Author: kannadanewsnow09

ನವದೆಹಲಿ: ಕಳೆದ ಏಳು ವರ್ಷಗಳಿಂದ, ರೈಲ್ವೆ ಸಂರಕ್ಷಣಾ ಪಡೆ (Railway Protection Force – RPF) ವಿವಿಧ ಭಾರತೀಯ ರೈಲ್ವೆ ವಲಯಗಳಲ್ಲಿ ಆರೈಕೆ ಮತ್ತು ರಕ್ಷಣೆಯ ಅಗತ್ಯವಿರುವ ಮಕ್ಕಳನ್ನು ರಕ್ಷಿಸಲು ಮೀಸಲಾಗಿರುವ ‘ನನ್ಹೆ ಫರಿಸ್ಟೆ’ (Nanhe Faristey) ಎಂಬ ಕಾರ್ಯಾಚರಣೆಯಲ್ಲಿ ಮುಂಚೂಣಿಯಲ್ಲಿದೆ. ಕಳೆದ ಏಳು ವರ್ಷಗಳಲ್ಲಿ (2018-ಮೇ 2024), ನಿಲ್ದಾಣಗಳು ಮತ್ತು ರೈಲುಗಳಲ್ಲಿ ಅಪಾಯದಲ್ಲಿದ್ದ 84,119 ಮಕ್ಕಳನ್ನು ಆರ್ಪಿಎಫ್ ರಕ್ಷಿಸಿದೆ. ‘ನನ್ಹೆ ಫಾರಿಸ್ಟೆ’ ಕೇವಲ ಕಾರ್ಯಾಚರಣೆಗಿಂತ ಹೆಚ್ಚಿನದು; ಇದು ಅನಿಶ್ಚಿತ ಪರಿಸ್ಥಿತಿಗಳಲ್ಲಿ ತಮ್ಮನ್ನು ಕಂಡುಕೊಳ್ಳುವ ಸಾವಿರಾರು ಮಕ್ಕಳಿಗೆ ಜೀವನಾಡಿಯಾಗಿದೆ. 2018 ರಿಂದ 2024 ರವರೆಗಿನ ದತ್ತಾಂಶವು ಅಚಲ ಸಮರ್ಪಣೆ, ಹೊಂದಾಣಿಕೆ ಮತ್ತು ಸ್ಥಿತಿಸ್ಥಾಪಕತ್ವದ ಕಥೆಯನ್ನು ವಿವರಿಸುತ್ತದೆ. ಪ್ರತಿಯೊಂದು ರಕ್ಷಣೆಯು ಸಮಾಜದ ಅತ್ಯಂತ ದುರ್ಬಲ ಸದಸ್ಯರನ್ನು ರಕ್ಷಿಸುವ ಆರ್ಪಿಎಫ್ನ ಬದ್ಧತೆಗೆ ಸಾಕ್ಷಿಯಾಗಿದೆ. 2018 ರಲ್ಲಿ ‘ಆಪರೇಷನ್ ನನ್ಹೆ ಫರಿಸ್ಟೆ’ ಗೆ ಮಹತ್ವದ ಆರಂಭ ಸಿಕ್ಕಿತು. ಈ ವರ್ಷ, ಆರ್ಪಿಎಫ್ ಬಾಲಕರು ಮತ್ತು ಬಾಲಕಿಯರು ಸೇರಿದಂತೆ ಒಟ್ಟು 17,112 ಮಕ್ಕಳನ್ನು ರಕ್ಷಿಸಿದೆ. ರಕ್ಷಿಸಲಾದ 17,112…

