Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದ ಹಿರಿಯ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದಂತ ಖ್ಯಾತ ಹಿರಿಯ ಪತ್ರಕರ್ತ ಆರ್.ಕೃಷ್ಣಪ್ಪ ಅವರು ಇಂದು ವಿಧಿವಶರಾಗಿದ್ದಾರೆ. ಪ್ರಜಾವಾಣಿಯ ಹಿರಿಯ ಪತ್ರಕರ್ತರಾಗಿದ್ದ ಆರ್ ಕೃಷ್ಣಪ್ಪ (75) ಇಂದು ನಿಧನ ರಾದರು. ಪತ್ನಿ ಒಬ್ಬ ಪುತ್ರನನ್ನು ಅಗಲಿದ್ದಾರೆ. ಪ್ರಜಾವಾಣಿಯಲ್ಲಿ ಹಿರಿಯ ಉಪ ಸಂಪಾದಕರಾಗಿ ನಿವೃತ್ತರಾಗಿದ್ದರು. ಪತ್ರಕರ್ತ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಆರ್ ಕೃಷ್ಣಪ್ಪ ಕರ್ನಾಟಕ ಪತ್ರಕರ್ತರ ಸಹಕಾರ ಸಂಘ, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಹಿರಿಯ ಪತ್ರಕರ್ತರ ವೇದಿಕೆಯ ಅಧ್ಯಕ್ಷರಾಗಿದ್ದರು. https://kannadanewsnow.com/kannada/man-killed-behind-freedom-park-in-heart-of-bengaluru/ https://kannadanewsnow.com/kannada/organ-donors-to-be-honoured-with-certificates-of-appreciation-on-independence-day-republic-day/
ಬೆಂಗಳೂರು: ನಗರದ ಹೃದಯ ಭಾಗದಲ್ಲೇ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ಹಿಂಭಾಗದ ಕಸ ವಿಲೇವಾರಿ ಘಟಕದ ಬಳಿಯಲ್ಲೇ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ಹಿಂಭಾಗದಲ್ಲಿ ಗಾಂಧಿನಗರಕ್ಕೆ ಹತ್ತಿರವಾಗಿರುವಂತ ಮುಖ್ಯ ರಸ್ತೆಯಲ್ಲಿ ಕಸವಿಲೇವಾರಿ ಘಟಕವಿದೆ. ಅಲ್ಲಿ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿ ಭೀಕರವಾಗಿ ಮರ್ಡರ್ ಮಾಡಿರುವುದಾಗಿ ತಿಳಿದು ಬಂದಿದೆ. ವಿಕ್ಕಿ ಎಂಬಾತನನ್ನು ಫ್ರೀಡಂ ಪಾರ್ಕ್ ಹಿಂಭಾಗದಲ್ಲಿನ ಕಸ ವಿಲೇವಾರಿ ಘಟಕದ ಬಳಿಯಲ್ಲಿ ಹಲ್ಲೆ ಮಾಡಿ ಹತ್ಯೆಗೈದಿರುವಂತ ದುಷ್ಕರ್ಮಿಗಳು, ಅಲ್ಲಿಂದ ಪರಾರಿಯಾಗಿರುವುದಾಗಿ ಹೇಳಲಾಗುತ್ತಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಉಪ್ಪಾರಪೇಟೆ ಠಾಣೆಯ ಪೊಲೀಸರು ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ ವಿಕ್ಕಿ ಎಂಬಾತನ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. https://kannadanewsnow.com/kannada/good-news-for-bpl-card-applicants-1-73-lakh-ration-cards-to-be-issued-soon/ https://kannadanewsnow.com/kannada/organ-donors-to-be-honoured-with-certificates-of-appreciation-on-independence-day-republic-day/
