ಹೆಚ್ಚಿನ ಬಳಕೆಗೆ ಪ್ರತಿ ಯೂನಿಟ್ ಗೆ 110 ಪೈಸೆ ಇಳಿಕೆ ಮಾಡಲಾಗಿದೆ. ಅಲ್ಲದೇ ಹೆಚ್.ಟಿ ವಾಣಿಜ್ಯ ಬಳಕೆಯ ಇಂಧನ ಶುಲ್ಕ ಪ್ರತಿ ಯೂನಿಟ್ ಗೆ 125ಪೈಸೆ ನಿಗದಿ ಮಾಡಿದ್ದರೇ, ಡಿಮಾಂಡ್ ಶುಲ್ಕ ಪ್ರತಿ ಕೆವಿಎಗೆ ರೂ.10 ಇಳಿಕೆ ಮಾಡಲಾಗಿದೆ. ಇನ್ನೂ ಹೆಚ್.ಟಿ ಕೈಗಾರಿ ಇಂಧನ ಬಳಕೆ ಶುಲ್ಕ ಪ್ರತಿ ಯೂನಿಟ್ ಗೆ 50 ಪೈಸೆ ಮಾಡಿದ್ದರೇ, ಡಿಮಾಂಡ್ ಶುಲ್ಕ…

Read More

ಬೆಂಗಳೂರು: ರಾಜ್ಯದಲ್ಲಿ ತಲ್ಲಣವನ್ನೇ ಸೃಷ್ಠಿಸಿದ್ದಂತ ಬಿಟ್ ಕಾಯಿನ್ ಪ್ರಕರಣದಲ್ಲಿ ಇಂದು ಮತ್ತೊಬ್ಬ ಇನ್ಸ್ ಸ್ಪೆಕ್ಟರ್ ಅನ್ನು ಬಂಧಿಸಲಾಗಿದೆ. ಈ ಮೂಲಕ ಬಿಟ್ ಕಾಯಿನ್ ಪ್ರಕರಣದ ತನಿಖೆಯನ್ನು ಸಿಐಡಿ SIT ಪೊಲೀಸರು ಚುರುಕುಗೊಳಿಸಿದ್ದಾರೆ. ಬಿಟ್ ಕಾಯಿನ್ ಪ್ರಕರಣದಲ್ಲಿ ಈ ಹಿಂದೆ ಹಲವರನ್ನು ಬಂಧಿಸಲಾಗಿತ್ತು. ತನಿಖೆಯನ್ನು ಸಿಐಡಿಗೆ ವಹಿಸಿ ಸರ್ಕಾರ ಆದೇಶಿಸಿತ್ತು. ಈ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿರುವಂತ ಸಿಐಡಿ ಪೊಲೀಸರು, ಇಂದು ಪ್ರಕರಣದಲ್ಲಿ ಇನ್ಸ್ ಸ್ಪೆಕ್ಟರ್ ಲಕ್ಷ್ಮೀಕಾಂತಯ್ಯ ಅವರನ್ನು ಬಂಧಿಸಲಾಗಿದೆ. ಬಂಧಿತ ಇನ್ಸ್ ಸ್ಪೆಕ್ಟರ್ ಲಕ್ಷ್ಮೀಕಾಂತಯ್ಯ ಅವರು ಈ ಹಿಂದೆ ಬಿಟ್ ಕಾಯಿನ್ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಅವರನ್ನು ಬಂಧಿಸಿರುವಂತ ಸಿಐಡಿ ಎಸ್ಐಟಿ ಪೊಲೀಸರು, ಕೆಲ ಹೊತ್ತಿನಲ್ಲೇ ಅವರನ್ನು ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/karnataka-co-operative-societies-bill-suffers-setback-in-legislative-council-speaker-to-select-committee/ https://kannadanewsnow.com/kannada/dysp-attacked-during-protest-by-bjp-workers-in-tumkur-over-alleged-pro-pakistan-slogans/