Read More

ಬೆಂಗಳೂರು: ನಗರದಲ್ಲಿ ದಿನೇ ದಿನೇ ಹೆಚ್ಚುತ್ತಿರುವಂತ ಸಂಚಾರ ದಟ್ಟನೆ ಕಡಿಮೆಗೊಳಿಸೋದಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಹತ್ವದ ಕ್ರಮ ವಹಿಸಿದ್ದರು. ಇದರ ಭಾಗವಾಗಿ ಇಂದು 2 ಲೆವೆಲ್ ಫ್ಲೈ ಓವರ್ ಉದ್ಘಾಟನೆಗೊಳ್ಳಲಿದೆ. ಆ ಬಗ್ಗೆ ಬಿಬಿಎಂಪಿಯ ನಿವೃತ್ತ ಮುಖ್ಯ ಅಭಿಯಂತರ ಕೆ.ಟಿ ನಾಗರಾಜ್ ಮಾತನಾಡಿದ್ದು, ಏನು ಮಾಹಿತಿ ಹಂಚಿಕೊಂಡಿದ್ದಾರೆ ಅಂತ ಮುಂದೆ ಓದಿ. ಈ ಬಗ್ಗೆ ಮಾತನಾಡಿರುವಂತ ಅವರು, ಬೆಂಗಳೂರಿನ ಮಾರೇನಹಳ್ಳಿಯಿಂದ ಸಿಲ್ಕ್ ಬೋರ್ಡ್ ವರೆಗೂ ತೀವ್ರ ಸಂಚಾರ ದಟ್ಟಣೆಗೆ ಪರಿಹಾರ ಹುಡುಕಲು ಸತತ ಪ್ರಯತ್ನಗಳು ನಿರಂತರವಾಗಿ ನಡೆದಿದೆ. ಇವತ್ತು 2 ಲೆವೆಲ್ ಫ್ಲೈ ಓವರ್ ಪ್ರಾಯೋಗಿಕ‌ ಸಂಚಾರಕ್ಕೆ‌ ಮುಕ್ತಗೊಳ್ಳುತ್ತಿದ್ದು, ಒಂದು ರಸ್ತೆ ಮೆಟ್ರೋ ಕಾರ್ಯಾಚರಣೆಗೆ ಮತ್ತೊಂದು ರಸ್ತೆ ಇತರೆ ವಾಹನಗಳ ಸಂಚಾರಕ್ಕೆ ಅನುಕೂಲವಾಗಲಿದೆ ಅಂತ ತಿಳಿಸಿದ್ದಾರೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ರಿಂಗ್ ರೋಡ್ ಮತ್ತು ಸಿಲ್ಕ್ ಬೋರ್ಡ್ ಕಡೆ ಪರಿವೀಕ್ಷಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಯಾವ ರೀತಿ ಜನಸಂದಣಿಯನ್ನು ಕಡಿಮೆ ಮಾಡಬೇಕು ಎಂದು ಸಮಾಲೋಚನೆ ನಡೆಸುತ್ತಿದ್ಧಾಗ ಗಮನಕ್ಕೆ ಬಂದ ಯೋಜನೆ…

