Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದಲ್ಲಿ ನಾಳೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಆರೇಂಜ್ ಅಲರ್ಟ್ ಕೂಡ ನೀಡಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಆದರೇ ಕಾಲೇಜುಗಳಿಗೆ ರಜೆ ಇಲ್ಲ ಎಂಬುದಾಗಿ ಆದೇಶದಲ್ಲಿ ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ. ಇಂದು ಅವರು ಆದೇಶ ಹೊರಡಿಸಿದ್ದು, ಬೆಂಗಳೂರು ನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಇಂದು ಕೂಡ ಮಳೆಯಾಗಿದೆ. ನಾಳೆ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರದ ಎಲ್ಲಾ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ನಾಳೆ ರಜೆಯನ್ನು ನೀಡಲಾಗಿದೆ ಎಂದಿದ್ದಾರೆ. ಆದರೇ ನಾಳೆ ಕಾಲೇಜುಗಳಿಗೆ ರಜೆ ನೀಡಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಅಂದಹಾಗೆ ಬೆಂಗಳೂರಲ್ಲಿ ನಾಳೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ಆರೆಂಜ್ ಅಲರ್ಟ್ ಕೂಡ ಘೋಷಿಸಿದೆ. ಈ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಮುಂಜಾಗ್ರತಾ ಕ್ರಮವಾಗಿ ನಾಳೆ ಬೆಂಗಳೂರು ನಗರದ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ,…
ಬೆಂಗಳೂರು: ನಗರದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಹಲವೆಡೆ ಅವಾಂತರವೇ ಸೃಷ್ಠಿಯಾಗಿದೆ. ಮನೆಯಿಂದ ಹೊರ ಬರಲು ಸಾಧ್ಯವಾಗದಂತ ಸ್ಥಿತಿ ನಿರ್ಮಾಣಗೊಂಡಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ನಾಳೆ ರಜೆ ಘೋಷಿಸಿ ಡಿಸಿ ಆದೇಶಿಸಿದ್ದಾರೆ. ಈ ಸಂಬಂಧ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು ಆದೇಶ ಹೊರಡಿಸಿದ್ದು, ಬೆಂಗಳೂರು ನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಇಂದು ಕೂಡ ಮಳೆಯಾಗಿದೆ. ನಾಳೆ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರದ ಎಲ್ಲಾ ಶಾಲೆಗಳಿಗೆ ನಾಳೆ ರಜೆಯನ್ನು ನೀಡಲಾಗಿದೆ ಎಂದಿದ್ದಾರೆ. ಅಂದಹಾಗೆ ಬೆಂಗಳೂರಲ್ಲಿ ನಾಳೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಕೂಡ ಘೋಷಿಸಿದೆ. ಇದರ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಮುಂಜಾಗ್ರತಾ ಕ್ರಮವಾಗಿ ನಾಳೆ ಬೆಂಗಳೂರು ನಗರದ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಆದರೇ ಕಾಲೇಜುಗಳಿಗೆ ರಜೆ ಇಲ್ಲ ಎಂಬುದಾಗಿ…