ಲಕ್ಷ್ಮೀದೇವಿ ಚಂಚಲ ಎಂದು ನಾವು ನೀವು ಎಲ್ಲರೂ ಒಪ್ಪಿಕೊಳ್ಳಬೇಕಾಗುತ್ತದೆ ಯಾಕೆಂದರೆ ಲಕ್ಷ್ಮಿದೇವಿ ಯಾವತ್ತೂ ಕೂಡ ಒಂದೇ ಕಡೆ ಇರುವುದಕ್ಕೆ ಇಷ್ಟಪಡುವುದಿಲ್ಲ. ಲಕ್ಷ್ಮೀದೇವಿಯನ್ನು ಯಾರು ಭಕ್ತಿಯಿಂದ ಪೂಜೆ ಮಾಡುತ್ತಾರೆ, ಕೆಲಸಕಾರ್ಯಗಳಲ್ಲಿ ನಿಯತ್ತಿನಿಂದ ಯಾರು ಇರುತ್ತಾರೆ ಅವರ ಮನೆಯಲ್ಲಿ ಸದಾಕಾಲ ನೆಲೆಸುತ್ತಾಳೆ ಲಕ್ಷ್ಮಿ ಎಂದು ಹೇಳಲಾಗುತ್ತದೆ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564. ಲಕ್ಷ್ಮೀದೇವಿ ಒಲಿಯುವ…
ಬೆಂಗಳೂರು: ರಾಜ್ಯದ ಲಕ್ಷಾಂತರ ಮಂದಿ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿ ಯಾವಾಗ ನೀಡುತ್ತಾರೆ ಅಂತ ಕಾಯುತ್ತಿದ್ದಾರೆ. ಇಂತವರಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ 1.73 ಲಕ್ಷ BPL ರೇಷನ್ ಕಾರ್ಡ್ ವಿತರಣೆ ಮಾಡುವುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ ಕಲಾಪದಲ್ಲಿ ಸದಸ್ಯರೊಬ್ಬರು ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, ಹಿಂದಿನ ಸರ್ಕಾರ ಚುನಾವಣೆಗೆ ಮೊದಲು 2.95 ಲಕ್ಷ ಕಾರ್ಡ್ ಗಳನ್ನು ವಿತರಿಸುವುದು ಬಾಕಿ ಇತ್ತು. ಇವುಗಳನ್ನು ಪರಿಶೀಲಿಸಿ ಸುಮಾರು 2 ಲಕ್ಷ 65 ಸಾವಿರ ಕಾರ್ಡ್ ಗಳನ್ನು ಅರ್ಹತೆಯನ್ನು ಪಡೆದಿದ್ದಾವೆ. ಬಿಪಿಎಲ್ ಒಳಗಡೆ ಬರುತ್ತಾವೆ. 56,930 ಕಾರ್ಡ್ ಬಿಪಿಎಲ್ ಕಾರ್ಡ್ ಕೆಳಗಡೆ ಬರುವುದಿಲ್ಲ. 2 ಲಕ್ಷದ 36 ಸಾವಿರ 152 ಕಾರ್ಡ್ ನಲ್ಲಿ 62 ಸಾವಿರ ಕಾರ್ಡ್ ಗಳನ್ನು ಈಗಾಗಲೇ ಪಟ್ಟಿಗೆ ತಂದು ಪಡಿತರ ಹೆಸರಿನ ಪಟ್ಟಿಯಲ್ಲಿ ದವಸ ಧಾನ್ಯಗಳನ್ನು ಕೊಡುವ ವ್ಯವಸ್ಥೆಯಾಗಿದೆ. ರಾಜ್ಯದಲ್ಲಿ 1.73 ಲಕ್ಷ ಕಾರ್ಡ್ ಗಳನ್ನು ವಿತರಣೆ ಮಾಡುವುದು ಬಾಕಿ ಇದೆ. ಅವುಗಳನ್ನು ವಿತರಣೆ…
ಬೆಂಗಳೂರು : “ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ ರಾಷ್ಟ್ರೀಯ ಬ್ಯಾಂಕುಗಳು ಭಾಗಿಯಾಗಿದ್ದರೆ, ಅದಕ್ಕೆ ದೆಹಲಿಯ ಕೇಂದ್ರ ಸಚಿವರು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲು ಸಾಧ್ಯವೇ? ಅಧಿಕಾರಿಗಳು ಮಾಡುವ ಅಕ್ರಮಕ್ಕೆ ಸಚಿವರನ್ನು ತಪ್ಪಿತಸ್ಥರನ್ನಾಗಿ ಮಾಡಲು ಸಾಧ್ಯವೇ?” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪರಿಷತ್ ಸದಸ್ಯ ಸಿ.ಟಿ. ರವಿ ಅವರಿಗೆ ತಿರುಗೇಟು ನೀಡಿದರು. ವಿಧಾನ ಪರಿಷತ್ ನಲ್ಲಿ ಮಂಗಳವಾರ ನಡೆದ ಕಲಾಪದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ಸಿ.ಟಿ.