Author: kannadanewsnow09

ಉತ್ತರ ಪ್ರದೇಶ: ಬಲ್ಲಿಯಾದಲ್ಲಿ ಪಿಕ್ ಅಪ್ ಟ್ರಕ್ ಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಅಪಘಾತ ಸಂಭವಿಸಿದ ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಿದರು. ಮಂಗಳವಾರ ಮುಂಜಾನೆ 3 ಗಂಟೆ ಸುಮಾರಿಗೆ ತಿಲಕ ಸಮಾರಂಭದಿಂದ ಸಂತ್ರಸ್ತರು ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಗಾಯಗೊಂಡ ನಾಲ್ವರನ್ನು ಬಿಎಚ್ಯುನ ಆಘಾತ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಲ್ಲಿಯಾದಲ್ಲಿ ಮತ್ತೊಂದು ರಸ್ತೆ ಅಪಘಾತದ ಎರಡು ದಿನಗಳ ನಂತರ ಈ ಅಪಘಾತ ಸಂಭವಿಸಿದೆ. ಬಲ್ಲಿಯಾ ಎಂಬ ಹಳ್ಳಿಯಲ್ಲಿ ಬೈಸಿಕಲ್ ಸವಾರಿ ಮಾಡುತ್ತಿದ್ದ ಇಬ್ಬರು ಕಾರು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ. ಗಡ್ವಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಕುರೇಜಿ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಮೃತರನ್ನು ಮಂಟು ಗುಪ್ತಾ (24) ಮತ್ತು ಅಖಿಲೇಶ್…

Read More

ನವದೆಹಲಿ: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಕೇರಳದ ವಯನಾಡು ಕ್ಷೇತ್ರ ತೊರೆದು, ಮತ್ತೊಂದು ರಾಜ್ಯಕ್ಕೆ ವಲಸೆ ಹೋಗಲು ಮುಂದಾಗಿದ್ದಾರೆ ಎಂಬುದಾಗಿ ಮೂಲಗಳಿಂದ ತಿಳಿದು ಬಂದಿದೆ. ಅವರು ಕರ್ನಾಟಕದಿಂದ ಈ ಬಾರಿಯ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. 2019ರಲ್ಲಿ ಉತ್ತರ ಪ್ರದೇಶದ ಆಮೇಠಿ ಹಾಗೂ ವಯನಾಡು ಕ್ಷೇತ್ರದಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ವಯನಾಡು ಕ್ಷೇತ್ರದಲ್ಲಿ 4 ಲಕ್ಷ ಮತಗಳ ಅಂತರದಿಂದ ಜಯಗಳಿಸಿದ್ದರು. 2024ರ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ರಾಜಕೀಯದ ಕಾರಣದಿಂದ ರಾಹುಲ್ ಗಾಂಧಿ ಕ್ಷೇತ್ರ ಬಿಟ್ಟು ಮತ್ತೊಂದು ಸುರಕ್ಷಿತ ಕ್ಷೇತ್ರ ಹುಡುಕುತ್ತಿದ್ದು, ಮತ್ತೊಮ್ಮೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲು ಒಲವು ತೋರಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳ ಪ್ರಕಾರ ಉತ್ತರ ಪ್ರದೇಶದ ಒಂದು ಕ್ಷೇತ್ರ ಹಾಗೂ ಕರ್ನಾಟಕ ಅಥವಾ ತೆಲಂಗಾಣದ ಮತ್ತೊಂದು ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧೆ ಮಾಡುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ. ಉತ್ತರ ಪ್ರದೇಶದ ಆಮೇಠಿ ಜೊತೆಗೆ ಕರ್ನಾಟಕದ ಬೆಂಗಳೂರು…

