Author: kannadanewsnow09

ಬೆಂಗಳೂರು: ಬಿಎಂಟಿಸಿ ಬಸ್ಸಿನಲ್ಲಿ ಕಂಡಕ್ಟರ್ ಶಾಲಾ ವಿದ್ಯಾರ್ಥಿಯನ್ನು ಕಾಲಿನಿಂದ ಒದ್ದಿದ್ದಾರೆ ಎಂದು ಹೇಳಲಾಗುತ್ತಿರುವಂತ ವೀಡಿಯೋ ಬೆಂಗಳೂರಿನಲ್ಲಿ ನಡೆದಿರುವಂತ ಘಟನೆಯಲ್ಲ. ಬೆಂಗಳೂರಿನ ಬಿಎಂಟಿಸಿ ಬಸ್ಸಿನಲ್ಲಿ ಇಲ್ಲಿಯವರೆಗೆ ಯಾವುದೇ ಆ ಥರದ ಘಟನೆ ನಡೆದಿರುವುದಿಲ್ಲ ಅಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಬಿಎಂಟಿಸಿ ಬಸ್‌ ಸಂಖ್ಯೆ KA57F3364ರ ಬಸ್ಸಿನಲ್ಲಿ ಶಾಲಾ ಹುಡುಗನೊಬ್ಬನಿಗೆ ಕಂಡೆಕ್ಟರ್ ಕಾಲಿನಿಂದ ಒದ್ದಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗಿದೆ ಎಂಬುದಾಗಿ ತಿಳಿಸಿದ್ದಾರೆ. ಬಿಎಂಟಿಸಿ‌ ಬಸ್ಸುಗಳಲ್ಲಿ ಪ್ರತಿನಿತ್ಯ 40 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಇದರಲ್ಲಿ 1.60 ಲಕ್ಷ ವಿದ್ಯಾರ್ಥಿಗಳಿರುತ್ತಾರೆ. ದಿನಂಪ್ರತಿ 6500 ಬಸ್ಸುಗಳು, 5830 ಅನುಸೂಚಿಗಳಿಂದ 60000 ಟ್ರಿಪ್ ಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ ಎಂದಿದ್ದಾರೆ. ಇಲ್ಲಿಯವರೆಗೆ ಶಾಲಾ ವಿದ್ಯಾರ್ಥಿಗಳ ಜೊತೆಗೆ ಕಂಡಕ್ಟರ್ ಅನುಚಿತ ವರ್ತನೆ, ಹೊಡೆದ ಘಟಕಗಳು ಘಟನೆ ನಡೆದಿರುವುದಿಲ್ಲ. ಆದ್ದರಿಂದ ಈ‌ ವಿಡಿಯೋ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ, ಬಿಎಂಟಿಸಿ ಬಸ್ಸಿನ‌ ನಿರ್ವಾಹಕರು ವಿದ್ಯಾರ್ಥಿಯೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ತಿಳಿಸಿದ್ದೇನೆ. ದೌರ್ಜನ್ಯನಿಂದ ವರ್ತಿಸಿರುವುದು ದೃಢಪಟ್ಟಲ್ಲಿ…

Read More

ಉಡುಪಿ: ಜಿಲ್ಲೆಯ ತೊಂಬಟ್ಟುವಿನ ನಕ್ಸಲ್ ಲಕ್ಷ್ಮಿ ಅವರು ಉಡುಪಿ ಜಿಲ್ಲಾಡಳಿತದ ಮುಂದೆ ಬೆಳಿಗ್ಗೆ 10.30ಕ್ಕೆ ಶರಣಾಗತಿಯಾಗಲಿರುವುದಾಗಿ ತಿಳಿದು ಬಂದಿದೆ.  ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಅಮವಾಸ್ಯೆ ಬೈಲಿನ ತೊಂಬಟ್ಟು ಗ್ರಾಮದ ಲಕ್ಷ್ಮೀ ಅವರು ಆಂಧ್ರದಲ್ಲಿ ನಕ್ಸಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. 2006ರ ಮಾರ್ಚ್.6ರಿಂದ ಲಕ್ಷ್ಮೀ ತೊಂಬಟ್ಟು ನಾಪತ್ತೆಯಾಗಿದ್ದರು. ಕರ್ನಾಟಕದಿಂದ ನಾಪತ್ತೆಯಾಗಿದ್ದಂತ ಲಕ್ಷ್ಮೀ ತೊಂಬಟ್ಟು ಆಂಧ್ರಪ್ರದೇಶದಲ್ಲಿ ನಕ್ಸಲರಾಗಿ ಸಕ್ರೀಯರಾಗಿದ್ದರು. ಅವರು ಮಾಜಿ ನಕ್ಸಲ್ ಸಂಜೀವ್ ಅವರನ್ನು ಮದುವೆಯಾಗಿದ್ದರು. ಆ ಬಳಿಕ ನಕ್ಸಲ್ ತೊರೆದು, ಆಂಧ್ರದಲ್ಲಿ ಸಂಸಾರಿಕ ಜೀವನ ನಡೆಸುತ್ತಿದ್ದರು. ಸದ್ಯ ಸಂಜೀವ್ ಆಲಿಯಾಸ್ ಸಲೀಂ ಹಾಗೂ ಲಕ್ಷ್ಮೀ ನಕ್ಸಲ್ ತೊರೆದು, ಮುಖ್ಯವಾಹಿನಿಗೆ ಬಂದಿದ್ದರು. ಇವರನ್ನು ವಿವಾಹವಾಗಿ ಆಂಧ್ರದಲ್ಲಿ ಜೀವನ ನಡೆಸುತ್ತಿರುವಂತ ಲಕ್ಷ್ಮೀ ಕೂಡ ನಕ್ಸಲ್ ತೊರೆದು, ಆಂಧ್ರ ಸರ್ಕಾರದ ಮುಂದೆ ಶರಣಾಗಿದ್ದರು. ಇದೀಗ ಕರ್ನಾಟಕದ ಉಡುಪಿ ಜಿಲ್ಲೆಯ ಅಮವಾಸ್ಯೆ ಬೈಲಿನ ನಕ್ಸಲ್ ಲಕ್ಷ್ಮೀ ತೊಂಬಟ್ಟು ಅವರು ನಾಳೆ ಬೆಳಿಗ್ಗೆ 10.30ಕ್ಕೆ ಚಿಕ್ಕಮಗಳೂರು ಜಿಲ್ಲಾಡಳಿತದ ಬದಲಾಗಿ ಉಡುಪಿ ಜಿಲ್ಲಾಡಳಿತ ಮುಂದೆ ಶರಣಾಗುವುದಾಗಿ ತಿಳಿದು ಬಂದಿದೆ.

