Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಜಿಲ್ಲೆಯ ಸಾಗರ ನಗರಸಭೆಯಲ್ಲಿ ಸೇಲ್ ಸರ್ಟಿಫಿಕೇಟ್ ಹಗರಣ ಇನ್ನೂ ಹಸಿಯಾಗೇ ಇದೆ. ಈ ನಡುವೆಯೂ ನಗರಸಭೆಯ ಕೋಟ್ಯಂತರ ಬೆಲೆ ಬಾಳುವ ಆಸ್ತಿಯೇ ಖಾಸಗಿ ಬಲಾಡ್ಯ ವ್ಯಕ್ತಿಯೊಬ್ಬರ ಪಾಲಾಗಿದೆ ಎನ್ನಲಾಗುತ್ತಿದೆ. ಇದರಲ್ಲಿ ನಗರಸಭೆಯ ಪೌರಾಯುಕ್ತರು, ಅಧಿಕಾರಿಗಳು, ಸಿಬ್ಬಂದಿಗಳು, ಸದಸ್ಯರೂ ಪಾಲುದಾರರು ಎಂದೇ ಹೇಳಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಸಾಗರ ನಗರಸಭೆ ವ್ಯಾಪ್ತಿಯ 29ನೇ ವಾರ್ಡ್ ನಲ್ಲಿ ನಗರಸಭೆ ಖಾಲಿ ಜಾಗವಿತ್ತು. 2019ರಿಂದಲೂ ಈ ಜಾಗವನ್ನು ಅಂಗನವಾಡಿ ಸೇರಿದಂತೆ ವಿವಿಧ ಸರ್ಕಾರಿ ಕಟ್ಟಡಗಳನ್ನು ನಿರ್ಮಿಸಿ, ಬಳಕೆ ಮಾಡಲು ಅವಕಾಶ ಕೋರಿ ನಗರಸಭೆಯ ಸದಸ್ಯರು, ಸ್ಥಳೀಯ ನಿವಾಸಿಗಳು ಕೂಡ ನಗರಸಭೆಗೆ ಮನವಿ ಮಾಡಿದ್ದರು. ದಿನಾಂಕ 07-08-2021ರಂದು ಕೂಡ 29ನೇ ವಾರ್ಡ್ ನಲ್ಲಿನ ಸರ್ವೆ ನಂಬರ್.02ರ ಸರ್ಕಾರಿ ಜಾಗವನ್ನು ಸಮುದಾಯ ಭವನ ಹಾಗೂ ಅಂಗನವಾಡಿ ಕೇಂದ್ರ ನಿರ್ಮಿಸಿಕೊಡಲು 29ನೇ ವಾರ್ಡಿನ ಸಾರ್ವಜನಿಕರು ಸಾಗರ ನಗರಸಭೆ ಅಧ್ಯಕ್ಷರಾಗಿರುವ ಮಧುರ ಶಿವಾನಂದ ಅವರಿಗೆ ಪತ್ರದಲ್ಲಿ ಕೋರಿದ್ದರು. ಏನಿದೆ ಪತ್ರದಲ್ಲಿ.? ಸಾಗರ ನಗರಸಭೆ ವ್ಯಾಪ್ತಿಯ 29ನೇ ವಾರ್ಡಿನ ಸಾರ್ವಜನಿಕರಿಗೆ ಧಾರ್ಮಿಕ…
ಬೆಂಗಳೂರು: ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (ಎಸ್ಟಿಪಿಐ) 27ನೇ ಆವೃತ್ತಿಯ ಬೆಂಗಳೂರು ಟೆಕ್ ಶೃಂಗಸಭೆಯನ್ನು ನವೆಂಬರ್ 19 ರಿಂದ 21ರ ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ʼಅನಿಯಮಿತʼ ಎಂಬ ಪರಿಕಲ್ಪನೆ ಅಡಿಯಲ್ಲಿ ಟೆಕ್ ಶೃಂಗಸಭೆ ಆಯೋಜಿಸಲಾಗಿದೆ. ಸ್ಟಾರ್ಟ್ಅಪ್ಗಳ ಸರ್ವತೋಮುಖ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಜಾಗತಿಕ ಪಾಲುದಾರಿಕೆಗೆ ಆದ್ಯತೆ ನೀಡಲಾಗುತ್ತಿದೆ. ತಾಂತ್ರಿಕ ಉತ್ಕೃಷ್ಟತೆ, ನಾವೀನ್ಯತೆ ಮತ್ತು ಬೆಳವಣಿಗೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲೊದೆ. ನವೆಂಬರ್ 