Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಕನ್ನಡ ಚಿತ್ರನಟಿ ರನ್ಯಾ ರಾವ್ ಅವರ ಮೆಸರ್ಸ್ ಕ್ಸಿರೋದ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಗೆ 12 ಎಕರೆ ಭೂಮಿ 2023ರ ಜನವರಿ 2ರಂದು ಮಂಜೂರಾಗಿದೆ ಎಂದು ಕೆ ಐ ಎ ಡಿ ಬಿ ಸಿಇಒ ಡಾ. ಮಹೇಶ್ ಭಾನುವಾರ ಹೇಳಿದ್ದಾರೆ. ಹಿಂದಿನ ಸರ್ಕಾರ ಅಧಿಕಾರದಲ್ಲಿ ಇದ್ದಾಗ, 2023ರ ಜನವರಿ 2ರಂದು ನಡೆದ 137ನೇ ರಾಜ್ಯ ಮಟ್ಟದ ಸಿಂಗಲ್ ವಿಂಡೋ ಕ್ಲಿಯರೆನ್ಸ್ ಕಮಿಟಿ (ಎಸ್ ಎಲ್ ಎಸ್ ಡಬ್ಲ್ಯು ಸಿ ಸಿ) ಸಭೆಯಲ್ಲಿ ತುಮಕೂರು ಜಿಲ್ಲೆ ಸಿರಾ ಕೈಗಾರಿಕಾ ಪ್ರದೇಶದಲ್ಲಿ ಸದರಿ ಭೂಮಿ ಮಂಜೂರಾತಿಗೆ ಈ ಅನುಮೋದನೆ ನೀಡಲಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಉಕ್ಕಿನಿಂದ ತಯಾರಿಸಲಾಗುವ ಟಿಎಂಟಿ ಪಟ್ಟಿ, ಸರಳು ಹಾಗೂ ಸಹ-ಉತ್ಪನ್ನಗಳ ಘಟಕವನ್ನು 138 ಕೋಟಿ ಹೂಡಿಕೆಯಲ್ಲಿ ಸ್ಥಾಪಿಸಲಾಗುವುದು. ಇದರಿಂದ, ಸುಮಾರು 160 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಕಂಪನಿ ಪ್ರಸ್ತಾವ ಸಲ್ಲಿಸಿತ್ತು ಎಂದೂ ಅವರು ವಿವರಿಸಿದ್ದಾರೆ. https://kannadanewsnow.com/kannada/13-year-old-boy-abducted-raped-in-kanpur/ https://kannadanewsnow.com/kannada/big-news-temperatures-rise-across-the-country-harmful-to-the-heart-lungs-and-brain/
ಕಾನ್ಪುರ: 13 ವರ್ಷದ ಬಾಲಕನ ಮೇಲೆ ಇಬ್ಬರು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಕಾನ್ಪುರದಲ್ಲಿ ನಡೆದಿದೆ. ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದ್ದು, ರಂಜಾನ್ ಸಮಯದಲ್ಲಿ ತಮ್ಮ ಸಂಗಾತಿಗಳು ತಮ್ಮೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ್ದಾರೆ ಎಂದು ಪೊಲೀಸರಿಗೆ ತಿಳಿಸಿದ್ದಾನೆ. ಮಾರ್ಚ್ 5 ರಂದು ಹದಿಹರೆಯದವರು ಜಿಮ್ ಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಆರೋಪಿಗಳಾದ ಅಜರ್ ಮತ್ತು ಹುಸೇನಿ ಆತನನ್ನು ಅಪಹರಿಸಿ, ಕಾಡಿಗೆ ಕರೆದೊಯ್ದು, ಕಟ್ಟಿಹಾಕಿ ಬೆದರಿಕೆ ಹಾಕಿದ್ದಾರೆ ಎಂದು ಡಿಸಿಪಿ ಬ್ರಜೇಂದ್ರ ದ್ವಿವೇದಿ ತಿಳಿಸಿದ್ದಾರೆ. ನಂತರ ಅವರು ಅವನ ಮೇಲೆ ಅತ್ಯಾಚಾರ ಎಸಗಿ, ಹಗ್ಗದಿಂದ ಕತ್ತು ಹಿಸುಕಿ, ಶವವನ್ನು ಬಾವಿಗೆ ಎಸೆದರು ಎಂದು ಹುಸೈನಿ ಬಂಧನದ ನಂತರ ಪೊಲೀಸರಿಗೆ ತಿಳಿಸಿದ್ದಾನೆ. ಅಜರ್ ಇನ್ನೂ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ನಡೆಯುತ್ತಿದೆ. ಬಂಧಿತ ಇಬ್ಬರು ಆರೋಪಿಗಳಲ್ಲಿ ಒಬ್ಬನಾದ ಹುಸೇನಿ, ಪೊಲೀಸರಿಗೆ ವಿಚಾರಣೆಯ ಸಮಯದಲ್ಲಿ, ಪವಿತ್ರ ರಂಜಾನ್ ತಿಂಗಳಲ್ಲಿ ತನ್ನ ಮತ್ತು ಅಜರ್ ಅವರ ಸಂಗಾತಿಗಳು ಲೈಂಗಿಕ ಸಂಬಂಧ ಹೊಂದಲು ನಿರಾಕರಿಸಿದ್ದರು ಎಂದು ಬಹಿರಂಗಪಡಿಸಿದ್ದಾರೆ.…
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ನಲ್ಲಿ ತಗಲಾಕೊಂಡಿರೋ ನಟಿ ರನ್ಯಾ ರಾವ್ ಅವರೊಂದಿಗೆ ರಾಜಕೀಯ ವ್ಯಕ್ತಿಗಳ ನಂಟಿರುವುದು ತಿಳಿದು ಬಂದಿದೆ. ಈ ಹಿನ್ನಲೆಯಲ್ಲೇ ಆಕೆ ನಿರ್ದೇಶಕಿಯಾಗಿರುವಂತ ಕಂಪನಿಗೆ ಹಿಂದಿನ ಸರ್ಕಾದ ಅವಧಿಯಲ್ಲಿ ಬರೋಬ್ಬರಿ 12 ಎಕರೆ ಜಮೀನು ಮಂಜೂರಾಗಿದೆ. ಅದೂ ದೇವನಹಳ್ಳಿ ಸಮೀಪದಲ್ಲಿ. ಹೌದು ನಟಿ ರನ್ಯಾ ರಾವ್ ಅವರಿಗೂ ರಾಜಕೀಯ ವ್ಯಕ್ತಿಗಳ ನಂಟಿರುವುದು ಬಯಲಾಗಿದೆ. ಚಿನ್ನ ಕಳ್ಳ ಸಾಗಾಣಿಕೆ ಕೇಸಲ್ಲಿ ಸಿಕ್ಕಿಬಿದ್ದಿರುವಂತ ನಟಿ ಹರ್ಷವರ್ಧಿನಿ ರಾವ್ ಅವರು ಕಂಪನಿಯೊಂದನ್ನು ನಡೆಸುತ್ತಿದ್ದಾರೆ. ಅವರು ನಿರ್ದೇಶಕಿಯಾಗಿರುವಂತ ಕ್ಲಿರೋದಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಗೆ ಹಿಂದಿನ ಸರ್ಕಾರದ ಅವಧಿಯಲ್ಲಿ 12 ಎಕರೆ ಜಮೀನು ಮಂಜೂರು ಮಾಡಲಾಗಿದೆ. ಫೆಬ್ರವರಿ 22, 2023ರಲ್ಲಿ ನಟಿ ರನ್ಯಾ ರಾವ್ ಒಡೆತನದ ಕ್ಸಿರೋದಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಗೆ ದೇವನಹಳ್ಳಿ ಸಮೀಪವೇ ಬರೋಬ್ಬರಿ 12 ಎಕರೆ ಜಮೀನನ್ನು ಮಂಜೂರು ಮಾಡಲಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಕೆಐಡಿಎಬಿಯಿಂದ ಮಂಜೂರು ಮಾಡಿರುವುದು ದಾಖಲೆ ಪತ್ರದಿಂದ ತಿಳಿದು ಬಂದಿದೆ. https://kannadanewsnow.com/kannada/the-body-of-a-labourer-trapped-inside-an-slbc-tunnel-in-telangana-was-found-after-2-weeks/ https://kannadanewsnow.com/kannada/big-news-temperatures-rise-across-the-country-harmful-to-the-heart-lungs-and-brain/
ತೆಲಂಗಾಣ: ತೆಲಂಗಾಣದಲ್ಲಿ ಕುಸಿದ ಸುರಂಗದಲ್ಲಿ ಸಿಲುಕಿರುವ ಎಂಟು ಜನರಿಗಾಗಿ ಶೋಧದ 16 ನೇ ದಿನವಾದ ಭಾನುವಾರ ರಕ್ಷಣಾ ಸಿಬ್ಬಂದಿಗಳು ಓರ್ವ ವ್ಯಕ್ತಿಯ ಶವವನ್ನು ಹೊರತೆಗೆದಿದ್ದಾರೆ. ಅದನ್ನು ಇನ್ನೂ ಗುರುತಿಸಲಾಗಿಲ್ಲ. ಫೆಬ್ರವರಿ 22 ರಂದು ನಾಗರ್ ಕರ್ನೂಲ್ನ ಶ್ರೀಶೈಲಂ ಎಡದಂಡೆ ಕಾಲುವೆ (ಎಸ್ಎಲ್ಬಿಸಿ) ಸುರಂಗ ಭಾಗಶಃ ಕುಸಿದಾಗಿನಿಂದ ಎಂಟು ಜನರು ಸಿಕ್ಕಿಬಿದ್ದಿದ್ದರು. ಭಾನುವಾರ, ಸುರಂಗವನ್ನು ಅಗೆಯಲು ಬಳಸಲಾಗುತ್ತಿದ್ದ ಮುರಿದ ಸುರಂಗ ಬೋರಿಂಗ್ ಯಂತ್ರದ ಬಳಿ ಓರ್ವ ವ್ಯಕ್ತಿಯ ಶವ ಪತ್ತೆಯಾಗಿದೆ. ಸುರಂಗದ ಮೇಲ್ಛಾವಣಿ ಕುಸಿದಾಗ ಇಬ್ಬರು ಯಂತ್ರವನ್ನು ನಿರ್ವಹಿಸುತ್ತಿದ್ದರು ಮತ್ತು ಆರು ಜನರು ಅವರಿಗೆ ಸಹಾಯ ಮಾಡುತ್ತಿದ್ದರು. ಸ್ಥಳದಲ್ಲಿದ್ದ ರಕ್ಷಕರ ಪ್ರಕಾರ, ದೇಹವು “ಗುರುತಿಸಬಹುದಾದ ಸ್ಥಿತಿಯಲ್ಲಿದೆ. https://twitter.com/sudhirjourno/status/1898736559085519259 “ಕಾಣೆಯಾದ ಜನರ ವೈಯಕ್ತಿಕ ಪರಿಣಾಮಗಳ ಆಧಾರದ ಮೇಲೆ, ಆ ವ್ಯಕ್ತಿ ಯಾರೆಂದು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ” ಎಂದು ಉನ್ನತ ರಕ್ಷಣಾ ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್ಪ್ರೆಸ್ಗೆ ತಿಳಿಸಿದ್ದಾರೆ. ಸುರಂಗ ಕುಸಿದ ದಿನದಿಂದ, ರಕ್ಷಣಾ ಸಿಬ್ಬಂದಿಯ 11 ತಂಡಗಳು ಸಿಕ್ಕಿಬಿದ್ದ ಪುರುಷರನ್ನು ಹುಡುಕಲು ಪ್ರಯತ್ನಿಸುತ್ತಿವೆ. ರಾಷ್ಟ್ರೀಯ ವಿಪತ್ತು…
