Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಪೊಲೀಸ್ ಠಾಣೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳು ಗಲಾಟೆ ಮಾಡಿಕೊಂಡು. ASI ಮೇಲೆ, HC ಹಲ್ಲೆಗೂ ಯತ್ನಿಸಿದ್ದಾರೆ ಎನ್ನಲಾದಂತ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದಿದೆ ಎನ್ನಲಾಗುತ್ತಿದೆ. ಬೆಂಗಳೂರಿನ ಪುಟ್ಟೇನಹಳ್ಳಿ ಠಾಣೆಯಲ್ಲಿ ಎಎಸ್ಐ ಮಂಜುನಾಥ್ ಹಾಗೂ ಹೆಚ್ ಕಾನ್ಸ್ ಸ್ಟೇಬಲ್ ಅಂಜನಾಮೂರ್ತಿ ನಡುವೆ ಗಲಾಟೆಯಾಗಿದೆ ಎಂದು ಹೇಳಲಾಗುತ್ತಿದೆ. ಜುಲೈ.16ರಂದು ಪ್ರಕರಣವೊಂದರ ಬಗ್ಗೆ ಎಎಸ್ಐ ಮಂಜುನಾಥ್ ಅವರು ಬೇರೆ ಸಿಬ್ಬಂದಿಗಳೊಂದಿಗೆ ಮಾತನಾಡುತ್ತಿದ್ದಂತ ಸಂದರ್ಭದಲ್ಲಿ ಹೆಚ್ ಸಿ ಅಂಜನಾಮೂರ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದಷ್ಟೇ ಅಲ್ಲದೇ ಎಎಸ್ಐ ಮಂಜುನಾಥ್ ಮೇಲೆ ಹೆಡ್ ಕಾನ್ಸ್ ಸ್ಟೇಬಲ್ ಅಂಜನಾಮೂರ್ತಿ ಅವರು ಹಲ್ಲೆಗೂ ಮುಂದಾಗಿದ್ದಾರೆ. ಈ ವೇಳೆಯಲ್ಲಿ ಠಾಣೆಯಲ್ಲಿದ್ದಂತ ಇತರೆ ಸಿಬ್ಬಂದಿಗಳು ಜಗಳ ಬಿಡಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಈ ಘಟನೆಯಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವಂತ ಎಎಸ್ಐ ಮಂಜುನಾಥ್ ಆಘಾತಕ್ಕೊಳಗಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈಗಾಗಲೇ ಎಎಸ್ಐ ಮಂಜುನಾಥ್ ಎರಡು ಸ್ಟಂಟ್ ಅಳವಡಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತಂತೆ ಕನ್ನಡ ನ್ಯೂಸ್ ನೌ ಸಂಪಾದಕ ವಸಂತ ಬಿ ಈಶ್ವರಗೆರೆ ಅವರು…
ಬೆಂಗಳೂರು: ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವೆಬ್ಸೈಟ್ www.indiapostgdsonline.gov.in ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಆಗಸ್ಟ್ 5 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಈ ಎಲ್ಲ ಹುದ್ದೆಗಳಿಗೆ 10 ನೇ ತರಗತಿ ತೇರ್ಗಡೆ ಕಡ್ಡಾಯ. ಗಣಿತ ಮತ್ತು ಇಂಗ್ಲಿಷ್ನಲ್ಲಿ ಕನಿಷ್ಟ ತೇರ್ಗಡೆ ಅಂಕ ಹೊಂದಿರಬೇಕು. ಕನ್ನಡವನ್ನು ಹತ್ತನೇ ತರಗತಿಯಲ್ಲಿ ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು. ಅಭ್ಯರ್ಥಿಯ ವಯೋಮಿತಿ 18 ರಿಂದ 40 ವರ್ಷ. ಅಂಕಗಳ ಆಧಾರದಲ್ಲಿ ಆಯ್ಕೆ ನಡೆಯುವುದು. ಶಿವಮೊಗ್ಗ ಅಂಚೆ ವಿಭಾಗದಲ್ಲಿ 