Read More

ನವದೆಹಲಿ : “ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಎಲ್ಲಾ ರೀತಿಯಿಂದಲೂ ಅನ್ಯಾಯವಾಗಿದೆ. ಕರ್ನಾಟಕಕ್ಕೆ ಏನು ಕೊಡುಗೆ ಸಿಕ್ಕಿದೆ ಎಂದು ಕೇಂದ್ರ ಮಂತ್ರಿಗಳು, ರಾಜ್ಯದ ಬಿಜೆಪಿ ಸಂಸದರು ಉತ್ತರ ನೀಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹರಿಹಾಯ್ದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಡಿಸಿಎಂ ಅವರು ಪ್ರತಿಕ್ರಿಯೆ ನೀಡಿದರು. “ನಮ್ಮ ರಾಜ್ಯದ ಶಾಸಕರಿಂದ ಆಯ್ಕೆಯಾದ ನಿರ್ಮಲ ಸೀತಾರಾಮನ್ ಅವರು ಇಷ್ಟೊಂದು ನಿರಾಸೆ ಉಂಟು ಮಾಡುತ್ತಾರೆ ಎಂದು ಭಾವಿಸಿರಲಿಲ್ಲ. ಇಡೀ ದೇಶದಲ್ಲಿಯೇ ತೆರಿಗೆ ಕಟ್ಟುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಐಟಿ ರಫ್ತಿನಲ್ಲಿ ಮೊದಲ ಸ್ಥಾನದಲ್ಲಿ ಇದ್ದೇವೆ. ರಾಜ್ಯದ ಪ್ರಮುಖ ಯೋಜನೆಗಳಿಗೆ ಅನುದಾನ ನೀಡಿಲ್ಲ. ಯಾವುದೇ ಚುನಾವಣೆಗಳು ಹತ್ತಿರವಿಲ್ಲದ ಕಾರಣಕ್ಕೆ ಯಾವುದೇ ಯೋಜನೆ ಘೋಷಣೆ ಮಾಡಿಲ್ಲ ಅನ್ನಿಸುತ್ತದೆ. ರಾಜ್ಯಕ್ಕೆ ಏನಾದರು ಲಾಭ ಆಗಿದೆಯೇ ಎಂದು ರಾಜ್ಯವನ್ನು ಪ್ರತಿನಿಧಿಸುವವರು ಹೇಳಬೇಕು” ಎಂದು ತಿವಿದರು. “12 ಲಕ್ಷ ಆದಾಯ ಮಿತಿ ಇರುವವರಿಗೆ ತೆರಿಗೆ ವಿನಾಯಿತಿ ನೀಡಿರುವುದು ಕಡಿಮೆ ಜನಕ್ಕೆ ಲಾಭವಾಗಲಿದೆ. ದೇಶದ ಶೇ. 5 ರಷ್ಟು ಜನ, ಸರ್ಕಾರಿ…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲುಪಾಲಾಗಿ, ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ, ನಟ ದರ್ಶನ್ ಈಗ ಎರಡು ಸಿನಿಮಾಗಳನ್ನು ಕ್ಯಾನ್ಸಲ್ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ನಟ ದರ್ಶನ್ ಅವರು ಸೂರಪ್ಪ ಬಾಬು ಅವರೊಂದಿಗೆ ಒಂದು ಸಿನಿಮಾವನ್ನು ಕ್ಯಾನ್ಸಲ್ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಅಲ್ಲದೇ ಸಿನಿಮಾ ನಿರ್ಮಾಪಕ ಸೂರಪ್ಪ ಬಾಬು ಅವರಿಗೆ ಅಡ್ವಾನ್ಸ್ ಕೂಡ ವಾಪಾಸ್ಸು ಕೊಟ್ಟಿದ್ದಾರೆ. ಈ ಮೊದಲು ಕೆವಿಎನ್ ಸಂಸ್ಥೆ ನೀಡಿದ್ದಂತ ಹಣ ವಾಪಾಸ್ ನೀಡಿದ್ದರು. ಈ ಬೆನ್ನಲ್ಲೇ ಸೂರಪ್ಪ ಬಾಬು ಅವರ ಜೊತೆಗೆ ಅವರ ನಿರ್ಮಾಣದ ಚಿತ್ರದಲ್ಲಿ ನಟಿಸುವುದಾಗಿ ಪಡೆದಿದ್ದಂತ ಅಡ್ವಾನ್ಸ್ ಹಿಂದಿರುಗಿಸಿದ್ದಾರೆ. https://kannadanewsnow.com/kannada/security-breach-during-ranji-trophy-match-again-three-fans-rush-towards-kohli/ https://kannadanewsnow.com/kannada/union-budget-2025-new-income-tax-slab-released-heres-all-you-need-to-know/

