Author: kannadanewsnow09

ಬೆಂಗಳೂರು: ಬಿಎಂಟಿಸಿ ನಿರ್ವಾಹಕನ ಜೊತೆಗೆ ಪ್ರಯಾಣಿಕರ ಕಿರಿಕ್ ಮುಂದುವರೆದಿದೆ. ಪಾಸ್ ತೋರಿಸು ಎಂದು ಕೇಳಿದ್ದಕ್ಕೆ ಸಿಟ್ಟಾದಂತ ಪ್ರಯಾಣಿಕನೊಬ್ಬ ನಿರ್ವಾಹಕನಿಗೆ ಅವಾಜ್ ಹಾಕಿರುವಂತ ಘಟನೆ ನಡೆದಿದೆ. ಬೆಂಗಳೂರಲ್ಲಿ ಬಿಎಂಟಿಸಿ ಕಂಡಕ್ಟರ್ ಮೇಲೆ ಹಲ್ಲೆ, ಅವಾಜ್ ಹಾಕೋದು, ನಿಂದಿಸೋದು ಮುಂದುವರೆದಿದೆ. ಇಂದು ಬಿಎಂಟಿಸಿ ಬಸ್ಸಿನಲ್ಲಿ ವ್ಯಕ್ತಿಯೊಬ್ಬರಿಗೆ ಪಾಸ್ ತೋರಿಸಿ ಎಂದಿದ್ದಕ್ಕೆ ನಿರ್ವಾಹಕನಿಗೆ ಅವಾಜ್ ಹಾಕಿ, ನಿಂದಿಸಿರುವುದಾಗಿ ತಿಳಿದು ಬಂದಿದೆ. ಹಲವು ಬಾರಿ ಪಾಸ್ ತೋರಿಸುವಂತೆ ಕೇಳಿದರೂ ಬಿಎಂಟಿಸಿ ನಿರ್ವಾಹಕನಿಗೆ ಪ್ರಯಾಣಿಕ ತೋರಿಸಿರಲಿಲ್ಲ. ಹೀಗಾಗಿ ಪಾಸ್ ತೋರಿಸು ಅಂತ ಕೇಳಿದ್ದಕ್ಕೆ ಅವಾಜ್ ಹಾಕಿದ್ದಾನೆ. ಈ ವೇಳೆ ಸಹ ಪ್ರಯಾಣಿಕನೊಬ್ಬ ಪ್ರಶ್ನಿಸಿದ್ದಕ್ಕೆ ಆತನಿಗೂ ಅವಾಜ್ ಹಾಕಿದ್ದಾರೆ. ಬಿಎಂಟಿಸಿ ಬಸ್ಸಿನಲ್ಲಿ ವ್ಯಕ್ತಿ ಅವಾಜ್ ಹಾಕಿದ್ದಲ್ಲದೇ ಹಲ್ಲೆಗೂ ಮುಂದಾಗಿದ್ದರು ಎಂಬುದಾಗಿ ಹೇಳಲಾಗುತ್ತಿದೆ. ಈ ದೃಶ್ಯಾವಳಿಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದ್ದಾವೆ. https://kannadanewsnow.com/kannada/two-killed-on-the-spot-two-others-escaped-unhurt-after-car-fell-into-a-lake-in-chitradurga/ https://kannadanewsnow.com/kannada/conrad-sangma-led-npp-withdraws-support-to-manipur-government/

Read More

ಚಿತ್ರದುರ್ಗ: ಇಲ್ಲಿನ ಬೊಮ್ಮನಕಟ್ಟೆ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಬಿದ್ದ ಪರಿಣಾಮ ಇಬ್ಬರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ರೇ, ಮತ್ತಿಬ್ಬರು ಪ್ರಾಣಾಪಾಯದಿಂದ ಪಾರಾಗಿರುವಂತ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಬಳಿಯ ಬೊಮ್ಮನಕಟ್ಟೆ ಬಳಿಯಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ಶಿವಗಂಗಾದ ಅತ್ತೆ ರತ್ನಮ್ಮ ಹಾಗೂ ಸೊಸೆ ಅನಿತಾ ಎಂಬುದಾಗಿ ಗುರುತಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಶಿವಗಂಗಾದವರು ಇವರೆಂಬುದು ತಿಳಿದು ಬಂದಿದೆ. ಮಂಜುನಾಥ್ ಹಾಗೂ ಮಂಜಮ್ಮ ಎಂಬುವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿ ಹೊಸದುರ್ಗದಿಂದ ಹೊಳಲ್ಕೆರೆಗೆ ತೆರಳುತ್ತಿದ್ದಂತ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಈ ಸಂಬಂಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/muda-site-allotment-case-lokayukta-issues-notice-to-former-commissioner-d-b-natesh/ https://kannadanewsnow.com/kannada/conrad-sangma-led-npp-withdraws-support-to-manipur-government/