Read More

ಬೆಂಗಳೂರು: ಕರ್ನಾಟಕ ಸಹಕಾರ ಸಂಘಗಳ ವಿಧೇಯಕವನ್ನು ಇಂದು ವಿಧಾನಪರಿಷತ್ತಿನಲ್ಲಿ ರಾಜ್ಯ ಸರ್ಕಾರದಿಂದ ಮಂಡಿಸಲಾಗಿತ್ತು. ಆದರೇ ರಾಜ್ಯ ಸರ್ಕಾರಕ್ಕೆ ಹಿನ್ನಡೆ ಎನ್ನುವಂತೆ ಸಭಾಪತಿಗಳು ವಿಧೇಯಕವನ್ನು ಸೆಲೆಕ್ಟ್ ಕಮಿಟಿಗೆ ಹಾಕಿದ್ದಾರೆ. ಈ ಮೂಲಕ ವಿಧಾನ ಪರಿಷತ್ತಿನಲ್ಲಿ ಸರ್ಕಾರಕ್ಕೆ ಭಾರೀ ಹಿನ್ನಲೆಯುಂಟಾದಂತೆ ಆಗಿದೆ. ವಿಧಾನಸಭೆಯಲ್ಲಿ ಮಂಡನೆಯಾಗಿ, ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸರ್ಕಾರ ಮಂಡಿಸಿ ಅಂಗೀಕಾರವನ್ನು ಪಡೆದಿತ್ತು. ಆ ಬಳಿಕ ಇಂದು ವಿಧಾನಪರಿಷತ್ತಿನಲ್ಲಿ ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಗಿತ್ತು. ವಿಧಾನಸೌಧದದಲ್ಲಿ ಪಾಕಿಸ್ತಾನ್ ಜಿಂದಾಬಾಂದ್ ಘೋಷಣೆಯ ವಿಚಾರವಾಗಿ ಸನದಲ್ಲಿ ಆಡಳಿತ, ವಿಪಕ್ಷಗಳ ನಡುವೆ ವಾಕ್ ಸಮರವೇ ನಡೆಯಿತು. ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕರು ಹೀಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು, ಸದನದ ಭಾವಿಗೆ ಇಳಿದು ಪ್ರತಿಭಟನೆಯನ್ನು ನಡೆಸಲಾಯಿತು. ಈ ಪ್ರತಿಭಟನೆಯ ನಡುವೆಯೂ ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕವನ್ನು ಮಂಡಿಸಲಾಯಿತ್ತು. ಆದ್ರೇ ಈ ವಿಧೇಯಕವನ್ನು ಸಭಾಪತಿ ಬಸವರಾಜ ಹೊರಟ್ಟಿಯವರು ಮತಕ್ಕೆ ಹಾಕದೇ ಸೆಲೆಕ್ಟ್ ಕಮಿಟಿಗೆ ಹಾಕಿದ ಕಾರಣ, ರಾಜ್ಯ ಸರ್ಕಾರಕ್ಕೆ ಹಿನ್ನಡೆ ಆದಂತೆ…

Read More

ಬೆಂಗಳೂರು: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿದಂತ ನಿಯಮವನ್ನು ಪಾಲನೆ ಮಾಡುವುದು ಕಡ್ಡಾಯ. ನಾಳೆಯೊಳಗೆ ಬೆಂಗಳೂರಲ್ಲಿ ಅಂಗಡಿ, ಮುಂಗಟ್ಟುಗಳು ಕನ್ನಡ ನಾಮಫಲಕ ಅಳವಡಿಸದೇ ಇದ್ದರೇ ಬಂದ್ ಮಾಡೋದಾಗಿ ಬಿಬಿಎಂಪಿ ಖಡಕ್ ಎಚ್ಚರಿಕೆ ನೀಡಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಮಳಿಗೆಯಲ್ಲಿ ಕನ್ನಡ ನಾಮಫಲಕ ಹಾಕೋದಕ್ಕೆ ಮತ್ತೊಂದು ದಿನದ ಅವಕಾಶ ನೀಡಲಾಗಿದೆ. ನಾಳೆಯವರೆಗೆ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆಗೆ ಡೆಡ್ ಲೈನ್ ನೀಡಲಾಗಿದೆ ಎಂದರು. ನಾಳೆ ಸಂಜೆಯ ವೇಳೆಗೆ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಇರುವಂತ ಬೋರ್ಡ್ ಹಾಕದೇ ಇದ್ದರೇ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಕನ್ನಡ ನಾಮಫಲಕ ಹಾಕದಂತ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಲಾಗುತ್ತದೆ ಎಂಬುದಾಗಿ ಎಚ್ಚರಿಕೆ ನೀಡಿದರು. ಈಗಾಗಲೇ ಬೆಂಗಳೂರಲ್ಲಿ ಶೇ.90ರಷ್ಟು ಕನ್ನಡ ನಾಮಫಲಕಗಳನ್ನು ಅಂಗಡಿ, ಮುಂಗಟ್ಟುಗಳ ಮಾಲೀಕರು ಅಳವಡಿಸಿದ್ದಾರೆ. ಇನ್ನೂ ಉಳಿದಿರೋದು ಕೆಲವೇ ಕೆಲವಷ್ಟು ಮಾತ್ರ. ಇವುಗಳಿಗೆ ನಾಳೆ ಸಂಜೆಯವರೆಗೆ ಅವಕಾಶ ನೀಡುತ್ತಿರೋದಾಗಿ ತಿಳಿಸಿದರು. ಕೆಲ ಅಂತರರಾಷ್ಟ್ರೀಯ ಕಂಪನಿಗಳು, ಎಸ್ ಬಿಐ, ಕೆನರಾ ಬ್ಯಾಂಕ್…

