Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ (ಆರ್ ಸಿಪಿಎಲ್) ಎಂಬುದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಗೆ ಸೇರಿದ ಎಫ್ ಎಂಸಿಜಿ ಅಂಗವಾಗಿದೆ. ಮಂಗಳವಾರದಂದು ಘೋಷಣೆ ಮಾಡಿರುವ ಪ್ರಕಾರ, 75 ವರ್ಷಗಳಷ್ಟು ಹಳೆಯದಾದ ಪಾರಂಪರಿಕ ಆಹಾರ ಬ್ರ್ಯಾಂಡ್ ಎಸ್ಐಎಲ್ ಅನ್ನು ಮತ್ತೆ ಪ್ರಾರಂಭ ಮಾಡುವುದರ ಮೂಲಕ ಪ್ಯಾಕೇಜ್ಡ್ ಆಹಾರ ಮಾರುಕಟ್ಟೆಯಲ್ಲಿ ಮಹತ್ತರವಾದ ವಿಸ್ತರಣೆಗೆ ಮುಂದಾಗಿದೆ. ಈ ಸೆಗ್ಮೆಂಟ್ ನಲ್ಲಿ ತನ್ನ ಫ್ಲ್ಯಾಗ್ ಶಿಪ್ ಕೊಡುಗೆಯಾಗಿ ಎಸ್ಐಎಲ್ ಪುನರಾರಂಭ ಮಾಡಿದೆ. ಈ ಮೂಲಕವಾಗಿ ಆರ್ ಸಿಪಿಎಲ್ ಆಹಾರ ವರ್ಗದಲ್ಲಿ ಸಮಗ್ರವಾದ ಉತ್ಪನ್ನಗಳನ್ನು ಒದಗಿಸುವಂತೆ ಆಗಲಿದೆ. ನೂಡಲ್ಸ್, ಜಾಮ್ ಗಳು, ಕೆಚಪ್, ಸಾಸ್ ಗಳು ಸೇರಿದಂತೆ ಇನ್ನೂ ಹಲವು ಎಸ್ಐಎಲ್ ಹೊಸ ಪೋರ್ಟ್ ಫೋಲಿಯೋದ ಜೊತೆಗೆ ಶುರುವಾಗುತ್ತದೆ. ಇಂದಿನ ದಿನಮಾನಕ್ಕೆ ತಕ್ಕಂತೆ ಹೊಸ, ಸಮಕಾಲೀನ ಹಾಗೂ ಹೊಸ ಚೈತನ್ಯದೊಂದಿಗೆ ತಲೆತಲೆಮಾರುಗಳಿಂದ ಪ್ರೀತಿ ಪಡೆದುಕೊಂಡು ಬಂದ ಬ್ರ್ಯಾಂಡ್ ಜನರೆದುರು ಬರಲಿದೆ. ಆಧುನಿಕ ಭಾರತೀಯ ಕುಟುಂಬಗಳು ನಿರೀಕ್ಷೆ ಮಾಡುವ ರುಚಿ, ಗುಣಮಟ್ಟ ಹಾಗೂ ಮೌಲ್ಯದೊಂದಿಗೆ ಸ್ವಾದವು ಮತ್ತೆ…
ಶಿವಮೊಗ್ಗ: ಅಣ್ಣನ ಹೆಂಡತಿಯೊಂದಿಗೆ ತಮ್ಮ ಅನೈತಿಕ ಸಂಬಂಧ ಇಟ್ಟುಕೊಂಡ ವಿಚಾರ ತಿಳಿದಂತ ಸಹೋದರ ಕೆಂಡಾಮಂಡಲವಾಗಿದ್ದರು. ಊರವರನ್ನು ಸೇರಿಸಿ ಪಂಚಾಯ್ತಿ ಮಾಡಿಸಿ ತಮ್ಮನಿಗೆ ಬುದ್ಧಿ ಕೂಡ ಹೇಳಿದ್ದರು. ಆದರೂ ಅತ್ತಿಗೆಯೊಂದಿಗೆ ಅನೈತಿಕ ಸಂಬಂಧ ಬಿಟ್ಟಿರಲಿಲ್ಲ. ಮುಂದೆ ಏನಾಯ್ತು ಅಂತ ಮುಂದೆ ಸುದ್ದಿ ಓದಿ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಕಾನಕೊಪ್ಪ ಗ್ರಾಮದ ಮಾಲತೇಶ್(35) ಮದುವೆಯಾದ ನಂತ್ರ ಪತ್ನಿಯೊಂದಿಗೆ ಕೆಲ ದಿನಗಳ ಕಾಲ ಹಿರೇಕೆರೂರು ತಾಲ್ಲೂಕಿನ ಬೆಟಕೆರೂರಲ್ಲೂ ವಾಸವಿದ್ದರು. ಆ ಬಳಿಕ ತಮ್ಮೂರಿಗೆ ವಾಪಾಸ್ ಮರಳಿದ್ದರು. ಇವರೊಟ್ಟಿಗೆ ಮಾಲತೇಶ್ ತಮ್ಮ ರಾಮಚಂದ್ರ(28) ಕೂಡ ವಾಸವಿದ್ದನು. ಕೂಲಿ ಕೆಲಸಕ್ಕೆ ಹೋದರೇ 15 ದಿನಗಳವರೆಗೆ ಮನೆಗೆ ಮರಳದೇ ಅಲ್ಲಿಯೇ ಇದ್ದು ಬಿಡುತ್ತಿದ್ದ ಆಸಾಮಿ ರಾಮಚಂದ್ರ ಆಗಿದ್ದನು. ಇದರ ನಡುವೆ ಮದುವೆಯಾಗದೇ ಇದ್ದಂತ ರಾಮಚಂದ್ರ ಅಣ್ಣ ಮಾಲತೇಶ್ ಪತ್ನಿಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದನಂತೆ. ಇದೇ ವಿಚಾರ ಮನೆಯವರಿಗೂ ಗೊತ್ತಾಗಿ ರಾಮಚಂದ್ರನಿಗೆ ಬುದ್ಧಿ ಹೇಳಿದ್ದಾರೆ. ದಿನಾಂಕ 08-09-2025ರಂದು ಮನೆಯಿಂದ ಹೋದವನು ಒಂದೂವರೆ ತಿಂಗಳಾದರೂ ವಾಪಾಸ್ಸೇ ಆಗದಿದ್ದಾಗ ದಿಗಿಲಾಗುತ್ತದೆ. ಸಂಬಂಧಿಕರು,…
ಬೆಳಗಾವಿ ಸುವರ್ಣಸೌಧ : ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿರುವ ಕರ್ನಾಟಕ ಬಾಡಿಗೆ ಅಧಿನಿಯಮ, 1999ನ್ನು ಮತ್ತಷ್ಟು ತಿದ್ದುಪಡಿ ಮಾಡುವ, 2025ನೇ ಸಾಲಿನ ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕವನ್ನು ಮೇಲ್ಮನೆಯಲ್ಲಿ ಡಿ.17ರಂದು ಅಂಗೀಕರಿಸಲಾಯಿತು. ಹೀಗಾಗಿ ಇನ್ಮುಂದೆ ನಿಯಮ ಮೀರಿದಂತ ಮಾಲೀಕರು, ಬ್ರೋಕರ್ ಗಳಿಗೂ ದಂಡ ಫಿಕ್ಸ್ ಆದಂತೆ ಆಗಿದೆ. ಬಾಡಿಗೆ ಹೆಸರಿನಲ್ಲಿ ಕೆಲ ಕಡೆಗಳಲ್ಲಿ ಆಘಾತಕಾರಿ ಪ್ರಕರಣಗಳು ದಾಖಲಾಗುತ್ತಿವೆ. ಆದ್ದರಿಂದ ದುರುಪಯೋಗಕ್ಕೆ ಅವಕಾಶವಿಲ್ಲದ ಹಾಗೆ ಎಚ್ಚರ ವಹಿಸಿ ಈ ಕಾಯಿದೆಯನ್ನು ತಿದ್ದುಪಡಿ ಮಾಡಬೇಕಿದೆ ಎಂದು ಸದಸ್ಯರಾದ ನವೀನ ಕೆ.ಎಸ್., ಐವನ್ ಡಿ’ಸೋಜಾ, ರಮೇಶಬಾಬು ಹಾಗೂ ಇನ್ನೀತರರು ಸಲಹೆ ಮಾಡಿದರು. ತಪ್ಪಿತಸ್ಥರನ್ನು ದಂಡದ ಮೂಲಕ ಶಿಕ್ಷೆಗೆ ಗುರಿಪಡಿಸುವುದು, ದಂಡದ ಮೊತ್ತ ಹೆಚ್ಚಳ ಮಾಡುವುದು ಕಾಯಿದೆಯ ತಿದ್ದುಪಡಿ ಹಿಂದಿನ ಉದ್ದೇಶವಾಗಿದೆ. ಮೂಲ ಕಾಯಿದೆಯಲ್ಲಿನ ಮಹತ್ವದ ಅಂಶಗಳನ್ನು ತಿದ್ದುಪಡಿ ಮಾಡಿಲ್ಲ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿ, ಮಸೂದೆಯ ಅಂಗೀಕಾರಕ್ಕೆ ಕೋರಿದರು. ಸಭಾಪತಿಯವರು, ವಿಧೇಯಕವನ್ನು ಅಂಗೀಕರಿಸಲು ಧ್ವನಿಮತಕ್ಕೆ ಹಾಕಿದರು. ಸರ್ವ ಸದಸ್ಯರ ಒಪ್ಪಿಗೆ ಮೇರೆಗೆ…
ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಕೋವಿಡ್ RTPCR ಪ್ರಯೋಗಾಲಯವನ್ನು ಕೆ ಎಫ್ ಡಿ ಪ್ರಯೋಗಲವನ್ನಾಗಿ ಪರಿವರ್ತಿಸಿ. ಕೆಎಫ್ ಡಿ ಪರೀಕ್ಷೆಗೆ ಅಗತ್ಯವಿರುವಂತ ಸಿಬ್ಬಂದಿಗಳನ್ನು ನೇಮಕ ಮಾಡುವಂತೆ ಆರೋಗ್ಯ ಇಲಾಖೆಯ ಆಯುಕ್ತರಿಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಪತ್ರ ಬರೆದಿದ್ದಾರೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿರುವಂತ ಅವರು, ಕೋವಿಡ್ ಸಂದರ್ಭದಲ್ಲಿ ಸಾಗರದಲ್ಲಿ ಸುಸಜ್ಜಿತ ಆರ್ ಟಿ ಪಿ ಸಿ ಆರ್ ಪ್ರಯೋಗಾಲಯವನ್ನು ಸ್ಥಾಪಿಸಲಾಗಿತ್ತು. ಕೊರೋನಾ ಸಂದರ್ಭದಲ್ಲಿ ಈ ಪ್ರಯೋಗಾಲಯವು ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿತ್ತು ಎಂದಿದ್ದಾರೆ. ಸಾಗರವು ಕ್ಯಾಸನೂರು ಫಾರೆಸ್ಟ್ ಡಿಸೀಜಸ್( Kyasanur Forest Disease-KFD) ಪೀಡಿತ ಪ್ರದೇಶದ ಅಂಚಿನಲ್ಲಿದೆ. ಈ ರೋಗವನ್ನು ತ್ವರಿತವಾಗಿ ಪತ್ತೆ ಹಚ್ಚಿ ನಿಯಂತ್ರಣಕ್ಕೆ ತರಬೇಕಾದಂತ ತುರ್ತು ಅವಶ್ಯಕತೆ ಇದೆ. ಈ ಹಿನ್ನಲೆಯಲ್ಲಿ ಕೋವಿಡ್ ಪ್ರಯೋಗಾಲಯವನ್ನು ಕೆಎಫ್ ಡಿ ಪರೀಕ್ಷೆಯ ಪ್ರಯೋಗಾಲಯವಾಗಿ ಪರಿವರ್ತಿಸುವಂತೆ ಕೋರಿದ್ದಾರೆ. ಇನ್ನೂ ಕೆಎಫ್ ಡಿ ಪರೀಕ್ಷೆಗಾಗಿ ಸಾಗರದಲ್ಲಿ ಪ್ರಯೋಗಾಲಯ ಸ್ಥಾಪಿಸಿದ ನಂತ್ರ ಅದಕ್ಕೆ…
ಬೆಳಗಾವಿ ಸುವರ್ಣಸೌಧ: ಕುಂದಾಪುರ ತಾಲೂಕಿನ ಇಎಸ್ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು ಭರವಸೆ ನೀಡಿದರು. ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಕುಂದಾಪುರ ತಾಲೂಕಿನ ಇಎಸಐ ಆಸ್ಪತ್ರೆಯಲ್ಲಿ ಇಬ್ಬರು ವೈದ್ಯರ ಹುದ್ದೆಯನ್ನು ಮಂಜೂರು ಮಾಡಲಾಗಿತ್ತು. ಆದರೆ 2015 ರಿಂದ ಒಬ್ಬರೇ ಒಬ್ಬರು ಖಾಯಂ ವೈದ್ಯರು ಇಲ್ಲ. ಬೇರೆ ಕಡೆಯಿಂದ ನಿಯೋಜನೆ ಮೇರೆಗೆ ವೈದ್ಯರು ಕರ್ತವ್ಯ ನಿರ್ವಹಿಸುತ್ತಾರೆ. ಇದರಿಂದ ಕಾರ್ಮಿಕರಿಗೆ ಸರಿಯಾದ ಚಿಕಿತ್ಸೆ ಸಿಗದೆ ತೊಂದರೆಯಾಗಿದೆ ಎಂದು