Read More

ನವದೆಹಲಿ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಭುಗಿಲೆದ್ದಿರುವ ಹಿಂಸಾಚಾರದ ಮಧ್ಯೆ, ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್ಪಿಪಿ) ಭಾನುವಾರ ಎನ್ ಬಿರೇನ್ ಸಿಂಗ್ ನೇತೃತ್ವದ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಹಿಂತೆಗೆದುಕೊಂಡಿದೆ. ಈಶಾನ್ಯ ರಾಜ್ಯದಲ್ಲಿ ಹೊಸ ಸುತ್ತಿನ ಹಿಂಸಾಚಾರದ ಮಧ್ಯೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಿತ್ರ ಪಕ್ಷವಾದ ಕಾನ್ರಾಡ್ ಸಂಗ್ಮಾ ಅವರ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್ಪಿಪಿ) ಮಣಿಪುರದ ಬಿರೇನ್ ಸಿಂಗ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿದೆ. 60 ಸದಸ್ಯರ ವಿಧಾನಸಭೆಯಲ್ಲಿ ಎನ್ಪಿಪಿ ಏಳು ಶಾಸಕರನ್ನು ಹೊಂದಿದೆ. ಕಳೆದ ವರ್ಷ ಮೇ ತಿಂಗಳಿನಿಂದ ಜನಾಂಗೀಯ ಕಲಹದಿಂದ ತತ್ತರಿಸುತ್ತಿರುವ ಮಣಿಪುರದಲ್ಲಿ ಮಹಿಳೆಯರು ಮತ್ತು ಮಕ್ಕಳ ಶವಗಳು ಪತ್ತೆಯಾದ ನಂತರ ಪ್ರತಿಭಟನೆಗಳು ಮತ್ತು ಹಿಂಸಾಚಾರದ ನಂತರ ಪರಿಸ್ಥಿತಿ ಅಸ್ಥಿರವಾಗುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. https://twitter.com/ANI/status/1858143877703794758 https://kannadanewsnow.com/kannada/more-than-30-injured-in-bull-taming-competition-in-haveri-one-injured/ https://kannadanewsnow.com/kannada/muda-site-allotment-case-lokayukta-issues-notice-to-former-commissioner-d-b-natesh/

Read More

ಹಾವೇರಿ: ಜಿಲ್ಲೆಯಲ್ಲಿ ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಓರಿ ತಿವಿದು 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವಂತ ಘಟನೆ ನಡೆದಿದೆ. ಅದರಲ್ಲೂ ಓರ್ವನಿಗೆ ಕಣ್ಣೇ ಕಿತ್ತುಬಂದು ಗಂಭೀರ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಹಾವೇರಿ ಜಿಲ್ಲೆಯ ನಾಗೇಂದ್ರಮಟ್ಟಿಯಲ್ಲಿ ಇಂದು ರಾಜ್ಯಮಟ್ಟದ ಹೋರಿ ಬೆದರಿಸುವಂತ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಹೋರಿ ಹಿಡಿಯೋದಕ್ಕೆ ಸ್ಪರ್ಧಿಗಳು ಆಗಮಿಸಿ ಭಾಗವಹಿಸಿದ್ದರು. ಇಂದು ನಡೆದಂತ ಹೋರಿ ಬೆದರಿಸುವಂತ ಸ್ಪರ್ಧೆಯಲ್ಲಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹೋರಿಯೊಂದು ಕೊಂಬಿನಲ್ಲಿ ವ್ಯಕ್ತಿಯೊಬ್ಬರಿಗೆ ತಿವಿದ ಪರಿಣಾಮ ಓರ್ವನ ಕಣ್ಣಿನ ಗುಡ್ಡೆಯೇ ಕಿತ್ತುಬಂದಿರುವುದಾಗಿ ಹೇಳಲಾಗುತ್ತಿದೆ. ಗಾಯಾಳುಗಳು ವಿವಿಧ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. https://kannadanewsnow.com/kannada/muda-site-allotment-case-lokayukta-issues-notice-to-former-commissioner-d-b-natesh/ https://kannadanewsnow.com/kannada/are-you-expecting-to-get-drone-training-heres-a-golden-opportunity/