ರವಿ ಅವರು, “ವಾಲ್ಮೀಕಿ ನಿಗಮದ ಹಗರಣ ಪೂರ್ವನಿಯೋಜಿತವಾಗಿದ್ದು, ಮೊದಲೇ ಇ ಸ್ಟಾಂಪ್ ಪೇಪರ್ ಖರೀದಿ ಮಾಡಿ, ಒಂದೇ ದಿನದಲ್ಲಿ ಸಾಲಕ್ಕೆ ಅರ್ಜಿ ಹಾಕಿ, ಸೆಕ್ಯುರಿಟಿ ಓವರ್ ಡ್ರಾಫ್ಟ್ ತೆಗೆದುಕೊಂಡು ಹಣ ಪಡೆಯಲಾಗಿದೆ” ಎಂಬ ವಿಚಾರ ಪ್ರಸ್ತಾಪಿಸಿದರು. ಇದಕ್ಕೆ ಪ್ರತ್ಯುತ್ತರ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಸಿ.ಟಿ ರವಿ ಅವರು ಅಕ್ರಮದ ಬಗ್ಗೆ ಮಾತನಾಡುತ್ತಾ ಅಕ್ರಮ ಮಾಡಿದವರ ಒಂದು ಕೂಟ ಇದೆ ಎಂದೆಲ್ಲಾ ಪ್ರಸ್ತಾಪ ಮಾಡಿದ್ದಾರೆ. ಬ್ಯಾಂಕಿನಲ್ಲಿ ಆಗಿರುವ ಅಕ್ರಮದ…
ಬೆಂಗಳೂರು: ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವಂತ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡೋದಕ್ಕೆ ಸರ್ಕಾರ ಮುಂದಾಗಿದೆ. 7500 ಪ್ರಾಥಮಿಕ, 2500 ಪ್ರೌಢಶಾಲಾ ಶಿಕ್ಷಕರ ನೇಮಕಕ್ಕೆ ಕ್ರಮ ವಹಿಸಲಾಗಿದೆ ಅಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಅವರು ವಿಧಾನಪರಿಷತ್ತಿನಲ್ಲಿ ಸದಸ್ಯರೊಬ್ಬರು ಕೇಳಿದಂತ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. 12000 ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಿಕೊಳ್ಳಲಾಗಿದೆ. ಶಿಕ್ಷಕರ ವರ್ಗಾವಣೆ ಮಾಡಿದ ನಂತ್ರ, ಶಿಕ್ಷಕರ ಕೊರತೆ ಎದುರಾಗಿದೆ. ನಾವು ಅತೀ ಹೆಚ್ಚು ಕಲ್ಯಾಣ ಕರ್ನಾಟಕ ಭಾಗಕ್ಕೆ ಶಿಕ್ಷಕರನ್ನು ಕೊಟ್ಟಿದ್ದೇವೆ. 10000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. 6500 ಶಿಕ್ಷಕರನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ಕೊಡಲಾಗುತ್ತದೆ ಎಂದರು. 52000 ಶಿಕ್ಷಕರ ಕೊರತೆ ಇದೆ. ಇದನ್ನು ನೀಗಿಸಲು ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಯಾದಗಿರಿ, ರಾಯಚೂರು, ಗುಲ್ಪರ್ಗ ಜಿಲ್ಲೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಶೀಘ್ರದಲ್ಲೇ 7,500 ಪ್ರಾಥಮಿಕ, 2,500 ಪ್ರೌಢಶಾಲೆ ಶಿಕ್ಷಕರು ಸೇರಿದಂತೆ ಒಟ್ಟು 10,000 ಶಿಕ್ಷಕರ ನೇಮಕ ಮಾಡಲಾಗುವುದು ಎಂದು…
ಶಿವಮೊಗ್ಗ: ಜುಲೈ.13ರಂದು ರಾಜ್ಯಾಧ್ಯಂತ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಿತು. ಅದರಂತೆ ಶಿವಮೊಗ್ಗದಲ್ಲೂ ನಡೆದಂತ ಲೋಕ್ ಅದಾಲತ್ ನಲ್ಲಿ 12,548 ಪ್ರಕರಣಗಳಲ್ಲಿ ಸಂಧಾನ ಪ್ರಕ್ರಿಯೆ ನಡೆದ್ರೇ, 6 ದಂಪತಿಗಳು ಡೈವೋರ್ಸ್ ಅರ್ಜಿಯನ್ನು ಹಿಂಪಡೆದು ಮತ್ತೆ ಹೊಂದಾಗಿದ್ದಾರೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 13.07.2024 ಶನಿವಾರದಂದು ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆಯ ಹಂತದಲ್ಲಿ ಬಾಕಿ ಇದ್ದ ವಿವಿಧ ಸ್ವರೂಪದ 12,548 ಪ್ರಕರಣಗಳನ್ನು ಹಾಗೂ 1,15,002 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಒಟ್ಟು 1,27,550 ರಾಜಿ ಸಂಧಾನ ಮಾಡಿಸುವ ಮೂಲಕ ಇತ್ಯರ್ಥಪಡಿಸಲಾಯಿತು. ಅವುಗಳ ಪೈಕಿ 06 ದಂಪತಿಗಳು ತಮ್ಮ ಪ್ರಕರಣವನ್ನು ಹಿಂಪಡೆದು ಒಟ್ಟಾಗಿ ಜೀವನ ನಡೆಸುವಂತೆ ರಾಜಿ ಮಾಡಿಕೊಂಡಿದ್ದು ವಿಶೇಷವಾಗಿದ್ದು, ಜಿಲ್ಲೆಯಲ್ಲಿ ಒಟ್ಟಾರೆ ಹತ್ತು ವರ್ಷಕ್ಕಿಂತ ಹಳೆಯದಾದ 07 ಪ್ರಕರಣಗಳು, ಎಂಟು ವರ್ಷಕ್ಕಿಂತ ಹಳೆಯದಾದ 08 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಂಡಿವೆ ಅಂತ ತಿಳಿಸಿದೆ. ಈ ಪ್ರಕರಣಗಳನ್ನು…
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 487 ಮಂದಿಗೆ ಡೆಂಗ್ಯೂ ಪಾಸಿಟಿವ್ ಅಂತ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಹೀಗಾಗಿ ಡೆಂಗ್ಯೂ ಪಾಸಿಟಿವ್ ಸಂಖ್ಯೆ 10 ಗಡಿದಾಟಿದೆ. ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 4,572 ಮಂದಿ ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಗಾಗಿದ್ದಾರೆ. ಇವರಲ್ಲಿ 487 ಜನರಿಗೆ ಡೆಂಗ್ಯೂ ಪಾಸಿಟಿವ್ ಅಂತ ವರದಿಯ ಪರೀಕ್ಷೆಯಿಂದ ತಿಳಿದು ಬಂದಿರುವುದಾಗಿ ಹೇಳಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 283, ಬೆಂಗಳೂರು ನಗರದಲ್ಲಿ ಐವರು, ಬೆಂಗಳೂರು ಗ್ರಾಮಾಂತರದಲ್ಲಿ ಮೂವರು, ರಾಮನಗರ 1, ಕೋಲಾರ 3, ತುಮಕೂರು 18, ಚಿತ್ರದುರ್ಗ 10, ದಾವಣಗೆರೆ 12, ಶಿವಮೊಗ್ಗ 9, ವಿಜಯಪುರ 2, ಧಾರವಾಡ 17 ಜನರಿಗೆ ಡೆಂಗ್ಯೂ ದೃಢಪಟ್ಟಿದೆ. ಹಾವೇರಿ 12, ಉತ್ತರ ಕನ್ನಡ 5, ಕಲಬುರ್ಗಿ 12, ಬೀದರ್ 3, ವಿಜಯನಗರ 5, ಕೊಪ್ಪಳ 3, ಮೈಸೂರು 4, ಚಾಮರಾಜನಗರ 3, ಮಂಡ್ಯ 6, ಹಾಸನ 26, ಉಡುಪಿ 12 ಸೇರಿದಂತೆ 487…
ಬೆಂಗಳೂರು: ಬೆಸ್ಕಾಂನಿಂದ ವಿದ್ಯುತ್ ಗ್ರಾಹಕರ ಸಮಸ್ಯೆ ಸರಿ ಪಡಿಸೋ ಸಂಬಂಧ ಇದೇ ಜುಲೈ.20ರಂದು ಬೆಸ್ಕಾಂ ಗ್ರಾಹಕರ ಸಭೆಯನ್ನು ನಿಗದಿ ಪಡಿಸಲಾಗಿದೆ. ಆಯಾ ಬೆಸ್ಕಾಂ ವ್ಯಾಪ್ತಿಯ ಕಚೇರಿಗಳಲ್ಲಿ ಗ್ರಾಹಕರ ಸಭೆ ನಡೆಯಲಿದ್ದು, ಗ್ರಾಹಕರು ನಿಮ್ಮ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರವನ್ನು ಪಡೆಯಬಹುದಾಗಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ಹಂಚಿಕೊಂಡಿದ್ದು, ಬೆಸ್ಕಾಂ ಎಲ್ಲಾ ಕಾರ್ಯ ಮತ್ತು ಪಾಲನಾ ಉಪ ವಿಭಾಗಗಳಲ್ಲಿ ಪ್ರತಿ ತಿಂಗಳು 3ನೇ ಶನಿವಾರದಂದು ಮಧ್ಯಾಹ್ನ 