89 ಹುದ್ದೆಗಳು ಖಾಲಿ ಇವೆ. ಹೆಚ್ಚಿನ ಮಾಹಿತಿಗೆ ಆಯಾ ವಿಭಾಗದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದು. ಅಲ್ಲದೇ ಅರ್ಜಿ ಸಲ್ಲಿಕೆ, ಹುದ್ದೆಗಳ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಗಾಗಿ www.indiapostgdsonline.gov.in ಜಾಲತಾಣಕ್ಕೆ ಭೇಟಿ ನೀಡಿ ಪಡೆಯಬಹುದಾಗಿದೆ. https://kannadanewsnow.com/kannada/sc-directs-nta-to-declare-neet-ug-results-of-all-candidates-by-friday/ https://kannadanewsnow.com/kannada/bollywood-actress-janhvi-kapoor-hospitalised-after-her-health-deteriorated/
ನವದೆಹಲಿ: ಬಾಲಿವುಡ್ ನಟಿ ಜಾನ್ವಿ ಕಪೂರ್ ( Bollywood actress Janhvi Kapoor ) ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಕಾರಣ ದಕ್ಷಿಣ ಮುಂಬೈನ ಎಚ್ಎನ್ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ, ಜಾನ್ವಿ ಚೆನ್ನೈಗೆ ಹೋಗಿದ್ದರು ಮತ್ತು ಮಂಗಳವಾರ ಅಲ್ಲಿಂದ ಹಿಂದಿರುಗುವಾಗ, ವಿಮಾನ ನಿಲ್ದಾಣದಲ್ಲಿ ಆಹಾರವನ್ನು ಸೇವಿಸಿದ್ದಾರೆ. ಈ ಬಳಿಕ ಮನೆಗೆ ತೆರಳಿದಂತ ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಕೂಡಲೇ ಅವರನ್ನು ಮುಂಬೈನ ಹೆಚ್ ಎನ್ ರಿಲಯನ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಅವರನ್ನು ಪರೀಕ್ಷೆಗೆ ಒಳಪಡಿಸಿದಂತ ಆಸ್ಪತ್ರೆಯ ವೈದ್ಯರು, ಬಾಲಿವುಡ್ ನಟಿ ಜಾಹ್ನವಿ ಕಪೂರ್ ಅವರಿಗೆ ಪುಟ್ ಪಾಯಿಸನ್ ಆಗಿರೋದಾಗಿ ತಿಳಿಸಿದ್ದಾರೆ. ಅಲ್ಲದೇ ಅನಾರೋಗ್ಯ ಮತ್ತು ದೌರ್ಬಲ್ಯದಿಂದಾಗಿ, ವೈದ್ಯರ ಸಲಹೆಯ ಮೇರೆಗೆ ಅವರನ್ನು ಬುಧವಾರ ಆಸ್ಪತ್ರೆಗೆ ದಾಖಲಿಸಲಾಯಿತು. ಪ್ರಸ್ತುತ ಜಾನ್ವಿ ಅವರ ಸ್ಥಿತಿ ಉತ್ತಮವಾಗಿದೆ ಮತ್ತು ಶುಕ್ರವಾರದ ವೇಳೆಗೆ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. https://kannadanewsnow.com/kannada/state-govts-u-turn-on-job-reservation-for-kannadigas-is-not-right-cm-chandru/ https://kannadanewsnow.com/kannada/sc-directs-nta-to-declare-neet-ug-results-of-all-candidates-by-friday/