19 ರಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ ಎಂದು ಐಟಿ – ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. https://twitter.com/KarnatakaVarthe/status/1858494383403983028
ನವದೆಹಲಿ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಹಿರಿಯ ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರ ಕಾರಿನ ಮೇಲೆ ಕೆಲವು ಅಪರಿಚಿತ ವ್ಯಕ್ತಿಗಳು ಸೋಮವಾರ ನಾಗ್ಪುರ ಜಿಲ್ಲೆಯ ಕಟೋಲ್-ಜಲಾಲ್ಖೇಡಾ ರಸ್ತೆಯಲ್ಲಿ ಕಲ್ಲುಗಳಿಂದ ದಾಳಿ ನಡೆಸಿದ ಪರಿಣಾಮ ಅವರು ಗಾಯಗೊಂಡಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ತಮ್ಮ ಪುತ್ರ ಸಲೀಲ್ ದೇಶ್ಮುಖ್ ಅವರ ಪರವಾಗಿ ಪ್ರಚಾರ ನಡೆಸುತ್ತಿದ್ದ ದೇಶ್ಮುಖ್ ಅವರು ನರ್ಖೇಡ್ನಲ್ಲಿ ಸಾರ್ವಜನಿಕ ಸಭೆಯಿಂದ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. https://kannadanewsnow.com/kannada/we-are-not-snatching-anyones-rice-deputy-cm-dk-shivakumar-shivakumar/ https://kannadanewsnow.com/kannada/5-lakh-citizens-travelled-in-a-single-day-indian-aviation-creates-history/
ಬೆಂಗಳೂರು: “ನಾವು ಯಾರ ಅನ್ನವನ್ನು ಕಸಿಯುತ್ತಿಲ್ಲ, ಬಿಜೆಪಿಗೆ ರಾಜಕೀಯ ಮಾಡುವುದು ಬಿಟ್ಟು ಬೇರೇನು ಕೆಲಸ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಬಿಪಿಎಲ್ ಕಾರ್ಡ್ ಪರಿಷ್ಕರಣೆ ಸಂಬಂಧ ಸರ್ಕಾರ ಬಡವರ ಅನ್ನ ಕಸಿಯುತ್ತಿದೆ ಎಂಬ ಟೀಕೆ ಬಗ್ಗೆ ಕೇಳಿದಾಗ, “ಬಿಜೆಪಿಯವರಿಗೆ ಬೇರೇನು ಕೆಲಸವಿದೆ. ನಮ್ಮ ಕ್ಷೇತ್ರದಲ್ಲೂ ಶೇ 90 ರಷ್ಟು ಹಾಗೂ ಹೊಳೆನರಸೀಪುರದಲ್ಲಿ ಶೇ 92 ಬಿಪಿಎಲ್ ಕಾರ್ಡುದಾರರಿದ್ದಾರೆ. ಹೀಗಾಗಿ ಇವುಗಳನ್ನು ಪರಿಶೀಲನೆ ಮಾಡಬೇಕಲ್ಲವೇ. ನಿಜವಾದ ಅರ್ಹರಿಗೆ ಬಿಪಿಎಲ್ ಕಾರ್ಡ್ ಸಿಕ್ಕಿದೆಯೇ ಇಲ್ಲವೇ ಎಂದು ನೋಡಬೇಕಾಗಿದೆ. ಕೆಲವು ಮಾನದಂಡಗಳ ಆಧಾರದ ಮೇಲೆ ಕೆಲವು ಬಿಪಿಎಲ್ ಕಾರ್ಡು ರದ್ದಾಗಿವೆ” ಎಂದರು. 