Read More

ಬೆಂಗಳೂರು: ಉಪ ವಲಯ ಅರಣ್ಯಾಧಿಕಾರಿ (ಡಿ.ಆರ್.ಎಫ್.ಓ) ಹುದ್ದೆಗಳನ್ನು ಸಂಪೂರ್ಣವಾಗಿ ಬಡ್ತಿಯ ಮೂಲಕವೇ ತುಂಬಬೇಕು ಎಂಬ ಆಡಳಿತ ಸುಧಾರಣಾ ಇಲಾಖೆಯ ಟಿ.ಎಂ. ವಿಜಯಭಾಸ್ಕರ್ ಸಮಿತಿ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಅರಣ್ಯ ಇಲಾಖೆಯ ನೇಮಕಾತಿಗೆ ಸಂಬಂಧಿಸಿದಂತೆ ವಿವಿಧ ಬೇಡಿಕೆ ಮುಂದಿಟ್ಟು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿರುವ ಅರಣ್ಯಶಾಸ್ತ್ರ ಪದವೀಧರರು ಮತ್ತು ವಿದ್ಯಾರ್ಥಿಗಳನ್ನು ಇಂದು ಭೇಟಿ ಮಾಡಿ, ಅವರ ಅಹವಾಲು ಆಲಿಸಿ ಮಾತನಾಡಿದ ಸಚಿವರು, ಪದವೀಧರ ಯುವಕರಿಗೆ ಅವಕಾಶ ಇಲ್ಲದಂತೆ ಶೇ.100ರಷ್ಟು ಹುದ್ದೆಗಳನ್ನು ಬಡ್ತಿಯ ಮೂಲಕ ತುಂಬುವುದು ಸರಿಯಲ್ಲ, ಅದೇ ರೀತಿ ಜೀವಶಾಸ್ತ್ರ, ಪ್ರಾಣಿಶಾಸ್ತ್ರ ಅಧ್ಯಯನ ಮಾಡಿದ ಇತರ ವಿಜ್ಞಾನ ಪದವೀಧರರು ಉದ್ಯೋಗ ವಂಚಿತರಾಗುವಂತೆ ಮಾಡುವುದೂ ಸಾಧುವಲ್ಲ. ಈ ಹಿನ್ನೆಲೆಯಲ್ಲಿ ಒಂದು ವಾರದೊಳಗೆ ತಜ್ಞರ ಸಮಿತಿ ರಚಿಸಿ, ವರದಿ ಬಂದ ಬಳಿಕ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಈಶ್ವರ ಖಂಡ್ರೆ ಭರವಸೆ ನೀಡಿದರು. ಪ್ರಕೃತಿ ಪರಿಸರ ಉಳಿಸುವುದು ಅಗತ್ಯ…