ಶತ್ರುಗಳನ್ನು ದಮನ ಮಾಡುವ ಸಲುವಾಗಿ ಈ ಒಂದ ತಂತ್ರವು ಹೀಗಿದೆ. ಮೂರು ಸೋಮವಾರ ಅಥವಾ ಏಳು ಸೋಮವಾರದ ಈ ಪ್ರಯೋಗವನ್ನು ಮಾಡಬೇಕಾಗುತ್ತದೆ. ಏನು ಮಾಡಬೇಕೆಂದರು ಬಿಳಿ ಎಕ್ಕದ ಹೂವನ್ನು 108 ಪೋಣಿಸಿ ಹಾರ ಮಾಡಿ ಈಶ್ವರನಿಗೆ ಹಾಕಬೇಕು. ಹಾಗೂ ಶತ್ರುವಿಗೆ ನೀನೇ ನೋಡಿಕೋ, ಈ ರೀತಿಯಾಗಿ ಪರಿಪರಿಯಾಗಿ ನನ್ನನ್ನು ಕಾಡುತ್ತಿದ್ದಾನೆ. ಎಂದು ಹೇಳಿ ದೇವರ ಮುಂದೆ ನಿವೇದನೆ ಮಾಡಿಕೊಳ್ಳಿ ಹಾಗೂ ಪರಶಿವನ ಪಾದದ ಕೆಳಗೆ ಶತ್ರುವಿನ ಹೆಸರಿನಲ್ಲಿ ಎಷ್ಟು ಅಕ್ಷರವಿದೆಯೋ ಅಷ್ಟೇ ಪ್ರಮಾಣದ ಕಪ್ಪು ಗುಲಗಂಜಿಯನ್ನು ಶಿವನ ಪಾದದ ಬಳಿ ಇಡಬೇಕು ಉದಾರಣೆಗೆ ರಾಮಕೃಷ್ಣ ನಾಲ್ಕು ಅಕ್ಷರ ಅಲ್ಲಿಗೆ ನಾಲ್ಕು ಕಪ್ಪು ಗುಲಗಂಜಿಯನ್ನು ಶಿವನ ಪಾದದ ಬಳಿ ಇಡಬೇಕು ಎಂಬುದಾಗಿ ಅರ್ಥ ಈ ರೀತಿಯಾಗಿ ಮೂರು ಸೋಮವಾರ ಅಥವಾ ಏಳು ಸೋಮವಾರ ನಿರಂತರವಾಗಿ ಶತ್ರು ಧ್ವಂಸ ಆಗಲಿ ಎಂದು ಸಂಕಲ್ಪ ಮಾಡಿಕೊಂಡು ಮಾಡಿದ್ದೆ ಆದಲ್ಲಿ 100ಕ್ಕೆ 100% ಅಷ್ಟು ಆತ ಉಚ್ಚಾಟನೆಗೊಳ್ಳುವನು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ…
ಬೆಂಗಳೂರು: ರಾಜ್ಯದ ಮುಜರಾಯಿ ದೇವಸ್ಥಾನಗಳನ್ನು ಖಾಸಗೀಕರಣಗೊಳಿಸಬಾರದು ಮತ್ತು ಖಾಸಗಿಯವರಿಗೆ ನೀಡಬಾರದು ಎಂಬುದಾಗಿ ಅರ್ಚಕ ಸಮೂಹ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಲ್ಲಿ ಮನವಿ ಮಾಡಿದೆ. ಜೊತೆ ಜೊತೆಗೆ ಅವರ ಕಾರ್ಯವೈಖರಿಯನ್ನು ಹಾಡಿ ಹೊಗಳಿತು. ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ(ರಿ)ಯಿಂದ ಬೃಹತ್ ಸಮಾವೇಶವನ್ನು ನಡೆಸಲಾಯಿತು. ಈ ಸಮಾವೇಶದಲ್ಲಿ ಮುಜರಾಯಿ ಸಚಿವರಾಗಿ ರಾಮಲಿಂಗಾ ರೆಡ್ಡಿ ಅವರ ಕಾರ್ಯವೈಖರಿಯನ್ನು ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದ ಅರ್ಚಕ ಸಮೂಹ ಹಾಡಿ ಹೊಗಳಿದರು. ಈ ಒಕ್ಕೂಟದ ನೇತೃತ್ವದಲ್ಲಿ ಕರ್ನಾಟಕ ರಾಜ್ಯದ ಎ, ಬಿ ಮತ್ತು ಸಿ ವರ್ಗದ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರ, ಆಗಮಿಕರ ಹಾಗೂ ಉಪಾಧಿವಂತರುಗಳ ಕಷ್ಟ ಕಾರ್ಪಣ್ಯಗಳಿಗಾಗಿ ಅವರ ದುಃಖ ದುಮ್ಮಾನಗಳಿಗೆ ಸ್ಪಂದಿಸಿ ಸದಾ ಅವರ ಏಳಿಗೆಗಾಗಿ ಸುಮಾರು 50 ವರ್ಷಗಳಿಂದ ಸರ್ಕಾರದೊಡನೆ ಹೋರಾಡುತ್ತಿರುವ ಹಿಂದು ಧಾರ್ಮಿಕ ಸರ್ವ ಸಮಾಜದ ದೇವಾಲಯಗಳ ನೌಕರರನ್ನು ಒಳಗೊಂಡಿರುವ ಸಂಸ್ಥೆಯಾಗಿರುತ್ತದೆ. ನೆನ್ನೆಯ ಸಮಾವೇಶದಲ್ಲಿ ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ಅರ್ಚಕರುಗಳು ಕಿಕ್ಕಿರಿದು ನೆರೆದಿದ್ದರು.…