Read More

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಖಾಸಗಿ ವಲಯದಲ್ಲಿಯೂ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವಂತ ಮಹತ್ವದ ಮಸೂಧೆ ಒಪ್ಪಿಗೆ ಸೂಚಿಸಲಾಗಿತ್ತು. ಈ ಮಾಹಿತಿ ಹಂಚಿಕೊಂಡು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಂತ ಸಿಎಂ ಸಿದ್ಧರಾಮಯ್ಯ, ಆ ಬಳಿಕ ಡಿಲಿಟ್ ಮಾಡಿದ್ದರು. ಈಗ ಮತ್ತೆ ಟ್ವಿಟ್ ಮಾಡಿದ್ದು, ಅದರಲ್ಲಿ ಏನು ಬರೆದಿದೆ ಅಂತ ಮುಂದೆ ಓದಿ. ಈ ಕುರಿತಂತೆ ಮತ್ತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಅದರಲ್ಲಿ ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ ಅಂತ ತಿಳಿಸಿದ್ದಾರೆ. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂಬುದಾಗಿ ಮುಖ್ಯಮಂತ್ರಿ…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ದುಬೈ ಆಡಳಿತಗಾರನ ಮಗಳು ಶೈಖಾ ಮಹ್ರಾ ಬಿಂಟ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ತನ್ನ ಪತಿ ಶೇಖ್ ಮನ ಬಿನ್ ಮೊಹಮ್ಮದ್ ಬಿನ್ ರಶೀದ್ ಬಿನ್ ಮನ ಅಲ್ ಮಕ್ತೌಮ್ ಅವರಿಂದ ವಿಚ್ಛೇದನವನ್ನು ಇನ್ಸ್ಟಾಗ್ರಾಮ್ನಲ್ಲಿ ಸಾರ್ವಜನಿಕವಾಗಿ ಘೋಷಿಸಿದ್ದಾರೆ. ದಂಪತಿಗಳು ತಮ್ಮ ಮೊದಲ ಮಗುವನ್ನು ಸ್ವಾಗತಿಸಿದ ಎರಡು ತಿಂಗಳ ನಂತರ ಈ ಪ್ರಕಟಣೆ ಬಂದಿದೆ. ಇನ್ಸ್ಟಾ ಗ್ರಾಂ ಪೋಸ್ಟ್ ನಲ್ಲಿ “ಪ್ರಿಯ ಪತಿ,” ಎಂದು ದುಬೈ ರಾಜಕುಮಾರಿ ಪೋಸ್ಟ್ ಪ್ರಾರಂಭಿಸಿದ್ದಾರೆ. ನೀವು ಇತರ ಸಹಚರರೊಂದಿಗೆ ನಿರತರಾಗಿರುವುದರಿಂದ, ನಾನು ಈ ಮೂಲಕ ನಮ್ಮ ವಿಚ್ಛೇದನವನ್ನು ಘೋಷಿಸುತ್ತೇನೆ. ನಾನು ನಿಮಗೆ ವಿಚ್ಛೇದನ ನೀಡುತ್ತೇನೆ, ನಾನು ನಿಮಗೆ ವಿಚ್ಛೇದನ ನೀಡುತ್ತೇನೆ ಮತ್ತು ನಾನು ನಿಮಗೆ ವಿಚ್ಛೇದನ ನೀಡುತ್ತೇನೆ. ನೋಡಿಕೊಳ್ಳಿ. ನಿನ್ನ ಮಾಜಿ ಹೆಂಡತಿ ಅಂತ ತಿಳಿಸಿದ್ದಾರೆ. ಈ ಸುದ್ದಿಯು ಸಾಮಾಜಿಕ ಮಾಧ್ಯಮದಲ್ಲಿ ಉನ್ಮಾದವನ್ನು ಹುಟ್ಟುಹಾಕಿದೆ, ದಂಪತಿಗಳು ಇನ್ಸ್ಟಾಗ್ರಾಮ್ನಲ್ಲಿ ಒಬ್ಬರನ್ನೊಬ್ಬರು ಅನ್ಫಾಲೋ ಮಾಡಿದ್ದಾರೆ ಮತ್ತು ಅವರ ಪ್ರೊಫೈಲ್ಗಳಿಂದ ಪರಸ್ಪರರ ಎಲ್ಲಾ ಫೋಟೋಗಳನ್ನು ಅಳಿಸಿದ್ದಾರೆ. ಕೆಲವರು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಖಾಸಗಿ ವಲಯದಲ್ಲೂ ಕರ್ನಾಟಕದಲ್ಲಿ ಕನ್ನಡಿಗರಿಗೆ ಗ್ರೂಪ್-ಸಿ ಮತ್ತು ಡಿ ದರ್ಜೆಯ ಉದ್ಯೋಗಗಳಲ್ಲಿ ಶೇ.100ರಷ್ಟು ಮೀಸಲಾತಿ ಕಲ್ಪಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇದಕ್ಕೆ ಸಚಿವ ಸಂಪುಟ ಸಭೆಯಲ್ಲೂ ಸಿಎಂ ಸಿದ್ಧರಾಮಯ್ಯ ಅವರು ಅನುಮೋದನ ನೀಡಿದ್ದಾರೆ. ಹಾಗಾದ್ರೇ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ಸಂಬಂಧ ಮಸೂದೆಯಲ್ಲಿ ಏನಿದೆ? ಅರ್ಹತೆ ಏನು? ಸೇರಿದಂತೆ ಇತರೆ ಮಾಹಿತಿಗಾಗಿ ಮುಂದೆ ಓದಿ. ಮೀಸಲಾತಿ ಎಷ್ಟು? ಆಡಳಿತಾತ್ಮಕ ಹುದ್ದೆಗೆ 50% – (ಸೂಪರ್‌ವೈಸರ್, ವ್ಯವಸ್ಥಾಪಕ, ಟೆಕ್ನಿಕಲ್ ಇತರೆ ಉನ್ನತ ಹುದ್ದೆಗಳು) ಆಡಳಿತೇತರ ಹುದ್ದೆಗೆ 75%  – (ಕ್ಲರ್ಕ್, ಕೌಶಲ ರಹಿತ, ಅರೆ ಕೌಶಲ ಗುತ್ತಿಗೆ ನೌಕರ) ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಲ್ಪಿಸುವ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈ ವಿಧೇಯಕದಿಂದ ಶೇ.50ರಷ್ಟು ಮ್ಯಾನೇಜ್ ಮೆಂಟ್ ಹುದ್ದೆಗಳು ಹಾಗೂ ಶೇ.75ರಷ್ಟು ನಾನ್ ಮ್ಯಾನೇಜ್ ಮೆಂಟ್ ಹುದ್ದೆಗಳಲ್ಲಿ ಸ್ಥಳೀಯರಿಗೆ ಮೀಸಲಾತಿ ಕಲ್ಪಿಸಲಾಗುತ್ತಿದೆ. ಅರ್ಹತೆಗಳು ಏನು? ಕರ್ನಾಟಕದಲ್ಲಿ ಹುಟ್ಟಿದವರು, ಕರ್ನಾಟಕದಲ್ಲಿ 15 ವರ್ಷದಿಂದ ವಾಸಿಸುತ್ತಿರುವವರು, ಕನ್ನಡ ಭಾಷೆಯಲ್ಲಿ ಮಾತನಾಡಲು,…