ಕಿರಣ್ ಕುಮಾರ್ ಅವರು ಹೇಳಿದರು. ಕುಂದಾಪುರದ ಇಎಸ್ಐ ಆಸ್ಪತ್ರೆಯಲ್ಲಿ ನಿಯೋಜನೆ ಮೇಲೆ ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. ಖಾಯಂ ವೈದ್ಯರು ಬೇಕು ಎಂಬ ಬೇಡಿಕೆ ಬಗ್ಗೆ ಪರಿಶೀಲನೆ ಮಾಡಲಾಗುವುದು. ಮೂರು ವಾರದಲ್ಲಿ ತಾತ್ಕಾಲಿಕ ವೈದ್ಯರ ನೇಮಕ ಮಾಡಲಾಗುವುದು ಎಂದು ಹೇಳಿದರು. ಆಸ್ಪತ್ರೆ ಹೆಸರು ಬಿಟ್ಟಿದ್ದರೆ ಕ್ರಮ: ಇಎಸ್ಐ ಫಲಾನುಭವಿಗಳಿಗೆ ಚಿಕಿತ್ಸೆ…
ಬೆಳಗಾವಿ ಸುವರ್ಣಸೌಧ : ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ ತಿದ್ದುಪಡಿ ವಿಧೇಯಕ ಹಾಗೂ 2025ನೇ ಸಾಲಿನ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ತಿದ್ದುಪಡಿ ವಿಧೇಯಕಗಳಿಗೆ ವಿಧಾನ ಪರಿಷತ್ನಲ್ಲಿ ಇಂದು ಅನುಮೋದನೆ ದೊರೆಯಿತು. ವಿಧಾನಸಭೆಯಲ್ಲಿ ಅಂಗೀಕೃತ ರೂಪದಲ್ಲಿದ್ದ ಈ ತಿದ್ದುಪಡಿಗಳನ್ನು ವಿಧಾನ ಪರಿಷತ್ನಲ್ಲಿ ಪರ್ಯಾವಲೋಚನೆಗೆ ಮಂಡಿಸಲಾಗಿತ್ತು. ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಪ್ರಸ್ತಾವವನ್ನು ಮಂಡಿಸಿ ತಿದ್ದುಪಡಿಯ ಅಂಶಗಳನ್ನು ಸದನಕ್ಕೆ ವಿವರಿಸಿದರು. ವಿಧೇಯಕದ ಬಗ್ಗೆ ಅಭಿಪ್ರಾಯ ಮಂಡನೆ: ಪರಿಷತ್ ಸದಸ್ಯರಾದ ಕೇಶವ ಪ್ರಸಾದ್, ರಮೇಶ್ ಬಾಬು, ಐವನ್ ಡಿಸೋಜ, ಕೆ.ಎಸ್. ನವೀನ್, ಡಾ. ಧನಂಜಯ ಸರ್ಜಿ, ಗೋವಿಂದರಾಜು, ಎನ್ ರವಿಕುಮಾರ್, ಟಿ.ಎ. ಶರವಣ, ಸಿ.ಟಿ. ರವಿ ಅವರು ಮಾತನಾಡಿದರು. ಕೆಲವು ಅಂಶಗಳ ಬಗ್ಗೆ ಸ್ಪಷ್ಟೀಕರಣಗಳ ಅಗತ್ಯವಿದೆ ಎಂದು ಹೇಳಿದರು. ಇದಕ್ಕೆ ಉತ್ತರಿಸಿದ ಸಚಿವ ಲಾಡ್ ಅವರು, ಸದಸ್ಯರ ಅಭಿಪ್ರಾಯಗಳಿಗೆ ಸ್ಪಷ್ಟೀಕರಣ ನೀಡಿ, ಹೆಚ್ಚಿನ ಜನರಿಗೆ ಲಾಭ ಆಗೋ ರೀತಿ ಈ ಮಸೂದೆ ತರಲಾಗಿದೆ ಎಂದು ಸದನಕ್ಕೆ ವಿವರಿಸಿದರು. ನಂತರ ವಿಧೇಯಕವು ಅಂಗೀಕೃತಗೊಂಡಿತು.