ಬೆಂಗಳೂರು: ಬಳ್ಳಾರಿಯ ಸಂಸದ ಇ.ತುಕಾರಾಂ ಅವರು ಎಲ್ಲ ಕಾನೂನನ್ನು ಗಾಳಿಗೆ ತೂರಿ ಅಕ್ರಮವಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಅವರನ್ನು ಅನರ್ಹಗೊಳಿಸಬೇಕು ಎಂದು ಮುಖ್ಯ ಚುನಾವಣಾ ಆಯುಕ್ತರಿಗೆ ಮನವಿ ಮಾಡಿದ್ದೇವೆ ಎಂದು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ದೆಹಲಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾನು, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಇವತ್ತು ಮುಖ್ಯ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿದ್ದೇವೆ. ಅವರಿಗೆ ಇ.ತುಕಾರಾಂ ಅನರ್ಹತೆ ಸಂಬಂಧ ಮನವಿ ಸಲ್ಲಿಸಿದ್ದೇವೆ ಎಂದು ವಿವರಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಕುರಿತು ಸಾಕಷ್ಟು ಬಾರಿ ಚರ್ಚೆಗಳಾಗಿವೆ. ಬಿಜೆಪಿ, ಈ ನಿಗಮದ ಹಗರಣವನ್ನು ಮುಂದಿಟ್ಟು ಹೋರಾಟಗಳನ್ನು ನಡೆಸಿದೆ. ನಂತರ ತನಿಖೆ ಆಧಾರದಲ್ಲಿ ಕಳೆದ ತಿಂಗಳು ಇ.ಡಿ. ಪ್ರೆಸ್ ನೋಟನ್ನೂ ಬಿಡುಗಡೆ ಮಾಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಹಣವನ್ನು ಕಾಂಗ್ರೆಸ್ ಸರಕಾರ ಲೂಟಿ ಮಾಡಿದ್ದಾಗಿ ತಿಳಿಸಿದ್ದಾರೆ…
ಬೆಂಗಳೂರು: ನಡ್ಡಾ, ಪ್ರಹ್ಲಾದ್ ಜೋಷಿ ಸೇರಿ ಯೋಗೇಶ್ವರಗೆ ಜೆಡಿಎಸ್ ಟಿಕೆಟ್ ಕೊಡಿ ಎಂದು ಕೇಳಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರು ಯೋಗೇಶ್ವರ್ ಸ್ವಾಗತಕ್ಕೆ ಕ್ಯೂ ನಿಂತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣ ಕಾರ್ಯಕರ್ತರು, ಮುಖಂಡರ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಕುಮಾರಸ್ವಾಮಿ ಅವರು; ಚನ್ನಪಟ್ಟಣ ಕಾರ್ಯಕರ್ತರ ಸಭೆಯಲ್ಲಿ ಅವರ ಭಾವನೆಗಳನ್ನು ಅರಿತುಕೊಂಡಿದ್ದೇನೆ. ಸ್ಥಳಿಯವಾಗಿ ಬಿಜೆಪಿ ನಾಯಕರಲ್ಲಿ ಗೊಂದಲವಿದೆ. ಇನ್ನೂ ಮೂರು ದಿನ ಸಮಯವಿದೆ. ಎಲ್ಲಾ ಬೆಳವಣಿಗೆ ಗಮನಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದರು. ಬೆಳಗ್ಗೆಯಿಂದ ಎಲ್ಲಾ ಕಾಂಗ್ರೆಸ್ ನಾಯಕರು ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಸಾಲು ಸಾಲಾಗಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಸಿಎಂ, ಡಿಸಿಎಂ ಸೇರಿದರೆ ಕೈ ಪಕ್ಷದ ಅನೇಕ ನಾಯಕರು ಸ್ವಾಗತ ಕೋರುತ್ತಿದ್ದಾರೆ. ಮೂರು ದಿನಗಳ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾ ಅವರು ನನ್ನ ಮುಂದೆ ಪ್ರಸ್ತಾವನೆ ಇಟ್ಟಿದ್ದರು. ಅವರಿಗೆ ಜೆಡಿಎಸ್ ಪಕ್ಷದಿಂದಲೇ ಬಿ ಫಾರಂ ಕೊಡಿ ಎಂದು ಅವರು ಕೇಳಿದ್ದರು. ಅವರ…