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣದರ ಖಂಡಿಸಿ ಪ್ರಯಾಣಿಕರು ಪ್ರಯಾಣಿಸುತ್ತಲೇ ಮೆಟ್ರೋ ಒಳಗಡೆ ಪ್ರತಿಭಟನೆ ನಡೆಸಿದಂತ ಘಟನೆ ಇಂದು ನಡೆದಿದೆ. ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ಖಂಡಿಸಿ, ಇಂದು ಮೆಟ್ರೋ ಪ್ರಯಾಣಿಕರು, ಬೆಂಗಳೂರು ನಾಗರೀಕರ ವೇದಿಕೆಯಿಂದ ಮೆಟ್ರೋ ಒಳಗಡೆಯೇ ಪ್ರತಿಭಟನೆ ನಡೆಸಲಾಗಿದೆ. ಬೆಂಗಳೂರಿನ ಜ್ಞಾನ ಭಾರತಿ ಮೆಟ್ರೋ ನಿಲ್ದಾಣದಿಂದ ಎಂ.ಜಿ ರಸ್ತೆಯವರೆಗೆ ನಮ್ಮ ಮೆಟ್ರೋ ಪ್ರಯಾಣಿಕರು, ಬೆಂಗಳೂರು ನಾಗರೀಕರ ಸಂಘವು ಮೆಟ್ರೋ ದರ ಹೆಚ್ಚಳ ವಿರೋಧಿಸಿ ಭಿತ್ತಿ ಪತ್ರವನ್ನು ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿತು. ನಮ್ಮ ಮೆಟ್ರೋ ಪ್ರಯಾಣದ ದರವನ್ನು ಈ ಮೊದಲು ಎಷ್ಟು ಇತ್ತೋ ಅಷ್ಟೇ ದರವನ್ನು ಪರಿಷ್ಕರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ಮುಂದಿನ ದಿನಗಳಲ್ಲಿ ಪ್ರಯಾಣ ದರ ಇಳಿಕೆ ಮಾಡದೇ ಇದ್ದರೇ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ. https://kannadanewsnow.com/kannada/women-who-give-birth-to-their-third-child-get-rs-50000-for-giving-birth-to-a-girl-a-cow-for-a-boy/ https://kannadanewsnow.com/kannada/big-news-temperatures-rise-across-the-country-harmful-to-the-heart-lungs-and-brain/ https://kannadanewsnow.com/kannada/isro-to-get-two-new-launchpads-in-two-states-chandrayaan-4-getting-ready/
ಕನಕಪುರ : “ಕಾಯಕದಲ್ಲಿಯೇ ದೇವರನ್ನು ಕಾಣಬೇಕು. ನಮಗೆ ಅಭಿವೃದ್ಧಿಯೇ ತಾಯಿ ತಂದೆ, ಗ್ಯಾರಂಟಿಗಳೇ ಬಂಧು ಬಳಗ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕನಕಪುರ ತಾಲ್ಲೂಕಿನ ಭೂಹಳ್ಳಿ ಹೊಸಕೆರೆ ಬಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, “ನನ್ನ ಕ್ಷೇತ್ರಕ್ಕೆ ಸುಮಾರು ರೂ.400 ಕೋಟಿಗಳಷ್ಟು ಅನುದಾನ ತಂದಿದ್ದೇನೆ. ಒಂದೇ ಸಲ ಅನುದಾನ ತಂದರೆ ಬೇರೆ ಕ್ಷೇತ್ರದವರು ಪ್ರಶ್ನೆ ಮಾಡುತ್ತಾರೆ. ಹಂತ, ಹಂತವಾಗಿ ಅನುದಾನ ತಂದು ಅಭಿವೃದ್ಧಿ ಕೆಲಸದ ಮೂಲಕ ಜನರ ಋಣ ತೀರಿಸಲಾಗುವುದು. ರೂ.250 ಕೋಟಿ ಮೊತ್ತದ ಕಾಮಗಾರಿಗಳು ನೀರಾವರಿ ಇಲಾಖೆಯಿಂದಲೇ ನಡೆಯುತ್ತಿದೆ” ಎಂದರು. “ಪಾದ್ದರೆಯಿಂದ ಭೂಹಳ್ಳಿ ಅರಣ್ಯ ತಪಾಸಣಾ ಕೇಂದ್ರದ ವರೆಗೆ ಸುಮಾರು ರೂ.13 ಕೋಟಿ ವೆಚ್ಚದಲ್ಲಿ ರಸ್ತೆ, ದೊಡ್ಡಆಲಹಳ್ಳಿಯಿಂದ ಕಬ್ಬಾಳಿನ ತನಕ 40 ಕೋಟಿ ವೆಚ್ಚದಲ್ಲಿ ರೂ.14.5 ಕಿಮೀ ಉದ್ದದ ರಸ್ತೆ ಅಗಲೀಕರಣ ಮಾಡಲಾಗುತ್ತಿದೆ. ಇದರಿಂದ ನಮ್ಮ ಜನರ ಆಸ್ತಿ ಮೌಲ್ಯ ಹೆಚ್ಚಾಗಲಿದೆ” ಎಂದು ಹೇಳಿದರು. “ಕನಕಪುರ, ಸಾತನೂರು, ದೊಡ್ಡ ಆಲಹಳ್ಳಿ ರಸ್ತೆಗಳನ್ನು ಅಗಲೀಕರಣ ಮಾಡಲು ಸಾಧ್ಯವಿಲ್ಲ…
ಬೆಂಗಳೂರು: ನಗರದ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಸಂಜೆ ಕಾಲೇಜು ದ್ವಿತೀಯ ದರ್ಜೆ ಸಹಾಯಕನ ವಿರುದ್ಧ ಕಾಲೇಜಿನ ಶುಲ್ಕ ದುರುಪಯೋಗ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಎಸ್ ಡಿ ಎ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್ ಸಂಜೆ ಕಾಲೇಜಿನ ಶುಲ್ಕದಲ್ಲಿ 20 ಲಕ್ಷ ದುರುಪಯೋಗ ಮಾಡಿದಂತ ಆರೋಪ ಎಸ್ ಡಿ ಎ ರಾಘವೇಂದ್ರ ಶೆಟ್ಟಿ ವಿರುದ್ಧ ಕೇಳಿ ಬಂದಿದೆ. ಈ ಸಂಬಂಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಹೈಗ್ರೌಂಡ್ ಠಾಣೆಯ ಪೊಲೀಸರಿದೆ ದೂರು ನೀಡಲಾಗಿದೆ. ಕಾಲೇಜಿನ ಆಡಳಿತ ಮಂಡಳಿ ನೀಡಿದಂತ ದೂರಿನ ಹಿನ್ನಲೆಯಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಸಂಜೆ ಕಾಲೇಜಿನ ಎಸ್ ಡಿ ಎ ರಾಘವೇಂದ್ರ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹಾವೇರಿ: ಬೆಳಗಾವಿಯಲ್ಲಿ ನಡೆದಿದ್ದಂತ ಗಾಂಧಿ ಭಾರತ ಸಮಾವೇಶದಲ್ಲಿ ಭಾಗಿಯಾಗಿದ್ದಂತ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದನು. ಇಂತಹ ಕೈ ಕಾರ್ಯಕರ್ತನಿಗೆ ಕೆಪಿಸಿಸಿ ವತಿಯಿದಂ 5 ಲಕ್ಷ ಪರಿಹಾರ ವಿತರಣೆ ಮಾಡಲಾಗಿದೆ. ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲ್ಲೂಕಿನ ನದಿಹರಳಹಳ್ಳಿ ಗ್ರಾಮ ಬಸಪ್ಪ ಕೆಂಚಪ್ಪ ಪಾಮೇನಹಳ್ಳಿ ಎಂಬುವರು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ್ದಂತ ಗಾಂಧಿ ಭಾರತ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಈ ಸಮಾವೇಶದ ಸಂದರ್ಭದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಶಾಸಕ ಪ್ರಕಾಶ್ ಕೋಳಿವಾಡಗೆ ಮೃತ ಕುಟುಂಬಸ್ಥರು ಪರಿಹಾರಕ್ಕಾಗಿ ಮನವಿ ಮಾಡಿದ್ದರು. ಅವರ ಮನವಿಗೆ ಸ್ಪಂದಿಸಿರುವಂತ ಶಾಸಕ ಪ್ರಕಾಶ್ ಕೋಳಿವಾಡ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಗಮನಕ್ಕೆ ತಂದಿದ್ದರು. ಇಂದು ಕೆಪಿಸಿಸಿಯಿಂದ 5 ಲಕ್ಷ ಪರಿಹಾರದ ಚೆಕ್ ಅನ್ನು ಕುಟುಂಬಸ್ಥರಿಗೆ ವಿತರಿಸಲಾಯಿತು. https://kannadanewsnow.com/kannada/notorious-thief-arrested-for-stealing-autos-bikes/ https://kannadanewsnow.com/kannada/big-news-temperatures-rise-across-the-country-harmful-to-the-heart-lungs-and-brain/
ಮಳವಳ್ಳಿ : ಶಿಕ್ಷಣ ಸಂಸ್ಥೆಯ ಒಳಗೆ ರಾಜಕೀಯದವರನ್ನು ಸೇರಿಸಬೇಡಿ. ಆಗ ಮಾತ್ರ ಆ ಶಿಕ್ಷಣ ಸಂಸ್ಥೆಗಳು ಉನ್ನತ ಮಟ್ಟಕ್ಕೆ ಬೆಳೆಯುತ್ತವೆ. ಇಲ್ಲದಿದ್ದರೇ ಶಿಕ್ಷಣದ ಗುಣಮಟ್ಟ ಹಾಳಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಿವಿಮಾತು ಹೇಳಿದರು. ಮಳವಳ್ಳಿಯಲ್ಲಿ ಬಿಎಂ ಎಜುಕೇಶನ್ ಟ್ರಸ್ಟ್ ವತಿಯಿಂದ ನಿರ್ಮಾಣವಾಗಿರುವ ಬಿಎಂ ಪಬ್ಲಿಕ್ ಶಾಲಾ ಕಟ್ಟಡ, ಆಡಳಿತ ಕಟ್ಟಡ ಹಾಗೂ ಸಾಯಿಬಾಬಾ ಮಂದಿರವನ್ನು ಭಾನುವಾರದಂದು ಲೋಕಾರ್ಪಣೆ ಮಾಡಿ ಡಿಸಿಎಂ ಮಾತನಾಡಿದರು. “ದಳ, ಬಿಜೆಪಿ,ಕಾಂಗ್ರೆಸ್, ರೈತ ಸಂಘ – ಹೀಗೆ ಯಾವುದೇ ಪಕ್ಷದ ರಾಜಕಾರಣಿಗಳನ್ನು ನಿಮ್ಮ ಶಿಕ್ಷಣ ಸಂಸ್ಥೆಯ ಒಳಗೆ ಸೇರಿಸಬೇಡಿ. ಶಾಲಾ ಶುಲ್ಕ ಕಡಿಮೆ ಮಾಡಿ ಎನ್ನುವ ಶಿಫಾರಸ್ಸು ತರುವುದರಿಂದ ಶಾಲೆಗಳನ್ನು ನಡೆಸಲು ಆಗುವುದಿಲ್ಲ. ಪೋಷಕರು