Read More

ಗದಗ: ಜಿಲ್ಲೆಯಲ್ಲಿ ನೀರು ಪೂರೈಕೆ ಮಾಡುವಂತ ಪೈಪ್ ಒಂದು ಇದ್ದಕ್ಕಿದ್ದಂತೆ ಒಡೆದು, ನೀರು ಹೊರ ಬಂದ ಪರಿಣಾಮ ಮನೆಯೊಳಗೆ ನುಗ್ಗಿ 10ಕ್ಕೂ ಹೆಚ್ಚು ಮನೆಗಳು ಹಾನಿಗೊಂಡಿರುವಂತ ಘಟನೆ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟಾಲೂರು ಗ್ರಾಮದಲ್ಲಿ ಇಂತಹ ಘಟನೆ ನಡೆದಿದೆ. ಗದಗ-ಬೇಟಗೇರಿಗೆ ನೀರು ಪೂರೈಕೆ ಮಾಡುವಂತ ಪೈಪ್ ಒಡೆದು ಮನೆಗಳಿಗೆ ನೀರು ನುಗ್ಗಿದೆ. ಏಕಾಏಕಿ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮನೆಯಲ್ಲಿದ್ದಂತ ವಸ್ತುಗಳೆಲ್ಲ ಹಾನಿಗೊಂಡಿರೋದಾಗಿ ತಿಳಿದು ಬಂದಿದೆ. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಕೂಡ ಉಂಟಾಗಿದೆ. ಈ ಘಟನೆಯ ಬಗ್ಗೆ ಜಿಲ್ಲಾಡಳಿತ, ನಗರಸಭೆಯ ವಿರುದ್ಧ ಗ್ರಾಮಸ್ಥರು ಆಕ್ರೋಶವನ್ನು ಹೊರ ಹಾಕಿದ್ದಾರೆ. ಕೂಡಲೇ ಸಂಬಂಧಪಟ್ಟವರು ಪರಿಹಾರ ನೀಡುವಂತೆಯೂ ಸಿಂಗಟಾಲೂರು ಗ್ರಾಮಸ್ಥರು ಒತ್ತಾಯಿಸಿದ್ದಾರೆ. https://kannadanewsnow.com/kannada/the-state-government-has-disqualified-a-member-who-was-absent-from-the-gram-panchayat-general-body-meeting-four-times/ https://kannadanewsnow.com/kannada/school-education-department-issues-order-making-it-mandatory-for-schools-to-take-oath-on-national-science-day-on-february-28/

Read More

ಕೊಡಗು: ಜಿಲ್ಲೆಯ ಪೊನ್ನಂಪೇಟೆ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಗೆ 4 ಬಾರಿ ಗೈರು ಹಾಜರಾದ ಸದಸ್ಯೆಯನ್ನು ಅನರ್ಹಗೊಳಿಸಲಾಗಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್ ಆದೇಶ ಹೊರಡಿಸಿದ್ದಾರೆ. ಪೊನ್ನಪೇಟೆಯ ಗ್ರಾಮ ಪಂಚಾಯ್ತಿ ಸದಸ್ಯೆ ಪಿ.ಆರ್ ಮಂಜುಳಾ ಅವರು ಸಾಮಾನ್ಯ ಸಭೆಗೆ 4 ಬಾರಿ ಗೈರು ಹಾಜರಾಗಿದ್ದಾರೆ. 43ಎ ಅನ್ವಯ ಮತ್ತು ಅಧಿನಿಯಮ 12ಎಲ್ ಅನ್ವಯ 6 ವರ್ಷಗಳ ಕಾಲ ಚುನಾವಣೆಗೆ ನಿಲ್ಲದಂತೆ ಅನರ್ಹಗೊಳಿಸಿ ಆದೇಶಿಸಲಾಗಿದೆ. ಅಂದಹಾಗೇ ಪಿ.ಆರ್ ಮಂಜುಳಾ ಅವರು ಪೊನ್ನಂಪೇಟೆ ಕಾಟರ್ ಕೊಲ್ಲಿ ವಿಭಾಗದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು. ನಂತ್ರ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಇಂತಹ ಅವರು ಸತತ ನಾಲ್ಕು ಬಾರಿ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಗೆ ಗೈರಾಗಿದ್ದರು. ಈ ಹಿನ್ನಲೆಯಲ್ಲಿ ಅವರ ಸದಸ್ಯತ್ವವನ್ನು ಅನರ್ಹಗೊಳಿಸಲಾಗಿದೆ. https://kannadanewsnow.com/kannada/384-kas-recruitment-2019-age-relaxation-of-3-years/ https://kannadanewsnow.com/kannada/school-education-department-issues-order-making-it-mandatory-for-schools-to-take-oath-on-national-science-day-on-february-28/