Read More

ಹಾಸನ: ದೇವಸ್ಥಾನಕ್ಕೆ ತೆರಳಿದ್ದಂತ ಸಂದರ್ಭದಲ್ಲಿ ಕಾಲು ಜಾರಿ ಬಿದ್ದಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಪಕ್ಕೆಲುಬಿಗೆ ಪೆಟ್ಟಾಗಿರುವುದಾಗಿ ತಿಳಿದು ಬಂದಿದೆ. ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾಸನದ ಹೊಳೆನರಸೀಪುರದಲ್ಲಿ ದೇವಸ್ಥಾನಕ್ಕೆ ತೆರಳಿದ್ದಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಾಲು ಜಾರಿ ಬಿದ್ದಿದ್ದಾರೆ. ಇದರಿಂದಾಗಿ ಹೆಚ್.ಡಿ ರೇವಣ್ಣ ಅವರ ಪಕ್ಕೆಲುಬಿಗೆ ಪೆಟ್ಟಾಗಿರೋದು ಪರೀಕ್ಷೆಯಿಂದ ತಿಳಿದು ಬಂದಿದೆ. ಮಾಜಿ ಸಚಿವ ಹೆಚ್.ಡಿ ರೇವಣ್ಣ ಇದೀಗ ಹೊಳೆನರಸೀಪುರದಲ್ಲಿನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಆಷಾಡ ಏಕಾದಶಿ ಪ್ರಯುಕ್ತ ಅವರು ಉಪವಾಸವಿದ್ದರು ಎನ್ನಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/big-news-cbse-board-exam-to-be-implemented-twice-a-year-from-the-year-2026-ncfse-recommendation/ https://kannadanewsnow.com/kannada/govt-considering-using-mrna-hpv-vaccine-against-cervical-cancer-for-older-women/