1 ಸಾವಿರ ಕೋಟಿ ಎಲ್ಲಿಂದ ಬಂತು?: ಶಾಸಕರ ಖರೀದಿಗಾಗಿ 50 ಕೋಟಿಯಿಂದ 100 ಕೋಟಿವರೆಗೂ ಆಮಿಷ ನೀಡಲಾಗುತ್ತಿದೆ ಎಂಬ ವಿಚಾರದ ಬಗ್ಗೆ ಕೇಳಿದಾಗ, “ಬಿಜೆಪಿಯವರು ಮೊದಲು ಯತ್ನಾಳ್ ಅವರ 1000 ಕೋಟಿ ಬಗ್ಗೆ ಉತ್ತರ ನೀಡಲಿ. ಆ ಹಣ…
ಬೆಂಗಳೂರು: ಎಂ ಎ ಸ್ನಾತಕೋತ್ತರ ಪದವಿಯಲ್ಲಿ ಉಡುಪಿಯ ವಿಂಧ್ಯಾ ಆಚಾರ್ಯಳಿಗೆ ಪ್ರಥಮ ರ್ಯಾಂಕ್ ಸಹಿತ ಚಿನ್ನದ ಪದಕ ನೀಡಲಾಗಿದೆ. ಬೆಂಗಳೂರಿನ ಜೈನ್ ಡೀಮ್ಡ್ ವಿಶ್ವವಿದ್ಯಾಲಯದ ಘಟಿಕೋತ್ಸವವು ಬುಧವಾರ ನೆರವೇರಿತು. ಈ ಸಂದರ್ಭದಲ್ಲಿ ವಿವಿಯಲ್ಲಿ ಎಂಎ ಪರ್ಫಾಮಿಂಗ್ ಆರ್ಟ್ ( ನೃತ್ಯಶಾಸ್ತ್ರ) ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ್ಯಾಂಕ್ ಪಡೆದ ಉಡುಪಿಯ ಯುವ ನೃತ್ಯ ಪ್ರತಿಭೆ ಕುಮಾರಿ ವಿಂಧ್ಯಾ ಆಚಾರ್ಯ ಸ್ವರ್ಣ ಪದಕ ಸಹಿತ ಪದವಿ ಪ್ರಮಾಣ ಪತ್ರ ಸ್ವೀಕರಿಸಿದರು. ಇವರು ಕೆ.ವಿಷ್ಣುಮೂರ್ತಿ ಆಚಾರ್ಯ ಮತ್ತು ಸ್ನೇಹಾ ಆಚಾರ್ಯ ದಂಪತಿಯ ಸುಪುತ್ರಿ. ಭರತನಾಟ್ಯ ಹಾಗೂ ಯಕ್ಷಗಾನ ಕಲಾಪ್ರವೀಣೆಯಾಗಿದ್ದು, ಕಳೆದ ಕೆಲ ವರ್ಷಗಳಿಂದ ರಾಜ್ಯ, ದೇಶ ಮತ್ತು ವಿದೇಶಗಳ ನೂರಾರು ವೇದಿಕೆಗಳಲ್ಲಿ ತಮ್ಮ ನೃತ್ಯಕಲಾ ಪ್ರತಿಭೆಯಿಂದ ಚಿರಪರಿಚಿತಳಾಗಿದ್ದಾಳೆ. https://kannadanewsnow.com/kannada/bengaluru-power-outage-in-these-areas-on-november-20/ https://kannadanewsnow.com/kannada/5-lakh-citizens-travelled-in-a-single-day-indian-aviation-creates-history/
ಬೆಂಗಳೂರು: ದಿನಾಂಕ 20.11.2024 (ಬುಧವಾರ) ಬೆಳಿಗ್ಗೆ 10:00 ಗಂಟೆಯಿxದ ಮಧ್ಯಾಹ್ನ 03:00 ಗಂಟೆಯವರೆಗೆ 66/11ಕೆವಿ ಆಸ್ಟಿನ್ ಟೌನ್ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂಬುದಾಗಿ ಬೆಸ್ಕಾಂ ತಿಳಿಸಿದೆ. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು ಬ್ರೆಂಟನ್ ರಸ್ತೆ, ಶೋಭಾ ಪರ್ಲ್, ಐಸಿಐಸಿಐ ಬ್ಯಾಂಕ್, ರಾಯಭಾರ ಕಚೇರಿ ಎತ್ತರ, ಅಭರಣ ಆಭರಣಗಳು, ಹರ್ಬನ್ ಲೈಫ್, ಆರ್ಎಂಝಡ್, ಅಶೋಕ್ ನಗರ, ಗರುಡಮಾಲ್, ಏರ್ ಫೋರ್ಸ್ ಹಾಸ್ಪ್. ,ದೊಮ್ಮಲೂರು, ಆಸ್ಟಿನ್ ಟೌನ್, ವಿವೇಕ್ ನಗರ, ಟ್ರಿನಿಟಿ ಚರ್ಚ್, ವಿಜಾಜ್ ಬ್ಯಾಂಕ್, ಹೋಟೆಲ್ ತಾಜ್, ವಿಕ್ಟೋರಿಯಾ ಲೇಔಟ್, ಮ್ಯೂಸಿಯಂ ರಸ್ತೆ, ಆಲ್ಬರ್ಟ್ ಸ್ಟ್ರೀಟ್, ಕಿಂಗ್ ಸ್ಟ್ರೀಟ್, ಮ್ಯೂಸಿಯಂ ಅಡ್ಡ ರಸ್ತೆ, ಲ್ಯಾವೆಲ್ಲೆ ರಸ್ತೆ, ಸೇಂಟ್ ಮಾರ್ಕ್ ರಸ್ತೆ, ವೈ.ಜಿ.ಪಾಳ್ಯ, ಕೆಎಸ್ಆರ್ಪಿ, ಐಟಿಸಿ ಹೋಟೆಲ್, ರಿಚ್ಮಂಡ್ ರಸ್ತೆ, ವನ್ನೆರ್ಪೇಟ್, ಲೈಫ್ ಸ್ಟೈಲ್, M.G. ರಸ್ತೆ, ಹೇಯ್ಸ್ ರಸ್ತೆ, ಕಾನ್ವೆಂಟ್ ರಸ್ತೆ, S.L. ಅಪಾರ್ಟ್ಮೆಂಟ್, ರಿಚ್ಮಂಡ್ ಟೌನ್, ನಜಪ್ಪ ವೃತ್ತ, ಸ್ಟೇನ್ ಗಾರ್ಡನ್, ರಿಚ್ಮಂಡ್…
ಬೆಂಗಳೂರು: ರಾಜ್ಯದಲ್ಲಿ ವೈದ್ಯಕೀಯ ವ್ಯಾಸಂಗದ ನಿರೀಕ್ಷೆಯಲ್ಲಿದ್ದಂತವರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. 2024-25ನೇ ಸಾಲಿಗೆ ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿನ ಸ್ನಾತಕೋತ್ತರ ಎಂ.ಡಿ, ಎಂಎಸ್ ಕೋರ್ಸಿನ ಸೀಟುಗಳ ಶುಲ್ಕವನ್ನು ಹೆಚ್ಚಿಸಿ ಆದೇಶಿಸಿದೆ. ಈ ಕುರಿತಂತೆ ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2024-25ನೇ ಸಾಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸು (ಎಂಡಿ/ಎಂಎಸ್)ಗಳ ಸೀಟು ಹಂಚಿಕೆ & ಶುಲ್ಕ ನಿಗಧಿಗೆ ಸಂಬಂಧಿಸಿದಂತೆ ಸರ್ಕಾರವು ರಾಜ್ಯದ ಖಾಸಗಿ ಕಾಲೇಜುಗಳ ಸಂಘಗಳಾದ ಕರ್ನಾಟಕ ವೃತ್ತಿಪರ ಕಾಲೇಜುಗಳ ಪ್ರತಿಷ್ಠಾನ (KPCF), ಕರ್ನಾಟಕ ಅಲ್ಪಸಂಖ್ಯಾತರ ವೃತ್ತಿಪರ ಕಾಲೇಜುಗಳ ಸಂಘ (AMPCK) ಹಾಗೂ ಕರ್ನಾಟಕ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತ ಕಾಲೇಜುಗಳ ಸಂಘ (KRLMPCA)ಗಳೊಂದಿಗೆ ಪರಸ್ಪರ ಒಪ್ಪಂದದ ಒಡಂಬಡಿಕೆಯನ್ನು ಮಾಡಿಕೊಳ್ಳಬೇಕಾಗಿದೆ. ಮೇಲೆ ಓದಲಾದ ನಡವಳಿಯಲ್ಲಿ 2024-25ನೇ ಸಾಲಿನ ಸ್ನಾತಕ ಮತ್ತು ಸ್ನಾತಕೋತ್ತರ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಾತಿಗೆ ಸಂಬಂಧಿಸಿದಂತೆ ಖಾಸಗಿ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಸಂಘಗಳೊಂದಿಗೆ ಪರಸ್ಪರ ಒಡಂಬಡಿಕೆ ಮಾಡಿಕೊಳ್ಳುವ ಕುರಿತು ಮಾನ್ಯ ವೈದ್ಯಕೀಯ…
ತುಮಕೂರು: ಜಿಲ್ಲೆಯಲ್ಲಿ ಧಾರುಣ ಘಟನೆಯೊಂದು ನಡೆದಿದೆ. ಕರೆಗೆ ಕಾಲು ಜಾರಿ ಬಿದ್ದಂತ ಮಗಳನ್ನು ರಕ್ಷಣೆ ಮಾಡೋದಕ್ಕೆ ಇಳಿದಂತ ತಂದೆಯೂ ನೀರಲ್ಲಿ ಮುಳುಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ತುಂಬಾಡಿ ಗ್ರಾಮಕ್ಕೆ ಬೆಂಗಳೂರಿನ ಶಿವಾಜಿನಗರದಿಂದ ಸಂಬಂಧಿಕರ ಮನೆಗೆ ಫಿರ್ದೋಸ್ ಹಾಗೂ ಮಗಳು ಆಯಿಜಾ ತೆರಳಿದ್ದರು. ಇಂದು ತುಂಬಾಡಿಯಲ್ಲಿನ ಕೆರೆಯನ್ನು ನೋಡೋದಕ್ಕೆ ತೆರಳಿದ್ದಾಗ 6 ವರ್ಷದ ಅಯಿಜಾ ಕಾಲು ಜಾರಿ ಬಿದ್ದಿದ್ದಳು. ಮಗಳನ್ನು ರಕ್ಷಣೆ ಮಾಡುವುದಕ್ಕೆ ತಂದೆ ಫಿರ್ದೋಸ್ ಕೂಡ ನೀರಿಗೆ ಇಳಿದಿದ್ದರು. ಈ ವೇಳೆ ಕೆರೆಯ ನೀರು ಆಳವಿದ್ದ ಕಾರಣ, ಇಬ್ಬರೂ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/rcb-sign-omkar-salvi-as-mens-bowling-coach-for-ipl-2025/ https://kannadanewsnow.com/kannada/5-lakh-citizens-travelled-in-a-single-day-indian-aviation-creates-history/
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League – IPL) ನ ಮುಂಬರುವ ಋತುವಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru – RCB) ಓಂಕಾರ್ ಸಾಲ್ವಿ ಅವರನ್ನು ತಮ್ಮ ಪುರುಷರ ತಂಡದ ಹೊಸ ಬೌಲಿಂಗ್ ಕೋಚ್ ಆಗಿ ನೇಮಕ ಮಾಡಿದೆ. ಎಂಟು ವರ್ಷಗಳಲ್ಲಿ ಮುಂಬೈ ಸೀನಿಯರ್ ಪುರುಷರ ತಂಡವನ್ನು ಮೊದಲ ಬಾರಿಗೆ ರಣಜಿ ಟ್ರೋಫಿ ಪ್ರಶಸ್ತಿಗೆ ಮುನ್ನಡೆಸಿದ ನಂತರ ಸಾಲ್ವಿ ತರಬೇತುದಾರರಾಗಿ ದೇಶೀಯ ಸರ್ಕ್ಯೂಟ್ನಲ್ಲಿ ಅಲೆಗಳನ್ನು ಸೃಷ್ಟಿಸುತ್ತಿದ್ದಾರೆ. ವರ್ಷದ ಕೊನೆಯಲ್ಲಿ, ಸಾಳ್ವಿ ನಾಯಕತ್ವದಲ್ಲಿ ರೆಸ್ಟ್ ಆಫ್ ಇಂಡಿಯಾ ವಿರುದ್ಧದ ಇರಾನಿ ಕಪ್ ಪಂದ್ಯವನ್ನು ಮುಂಬೈ ಗೆದ್ದುಕೊಂಡಿತು. 