…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಕ್ರಿಕ್ಬಜ್ ವರದಿಯ ಪ್ರಕಾರ, ಕಡಿಮೆ ಅವಧಿಯ ಕ್ರಿಕೆಟ್ನಲ್ಲಿ ಉಪನಾಯಕನೂ ಆಗಿರುವ ಸ್ಟಾರ್ ಇಂಡಿಯಾ ಬ್ಯಾಟ್ಸ್ಮನ್ ಶುಭ್ಮನ್ ಗಿಲ್, ಕಾಲಿನ ಗಾಯದಿಂದಾಗಿ ಲಕ್ನೋದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ ಟಿ20ಐನಿಂದ ಹೊರಗುಳಿದಿದ್ದಾರೆ. https://kannadanewsnow.com/kannada/do-you-want-to-find-treasure-just-put-one-of-these-pieces-under-your-pillow-and-go-to-sleep/ https://kannadanewsnow.com/kannada/breaking-new-scheme-of-the-centre-1-5-lakh-cashless-treatment-for-road-accident-victims-ambulance-service-within-10-minutes/
ಪ್ರಾಚೀನ ಕಾಲದಲ್ಲಿ ಹಣವನ್ನು ಭದ್ರವಾಗಿಡಳು ಯಾವುದೇ ರೀತಿಯ ಬ್ಯಾಂಕುಗಳು ಇರಲಿಲ್ಲ, ಆದ್ದರಿಂದ ಪ್ರಾಚೀನ ಕಾಲದಲ್ಲಿ ಚಿನ್ನಾಭರಣವನ್ನು ಒಂದು ಪಾತ್ರೆಯಲ್ಲಿ ಅಥವಾ ಮಡಿಕೆಯಲ್ಲಿ ಹಾಕಿ ನೆಲದಲ್ಲಿ ಹೂತು ಹಾಕುತ್ತಿದ್ದರು, ಈ ರೀತಿ ಮಾಡುವುದರಿಂದ ಹೂತುಹಾಕಿದ ಹಣ ಕಳ್ಳರಿಂದ ರಕ್ಷಣೆ ಗೊಳ್ಳುವುದರ ಜೊತೆಗೆ ತಮಗೆ ಬೇಕಾದಾಗ ಅದನ್ನು ತೆಗೆದು ಉಪಯೋಗಿಸಿಕೊಳ್ಳುತ್ತಿದ್ದರು. ಒಂದು ವೇಳೆ ಹೂತು ಹಾಕಿದ ಹಣವನ್ನು ಮರೆತುಹೋದರೆ ಅದು ಅಲ್ಲಿಯೇ ಯಾರಿಗೂ ತಿಳಿಯದೆ ಹಾಗೆ ಉಳಿಯುತ್ತಿತ್ತು. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ,…
ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ವತಿಯಿಂದ ರಾಷ್ಟ್ರೀಯ ವಿದ್ಯಾಲಯ ರಸ್ತೆ – ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ಹಳದಿ ಮಾರ್ಗದಲ್ಲಿ ದಿನಾಂಕ 11ನೇ ಆಗಸ್ಟ್ 2025 ರಿಂದ ಮೆಟ್ರೋ ರೈಲು ಸೇವೆ ಆರಂಭಿಸಲಾಯಿತು. ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ, ಬಿಎಂಆರ್ಸಿಎಲ್ ಮತ್ತು ಬಿಎಂಟಿಸಿ ಸಂಯುಕ್ತವಾಗಿ ಮಾರ್ಗ ಪರಿಶೀಲನೆ ನಡೆಸಿ, ಮೆಟ್ರೋ ನಿಲ್ದಾಣಗಳ ಸಮೀಪ ಬಸ್ ನಿಲ್ದಾಣಗಳನ್ನು ಹೊಸದಾಗಿ ಸ್ಥಾಪಿಸಲಾಗಿದ್ದು ಹಾಗೂ ಕೆಲವು ಬಸ್ ನಿಲ್ದಾಣಗಳನ್ನು ಸ್ಥಳಾಂತರಿಸಲಾಗಿದೆ. ಮೆಟ್ರೋ ನಿಲ್ದಾಣಗಳ ಸಮೀಪ ಹೊಸದಾಗಿ ಸ್ಥಾಪಿಸಿರುವ ಬಸ್ ನಿಲ್ದಾಣಗಳು: ಬಯೋಕಾನ್ ಹೆಬ್ಬಗೋಡಿ ಬೆರೆಟೇನ ಅಗ್ರಹಾರ ಸಿಂಗಸಂದ್ರ ಹೊಂಗಸಂದ್ರ ಸೆಂಟ್ರಲ್ ಸಿಲ್ಕ್ ಬೋರ್ಡ್ ಆರ್.