Read More

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564. ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564. ಮೇಷ ನಿಲುವುಗಳನ್ನು ಬದಲಾಯಿಸಿಕೊಳ್ಳಬೇಕೆಂದು ತೀರ್ಮಾನಿಸಿದ್ದರೂ, ಅದು ಅಷ್ಟು ಸುಲಭವಾಗಿ ನಡೆಯುವುದಿಲ್ಲ. ಪೊಲೀಸ್ ಅಧಿಕಾರಿಗಳಿಗೆ ತುರ್ತು ಕೆಲಸ ಒದಗುವ ಸಂದರ್ಭ ಬರುವುದು. ಮಂಗಳ ಕಾರ್ಯದ ಸುದ್ದಿ ಕೇಳುವಿರಿ. ವೃಷಭ ಬ್ಯಾಂಕ್ ಮತ್ತು ನ್ಯಾಯಾಂಗ ಕ್ಷೇತ್ರದಲ್ಲಿರುವ ವ್ಯಕ್ತಿಗಳಿಗೆ ನಿಮ್ಮ ಚಾಣಾಕ್ಷತನದಿಂದ ಹೆಗ್ಗಳಿಕೆಗೆ ಪಾತ್ರರಾಗುತ್ತೀರಿ. ಕೆಲಸದ ನಿಮಿತ್ತವಾಗಿ ಅನಿರೀಕ್ಷಿತ ದೂರದ…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ತಾಳಗುಪ್ಪದಲ್ಲಿ ಆಟೋ ಚಾಲಕರು, ವೈಟ್ ಬೋರ್ಡ್ ಕಾರುಗಳ ಮಾಲೀಕರು ಅನಧಿಕೃತವಾಗಿ ಬಾಡಿಗೆಗಳನ್ನು ಹೊಡೆಯುತ್ತಿದ್ದಾರೆ. ಇದಕ್ಕೆ ಬ್ರೇಕ್ ಹಾಕಬೇಕು. ಟ್ಯಾಕ್ಸಿ ಮಾಲೀಕರು, ಚಾಲಕರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಮಲೆನಾಡು ಕಾರು ಚಾಲಕರ ಮತ್ತು ಮಾಲೀಕರ ಸಂಘ ಆಗ್ರಹಿಸಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ, ಗೃಹ ಸಚಿವರಿಗೆ, ಸಾರಿಗೆ ಸಚಿವರಿಗೆ ಮನವಿಯನ್ನು ಸಲ್ಲಿಸಲಾಯಿತು. ಅಲ್ಲದೇ ಸಾಗರ ಉಪ ವಿಭಾಗಿಯ ಅಧಿಕಾರಿಗಳಿಗೆ, ಪ್ರಾದೇಶಿಕ ಸಾರಿಗೆ ಅಧಿಕಾರಿಗೆ, ಡಿವೈಎಸ್ಪಿಗೆ ಕೂಡ ಸಂಘದ ಅಧ್ಯಕ್ಷರು, ಸದಸ್ಯರು ಜೊತೆಗೆ ಗೂಡಿ ಸಮಸ್ಯೆ ಬಗೆ ಹರಿಸುವಂತೆ ಮನವಿ ಮಾಡಿದರು. ಈ ಬಳಿಕ ಪ್ರೆಸ್ ಕ್ಲಬ್ ಅಸೋಸಿಯೇಷನ್ಸ್ ಆಫ್ ಸಾಗರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮಲೆನಾಡು ಕಾರು ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಪ್ರಾನ್ಸಿಸ್ ಅವರು, ತಾಳಗುಪ್ಪ ವ್ಯಾಪ್ತಿಯ ನಿಲ್ದಾಣದಲ್ಲಿ ಅವರ ಪರಿಮಿತಿ ಮೀರಿ ಆಟೋ ಚಾಲಕರು, ವೈಟ್ ಬೋರ್ಡ್ ಕಾರು ಚಾಲಕರು ಬಾಡಿಗೆ ಮಾಡುತ್ತಿದ್ದಾರೆ. ಇದರಿಂದ ಹಳತಿ ಬೋರ್ಡ್ ಟ್ಯಾಕ್ಸಿ ಚಾಲಕರು, ಮಾಲೀಕರಿಗೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರು ವರ್ಗಾವಣೆಗೆ ಅರ್ಜಿ ಸಲ್ಲಿಸೋದಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ, ಜುಲೈ.31ರವರೆಗೆ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2024-25ನೇ ಸಾಲಿನಿಂದ ವರ್ಗಾವಣೆಗಾಗಿ ನೂತನ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸದರಿ ಆದೇಶದ ಕಂಡಿಕ 4(1) ರಲ್ಲಿ 2024-25ನೇ ಸಾಲಿನ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗಳನ್ನು ಸದು ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ದಿನಾಂಕ: 09.07.2024ರವರೆಗೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶಿಸಲಾಗಿತ್ತು. ತದನಂತರ, ಮೇಲೆ ಓದಲಾದ (20ರ ಸರ್ಕಾರಿ ಆದೇಶದಲ್ಲಿ ಸದರಿ ವರ್ಗಾವಣೆ ಅವಧಿಯನ್ನು ದಿನಾಂಕ: 15.07.2021 ರವರೆಗೆ ವಿಸ್ತರಿಸಲಾಗಿತ್ತು, ಮುಂದುವರೆದು, ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸುವುದು ಅವಶ್ಯವೆಂದು ಸರ್ಕಾರವು ವರಿಗಣಿಸಿ ಈ ಕೆಳಕಂಡಂತೆ ಆದೇಶಿಸಿದೆ ಅಂತ ಹೇಳಿದ್ದಾರೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ದಿನಾಂಕ: 25.06.2024ರ ಸರ್ಕಾರಿ ಆದೇಶದಲ್ಲಿ ವಿವರಿಸಿರುವ ಷರತ್ತಿಗೊಳಪಟ್ಟು 2024-25ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು…