Read More

ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ಡಿ.ಬಿ.ನಟೇಶ್ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಅವರಿಗೆ ಶನಿವಾರ ನೋಟಿಸ್ ನೀಡಲಾಗಿದ್ದು, ಮಂಗಳವಾರ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ. ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಸೆಪ್ಟೆಂಬರ್ 27ರಂದು ದಾಖಲಾದ ಎಫ್ಐಆರ್ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಮೈಸೂರು ಮೂಲದ ಆರ್ಟಿಐ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ತನಿಖೆ ನಡೆಸುವಂತೆ ಬೆಂಗಳೂರಿನ ವಿಶೇಷ ನ್ಯಾಯಾಲಯವು ಸೆಪ್ಟೆಂಬರ್ 25 ರಂದು ಮೈಸೂರಿನ ನ್ಯಾಯವ್ಯಾಪ್ತಿಯ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿತ್ತು. https://kannadanewsnow.com/kannada/pushpa-2-trailer-released/ https://kannadanewsnow.com/kannada/are-you-expecting-to-get-drone-training-heres-a-golden-opportunity/

Read More

ಬೆಂಗಳೂರು: 2024-25ನೇ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಅಲ್ಪಸಂಖ್ಯಾತರ ಸಮುದಾಯದ ಯುವಕ, ಯುವತಿಯರಿಗೆ ರಿಮೋಟ್ ಪೈಲಟ್ ವಿಮಾನ (ಡ್ರೋನ್ ಆಪರೇಟರ್) ತರಬೇತಿಗಾಗಿ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿರುತ್ತದೆ. ಆಸಕ್ತರು ತರಬೇತಿಯನ್ನು ಪಡೆಯಲು ಡಿಸೆಂಬರ್ 5, 2024 ರೊಳಗಾಗಿ https://kmdconline.karnataka.gov.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 0836-2748226 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ [ನಿ] ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/pushpa-2-trailer-released/ https://kannadanewsnow.com/kannada/hd-kumaraswamy-assures-to-discuss-beml-outsourced-workers-issue-with-defence-minister/

Read More

‘ಪುಷ್ಪಾ 2: ದಿ ರೂಲ್’ ಚಿತ್ರದ ಟ್ರೈಲರ್ ಅನ್ನು ನವೆಂಬರ್ 17 ರಂದು ಬಿಹಾರದ ಪಾಟ್ನಾದಲ್ಲಿ ಬಿಡುಗಡೆ ಮಾಡಲಾಯಿತು. ಗ್ರ್ಯಾಂಡ್ ಟ್ರೈಲರ್ನಲ್ಲಿ ಅಲ್ಲು ಅರ್ಜುನ್ ಕೆಂಪು ಶ್ರೀಗಂಧದ ಕಳ್ಳಸಾಗಾಣಿಕೆದಾರನ ನಾಮಮಾತ್ರದ ಪಾತ್ರವನ್ನು ಪುನರಾವರ್ತಿಸಿದರೆ, ರಶ್ಮಿಕಾ ಅವರ ಪ್ರೇಮಿಯಾಗಿ ಕಾಣಿಸಿಕೊಂಡಿದ್ದಾರೆ. ಡ್ರಾಮಾ, ಮಿಸ್ಟರಿ, ಆಕ್ಷನ್, ಸಂಗೀತ, ಪ್ರಣಯ ಮತ್ತು ಸಂಸ್ಕೃತಿ ಹೀಗೆ ಎಲ್ಲದರ ಡೋಸ್ ನೊಂದಿಗೆ ಟ್ರೈಲರ್ ಭರವಸೆದಾಯಕವಾಗಿದೆ. ಮತ್ತೇನು? ಈ ಬಾರಿ ನಮಗೆ ದೊಡ್ಡ ಖಳನಾಯಕ ಸಿಗುತ್ತಾನೆ. ಪುಷ್ಪಾ: ದಿ ರೈಸ್ ಚಿತ್ರದಲ್ಲಿ ಕಡಿಮೆ ಸ್ಕ್ರೀನ್ ಟೈಮ್ ಹೊಂದಿದ್ದ ನಟ ಫಹಾದ್ ಫಾಸಿಲ್, ಪುಷ್ಪಾ: ದಿ ರೂಲ್ ಚಿತ್ರದಲ್ಲಿ ಬಲವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕನಿಷ್ಠ ಅದನ್ನೇ ಟ್ರೈಲರ್ ಸೂಚಿಸುತ್ತದೆ. ಅವರು ಕ್ರಿಯಾತ್ಮಕವಾಗಿ ಕಾಣುತ್ತಾರೆ, ಪುಷ್ಪಾ ಅವರ ಭಾಷಾವೈಶಿಷ್ಟ್ಯಗಳು ಮತ್ತು ಸ್ವಾಗ್ ಗೆ ಸಂಪೂರ್ಣವಾಗಿ ಹೊಂದಿಕೆಯಾಗುತ್ತಾರೆ. ಟ್ರೈಲರ್ ಶಿಳ್ಳೆ-ಯೋಗ್ಯ ಸಂಭಾಷಣೆಗಳಿಂದ ಕೂಡಿದೆ. ಇದರಲ್ಲಿ ಅಪ್ರತಿಮ ಸಂಭಾಷಣೆಯೂ ಸೇರಿದೆ, ಇದನ್ನು ಈಗ ಹೆಚ್ಚು ‘ಕಾಡು’ ಎಂದು ಧ್ವನಿಸಲು ಮಾರ್ಪಡಿಸಲಾಗಿದೆ. ಇದನ್ನು ಮಾದರಿಯಾಗಿ ತೆಗೆದುಕೊಳ್ಳಿ: “ಪುಷ್ಪಾ…

Read More

ಕೆಜಿಎಫ್/ಕೋಲಾರ: ಬಿಇಎಂಎಲ್ ಹೊರಗುತ್ತಿಗೆ ಕಾರ್ಮಿಕರ ಸಮಸ್ಯೆಗಳ ಬಗ್ಗೆ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟ ಭರವಸೆ ನೀಡಿದರು. ಕೆಜಿಎಫ್ ನಲ್ಲಿ ಕಳೆದ 13 ದಿನಗಳಿಂದ ಕಾರ್ಮಿಕರು ಧರಣಿ ನಡೆಸುತ್ತಿರುವ ಸ್ಥಳಕ್ಕೆ ಕೋಲಾರ ಸಂಸದ ಮಲ್ಲೇಶ್ ಬಾಬು, ಶಾಸಕರಾದ ವೆಂಕಟ ಶಿವಾರೆಡ್ಡಿ, ಸಮೃದ್ಧಿ ಮಂಜುನಾಥ್ ಅವರೊಂದಿಗೆ ಭೇಟಿ ನೀಡಿ ಮಾತುಕತೆ ನಡೆಸಿದರು ಸಚಿವರು. “ನಿಮ್ಮ ಬೇಡಿಕೆಗಳ ಬಗ್ಗೆ ಈಗಾಗಲೇ ಕಂಪನಿಯ ಸಿಎಂಡಿ (ಅಧ್ಯಕ್ಷ – ವ್ಯವಸ್ಥಾಪಕ ನಿರ್ದೇಶಕ) ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಅವರು ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ. ನಾನು ನಾಳೆ (ಸೋಮವಾರ) ಬೆಳಗ್ಗೆ ದೆಹಲಿಗೆ ತೆರಳುತ್ತಿದ್ದು, ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಹಾಗೂ ರಕ್ಷಣಾ ಸಚಿವಾಲಯದ ಕಾರ್ಯದರ್ಶಿ ಅವರನ್ನು ಭೇಟಿಯಾಗಿ ನಿಮ್ಮ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುತ್ತೇನೆ. ಸಿಂಗ್ ಅವರಿಗೆ ಕರ್ನಾಟಕದ ಬಗ್ಗೆ ವಿಶೇಷ ಕಾಳಜಿ ಇದ್ದು, ನಿಮ್ಮ ಸಮಸ್ಯೆಗಳಿಗೆ ಅವರು ಖಂಡಿತಾ ಸಕಾರಾತ್ಮಕವಾಗಿ…