Read More

ನವದೆಹಲಿ: ದೆಹಲಿ ಮತ್ತು ರೈಲ್ವೇಸ್ ನಡುವಿನ ರಣಜಿ ಟ್ರೋಫಿ ಪಂದ್ಯದ ವೇಳೆ ದೆಹಲಿ ಕ್ರಿಕೆಟ್ ಅಭಿಮಾನಿಗಳು ಎರಡನೇ ಬಾರಿಗೆ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭದ್ರತೆಯನ್ನು ಉಲ್ಲಂಘನೆಯಾಗಿದೆ. ವಿರಾಟ್ ಕೊಹ್ಲಿಯನ್ನು ಭೇಟಿಯಾಗಲು ಮೂವರು ಅಭಿಮಾನಿಗಳು ನುಗ್ಗಿ ಬಂದಿದ ಘಟನೆ ನಡೆದಿದೆ. ಮೂರನೇ ದಿನದಾಟದಲ್ಲಿ ಡೆಲ್ಲಿ 133 ರನ್ಗಳ ಮುನ್ನಡೆ ಸಾಧಿಸುತ್ತಿದ್ದಂತೆ ಮೂವರು ಅಭಿಮಾನಿಗಳು ಭದ್ರತೆಯಿಂದ ತಪ್ಪಿಸಿಕೊಂಡು ಕೊಹ್ಲಿಯ ಪಾದ ಮುಟ್ಟಿ ನಮಸ್ಕರಿಸಿದರು. ಭದ್ರತಾ ಸಿಬ್ಬಂದಿ ತ್ವರಿತವಾಗಿ ಮಧ್ಯಪ್ರವೇಶಿಸಿದರೂ, ಈ ಘಟನೆಯು ಕ್ರೀಡಾಂಗಣದಲ್ಲಿ ಜನಸಂದಣಿ ನಿರ್ವಹಣೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿತು. ಮೊದಲ ದಿನ ಇದೇ ರೀತಿಯ ಅಡಚಣೆಯ ನಂತರ, ಅಭಿಮಾನಿಯೊಬ್ಬರು ಮೈದಾನಕ್ಕೆ ಧಾವಿಸಿ ಭದ್ರತಾ ಸಿಬ್ಬಂದಿಯಿಂದ ಹೊರಗೆ ಎಳೆದೊಯ್ದ ನಂತರ ಇದು ಎರಡನೇ ಉಲ್ಲಂಘನೆಯಾಗಿದೆ. ಪಂದ್ಯ ಆರಂಭಕ್ಕೂ ಮುನ್ನವೇ ಅಭಿಮಾನಿಗಳು ಕ್ರೀಡಾಂಗಣಕ್ಕೆ ನುಗ್ಗಲು ಮುಗಿಬಿದ್ದಿದ್ದರಿಂದ ಕಾಲ್ತುಳಿತದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಕ್ರೀಡಾಂಗಣದ ಗೇಟ್ ಬಳಿ, ಗಾಯಗೊಂಡ ಅಭಿಮಾನಿಗಳು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ (ಡಿಡಿಸಿಎ) ಭದ್ರತಾ ತಂಡ ಮತ್ತು ಪೊಲೀಸರಿಂದ ಚಿಕಿತ್ಸೆ ಪಡೆದರು.…

Read More

ಬೆಳಗಾವಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ಪ್ರಕರಣಗಳು ಕ್ರಮೇಣ ಹೆಚ್ಚುತ್ತಿವೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ಈಗಾಗಲೇ ಅನುಮೋದನೆ ಸಿಕ್ಕಿದ್ದು, ಸದ್ಯದಲ್ಲೇ ಜಾರಿಯಾಗಲಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ (ಫೆ.01) ನಡೆದ ವಿವಿಧ ಬ್ಯಾಂಕಗಳು/ಸಹಕಾರಿ ಸಂಘಗಳ/ಮೈಕ್ರೋ ಫೈನಾನ್ಸ್ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮನೆಗಳಿಗೆ ಹೋಗಿ ಕಿರುಕುಳ ನೀಡಬಾರದು. ಕಾನೂನು ಬದ್ಧವಾಗಿ ನೋಟಿಸ್ ಜಾರಿ ಮಾಡಿ ಮಾಡಬೇಕು. ಫೈನಾನ್ಸ್ ಗಳಿಂದ ಪಡೆದ ಸಾಲ ಮನ್ನ ಆಗುತ್ತಿದೆ ಎಂದು ಸಾರ್ವಜನಿಕ ವಲಯಗಳಲ್ಲಿ ನಂಬಿಕೆಯಿದೆ. ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಸರ್ಕಾರ ಮಧ್ಯಪ್ರವೇಶಿಸಿದೆ. ಇದರಲ್ಲಿ ಸಾಲ ಮನ್ನಾ ಎಂಬ ಪ್ರಶ್ನೆಯೇ ಇಲ್ಲ. ನಿಯಮಾನುಸಾರ ಕಾಲಾವಕಾಶ ನೀಡಿ ಸಾಲ ಮರುಪಾವತಿ ಮಾಡಬೇಕು ಎಂದು ತಿಳಿಸಿದರು. ಮಧ್ಯವರ್ತಿಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆಗೆ ಈಗಾಗಲೇ ಸೂಚನೆ ನೀಡಲಾಗಿದೆ. ಜಿಲ್ಲೆಯ ವಿವಿಧ…

Read More

ದಾವಣಗೆರೆ: ಕೃಷಿ ಇಲಾಖೆ ಮೂಲಕ ಎಲ್ಲಾ ವರ್ಗದ ರೈತರಿಗೆ ತುಂತುರು ನೀರಾವರಿ ಯೋಜನೆಯಡಿ ಸ್ಪ್ರಿಂಕ್ಲೇರ್ ಪಂಪ್‍ಸೆಟ್ ಸರ್ಕಾರದ ಸಹಾಯಧನದಲ್ಲಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟಜಾತಿ ಫಲಾನುಭವಿಗಳು ಈ ಹಿಂದೆ ಪರಿಕರ ತೆಗೆದುಕೊಂಡಿದ್ದರೂ ಸಹ 3-21 ಎಕರೆಗಿಂತ ಹೆಚ್ಚಿರುವರು ಇನ್ನೊಂದು ಘಟಕಕ್ಕೆ ಅರ್ಜಿ ಸಲ್ಲಿಸಬಹುದು. ಆಸಕ್ತ ರೈತರು ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಕಸಬಾ ದೂ.ಸಂ: 8277931143, 9743056797,ಆನಗೋಡು ದೂ.ಸಂ: 8277931137,9148382913, ಮಾಯಕೊಂಡ ದೂ.ಸಂ: 8277931136,9620282104 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಲು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. https://kannadanewsnow.com/kannada/class-6-students-applications-invited-for-admission-to-residential-schools/ https://kannadanewsnow.com/kannada/union-budget-2025-new-income-tax-slab-released-heres-all-you-need-to-know/

Read More

ಬಳ್ಳಾರಿ : ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾಧ್ಯಮ) ಶಾಲೆ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿಬಿಎಸಿಇ) ಗಳ 2025-26 ನೇ ಶೈಕ್ಷಣಿಕ ಸಾಲಿಗೆ 6 ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ. ಆಸಕ್ತಿಯುಳ್ಳ ಐದನೇ ತರಗತಿ ಉತ್ತೀರ್ಣ ಹೊಂದಿದ ವಿದ್ಯಾರ್ಥಿಗಳು ಸೇವಾಸಿಂಧು ಆನ್‌ಲೈನ್ ಪೋರ್ಟಲ್ https://sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಮಾ.10 ಆಗಿರುತ್ತದೆ. ಶಾಲೆಗಳ ವಿವರ: ಬಳ್ಳಾರಿ ತಾಲ್ಲೂಕಿನ ಕೊಳಗಲ್ಲಿನ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ(ಸಿ.ಬಿ.ಎಸ್.ಸಿ)ಯ ಪ್ರಾಂಶುಪಾಲರ ಮೊ.9844040035. ಸಂಡೂರು ತಾಲ್ಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲರ ಮೊ.9480933730. ಕಂಪ್ಲಿ ತಾಲ್ಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲರ ಮೊ.7353346069. ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಸಂಪರ್ಕ ವಿವರ: ಬಳ್ಳಾರಿ-8310321101, ಸಂಡೂರು-9036925966, 8660575061 ಮತ್ತು ಸಿರುಗುಪ್ಪ-9148889975. ಹೆಚ್ಚಿನ…