Read More

ಬೆಂಗಳೂರು: ಬಿಬಿಎಂಪಿಯ 2024-25ನೇ ಸಾಲಿನ ಅಯವ್ಯಯವನ್ನು ಹಣಕಾಸು ವಿಭಾಗದ ವಿಶೇಷ ಆಯುಕ್ತ ಶಿವಾನಂದ್ ಕಲಕೇರಿ ಅವರು ಫೆಬ್ರವರಿ.29ರ ಗುರುವಾರ ಮಂಡಿಸಲಿದ್ದಾರೆ. ಈ ಸಲ ಅಂದಾಜು 11,500 ಕೋಟಿ ರೂ.ಗಾತ್ರದ ಬಜೆಟ್ ಮಂಡಿಸೋ ಸಾಧ್ಯತೆ ಇದೆ. ಬಿಬಿಎಂಪಿಯು ರಾಜ್ಯ ಸರ್ಕಾರದ 2024-25ನೇ ಸಾಲಿನ ಬಜೆಟ್ ನಲ್ಲಿ 8050 ಕೋಟಿ ರೂ ಅನುದಾನ ಒದಗಿಸುವಂತೆ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೇ ಸರ್ಕಾರ ನಿರೀಕ್ಷಿತ ಅನುದಾನ ನೀಡಿಲ್ಲ. ಹೀಗಾಗಿ ಸ್ವಂತ ಸಂಪನ್ಮೂಲವನ್ನೇ ನೆಚ್ಚಿಕೊಂಡು ಫೆ.29ರಂದು ಅಯವ್ಯಯ ಮಂಡನೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. 2024-25ರಲ್ಲಿ ತೆರಿಗೆ ಸಂಗ್ರಹ ವ್ಯವಸ್ಥೆಯಲ್ಲಿ ಸೋರಿಕೆ ತಡೆಗಟ್ಟುವ ಮೂಲಕ 6 ಸಾವಿರ ಕೋಟಿ ತೆರಿಗೆ ಆದಾಯ ಸಂಗ್ರಹದ ನಿರೀಕ್ಷೆ ಇಟ್ಟುಕೊಂಡಿದೆ. ಒಂದು ಬಾರಿ ತೀರುವಳಿ ವ್ಯವಸ್ಥೆ ಜಾರಿಗೆ ತಂದಿದ್ದು, ಇದರಿಂದ ಹೆಚ್ಚುವರಿ ವರಮಾನ ಬರಬಹುದೆಂದು ಅಂದಾಜಿಸಲಾಗಿದೆ. ಪ್ರಸಕ್ತ ಹಣಕಾಸು ವರ್ಷದಿಂದ ಸ್ವತ್ತುಗಳ ಮಾರ್ಗಸೂಚಿ ದರದನ್ವಯ ತೆರಿಗೆ ವಿಧಿಸುವ ಪದ್ಧತಿಯನ್ನು ಅನುಷ್ಠಆನಗೊಳಿಸಲಾಗುತ್ತಿದ್ದು, ಅಧಿಕ ಆದಾಯ ನಿರೀಕ್ಷೆ ಮಾಡಲಾಗಿದೆ. ಇದಲ್ಲದೇ ಪರಿಷ್ಕೃತ ಜಾಹೀರಾತು ನೀತಿ ಹಾಗೂ…