2024ರ ಐಪಿಎಲ್ ಪ್ರಶಸ್ತಿ ಗೆದ್ದಾಗ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಕೋಚಿಂಗ್ ಸಿಬ್ಬಂದಿಯ ಭಾಗವಾಗಿದ್ದರು. ಕೆಕೆಆರ್ ಜೊತೆಗಿನ ಅವಧಿಯು ಸಂಕ್ಷಿಪ್ತವಾಗಿದ್ದರೂ, ಐಪಿಎಲ್ನಲ್ಲಿ ಸಾಲ್ವಿ ಅವರ ಏಕೈಕ ಹಿಂದಿನ ಅನುಭವವಾಗಿ ಉಳಿದಿದೆ, ಏಕೆಂದರೆ ಅವರು ಆರ್ಸಿಬಿಯಲ್ಲಿ ತಮ್ಮ ಸವಾಲಿಗೆ ಸಜ್ಜಾಗುತ್ತಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಭಾರತೀಯ ದೇಶೀಯ ಋತುವಿನ ಕೊನೆಯಲ್ಲಿ ಅವರು ಐಪಿಎಲ್…
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಕಾನಹಳ್ಳಿಯಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಅಲ್ಲದೇ ರಕ್ತದಾನ ಮಾಡುವ ಮೂಲಕ ಸದೃಢ ನಾಡಿನ ನಿರ್ಮಾಣಕ್ಕಾಗಿ ಕನ್ನಡಾಭಿಮಾನವನ್ನು ಪ್ರದರ್ಶಿಸಲಾಯಿತು. ಗ್ರಾಮ ಪಂಚಾಯ್ತಿ ಉಳವಿ ಹಾಗೂ ದೂಗೂರು ಇವರ ಸಂಯುಕ್ತ ಆಶ್ರಯದೊಂದಿಗೆ ಕಾನಹಳ್ಳಿಯ ಕುವೆಂಪು ಕನ್ನಡ ಯುವಕರ ಸಂಘದಿಂದ ಗಡೆಗದ್ದೆಯ ಕುವೆಂಪು ಬಯಲು ರಂಗಮಂದಿರದಲ್ಲಿ 69ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ 20ಕ್ಕೂ ಹೆಚ್ಚು ಯುವಕ, ಯುವತಿಯರು ರಕ್ತದಾನ ಮಾಡುವ ಮೂಲಕ ಈ ನಾಡಿನ ಸದೃಢ ನಿರ್ಮಾಣಕ್ಕಾಗಿ ಕನ್ನಡಾಭಿಮಾನವನ್ನು ಮರೆಯಲಾಯಿತು. ಈ ಕಾರ್ಯಕ್ರಮದ ಆರಂಭದಲ್ಲಿ ಗ್ರಾಮದ ಮಹಿಳೆಯರು ಪೂರ್ಣಕುಂಭದ ಸ್ವಾಗತವನ್ನು ಗಣ್ಯರಿಗೆ ನೀಡಿದರು. ಗ್ರಾಮದ ಶ್ರೀನವದುರ್ಗೇಶ್ವರಿಯ ಸನ್ನಿಧಿಯವರೆಗೆ ಭುವನೇಶ್ವರಿ ದೇವಿಯ ಮೆರವಣಿಗೆ ಸಾಗಿತು. ಶ್ರೀನವದುರ್ಗೇಶ್ವರಿಯ ಸನ್ನಿಧಿಯಲ್ಲಿ ಪ್ರಾರ್ಥನೆಯ ನಂತ್ರ, ದೇವಸ್ಥಾನ ಸಮಿತಿಯ ಅಧ್ಯಕ್ಷ ಕೃಷ್ಣಮೂರ್ತಿ.ಕೆ.ಇ ಅವರು ಧ್ವಜಾರೋಹಣ ನೆರವೇರಿಸಿದರು. ನಂತ್ರ ಗ್ರಾಮ ಪಂಚಾಯ್ತಿ ಉಳವಿ ಅಧ್ಯಕ್ಷೆ ಸರಸ್ವತಿ ಗಣಪತಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿದರು. ಇನ್ನೂ ದೂಗೂರು ಗ್ರಾಮ…