ಬೆಂಗಳೂರು: ಉದ್ಯೋಗ ಸನ್ನದ್ಧತೆಗಾಗಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಮೂಲಕ ಉದ್ಯೋಗಾವಕಾಶ ಮತ್ತು ಉದ್ಯಮಶೀಲತೆಯನ್ನು ಹೆಚ್ಚಿಸಲು ʼನಿಪುಣ ಕರ್ನಾಟಕʼ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರ ಘೋಷಿಸಿದ್ದು, ಶೀಘ್ರದಲ್ಲೇ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಬೆಂಗಳೂರು ಟೆಕ್ ಶೃಂಗಸಭೆಗೆ ಮುನ್ನ ಸಚಿವರು ಆರ್ ಅಂಡ್ ಡಿ ಲ್ಯಾಬ್ಗಳು ಮತ್ತು ಶಿಕ್ಷಣ ಸಂಸ್ಥೆಗಳ ತಜ್ಞರು ಹಾಗೂ ಪ್ರತಿನಿಧಿಗಳ ಜೊತೆ ಪರಸ್ಪರ ಸಂವಾದ ಮಾಡಿ ಸಚಿವರು ಮಾತನಾಡಿದರು ಯುವ ವಿದ್ಯಾರ್ಥಿಗಳಲ್ಲಿ ನಾವೀನ್ಯತೆ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸುವ ಪ್ರಾಮುಖ್ಯತೆಯನ್ನು ಒತ್ತಿಹೇಳಿದ ಸಚಿವರು ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ವೈಜ್ಞಾನಿಕ ಮನೋಭಾವ ಮತ್ತು ಮನಃಸ್ಥಿತಿಯನ್ನು ಬೆಳೆಸಲು ವಿದ್ಯಾರ್ಥಿಗಳನ್ನು ಚರ್ಚೆಗಳು, ರಸಪ್ರಶ್ನೆಗಳು ಮತ್ತು ವಿಜ್ಞಾನ ಪ್ರದರ್ಶನಗಳಂತಹ ಜ್ಞಾನಾಭಿವೃದ್ಧಿ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವಂತಹ ಕಾರ್ಯಕ್ರಮ ಚೌಕಟ್ಟನ್ನು ರೂಪಿಸಲು ಸಚಿವರು ಸಲಹೆ ನೀಡಿದರು. ಕರ್ನಾಟಕ ಸರ್ಕಾರದ ಉದ್ದೇಶವು ಅತ್ಯಂತ ಸ್ಪಷ್ಟವಾಗಿದ್ದು, ನಾವು ಕೇವಲ ಹೂಡಿಕೆಯ ತಾಣವಾಗಿ ಇರಲು ಬಯಸುವುದಿಲ್ಲ.ಜ್ಞಾನ ಹಾಗೂ ಕೌಶಲ್ಯವೇ ನಮ್ಮ…
ಚಿತ್ರದುರ್ಗ: ಮೇಲಧಿಕಾರಿಗಳ ಅನುಮತಿಯಿಲ್ಲದೇ ಕರ್ತವ್ಯಕ್ಕೆ ಗೈರು ಹಾಜರಾಗಿ, ಕರ್ತವ್ಯದ ವೇಳೆಯಲ್ಲೇ ಅಶಿಸ್ತು ವರ್ತನೆ ತೋರಿದ ಕಾರಣ, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನೇರಲಗುಂಟೆ ಗ್ರಾಮ ಪಂಚಾಯ್ತಿ ಪಿಡಿಒ ಹನುಮಂತ ಕುಮಾರ್ ಅಮಾನತುಗೊಳಿಸಿ ಜಿಲ್ಲಾ ಪಂಚಾಯ್ತಿ ಸಿಇಒ ಆದೇಶಿಸಿದ್ದಾರೆ. ಇಂದು ಆದೇಶ ಹೊರಡಿಸಿರುವಂತ ಚಿತ್ರದುರ್ಗ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರಿ ಎಸ್.ಜೆ ಸೋಮಶೇಖರ್ ಅವರು, ಹನುಮಂತ ಕುಮಾರ್.ಎಸ್ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ನೇರಲಗುಂಟೆ ಗ್ರಾಮ ಪಂಚಾಯತಿ, ಇವರು ಗ್ರಾಮ ಪಂಚಾಯತಿ ಕಛೇರಿ ಕರ್ತವ್ಯಕ್ಕೆ ದಿನಾಂಕ:30-09-2024 ರಿಂದ ಅನಧಿಕೃತವಾಗಿ ಗೈರು ಹಾಜರಾಗಿರುತ್ತಾರೆ ಎಂದಿದ್ದಾರೆ. ಸಾರ್ವಜನಿಕರ ಕುಂದುಕೊರತೆಗಳಿಗೆ ಸಾರ್ವಜನಿಕರು ಮತ್ತು ಜನ ಪ್ರತಿನಿದಿಗಳು ದೂರವಾಣಿ ಕರೆ ಮಾಡಿದರೂ ಸಹ ಸ್ವೀಕರಿಸದೆ ಇರುವುದರಿಂದ ಸರ್ಕಾರಿ ಯೋಜನೆಗಳ ಅನುಷ್ಟಾನದಲ್ಲಿ ಅಡಚಣೆ ಉಂಟಾಗಿದ್ದು, ಸದರಿಯವರನ್ನು ಬದಲಾವಣೆ ಮಾಡಿ ಅದೇ ಗ್ರಾಮ ಪಂಚಾಯತಿಯ ಗ್ರೇಡ್-1 ಕಾರ್ಯದರ್ಶಿಯಾದ ಕೆ.ಎಸ್.ಜಯಣ್ಣ ಇವರಿಗೆ ಪ್ರಭಾರ ವ್ಯವಸ್ಥೆ ಮಾಡಿಕೊಡಲು ಸದರಿ ಪಂಚಾಯತಿಯ ಅಧ್ಯಕ್ಷರು ಮತ್ತು ಸದಸ್ಯರು ಕೋರಿರುತ್ತಾರೆ ಎಂದು ಹೇಳಿದ್ದಾರೆ. ಅದರಂತೆ ನೇರಲಗುಂಟೆ ಗ್ರಾಮ…