ಬೆಂಗಳೂರು: ರಾಜ್ಯದಲ್ಲಿ ತೀವ್ರತೆಯನ್ನು ಪಡೆಯುತ್ತಿರುವಂತ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಇಂದು ವಿಧಾನಸಭೆಯಲ್ಲೇ ವಿಪಕ್ಷಗಳ ನಾಯಕರಿಗೆ ಪ್ರತ್ಯುತ್ತರ ಕೊಟ್ಟಿದ್ದಾರೆ. ಏನು ಹೇಳಿದ್ರು ಅಂತ ಮುಂದೆ ಓದಿ. ಇಂದು ವಿಧಾನಸಭೆಯಲ್ಲಿ ನಿಯಮ 69ರ ಅಡಿಯಲ್ಲಿ ನಡೆದ ವಾಲ್ಮೀಕಿ ಅಭಿವೃದ್ಧಿ ನಿಗಮ ಕುರಿತಾದ ಚರ್ಚೆಗೆ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಉತ್ತರಿಸಿದಂತ ಅವರು, ಆರ್.ಅಶೋಕ್, ವಿಜಯೇಂದ್ರ ನನ್ನ ರಾಜೀನಾಮೆ ಕೇಳಿದ್ದಾರೆ. ಆರಗ ಜ್ಞಾನೇಂದ್ರ ಮಾಜಿ ಗೃಹ ಸಚಿವರು. ಇವರು SIT ಹಿಂದಕ್ಕೆ ಪಡೆಯಿರಿ ಎಂದು ಹೇಳಿದ್ದಾರೆ. ನೀವು ಗೃಹ ಮಂತ್ರಿ ಆಗಿದ್ದಾಗಲೂ SIT ಬಗ್ಗೆ ಹೀಗೆ ಹೇಳಿದ್ದೀರಾ? ಎಂದು ಪ್ರಶ್ನಿಸಿದರು. 26-5-2024 ರಂದು ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಂಡರು. ಇವರು ತಮಿಳುನಾಡಿನ ಬೋವಿ ಸಮುದಾಯದವರು. ವಿರೋಧ ಪಕ್ಷದವರು ಸಾವಿರ ಸಾರಿ ದಲಿತ, ದಲಿತ ಅಂತ ಮಾತಾಡಿದ್ದಾರೆ ಎಂದರು. ಸಂವಿಧಾನದಲ್ಲಿ ಪರಿಶಿಷ್ಟ ಜಾತಿ/ವರ್ಗ ಎನ್ನುವ ಉಲ್ಲೇಖ ಇದೆ. ಇಬ್ಬರೂ ಸೇರಿ 24.1% ಜನಸಂಖ್ಯೆ ಇದ್ದಾರೆ. ಇವರ ಅಭಿವೃದ್ಧಿ ಆದರೆ ಮಾತ್ರ…
ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಡಿಬ್ರುಘೈರ್ ಎಕ್ಸ್ ಪ್ರೆಸ್ ರೈಲು ಹಳಿತಪ್ಪಿದ್ದರಿಂದ ಉಂಟಾಗಿರುವಂತ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಅಲ್ಲದೇ ಈ ದುರಂತದಲ್ಲಿ ಹಲವರು ಗಾಯಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ರೈಲ್ವೆ ಇಲಾಖೆಯಿಂದ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ. https://twitter.com/RailMinIndia/status/1813882747469123964 ಚಂಡೀಗಢ-ದಿಬ್ರುಘರ್ ಎಕ್ಸ್ಪ್ರೆಸ್ ರೈಲು ಉತ್ತರ ಪ್ರದೇಶದ ಗೊಂಡಾದಲ್ಲಿ ಹಳಿ ತಪ್ಪಿದೆ. ಗೊಂಡಾ ಮತ್ತು ಜಿಲಾಹಿ ನಡುವಿನ ಪಿಕೌರಾ ಬಳಿ ಮಧ್ಯಾಹ್ನ 2.35 ರ ಸುಮಾರಿಗೆ ಅಪಘಾತ ಸಂಭವಿಸಿದೆ. ರಕ್ಷಣಾ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ರೈಲ್ವೆ ವೈದ್ಯಕೀಯ ವ್ಯಾನ್ ಸ್ಥಳಕ್ಕೆ ತಲುಪಿತು ಮತ್ತು ಭಾರತೀಯ ರೈಲ್ವೆ ಸಹಾಯವಾಣಿ ಸಂಖ್ಯೆಗಳನ್ನು ನೀಡಿದೆ. ವರದಿಗಳ ಪ್ರಕಾರ, ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. https://twitter.com/ANI/status/1813890747017355681 ಗೊಂಡಾ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗಂಭೀರವಾಗಿ ಪರಿಗಣಿಸಿದ್ದಾರೆ. ಅವರು ತಕ್ಷಣ ಸ್ಥಳಕ್ಕೆ ತಲುಪಿ ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು ಮತ್ತು ಗಾಯಗೊಂಡವರಿಗೆ ಸರಿಯಾದ ಚಿಕಿತ್ಸೆ ನೀಡಲು ಸೂಚನೆಗಳನ್ನು…
ನವದೆಹಲಿ: ಎಲ್ಲಾ ಅಭ್ಯರ್ಥಿಗಳ ಗೌಪ್ಯತೆಯನ್ನು ಕಾಯ್ದುಕೊಂಡು ನೀಟ್-ಯುಜಿ ಪರೀಕ್ಷೆಗಳಲ್ಲಿ ( NEET-UG Exams ) ಎಲ್ಲಾ ವಿದ್ಯಾರ್ಥಿಗಳ ಫಲಿತಾಂಶಗಳನ್ನು ನಾಳೆಯೊಳಗೆ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ( National Testing Agency -NTA) ನಿರ್ದೇಶನ ನೀಡಿದೆ. ಈ ವಿಷಯವನ್ನು ಸೋಮವಾರ ಮತ್ತೆ ವಾದಕ್ಕೆ ತೆಗೆದುಕೊಳ್ಳಲಾಗುವುದು. ಕೇಂದ್ರವಾರು ಫಲಿತಾಂಶಗಳನ್ನು ಎನ್ಟಿಎ ಶುಕ್ರವಾರದೊಳಗೆ ಪ್ರಕಟಿಸಲಿದೆ. ವಿದ್ಯಾರ್ಥಿಗಳ ಗುರುತಿನೊಂದಿಗೆ ಪರೀಕ್ಷಾ ಕೇಂದ್ರದ ಡೇಟಾವನ್ನು ಸಹ ಮರೆಮಾಚಬೇಕು ಎಂಬ ಕೇಂದ್ರದ ವಾದವನ್ನು ಸಿಜೆಐ ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ತಿರಸ್ಕರಿಸಿತು. ಆದರೆ, ಪರೀಕ್ಷಾ ಕೇಂದ್ರವಾರು ಅಂಕಿಅಂಶಗಳನ್ನು ಬಹಿರಂಗಪಡಿಸಬಾರದು ಎಂಬ ಎಸ್.ಜಿ.ತುಷಾರ್ ಮೆಹ್ತಾ ಅವರ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತು. ನಗರ ಮತ್ತು ಕೇಂದ್ರವಾರು ಪ್ರತ್ಯೇಕವಾಗಿ ಫಲಿತಾಂಶಗಳನ್ನು ಘೋಷಿಸಬೇಕು. ಎನ್ಟಿಎ ನಾಳೆ ಸಂಜೆ 5 ಗಂಟೆಯೊಳಗೆ ಫಲಿತಾಂಶಗಳನ್ನು ತಮ್ಮ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಬೇಕು. ಪಾಟ್ನಾ ಮತ್ತು ಹಜಾರಿಬಾಗ್ನಲ್ಲಿ ಸೋರಿಕೆಯಾಗಿದೆ ಎಂಬ ಅಂಶವನ್ನು ಒಪ್ಪಿಕೊಳ್ಳಲಾಗಿದೆ ಎಂದು ಸಿಜೆಐ ಹೇಳಿದರು. “ಪ್ರಶ್ನೆ ಪತ್ರಿಕೆಗಳನ್ನು ಪ್ರಸಾರ ಮಾಡಲಾಗಿತ್ತು. ಇದು ಆ…
ಬೆಂಗಳೂರು: ರಾಜ್ಯದ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ರಾಜ್ಯ ಸರ್ಕಾರದ ನಡೆ ಸ್ವಾಗತಾರ್ಹವಾಗಿತ್ತು. ಸರೋಜಿನಿ ಮಹಿಷಿ ವರದಿಯ ಜಾರಿಗೆ ಒತ್ತಾಯಿಸಿದ ಬಹು ದಿನಗಳ ಬೇಡಿಕೆಯಾಗಿತ್ತು. ಆದರೆ ಯಾರದ್ದೋ ಒತ್ತಡಕ್ಕೆ ಮಣಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಿಡೀರ್ ಯು-ಟರ್ನ್ ಹೊಡೆದಿರುವುದು ಆಕ್ಷೇಪಾರ್ಹ ನಡೆಯಾಗಿದೆ. ಕನ್ನಡಿಗರಿಗೆ ಎಸಗಿದ ದ್ರೋಹವಾಗಿದೆ ಎಂದು ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದರು. ಕನ್ನಡಿಗರಿಗೆ ಖಾಸಗಿ ಕ್ಷೇತ್ರಗಳ ಉದ್ಯೋಗಗಳಲ್ಲಿನ ಮೀಸಲಾತಿ ನೀಡುವ ಬಗೆಗಿನ ಮಸೂದೆಯ ವಿಚಾರವಾಗಿ ನಗರದಲ್ಲಿ ಗುರುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಆರಂಭದಲ್ಲಿ ರಾಜ್ಯದ ಖಾಸಗಿ ಉದ್ದಿಮೆಗಳ ‘ಸಿ’ ಮತ್ತು ‘ಡಿ’ ದರ್ಜೆಯ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇಕಡಾ 100ರಷ್ಟು ಮೀಸಲಾತಿ ನೀಡುವ ಮಸೂದೆಗೆ ಒಪ್ಪಿಗೆ ನೀಡಿರುವ ಕುರಿತು ಸಿದ್ದರಾಮಯ್ಯನವರು ತಮ್ಮ ಅಧಿಕೃತ ‘ಎಕ್ಸ್’ ಖಾತೆಗಳಲ್ಲೂ ಘೋಷಣೆ ಮಾಡಿದ್ದರು. ಆದರೆ ಕೆಲವೇ ಸಮಯದಲ್ಲಿ ಪೋಸ್ಟ್ ಡಿಲೀಟ್ ಮಾಡಿದ್ದಾರೆ. ಪುನಃ 50% ನಿಂದ 75% ಮೀಸಲಾತಿ ನಿಗದಿಪಡಿಸುವ ಮಸೂದೆಗೆ ಒಪ್ಪಿಗೆ ನೀಡಿರುವುದಾಗಿ ಸಮಜಾಯಿಷಿ ನೀಡಿದ್ದಾರೆ.…
ಬೆಂಗಳೂರು: ನನಗೆ ಜೈಲೂಟ ಒಗ್ಗುತ್ತಿಲ್ಲ. ಜೊತೆಗೆ ದೇಹದ ತೂಕ ಬೇರೆ ಕಡಿಮೆ ಆಗುತ್ತಿದೆ. ಮನೆ ಊಟಕ್ಕೆ ವ್ಯವಸ್ಥೆ ಮಾಡುವಂತೆ ಹೈಕೋರ್ಟ್ ಗೆ ರಿಟ್ ಅರ್ಜಿಯನ್ನು ನಟ ದರ್ಶನ್ ಸಲ್ಲಿಸಿದ್ದರು. ಇಂತಹ ರಿಟ್ ಅರ್ಜಿಗೆ ರಾಜ್ಯ ಸರ್ಕಾರದಿಂದ ಆಕ್ಷೇಪಣೆ ಸಲ್ಲಿಸಲಾಗಿದೆ. ಇಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಅವರು ಜೈಲೂಟ ಸೇರುತ್ತಿಲ್ಲ. ಮನೆಯೂಟಕ್ಕೆ ಅವಕಾಶ ಮಾಡಿಕೊಡುವಂತೆ ತಮ್ಮ ಪರ ವಕೀಲರ ಮೂಲಕ ಸಲ್ಲಿಸಿದ್ದಂತ ರಿಟ್ ಅರ್ಜಿಯ ವಿಚಾರಣೆಯನ್ನು ನಡೆಸಲಾಯಿತು. ಮನೆಯಿಂದ ಊಟ, ಹಾಸಿಗೆ, ಪುಸ್ತಕ ಕೋರಿ ನಟ ದರ್ಶನ್ ಸಲ್ಲಿಸಿದ್ದಂತ ರಿಟ್ ಅರ್ಜಿಯನ್ನು ವಿಚಾರಣೆಗೆ ಹೈಕೋರ್ಟ್ ಕೈಗೆತ್ತಿಕೊಳ್ಳುತ್ತಿದ್ದಂತೇ, ರಾಜ್ಯ ಸರ್ಕಾರವು ಆಕ್ಷೇಪಣೆ ಸಲ್ಲಿಸಿತು. ನ್ಯಾಯಾಂಗ ಬಂಧನಕ್ಕೆ ವಹಿಸುವಾಗ ಅನಾರೋಗ್ಯದ ಅಹವಾಲು ಸಲ್ಲಿಸುವಂತಿಲ್ಲ. ವಿಶೇಷ ಆಹಾರ ಅಗತ್ಯದ ಬಗ್ಗೆ ಮ್ಯಾಜಿಸ್ಟ್ರೇಟ್ ತಿಳಿಸಿಲ್ಲ. ಜೈಲು ಅಧಿನಿಯಮ 1963ರ ಸೆ.30ರಂತೆ ನಟ ದರ್ಶನ್ ಅವರು ಇನ್ಸ್ ಪೆಕ್ಟರ್ ಜನರಲ್ ಅವರಿಗೆ ಅನುಮತಿಯನ್ನು ಕೇಳಿಲ್ಲ ಅಂತ ಆಕ್ಷೇಪಿಸಿತು. ಅರ್ಹತೆ ಅನುಸಾರವಾಗಿ ಜೈಲಿನ ಐಜಿಯವರು ಸೂಕ್ತ ಆದೇಶ ನೀಡುತ್ತಾರೆ. ಜೈಲು…