Read More

ಬಳ್ಳಾರಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವತಿಯಿಂದ ಉತ್ತರ ಪ್ರದೇಶ ರಾಜ್ಯದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಐತಿಹಾಸಿಕ ‘ಮಹಾಕುಂಭಮೇಳ’ ಕ್ಕೆ ಹೋಗುವ ಭಕ್ತಾಧಿಗಳ ಅನುಕೂಲಕ್ಕಾಗಿ ಸಾಂಧರ್ಬಿಕ ಒಪ್ಪಂದದ ಮೇರೆಗೆ ವಿಶೇಷ ಬಸ್ಸುಗಳನ್ನು ಒದಗಿಸಲಾಗುತ್ತಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‌ಬಾನ್ ಅವರು ತಿಳಿಸಿದ್ದಾರೆ. ಬಳ್ಳಾರಿ, ಮೋಕಾ, ಕುರುಗೋಡು, ಕಂಪ್ಲಿ, ಎಮ್ಮಿಗನೂರು, ಸಿರುಗುಪ್ಪ, ತೆಕ್ಕಲಕೋಟ, ಹಳೇಕೋಟೆ, ತೋರಣಗಲ್ಲು, ಸಂಡೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಉತ್ತರ ಪ್ರದೇಶ ರಾಜ್ಯದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಐತಿಹಾಸಿಕ ‘ಮಹಾಕುಂಭಮೇಳ’ ಹೋಗುವ ಭಕ್ತಾಧಿಗಳ ಅನುಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಸಂಪರ್ಕಿಸಬೇಕಾದ ಅಧಿಕಾರಿಗಳ ದೂ. ಸಂಖ್ಯೆ: ಬಳ್ಳಾರಿ-1ನೇ ಘಟಕದ ವ್ಯವಸ್ಥಾಪಕರ ಮೊ.7760992163 ಬಳ್ಳಾರಿ-2ನೇ ಘಟಕದ ವ್ಯವಸ್ಥಾಪಕರ ಮೊ.7760992164 ಸಿರುಗುಪ್ಪ ಘಟಕದ ವ್ಯವಸ್ಥಾಪಕರ ಮೊ.7760992165 ಕುರುಗೋಡು ಘಟಕ ವ್ಯವಸ್ಥಾಪಕರ ಮೊ.9606483671 ಸಂಡೂರು ಘಟಕ ವ್ಯವಸ್ಥಾಪಕರ ಮೊ.7760992309 ಈ ವಿಶೇಷ ಬಸ್ಸುಗಳನ್ನು ಸಾಂಧರ್ಬಿಕ ಒಪ್ಪಂದದ ಮೇಲೆ ಮುಂಗಡವಾಗಿ ಕಾಯ್ದಿರಿಸಿ, ಭಕ್ತಾಧಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/budget-takes-utmost-care-of-farmers-union-minister-hd-kumaraswamy/…

Read More

ನವದೆಹಲಿ: 2047ರ ವಿಕಸಿತ ಭಾರತ ಕನಸು ಸಾಕಾರಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಆಯವ್ಯಯ ಬಹುದೊಡ್ಡ ಕೊಡುಗೆ ನೀಡಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬಜೆಟ್ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು; ಕೃಷಿಕರ ಬಗ್ಗೆ ಅತಿಹೆಚ್ಚು ಕಾಳಜಿ ವಹಿಸಿದ ಬಜೆಟ್ ಇದಾಗಿದೆ ಹಾಗೂ ಮಧ್ಯಮ ವರ್ಗದ ಜನರ ಬದುಕನ್ನು ಸುಲಭ, ಸರಳಗೊಳಿಸುವ ಬಜೆಟ್ ಎಂದು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿಗಳಾದ ನರೇಂದ್ರ ಮೋದಿ ಅವರ ದೂರದೃಷ್ಟಿ ಹಾಗೂ ರೈತಪರ ಆಲೋಚನೆಗಳಿಗೆ 2025ನೇ ಸಾಲಿನ ಬಜೆಟ್ ಕೈಗನ್ನಡಿ ಆಗಿದೆ ಎಂದಿರುವ ಅವರು; ಸಾವಯವ ಕೃಷಿಗೆ ಉತ್ತೇಜನ, ಕೃಷಿಯಲ್ಲಿ ಸುಸ್ಥಿರತೆಗೆ ಒತ್ತು, ರೈತನ ವೆಚ್ಚವನ್ನು ತಗ್ಗಿಸುವ ನಿಟ್ಟಿನಲ್ಲಿ ಅಗತ್ಯ ಉಪಕ್ರಮಗಳನ್ನು ಬಜೆಟ್ ನಲ್ಲಿ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ರೈತರು ಸಶಕ್ತಗೊಂಡು ಉತ್ತಮ ಆದಾಯ ಗಳಿಸುವ, ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವ ಮತ್ತು ಭವಿಷ್ಯದ ಸವಾಲುಗಳಿಗೆ ಭಾರತೀಯ ಕೃಷಿಯನ್ನು ಸಜ್ಜುಗೊಳಿಸುವ ಆಯವ್ಯಯ ಇದಾಗಿದೆ ಇಂದು…

Read More