Read More

ನವದೆಹಲಿ: ನಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೇ, ಅಧಿಕಾರಕ್ಕೆ ಬಂದ ಮರುಕ್ಷಣವೇ ಯುವಜನತೆಯ ಪಾಲಿಗೆ ಕಂಟಕವಾಗಿರುವಂತ ಅಗ್ನಿವೀರ ಸೇನಾ ನೇಮಕಾತಿ ಯೋಜನೆಯನ್ನು ರದ್ದುಗೊಳಿಸಿ, ಹಳೆಯ ನೇಮಕಾತಿ ಪದ್ದತಿಯನ್ನು ಮರು ಜಾರಿಗೊಳಿಸುವುದಾಗಿ ಕಾಂಗ್ರೆಸ್ ನಾಯಕರು ಘೋಷಣೆ ಮಾಡಿದ್ದಾರೆ. ಈ ಕುರಿತಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೂರು ಸೇನಾಪಡೆಗಳ ದಂಡನಾಯಕರಾಗಿರುವಂತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಯುವಜನರನ್ನು ತೊಂದರೆಗೆ ಸಿಲುಕಿಸುವ ಅಗ್ನಿಪಥ ಯೋಜನೆಯನ್ನು ಕೂಡಲೇ ರದ್ದುಗೊಳಿಸಬೇಕು. ಇದರಿಂದ ನಾಲ್ಕು ವರ್ಷಗಳ ಹೊರಬರುವ ಅಗ್ನಿವೀರರಿಗೆ ಮತ್ತೆ ಉದ್ಯೋಗ ಹುಡುಕುವುದು ಕಷ್ಟವಾಗುತ್ತದೆ ಎಂದಿದ್ದಾರೆ. ಇದಷ್ಟೇ ಅಲ್ಲದೇ ಅಗ್ನಿಪಥ ಯೋಜನೆ ಘೋಷಣೆಗೂ ಮೊದಲು ಸೇನೆಗೆ ಆಯ್ಕೆಯಾಗಿದ್ದ 2 ಲಕ್ಷ ಮಂದಿಗೆ ಪ್ರಕ್ರಿಯೆಯನ್ನೇ ರದ್ದುಗೊಳಿಸಿರುವುದಾಗಿ ತಿಳಿಸಿ ಅತಂತ್ರಕ್ಕೆ ಸಿಲುಕಿಸಲಾಗಿದೆ. ಅವರಿಗೂ ಕೂಡಲೇ ನೇಮಕಾತಿ ಆದೇಶವನ್ನು ನೀಡಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಈ ಯೋಜನೆಗೆ ತಮ್ಮ ಸಹಮತವಿರಲಿಲ್ಲ ಎಂಬುದಾಗಿ ಮಾಜಿ ಸಶಸ್ತ್ರ ಪಡೆಗಳ ಮುಖ್ಯಸ್ಥರಾದ ಜ.ಮನೋಜ್ ನವಣೆ ಅವರೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ…

Read More

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವಂತ 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆಯನ್ನು ಹೊರಡಿಸಿದೆ. ಮಾರ್ಚ್.4ರಿಂದ ಈ ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸಹಾಯಕ ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು, ಖಜಾನೆ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರು, ತಹಶೀಲ್ದಾರ್, ಡಿವೈಎಸ್ಪಿ ಸೇರಿದಂತೆ 159 ಗ್ರೂಪ್-ಎ ಹುದ್ದೆಗಳು ಹಾಗೂ 225 ಗ್ರೂಪ್-ಬಿ ಹುದ್ದೆಗಳ ನೇಮಕಾತಿ ನಡೆಯಲಿದೆ. ಇದರಲ್ಲಿ ಕಲ್ಯಾಣ ಕರ್ನಾಟಕ ವೃಂದದ 77 ಹುದ್ದೆಗಳು ಸೇರಿದ್ದಾವೆ. ಮಾರ್ಚ್.4ರಿಂದ ಏಪ್ರಿಲ್.4ರವರೆಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಮೇ.5ರಂದು ಪೂರ್ವಭಾವಿ ಪರೀಕ್ಷೆ ನಡೆಸಲು ತಾತ್ಕಾಲಿಕ ದಿನಾಂಕವನ್ನು ನಿಗದಿ ಪಡಿಸಲಾಗಿದೆ. ಭಾರತದಲ್ಲಿ ಕಾನೂನು ರೀತಿಯಲ್ಲಿ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದವರು ಈ ಕೆಎಎಸ್ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 3 ವರ್ಷ ವಯೋಮಿತಿ ಸಡಿಲಿಕೆ. ಕೋವಿಡ್…