ಸಹಕರಿಸಿದರೆ ಮಾತ್ರ ಸಂಸ್ಥೆ ಬೆಳೆಯುತ್ತದೆ. ಇಲ್ಲದಿದ್ದರೆ ಶಿಕ್ಷಣದ ಗುಣಮಟ್ಟ ಹಾಳಾಗುತ್ತದೆ” ಎಂದರು. “ಮಕ್ಕಳು ಗ್ಲೋಬಲ್ ಮಟ್ಟಕ್ಕೆ ಸ್ಪರ್ಧಿಸಬೇಕು. ನೀವು ಎಲ್ಲಿ ಓದಿದ್ದೀರಿ ಎಂದು ಯಾರೂ ಕೇಳುವುದಿಲ್ಲ. ಆದರೆ ನಿಮ್ಮ ಅಂಕ ಮತ್ತು ಕೌಶಲಗಳನ್ನು ಕೇಳುತ್ತಾರೆ. ಅದಕ್ಕೆ ಶಿಕ್ಷಣವು ಮಕ್ಕಳಲ್ಲಿ ಭವಿಷ್ಯದ ಬಗ್ಗೆ…
ಬೆಂಗಳೂರು: ಆಟೋ ಹಾಗೂ ಬೈಕ್ ಗಳನ್ನೇ ಕದಿಯುವಂತ ವೃತ್ತಿಯಲ್ಲಿ ತೊಡಗಿದ್ದಂತ, ವೃತ್ತಿಯನ್ನಾಗಿಸಿಕೊಂಡಿದ್ದಂತ ಕುಖ್ಯಾತ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ಠಾಣೆಯ ಪೊಲೀಸರು ತಮ್ಮ ಠಾಣೆ ವ್ಯಾಪ್ತಿ ಹಾಗೂ ಅತ್ತಿಬೆಲೆ, ಆನೇಕಲ್ ನಲ್ಲಿ ಆಟೋ, ಬೈಕ್ ಕದ್ದಿದ್ದಂತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರು. ಈ ಸಂಬಂಧ ತನಿಖೆಗೆ ಇಳಿದು ಆಟೋ, ಬೈಕ್ ಕದಿಯೋದನ್ನೇ ವೃತ್ತಿಯನ್ನಾಗಿಸಿಕೊಂಡಿದ್ದಂತ ಕುಖ್ಯಾತ ಕಳ್ಳ ಅರ್ಬಾಜ್ ನನ್ನು ಬಂಧಿಸಿದ್ದಾರೆ. ಶಾನುಭೋಗರಹಳ್ಳಿಯ ನಿವಾಸಿಯಾಗಿದ್ದ ಕುಖ್ಯಾತ ಕಳ್ಳ ಅರ್ಬಾಜ್ ನನ್ನು ಬಂಧಿಸಿದ್ದಾರೆ. ಈ ಹಿಂದೆಯೂ ಹಲವು ಬಾರಿ ಕಳ್ಳತನ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿದ್ದನು. ಆ ಬಳಿಕವೂ ಬದಲಾಗದೇ ಮತ್ತೆ ಆಟೋ, ಬೈಕ್ ಕದಿಯೋದನ್ನೇ ತನ್ನ ಕೆಲಸವಾಗಿಸಿಕೊಂಡಿದ್ದನು. ಕೆಲ ದಿನಗಳ ಹಿಂದೆ ನಡೆದಿದ್ದಂತ ಕಳ್ಳತನ ಪ್ರಕರಣದ ತನಿಖೆ ನಡೆಸಿದ ವೇಳೆಯಲ್ಲಿ ಅರ್ಬಾಜ್ ಕೈಚಳಕ ಪತ್ತೆಯಾಗಿತ್ತು. ಇದೀಗ ಖಚಿತ ಮಾಹಿತಿ ಮೇರೆಗೆ ಬನ್ನೇರುಘಟ್ಟ ಠಾಣೆ ಪೊಲೀಸರು ದಾಳಿ ಮಾಡಿ, ಕುಖ್ಯಾತ ಕಳ್ಳ ಅರ್ಬಾಜ್ ನನ್ನು ಬಂಧಿಸಿದ್ದಾರೆ. https://kannadanewsnow.com/kannada/man-attempts-suicide-by-consuming-poison-after-girlfriends-abandonment-dies/ https://kannadanewsnow.com/kannada/big-news-temperatures-rise-across-the-country-harmful-to-the-heart-lungs-and-brain/