ನವದೆಹಲಿ: ಅಸ್ಸಾಂನ ದಿಬ್ರುಗಢಕ್ಕೆ ತೆರಳುತ್ತಿದ್ದ ಚಂಡೀಗಢ-ದಿಬ್ರುಘರ್ ಎಕ್ಸ್ಪ್ರೆಸ್ನ ಕನಿಷ್ಠ 10 ಬೋಗಿಗಳು ಉತ್ತರ ಪ್ರದೇಶದ ಗೊಂಡಾ ಬಳಿ ಗುರುವಾರ ಹಳಿ ತಪ್ಪಿವೆ. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಆರಂಭಿಕ ವರದಿಗಳ ಪ್ರಕಾರ, ಉತ್ತರ ಪ್ರದೇಶದ ಗೊಂಡಾ-ಮಂಕಾಪುರ ವಿಭಾಗದಲ್ಲಿ ರೈಲಿನ 10-12 ಬೋಗಿಗಳು ಹಳಿ ತಪ್ಪಿವೆ. ಮಧ್ಯಾಹ್ನ 2:35 ರ ಸುಮಾರಿಗೆ ಉತ್ತರ ಪ್ರದೇಶದ ಗೊಂಡಾ ಬಳಿ ರೈಲು ಹಳಿ ತಪ್ಪಿದೆ ಎಂದು ಭಾರತೀಯ ರೈಲ್ವೆ ತಿಳಿಸಿದೆ. ಆದಾಗ್ಯೂ, ಯಾವುದೇ ಸಾವುನೋವುಗಳು ಅಥವಾ ಗಾಯಗಳ ಬಗ್ಗೆ ತಕ್ಷಣದ ವರದಿಗಳಿಲ್ಲ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರೈಲು ಅಪಘಾತದ ಬಗ್ಗೆ ಅರಿತುಕೊಂಡಿದ್ದಾರೆ ಮತ್ತು ತಕ್ಷಣ ಸ್ಥಳಕ್ಕೆ ತಲುಪಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅವರು ಸೂಚನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ. ಹಿರಿಯ ರೈಲ್ವೆ ಅಧಿಕಾರಿಗಳು ಈಗಾಗಲೇ ಸ್ಥಳಕ್ಕೆ ತಲುಪಿದ್ದು, ರಕ್ಷಣಾ…
ಉತ್ತರ ಪ್ರದೇಶ: ಉತ್ತರ ಪ್ರದೇಶದ ಗೊಂಡಾ-ಮಂಕಾಪುರ ವಿಭಾಗದಲ್ಲಿ ಚಂಡೀಗಢ-ದಿಬ್ರುಘರ್ ರೈಲು ಹಳಿ ತಪ್ಪಿದೆ. ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮ, ಹಲವು ಪ್ರಯಾಣಿಕರು ಸಾವನ್ನಪ್ಪಿರೋದು, ಗಾಯಗೊಂಡಿರೋದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. https://twitter.com/ANI/status/1813877746332012924 ಈ ಕುರಿತಂತೆ ಉತ್ತರ ಪ್ರದೇಶದ ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಗೊಂಡಾ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗಂಭೀರವಾಗಿ ಪರಿಗಣಿಸಿದ್ದಾರೆ. ಅವರು ತಕ್ಷಣ ಸ್ಥಳಕ್ಕೆ ತಲುಪಿ ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು; ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ಸೂಚನೆ ನೀಡಿದ್ದಾರೆ ಎಂದಿದೆ. https://twitter.com/ANI/status/1813878334159454551 https://kannadanewsnow.com/kannada/cm-siddaramaiah-bought-dalit-leaders-by-wearing-biscuits-former-mp-muniswamy/ https://kannadanewsnow.com/kannada/parents-should-note-here-are-the-symptoms-of-chandipur-virus-that-causes-the-death-of-children/