Read More

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ಗಳ ಪತಿ-ಪತಿ ಪ್ರಕರಣಗಳಲ್ಲಿ ಅಂತರ ಜಿಲ್ಲಾ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಅಂತರ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಪೊಲೀಸ್ ಪೇದೆಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಪೊಲೀಸ್ ಪೇದೆಗಳ ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ ಜಿಲ್ಲಾ ವರ್ಗಾವಣೆಗೆ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ. ಲೋಕಸಭಾ ಚುನಾವಣೆಗೆ ನೀತಿ ಸಂಹಿತೆ ಜಾರಿಯಾಗುವ ಮುನ್ನ ಅರ್ಹ ಪೊಲೀಸ್ ಕಾನ್ಸ್ ಟೇಬಲ್ ಗಳನ್ನು ಅಂತರ ಜಿಲ್ಲಾ ವರ್ಗಾವಣೆಗೆ ಪ್ರಸ್ತಾವನೆಗಳ ಬಗ್ಗೆ ಕ್ರಮ ಕೈಗೊಂಡು, ಆ ಬಗ್ಗೆ ತಮಗೆ ವರದಿ ನೀಡುವಂತೆಯೂ ಗೃಹ ಸಚಿವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರದಲ್ಲಿ ನಿರ್ದೇಶಿಸಿಸಿದ್ದಾರೆ. ಅಂದಹಾಗೇ ಕಳೆದ ಮೂರು ವರ್ಷಗಳಿಂದ ಪೊಲೀಸ್ ಪೇದೆಗಳ ವರ್ಗಾವಣೆ ನಡೆದಿಲ್ಲ. ಈ ಸಂಬಂಧ ಗೃಹ ಸಚಿವರಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ…

Read More

ಬೆಂಗಳೂರು: ನಗರದಲ್ಲಿ ಬೇಸಿಗೆ ಆರಂಭದ ಬೆನ್ನಲ್ಲೇ, ನೀರಿನ ಸಮಸ್ಯೆ ಎದುರಾಗಿದ್ದು, ಜನರು ನೀರಿಗಾಗಿ ಪರದಾಡುವಂತಾಗಿದೆ. ಇದರ ನಡುವೆ ಜಲಮಂಡಳಿಯಿಂದ ತುರ್ತು ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಇಂದು ಮತ್ತು ನಾಳೆ ಸುಮಾರು ಅರ್ಧ ಬೆಂಗಳೂರಿಗೆ ಕಾವೇರಿ ನೀರು ಪೂರೈಕೆ ಸ್ಥಗಿತಗೊಳಿಸುತ್ತಿದೆ. ಕೊಳವೆಬಾವಿಗಳಲ್ಲಿ ನೀರಿನ ಕೊರತೆ ಸೇರಿದಂತೆ ಇನ್ನಿತರ ಕಾರಣಗಳಇಂದಾಗಿ ನಗರದಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಅದರಲ್ಲೂ ಯಲಹಂಕ, ಮಹದೇವಪುರ, ಕೆಆರ್ ಪುರ ಸೇರಿದಂತೆ ಹಲವು ಭಾಗಗಳಲ್ಲಿ ನೀರಿನ ವ್ಯತ್ಯಯ ಉಂಟಾಗಲಿದೆ. ಜನರು ಟ್ಯಾಂಕರ್ ನೀರಿನ ಮೊರೆ ಹೋಗುತ್ತಿದ್ದಾರೆ. ಅದರ ನಡುವೆಯೇ ಮಂಗಳವಾರದ ಇಂದು ಹಾಗೂ ನಾಳೆಯ ಬುಧವಾರದಂದು ಜಲಮಂಡಳಿ ಕಾವೇರಿ 2 ಮತ್ತು 4ನೇ ಹಂತದ ವ್ಯಾಪ್ತಿಯ ಬಡವಾಣೆಗಳಿಗೆ ನೀರಿನ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ. ಈ ದಿನಗಳಲ್ಲಿ ಕಾವೇರಿ 2 ಮತ್ತು 4ನೇ ಹಂತದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಾಗೂ ಲೆಕ್ಕಕ್ಕೆ ಸಿಗದ ನೀರಿನ ಪ್ರಮಾಣದ ಮಾಹಿತಿ ಪಡೆಯಲು ಬಲ್ಕ್ ಮೀಟರ್ ಅಳವಡಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ಅರ್ಧಕ್ಕೂ ಹೆಚ್ಚಿನ ಬಡವಾಣೆಯಲ್ಲಿ ಇಂದು ಬೆಳಿಗ್ಗೆ…