Read More

ಶಿವಮೊಗ್ಗ: ಸಾಗರ ನಗರದಲ್ಲಿ ಅಕ್ಷಯಸಾಗರ ಸೌಹಾರ್ದ ಸಹಕಾರಿ ಸಂಘದ ನೂತನ ಅಕ್ಷಯಸಾಗರ ಬೆಳ್ಳಿ ಭವನವನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಲೋಕಾರ್ಪಣೆಗೊಳಿಸಿದರು. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ವಿನೋಬನಗರ, ಸಣ್ಣಮನೆ ಬಡಾವಣೆಯಲ್ಲಿ ಅಕ್ಷಯಸಾಗರ ಸೌಹಾರ್ದ ಸಹಕಾರಿ ಸಂಘದ ನೂತನ ಅಕ್ಷಯಸಾಗರ ಬೆಳ್ಳಿ ಭವನವನ್ನು ನಿರ್ಮಿಸಲಾಗಿತ್ತು. ಇಂತಹ ನೂತನ ಭವನವನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಿಬ್ಬನ್ ಕಟ್ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು. ಅಲ್ಲದೇ ಕಟ್ಟಡದ ಒಳಗೆ ತೆರಳಿ, ಇರಿಸಲಾಗಿದ್ದಂತ ದೇವರ ಪೋಟೋಗಳಿಗೆ ಪುಷ್ಪಾರ್ಚನೆ ಮಾಡಿದರು. ಈ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ನಾನು ಶಿಕಾರಿಪುರದಲ್ಲಿ ವೀರಶೈವ ಸಹಾಕರ ಸಂಘದ ಅಧ್ಯಕ್ಷನಾಗುವ ಮೂಲಕ ಸಹಕಾರಿ ಕ್ಷೇತ್ರಕ್ಕೆ ಕಾಲಿಟ್ಟಿದ್ದೆ. ಇದು ಹೇಳಲು ನನಗೆ ಹೆಮ್ಮೆ ಎನಿಸುತ್ತದೆ. ರಾಜ್ಯದಲ್ಲಿ 1905ರಲ್ಲಿ ಸಹಕಾರ ಚಳುವಳಿ ಪ್ರಾರಂಭವಾಯಿತು. ಸಹಕಾರಿ ಕ್ಷೇತ್ರ ಜಾತಿ, ಮತ, ಪಂಥಗಳನ್ನು ಮೀರಿದ್ದಾಗಿದೆ. ಕರ್ನಾಟಕದಲ್ಲಿ ಸಹಕಾರಿ ಕ್ಷೇತ್ರವು ಇಷ್ಟು ವಿಸ್ತಾರವಾಗಿ ಬೆಳೆದಿದೆ ಎಂಬುದನ್ನು ಕಂಡರೆ ಸಂತೋಷವಾಗುತ್ತದೆ ಎಂದರು. ಸ್ಥಳೀಯವಾಗಿ ಹೆಚ್ಚು…

Read More

ಉಡುಪಿ: ಸ್ವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಟೈಲರಿಂಗ್ ಸೇರಿದಂತೆ ವಿವಿಧ ಉಚಿತ ತರಬೇತಿಗೆ ಅರ್ಜಿಯನ್ನು ಬ್ರಹ್ಮಾವರದಲ್ಲಿರುವಂತ ರುಡ್ ಸೆಟ್ ಸಂಸ್ಥೆಯಿಂದ ಆಹ್ವಾನಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಸಂಸ್ಥೆಯು, ಉಡುಪಿಯ ಬ್ರಹ್ಮಾವರ ಬಳಿಯಲ್ಲಿರುವಂತ ರುಡ್ ಸೆಟ್ ಸಂಸ್ಥೆಯಿಂದ ಮಹಿಳಾ 30 ದಿನಗಳ ಟೈಲರಿಂಗ್ ತರಬೇತಿಯನ್ನು ದಿನಾಂಕ 25.11.2024 ರಿಂದ 24.12.2024ರವರೆಗೆ ಆಯೋಜಿಸಲಾಗಿದೆ ಎಂದಿದೆ. ಇದಲ್ಲದೇ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಆಯೋಜಿಸಲಾಗಿದೆ. ಆ ತರಬೇತಿಯು ದಿನಾಂಕ 15.12.2024 ರಿಂದ 24.12.24ರ ವರೆಗೆ (10ದಿನ) ನಡೆಯುತ್ತದೆ ಎಂದು ಮಾಹಿತಿ ನೀಡಿದೆ. ತರಬೇತಿಯ ಅವಧಿಯಲ್ಲಿ ವಸತಿ, ಊಟ, ತರಬೇತಿ ಉಚಿತವಾಗಿರುತ್ತದೆ. ಆಸಕ್ತ 18-45 ವರ್ಷದ ಒಳಗಿನವರು ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದಿದೆ. ಆಸಕ್ತರು  https://forms.gle/ks4rqz9kFq89FKKPA ಕ್ಲಿಕ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು. ಈ ಸಂಬಂಧದ ಹೆಚ್ಚಿನ ಮಾಹಿತಿಗಾಗಿ 9844086383, 7022560492 ಸಂಖ್ಯೆಗಳಿಗೆ ಕರೆಮಾಡಿ ಪಡೆಯಬಹುದು. ಅಲ್ಲದೇ ಸಂಸ್ಥೆಯ ಅಧಿಕೃತ ವೆಬ್…

Read More