Read More

ದಾವಣಗೆರೆ : ಹರಿಹರದ ಹರಿಹರೇಶ್ವರಸ್ವಾಮಿ ದೇವಸ್ಥಾನ ಆವರಣದಲ್ಲಿನ ಶ್ರೀ ಲಕ್ಷ್ಮಿದೇವಿ ದೇವಸ್ಥಾನದಲ್ಲಿ ಖಾಲಿ ಇರುವ ಅರ್ಚಕರ ಹುದ್ದೆಗೆ ಶೈವಾಗಮ ಪ್ರಸಿದ್ದ ಪರೀಕ್ಷೆಯಲ್ಲಿ ಹಾಗೂ ಪ್ರವರ ಪರೀಕ್ಷೆಯಲ್ಲಿ ತೇರ್ಗಡೆಯಾಗಿ 18 ರಿಂದ 40 ವರ್ಷ ವಯೋಮಿತಿಯುಳ್ಳವರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ತಾಲ್ಲೂಕು ಕಚೇರಿಯಿಂದ ಪಡೆದು ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ 08192-272959 ದೂರವಾಣಿಗೆ ಸಂಪರ್ಕಿಸಲು ತಹಶೀಲ್ದಾರ್ ತಿಳಿಸಿದ್ದಾರೆ. https://kannadanewsnow.com/kannada/use-kannada-compulsorily-on-signboards-otherwise-licence-will-be-cancelled/ https://kannadanewsnow.com/kannada/dysp-attacked-during-protest-by-bjp-workers-in-tumkur-over-alleged-pro-pakistan-slogans/

Read More

ಬಳ್ಳಾರಿ : ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರು ತಮ್ಮ ಉದ್ದಿಮೆಯ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು ಬಳಸಬೇಕು. ತಪ್ಪಿದಲ್ಲಿ ಉದ್ದಿಮೆಗಳ ಪರವಾನಿಗೆಗಳನ್ನು ರದ್ದುಪಡಿಸಿ ಉದ್ದಿಮೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಎಸ್.ಖಲೀಲ್‍ಸಾಬ್ ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕನ್ನಡವು ಆಡಳಿತ ಭಾಷೆಯಾಗಿದ್ದು, ಎಲ್ಲಾ ಉದ್ದಿಮೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸುವಂತೆ ಸರ್ಕಾರದಿಂದ ಕಾಯ್ದೆ ಜಾರಿಯಾಗಿದೆ. ಸರ್ಕಾರದ ಆದೇಶದನ್ವಯ ಯಾವುದೇ ಉದ್ದಿಮೆಯ ನಾಮಫಲಕವು ಪ್ರಧಾನವಾಗಿ ಶೇ.60 ರಷ್ಟು ಸ್ಥಳ ಮೀಸಲಿರಿಸಿ ಕನ್ನಡದಲ್ಲಿರಬೇಕು. ನಾಮಫಲಕದಲ್ಲಿ ಕನ್ನಡ ಭಾಷೆ ಮೇಲ್ಭಾಗದಲ್ಲಿ ಪ್ರದರ್ಶಿತವಾಗುವಂತೆ ಹಾಗೂ ಅನ್ಯಭಾಷೆಯ ನಾಮಫಲಕಕ್ಕಿಂತ ಕನ್ನಡ ನಾಮಫಲಕ ಮೇಲ್ಭಾಗದಲ್ಲಿರುವಂತೆ ಮತ್ತು ದೊಡ್ಡದಾಗಿರುವಂತೆ ಅಳವಡಿಸಬೇಕು. ಮಾರ್ಚ್ 03 ರೊಳಗಾಗಿ ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ದಿಮೆ, ಅಂಗಡಿಗಳ ನಾಮಫಲಕಗಳು ಪ್ರಧಾನವಾಗಿ ಕನ್ನಡದಲ್ಲಿರಬೇಕು. ತಪ್ಪಿದಲ್ಲಿ ಅಂತಹ ಯಾವುದೇ ನಾಮಫಲಕಗಳು ಕಂಡುಬಂದಲ್ಲಿ ನಿಯಮಾನುಸಾರ ದಂಡವಿಧಿಸಿ ತೆರವುಗೊಳಿಸಲು ಕ್ರಮ ವಹಿಸಲಾಗುವುದು ಹಾಗೂ ಉದ್ದಿಮೆಗಳ ಉದ್ದಿಮೆ ಪರವಾನಿಗೆಗಳನ್ನು ರದ್ದುಪಡಿಸಲಾಗುವುದು ಎಂದು ಅವರು ಪ್ರಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/bjp-will-fight-till-traitors-are-arrested-opposition-leader-r-ashoka/…

Read More