Read More

ಬೆಂಗಳೂರು: ಇಂದು ಕರ್ನಾಟಕ ರಾಜ್ಯಸಭೆಯ 4 ಸ್ಥಾನಗಳಿಗೆ ಮತದಾನ ನಡೆಯಲಿದೆ. ತೀವ್ರ ಕುತೂಹಲದ ನಡುವೆಯೂ ಕಾಂಗ್ರೆಸ್ ಮೂರು, ಬಿಜೆಪಿ ಒಂದು ಸ್ಥಾನ ಗೆಲುವು ಖಚಿತವಾಗಿದೆ. ಆದರೇ ಜೆಡಿಎಸ್ ನ ಕುಪೇಂದ್ರ ರೆಡ್ಡಿ ಭವಿಷ್ಯ ಮಾತ್ರ ನಿಗೂಢವಾಗಿದೆ. ಅಡ್ಡ ಮತದಾನದ ಭೀತಿಯಲ್ಲೇ ಇಂದು ರಾಜ್ಯಸಭೆಯ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ತೀವ್ರ ಕುತೂಹಲ ಮೂಡಿಸಿದೆ. ಈ ಅಡ್ಡ ಮತದಾದನದಿಂದ ತಮ್ಮ ಶಾಸಕರನ್ನು ಕಾಪಾಡಿಕೊಳ್ಳುವ ಮುಂಜಾಗ್ರತೆ ಕ್ರಮವಾಗಿ ಆಡಳಿತಾರೂಡ ಕಾಂಗ್ರೆಸ್ ಪಕ್ಷ ಪಂಚತಾರಾ ಹೋಟೆಲ್ ವೊಂದರಲ್ಲಿ ಸದಸ್ಯರನ್ನು ಸ್ಥಳಾಂತರಿಸಿದೆ. ರಾಜ್ಯಸಭೆಯಲ್ಲಿ ಕರ್ನಾಟಕದಿಂದ ಖಾಲಿ ಇರುವ ನಾಲ್ಕು ಸ್ಥಾನಗಳನ್ನು ತುಂಬಲು ದ್ವೈವಾರ್ಷಿಕ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ಸೋಮವಾರ ತನ್ನ ಎಲ್ಲಾ ಶಾಸಕರನ್ನು ಹೋಟೆಲ್ ಗೆ ಸ್ಥಳಾಂತರಿಸಿದೆ. ಕಾಂಗ್ರೆಸ್ ನಿಂದ ಅಜಯ್ ಮಾಕೆನ್, ಸೈಯದ್ ನಾಸೀರ್ ಹುಸೇನ್, ಜಿ.ಸಿ.ಚಂದ್ರಶೇಖರ್, ಬಿಜೆಪಿಯಿಂದ ನಾರಾಯಣಸಾ ಬಾಂಡಗೆ, ಜೆಡಿಎಸ್ ನಿಂದ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ. ಅಡ್ಡ ಮತದಾನದ ಭೀತಿಯ ನಡುವೆ ಮಂಗಳವಾರದ ಚುನಾವಣೆಯಲ್ಲಿ ಮತದಾರರಾಗಿರುವ ಶಾಸಕರಿಗೆ ಎಲ್ಲಾ ಪಕ್ಷಗಳು ವಿಪ್ ಜಾರಿ…

Read More