ಬೆಂಗಳೂರು: ನಗರದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಅದರ ಅವಶೇಷಗಳ ಅಡಿಯಲ್ಲಿ ಸಿಲುಕಿ ಮೂವರು ದುರ್ಮರಣ ಹೊಂದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವಾರು ಪ್ರದೇಶಗಳಲ್ಲಿ ಅವಾಂತರಗಳು ಸೃಷ್ಟಿಯಾಗುತ್ತಿವೆ. ಇದೀಗ ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ 16 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಒಂದು ಕುಸಿದು ಬಿದ್ದಿದ್ದು,ಕಟ್ಟಡದ ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿತ್ತು. ಇವರಲ್ಲಿ ಮೂವರು ದುರ್ಮರಣ ಹೊಂದಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುಮಾರು 16 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಈ ಒಂದು ಘಟನೆ ನಡೆದಿದೆ. ಸ್ಥಳೀಯರು ಹೇಳುತ್ತಿರುವ ಪ್ರಕಾರ ಈ ಒಂದು ನಿರ್ಮಾಣ ಹಂತದ ಕಟ್ಟಡದ ಕೆಳಗಡೆ ಅನೇಕ ಕಾರ್ಮಿಕರು ವಾಸಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಕುಸಿದು ಬಿದ್ದಿರುವಂತ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಿ, ಅದರಡಿಯಲ್ಲಿ ಮೂವರು…
ಬೆಂಗಳೂರು: ರಾಜಧಾನಿ ಬೆಂಗಳೂರು ದಿನೇ ದಿನೇ ತನ್ನ ಕಬಂಧ ಬಾಹುವನ್ನು ವಿಸ್ತರಿಸುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಇರುವ ಪ್ರಮುಖ ಬೇಡಿಕೆಯಾದ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರು ದಕ್ಷಿಣ ಭಾಗದಲ್ಲಿ ನಿರ್ಮಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರಿಗೆ ರಾಮನಗರ, ಮಂಡ್ಯ ಹಾಗೂ ಮೈಸೂರು ಭಾಗದ ಜನಪ್ರತನಿಧಿಗಳ ತಂಡವು ಮನವಿ ಮಾಡಿದೆ. ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರು ದಕ್ಷಿಣ ಭಾಗದಲ್ಲಿ ನಿರ್ಮಿಸಿದರೆ ಈ ಭಾಗದ ಜನತೆಗೆ ಅನುಕೂಲವಾಗುವುದರ ಜೊತೆಗೆ ಬೆಂಗಳೂರು ದಕ್ಷಿಣ ಭಾಗವೂ ವಾಣಿಜ್ಯ ಚಟುವಟಿಕೆಗಳ ತಾಣವಾಗಿ ಮಾರ್ಪಾಡಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ . ರಾಮನಗರ ಶಾಸಕರಾದ ಎಚ್.ಎ.ಇಕ್ಬಾಲ್ ಹುಸೇನ್, ಮಾಗಡಿ ಶಾಸಕರಾದ ಎಚ್.ಸಿ.ಬಾಲಕೃಷ್ಣ, ಮಳವಳ್ಳಿ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ಶ್ರೀರಂಗಪಟ್ಟಣ ಶಾಸಕರಾದ ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ಮದ್ದೂರು ಶಾಸಕರಾದ ಕೆ.ಎಂ. ಉದಯ್,…