Read More

ನವದೆಹಲಿ: ಎಸ್ ಎಸ್ ಎಲ್ ಸಿ ಪಾಸ್ ಆದವರಿಗೆ ಗುಡ್ ನ್ಯೂಸ್ ಎನ್ನುವಂತೆ ರೈಲ್ವೆ ಇಲಾಖೆಯಿಂದ 2000 ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಕೇಂದ್ರ ರೈಲ್ವೆಯ ರೈಲ್ವೆ ನೇಮಕಾತಿ ( Railway Recruitment 2024 ) ಕೋಶವು ವಿವಿಧ ಟ್ರೇಡ್ಗಳಲ್ಲಿ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ವೇಳಾಪಟ್ಟಿಯ ಪ್ರಕಾರ, ಆನ್ಲೈನ್ ಅರ್ಜಿ ಪ್ರಕ್ರಿಯೆಯನ್ನು ಅಧಿಕೃತ ವೆಬ್ ಪೋರ್ಟಾ, rrccr.com ನಲ್ಲಿ ಪ್ರಾರಂಭಿಸಲಾಗಿದೆ. ಆಸಕ್ತರು ಆಗಸ್ಟ್ 15ರೊಳಗೆ ಅರ್ಜಿ ಸಲ್ಲಿಸಬಹುದು. ಅಧಿಸೂಚನೆಯ ಪ್ರಕಾರ, ಅಪ್ರೆಂಟಿಸ್ ಕಾಯ್ದೆ 1961 ರ ಅಡಿಯಲ್ಲಿ ವಿವಿಧ ಟ್ರೇಡ್ಗಳಲ್ಲಿ ಒಟ್ಟು 2,424 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ರೈಲ್ವೆಯಲ್ಲಿ ಸರ್ಕಾರಿ ಉದ್ಯೋಗಗಳನ್ನು ಬಯಸುವ 10 ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಇದು ದೊಡ್ಡ ಅವಕಾಶವಾಗಿದೆ. ಆನ್ಲೈನ್ ಅರ್ಜಿಯನ್ನು ಸಲ್ಲಿಸುವ ಮೊದಲು ಅಭ್ಯರ್ಥಿಗಳು ಸಂಪೂರ್ಣ ಅಧಿಸೂಚನೆಯನ್ನು ಓದಲು ಸೂಚಿಸಲಾಗಿದೆ. ವಿದ್ಯಾರ್ಹತೆ, ವಯಸ್ಸಿನ ಮಿತಿ, ಅರ್ಜಿ ಸಲ್ಲಿಸುವುದು ಹೇಗೆ, ಅರ್ಜಿ ಶುಲ್ಕ ಮತ್ತು ಇತರ ವಿವರಗಳನ್ನು…

Read More