3 ಗಂಟೆಯಿಂದ 5.30ರವರೆಗೆ ಗ್ರಾಹಕರ ಸಂವಾದ ಸಭೆಯನ್ನು ನಿಗದಿ ಪಡಿಸಲಾಗಿದೆ ಅಂತ ತಿಳಿಸಿದೆ. ಈ ಗ್ರಾಹಕರ ಸಂವಾದ ಸಭೆಗಳಲ್ಲಿ ಗ್ರಾಹಕ ಬಾಂಧವರು ಪಾಲ್ಗೊಂಡು, ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬೆಸ್ಕಾಂ ಅಧಿಕಾರಿಗಳೊಂದಿಗೆ ಮುಖಾಮುಖಿ ಚರ್ಚಿಸಿ, ಪರಿಹರಿಸಿಕೊಳ್ಳುವಂತೆ ಮನವಿ ಮಾಡಿದೆ. ಅಂದಹಾಗೆ ಜುಲೈ.20ರಂದು ಬೆಸ್ಕಾಂ ವ್ಯಾಪ್ತಿಯ ಎಲ್ಲಾ ಕಾರ್ಯ ಮತ್ತು ಪಾಲನಾ ಉಪ ವಿಭಾಗಗಳಲ್ಲಿ ಗ್ರಾಹಕರ ಸಂವಾದ ಸಭೆ ನಡೆಯಲಿದೆ. ಅಂದು ಭಾಗಿಯಾಗಿ, ಬೆಸ್ಕಾಂ ವಿದ್ಯುತ್ ಗ್ರಾಹಕರು ತಮ್ಮ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರವನ್ನು ಪಡೆಯಬಹುದಾಗಿದೆ. https://kannadanewsnow.com/kannada/are-you-a-sslc-pass-apply-for-2000-vacancies-in-this-railways/ https://kannadanewsnow.com/kannada/organ-donors-to-be-honoured-with-certificates-of-appreciation-on-independence-day-republic-day/
ಬೆಂಗಳೂರು: ರಾಜ್ಯ ಸರಕಾರದ ಕೆಲವರ ಬೆದರಿಕೆ ಮತ್ತು ಒತ್ತಡವೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರ ಆತ್ಮಹತ್ಯೆಗೆ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷರೂ ಆದ ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು. ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, ದಲಿತರ ಅಭಿವೃದ್ಧಿಗೆ ಮೀಸಲಿಟ್ಟ 187 ಕೋಟಿಯನ್ನು ಹಗರಣಕ್ಕೆ ಬಳಸಿಕೊಂಡಿದ್ದಾರೆ. ಹಣವನ್ನು ಹೊರರಾಜ್ಯಕ್ಕೆ ಕಳುಹಿಸುವ ಕೆಲಸ ಮಾಡಿದ್ದಾರೆ. ಇದು ಕೇವಲ ಹಗರಣವಲ್ಲ; ಇದು ಅಕ್ಷಮ್ಯ ಅಪರಾಧ ಎಂದು ಸಭಾಧ್ಯಕ್ಷರ ಗಮನಕ್ಕೆ ತಂದರು. ಅಲ್ಲದೆ, ಮಾನ್ಯ ಮುಖ್ಯಮಂತ್ರಿಗಳು ಹಣಕಾಸಿನ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಮಾನ್ಯ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆಂದು ರಾಜ್ಯದ ಜನರ ಪರವಾಗಿ ಒತ್ತಾಯವನ್ನು ಸದನದ ಮುಂದಿಟ್ಟರು. ಯಾರೋ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡರೆ ನಾನು ರಾಜೀನಾಮೆ ಕೊಡಬೇಕಾ ಎಂದು ಆಗ ಸಚಿವರೂ ಹೇಳಿಕೆ ನೀಡಿದ್ದರು. ಇನ್ನೊಂದೆಡೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಕೇವಲ ಅಧಿಕಾರಿಗಳು ಮಾತ್ರ ಒಳಗೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿಗಳೂ ಹೇಳಿಕೆ ನೀಡಿದ್ದರು ಎಂದು ಆಕ್ಷೇಪಿಸಿದರು.…