ವಿ. ರಸ್ತೆ ಇರುವ ಬಸ್ ನಿಲ್ದಾಣಗಳನ್ನು ಮೆಟ್ರೋ ನಿಲ್ದಾಣದ ಸಮೀಪ ಸ್ಥಳಾಂತರಿಸಿರುವ ನಿಲ್ದಾಣಗಳು: ಎಲೆಕ್ಟ್ರಾನಿಕ್ ಸಿಟಿ ಹೊಸ ರಸ್ತೆ ರಾಗಿಗುಡ್ಡ ಜಯದೇವ, ಬಿಟಿಎಂ ಲೇಔಟ್, ಬೊಮ್ಮನಹಳ್ಳಿ, ಕುಡ್ಲು ಗೇಟ್ ಹಾಗೂ ಇನ್ಫೋಸಿಸ್ ಫೌಂಡೇಶನ್ ಕೊನ್ನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣಗಳಲ್ಲಿ ಬಸ್ ನಿಲ್ದಾಣಗಳು ಈಗಾಗಲೇ 100 ಮೀಟರ್ ಒಳಗೆ ಲಭ್ಯವಿವೆ. ಹಸ್ಕೂರು ರಸ್ತೆ…
ಬೆಳಗಾವಿ ಸುವರ್ಣ ಸೌಧ : ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. 2025ನೇ ಸಾಲಿನ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬುಧವಾರ ಮಾತನಾಡಿದರು. “ಜಿಬಿಎ ಮೂಲಕ ಐದು ಪಾಲಿಕೆಗಳನ್ನು ಮಾಡಲಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರದಲ್ಲಿ ಬಿಬಿಎಂಪಿ ಮೇಯರ್ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರು ಎಂಬುದನ್ನು ಗ್ರೇಟರ್ ಬೆಂಗಳೂರಿನ ವಿವಿಧ ನಗರ ಪಾಲಿಕೆಯ ಹೆಸರುಗಳನ್ನು ಸೇರಿಸಿ ಬದಲಾವಣೆ ಮಾಡಲಾಗುತ್ತಿದೆ. ಇದರ ಹೊರತಾಗಿ ಬೇರೆ ಯಾವುದೇ ಬದಲಾವಣೆ ಇಲ್ಲ. ಕಾನೂನು ಪ್ರಕಾರ ಇದನ್ನು ಮಾಡಲೇಬೇಕಾಗಿರುವ ಕಾರಣ ಈ ತಿದ್ದುಪಡಿ ಮಾಡಲಾಗುತ್ತಿದೆ” ಎಂದು ತಿಳಿಸಿದರು. https://kannadanewsnow.com/kannada/nuclear-bill-passed-in-lok-sabha-amid-walkout-by-opposition-parties/ https://kannadanewsnow.com/kannada/breaking-new-scheme-of-the-centre-1-5-lakh-cashless-treatment-for-road-accident-victims-ambulance-service-within-10-minutes/














